Connect with us

ದಿನದ ಸುದ್ದಿ

ರಾಜ್ಯ ಅಲೆಮಾರಿ ಬುಡಕಟ್ಟು ಸಮಿತಿಯಿಂದ ಸರ್ಕಾರಕ್ಕೆ ಹಲವು ಬೇಡಿಕೆಗಳ ಮನವಿ ಸಲ್ಲಿಕೆ

Published

on

ಸುದ್ದಿದಿನ, ಬೆಂಗಳೂರು : ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ನಿಗಮವನ್ನು ಮತ್ತು ಸಂಶೋಧನಾ ಕೇಂದ್ರ ಅಲೆಮಾರಿ ಆಯೋಗ ನಿರ್ಮಿಸಬೇಕು ಎಂದು ಶುಕ್ರವಾರ ಸಚಿವ ಗೋವಿಂದ ಕಾರಜೋಳ ಅವರಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಬಜೆಟ್ ಪೂರ್ವ ಸಭೆ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಅಲೆಮಾರಿ ಬುಡಕಟ್ಟು ರಾಜ್ಯ ಸಮಿತಿಯು ಮನವಿಮಾಡಿತು.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ 2020-21 ನೇ ಬಜೆಟ್ ಪೂರ್ವಭಾವಿ ಸಮಾಲೋಚನಾ ಸಭೆಗೆ ಅಲೆಮಾರಿ ಬುಡಕಟ್ಟು ಮಹಾ ಸಭಾದ ವತಿಯಿಂದ ಭಾಗವಹಿಸಲಾಗಿತ್ತು. ಅಲೆಮಾರಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಹೊಂದಲು ಕೆಳಕಂಡ ಸಲಹೆ ಹಾಗೂ ಬೇಡಿಕೆ ನೀಡಲಾಗಿದೆ.

  1. ಸದರಿ ಸಭೆಯಲ್ಲಿ SC/ST ಅಲೆಮಾರಿ ಸಮುದಾಯಗಳ ಪರವಾಗಿ SC/ST ಅಲೆಮಾರಿ ನಿಗಮವನ್ನು ಸ್ಥಾಪನೆ ಮಾಡಿ ಪತ್ರೇಕ ನಿರ್ದೇಶನಾಲಯ ರಚಿಸಿ 100 ಕೋಟಿ ಅನುದಾನ ಮೀಸಲಿಡಬೇಕು.
  2. ಅಲೆಮಾರಿಗಳ ಆಚರಣೆ ಕಲೆ‌ ಸಂಸ್ಕೃತಿಯ ಉಳಿಸಿಕೊಳ್ಳಲು ಸಂಶೋಧನೆ ಹಾಗೂ ಅದ್ಯಯನ ಅಗತ್ಯ ಇದ್ದು ಸಂಶೋಧನಾ ಕೇಂದ್ರವನ್ನು ಬೆಂಗಳೂರು ವಿ.ವಿ ಯಲ್ಲಿ ಸ್ಥಾಪನೆ ಮಾಡಬೇಕು.
  3. ಪಾರಂಪರಿಕವಾಗಿ ಹಂದಿ ಸಾಕಾಣಿಕೆ ಮಾಡುತ್ತಿರುವ ಅಲೆಮಾರಿ ಸಮುದಾಯಗಳಿಗೆ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಭೂಮಿಯನ್ನು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಸುಧಾರಿತ ಮಾಂಸದ ಮಳಿಗೆಗಳನ್ನು ಸ್ಥಾಪಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು.
  4. ಅಲೆಮಾರಿ ಸಮುದಾಯಗಳ ಶಿಕ್ಷಣಕ್ಕಾಗಿ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಸಂಚಾರಿ ಶಾಲೆಗಳನ್ನು ಸ್ಥಾಪಿಸಲು ವಿಶೇಷ ಅನುದಾನ ನೀಡಬೇಕು.
  5. ಸನಾದಿ ಅಪ್ಪಣ್ಣನವರ ಸಮಾಧಿ ಅಭಿವೃದ್ಧಿ ಪಡಿಸಿ ಪ್ರವಾಸಿ ಕೇಂದ್ರ ಮಾಡಬೇಕು ಹಾಗೂ ಸಂಗೀತ ಅಕಾಡೆಮಿ ಸ್ಥಾಪಿಸಬೇಕು.
  6. 12 ನೇ ಶತಮಾನದ ಬಸವಣ್ಣನ ಸಮಕಾಲೀನ ಶರಣ ನುಲಿಯ ಚಂದಯ್ಯನ ಜಯಂತಿಯನ್ನು ರಜೆ ರಹಿತವಾಗಿ ಸರಕಾರವೇ ಆಚರಿಲು ಆದೇಶ ಮಾಡಿ ಜಯಂತಿ ಆಚರಿಸಲು ಅನುದಾನವನ್ನು ಘೋಷಣೆ ಮಾಡಬೇಕು.
  7. 2019-20 ಸಾಲಿಗೆ ಕೋಶದಿಂದ ಅರ್ಜಿ ಆಹ್ವಾನ ತುರ್ತಾಗಿ ಮಾಡಬೇಕು.

ಹೀಗೆ ಅಲೆಮಾರಿಗಳ ಸಮಸ್ಯೆಗಳ ಕುರಿತು ಬಹಳ ಸವಿಸ್ತಾರವಾಗಿ ಮಾನ್ಯ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಆನಂದ್ ಕುಮಾರ್ ಏಕಲವ್ಯ ರವರು ಉಪಮುಖ್ಯ ಮಂತ್ರಿಗಳಿಗೆ ಬಜೆಟ್ ಪೂರಕವಾಗಿ ಅತ್ಯಂತ ನಿರ್ದಿಷ್ಟವಾಗಿ ಪ್ರಸ್ತಾಪವನ್ನು ಮಾಡಿದರು.

ಹಕ್ಕುಗಳ ಕುರಿತು ಕಿರಣ್ ಕುಮಾರ್ ಕೊತ್ತಗೆರೆ ಅವರು ನಿಗಮದ ಉಪಯೋಗ ಏನಿದೆ ಎಂದು ವರದಿ ಸಲ್ಲಿಸಿದರು. ಡಾ. ಬಾಲಗುರುಮೂರ್ತಿರವರಿಗೆ ಅಲೆಮಾರಿ ಕೋಶವನ್ನು ನಿಗಮ ಮಾಡಲು ಕೋರಿದರು. ಸಿಳ್ಳೇಕ್ಯಾತಾಸ್ ಮತ್ತು ಅದರ ಪರ್ಯಾಯ ಪದಗಳ ಕುರಿತು ಕುಲಶಾಸ್ತ್ರೀಯ ಸಮೀಕ್ಷೆ ಮಾಡಿಸಲು ಆಕ್ಷನ್ ಪ್ಲಾನ್ ಮಂಜೂರು ಮಾಡುವಂತೆ, ಅತಿ ಸೂಕ್ಷ್ಮ ಸಮುದಾಯವಾದ ಸಿಳ್ಳೇಕ್ಯಾತಾಸ್ ಸಮುದಾಯಕ್ಕೆ ಒನ್ ಟೈಮ್ ಸೆಟ್ಲ್ಮೆಂಟ್ ಕುರಿತು ಬಿ.ಹೆಚ್ .ಮಂಜುನಾಥ್ ಮಾತನಾಡಿದರು.ಚೆನ್ನದಾಸರ ಸಮುದಾಯದ ಕುರಿತು ಮಾತನಾಡಿದ ಬಿ.ಟಿ ದಾಸರು ನಡಾವಳಿ ಶೀಘ್ರವಾಗಿ ನೀಡುವಂತೆ ಕೋರಿದರು.

ಬಹಳ ಒತ್ತಡಗಳ ಮಧ್ಯೆಯೂ ಇದೇ ಮೊದಲ ಬಾರಿಗೆ ನಮ್ಮ ಅಲೆಮಾರಿ ಸಮುದಾಯಕ್ಕೆ ಸಮಯಾವಕಾಶವನ್ನು ಹೋರಾಟದ ಮುಖಾಂತರ ಪಡೆದುವಿಮಎಂದು ಹೇಳಲು ಹೆಮ್ಮೆ ಎನಿಸುತ್ತಿದೆ. ಇದೇ ಮೊಟ್ಟ ಮೊದಲ ಬಾರಿಗೆ ಅಲೆಮಾರಿಗಳ ಧ್ವನಿ ಜೋರಾಗೇ ಇತ್ತು.

ಈ ಸಂದರ್ಭದಲ್ಲಿ ಡಾ. ಬಾಲಗುರುಮೂರ್ತಿ ರಾಜ್ಯಾಧ್ಯಕ್ಷರು, ಕಿರಣ್ ಕುಮಾರ್ ಕೊತ್ತಿಗೆರೆ ರಾಜ್ಯಪ್ರಧಾನ ಕಾರ್ಯದರ್ಶಿ, ಆನಂದ ಏಕಲವ್ಯ ರಾಜ್ಯಉಪಾಧ್ಯಕ್ಷರು,ಬಿಎಚ್ ಮಂಜುನಾಥ್ ರಾಜ್ಯ ಉಪಾಧ್ಯಕ್ಷರು,ಬಿ.ಟಿ.ದಾಸರ ರಾಜ್ಯ ಉಪಾಧ್ಯಕ್ಷರು,ಸಿರಿವಾಟಿ ನರಸಿಂಹುಲು ರಾಜ್ಯ ಉಪಾಧ್ಯಕ್ಷರು, ಶ್ರೀಕಂಠಯ್ಯ ರಾಮನಗರ ಜಿಲ್ಲಾಧ್ಯಕ್ಷರು, ಎಸ್.ಕೆ. ದಾಸರ. ರಾಜ್ಯ ಸಲಹಾ ಸಮಿತಿ ಸಲಹೆಗಾರರು, ಬಸವರಾಜ ದಾಸರ, ರಾಜ್ಯ ಸಂಘಟನಾ ಕಾರ್ಯದರ್ಶಿ, ವೆಂಕಟೇಶ್ ದಾಸರ ಬೆಂಗಳೂರು ಸಂಘಟನಾ ಕಾರ್ಯದರ್ಶಿ ,ಮಹಿಳಾ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಸುಗುಣ ಅಶ್ವತ್ಥ್ ,ಯಮನೂರಪ್ಪ,ರಾಜ್ಯ ಉಪಾಧ್ಯಕ್ಷರು,ರಾಜ್ಯ ದೊಂಬರ ಸಂಘ, ರಾಯಚೂರು, ಮೇದ ಸಮುದಾಯದ ಮುಖಂಡರು ಉಪಸ್ಥಿತಿ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending