ದಿನದ ಸುದ್ದಿ
ಯಾರು ಈ ಬಿ ಎಂ ಬಶೀರ್ ? ಏನಿದು ವಾರ್ತಾಭಾರತಿ ? ನಾಡು ನುಡಿಗೆ ಇವರ ಕೊಡುಗೆ ಏನು ?
- ರವಿರಾಜ್ ಗೌಡ
ಹಿರಿಯ ಪತ್ರಕರ್ತ ಬಿ ಎಂ ಬಶೀರ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಂಬಲಿಸಿ ಬರೆದ ಎರಡೇ ಸಾಲಿನ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ಫೇಸ್ ಬುಕ್ ನಲ್ಲಿ ಯಾರು ಬಶೀರಾ ? ಬಶೀರನ ಸಾಧನೆಗಳು ಏನು ? ನಾವು ಮಾಡಿದ್ದಷ್ಟು ಹೋರಾಟಗಳನ್ನು ಬಶೀರ ಮಾಡಿದ್ದಾನಾ ? ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಳಲಾಗುತ್ತಿದೆ.
ಉಪ್ಪಿನಂಗಡಿ ಬಳಿಯ ಮಠ ಎಂಬಲ್ಲಿ ಜನಿಸಿದ ಬಿ ಎಂ ಬಶೀರರು ಪತ್ರಿಕೋದ್ಯಮ ಚಳುವಳಿ ಕಾರಣಕ್ಕಾಗಿಯೇ ಸಹೋದರ ಬಿ ಎಂ ರಶೀದರನ್ನು ಕಳೆದುಕೊಂಡರು. ಲಂಕೇಶ್ ನಲ್ಲಿ ಕೆಲಸ ಮಾಡುತ್ತಿದ್ದ ಬಿ ಎಂ ರಶೀದರ ಅನುಮಾಸ್ಪದ ಸಾವು ಬಿ ಎಂ ಬಶೀರರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಿಲ್ಲ. ಅಷ್ಟೊಂದು ಸೈದ್ದಾಂತಿಕ ಬದ್ದತೆ, ದೈರ್ಯವಂತಿಕೆ ಬಿ ಎಂ ಬಶೀರ್ ಗೆ ಇತ್ತು. ಪತ್ರಿಕೋಧ್ಯಮದಲ್ಲಿ ಜನಪರ ಚಳುವಳಿಗಳ ಜೊತೆ ನಿಂತ ಬಿ ಎಂ ಬಶೀರರು ನಾಡಿನ ಚಳುವಳಿಗಳ ಪ್ರಮುಖ ಭಾಗವೇ ಆಗಿದ್ದರು.
ಮುಂಬಯಿನ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ 5 ವರ್ಷಗಳ ಕಾಲ ದುಡಿದ ನಂತರ ಜನವಾಹಿನಿ ಪತ್ರಿಕೆಯಲ್ಲಿ ಹಿರಿಯ ಸಂಪಾದಕರಾಗಿ 5 ವರ್ಷ ಕೆಲಸ ಮಾಡಿದ್ದಾರೆ. ಪ್ರಸ್ತುತ “ವಾರ್ತಾ ಭಾರತಿ” ಕನ್ನಡ ದೈನಿಕದಲ್ಲಿ ಸುದ್ದಿ ಸಂಪಾದಕನಾಗಿ ಕಳೆದ ಹನ್ನೆರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಫೇಸ್ ಬುಕ್, ವಾಟ್ಸಪ್ ಗಳಂತಹ ಸಾಮಾಜಿಕ ಜಾಲತಾಣ ಇಲ್ಲದೇ ಇದ್ದ ಸಂದರ್ಭದಲ್ಲಿ ವಾರ್ತಾಭಾರತಿ ಪತ್ರಿಕೆ ಕನ್ನಡಿಗರು, ರೈತರ ಜೊತೆ ಗಟ್ಟಿಯಾಗಿ ನಿಂತಿತ್ತು.
ವಿಶೇಷ ಅರ್ಥಿಕ ವಲಯಕ್ಕೆ ಒಎನ್ ಜಿಸಿ ಕಂಪನಿಯು 3000 ಎಕರೆ ರೈತರ ಭೂಮಿ ಸ್ವಾಧೀನ ಮಾಡಿದಾಗ ರೈತರ ಜೊತೆ ನಿಂತ ಮೂರು ಪತ್ರಿಕೆಗಳಲ್ಲಿ ವಾರ್ತಾಭಾರತಿಯೂ ಒಂದು. ಅದಕ್ಕಾಗಿ ಅದು ನಷ್ಟ ಮಾಡಿಕೊಂಡಿದ್ದು ಕೋಟಿ ಕೋಟಿ ರೂಪಾಯಿಗಳ ಜಾಹೀರಾತು. ಎಲ್ಲಾ ಪತ್ರಿಕೆಗಳು ಮುಖಪುಟ ಜಾಹೀರಾತು ಹಾಕಿ ಕಂಪನಿ ಪರ ಇದ್ರೆ ವಾರ್ತಾಭಾರತಿ ಮಾತ್ರ ಅಭಿಯಾನದ ರೀತಿಯಲ್ಲಿ ರೈತರ ಪರ ನಿಂತಿತ್ತು.
ಕನ್ನಡ ಸಾಹಿತ್ಯ ಲೋಕಕ್ಕೆ ಬಿ ಎಂ ಬಶೀರರ ಕೊಡುಗೆಯೂ ಮಹತ್ವದ್ದು. ಕನ್ನಡದಲ್ಲಿ ಹನಿಗತೆ ಪ್ರಾಕಾರವನ್ನು ಸಮರ್ಥವಾಗಿ ಬಳಸುತ್ತಿರುವರಲ್ಲಿ ಬಶೀರರು ಪ್ರಮುಖರು. ಜೊತೆಗೆ ಉತ್ತಮ ಕವಿಯೂ ಹೌದು. ಮುಂಬಯಿ ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಸಾಹಿತ್ಯದಲ್ಲಿ, ಚಿನ್ನದ ಪದಕದೊಂದಿಗೆ ಎಂ.ಎ. ಪದವಿ ಪಡೆದಿದ್ದ ಬಿ ಎಂ ಬಶೀರರು ಹಲವು ಪುಸ್ತಕಗಳನ್ನು ಬರೆದಿದ್ದಾರೆ.
ಪ್ರವಾದಿಯ ಕನಸು (ಕವನ ಸಂಕಲನ), ಬಾಳೆಗಿಡ ಗೊನೆ ಹಾಕಿತು (ಕಥಾ ಸಂಕಲನ), ಅಂಗೈಯಲ್ಲಿ ಆಕಾಶ (ಹನಿಗತೆಗಳ ಸಂಕಲನ), ಬಾಡೂಟದ ಜೊತೆಗೆ ಗಾಂಧೀ ಜಯಂತಿ (ಲೇಖನಗಳ ಸಂಗ್ರಹ), ನನ್ನ ಮಸೀದಿ ಧ್ವಂಸಗೈದವರಿಗೆ ಕೃತಜ್ಞ-ಸೂಫಿ ಕಣ್ಣಲ್ಲಿ ಹನಿಗಳು(ಹನಿ ಕವಿತೆಗಳು), ಅಮ್ಮ ಹಚ್ಚಿದ ಒಲೆ(ಕವನ ಸಂಕಲನ) ಅವರ ಪ್ರಮುಖ ಪ್ರಕಟಿತ ಪುಸ್ತಕಗಳು. ಈ ರೀತಿಯ ಸಾಹಿತ್ಯ ಸೇವೆಗಾಗಿ ಮುದ್ದಣ ಕಾವ್ಯ ಪ್ರಶಸ್ತಿ, ಮೈಸೂರು ಚದುರಂಗ ಪ್ರತಿಷ್ಥಾನ ಪ್ರಶಸ್ತಿ, ಲಂಕೇಶ್ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬಂದಿವೆ.
ಕರಾವಳಿಯ ಮುಸ್ಲಿಂ ಕೋಮುವಾದ ಮತ್ತು ಹಿಂದೂ ಕೋಮುವಾದವನ್ನು ಸಮಾನಾಗಿ ನೋಡುವ ಬಿ ಎಂ ಬಶೀರರು ಎರಡೂ ವರ್ಗಗಳಿಂದ ದಾಳಿಗೆ ಒಳಗಾದವರು. ಎರಡೂ ವಾದಿಗಳ ನೈತಿಕ ಪೊಲೀಸ್ ಗಿರಿ, ಹಿಡನ್ ಅಜೆಂಡಾಗಳನ್ನು ಪತ್ರಿಕೆಯ ಮೂಲಕ ಬಯಲುಗೊಳಿಸಿದವರು. ಎಲ್ಲಾ ಕನ್ನಡ ಪತ್ರಿಕೆಗಳು ಹಿಂದಿ ಗುಲಾಮಗಿರಿ, ಹಿಂದುತ್ವವಾದ, ಶ್ರೀಮಂತರ ಪರ ಇರೋ ಸಂಧರ್ಭದಲ್ಲಿ ಅದರ ಪ್ರವಾಹಕ್ಕೆ ಎದುರಾಗಿ ವಾರ್ತಾಭಾರತಿ ಹಾಗೋ ಹೀಗೋ ಈಜಾಡುತ್ತಾ ಜನರಿಗಾಗಿ ಹೋರಾಡುತ್ತಿದೆ. 25 ವರ್ಷದ ಸಾಹಿತ್ಯ ಮತ್ತು ಪತ್ರಿಕೋದ್ಯಮದ ಬದುಕಿನಲ್ಲಿ ಬಿ ಎಂ ಬಶೀರರು ಸಮಾಜಕ್ಕಾಗಿ ತನ್ನ ಕುಟುಂಬದವರನ್ನು, ಹಣವನ್ನು ಕಳೆದುಕೊಂಡರೇ ಹೊರತು ಬಂಗಲೆಗಳನ್ನು ಕಟ್ಟಲಿಲ್ಲ, ಆದಾಯದ ಮೂಲಕ್ಕಾಗಿ ಉದ್ಯಮಗಳನ್ನು ಸ್ಥಾಪಿಸಲಿಲ್ಲ. ಆದ್ದರಿಂದಲೇ ರಾಜಿರಹಿತ ಬದುಕು ಸಾದ್ಯವಾಯಿತು.
ಬಿ ಎಂ ಬಶೀರ್ ಮತ್ತು ಅವರ ಕುಟುಂಬದ ತ್ಯಾಗ, ಬಲಿದಾನದ ಇತಿಹಾಸ, ರಾಜಿರಹಿತ ಪತ್ರಿಕೋದ್ಯಮದ ಹಿನ್ನಲೆಯೇ ಒಂದು ದೊಡ್ಡ ಹೋರಾಟದ ಇತಿಹಾಸ. ಇಂತವರನ್ನು ಯಾವುದೋ ಆಶಯದ ಪ್ರತಿಕ್ರಿಯೆಯನ್ನು ತಿರುಚಿ ಗುರಿಯಾಗಿಸೋದು ಕನ್ನಡದ ಜನ ಚಳುವಳಿಗೆ ಮಾಡುವ ದ್ರೋಹವಲ್ಲದೆ ಇನ್ನೇನೂ ಅಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ6 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

