Connect with us

ದಿನದ ಸುದ್ದಿ

ಅಪ್ಪನ ಹರಕು ಕೋಟು..! : ಅಂಬೇಡ್ಕರ್ ನೆನಪಿಸಿಕೊಂಡ ತಂದೆಯ ಚಿತ್ರಗಳು

Published

on

01

ನನ್ನ ವಿಷಯದಲ್ಲಿ ಎರಡು ಮೂರು ಸಂಗತಿಗಳನ್ನು ಮಾತ್ರ ನಿಶ್ಚಿತವಾಗಿ ಹೇಳುವುದಕ್ಕೆ ಆಗುತ್ತದೆ. ರಾಜಪುತಾನದ ಮಹೂ ಮುಕ್ಕಾಮಿನಲ್ಲಿ ನಾನು ಜನಿಸಿದೆ. ಹಾಗಾಗಿ ಕೊಂಕಣದೊಂದಿಗೆ ನನಗೆ ಯಾವುದೇ ಸಂಬಂಧವೂ ಇಲ್ಲ. ನನ್ನ ತಂದೆಯವರು ಕೊಂಕಣದವರೇ, ಆದರೆ ಉದ್ಯೋಗದ ಕಾರಣದಿಂದ ಅವರು ರಾಜಪುತಾನಕ್ಕೆ ಹೋಗಬೇಕಾಯಿತು.

ಆಗ ನನ್ನ ಜನನವು ಮಹೂನಲ್ಲಿ ಮುಕ್ಕಾಮು ಮಾಡಿದ್ದಾಗ ಆಯಿತು ಎಂಬುದನ್ನು ಮಾತ್ರ ಖಚಿತವಾಗಿ ಹೇಳಬಹುದು. ಮತ್ತೊಂದು ಸಂಗತಿಯೆಂದರೆ, ನನ್ನ ಜನನವು ಸರಿಯಾಗಿ ಹನ್ನೆರಡು ಹೊಡೆದಾಗಲೇ ಆದುದು. ಆ ಸಮಯದಲ್ಲಿ ನನ್ನ ತಂದೆಯವರು ಕೆಲಸದ ಮೇಲೆ ಇದ್ದರು.

ಇತ್ತ ನನ್ನ ತಾಯಿಯವರ ಬಾಣಂತಿತನವು ನಡೆದಿತ್ತು , ನನ್ನ ಪಿಂಡವು ಬಹಳ ದೊಡ್ಡದಾಗಿತ್ತು. ನನ್ನ ತಾಯಿಯವರಿಗೆ ಹೆರಿಗೆಯಲ್ಲಿ ಬಹಳ ತೊಂದರೆಯಾಯಿತು ಎಂಬುದಾಗಿ ಹೇಳುತ್ತಾರೆ. ನನ್ನ ತಂದೆಯವರಿಗೆ ಚಿಂತೆಯಾಗುತ್ತಿತ್ತು. ಆದರೆ ಕೊನೆಗೆ ದಾದಿಯು ಬಂದು ಅವರಿಗೆ ಹೇಳಿದಳು “ಮನೆಗೆ ಹೋಗು, ನಿನಗೆ ಗಂಡು ಮಗ ಜನಿಸಿದ್ದಾನೆ”

ನನ್ನ ತಂದೆಯವರ ಮನೆಯನ್ನು ಧರ್ಮಾಸನ ಎಂದು ಕರೆಯಬಹುದು. ನನ್ನ ತಂದೆಯವರು ವಿದ್ಯೆಯ ಭಕ್ತರೂ ಆಗಿದ್ದರು . ಹಾಗೆಯೇ ಅವರು ಧರ್ಮವನ್ನು ಪ್ರೀತಿಸುತ್ತಿದ್ದರು . ನಾನು ಚಿಕ್ಕವನಾಗಿರುವಾಗಲೇ ರಾಮಾಯಣ , ಮಹಾಭಾರತ ಇತ್ಯಾದಿ ಎಲ್ಲಾ ಗ್ರಂಥಗಳನ್ನು ಅವರು ಪಾರಾಯಣ ಮಾಡಿಸುತ್ತಿದ್ದರು . ರಾಮಾಯಣ , ಮಹಾಭಾರತಗಳನ್ನು ಓದಿದ ಕಾರಣ ನನ್ನ ಮನಸ್ಸಿನ ಮೇಲೆ ಬಹಳ ಪರಿಣಾಮವು ಉಂಟಾಗಿದ್ದಿತು.

ನನ್ನ ತಂದೆಯವರು ನನಗೆ ಹೇಳುತ್ತಿದ್ದರು , “ನಾವು ಬಡವರಾಗಿದ್ದೇವೆ ಎಂದುಕೊಂಡು ಮಂಕಾಗಿರುವ ಕಾರಣವಿಲ್ಲ , ನೀನು ಏಕೆ ವಿದ್ವಾಂಸನಾಗಲು ಸಾಧ್ಯವಿಲ್ಲ? ” ಒಮ್ಮೆ ನಾನು ಯಾವುದೋ ಒಂದು ಪರೀಕ್ಷೆಯಲ್ಲಿ ಪಾಸಾಗಿದ್ದೆನು, ಆಗ ನನ್ನ ಓಣಿಯಲ್ಲಿದ್ದ ಜನರು ನನ್ನ ತಂದೆಯವರಿಗೆ ಇಷ್ಟವಿಲ್ಲದೆ ಇದ್ದರೂ ದಾದಾ ಕೇಳುಸ್ಕರ ಅವರ ಸಹಾಯದಿಂದ ನನಗೆ ಸತ್ಕಾರ ಮಾಡುವುದೆಂದು ನಿರ್ಧರಿಸಿದರು.

ಆಗ ನನ್ನ ತಂದೆ ಹೇಳುತ್ತಿದ್ದರು , “ ಸತ್ಕಾರ ಮಾಡುವುದು ಬೇಡ , ಮಕ್ಕಳಿಗೆ ಹೀಗೆ ಸತ್ಕಾರ ಮಾಡಿದರೆ ಅವರಿಗೆ ನೇತಾರನಾಗಿದ್ದೇನೆ ಎಂಬುದಾಗಿ ಜಂಭ ಬರುತ್ತದೆ” ಎನ್ನುತ್ತಿದ್ದರು. ಆ ಹೊತ್ತಿನಲ್ಲಿ ಕೊನೆಗೂ ನನಗೆ ಸತ್ಕಾರವನ್ನು ಮಾಡಲಾಯಿತು. ಆಗ ದಾದಾ ಕೇಳುಸ್ಕರ ಅವರು ನನಗೆ ಬುದ್ಧನ ಚರಿತ್ರೆಯ ಒಂದು ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು.

ಆ ಪುಸ್ತಕವನ್ನು ಓದಿದ ನಂತರ ನನ್ನಲ್ಲಿ ಯಾವುದೋ ಒಂದು ರೀತಿಯ ನಿರಾಳ ಭಾವನೆಯ ಬೆಳಕು ಬಂದಂತೆ ಆಯಿತು, ಮಾರುತಿ, ಸೀತಾ, ರಾಮ ಇವರೆಲ್ಲರೂ ವನವಾಸಕ್ಕೆ ಹೋದರು, ಧೋಬಿಯೊಬ್ಬನು ಏನೋ ಮಾತನಾಡಿದ ಎಂಬ ಕಾರಣದಿಂದ ಸೀತೆಯ ತ್ಯಾಗ, ಕೃಷ್ಣನ ಹದಿನಾರು ಸಾವಿರ ಹೆಂಡತಿಯರು ಎಂಬ ಸಂಗತಿ ಏನೋ ಭಯಂಕರವೆನಿಸುತ್ತಿತ್ತು. ಈ ವಿಚಾರಗಳು ನನ್ನ ಮನಸ್ಸನ್ನು ಗಟ್ಟಿಯಾಗಿ ಹಿಡಿದುಕೊಳ್ಳಲು ಆಗಲಿಲ್ಲ .

ಆದರೆ ಬುದ್ಧನ ಧರ್ಮದ ಆ ಅಧ್ಯಯನದಿಂದ ನನಗೆ ಹೆಚ್ಚು ಅಭ್ಯಾಸ ಮಾಡಬೇಕು ಎಂದು ಅನ್ನಿಸಿತು. ನನ್ನ ಮನಸ್ಸಿನ ಮೇಲೆ ಆ ಧರ್ಮದ ಹಿಡಿತವು ಖಾಯಂ ಆಗಿ ಉಳಿಯಿತು. ನನ್ನ ಮನಸ್ಸಿನಲ್ಲಿ ಈಗ ಇಂತಹದ್ದೊಂದು ನಿರ್ಧಾರವಾಗಿದೆ, – ಜಗತ್ತಿನ ಕಲ್ಯಾಣವನ್ನು ಕೇವಲ ಬೌದ್ದಧರ್ಮವು ಮಾತ್ರವೇ ಮಾಡುವುದಕ್ಕೆ ಸಾಧ್ಯ , ಹಿಂದೂ ಜನರಿಗೆ ತಮ್ಮ ರಾಷ್ಟ್ರವನ್ನು ಎಚ್ಚರಗೊಳಿಸುವುದು ಬೇಕಿದ್ದರೆ ಬುದ್ಧ ಧರ್ಮವನ್ನು ಸ್ವೀಕಾರ ಮಾಡಬೇಕು ಎಂಬುದಾಗಿ ನಾನು ಯಾವಾಗಲೂ ಹೇಳುತ್ತಲೇ ಬಂದಿದ್ದೇನೆ.

(ಸಂ: 20, ಪುಟ ಸಂಖ್ಯೆ: 676 ರಿಂದ 684 )

02

ಮುಂಬೈಯಲ್ಲಿ
1938 ರ ಡಿಸೆಂಬರ್ 12ರಂದು
ಅಸ್ಪೃಶ್ಯ ವಿದ್ಯಾರ್ಥಿಗಳ ಪರವಾಗಿ ಏರ್ಪಡಿಸಲಾದ ‘ಮುಂಬೈ ಅಸ್ಪೃಶ್ಯ ವಿದ್ಯಾರ್ಥಿ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅಂಬೇಡ್ಕರರು ವಿದ್ಯಾರ್ಥಿಗಳ ಕುರಿತು ಮಾತನಾಡುವಾಗ ತನ್ನ ತಂದೆಯನ್ನು ನೆನಪಿಸಿಕೊಳ್ಳುತ್ತಾರೆ.

“ನಿಮ್ಮಲ್ಲಿ ಹಲವರು ವಿವಾಹಿತರಾಗಿರಬೇಕು. ಮತ್ತೆ ಹಲವರು ಮದುವೆಯಾದವರೂ ಇದ್ದಿರಬಹುದು. ಆದರೆ ಮದುವೆಯ ನಂತರ ನೀವೇನು ಮಾಡಲಿದ್ದೀರಿ? ಈ ವಿಷಯದಲ್ಲಿ ನಿಮ್ಮ ಮೇಲೆ ಗುರುತರವಾದ ಜವಾಬ್ದಾರಿಯಿದೆ. ನಾನು ನನ್ನ ತಂದೆಯದೇ ಉದಾಹರಣೆ ನೀಡುತ್ತೇನೆ. ಅವರಿಗೆ ಒಟ್ಟೂ 14 ಮಕ್ಕಳು ಜನಿಸಿದವು. ಅವರಲ್ಲಿ ನಾನು 11ನೇ ರತ್ನ. ಆದರೆ ನಾನು ಎಲ್‌ಪಿನ್‌ಸ್ಟನ್ ಕಾಲೇಜಿಗೆ ಹೋದಾಗ ನನ್ನ ಸ್ಥಿತಿ ಹೇಗಿತ್ತು ಅಂತೀರಾ? ನನ್ನ ಕಾಲಲ್ಲಿ ಪಾದರಕ್ಷೆಯಿರಲಿಲ್ಲ.

ನಾನು ದರಿಸಿದ್ದು ಮಂಜರಪಾಟದಂತಹ ತೆಳು ಶರ್ಟು ಮತ್ತು ಅಪ್ಪನ ಹರಕು ಕೋಟು!! ನೀವು ಎಲಿಪನ್‌ಸ್ಟನ್ ಕಾಲೇಜಿಗೆ ಹೋದಿರಿ ಎಂದರೆ ಅಲ್ಲಿ ನಿಮಗೆ ಮುಲ್ಲರ್ ಸಾಹೇಬರ ಚಿತ್ರ ಕಾಣಿಸುತ್ತದೆ. ಅವರು ನನಗೆ ಕೊನೆಯ ಎರಡು ವರ್ಷ ಶರ್ಟು ನೀಡಿದರು. ನಾನು ಯೋಚಿಸುತ್ತಿದ್ದೆ. ಅಪ್ಪನಿಗೆ 14ರ ಬದಲು 4 ಮಕ್ಕಳು ಹುಟ್ಟಿದ್ದರೆ ಎಂಥ ಸುಖ ಸಿಗುತ್ತಿತ್ತಲ್ಲ ಎಂದು ‘ನನ್ನ ಈ ದುಃಖಕ್ಕೆ ಅಪ್ಪನೇ ಕಾರಣನಾಗಿದ್ದ.

ನಾನೊಮ್ಮೆ ಕಾಲೇಜಿಗೆ ಹೋಗುವಾಗ ರೇಲ್ವೆ ಪಾಸನ್ನು ಮನೆಯಲ್ಲೇ ಮರೆತೆ. ಅದೇ ದಿನ ಪಾಸಿನ ತಪಾಸಣೆ ನಡೆದಿತ್ತು. ಟಿಕೇಟು ಸ್ವೀಕರಿಸುವ ಮಾಸ್ತರ ನನ್ನನ್ನು ತಡೆದು ನಿಲ್ಲಿಸಿದ. ಹತ್ತಿರವಂತೂ ದಮ್ಮಡಿಯಿಲ್ಲ. ನಾಲ್ಕು ಗಂಟೆಯವರೆಗೆ ಚರ್ಚ್ಗೇಟಿನ ಸ್ಟೇಶನ್ನಿನಲ್ಲಿ ಕೂತೇ ಇರಬೇಕಾಯಿತು. ಬಳಿಕ ಕೈಶಿಣಿ ಎಂಬ ಸಹಪಾಠಿ ಅಲ್ಲಿಗೆಬಂದ. ‘ಏನೋ, ಇಲ್ಲೇಕೆ ಕುಳಿತಿರುವೆ?’ ಎಂದು ಕೇಳಿದ. ನಾನು ಅವನಿಗೆ ಎಲ್ಲ ವಿಷಯ ಹೇಳಿದೆ. ಅವನು ನಾಲ್ಕಾಣೆ ತುಂಬಿ ನನ್ನ ಬಿಡುಗಡೆ ಮಾಡಿದ ಬಳಿಕ ಟಿಕೇಟ ತೆಗೆಸಿ ಮನೆಗೆ ಮರಳಿ ಕಳಿಸಿದ.

ಈ ಕಾರಣಕ್ಕಾಗಿ ನಾನಗೆ ಅಪ್ಪನ ಮೇಲೆ ಕೋಪವಿದೆ. ಏಕೆಂದರೆ ಅವರು ತಮ್ಮ ಜವಾಬ್ದಾರಿಯನ್ನು ಮರೆತರು. ಅಪ್ಪ ತಪ್ಪಿದಾಗ ಅವರಿಗೆ ಅದನ್ನು ಹೇಳುವುದು ತಪ್ಪೇನಲ್ಲ ಎಂದು ನನಗೆ ಅನಿಸುತ್ತದೆ. ಈಗ ನಿಮ್ಮ ಮೇಲೆ ಈ ಜವಾಬ್ದಾರಿಯಿದೆ. ಅದೇ ರೀತಿ ಮಹಿಳೆಯರ ಮೇಲೂ ಇದೆ. ನಾನು ಕೇವಲ ಪುರುಷರಿಗಾಗಿ ಮಾತ ಹೇಳುತ್ತಿಲ್ಲ. ಮಹಿಳೆಯರೂ ಸಹ ತಮ್ಮ ಜವಾಬ್ದಾರಿಯನ್ನು ಅರಿಯಬೇಕು.

(ಸಂ:19-ಪು:722)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು 

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.

ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ  ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’  ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್‌ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ  ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು.  ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.

ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್‌ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್‌ಸಿ  ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್‌ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.

ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.

ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.

ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್‌ ಕುಮಾರ್‌, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್‌ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ

ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್‌ ಶೇ. 97 ದ್ವಿತೀಯ ಹಾಗೂ ಸಮರ್ಥ್‌ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.

ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.

ಯಶಸ್ಸಿನ ಹಿಂದಿನ ಶಕ್ತಿ:

ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್‌, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

Published

on

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.

ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.

ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending