Connect with us

ದಿನದ ಸುದ್ದಿ

ಅಂತಃಕರಣೆಯ ಹುಡುಕುತ್ತಾ..

Published

on

  • ಬಿ.ಶ್ರೀನಿವಾಸ

ಒಂದು ಊರಿನ ಮೌನ ಅರ್ಥವಾಗಬೇಕಾದರೆ, ದುಃಖ ಅರ್ಥವಾಗಬೇಕಾದರೆ ನಾವು ಏನನ್ನು ಮಾಡಬೇಕು? ನಾವು ಹೇಗೆ ಬದುಕಬೇಕು? ಗಾಯಗೊಂಡ ಬೆಟ್ಟ-ಗುಡ್ಡ ,ನದಿ ತೊರೆಗಳ ಬತ್ತಿಹೋದ ನೆಲದ ಕಣ್ಣಿಂದ ಪ್ರಾಣಿ-ಪಕ್ಷಿಗಳ ಆ ದೈನೇಸಿ ನೋಟಗಳಿಂದ ತಪ್ಪಿಸಿಕೊಳ್ಳುವುದಾದರೂ ಹೇಗೆ? ಪ್ರೀತಿ ,ಸಹಾನುಭೂತಿ ಗಳನ್ನು ಕಳೆದುಕೊಂಡವರು ಮಾತ್ರ ನಮ್ಮ ಸುತ್ತಮುತ್ತಲ ಬದುಕು ನರಕ ಸದೃಶವಾಗಿದ್ದರೂ ನೆಮ್ಮದಿಯಿಂದ ಉಣ್ಣ ಬಲ್ಲರು. ನಿದ್ರಿಸಬಲ್ಲರು, ಬರೆಯಬಲ್ಲರು.

ಬಳ್ಳಾರಿ ಜಿಲ್ಲೆಯ ಸೊಂಡೂರು ಮತ್ತು ಸುತ್ತಮುತ್ತಲಿನ ಪ್ರದೇಶದ ಬಹುತೇಕ ಹಳ್ಳಿಗಳು ರೋಗಗ್ರಸ್ತ ಪೀಡಿತರಂತೆ ಕಾಣುತ್ತಿವೆ .ಕಳೆದ ದಶಕದ ಅವಧಿಯೊಂದರಲ್ಲಿ ನಡೆದ ಗಣಿಗಾರಿಕೆಯಿಂದಾಗಿ ಇಡೀ ಪ್ರದೇಶ ಶಾಶ್ವತ ಬರಪೀಡಿತ ಪ್ರದೇಶವಾಗಿ ಬಿಟ್ಟಿದೆ. ಅದಿರು ಸಾಗಾಣಿಕೆಯ ಹೆಚ್ಚಳದಿಂದಾಗಿ ಕಾರ್ಬನ್ ಡೈಯಾಕ್ಸೈಡ್ ಆಸ್ಫೋಟಿಸಿದೆ. ಅಪರೂಪದ ಗಿಡ-ಮರಗಳು, ಪಕ್ಷಿಗಳು ,ಅಳಿವಿನಂಚಿಗೆ ತಳ್ಳಲ್ಪಟ್ಟಿವೆ.

ಶಾಲೆಗಳು ಮಕ್ಕಳಿಲ್ಲದೆ ಮುಚ್ಚಲ್ಪಟ್ಟವು. ಅದಿರು ಹೊತ್ತ ಲಾರಿಗಳಲ್ಲಿ ಮಕ್ಕಳ ಅಕ್ಷರಗಳನ್ನು ತುಂಬಿ ಕಳುಹಿಸಲಾಯಿತು. ಜನರು ಇಂತಹ ಬದುಕಿಗೆ ಹೊಂದಿಕೊಳ್ಳದೆ ಅನ್ಯ ಮಾರ್ಗವೇ ಇರಲಿಲ್ಲ. ಸತತ ಒಂದೂವರೆ ದಶಕಕ್ಕೂ ಹೆಚ್ಚು ಕಾಲ ನಡೆದ ಗಣಿಗಾರಿಕೆಯಿಂದಾಗಿ ಜನರ ಸಾಕ್ಷರತೆಯ ಪ್ರಮಾಣ ಮತ್ತು ಜೀವನಾಯುಷ್ಯ ಪ್ರಮಾಣ ಪಾತಾಳಕ್ಕೆ ಕುಸಿದಿದೆ . ರಕ್ತಹೀನತೆಯಿಂದ ಬಳಲುವ ಮಹಿಳೆಯರ ಸಂಖ್ಯೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಗಿಂತಲೂ ಜಾಸ್ತಿಯಾಗಿದೆ. 5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣವು ಅಧಿಕವಾಗಿದೆ.

ಇಲ್ಲಿನ ಸಂಪನ್ಮೂಲ ಇರುವುದೇ ತಮ್ಮ ಭೋಗ ವಿಲಾಸಕ್ಕೆ ಎಂದು ರಾಜಕೀಯವರ್ಗ,ಉದ್ಯಮಿಗಳು ಮತ್ತು ಕೆಲ ಆಡಳಿತಶಾಹಿ ಅಧಿಕಾರಿಗಳು ತಿಳಿದುಕೊಂಡಿದ್ದರು ಬಳ್ಳಾರಿ ಜಿಲ್ಲೆ ಇರುವುದೇ ಲೋಲುಪತೆ ಗೋಸ್ಕರ ಇಲ್ಲಿ ಹಣವೊಂದಿದ್ದರೆ ಏನೆಲ್ಲಾ ಸಾಧಿಸಬಹುದು ಮತಗಳನ್ನು ಮತದಾರರನ್ನು ಕೊಂಡುಕೊಳ್ಳಬಹುದು, ರಾಜಕೀಯ ಚುನಾವಣಾ ಪ್ರಚಾರಕ್ಕೆ ದಿನವೊಂದಕ್ಕೆ ಲಕ್ಷದಂತೆ ತಿಂಗಳುಗಟ್ಟಲೆ ಪ್ರಚಾರ ಮಾಡಿದ ಸಿನಿತಾರೆಯರಿಗೇನೂ ಕಡಿಮೆ ಇಲ್ಲ.ಸಂಪನ್ಮೂಲಗಳ ಹಗಲು ದರೋಡೆ ರಾಜಾರೋಷವಾಗಿ ನಡೆದುಹೋಯಿತು.

ಈ ಊರುಗಳಲ್ಲಿ ಬುಡುಬುಡುಕಿಯವರಿದ್ದರು, ಹಗಲುವೇಷಗಾರರು, ನಕ್ಕುನಗಿಸುವ ಹಾಡುಗಾರರು, ಬಯಲಾಟದವರು,ಕುರ್ರಮಾಮುಡು ವಸ್ತುನ್ನಾಡು…ಟಿಮ್ ಟಿಮ್….ಎನ್ನುತ್ತ ಬರುವವರು,ಗಿಣಿಶಾಸ್ತ್ರ ಹೇಳುವವರು ,ಬಣ್ಣಬಣ್ಣದ ಹರಳು ಮಾರುವ ಮಹಾ ಗಟ್ಟಿಗಿತ್ತಿಯರು, ಕಾಡಿನ ಗರ್ಭ ಹೊಕ್ಕು ಒಣ ಮರದ ಕಟ್ಟಿಗೆ ತಂದು, ಹೊತ್ತು ಮಾರಿ ಜೀವಿಸುವ ಲಂಬಾಣಿ ಯಾಡಿಗಳಿದ್ದರು. ಜೊತೆಗೆ ಅವರ ಉಡಿಗಳಲ್ಲಿ ಕಾರಿ, ಕವಳಿ,ಪುಟ್ಲಾಸು, ಬಿಕ್ಕಿ ಹಣ್ಣಿನಂತಹ ಹಣ್ಣುಗಳು ಇರುತ್ತಿದ್ದವು.

ಆಹಾರ ಸಂಪಾದನೆಯ ಬೇರೆ ಮೂಲಗಳೇ ಗೊತ್ತಿಲ್ಲದ ಇವರಿಗೆ ಭಿಕ್ಷೆಯೊಂದೇ ಉಳಿದಿರುವ ಮಾರ್ಗ. ಇವರುಗಳೆಲ್ಲಾ ಸಮಾಜದ ಕಣ್ಣಿನಲ್ಲಿ ಅಪರಾಧಿಗಳಂತೆ ಕಾಣುತ್ತಿರುವುದು ಪರಿಸ್ಥಿತಿಯ ವ್ಯಂಗ್ಯ .ಇವರನ್ನು ಇವರ ಕಲೆಯನ್ನು ಗೌರವಿಸುವ ಒಂದು ಸಮುದಾಯವೇ ನಾಶವಾಗಿಹೋಯಿತು.ರೊಕ್ಕಾ ಕೊಟ್ಟರೆ ಏನು ಬೇಕಾದುದನ್ನು ಪಡೆಯಬಹುದೆಂಬ ಅಹಂ-ಭಾವಹೀನ ಮನುಷ್ಯರನ್ನು ಸೃಷ್ಟಿಸುತ್ತಾ ನಡೆದಿದೆ.

ಸೊಂಡೂರು -ಬಳ್ಳಾರಿ ಜಿಲ್ಲೆಯ ಮಲೆನಾಡು .ಪುಟ್ಟ ಕಾಶ್ಮೀರ. ಬೆಟ್ಟ ಗುಡ್ಡಗಳಿಂದ ಆವೃತವಾದ ಸುಂದರನಾಡು .ಅತಿ ಫಲವತ್ತಾದ ಮಣ್ಣು ತುಂಬಿದ ನೆಲ. ಜಲಮೂಲಗಳುಳ್ಳ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ, ಸೊಂಡೂರಿನ ಸುತ್ತಮುತ್ತ ಸುಮಾರು 40 ಕಿಲೋಮೀಟರ್ ಉದ್ದದ, 15 ಕಿಲೋಮೀಟರುಗಳಷ್ಟು ಅಗಲದ ಬೆಟ್ಟಗಳಲ್ಲಿ ಕಬ್ಬಿಣ, ತಾಮ್ರ ಮತ್ತು ಮ್ಯಾಂಗನೀಸ್ ಅದಿರಿನ ಗಣಿಗಳಿವೆ. ಇಲ್ಲಿ ದೊರೆಯುವ ಹೆಮಟೈಟ್ ಉತ್ತಮ ದರ್ಜೆಯ ಕಬ್ಬಿಣದ ಅದಿರು. ಹಾಗೆಯೇ ಮ್ಯಾಂಗನೀಸ್ ಕೂಡ ಡೇರಸ್ ಫಿಲೈಟ್ ಎಂಬ ಕಲ್ಲುಗಳಲ್ಲಿ ಹೇರಳವಾಗಿ ದೊರೆಯುತ್ತದೆ.

ಇದೇ ರೀತಿಯ ಸಂಪತ್ತು ಬೇರೆ ಕಡೆಗಳಲ್ಲಿ ಸಿಗುವುದಿಲ್ಲ ಎಂದಲ್ಲ. ವಿಶ್ವದರ್ಜೆಯ ಶ್ರೇಷ್ಠ ಮಟ್ಟದ ಮ್ಯಾಂಗನೀಸ್ ಅದಿರಿನ ನಿಕ್ಷೇಪಗಳು ಸುಬ್ರಾಯನಹಳ್ಳಿ ,ರಾಮಘಡಗಳಂತಹ ಹಳ್ಳಿಗಳ ಶಿಖರಗಳಲ್ಲಿ ದೊರೆಯುತ್ತವೆ. ಈ ಅದಿರಿನ ವಿಶೇಷವೆಂದರೆ ಬಹುತೇಕ ಅದಿರುಗಳಲ್ಲಿ ಸೇರಿಹೋಗಿರುವ ಫಾಸ್ಪೇಟ್ ಮತ್ತು ಸಲ್ಫರ ನಿಗದಿತ ಅಂಶಕ್ಕಿಂತ ಕಡಿಮೆ ಇರುವುದರಿಂದ ಇಲ್ಲಿನ ಮ್ಯಾಂಗನೀಸ್ ವಿಶ್ವ ಪ್ರಸಿದ್ಧವಾಗಿದೆ ಹಾಗಾಗಿ ಇಲ್ಲಿನ ಅದಿರಿಗೆ ವಿಶೇಷ ಬೇಡಿಕೆ.

ಬಳ್ಳಾರಿ ಜಿಲ್ಲೆಯ ಸೊಂಡೂರು ಕೇವಲ ಒಂದು ಊರು,ಪ್ರದೇಶ ಆಗಿರಬಹುದು .ಆದರೆ ಆತ ಊರಿನ ದುರಂತ ಇಡೀ ಪ್ರಪಂಚವನ್ನೇ ಪ್ರತಿನಿಧಿಸುವುದರ ಸಂಕೇತ. ಗಣಿಗಾರಿಕೆ ಆರಂಭವಾದಾಗಲೇ ಊರಿನ ಅವನತಿಯ ಆರಂಭವಾಯಿತು. ಯಥೇಚ್ಛವಾಗಿ ಗಣಿಗಾರಿಕೆಗೆ ಸರ್ಕಾರವೇ ಅನುಮತಿ ನೀಡುವಾಗ ಅದರ ಹೆಸರಿನಲ್ಲಿ ರಾಜಕಾರಣಿಗಳು ಅಕ್ರಮ ಗಣಿಗಾರಿಕೆ ನಡೆಸುವಾಗಲಂತೂ ಊರು ಆಹುತಿಯಾಗಿ ಬಿಟ್ಟಿತ್ತು. ಮನುಷ್ಯರು ಕೂಲಿಯ ಯಂತ್ರಗಳಾಗಿ ಹೋದರು.

ಮನುಷ್ಯನೇ ಸಂಶೋಧಿಸಿದ ಮೂಲ ಕಸುಬುಗಳಾದ ಕೃಷಿ ,ಬಡಗಿತನ, ಕ್ರೀಡೆ ಹಾಗೂ ಮೈಥುನಗಳು ಸಹ ಕೇವಲ ಯಾಂತ್ರಿಕವೆಂಬಂತೆ ಆಗಿಹೋದವು.ಎಷ್ಟೋ ದಿನಗಟ್ಟಲೆ,ತಿಂಗಳುಗಟ್ಟಲೆ, ಗಣಿಗಾರಿಕೆ ಬೆಟ್ಟಗಳ ತುತ್ತತುದಿಯಲ್ಲಿ ನಡೆಯುತ್ತಿತ್ತು.ಕೂಲಿಯವರೂ ಅಷ್ಟೂ ದಿನಗಳ ಕಾಲ ಅಲ್ಲಿಯೇ ಇರಬೇಕಾಗುತ್ತಿತ್ತು. ಕೂಲಿಯ ಹೆಣ್ಣು ಗಂಡುಗಳು ಅದಿರಿನ ನಿಕ್ಷೇಪದ ಬಯಲಿನಲ್ಲಿಯೇ ಮೈಥುನಕ್ಕಿಳಿದುಬಿಡುತ್ತಿದ್ದರು.ಮಕ್ಕಳು ಉಣ್ಣುವ ಅನ್ನದಲ್ಲಿ ಕೆಂಪುಧೂಳು ಸೇರಿಸಿಯೇ ಉಣ್ಣಬೇಕಾಗುತ್ತತ್ತು. ಕಂಟೇನರುಗಳಲ್ಲಿಯೇಇವರ ಜೀವನ ಮುಗಿದುಹೋಗಿರುತ್ತಿತ್ತು.ಮನುಷ್ಯ ಹೀಗೂ ಬದುಕಬಲ್ಲ ಎಂಬುದನ್ನು ಯಾರೂ ಕೂಡ ಯೋಚಿಸಲಿಲ್ಲ.

ಗಣಿ ಸಾವ್ಕಾರಗಳು ಸಾಮಾನ್ಯ ಜನರ ಕಣ್ಣಿಗೆ ಇಂದಿಗೂ ವೈಭೋಗದ ತುಣುಕುಗಳ ಹಾಗೆ ಕಾಣಿಸುತ್ತಿದ್ದಾರೆ. ಜನರನ್ನು ,ಅವರ ಗಮನವನ್ನು ಬೇರೆಡೆಗೆ ಸೆಳೆಯದಂತೆ ಎಷ್ಟು ಪ್ರಯತ್ನಗಳು ನಡೆದಿರುತ್ತವೆ ಎಂದರೆ, ಊರಿನಲ್ಲಿ ಎಲೆಕ್ಷನ್ ಇರಲಿ ,ಇಲ್ಲದಿರಲಿ ,ಧಣಿ- ರಾಜಕಾರಣಿಯ ವಿವಿಧ ರೀತಿಯ ಬಣ್ಣಬಣ್ಣದ ಕಟೌಟುಗಳು ದಾರಿಯುದ್ದಕ್ಕೂ ರಾರಾಜಿಸುತ್ತವೆ. ಪ್ರತಿವಾರವೂ ಕಟೌಟ್ಗಳು ಬದಲಾಗುತ್ತಲೇ ಇರುತ್ತದೆ.

ಇನ್ನು ಕೆಲ ಸಾಹುಕಾರ ಗಳಂತೂ ತಾವೇ ಆಧುನಿಕ ಶ್ರೀ ಕೃಷ್ಣದೇವರಾಯ ಎಂದು ಭಾವಿಸಿ ,ಅವನಂತೆಯೇ ವೇಷಧರಿಸಿ ನಿಂತು ಬೃಹತ್ ಕಟೌಟುಗಳನ್ನು ನಗರದ ವಿವಿಧ ಕಡೆಗಳಲ್ಲಿ ನಿಲ್ಲಿಸಲಾಯಿತು.ಬಳ್ಳಾರಿಯ ಗಣಿಧಣಿಗಳದ್ದೂ ಇನ್ನೊಂದು ರೀತಿ.ಮುಂಜಾನೆಯ ಟಿಫನ್ನಿಗೆ ಬೆಂಗಳೂರಿನ ಎಂ.ಟಿ.ಆರ್.ಹೋಟೆಲ್ಲಿಗೆ ಹೆಲಿಕಾಪ್ಟರ್ ನಲ್ಲಿ ಹೋದರೆ,ಅದಕ್ಕೂ ಮುನ್ನ ಹೆಲಿಕಾಪ್ಟರ್ ನಲ್ಲಿ ಹೈದರಾಬಾದ್ ವರೆಗೂ ವಾಕಿಂಗ್ ಹೋಗುವವರಿದ್ದರು.ವಿಮಾನದಲ್ಲಿ ಮಧ್ಯಾನ್ಹದ ಊಟಕ್ಕೆ ಬೊಂಬಾಯಿಗೆ ಹೋಗುತ್ತಿದ್ದರು.ರಾತ್ರಿ ಮತ್ತೆಲ್ಲಿಗೋ…!ಎಷ್ಟೋ ಜನ ಸಿನಿಮಾದವರು ರಾತ್ರೋರಾತ್ರಿ ಬಂದುಹೋಗುವುದನ್ನು ನೋಡಿದವರು ಇದ್ದರು.

ಲೋಲುಪತೆಗೆ ಜನರ ಬದುಕನ್ನೆ ಆಹುತಿ ತೆಗೆದುಕೊಂಡ ಧಣಿಗಳು,ಕೊನೆಗೆ ಜನರು ತಮ್ಮ ಕಡೆಗೆ ದೃಷ್ಟಿ ಹರಿಸಲೆಂದು ಸದಾ ಒಂದಿಲ್ಲೊಂದು ಸುದ್ದಿಯಿಂದ ಜನರನ್ನು ಭ್ರಮಾಲೋಕದಲ್ಲಿ ತಿರುಗುವಂತೆ ನೋಡಿಕೊಂಡರು.”ಸಾಮೂಹಿಕ ಮದುವೆ”ಗಳಂತಹ ಕೃತ್ರಿಮ ಕಾರ್ಯಕ್ರಮಗಳಿಗೆ ಕೈ ಹಾಕಿದರು.ಆ ಮೂಲಕ ಅಲ್ಲಿ ಬಂದ ವಧು-ವರರಿಗೆ ತಾಳಿ- ಬಟ್ಟೆ ಕೊಡುವುದರ ಮೂಲಕ “ದಾನಶೂರ”ರು ಎನಿಸಿಕೊಂಡರು.ಆದರೆ ಇಂತಹ ವಿವಾಹಗಳು ಹೆಸರಿನಲ್ಲಿ ಜನರು ಪ್ರಶ್ನೆ ಕೇಳುವುದನ್ನು,ಆಲೋಚನೆಯನ್ನೆ ಮಾಡದಿರುವ ಹಾಗೆ,ಅರ್ಥಮಾಡಿಕೊಳ್ಳುವ ಅವರು ಗುಣವನ್ನೆ ನಾಶಪಡಿಸಲಾಯಿತು.ಇಂತಹ ಗಣಿಧಣಿಗಳ ಭಿಕ್ಷೆಗೆ ಕೆಲ ಮಠಾಧೀಶರು ಕೈಚಾಚಿದರು.

ಜನರ ಬದುಕು ಕುಸಿಯಲು ಎಷ್ಟೊಂದು ಜನ ಒಂದಾದರು?
ನೆನೆಸಿಕೊಂಡರೆ ರೋಷ ಆವೇಶವೂ ಅಂತಕರುಣೆಯೂ ಒಟ್ಟಿಗೆಉಕ್ಕಿಬರುತ್ತದೆ.

ಜಿಲ್ಲೆಯ ಗಡಿಪ್ರದೇಶದ ಒಂದು ಬಹುಮುಖ್ಯವಾದ ಹಳ್ಳಿ ಕಮ್ಮತ್ತೂರು. ಈ ಊರಿನಲ್ಲಿ ನಡೆದಷ್ಟು ಗಣಿಗಾರಿಕೆ ಮತ್ತು ಡಿಪ್ಪಿಂಗ್ ಬೇರೆಲ್ಲೂ ನಡೆದಿರಲಿಕ್ಕಿಲ್ಲ .ಊರಿನ ಮನೆ ಗಳಿಗಿಂತಲೂ ಅಧಿಕವಾದ ಸ್ಟಾಕ್ ಯಾರ್ಡ್ಗಳು ನಿರ್ಮಾಣವಾದವು. ಧೂಳಿನಿಂದಾಗಿ ಮತ್ತು ವಿಪರೀತ ಶಬ್ದದಿಂದಾಗಿ ಅಸ್ತಮಕ್ಕೆ, ಕಿವುಡುತನಕ್ಕೆ ಬಲಿಯಾದವರಿಗೆ ಲೆಕ್ಕವಿಲ್ಲ. ಅಪರಿಮಿತ ಗಣಿಗಾರಿಕೆಯ ಪ್ರಭಾವದಿಂದಾಗಿ ಆಕ್ಸಿಜನ್ ಪ್ರಮಾಣ ಕುಸಿತ ಕಂಡಿತು. ಇಡೀ ಊರಿಗೆ ಊರೇ ಐಸಿಯುನಲ್ಲಿ ಇರುವಂತೆ ಭಾಸವಾಗುತ್ತಿದೆ.ಇಂತಹ ಎಷ್ಟೋ ಹಳ್ಳಿಗಳು ಉಸಿರಾಡಲು ಕಷ್ಟಪಡುತ್ತಿವೆ.

ಒಂದು ಕಾಲದ ರೈತ ಹೊಲ, ಗದ್ದೆ, ಮಣ್ಣನ್ನು ಪೂಜಿಸುತ್ತಿದ್ದ. ಆರಾಧಿಸುತ್ತಿದ್ದ .ಗುಡ್ಡಬೆಟ್ಟ ಸೂರ್ಯ ಚಂದ್ರ ತಾರೆಯರೇ ಆತನ ದೇವರುಗಳಾಗಿದ್ದವು. ದುಡಿಮೆಯೇ ಆತನ ಸಂಪತ್ತು. ಇಂತಹ ಕುಟುಂಬಗಳು ಇಲ್ಲದ, ಪ್ರಕೃತಿಯೂ ಇಲ್ಲದ ,ಅಭಿಶಾಪದ ಊರುಗಳಲ್ಲಿ ಶಾಪಗ್ರಸ್ತರಂತೆ ಮತ್ತೊಮ್ಮೆ ಯುದ್ಧಕ್ಕೆ ಹೊರಟ ಕೆಂಪು ಸೈನಿಕರಂತೆ ಇಲ್ಲಿನ ಜನ ಕಾಣಿಸುತ್ತಾರೆ.

ಎಲ್ಲಾ ಮುಗಿದ ಮೇಲೆ ಊರ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ದಿನಾಂಕ: 6 -10-2016 ರಂದು ಸರ್ಕಾರ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿ ಆದೇಶಿಸಿತು.

ಕಾಲವೀಗ ತಣ್ಣಗೆ ನಿಶ್ಯಬ್ದ..!

ಯಾರದ್ದೋ ಹೆಣವೊಂದು ಸದ್ದಿಲ್ಲದೆ ಬಿದ್ದುಕೊಂಡಿರುವ, ಇನ್ನೂ ಯಾರೋ ಬರುವವರಿದ್ದಾರೆ ಎಂದು ಹೆಣವನ್ನು ಎತ್ತದೆ, ಕಾದು ಕುಳಿತಿರುವಂತೆ ಸೊಂಡೂರಿನ ಬೀದಿಗಳಿವೆ.

ಬಡತನದ ರೇಖೆಗಳನ್ನೆಲ್ಲಾ ಮೈಮೇಲೆ ಹೊದ್ದು ಕುಳಿತವರಂತೆ ಕಾಣುವ ಮುದುಕರು ,ಸಾಯಲಿಕ್ಕೂ ಆಗದೆ ಬದುಕಲೂ ಆಗಿದೆ, ದುಸ್ಥಿತಿಗೆ ಕಾರಣವನ್ನು ಹುಡುಕುತ್ತಿರುವವರ ಹಾಗೆ ಹಣೆಗೆ ಕೈ ಹಚ್ಚಿ ಕುಳಿತ ದೃಶ್ಯಗಳು ಹೃದಯವನ್ನು ಕಲಕುತ್ತದೆ .ಇದು ನಾಗರಿಕ ಸಮಾಜವೊಂದು ತನ್ನದೇ ಊರಿನ ಸಮುದಾಯವನ್ನು ಚಿತ್ರಹಿಂಸೆಗೆ ಒಳಪಡಿಸಿದ ಹಾಗೆ.ನಾನು ಕಂಡು ಮಾತನಾಡಿಸಿದರವಲ್ಲಿ ” ನನ್ನ ಹಣೆಬರಹ…ನೋಡಪಾ, ಅಲಸಂದಿ,ಅವರೆ,ಜ್ವಾಳ,ನವಣಿ,
ಸಜ್ಜಿ ಬೆಳೀತಿದ್ದೆ. ಏಪೆಂಪ್ಸಿಗೆ ಹಾಕಿ ರೊಕ್ಕ ಎಣಿಸ್ಕಂಡು ಬರ್ತಿದ್ದೆ.ಮಕ್ಕಳು ಮೀರಿ ಎಲ್ಲ ಆರಾಮಾಗಿದ್ವಿ…ಮೈನ್ಸು ಮೈನ್ಸೂ ಅಂತಂದು ಮೈಯೆಲ್ಲಾ ತಗಂಬುಡ್ತು ನನ್ನಪ್ಪನೆ” ಎಂದು ವಿಷಾದದಿಂದ ಹೇಳುತ್ತಾರೆ.

ದೂರದ ಊರುಗಳ ಗೆಳೆಯರಿಗೆ ಸೊಂಡೂರು ಎನ್ನುವುದು ಸುಂದರ ಸ್ವಪ್ನದ ಹಾಗೆ, ಕಾಡುತ್ತಲೇ ಇರುತ್ತದೆ. ಗಣಿಗಾರಿಕೆಯಿಂದ ರಾಜ್ಯ,ದೇಶ ವ್ಯಾಪಿ ಸುದ್ದಿಯಾಗಿ, ಅಂತರಾಷ್ಟ್ರೀಯ ಪ್ರಖ್ಯಾತಿಯನ್ನು ಗಳಿಸಿಬಿಟ್ಟಿತು. ಈಗಲೂ ‘ಚುನಾವಣೆ ‘ಎಂಬ ಶಬ್ದ ಕೇಳಿದರೆ ಸಾಕು, ಜನರ ಕಣ್ಣಲ್ಲಿ ಹೊಳಪು ಮೂಡುತ್ತದೆ. ಬಾಯಲ್ಲಿ ನೀರೂರುತ್ತದೆ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಹಬ್ಬ ಎಂದು ನಾವು ಭಾವಿಸಿದ್ದು ,ಇಲ್ಲಿ ಅಣಕದಂತೆ ಭಾಸವಾಗುತ್ತಿದೆ.

*******

ಆದರೆ ,ಅಭಿವೃದ್ಧಿಯ ದೃಷ್ಟಿಯಿಂದ ಹೊರಗಿನ ಪ್ರಪಂಚಕ್ಕೆ ಸಾಕಷ್ಟು ಶ್ರೀಮಂತ, ಎಲ್ಲಾ ಬ್ರಾಂಡೆಡ್ ಕಂಪನಿಗಳ ಅಂಗಡಿಗಳಿರುವ ಹೊಸಪೇಟೆ-ಬಳ್ಳಾರಿಯಂತಹ ಊರುಗಳಲ್ಲಿ ಸ್ಟಾರ್ ಹೋಟೆಲ್ಗಳು ನಡೆಯುತ್ತಿವೆ. ಸೊಂಡೂರಿನ ಗಾಂಧಿ ಕರಕುಶಲ ಕೈಗಾರಿಕಾ ಕೇಂದ್ರಕ್ಕೂ ಬೀಗ ಬಿದ್ದಿದೆ.

ಹೌದು, ಅಭಿವೃದ್ಧಿಯೆಂದರೆ ಈ ಪ್ರದೇಶಗಳ ಜನತೆ ಹಸಿವಿನಿಂದ ಸ್ವಾತಂತ್ರ್ಯ ಪಡೆದಿದ್ದಾರೆಯೆ ?ಲಿಂಗ ಅಸಮಾನತೆಯಿಂದ ಸಾಮಾಜಿಕ ಅಸಮಾನತೆಯ,ಅವಮಾನಳಿಂದ ಸ್ವಾತಂತ್ರ್ಯ ಪಡೆದಿದ್ದಾರೆಯೆ ?ಎನ್ನುವ ಅಮರ್ತ್ಯಸೇನರು ಕೇಳುವ ಪ್ರಶ್ನೆಗಳನ್ನು ಕೇಳಿಕೊಂಡರೆ…ಎಲ್ಲಾ ಪ್ರಶ್ನೆಗಳಿಗೂ “ಇಲ್ಲ”ಎಂಬ ರೆಡಿ ಉತ್ತರ ದೊರಕುವುದು.

ಈ ಎಲ್ಲಾ ಸ್ವಾತಂತ್ರ್ಯಗಳನ್ನು ಯಾರೋ ಕೊಡಲು ಸಾಧ್ಯವಿಲ್ಲ.ಅವರು ಪಡೆದುಕೊಳ್ಳುವ ಸಾಮರ್ಥ್ಯವನ್ನು ನಿರ್ಮಾಣ ಮಾಡುವುದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ.

***

ವಯಸ್ಸಾಗಿ ಮುದುಕರಾದಾಗ ಮೂಲೆಯಲ್ಲಿ ಎಲ್ಲೋ ಒಂದು ಕಡೆ ಕುಳಿತು ಅಂತರ್ಮುಖಿಗಳಾಗಿಬಿಡುವುದು ವಯೋಸಹಜ ಗುಣ. ಆದರಿಲ್ಲಿ ಮಕ್ಕಳೂ ಅಂತರ್ಮುಖಿಗಳಾದರೆ… ?ಕಥೆಗಳು ಬೆಂಕಿಯ ಕೆನ್ನಾಲಗೆ ಹಾಗೆ ಸುಡುತ್ತಿವೆ. ಈ ಜನಗಳು ಅನುಭವಿಸಿದ, ಅನುಭವಿಸುತ್ತಿರುವ ಕರಾಳ ನೋವುಗಳನ್ನು ಹಿಡಿದಿಡಲು ಒಂದು ಜೀವನ ಸಾಕಾಗುವುದಿಲ್ಲ ಎನಿಸುತ್ತಿದೆ.

ಇಲ್ಲಿನ ಎಲ್ಲಾ ಅಕ್ಷರಗಳು ವರ್ತಮಾನದ ಒತ್ತಡಗಳಿಂದಲೇ ಬಂದಿರುವುವು ಎಂದೇ ಭಾವಿಸಿದ್ದೇನೆ. ಹಿಂದಿನಿಂದಲೂ ನನ್ನನ್ನು ಕಾಡುತ್ತಿದ್ದ ಘಟನೆಗಳು, ನಂತರದಲ್ಲಿ ಗಣಿಗಾರಿಕೆಯೆಂಬ ಪೀಕ್ ಅವಧಿಯಲ್ಲಿನ ಘಟನೆಗಳು ,ಜನರ ಬದುಕು, ನಂತರದ ದಿನಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಬೀದಿಪಾಲಾದ ಕುಟುಂಬಗಳ ರೋದನವನ್ನು ಕೆಲಮಟ್ಟಿಗಾದರೂ ತಿಳಿಸಬೇಕಿತ್ತು.

ಬರಹಗಾರನೊಬ್ಬ ಯಾಕೆ ಬರೆಯುತ್ತಾನೆ ಎಂಬುದನ್ನು ಪೂರ್ಣ ಅರ್ಥಮಾಡಿಸಿದ್ದು ಈ ಬರಹಗಳೆ.ಎದೆಯ ಮೂಲೆಯಲ್ಲಿ ಅಡಗಿದ್ದ ಭಾವಗಳು ಕಾಡಿದಾಗಲೆಲ್ಲ ಸಣ್ಣ ಸಣ್ಣ ಚೀಟಿಗಳಲ್ಲಿ ಬರೆದು,ಇತ್ತೀಚೆಗೆ ಮೊಬೈಲಿನಲ್ಲಿ ಟೈಪಿಸಿ ಕೊಂಡು ನಿರಾಳವಾಗುತ್ತಿದ್ದೆ.ಬಹಳ ವರ್ಷಗಳ ಹಿಂದಿನಿಂದಲೂ ಹಿಡಿದಿಟ್ಟುಕೊಂಡಿದ್ದ ಕರಾಳ ಸತ್ಯಗಳನ್ನು ಬರೆಯುವಾಗ ಕಣ್ಣು ಮುಂಜಾದದ್ದು,ಎದೆ ಭಾರವಾದದ್ದೂ ಇದೆ.ಸಾಮಾನ್ಯ ಕೃಷಿಕನೋರ್ವ ಕಣ್ಣೆದುರೇ ಹುಚ್ಚನಾಗಿ ತಿರುಗಾಡುವಾಗ ತುಂಬಾ ಡಿಸ್ಟರ್ಬ್ ಆಗಿದ್ದಿದೆ.

ಹೀಗೆ ನನ್ನನ್ನು ,ಡಿಸ್ಟರ್ಬ್ ಮಾಡಿದ ಈ ಭಾವಗಳು ನನ್ನ ಎದೆಯಿಂದ ಹಾರಿ ಹೀಗೆ ಹೊರಬರುವ ತನಕವೂ ಸಮಾಧಾನವಿದ್ದಿಲ್ಲ.ನಾನು ಸಾಮಾಜಿಕ ಜವಾಬ್ದಾರಿಯೊಂದಿಗೆ ನನಗನಿಸಿದ ಭಾವಗಳನ್ನು ಹೊರಹಾಕಿರುವೆ…..ನಿಟ್ಟುಸಿರಿನೊಂದಿಗೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending