Connect with us

ಅಂತರಂಗ

ನನ್ನ ಹಡೆದವ್ವ ಸೂಳೆ ಸಂಕೆವ್ವ

Published

on

ಜಗತ್ತಿನ ಅತ್ಯಂತ ವೈಚಾರಿಕತೆಯ ನೆಲೆಯಲ್ಲಿ ಸುಂದರ ಕಲ್ಯಾಣ ಸಮಾಜವನ್ನು ಕಟ್ಟಿದವರು ಅಪ್ಪ ಬಸವರಾಜರು. ಹೌದು, ಹಲವು ಜಿಡ್ಡುಗಟ್ಟಿದ ಆಚರಣೆಗಳ ಕಂಡು ಮನ ನೊಂದ ಬಸವರಸರು, ಹಿಡಿಯ ಸಮಾಜವನ್ನು ಒಮ್ಮತದಿಂದ ಕಂಡು ಹಿಡಿದಪ್ಪಿದ ಮಹಾ ಪ್ರವಾದಿಯಾಗಿದ್ದರು. ಜಾತೀಯತೆ, ಮೌಢ್ಯಕಂದಾಚಾರಗಳು, ಮೇಲು ಕೀಳೆಂಬ ಹೊಲಸು ಮನಸುಗಳ ಸುಟ್ಟು, ಸಮಾನತೆಯ ಸಮಾಜದ ಕನಸ ಕಂಡು ಸುಂದರವಾದ ಕಲ್ಯಾಣ ರಾಜ್ಯವ ನಿರ್ಮಾತರು ಅಪ್ಪ ಬಸವರಾಜರು.

ಒಮ್ಮೆ ಕಲ್ಯಾಣಪಟ್ಟಣದಲ್ಲಿ ಬಸವರಾಜರು ತಮ್ಮ ಕಾಯಕದಿಂದ ಮಹಾಮನೆಗೆ ತೆರಳುವಾಗ ಸುಂದರ ದೇಹದ ಸೂಳೆಯೊಬ್ಬಳು ಓಡೋಡಿ ಬಂದು ಬಸವಪ್ಪನ ಎದರು ನಿಂತು ಅಪ್ಪನ ಮುಖವ ನೋಡದೆ ಕಾಲ ಮುಟ್ಟದೇ ಆ ಪಾದಗಳನ್ನೇ ದಿಟ್ಟಿಸುತ್ತ ಬಿಕ್ಕಿ ಬಿಕ್ಕಿ ಅಳುತ್ತಾ ಹೀಗೆ ಹೇಳುತ್ತಾಳೆ.

ಹೇ ನನ್ನೊಡೆಯ ಬಸವರಾಜಾ, ಬಸವಪ್ಪ, ಬಸವಣ್ಣ, ಬಸವೇಶ, ಬಸವರಸ, ಬಸವ ದೊರೆ, ಬಸವ ವಸುದೀಶ, ಬಸವ ಕೃಪಾನಿಧಿ, ಬಸವ ಪರುಷನಿಧಿ, ಬಸವಯ್ಯ ಬಸವಯ್ಯ ಬಸವಯ್ಯಾ ಎನ್ನೊಡೆಯ ಸಂಗನ ಬಸವಣ್ಣನೇ ನಿಮ್ಮ ದಿಬ್ಯಾ ಪಾದಗಳಲ್ಲಿ ನನ್ನ ಶರಣು ಶರಣಯ್ಯಾ ಎಂದು ಅಳುತ್ತಲೇ ನಿಂತಾಗ ಅಪ್ಪನ ಮನ ಕರಗಿ, ನನ್ನವ್ವ ಯಾರವ್ವಾ ನೀನು ಏನಾಯಿತು ತಾಯಿ ಎಂದು ಕೇಳಲು, ಸಂಕೆವ್ವನ ಬಿಗಿದ ಗಂಟಲು ನೀರಾಗಿ ಜೋರಾಗಿ ಅಳುತ್ತಲೇ…..

ಹೇ ಬಸವರಾಜಾ..ನಾನೊಬ್ಬ ಸೂಳೆ ಅಪ್ಪಾ, ಸಂಕೆವ್ವ ಎಂದು ನನ್ನ ಹೆಸರು. ದಯಮಾಡಿ ಇನ್ನೆಂದು ಅವ್ವಾ ಎನ್ನದಿರು ಎಂದಾಗ ಅಪ್ಪ ಬಸವರಾಜರ ಮನ ತುಂಬಿ ಬಂದು ನನ್ನವ್ವಾ ಹಾಗೆನ್ನದಿರಿ ತಾಯಿ ಎನ್ನುತ್ತ ಸಂಕೆವ್ವಳ ಕೈಗಳ ಹಿಡಿದು ತಮ್ಮ ಹಣೆಯನಿಟ್ಟು, ನಾ ನಿಮ್ಮ ಮಗನೆಂದೇ ಭಾವಿಸು ತಾಯಿ ಎನ್ನುವಾಗ ಸಂಕೆವ್ವಳ ಎದೆ ಬಡಿತ ಜೋರಾಗಿ, ಬಸವ ಬಸವಾ ಎನ್ನಲು, ಆಗ ಬಸವಣ್ಣನವರು ಹೇಳುತ್ತಾರೆ, ನೋಡು ತಾಯಿ ನಾವೆಲ್ಲರೂ ನಿಜದೇವನ ಅಂಶಗಳೊಳಗೊಂಡ ಸಮಾನ ಜೀವಿಗಳು, ನಮ್ಮಲ್ಲಿ ಬೇಧವಿಲ್ಲ ತಾಯಿ, ನಾನು ನಿಮ್ಮ ಮಗನೆಂದು ಭಾವಿಸವ್ವಾ ಎನ್ನಲು ಸೂಳೆಯಾದ ಸಂಕೆವ್ವಳು ಒಡನೇ ಶರಣೆಯಾಗಿ ಬದಲಾಗುತ್ತಾಳೆ.

ನಂತರ ಅಪ್ಪ ಬಸವರಾಜರು ಹೇಳಿದಂತೆ ಅನುಭವ ಮಂಟಪಕ್ಕೆ ಬಂದು ಅಲ್ಲಿ ನೆರೆದಿದ್ದ ಸಕಲ ಶರಣ ಗಣಂಗಳ ಮುಂದೆ ತಲೆ ಬಾಗಿ ಶರಣೆಂದು ನಿಲ್ಲಲು ಅಲ್ಲಿನ ಶರಣರೆಲ್ಲರೂ ಅವಳನ್ನು ಶರಣು ಬಾ ತಾಯಿ ಎನ್ನುತ್ತ ಬರಮಾಡಿಕೊಂಡು ಅನುಭವ ಮಂಟಪದ ಸದಸ್ಯೆಯಾಗಿಸುತ್ತಾರೆ. ಅಲ್ಲಿ ಸೂಳೆ ಸಂಕೆವ್ವಳು ತನ್ನೊಳಗಿರುವ ಹಲವು ಸಂದೇಹಗಳನ್ನು ಶರಣರ ಮುಂದಿಟ್ಟ ಬಗೆಯಂತೂ ಬಲು ಅಪರೂಪ ಮತ್ತು ಜ್ಞಾನ ಪೂರಿತವಾಗಿತ್ತು. ಪಾಪ ಪುಣ್ಯಗಳು ಎಂದರೇನು, ಹಿಂದಣ ಜನ್ಮ ಎಂದರೇನು ಅವುಗಳ ನಿಲುವುಗಳೇನು ಎಂಬ ಅನೇಕಾನೇಕ ವಿಚಾರಗಳ ವಿಚಾರಿಸಿ ಅಂದಿನ ಅನುಭವವ ಅಲ್ಲಮರು ಹಲವು ಬೆಡಗಿನ ವಚನಗಳ ಮೂಲಕ ತಿಳಿಸುತ್ತಾರೆ.

ನಂತರದ ದಿನಗಳಲ್ಲಿ ಸೂಳೆ ಸಂಕೆವ್ವ ತಾಯಿಯು ತನ್ನೂರಿನ ಸುತ್ತಲೂ ಶರಣ ತತ್ವ ಪ್ರಚಾರಿಸುತ್ತಾ ವಚನಗಳ ಹಾಡುತ್ತಾ ಗುರು ಲಿಂಗ ಜಂಗಮ ದಾಸೋಹ ಕಾಯಕ ಗಳಲ್ಲಿ ತಲ್ಲೀನಳಾಗಿ ಜೀವಿಸುತ್ತಿರುವಾಗ ಒಮ್ಮೆ ಬ್ರಹ್ಮಣನೊಬ್ಬ ಇವಳಿಗೆ ಮನ ನೊಹಿಸಲೆಂದೇ ಗೇಲಿ ಮಾಡುತ್ತಾ… ದಾಸೆ ಸೂಳೆಯರೆಲ್ಲ ದಾಸೋಹ ಮಾಡುತ್ತಾ ದೇಹದಾ ದಾಹವ ತಣಿಸಲು ಬರುವಳೋ ಎಂದಾಗ ಅವ್ವ ಸಿಟ್ಟಿನಿಂದ ಒಂದು ವಚನ ಹೇಳುತ್ತಾಳೆ.

ಒತ್ತೆಯ ಹಿಡಿದು ಮುತ್ತೊತ್ತೆಯ ಹಿಡಿಯೆ
ಹಿಡಿದೆಡೆ ಬತ್ತಲೆ ನಿಲಿಸಿ ಕೊಲ್ಲುವರಯ್ಯಾ
ವ್ರತಹೀನನರಿದು ಬೆರೆದಡೆ
ಕಾದ ಕತ್ತಿಯಲ್ಲಿ ಕೈಕಿವಿ ಮೂಗ
ಕೊಯ್ವರಯ್ಯಾ ಒಲ್ಲೆನೊಲ್ಲೆ ಬಲ್ಲೆನಾಗಿ
ನಿಮ್ಮಾಣೆ ನಿರ್ಲಜ್ಜೇಶ್ವರಾ!!

ಎಂದು ಹೇಳಲು ಆ ವ್ಯಕ್ತಿಯು ಹೆದರಿ ಹೋಗುತ್ತಾನೆ.

ಹೀಗೆ ಅವ್ವ ಸಂಕೆವ್ವಳ ವಚನಗಳಲ್ಲಿ ಆತ್ಮವಿಶ್ವಾಸ, ದಿಟ್ಟ ನಿಲುವು, ಅಚಲ ಎದೆಗಾರಿಕೆ, ಕಾಯಕ ನಿಷ್ಠೆಯಿಂದ ಕೂಡಿದ್ದಾಗಿದ್ದು. ವಚನಗಳ ಅಂಕಿತವನ್ನು “ನಿರ್ಲಜ್ಜೇಶ್ವರಾ“.

ಸಮಾಜದ ಬಹಿಷ್ಕೃತ ಸಮೂಹದಲ್ಲಿದ್ದು ಸೂಳೆಯಾಗಿದ್ದರೂ ಅಪ್ಪ ಬಸವರಾಜರ ವಿಶಾಲ ತಾಯಿ ಹೃದಯದ ಪರಿಣಾಮ ಅತಿ ಶ್ರೇಷ್ಠ ಶರಣೆಯಾಗಿ ಹೊರಹೊಮ್ಮುತ್ತಾಳೆ “ನನ್ನ ಹಡೆದವ್ವ ಸೂಳೆ ಸಂಕೆವ್ವ”.

ಹೆಣ್ಣನ್ನು ವಸ್ತುವಿನಂತೆ ಮತ್ತು ತನ್ನ ಬಯಕೆಗಳ ತೀರಿಸಲೋಸುಗವಾಗಿ ಹುಟ್ಟಿರುವ ಜೀವಿಯಂತೆ ಉಪಯೋಗಿಸುತ್ತಿದ್ದ/ತ್ತಿರುವ ವಿಷಮ ಸಮಾಜವನ್ನು ತೊಡೆದು ಹಾಕಿದವರು ಬಸವಾದಿ ಶರಣರು.

ಸಾವಿರಾರು ದಶಕಗಳಿಂದಲೂ ಹೆಣ್ಣನ್ನು ಕೀಳಾಗಿ ಕಾಣುವ ಹಲವು ಧರ್ಮಗಳ ಒಮ್ಮೆಲೇ ಧಿಕ್ಕರಿಸಿ ಕ್ರಾಂತಿಕಾರಿ ಚಳುವಳಿಗೆ ನಿಂತವರು ನಮ್ಮ ಬಸವಾದಿ ಶರಣರು.

ಒಮ್ಮೆ ರಸೂಲ್ ಮುಹಮ್ಮುದ್(ಸ ಅ) ರಂತಹ ಮಹಾ ಪ್ರವಾದಿಗಳೂ ಸಹ ಒತ್ತಾಯದ ಮೇರೆಗೆ ಮುಟ್ಹಾ(ಮಟ್ಹ) ಎಂಬ ನೀತಿಯ ಜಾರಿಗೆ ತರಲು ಸಮ್ಮತಿ ನೀಡುತ್ತಾರೆ. ಜೀಸಸ್ ಎಂಬ ದೈತ್ಯಾಕಾರದ ಸಂತರೂ ಸಹ ಹೆಣ್ಣನ್ನು ಹಾಗೆ ಜೀವಿಸಲು ಅನುಮತಿಸುತ್ತಾನೆ. ಹಿಂದೂ ಧರ್ಮದಲ್ಲಿ ಇಂದಿಗೂ ಹೆಣ್ಣಿನ ಶೋಷಣೆ ನಿಂತಿಲ್ಲ. ಜಿನ ಧರ್ಮದವರಂತೂ ಹೆಣ್ಣು ಹಂದಿಯ ಜನ್ಮಾಂತರಿ ಅವಳಿಗೆ ಮುಕ್ತಿ ಇಲ್ಲ ಎಂದು ಖಡಾ ಖಂಡಿತವಾಗಿ ನುಡಿದರೆ ಬುದ್ದನ ಧಮ್ಮವೂ ಹೆಣ್ಣಿನಿಂದ ದೂರ ಉಳಿಯುವುದೇ ಸನ್ಯಾಸತ್ವದ ಮೊದಲ ಮೆಟ್ಟಿಲು ಎಂದು ಭೋದಿಸುತ್ತದೆ. ಸಿಖ್ ಧರ್ಮ ಸಹ ಹಿಂದೂ ಧರ್ಮದಂತೆ ನಡೆದುಕೊಳ್ಳುತ್ತದೆ.

ಎಲ್ಲಿ ನೋಡಿದರೂ ಹೆಣ್ಣು ಶೂದ್ರಾಳಾಗಿ ಪುರುಷ ಪ್ರಧಾನ ಸಮಾಜದಲ್ಲಿ ಶೋಷಿತಳಾಗಿ ಉಳಿದರೆ. ಶರಣರ ದೃಷ್ಟಿಯಲ್ಲಿ ಅವಳಲ್ಲಿನ ಮೀರಿದ ಘನವ ಹೀಗೆ ಕಾಣುತ್ತಾರೆ.

ಮೊಲೆ ಮೂಡಿ ಬಂದಡೆ ಹೆಣ್ಣೆಂಬರು
ಗಡ್ಡ ಮೀಸೆ ಬಂದಡೆ ಗಂಡೆಂಬರು
ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ ಗಂಡೂ ಅಲ್ಲ ಕಾಣಾ ರಾಮನಾಥ!!

ಎನ್ನುತ್ತಾ ಎಲ್ಲ ಅಸಮಾನತೆಗಳ ಮೀರಿ ನಿಂದ ಮಹಾ ಜ್ಞಾನವನ್ನು ಸಮಾಜಕ್ಕೆ ಸಾರುತ್ತಾರೆ.
ಮುಂದೆ ಶರಣನಾದವನ ಛಲವು ಹೇಗಿರಬೇಕೆಂದು ಹೀಗೆ ಹೇಳುತ್ತಾರೆ.

ಕೆಳಗಿನ ವಚನವನ್ನು ಗಟ್ಟಿ ದ್ವನಿಯಲ್ಲಿ ಓದುವುದುತ್ತಮವು 

ಛಲಬೇಕು ಶರಣಂಗೆ ಪರಧನವನೊಲ್ಲೆನೆಂಬ
ಛಲಭೇಕು ಶರಣಂಗೆ ಪರಸತಿಯನೊಲೆನೆಂಬ
ಛಲಬೇಕು ಶರಣಂಗೆ ಪರದೈವವನೊಲೆನೆಂಬ
ಛಲಬೇಕು ಶರಣಂಗೆ ಲಿಂಗ ಜಂಗಮೊಂದೆಂಬ
ಛಲಬೇಕು ಶರಣಂಗೆ ಪ್ರಸಾದ ದಿಟವೆಂಬ
ಛಲವಿಲ್ಲದವರ ಮೆಚ್ಚ ನಮ್ಮ ಕೂಡಲ ಸಂಗಮ ದೇವಾ!!

ಹೀಗೆ ನುಡಿನಡೆಯಲ್ಲೂ ಒಂದಾದ ಶರಣರ ನೆನೆದು, ಸಕಲ ಜೀವಾತ್ಮರಿಗೂ ಲೇಸ ಬಯಸಿ, ಸಕಲರಿಗೂ ಸಮ ಬಾಳು, ಸಕಲರಿಗೂ ಸಮಾನತೆಯ ನೀಡಿ ಮಹಾನಮಾನವೀಯತೆಯ ಮೆರೆದ ಅಪ್ಪ ಬಸವರಾಜರಿಗೂ,ಅಪ್ಪ ಭೀಮರಾಯ ಅಂಬೇಡ್ಕರ್ ರಿಗೂ ಮತ್ತು ನಿಮ್ಮಗಳ ಮನದ ಮಹಾ ಮಾನವೀಯತೆಯ ಬೆಳಗಿಗೆ ನನ್ನ ಶರಣು ಶರಣಾರ್ಥಿಗಳು.

ದೀಪ್ತಿ ಎಸ್ ಪಾಟೀಲ್
ವಿದ್ಯಾರ್ಥಿನಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading
Advertisement

Title

ದಿನದ ಸುದ್ದಿ4 days ago

ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು...

ದಿನದ ಸುದ್ದಿ4 days ago

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ...

ದಿನದ ಸುದ್ದಿ7 days ago

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು...

ದಿನದ ಸುದ್ದಿ7 days ago

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು...

ದಿನದ ಸುದ್ದಿ1 week ago

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 625ಕ್ಕೆ 625 ಅಂಕಗಳನ್ನು...

ದಿನದ ಸುದ್ದಿ1 week ago

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app...

ದಿನದ ಸುದ್ದಿ1 week ago

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ,...

ದಿನದ ಸುದ್ದಿ1 week ago

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ...

ದಿನದ ಸುದ್ದಿ2 weeks ago

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ...

ದಿನದ ಸುದ್ದಿ2 weeks ago

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ...

Trending