Connect with us

ದಿನದ ಸುದ್ದಿ

38,32,50,000- ಈ ಸಂಖ್ಯೆಯೊಂದಿಗೆ ಬೆಂಗಳೂರಿನ ನಂಟೇನು? ಗಾಯಕ ವಾಸು ದೀಕ್ಷಿತರಿಗೆ ಇದರಿಂದ ಸ್ಪೂರ್ತಿ ಏನು?

Published

on


ಬಿಬಿಸಿ ಮೀಡಿಯಾ ಆಕ್ಷನ್ ಮತ್ತು ಗಾಯಕ ವಾಸು ದೀಕ್ಷಿತ್ ಸಹಯೋಗದಲ್ಲಿ, ಬೆಂಗಳೂರಿನ ಸರ್ಕುಲಾರ್‌ ಎಕಾನಮಿಯಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಪಾತ್ರದ ಕುರಿತು ಹ್ಯಾಪಿ ನಂಬರ್ ಹಾಡು ಮಾತನಾಡುತ್ತದೆ.


ಸುದ್ದಿದಿನ,ಬೆಂಗಳೂರು: ಬೆಂಗಳೂರಿನ ಸರ್ಕುಲಾರ್‌ ಎಕಾನಮಿಯಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಪಾತ್ರ ಮತ್ತು ಕೊಡುಗೆಯನ್ನು ಹೈಲೈಟ್ ಮಾಡುವ “Invaluables”ನ ಎರಡನೇ ಹಂತದ #Invaluable Recyclers ಪ್ರಾರಂಭಿಸುವುದಾಗಿ ಬಿಬಿಸಿ ಮೀಡಿಯಾ ಆಕ್ಷನ್ ಇಂದು ಘೋಷಿಸಿತು.

ಬಿಬಿಸಿ ಮೀಡಿಯಾ ಆಕ್ಷನ್ ಗಾಯಕ ವಾಸು ದೀಕ್ಷಿತ್ ಅವರ ಸಹಯೋಗದೊಂದಿಗೆ ‘ಹ್ಯಾಪಿ ನಂಬರ್’ ಎಂಬ ಶೀರ್ಷಿಕೆಯ ಹಾಡನ್ನು ಬಿಡುಗಡೆ ಮಾಡಿದೆ. ಇದು ನಗರದಲ್ಲಿ ತ್ಯಾಜ್ಯ ಸಂಗ್ರಾಹಕರ ಕೊಡುಗೆಯನ್ನು ಎತ್ತಿ ತೋರಿಸುತ್ತದೆ. ನಗರದಲ್ಲಿ ಉತ್ಪತ್ತಿಯಾಗುವ ಪ್ಲಾಸ್ಟಿಕ್ ಮತ್ತು ಇತರ ಮರುಬಳಕೆ ಮಾಡಬಹುದಾದ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸುವುದು ಮತ್ತು ಮರುಬಳಕೆ ಮಾಡುವುದರ ಮೂಲಕ ಭೂಮಿಯ ಒಡಲು ಸೇರಬಹುದಾದ 383,250 ಟನ್‌ ತ್ಯಾಜ್ಯವನ್ನು ಬೇರೆಡೆ ವರ್ಗಾಯಿಸುವ ಪ್ರಕ್ರಿಯೆಯಾಗಿದೆ.

ಭೂಮಿಯ ಒಡಲಲ್ಲಿ ತ್ಯಾಜ್ಯ ಸಂಗ್ರಹವಾಗುವುದರಿಂದ ಅಪಾರ ಪ್ರಮಾಣದಲ್ಲಿ ಪರಿಸರದ ಮೇಲೆ ಋಣಾತ್ಮಕ ಪರಿಣಾಮ ಉಂಟಾಗುತ್ತದೆ. ಇದು ಗಾಳಿ, ನೀರು ಮತ್ತು ಮಣ್ಣಿನ ಮಾಲಿನ್ಯ ಮತ್ತು ಹವಾಮಾನ ಬದಲಾವಣೆಗೂ ಕಾರಣವಾಗುತ್ತದೆ.

ಬಿಬಿಸಿ ಮೀಡಿಯಾ ಆಕ್ಷನ್ ಮತ್ತು ಅದರ ಪಾಲುದಾರರು ಇಂದು ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಗಾಯಕ ವಾಸು ದೀಕ್ಷಿತ್, ಪರಿಸರವಾದಿ ವಾಣಿ ಮೂರ್ತಿ ಮತ್ತು ನಟಿ ಶ್ರದ್ಧಾ ಜೈನ್ ಅವರ ಉಪಸ್ಥಿತಿಯಲ್ಲಿ ಹಾಡನ್ನು ಬಿಡುಗಡೆ ಮಾಡಲಾಯಿತು. ಬೆಂಗಳೂರಿಗರಲ್ಲಿ ತ್ಯಾಜ್ಯವನ್ನು ಆರಿಸುವ ಸಮುದಾಯದ ಬಗ್ಗೆ ಜಾಗೃತಿ ಮತ್ತು ಸಹಾನುಭೂತಿ ಮೂಡಿಸುವುದು ಇದರ ಉದ್ದೇಶ.

ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ಮತ್ತು 22,500 ಕ್ಕೂ ಹೆಚ್ಚು ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರಿಗೆ ನೆಲೆಯೂ ಹೌದು. ಅವರು ನಗರದ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದಾರೆ. ಮರುಬಳಕೆ ಮಾಡಲಾಗದ ವಸ್ತುಗಳು ಮಾತ್ರ ಲ್ಯಾಂಡ್‌ ಫಿಲ್‌ನಲ್ಲಿ ಉಳಿಯವಂತೆ ಅವರು ನೋಡಿಕೊಳ್ಳುತ್ತಾರೆ.

Invaluable Recyclers ಬಗ್ಗೆ ಮಾತನಾಡಿದ ಬಿಬಿಸಿ ಮೀಡಿಯಾ ಆಕ್ಷನ್‌ನ ಕಾರ್ಯನಿರ್ವಾಹಕ ಕ್ರಿಯೇಟಿವ್ ಡೈರೆಕ್ಟರ್ ಸೋಮಾ ಕಟಿಯಾರ್, “ಸಾಂಕ್ರಾಮಿಕ ಸಂಕಷ್ಟದ ಪರಿಣಾಮ ಅಂಕಿ-ಸಂಖ್ಯೆಗಳು ಭಯಾನಕವಾಗಿವೆ. ಕೆಟ್ಟ ಸಂಭವನೀಯ ಸುದ್ದಿಗಳ ಮುನ್ನುಡಿ ಇದು! ಆದರೆ, ನಾವು ತಿಳಿದುಕೊಳ್ಳಬೇಕಾದ ಮತ್ತು ಆಚರಿಸಬೇಕಾದ ‘ಸಂತೋಷದ ಸಂಖ್ಯೆ’ ಇಲ್ಲಿದೆ – ಅಂದಾಜು 38,32,50,000 ಕಿಲೋಗ್ರಾಂ ತ್ಯಾಜ್ಯವನ್ನು ಬೆಂಗಳೂರಿನ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರು ಈಗಾಗಲೇ ತುಂಬಿರುವ ಲ್ಯಾಂಡ್‌ ಫಿಲ್‌ಗಳಿಗೆ ಸೇರದಂತೆ ತಡೆದಿದ್ದಾರೆ.

ನಾವು ಅವರನ್ನು ಸದ್ದಿಲ್ಲದೇ ಕೆಲಸ ಮಾಡುವ ಪರಿಸರವಾದಿಗಳಂತೆ ಕಾಣುತ್ತೇವೆ. ತ್ಯಾಜ್ಯ ಮರುಬಳಕೆಯ ವ್ಯಾಲ್ಯೂ ಚೇನ್‌ನಲ್ಲಿ ಅವರೇ ಮೊದಲಿಗರು. ಅವರು ನಗರಕ್ಕಾಗಿ ಮಾಡುವ ಈ ಅಮೂಲ್ಯವಾದ ಕೆಲಸವನ್ನು “#InvaluableRecyclers ” ಈ ಹಾಡು ಕೊಂಡಾಡುತ್ತದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತದೆ. ಬಿಬಿಸಿ ಮೀಡಿಯಾ ಆಕ್ಷನ್ ನಗರದ ಸರ್ಕುಲಾರ್‌ ಎಕಾನಮಿಯಲ್ಲಿ ಈ ಹ್ಯಾಪಿ ನಂಬರ್ ಹಾಡು ಮತ್ತು ಅಭಿಯಾನದ ಮೂಲಕ, ತ್ಯಾಜ್ಯವನ್ನು ಆರಿಸುವ ವೃತ್ತಿಗೆ ಕೌಶಲ್ಯ ಮತ್ತು ಪರಿಣತಿಯನ್ನು ತಂದು ಅವರ ಪಾತ್ರವನ್ನು ಹೈಲೈಟ್ ಮಾಡುತ್ತದೆ.

ಹ್ಯಾಪಿ ನಂಬರ್ ಹಾಡನ್ನು ಸಂಯೋಜಿಸಿದ ಸಂಗೀತಗಾರ ವಾಸು ದೀಕ್ಷಿತ್ (@dixitvasu), “ಬೆಂಗಳೂರಿನ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ವಿಚಾರದಲ್ಲಿ ನಾಗರಿಕರಾದ ನಮಗೆ ಹೊಣೆಗಾರಿಕೆ ಇದೆ.ನಮ್ಮ ಪರಿಸರವನ್ನು ರಕ್ಷಿಸುವ ಅವರಿಗೆ ಅರ್ಹ ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುವ ಹೊಣೆಗಾರಿಕೆ ಅದು. ನಾವು ಅವರಿಗೆ ನೀಡುವ ತ್ಯಾಜ್ಯ ಮರುಬಳಕೆಗೆ ಯೋಗ್ಯವಾದುದು ಎಂಬುದನ್ನು ನಾವು ಖಾತರಿಪಡಿಸಬೇಕು. ಹ್ಯಾಪಿ ನಂಬರ್ ಹಾಡು ಅವರನ್ನು ಮತ್ತು ಅವರ ಕೆಲಸವನ್ನು ಪರಿಚಯಿಸಿ ಸಂಭ್ರಮಿಸುವುದಕ್ಕೆ ನನಗೆ ಸಿಕ್ಕ ಉತ್ತಮ ಅವಕಾಶ.

ಬೆಂಗಳೂರಿಗರು ಜೊತೆಯಲ್ಲಿ ಹಾಡಿದರೆ ಮತ್ತು ತ್ಯಾಜ್ಯ ತೆಗೆಯುವವರನ್ನು ಗುರುತಿಸಿದರೆ ಆ ಕನಸು ನನಸಾದಂತೆ ಆಗುತ್ತದೆ ಎಂದು ಹೇಳಿದರು.

ಬಿಬಿಸಿ ಮೀಡಿಯಾ ಆಕ್ಷನ್‌ನ ಸಂಶೋಧನೆಯ ಪ್ರಕಾರ, ಬೆಂಗಳೂರಿನ ಬೀದಿಗಳಲ್ಲಿ ತ್ಯಾಜ್ಯವು ಗೋಚರಿಸುತ್ತಿದೆ. ವಾಸ್ತವದಲ್ಲಿ ಇದು ಕಳವಳಕಾರಿಯಾಗಿದ್ದರೂ, ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರು ವರ್ಚುವಲ್‌ ಆಗಿ ಹೆಚ್ಚಿನ ಜನರಿಗೆ ‘ಅಗೋಚರ’ವಾಗಿದ್ದಾರೆ ಎಂಬುದು ವ್ಯಕ್ತವಾಗಿದೆ. ಅಧ್ಯಯನ ಸಮೀಕ್ಷೆಯಲ್ಲಿ ಭಾಗವಹಿಸಿದ ಸುಮಾರು ಶೇಕಡ 55% ರಷ್ಟು ಜನ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರನ್ನು ನೋಡುವುದಕ್ಕೆ ಕೊಳಕಾಗಿ ಇರುತ್ತಾರೆ ಎಂದಿದ್ದಾರೆ.

ಶೇಕಡ 56% ರಷ್ಟು ಜನ ಕಟ್ಟಡ ಸಂಕೀರ್ಣಗಳು ಮತ್ತು ಸಮಾಜದೊಳಗೆ ಅವರ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ.

ಪ್ರಚಾರ ಪೂರ್ವದಲ್ಲಿ ಸಹಕರಿಸಿದ ಜನಪ್ರಿಯ ಹಾಸ್ಯ ನಿರೂಪಕಿ ಮತ್ತು ನಟಿ ಶ್ರದ್ಧಾ ಜೈನ್ (@AiyyoShraddha), “ಈ ಹ್ಯಾಪಿ ನಂಬರ್ ಹಾಡನ್ನು ಇನ್ನಷ್ಟು ಹೆಚ್ಚು ಜನರಿಗೆ ತಲುಪಿಸುವ ಅವಕಾಶ ಸಿಕ್ಕಿದ್ದು ಒಂದು ಸುಯೋಗವೆಂದು ಭಾವಿಸುತ್ತೇನೆ. ತ್ಯಾಜ್ಯ ಆಯುವವರು ಬೆಂಗಳೂರಿಗೆ ಏನು ಮಾಡುತ್ತಾರೆ ಎಂಬುದು ಮುಖ್ಯ. ಅವರ ಕೌಶಲ್ಯಪೂರ್ಣ ಕೆಲಸವು ನಮ್ಮ ಜೀವನವನ್ನು ಹಗುರಾಗಿಸುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಹ್ಯಾಪಿ ನಂಬರ್ ಮತ್ತು #InvaluableReclyers ಅಭಿಯಾನವು ಅವರ ಪಾತ್ರದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ಬೆಂಗಳೂರಿನ ಜನರು ಅವರ ಕೊಡುಗೆಯನ್ನು ಗುರುತಿಸಬೇಕಾಗಿದೆ” ಎಂದು ಹೇಳಿದರು.

ಪ್ಲಾಸ್ಟಿಕ್ ಅನ್ನು ಪರಿಣಾಮಕಾರಿಯಾಗಿ ಮರುಬಳಕೆ ಮಾಡುವುದಕ್ಕಾಗಿ ತ್ಯಾಜ್ಯ ಆಯುವವರು, ಗೋಡೌನ್ ಪ್ರಕಾರವನ್ನು ಅವಲಂಬಿಸಿ ಅವುಗಳನ್ನು 35 ರಿಂದ 70 ಕ್ಕೂ ಹೆಚ್ಚು ವರ್ಗಗಳಾಗಿ ವಿಂಗಡಿಸುತ್ತಾರೆ. ನೋಟ, ಸ್ಪರ್ಶದ ಧ್ವನಿ ಮತ್ತು ದಪ್ಪದ ಆಧಾರದ ಮೇಲೆ ವಸ್ತುಗಳನ್ನು ಗುರುತಿಸುವಲ್ಲಿ ಇವರು ಪರಿಣತರು ಮತ್ತು ಅನುಭವಿಗಳು.
ಗೊಬ್ಬರ ತಯಾರಿಕೆ ಮತ್ತು ನಗರ ಕೃಷಿ ಬಗ್ಗೆ ಒಲವು ಹೊಂದಿರುವ ಪರಿಸರವಾದಿ ವಾಣಿ ಮೂರ್ತಿ (@WormRani), “ನಗರದಿಂದ ಉತ್ಪತ್ತಿಯಾಗುವ ಪ್ಲಾಸ್ಟಿಕ್ ಮತ್ತು ಪೆಟ್‌ ತ್ಯಾಜ್ಯವನ್ನು ಸಂಗ್ರಹಿಸಿ ಮರುಬಳಕೆ ಮಾಡುವಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರು ಪ್ರಮುಖ ಪಾತ್ರ ವಹಿಸುತ್ತಾರೆ. ನಾವು ಪ್ಲಾಸ್ಟಿಕ್ ಆಹಾರದ ಪಾತ್ರೆಗಳನ್ನು ತ್ಯಾಜ್ಯವೆಂದು ಬಿಸಾಡುವ ಮೊದಲು ತೊಳೆಯುವಂತಹ ಸರಳ ಕ್ರಮಗಳನ್ನು ಅನುಸರಿಸಿದರೆ ಸಾಕು.

ಈ ಕ್ರಮವು ಪ್ಲಾಸ್ಟಿಕ್ ಅನ್ನು ಮರುಬಳಕೆಗೆ ಯೋಗ್ಯವಾಗಿಸುತ್ತದೆ. ಮಾತ್ರವಲ್ಲದೆ ತ್ಯಾಜ್ಯ ಸಂಗ್ರಾಹಕರ ಕೆಲಸವನ್ನು ಸುಲಭ ಮಾಡುತ್ತದೆ. ಅದೇ ರೀತಿ, ಆಹಾರ ಅಥವಾ ತ್ಯಾಜ್ಯ ಕೊಳೆತು ಸಂಗ್ರಾಹಕರಿಗೆ ಆಗಬಹುದಾದ ಅಪಾಯದಿಂದ ರಕ್ಷಿಸುತ್ತದೆ. ಒಟ್ಟಾಗಿ, ನಾವು ಬಿಸಾಡುವ ತ್ಯಾಜ್ಯದ ಮೌಲ್ಯವನ್ನು ತಿಳಿದಿರುವ ಜನರನ್ನು ಆದರಿಸೋಣ ಮತ್ತು ಗೌರವಿಸೋಣ”.

ಬೆಂಗಳೂರು ನಗರದಲ್ಲಿ ತ್ಯಾಜ್ಯ ಸಂಗ್ರಹ ಮತ್ತು ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಬಗ್ಗೆ ಇರುವ ಗ್ರಹಿಕೆಗಳನ್ನು ಬದಲಾಯಿಸುವ ನಿಟ್ಟಿನಲ್ಲಿ ಬಿಬಿಸಿ ಮೀಡಿಯಾ ಆಕ್ಷನ್‌ನ #Invaluables ಸಾಮಾಜಿಕ ಮಾಧ್ಯಮ ಅಭಿಯಾನದ ಎರಡನೇ ಹಂತ ಈ #InvaluableRecyclers. ಹಿಂದಿನ ಹಂತದ ಈ ಅಭಿಯಾನದ ನಂತರದಲ್ಲಿ ನಡೆದ ಸಂಶೋಧನೆಯು ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಜಾಗೃತಿ ವಿಚಾರಕ್ಕೆ ಪ್ರತಿಕ್ರಿಯಿಸಿದವರಲ್ಲಿ ಸುಮಾರು ಶೇಕಡ 6% ರಷ್ಟು ಹೆಚ್ಚಳವಾಗಿದೆ.

ತ್ಯಾಜ್ಯವನ್ನು ಆರಿಸುವ ಮತ್ತು ವಿಂಗಡಿಸುವ ಮೂಲಕ ಪರಿಸರಕ್ಕೆ ಸಹಾಯ ಮಾಡುವಲ್ಲಿ ಅವರ ಕೊಡುಗೆಯ ಅರಿವು ಅವರಿಗೆ ಆಗಿದೆ.

ಬೆಂಗಳೂರಿನಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಜೀವನವನ್ನು ಸುಧಾರಿಸುವುದಕ್ಕಾಗಿ ಬಿಬಿಸಿ ಮೀಡಿಯಾ ಆಕ್ಷನ್‌ ಮಾಡುತ್ತಿರುವ ಕೆಲಸವು ಎಚ್‌&ಎಂ ಫೌಂಡೇಶನ್ ಅನುದಾನಿತ ಸಾಮೂಹಿಕ ಶಕ್ತಿ ಉಪಕ್ರಮದ ಭಾಗವಾಗಿದೆ. ಕೇರ್ ಇಂಡಿಯಾ, ಹಸಿರು ದಳ, ಲೇಬರ್‌ನೆಟ್, ಸೇವ್ ದಿ ಚಿಲ್ಡ್ರನ್, ಸೋಷಿಯಲ್ ಆಲ್ಫಾ ಮತ್ತು ವಾಟರ್‌ಏಡ್, ಜೊತೆಗೆ ದಿ ನಡ್ಜ್ ಫೌಂಡೇಶನ್ ಮಧ್ಯಸ್ಥಿಕೆಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತ ಈ ಸಹಯೋಗದ ಪಾಲುದಾರಿಕೆ ಹೊಂದಿವೆ.

ಬಿಬಿಸಿ ಮೀಡಿಯಾ ಆಕ್ಷನ್‌ನ ಕಿರುಪರಿಚಯ

ಬಿಬಿಸಿ ಮೀಡಿಯಾ ಆಕ್ಷನ್ ಎಂಬುದು ಬಿಬಿಸಿ ಅಂತಾರಾಷ್ಟ್ರೀಯ ಚಾರಿಟಿಯಾಗಿದೆ. ನಾವು ಮಾಧ್ಯಮ ಮತ್ತು ಸಂವಹನವಿರುವುದು ಒಳಿತಿಗಾಗಿ ಎಂದು ನಂಬುತ್ತೇವೆ. ಪ್ರಪಂಚದ ಕೆಲವು ಬಡ ಮತ್ತು ಅತ್ಯಂತ ದುರ್ಬಲ ದೇಶಗಳಲ್ಲಿ ನಾವು ಪ್ರತಿ ವರ್ಷ 100 ಮಿಲಿಯನ್‌ಗಿಂತಲೂ ಹೆಚ್ಚು ಜನರನ್ನು ತಲುಪುತ್ತೇವೆ. ನಮ್ಮ ಯೋಜನೆಗಳು ಮತ್ತು ಕಾರ್ಯಕ್ರಮಗಳು ಜೀವಗಳನ್ನು ಉಳಿಸುತ್ತವೆ ಹಾಗೂ ಜೀವನೋಪಾಯವನ್ನು ರಕ್ಷಿಸುತ್ತವೆ. ಅದೇ ರೀತಿ ತಪ್ಪು ಮಾಹಿತಿಯನ್ನು ನಿವಾರಿಸುತ್ತವೆ. ಪೂರ್ವಾಗ್ರಹಗಳಿಗೆ ಸವಾಲೊಡ್ಡಿ ಪ್ರಜಾಪ್ರಭುತ್ವಕ್ಕೆ ಬಲ ತುಂಬುತ್ತೇವೆ ಮಾನವ-ಕೇಂದ್ರಿತ ವಿನ್ಯಾಸ ವಿಧಾನವನ್ನು ಬಳಸಿಕೊಂಡು ಮಾಡುವ ನಮ್ಮ ಕೆಲಸವು ಪುರಾವೆಗಳು ಮತ್ತು ಒಳನೋಟಗಳಿಂದ ಕೂಡಿಕೊಂಡಿದೆ.

ಸಾಮಾಜಿಕ ಮತ್ತು ನಡವಳಿಕೆಯ ಬದಲಾವಣೆಯನ್ನು ತರುವುದಕ್ಕಾಗಿ ಪ್ರಭಾವ-ಪರೀಕ್ಷಿತ, ಸ್ಕೇಲೆಬಲ್, ದೊಡ್ಡ ಆಲೋಚನೆಗಳನ್ನು ನಿಯಂತ್ರಿಸುತ್ತ ಮುನ್ನಡೆಯುತ್ತೇವೆ. ಭಾರತದಲ್ಲಿ ಕಳೆದ ಎರಡು ದಶಕಗಳಲ್ಲಿ, ನಾವು ಆರೋಗ್ಯ (ಎಚ್‌ಐವಿ ತಡೆಗಟ್ಟುವಿಕೆ, ಕ್ಷಯರೋಗ, ರೋಗನಿರ್ಣಯ ಮತ್ತು ಚಿಕಿತ್ಸೆ, ಸಂತಾನೋತ್ಪತ್ತಿ, ತಾಯಿಯ, ನವಜಾತ ಶಿಶುಗಳು ಮತ್ತು ಮಕ್ಕಳ ಆರೋಗ್ಯ), ನೈರ್ಮಲ್ಯ, ಲಿಂಗ ಸಮಾನತೆ, ಹವಾಮಾನ ಬದಲಾವಣೆ ಮತ್ತು ಜೀತ ತಡೆಗಟ್ಟುವಿಕೆಯಲ್ಲಿ ನಿರ್ಣಾಯಕ ಪಾತ್ರವನ್ನು ನಿರ್ವಹಿಸಿದ್ದೇವೆ.

ವೆಬ್‌ಸೈಟ್‌:https://www.bbc.co.uk/mediaaction/where-we-work/asia/india/

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತುಂಬಿದ ಕೊಡ ತುಳುಕಿತಲೇ ಪರಾಕ್..!

Published

on

  • ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ತುಂಬಿದ ಕೊಡ ತುಳುಕಿತಲೇ ಪರಾಕ್” ಎಂದು ಕಾರ್ಣಿಕ ನುಡಿದ ಗೊರವಯ್ಯ, ಅದು ಮೈಲಾರ ಕೋಟ್ಯಾಂತರ ಭಕ್ತರ ಆರಾಧ್ಯದೈವ ಮೈಲಾರ ಲಿಂಗನ ಪುಣ್ಯ ಕ್ಷೇತ್ರ. ಈ ಪುಣ್ಯ ಕ್ಷೇತ್ರ ಪ್ರತಿ ವರ್ಷ ಕಾರ್ಣಿಕ ನುಡಿಗೆ ರಾಜ್ಯಾದ್ಯಂತ ಫೇಮಸ್. ನುಡಿ ಆಲಿಸಲು ಲಕ್ಷಾಂತರ ಜನ್ರು ಅಲ್ಲಿಗೆ ಆಗಮಿಸ್ತಾರೆ. ಇನ್ನು 18 ಅಡಿ ಬಿಲ್ಲನ್ನ ಏರಿ ಕಾರ್ಣಿಕ ನುಡಿ ನುಡಿಯುವ ಗೊರವಯ್ಯನ ನುಡಿಯನ್ನ ಮಳೆ, ಬೆಳೆ, ರಾಜಕೀಯ ಹೀಗೆ ಆಗು ಹೋಗಗಳ ಬಗ್ಗೆ ವಿಮರ್ಶೆ ಮಾಡ್ತಾರೆ ಹಾಗಾದ್ರೆ ಈ ವರ್ಷ ನುಡಿದ ಕಾರ್ಣಿಕ ನುಡಿ ಏನು…? ಅಂತಿರಾ ಈ ಸ್ಟೋರಿ ಓದಿ

ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಭವಿಷ್ಯ ನುಡಿದ ಗೊರವಯ್ಯ ಸದ್ದಲೇ ಎಂದು ಭವಿಷ್ಯವಾಣಿ ನುಡಿದ ಕಾರ್ಣಿಕದ ಗೊರವಯ್ಯ ರಾಮಣ್ಣ , 18 ಅಡಿ ಬಿಲ್ಲನ್ನು ಏರಿ ಕಾರ್ಣಿಕ ನುಡಿದು ಕೆಳಗೆ ಬಿದ್ದ ಗೊರವಯ್ಯ.

ತುಂಬಿದ ಕೊಡ ತುಳುಕಿತಲೇ ಪರಾಕ್… ಹೌದು ಇದು ಈ ವರ್ಷದ ಶ್ರೀ ಕ್ಷೇತ್ರ ಮೈಲಾರದ ಕಾರ್ಣಿಕ ( 2025 ರ ವರ್ಷ ಭವಿಷ್ಯ) ಅದು ಜಿಲ್ಲೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರ. ಮೈಲಾರದ ಮೈಲಾರ ಲೀಂಗೆಶ್ವರನ ಜಾತ್ರೆ ಪ್ರತಿ ವರ್ಷ ನಡೆಯುತ್ತದೆ. ಭರತ ಹುಣ್ಣಿಮೆಯ ಬಳಿಕ ಶ್ರೀ ಕ್ಷೇತ್ರ ಮೈಲಾರದ ಡಂಕನಮರಡಿಯಲ್ಲಿ ಕಾರ್ಣಿಕ ನುಡಿಯನ್ನ 11 ದಿನಗಳ ಕಾಲ ಉಪವಾಸ ವಿದ್ದು ಭಕ್ತಿ ಭಾವ ಮಡಿ, 18 ಅಡಿಯ ಬಿಲ್ಲನ್ನ ಏರಿ ಕಾರ್ಣಿಕ ನುಡಿ ಭವಿಷ್ಯ ನುಡಿದ ಗೊರವಯ್ಯ ರಾಮಣ್ಣ, ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಭವಿಷ್ಯವಾಣಿ ನುಡಿದಿದ್ದಾರೆ‌ ಸಂಪಾದೀತಲೇ ಪರಾಕ್.

|ವೆಂಕಪ್ಪಯ್ಯ ಒಡೆಯರ್, ಮೈಲಾರ ಕ್ಷೇತ್ರದ ಧರ್ಮದರ್ಶಿ

ಈ ಸಮಯದಲ್ಲಿ ಹೂವಿನಹಡಗಲಿ ಶಾಸಕ ಕೃಷ್ಣ ನಾಯಕ್
ಮಾತನಾಡಿದ ಅವರು ತುಂಬಿದ ಕೊಡಾ ತುಳುಕಿತಲೇ ಪರಾಕ್ ‌ಎಂಬ ಎರಡೇ ಶಬ್ದದಲ್ಲಿ ಈ ವರ್ಷದ ದೈವವಾಣಿ ಹೇಳಿದ ಗೊರವಯ್ಯ ರಾಮಣ್ಣ, ಗೊರವಯ್ಯನ ಹೇಳಿಕೆಯಿಂದ ನೆರೆದಿದ್ದ ಲಕ್ಷಾಂತರ ಜನರಿಂದ ವ್ಯಕ್ತವಾದ ಹರ್ಷಾದ್ಘೋರ ಮುಗಿಲು ಮುಟ್ಟಿತು.ಈ ಬಾರಿ ಉತ್ತಮ ಮಳೆ,ಬೆಳೆಯಾಗಲಿದೆ.‌ ದೇಶ ಸುಭಿಕ್ಷೆಯಾಗಿರಲಿದೆ ಎಂದು ಅರ್ಥೈಸಲಾಗುತ್ತಿದೆ.

ಇದಕ್ಕೂ ಮೊದಲು ಮೈಲಾರಲಿಂಗೇಶ್ವರನ ದೇವಸ್ಥಾನದಿಂದ ಶ್ರೀ ವೆಂಕಪ್ಪಯ್ಯ ಒಡೆಯರ್ ಕುದುರೆಯನ್ನೇರಿ ಡೆಂಕನಮರಡಿ ಪ್ರದೇಶದವರೆಗೆ ಮೆರವಣಿ ಮೂಲಕ ಸಾಗಿ ಬಂದು ಕಾರ್ಣಿಕ ನುಡಿಯುವ ಸ್ಥಳದ ಸುತ್ತ ಪ್ರದಕ್ಷಿಣೆ ಹಾಕಿ, ಭಕ್ತರಿಗೆ ಆಶೀರ್ವಾದ ನೀಡಿದರು. ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸೇರಿ ರಾಜ್ಯದ ಮೂಲೆ ಮೂಲೆಗಳಿಂದ ಬಂದ ಲಕ್ಷಾಂತ ಭಕ್ತರು ನೆರೆದಿದ್ದರು.

ಒಟ್ಟಾರೆ ಹೇಳುವುದಾದರೆ, ಈ ಬಾರಿಯ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವವು ದೇಶ ಸುಭಿಕ್ಷವಾಗಿರಲಿದೆ, ಮಳೆ ಬೆಳೆ ಚೆನ್ನಾಗಿ ಆಗಲಿದೆ.. ರೈತರು ಉತ್ತಮ ರೀತಿಯಲ್ಲಿ ಇರ್ತಾರೆ ಅನ್ನೋ ಸಂದೇಶ ನೀಡಿದಂತಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44 ಅಂತಿಮ ವರ್ಷದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಒಟ್ಟು 44 ಅಂತಿಮ ವರ್ಷದ ವಿದ್ಯಾರ್ಥಿಗಳು ನ್ಯೂಜೈಸಾ ಟೆಕ್ನಾಲಜಿಸ್ ನಲ್ಲಿ ಉದ್ಯೋಗವಕಾಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ.ಆರ್. ತಿಳಿಸಿದ್ದಾರೆ.

ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಜಿಎಂ ಕಾಲೇಜಿನ ಚೇರ್ಮನ್ ಆದ ಜಿ.ಎಂ. ಲಿಂಗರಾಜು, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂಬಿ, ಕಾಲೇಜಿನ ಆಡಳಿತ ಅಧಿಕಾರಿಗಳಾದ ವೈ.ಯು. ಸುಭಾಷ್ ಚಂದ್ರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎನ್. ಶ್ರೀಧರ್ ಅಭಿನಂದನೆ ಸಲ್ಲಿಸಿದ್ದು, 44 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಹರುಷ ವ್ಯಕ್ತಪಡಿಸಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಈ ಸಂಭ್ರಮದಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಸಿ. ನಿಂಗರಾಜು, ಡಿಪ್ಲೋಮೋದ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಯಾಸ್ಮಿನ್ ಬೇಗಮ್, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಕೆ.ಬಿ. ಜನಾರ್ಧನ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಿ.ಎನ್. ಸಂದೀಪ್, ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಎಂ. ಪ್ರವೀಣ್ ಕುಮಾರ್, ಕೆ. ಗಿರಿಜಾ ಸೇರಿದಂತೆ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆಬ್ರವರಿ 14 ಮತ್ತು 15 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending