ದಿನದ ಸುದ್ದಿ

ಈ ಮೂರು ದಿನದಂದು ‘ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ಕಡ್ಡಾಯ’ ; ರಾಜ್ಯ ಸರ್ಕಾರ ಸೂಚನೆ

Published

on

ಸುದ್ದಿದಿನ,ಬೆಂಗಳೂರು:ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆ ಹಾಗೂ ನವೆಂಬರ್-26ರ ಸಂವಿಧಾನದ ದಿನಾಚರಣೆಯಂದು ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ್ ಕುಮಾರ್ ಹೆಚ್. ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version