Connect with us

ದಿನದ ಸುದ್ದಿ

ಸಹಕಾರ ಇಲಾಖೆಯಿಂದ 61 ಜನ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹಧನ ವಿತರಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಕಲಬುರಗಿ:ಲಾಭದಲ್ಲಿರುವ ಸಹಕಾರಿ ಬ್ಯಾಂಕ್ ಮತ್ತು ಸಂಘ-ಸಂಸ್ಥೆಗಳಿಂದ ಸಹಕಾರ ಇಲಾಖೆಯು ದೇಣಿಗೆ ಸಂಗ್ರಹಿಸಿ ಕಲಬುರಗಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗಿದೆ. ಇದರ ಪ್ರಯುಕ್ತ ಸಾಂಕೇತಿಕವಾಗಿ ಸಹಕಾರ ಇಲಾಖೆಯಿಂದ ಈಗಾಗಲೇ 61 ಜನ ಆಶಾ ಕಾರ್ಯಕರ್ತೆಯರಿಗೆ ಒಟ್ಟು 1,83,000 ರೂ.ಗಳ ಪ್ರೋತ್ಸಾಹಧನವನ್ನು ಚೆಕ್ ಮೂಲಕ ವಿತರಣೆ ಮಾಡಲಾಗಿದೆ ಎಂದು ಕಲಬುರಗಿ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

ಕಲಬುರಗಿ, ಆಳಂದ, ಸೇಡಂ ತಾಲೂಕುಗಳಲ್ಲಿ ಬರುವ ಗ್ರಾಮಗಳ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಕಮಲಾಪುರ ತಾಲೂಕಿನ ಮಹಾಗಾಂವ, ಮಡಕಿ, ಸೇಡಂ ತಾಲೂಕಿನ ಕೋಡ್ಲಾ ಹಾಗೂ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸುವ ಮೂಲಕ ಸಾಂಕೇತಿಕವಾಗಿ ಪ್ರೋತ್ಸಾಹಧನದ ಚೆಕ್ ವಿತರಣೆ ಮಾಡಲಾಗಿದೆ. ಆಯಾ ತಾಲೂಕಿನ ಶಾಸಕರು, ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ಸಂಘದ ಆಡಳಿತ ಮಂಡಳಿ, ತಾಲೂಕಾ ಆರೋಗ್ಯ ಅಧಿಕಾರಿಗಳು, ತಾಲೂಕು ತಹಸೀಲ್ದಾರರು ಹಾಗೂ ಪೋಲಿಸ್ ಠಾಣಾ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಿರುತ್ತಾರೆ.

ಈ ಪ್ರೋತ್ಸಾಹಧನ ಪಾವತಿಗಾಗಿ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೂಲಕ ತಾಲೂಕುವಾರು, ಪ್ರಾಥಮಿಕ ಆರೋಗ್ಯ ಕೇಂದ್ರವಾರು ಹಾಗೂ ಗ್ರಾಮವಾರು ಕಾರ್ಯನಿರತ ಆಶಾ ಕಾರ್ಯಕರ್ತೆಯರ ಮಾಹಿತಿಯನ್ನು ಪಡೆಯಲಾಗಿದೆ. ವಿವರ ಇಂತಿದೆ. ಕಲಬುರಗಿ- 342, ಆಳಂದ-290, ಅಫಜಲಪೂರ-194, ಜೇವರ್ಗಿ-278, ಸೇಡಂ-184, ಚಿತ್ತಾಪೂರ-311, ಚಿಂಚೋಳಿ 242 ಸೇರಿದಂತೆ ಹೀಗೆ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 1847 ಆಶಾ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ 3000 ರೂ.ರಂತೆ ಪ್ರೋತ್ಸಾಹ ಧನ ವಿತರಣೆ ಮಾಡಲು ಒಟ್ಟು ರೂ. 55,41,000 ರೂ.ಗಳ ದೇಣಿಗೆ ಸಂಗ್ರಹಿಸಲು ಗುರಿ ಹೊಂದಲಾಗಿದೆ.

ಆಶಾ ಕಾರ್ಯಕರ್ತೆಯರಿಗೆ ದೇಣಿಗೆ ಸಂಗ್ರಹಿಸಿ ಪ್ರೋತ್ಸಾಹಧನ ನೀಡಲು ಕಲಬುರಗಿ ನಗರದಲ್ಲಿ ಲಾಭದಲ್ಲಿರುವ ಸಹಕಾರ ಬ್ಯಾಂಕುಗಳು, ಸಂಘ ಸಂಸ್ಥೆಗಳಿಂದ ಸಹಕಾರ ಸಂಘಗಳ ಉಪ ನಿಬಂಧಕರು ಕಲಬುರಗಿ ಇವರ ಹೆಸರಿಗೆ ಚೆಕ್ ಮೂಲಕ ಈಗಾಗಲೇ 15 ಲಕ್ಷ ರೂ. ವರೆಗೆ ದೇಣಿಗೆ ಸಂಗ್ರಹ ಮಾಡಲಾಗಿದೆ.

ಮುಂದಿನ ದಿನಗಳಲ್ಲಿ ಪ್ರತಿ ಎಲ್ಲಾ ತಾಲೂಕಿನಲ್ಲಿ ಬರುವ ಸಹಕಾರ ಸಂಘಗಳ ಮೂಲಕ ಆಶಾ ಕಾರ್ಯಕರ್ತೆಯರಿಗೆ ಹಂತ ಹಂತವಾಗಿ ಚೆಕ್‍ಗಳ ಮೂಲಕ ಪ್ರೋತ್ಸಾಹ ಧನ ವಿತರಣೆ ಮಾಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending