Connect with us

ದಿನದ ಸುದ್ದಿ

38,32,50,000- ಈ ಸಂಖ್ಯೆಯೊಂದಿಗೆ ಬೆಂಗಳೂರಿನ ನಂಟೇನು? ಗಾಯಕ ವಾಸು ದೀಕ್ಷಿತರಿಗೆ ಇದರಿಂದ ಸ್ಪೂರ್ತಿ ಏನು?

Published

on


ಬಿಬಿಸಿ ಮೀಡಿಯಾ ಆಕ್ಷನ್ ಮತ್ತು ಗಾಯಕ ವಾಸು ದೀಕ್ಷಿತ್ ಸಹಯೋಗದಲ್ಲಿ, ಬೆಂಗಳೂರಿನ ಸರ್ಕುಲಾರ್‌ ಎಕಾನಮಿಯಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಪಾತ್ರದ ಕುರಿತು ಹ್ಯಾಪಿ ನಂಬರ್ ಹಾಡು ಮಾತನಾಡುತ್ತದೆ.


ಸುದ್ದಿದಿನ,ಬೆಂಗಳೂರು: ಬೆಂಗಳೂರಿನ ಸರ್ಕುಲಾರ್‌ ಎಕಾನಮಿಯಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಪಾತ್ರ ಮತ್ತು ಕೊಡುಗೆಯನ್ನು ಹೈಲೈಟ್ ಮಾಡುವ “Invaluables”ನ ಎರಡನೇ ಹಂತದ #Invaluable Recyclers ಪ್ರಾರಂಭಿಸುವುದಾಗಿ ಬಿಬಿಸಿ ಮೀಡಿಯಾ ಆಕ್ಷನ್ ಇಂದು ಘೋಷಿಸಿತು.

ಬಿಬಿಸಿ ಮೀಡಿಯಾ ಆಕ್ಷನ್ ಗಾಯಕ ವಾಸು ದೀಕ್ಷಿತ್ ಅವರ ಸಹಯೋಗದೊಂದಿಗೆ ‘ಹ್ಯಾಪಿ ನಂಬರ್’ ಎಂಬ ಶೀರ್ಷಿಕೆಯ ಹಾಡನ್ನು ಬಿಡುಗಡೆ ಮಾಡಿದೆ. ಇದು ನಗರದಲ್ಲಿ ತ್ಯಾಜ್ಯ ಸಂಗ್ರಾಹಕರ ಕೊಡುಗೆಯನ್ನು ಎತ್ತಿ ತೋರಿಸುತ್ತದೆ. ನಗರದಲ್ಲಿ ಉತ್ಪತ್ತಿಯಾಗುವ ಪ್ಲಾಸ್ಟಿಕ್ ಮತ್ತು ಇತರ ಮರುಬಳಕೆ ಮಾಡಬಹುದಾದ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸುವುದು ಮತ್ತು ಮರುಬಳಕೆ ಮಾಡುವುದರ ಮೂಲಕ ಭೂಮಿಯ ಒಡಲು ಸೇರಬಹುದಾದ 383,250 ಟನ್‌ ತ್ಯಾಜ್ಯವನ್ನು ಬೇರೆಡೆ ವರ್ಗಾಯಿಸುವ ಪ್ರಕ್ರಿಯೆಯಾಗಿದೆ.

ಭೂಮಿಯ ಒಡಲಲ್ಲಿ ತ್ಯಾಜ್ಯ ಸಂಗ್ರಹವಾಗುವುದರಿಂದ ಅಪಾರ ಪ್ರಮಾಣದಲ್ಲಿ ಪರಿಸರದ ಮೇಲೆ ಋಣಾತ್ಮಕ ಪರಿಣಾಮ ಉಂಟಾಗುತ್ತದೆ. ಇದು ಗಾಳಿ, ನೀರು ಮತ್ತು ಮಣ್ಣಿನ ಮಾಲಿನ್ಯ ಮತ್ತು ಹವಾಮಾನ ಬದಲಾವಣೆಗೂ ಕಾರಣವಾಗುತ್ತದೆ.

ಬಿಬಿಸಿ ಮೀಡಿಯಾ ಆಕ್ಷನ್ ಮತ್ತು ಅದರ ಪಾಲುದಾರರು ಇಂದು ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಗಾಯಕ ವಾಸು ದೀಕ್ಷಿತ್, ಪರಿಸರವಾದಿ ವಾಣಿ ಮೂರ್ತಿ ಮತ್ತು ನಟಿ ಶ್ರದ್ಧಾ ಜೈನ್ ಅವರ ಉಪಸ್ಥಿತಿಯಲ್ಲಿ ಹಾಡನ್ನು ಬಿಡುಗಡೆ ಮಾಡಲಾಯಿತು. ಬೆಂಗಳೂರಿಗರಲ್ಲಿ ತ್ಯಾಜ್ಯವನ್ನು ಆರಿಸುವ ಸಮುದಾಯದ ಬಗ್ಗೆ ಜಾಗೃತಿ ಮತ್ತು ಸಹಾನುಭೂತಿ ಮೂಡಿಸುವುದು ಇದರ ಉದ್ದೇಶ.

ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ಮತ್ತು 22,500 ಕ್ಕೂ ಹೆಚ್ಚು ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರಿಗೆ ನೆಲೆಯೂ ಹೌದು. ಅವರು ನಗರದ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದಾರೆ. ಮರುಬಳಕೆ ಮಾಡಲಾಗದ ವಸ್ತುಗಳು ಮಾತ್ರ ಲ್ಯಾಂಡ್‌ ಫಿಲ್‌ನಲ್ಲಿ ಉಳಿಯವಂತೆ ಅವರು ನೋಡಿಕೊಳ್ಳುತ್ತಾರೆ.

Invaluable Recyclers ಬಗ್ಗೆ ಮಾತನಾಡಿದ ಬಿಬಿಸಿ ಮೀಡಿಯಾ ಆಕ್ಷನ್‌ನ ಕಾರ್ಯನಿರ್ವಾಹಕ ಕ್ರಿಯೇಟಿವ್ ಡೈರೆಕ್ಟರ್ ಸೋಮಾ ಕಟಿಯಾರ್, “ಸಾಂಕ್ರಾಮಿಕ ಸಂಕಷ್ಟದ ಪರಿಣಾಮ ಅಂಕಿ-ಸಂಖ್ಯೆಗಳು ಭಯಾನಕವಾಗಿವೆ. ಕೆಟ್ಟ ಸಂಭವನೀಯ ಸುದ್ದಿಗಳ ಮುನ್ನುಡಿ ಇದು! ಆದರೆ, ನಾವು ತಿಳಿದುಕೊಳ್ಳಬೇಕಾದ ಮತ್ತು ಆಚರಿಸಬೇಕಾದ ‘ಸಂತೋಷದ ಸಂಖ್ಯೆ’ ಇಲ್ಲಿದೆ – ಅಂದಾಜು 38,32,50,000 ಕಿಲೋಗ್ರಾಂ ತ್ಯಾಜ್ಯವನ್ನು ಬೆಂಗಳೂರಿನ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರು ಈಗಾಗಲೇ ತುಂಬಿರುವ ಲ್ಯಾಂಡ್‌ ಫಿಲ್‌ಗಳಿಗೆ ಸೇರದಂತೆ ತಡೆದಿದ್ದಾರೆ.

ನಾವು ಅವರನ್ನು ಸದ್ದಿಲ್ಲದೇ ಕೆಲಸ ಮಾಡುವ ಪರಿಸರವಾದಿಗಳಂತೆ ಕಾಣುತ್ತೇವೆ. ತ್ಯಾಜ್ಯ ಮರುಬಳಕೆಯ ವ್ಯಾಲ್ಯೂ ಚೇನ್‌ನಲ್ಲಿ ಅವರೇ ಮೊದಲಿಗರು. ಅವರು ನಗರಕ್ಕಾಗಿ ಮಾಡುವ ಈ ಅಮೂಲ್ಯವಾದ ಕೆಲಸವನ್ನು “#InvaluableRecyclers ” ಈ ಹಾಡು ಕೊಂಡಾಡುತ್ತದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತದೆ. ಬಿಬಿಸಿ ಮೀಡಿಯಾ ಆಕ್ಷನ್ ನಗರದ ಸರ್ಕುಲಾರ್‌ ಎಕಾನಮಿಯಲ್ಲಿ ಈ ಹ್ಯಾಪಿ ನಂಬರ್ ಹಾಡು ಮತ್ತು ಅಭಿಯಾನದ ಮೂಲಕ, ತ್ಯಾಜ್ಯವನ್ನು ಆರಿಸುವ ವೃತ್ತಿಗೆ ಕೌಶಲ್ಯ ಮತ್ತು ಪರಿಣತಿಯನ್ನು ತಂದು ಅವರ ಪಾತ್ರವನ್ನು ಹೈಲೈಟ್ ಮಾಡುತ್ತದೆ.

ಹ್ಯಾಪಿ ನಂಬರ್ ಹಾಡನ್ನು ಸಂಯೋಜಿಸಿದ ಸಂಗೀತಗಾರ ವಾಸು ದೀಕ್ಷಿತ್ (@dixitvasu), “ಬೆಂಗಳೂರಿನ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ವಿಚಾರದಲ್ಲಿ ನಾಗರಿಕರಾದ ನಮಗೆ ಹೊಣೆಗಾರಿಕೆ ಇದೆ.ನಮ್ಮ ಪರಿಸರವನ್ನು ರಕ್ಷಿಸುವ ಅವರಿಗೆ ಅರ್ಹ ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುವ ಹೊಣೆಗಾರಿಕೆ ಅದು. ನಾವು ಅವರಿಗೆ ನೀಡುವ ತ್ಯಾಜ್ಯ ಮರುಬಳಕೆಗೆ ಯೋಗ್ಯವಾದುದು ಎಂಬುದನ್ನು ನಾವು ಖಾತರಿಪಡಿಸಬೇಕು. ಹ್ಯಾಪಿ ನಂಬರ್ ಹಾಡು ಅವರನ್ನು ಮತ್ತು ಅವರ ಕೆಲಸವನ್ನು ಪರಿಚಯಿಸಿ ಸಂಭ್ರಮಿಸುವುದಕ್ಕೆ ನನಗೆ ಸಿಕ್ಕ ಉತ್ತಮ ಅವಕಾಶ.

ಬೆಂಗಳೂರಿಗರು ಜೊತೆಯಲ್ಲಿ ಹಾಡಿದರೆ ಮತ್ತು ತ್ಯಾಜ್ಯ ತೆಗೆಯುವವರನ್ನು ಗುರುತಿಸಿದರೆ ಆ ಕನಸು ನನಸಾದಂತೆ ಆಗುತ್ತದೆ ಎಂದು ಹೇಳಿದರು.

ಬಿಬಿಸಿ ಮೀಡಿಯಾ ಆಕ್ಷನ್‌ನ ಸಂಶೋಧನೆಯ ಪ್ರಕಾರ, ಬೆಂಗಳೂರಿನ ಬೀದಿಗಳಲ್ಲಿ ತ್ಯಾಜ್ಯವು ಗೋಚರಿಸುತ್ತಿದೆ. ವಾಸ್ತವದಲ್ಲಿ ಇದು ಕಳವಳಕಾರಿಯಾಗಿದ್ದರೂ, ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರು ವರ್ಚುವಲ್‌ ಆಗಿ ಹೆಚ್ಚಿನ ಜನರಿಗೆ ‘ಅಗೋಚರ’ವಾಗಿದ್ದಾರೆ ಎಂಬುದು ವ್ಯಕ್ತವಾಗಿದೆ. ಅಧ್ಯಯನ ಸಮೀಕ್ಷೆಯಲ್ಲಿ ಭಾಗವಹಿಸಿದ ಸುಮಾರು ಶೇಕಡ 55% ರಷ್ಟು ಜನ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರನ್ನು ನೋಡುವುದಕ್ಕೆ ಕೊಳಕಾಗಿ ಇರುತ್ತಾರೆ ಎಂದಿದ್ದಾರೆ.

ಶೇಕಡ 56% ರಷ್ಟು ಜನ ಕಟ್ಟಡ ಸಂಕೀರ್ಣಗಳು ಮತ್ತು ಸಮಾಜದೊಳಗೆ ಅವರ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ.

ಪ್ರಚಾರ ಪೂರ್ವದಲ್ಲಿ ಸಹಕರಿಸಿದ ಜನಪ್ರಿಯ ಹಾಸ್ಯ ನಿರೂಪಕಿ ಮತ್ತು ನಟಿ ಶ್ರದ್ಧಾ ಜೈನ್ (@AiyyoShraddha), “ಈ ಹ್ಯಾಪಿ ನಂಬರ್ ಹಾಡನ್ನು ಇನ್ನಷ್ಟು ಹೆಚ್ಚು ಜನರಿಗೆ ತಲುಪಿಸುವ ಅವಕಾಶ ಸಿಕ್ಕಿದ್ದು ಒಂದು ಸುಯೋಗವೆಂದು ಭಾವಿಸುತ್ತೇನೆ. ತ್ಯಾಜ್ಯ ಆಯುವವರು ಬೆಂಗಳೂರಿಗೆ ಏನು ಮಾಡುತ್ತಾರೆ ಎಂಬುದು ಮುಖ್ಯ. ಅವರ ಕೌಶಲ್ಯಪೂರ್ಣ ಕೆಲಸವು ನಮ್ಮ ಜೀವನವನ್ನು ಹಗುರಾಗಿಸುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಹ್ಯಾಪಿ ನಂಬರ್ ಮತ್ತು #InvaluableReclyers ಅಭಿಯಾನವು ಅವರ ಪಾತ್ರದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ಬೆಂಗಳೂರಿನ ಜನರು ಅವರ ಕೊಡುಗೆಯನ್ನು ಗುರುತಿಸಬೇಕಾಗಿದೆ” ಎಂದು ಹೇಳಿದರು.

ಪ್ಲಾಸ್ಟಿಕ್ ಅನ್ನು ಪರಿಣಾಮಕಾರಿಯಾಗಿ ಮರುಬಳಕೆ ಮಾಡುವುದಕ್ಕಾಗಿ ತ್ಯಾಜ್ಯ ಆಯುವವರು, ಗೋಡೌನ್ ಪ್ರಕಾರವನ್ನು ಅವಲಂಬಿಸಿ ಅವುಗಳನ್ನು 35 ರಿಂದ 70 ಕ್ಕೂ ಹೆಚ್ಚು ವರ್ಗಗಳಾಗಿ ವಿಂಗಡಿಸುತ್ತಾರೆ. ನೋಟ, ಸ್ಪರ್ಶದ ಧ್ವನಿ ಮತ್ತು ದಪ್ಪದ ಆಧಾರದ ಮೇಲೆ ವಸ್ತುಗಳನ್ನು ಗುರುತಿಸುವಲ್ಲಿ ಇವರು ಪರಿಣತರು ಮತ್ತು ಅನುಭವಿಗಳು.
ಗೊಬ್ಬರ ತಯಾರಿಕೆ ಮತ್ತು ನಗರ ಕೃಷಿ ಬಗ್ಗೆ ಒಲವು ಹೊಂದಿರುವ ಪರಿಸರವಾದಿ ವಾಣಿ ಮೂರ್ತಿ (@WormRani), “ನಗರದಿಂದ ಉತ್ಪತ್ತಿಯಾಗುವ ಪ್ಲಾಸ್ಟಿಕ್ ಮತ್ತು ಪೆಟ್‌ ತ್ಯಾಜ್ಯವನ್ನು ಸಂಗ್ರಹಿಸಿ ಮರುಬಳಕೆ ಮಾಡುವಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರು ಪ್ರಮುಖ ಪಾತ್ರ ವಹಿಸುತ್ತಾರೆ. ನಾವು ಪ್ಲಾಸ್ಟಿಕ್ ಆಹಾರದ ಪಾತ್ರೆಗಳನ್ನು ತ್ಯಾಜ್ಯವೆಂದು ಬಿಸಾಡುವ ಮೊದಲು ತೊಳೆಯುವಂತಹ ಸರಳ ಕ್ರಮಗಳನ್ನು ಅನುಸರಿಸಿದರೆ ಸಾಕು.

ಈ ಕ್ರಮವು ಪ್ಲಾಸ್ಟಿಕ್ ಅನ್ನು ಮರುಬಳಕೆಗೆ ಯೋಗ್ಯವಾಗಿಸುತ್ತದೆ. ಮಾತ್ರವಲ್ಲದೆ ತ್ಯಾಜ್ಯ ಸಂಗ್ರಾಹಕರ ಕೆಲಸವನ್ನು ಸುಲಭ ಮಾಡುತ್ತದೆ. ಅದೇ ರೀತಿ, ಆಹಾರ ಅಥವಾ ತ್ಯಾಜ್ಯ ಕೊಳೆತು ಸಂಗ್ರಾಹಕರಿಗೆ ಆಗಬಹುದಾದ ಅಪಾಯದಿಂದ ರಕ್ಷಿಸುತ್ತದೆ. ಒಟ್ಟಾಗಿ, ನಾವು ಬಿಸಾಡುವ ತ್ಯಾಜ್ಯದ ಮೌಲ್ಯವನ್ನು ತಿಳಿದಿರುವ ಜನರನ್ನು ಆದರಿಸೋಣ ಮತ್ತು ಗೌರವಿಸೋಣ”.

ಬೆಂಗಳೂರು ನಗರದಲ್ಲಿ ತ್ಯಾಜ್ಯ ಸಂಗ್ರಹ ಮತ್ತು ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಬಗ್ಗೆ ಇರುವ ಗ್ರಹಿಕೆಗಳನ್ನು ಬದಲಾಯಿಸುವ ನಿಟ್ಟಿನಲ್ಲಿ ಬಿಬಿಸಿ ಮೀಡಿಯಾ ಆಕ್ಷನ್‌ನ #Invaluables ಸಾಮಾಜಿಕ ಮಾಧ್ಯಮ ಅಭಿಯಾನದ ಎರಡನೇ ಹಂತ ಈ #InvaluableRecyclers. ಹಿಂದಿನ ಹಂತದ ಈ ಅಭಿಯಾನದ ನಂತರದಲ್ಲಿ ನಡೆದ ಸಂಶೋಧನೆಯು ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಜಾಗೃತಿ ವಿಚಾರಕ್ಕೆ ಪ್ರತಿಕ್ರಿಯಿಸಿದವರಲ್ಲಿ ಸುಮಾರು ಶೇಕಡ 6% ರಷ್ಟು ಹೆಚ್ಚಳವಾಗಿದೆ.

ತ್ಯಾಜ್ಯವನ್ನು ಆರಿಸುವ ಮತ್ತು ವಿಂಗಡಿಸುವ ಮೂಲಕ ಪರಿಸರಕ್ಕೆ ಸಹಾಯ ಮಾಡುವಲ್ಲಿ ಅವರ ಕೊಡುಗೆಯ ಅರಿವು ಅವರಿಗೆ ಆಗಿದೆ.

ಬೆಂಗಳೂರಿನಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಜೀವನವನ್ನು ಸುಧಾರಿಸುವುದಕ್ಕಾಗಿ ಬಿಬಿಸಿ ಮೀಡಿಯಾ ಆಕ್ಷನ್‌ ಮಾಡುತ್ತಿರುವ ಕೆಲಸವು ಎಚ್‌&ಎಂ ಫೌಂಡೇಶನ್ ಅನುದಾನಿತ ಸಾಮೂಹಿಕ ಶಕ್ತಿ ಉಪಕ್ರಮದ ಭಾಗವಾಗಿದೆ. ಕೇರ್ ಇಂಡಿಯಾ, ಹಸಿರು ದಳ, ಲೇಬರ್‌ನೆಟ್, ಸೇವ್ ದಿ ಚಿಲ್ಡ್ರನ್, ಸೋಷಿಯಲ್ ಆಲ್ಫಾ ಮತ್ತು ವಾಟರ್‌ಏಡ್, ಜೊತೆಗೆ ದಿ ನಡ್ಜ್ ಫೌಂಡೇಶನ್ ಮಧ್ಯಸ್ಥಿಕೆಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತ ಈ ಸಹಯೋಗದ ಪಾಲುದಾರಿಕೆ ಹೊಂದಿವೆ.

ಬಿಬಿಸಿ ಮೀಡಿಯಾ ಆಕ್ಷನ್‌ನ ಕಿರುಪರಿಚಯ

ಬಿಬಿಸಿ ಮೀಡಿಯಾ ಆಕ್ಷನ್ ಎಂಬುದು ಬಿಬಿಸಿ ಅಂತಾರಾಷ್ಟ್ರೀಯ ಚಾರಿಟಿಯಾಗಿದೆ. ನಾವು ಮಾಧ್ಯಮ ಮತ್ತು ಸಂವಹನವಿರುವುದು ಒಳಿತಿಗಾಗಿ ಎಂದು ನಂಬುತ್ತೇವೆ. ಪ್ರಪಂಚದ ಕೆಲವು ಬಡ ಮತ್ತು ಅತ್ಯಂತ ದುರ್ಬಲ ದೇಶಗಳಲ್ಲಿ ನಾವು ಪ್ರತಿ ವರ್ಷ 100 ಮಿಲಿಯನ್‌ಗಿಂತಲೂ ಹೆಚ್ಚು ಜನರನ್ನು ತಲುಪುತ್ತೇವೆ. ನಮ್ಮ ಯೋಜನೆಗಳು ಮತ್ತು ಕಾರ್ಯಕ್ರಮಗಳು ಜೀವಗಳನ್ನು ಉಳಿಸುತ್ತವೆ ಹಾಗೂ ಜೀವನೋಪಾಯವನ್ನು ರಕ್ಷಿಸುತ್ತವೆ. ಅದೇ ರೀತಿ ತಪ್ಪು ಮಾಹಿತಿಯನ್ನು ನಿವಾರಿಸುತ್ತವೆ. ಪೂರ್ವಾಗ್ರಹಗಳಿಗೆ ಸವಾಲೊಡ್ಡಿ ಪ್ರಜಾಪ್ರಭುತ್ವಕ್ಕೆ ಬಲ ತುಂಬುತ್ತೇವೆ ಮಾನವ-ಕೇಂದ್ರಿತ ವಿನ್ಯಾಸ ವಿಧಾನವನ್ನು ಬಳಸಿಕೊಂಡು ಮಾಡುವ ನಮ್ಮ ಕೆಲಸವು ಪುರಾವೆಗಳು ಮತ್ತು ಒಳನೋಟಗಳಿಂದ ಕೂಡಿಕೊಂಡಿದೆ.

ಸಾಮಾಜಿಕ ಮತ್ತು ನಡವಳಿಕೆಯ ಬದಲಾವಣೆಯನ್ನು ತರುವುದಕ್ಕಾಗಿ ಪ್ರಭಾವ-ಪರೀಕ್ಷಿತ, ಸ್ಕೇಲೆಬಲ್, ದೊಡ್ಡ ಆಲೋಚನೆಗಳನ್ನು ನಿಯಂತ್ರಿಸುತ್ತ ಮುನ್ನಡೆಯುತ್ತೇವೆ. ಭಾರತದಲ್ಲಿ ಕಳೆದ ಎರಡು ದಶಕಗಳಲ್ಲಿ, ನಾವು ಆರೋಗ್ಯ (ಎಚ್‌ಐವಿ ತಡೆಗಟ್ಟುವಿಕೆ, ಕ್ಷಯರೋಗ, ರೋಗನಿರ್ಣಯ ಮತ್ತು ಚಿಕಿತ್ಸೆ, ಸಂತಾನೋತ್ಪತ್ತಿ, ತಾಯಿಯ, ನವಜಾತ ಶಿಶುಗಳು ಮತ್ತು ಮಕ್ಕಳ ಆರೋಗ್ಯ), ನೈರ್ಮಲ್ಯ, ಲಿಂಗ ಸಮಾನತೆ, ಹವಾಮಾನ ಬದಲಾವಣೆ ಮತ್ತು ಜೀತ ತಡೆಗಟ್ಟುವಿಕೆಯಲ್ಲಿ ನಿರ್ಣಾಯಕ ಪಾತ್ರವನ್ನು ನಿರ್ವಹಿಸಿದ್ದೇವೆ.

ವೆಬ್‌ಸೈಟ್‌:https://www.bbc.co.uk/mediaaction/where-we-work/asia/india/

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending