ರಾಜಕೀಯ
ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಜೀವನ ಮತ್ತು ಪ್ರಮುಖ ಘಟನೆಗಳು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
&description=ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಜೀವನ ಮತ್ತು ಪ್ರಮುಖ ಘಟನೆಗಳು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
&description=ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಜೀವನ ಮತ್ತು ಪ್ರಮುಖ ಘಟನೆಗಳು', 'pinterestShare', 'width=750,height=350'); return false;" title="Pin This Post">
ಹಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಶನಿವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 66 ವರ್ಷದ ಜೇಟ್ಲಿ ಬಿಜೆಪಿಯ ಹಿರಿಯ ಮುಖಂಡರು. ತಳಹಂತದಿಂದಲೂ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಮೂಲತ: ವಕೀಲರಾಗಿದ್ದ ಜೇಟ್ಲಿ ತಮಗೆ ನೀಡಿದ ಹುದ್ದೆ ಹಾಗು ವೃತ್ತಿಗೆ ನ್ಯಾಯ ಒದಗಿಸಿದರು.
ವಕೀಲ ವೃತ್ತಿಯಿಂದ ಕೇಂದ್ರದ ಉನ್ನತ ಖಾತೆಗಳನ್ನು ಅಲಂಕರಿಸಿದ ಅರುಣ್ ಜೇಟ್ಲಿ ಬಹುಮುಖ ವ್ಯಕ್ತಿತ್ವ ಉಳ್ಳವರು. 28, ಡಿಸೆಬರ್ 1952ರಲ್ಲಿ ದೆಹಲಿಯಲ್ಲಿ ಜನಿಸಿದ ಅರುಣ್ ಜೇಟ್ಲಿ, ಅವರ ತಂದೆ ಮಹಾರಾಜ್ ಕಿಶನ್ ಕೂಡ ವಕೀಲರಾಗಿದ್ದರು. ತಾಯಿ ರತನ್ ಪ್ರಭಾ ಅವರು ಮಗನಿಗೆ ಉತ್ತಮ ಸಂಸ್ಕಾರ ನೀಡಿ ಭವಿಷ್ಯ ರೂಪಿಸುವಲ್ಲಿ ಶ್ರಮಿಸಿದರು.
ಎಬಿವಿಪಿ ಸೇರುವ ಮೂಲಕ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯರಾದರು. 1973ರಲ್ಲಿ ಜಯಪ್ರಕಾಶ್ ನಾರಾಯಣ ಮತ್ತು ರಾಜ್ ನರೈನ್ ಅವರು ಪ್ರಾರಂಭಿಸಿದ ಭ್ರಷ್ಟಾಚಾರದ ವಿರುದ್ಧ ಚಳುವಳಿಯಲ್ಲೂ ಕೂಡ ಪ್ರಮುಖ ಪಾತ್ರ ವಹಿಸಿದರು. 1982ರಲ್ಲಿ ಜಮ್ಮು ಮತ್ತು ಕಾಶ್ಮೀರದ ಆಗಿನ ಹಣಕಾಸು ಸಚಿವ ಗಿರ್ಧಾರಿಲಾಲ್ ದೋಗ್ರಾ ಅವರ ಪುತ್ರಿ ಸಂಗೀತಾ ಅವರನ್ನು ವಿವಾಹವಾದರು. ರೋಹನ್ ಮತ್ತು ಸೋನಾಲಿ ಇಬ್ಬರ ಮಕ್ಕಳ ಸುಂದರ ಕುಟುಂಬ ಇವರದ್ದಾಗಿತ್ತು.
ಹೋರಾಟ ಮನೋಭಾವದ ಜೇಟ್ಲಿ
ಅರುಣ್ ಜೇಟ್ಲಿ ಹೋರಾಟ ಮನೋಭಾವದವರು. ನಾಗರಿಕ ಹಕ್ಕುಗಳ ಸಮಿತಿಯಲ್ಲಿ ಸಕ್ರಿಯರಾದವರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜೈಲು ಸೇರಿದ್ದರು. ಜೈಲಿನಿಂದ ಹೊರ ಬಂದ ಮೇಲೆ ಜನಸಂಘ ಸೇರಿದರು.
1977ರಲ್ಲಿ ಕಾಂಗ್ರೆಸ್ ಪಕ್ಷ ಸೋಲುಂಡಾಗ ಲೋಕ್ ತಾಂತ್ರಿಕ ಯುವ ಮೋರ್ಚಾದ ಕನ್ವಿನರ್ ಆಗಿ ಜೇಟ್ಲಿ ಕಾರ್ಯನಿರ್ವಹಿಸಿದ್ದಾರೆ. ಎಬಿವಿಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಹಲವು ವಿದ್ಯಾರ್ಥಿ ಪರ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ಇನ್ನು ತಮ್ಮ ವಕೀಲಿ ವೃತ್ತಿಯಲ್ಲೂ ಕೂಡ ತಮ್ಮದೇ ಛಾಪು ಮೂಡಿಸಿದ ವ್ಯಕ್ತಿತ್ವ ಜೇಟ್ಲಿ ಅವರದ್ದು. ಸುಪ್ರಿಂ ಕೋರ್ಟ್ ಸೇರಿ ದೇಶದ ಹತ್ತು ಹಲವು ಕೋರ್ಟ್ ಗಳಲ್ಲಿ ಕಾನೂನು ಅಭ್ಯಾಸ ಮಾಡಿದ್ದಾರೆ. ಬೋಫೋರ್ಸ್ ಹಗರಣದ ತನಿಖೆಗಾಗಿ ಹಲವಾರು ದಾಖಲೆಗಳನ್ನು ಸಂಗ್ರಹಿಸಿದ್ದರು. ಇನ್ನು ಭಾರತದಲ್ಲಿನ ಭ್ರಷ್ಟಾಚಾರ ಮತ್ತು ಅಪರಾಧಕ್ಕೆ ಸಂಬಂಧಿಸಿದಂತೆ ಇಂಡೋ ಬ್ರಿಟೀಷ್ ಕಾನೂನು ವೇದಿಕೆಯ ಮುಂದೆ ಪ್ರಬಂಧ ಮಂಡಿಸುವ ಮೂಲಕ ಜನಮೆಚ್ಚುಗೆಯನ್ನು ಪಡೆದಿದ್ದರು. ಮಹಿಳಾ ಮೀಸಲಾತಿ ಮಸೂದೆಯಲ್ಲಿ ಜೇಟ್ಲಿ ಪಾತ್ರ ಪ್ರಮುಖವಾಗಿತ್ತು. ಸಂವಿಧಾನದ 84ನೇ ತಿದ್ದುಪಡಿಗಳನ್ನು 2026ವರೆಗೆ ಸ್ಥಗಿತಗೊಳಿಸುವ ಮೂಲಕ ದಿಟ್ಟತನ ಪ್ರದರ್ಶಿಸಿದ್ದರು.
ಪರಿಸರ ಸ್ನೇಹಿ ಜೇಟ್ಲಿ
ಅರುಣ್ ಜೇಟ್ಲಿ ವಕೀಲ ವೃತ್ತಿಯ ಜತೆಗೆ ಹಲವು ಖಾತೆಗಳಿಗೆ ನ್ಯಾಯಸಮ್ಮತವಾಗಿ ಆಡಳಿತ ನಡೆಸಿದವರು. ತಮ್ಮ ಅಧಿಕಾರದ ಅವಧಿಯಲ್ಲಿ ಪರಿಸರಕ್ಕೆ ಹಾನಿ ನೀಡುವ ಬಹುರಾಷ್ಟ್ರೀಯ ಕಂಪನಿ ವಿರುದ್ಧ ಸಮರ ಸಾರಿದ್ದರು. ಹೀಗಾಗಿ ಜೇಟ್ಲಿ ವ್ಯಕ್ತಿತ್ವ ಪರಿಸರ ಸ್ನೇಹಿಯಾಗಿತ್ತು.
ಜೇಟ್ಲಿ ಸಾಗಿ ಬಂದ ಹಾದಿ
ಎಬಿವಿಪಿ ಮೂಲಕ ವಿದ್ಯಾರ್ಥಿ ಸಂಘಟನೆಗೆ ಧುಮುಕಿ ಸಾಕಷ್ಟು ಹುದ್ದೆಗಳನ್ನು ನಿಭಾಯಿಸಿದರು. ನಂತರ ಜನಸಂಘ ಸೇರಿ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ನಂತರ ಬಿಜೆಪಿಯಲ್ಲಿಯೂ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದರು.
1990ರಲ್ಲಿ ದೆಹಲಿ ಹೈಕೋರ್ಟ್ ನಲ್ಲಿ ಹಿರಿಯ ವಕೀಲರಾಗಿಯೂ ಕಾರ್ಯನಿರ್ವಹಿಸಿದ್ದರು.
1999ರಲ್ಲಿ ವಾಜಪೇಯಿ ಸರ್ಕಾರದಲ್ಲಿ ರಾಜ್ಯ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ, 2000 ರಲ್ಲಿ ಕಾನೂನು, ನ್ಯಾಯ ಮತ್ತು ಕಂಪನಿ ವ್ಯವಹಾರ ಖಾತೆಯನ್ನು ಹೆಚ್ಚುವರಿಯಾಗಿ ನಿಭಾಯಿಸಿದರು. ಇದೇ ಸಂದರ್ಭದಲ್ಲಿ ಸಾರಿಗೆ ವಿಭಾಗ ವಿಭಜನೆಯಾದ ನಂತರ ಪ್ರಥಮ ಬಂದರು ಸಚಿವರಾದ ಕೀರ್ತಿ ಜೇಟ್ಲಿ ಅವರಿಗೆ ಸಲ್ಲುತ್ತದೆ. ತಮ್ಮ ರಾಜಕೀಯ ಜೀವನದಲ್ಲಿ ಬಹುತೇಕ ನೇರ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಕಡಿಮೆ.
ಆದರೆ ಜೇಟ್ಲಿ ರಾಜಕೀಯ ಜೀವನದಲ್ಲಿ 2016 ನವಂಬರ್ 9ರಂದು 500, 1,000 ಮುಖಬೆಲೆಯ ನೋಟು ನಿಷೇಧದ ಸಂದರ್ಭದಲ್ಲಿ ಅರುಣ್ ಜೇಟ್ಲಿ ಹಣಕಾಸು ಸಚಿವರಾಗಿದ್ದರು. ಹೀಗಾಗಿ ನೋಟ್ ಬ್ಯಾನ್ ನಂತಹ ತೀರ್ಮಾನ ಸ್ವಪಕ್ಷದ ಸಮರ್ಥನೆಗೆ ಕಾರಣವಾದರೆ ವಿರೋಧ ಪಕ್ಷದ ತೀವ್ರ ವಿರೋಧಕ್ಕೆ ಕಾರಣವಾಯಿತು.
1998ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧಿವೇಶನಕ್ಕೆ ಭಾರತ ಸರ್ಕಾರ ಪರ ಪ್ರತಿನಿಧಿಯಾಗಿದ್ದರು. ರಾಜ್ಯ ಸಭೆಯ ಪ್ರತಿಪಕ್ಷದ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಪ್ರತಿಪಕ್ಷ ಸ್ಥಾನ ಅಲಂಕರಿಸುವ ಮೂಲಕ ವಕೀಲಿ ವೃತ್ತಿ ನಿಲ್ಲಿಸಿದರು.
2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ಅನಾರೋಗ್ಯದ ಕಾರಣ ತಾವು ಸಕ್ರಿಯರಾಗದಿರುವ ಬಗ್ಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಹಲವು ತಿಂಗಳಿಂದ ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಏಮ್ಸ್ ನಲ್ಲಿ ಮೂತ್ರ ಪಿಂಡ ಕಸಿ ಮಾಡಿಸಿಕೊಂಡಿದ್ದರು. ಇನ್ನು ನ್ಯೂಯಾರ್ಕ್ ನಲ್ಲೂ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆ ಶನಿವಾರ ಕೊನೆಯುಸಿರೆಳೆದರು.
ಕೃಪೆ : ಡೆಮಾಕ್ರಟಿಕ್ ನ್ಯೂಸ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

