ದಿನದ ಸುದ್ದಿ
38,32,50,000- ಈ ಸಂಖ್ಯೆಯೊಂದಿಗೆ ಬೆಂಗಳೂರಿನ ನಂಟೇನು? ಗಾಯಕ ವಾಸು ದೀಕ್ಷಿತರಿಗೆ ಇದರಿಂದ ಸ್ಪೂರ್ತಿ ಏನು?
ಬಿಬಿಸಿ ಮೀಡಿಯಾ ಆಕ್ಷನ್ ಮತ್ತು ಗಾಯಕ ವಾಸು ದೀಕ್ಷಿತ್ ಸಹಯೋಗದಲ್ಲಿ, ಬೆಂಗಳೂರಿನ ಸರ್ಕುಲಾರ್ ಎಕಾನಮಿಯಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಪಾತ್ರದ ಕುರಿತು ಹ್ಯಾಪಿ ನಂಬರ್ ಹಾಡು ಮಾತನಾಡುತ್ತದೆ.
ಸುದ್ದಿದಿನ,ಬೆಂಗಳೂರು: ಬೆಂಗಳೂರಿನ ಸರ್ಕುಲಾರ್ ಎಕಾನಮಿಯಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಪಾತ್ರ ಮತ್ತು ಕೊಡುಗೆಯನ್ನು ಹೈಲೈಟ್ ಮಾಡುವ “Invaluables”ನ ಎರಡನೇ ಹಂತದ #Invaluable Recyclers ಪ್ರಾರಂಭಿಸುವುದಾಗಿ ಬಿಬಿಸಿ ಮೀಡಿಯಾ ಆಕ್ಷನ್ ಇಂದು ಘೋಷಿಸಿತು.
ಬಿಬಿಸಿ ಮೀಡಿಯಾ ಆಕ್ಷನ್ ಗಾಯಕ ವಾಸು ದೀಕ್ಷಿತ್ ಅವರ ಸಹಯೋಗದೊಂದಿಗೆ ‘ಹ್ಯಾಪಿ ನಂಬರ್’ ಎಂಬ ಶೀರ್ಷಿಕೆಯ ಹಾಡನ್ನು ಬಿಡುಗಡೆ ಮಾಡಿದೆ. ಇದು ನಗರದಲ್ಲಿ ತ್ಯಾಜ್ಯ ಸಂಗ್ರಾಹಕರ ಕೊಡುಗೆಯನ್ನು ಎತ್ತಿ ತೋರಿಸುತ್ತದೆ. ನಗರದಲ್ಲಿ ಉತ್ಪತ್ತಿಯಾಗುವ ಪ್ಲಾಸ್ಟಿಕ್ ಮತ್ತು ಇತರ ಮರುಬಳಕೆ ಮಾಡಬಹುದಾದ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸುವುದು ಮತ್ತು ಮರುಬಳಕೆ ಮಾಡುವುದರ ಮೂಲಕ ಭೂಮಿಯ ಒಡಲು ಸೇರಬಹುದಾದ 383,250 ಟನ್ ತ್ಯಾಜ್ಯವನ್ನು ಬೇರೆಡೆ ವರ್ಗಾಯಿಸುವ ಪ್ರಕ್ರಿಯೆಯಾಗಿದೆ.
ಭೂಮಿಯ ಒಡಲಲ್ಲಿ ತ್ಯಾಜ್ಯ ಸಂಗ್ರಹವಾಗುವುದರಿಂದ ಅಪಾರ ಪ್ರಮಾಣದಲ್ಲಿ ಪರಿಸರದ ಮೇಲೆ ಋಣಾತ್ಮಕ ಪರಿಣಾಮ ಉಂಟಾಗುತ್ತದೆ. ಇದು ಗಾಳಿ, ನೀರು ಮತ್ತು ಮಣ್ಣಿನ ಮಾಲಿನ್ಯ ಮತ್ತು ಹವಾಮಾನ ಬದಲಾವಣೆಗೂ ಕಾರಣವಾಗುತ್ತದೆ.
ಬಿಬಿಸಿ ಮೀಡಿಯಾ ಆಕ್ಷನ್ ಮತ್ತು ಅದರ ಪಾಲುದಾರರು ಇಂದು ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಗಾಯಕ ವಾಸು ದೀಕ್ಷಿತ್, ಪರಿಸರವಾದಿ ವಾಣಿ ಮೂರ್ತಿ ಮತ್ತು ನಟಿ ಶ್ರದ್ಧಾ ಜೈನ್ ಅವರ ಉಪಸ್ಥಿತಿಯಲ್ಲಿ ಹಾಡನ್ನು ಬಿಡುಗಡೆ ಮಾಡಲಾಯಿತು. ಬೆಂಗಳೂರಿಗರಲ್ಲಿ ತ್ಯಾಜ್ಯವನ್ನು ಆರಿಸುವ ಸಮುದಾಯದ ಬಗ್ಗೆ ಜಾಗೃತಿ ಮತ್ತು ಸಹಾನುಭೂತಿ ಮೂಡಿಸುವುದು ಇದರ ಉದ್ದೇಶ.
ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ಮತ್ತು 22,500 ಕ್ಕೂ ಹೆಚ್ಚು ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರಿಗೆ ನೆಲೆಯೂ ಹೌದು. ಅವರು ನಗರದ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದಾರೆ. ಮರುಬಳಕೆ ಮಾಡಲಾಗದ ವಸ್ತುಗಳು ಮಾತ್ರ ಲ್ಯಾಂಡ್ ಫಿಲ್ನಲ್ಲಿ ಉಳಿಯವಂತೆ ಅವರು ನೋಡಿಕೊಳ್ಳುತ್ತಾರೆ.
Invaluable Recyclers ಬಗ್ಗೆ ಮಾತನಾಡಿದ ಬಿಬಿಸಿ ಮೀಡಿಯಾ ಆಕ್ಷನ್ನ ಕಾರ್ಯನಿರ್ವಾಹಕ ಕ್ರಿಯೇಟಿವ್ ಡೈರೆಕ್ಟರ್ ಸೋಮಾ ಕಟಿಯಾರ್, “ಸಾಂಕ್ರಾಮಿಕ ಸಂಕಷ್ಟದ ಪರಿಣಾಮ ಅಂಕಿ-ಸಂಖ್ಯೆಗಳು ಭಯಾನಕವಾಗಿವೆ. ಕೆಟ್ಟ ಸಂಭವನೀಯ ಸುದ್ದಿಗಳ ಮುನ್ನುಡಿ ಇದು! ಆದರೆ, ನಾವು ತಿಳಿದುಕೊಳ್ಳಬೇಕಾದ ಮತ್ತು ಆಚರಿಸಬೇಕಾದ ‘ಸಂತೋಷದ ಸಂಖ್ಯೆ’ ಇಲ್ಲಿದೆ – ಅಂದಾಜು 38,32,50,000 ಕಿಲೋಗ್ರಾಂ ತ್ಯಾಜ್ಯವನ್ನು ಬೆಂಗಳೂರಿನ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರು ಈಗಾಗಲೇ ತುಂಬಿರುವ ಲ್ಯಾಂಡ್ ಫಿಲ್ಗಳಿಗೆ ಸೇರದಂತೆ ತಡೆದಿದ್ದಾರೆ.
ನಾವು ಅವರನ್ನು ಸದ್ದಿಲ್ಲದೇ ಕೆಲಸ ಮಾಡುವ ಪರಿಸರವಾದಿಗಳಂತೆ ಕಾಣುತ್ತೇವೆ. ತ್ಯಾಜ್ಯ ಮರುಬಳಕೆಯ ವ್ಯಾಲ್ಯೂ ಚೇನ್ನಲ್ಲಿ ಅವರೇ ಮೊದಲಿಗರು. ಅವರು ನಗರಕ್ಕಾಗಿ ಮಾಡುವ ಈ ಅಮೂಲ್ಯವಾದ ಕೆಲಸವನ್ನು “#InvaluableRecyclers ” ಈ ಹಾಡು ಕೊಂಡಾಡುತ್ತದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತದೆ. ಬಿಬಿಸಿ ಮೀಡಿಯಾ ಆಕ್ಷನ್ ನಗರದ ಸರ್ಕುಲಾರ್ ಎಕಾನಮಿಯಲ್ಲಿ ಈ ಹ್ಯಾಪಿ ನಂಬರ್ ಹಾಡು ಮತ್ತು ಅಭಿಯಾನದ ಮೂಲಕ, ತ್ಯಾಜ್ಯವನ್ನು ಆರಿಸುವ ವೃತ್ತಿಗೆ ಕೌಶಲ್ಯ ಮತ್ತು ಪರಿಣತಿಯನ್ನು ತಂದು ಅವರ ಪಾತ್ರವನ್ನು ಹೈಲೈಟ್ ಮಾಡುತ್ತದೆ.
ಹ್ಯಾಪಿ ನಂಬರ್ ಹಾಡನ್ನು ಸಂಯೋಜಿಸಿದ ಸಂಗೀತಗಾರ ವಾಸು ದೀಕ್ಷಿತ್ (@dixitvasu), “ಬೆಂಗಳೂರಿನ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ವಿಚಾರದಲ್ಲಿ ನಾಗರಿಕರಾದ ನಮಗೆ ಹೊಣೆಗಾರಿಕೆ ಇದೆ.ನಮ್ಮ ಪರಿಸರವನ್ನು ರಕ್ಷಿಸುವ ಅವರಿಗೆ ಅರ್ಹ ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುವ ಹೊಣೆಗಾರಿಕೆ ಅದು. ನಾವು ಅವರಿಗೆ ನೀಡುವ ತ್ಯಾಜ್ಯ ಮರುಬಳಕೆಗೆ ಯೋಗ್ಯವಾದುದು ಎಂಬುದನ್ನು ನಾವು ಖಾತರಿಪಡಿಸಬೇಕು. ಹ್ಯಾಪಿ ನಂಬರ್ ಹಾಡು ಅವರನ್ನು ಮತ್ತು ಅವರ ಕೆಲಸವನ್ನು ಪರಿಚಯಿಸಿ ಸಂಭ್ರಮಿಸುವುದಕ್ಕೆ ನನಗೆ ಸಿಕ್ಕ ಉತ್ತಮ ಅವಕಾಶ.
ಬೆಂಗಳೂರಿಗರು ಜೊತೆಯಲ್ಲಿ ಹಾಡಿದರೆ ಮತ್ತು ತ್ಯಾಜ್ಯ ತೆಗೆಯುವವರನ್ನು ಗುರುತಿಸಿದರೆ ಆ ಕನಸು ನನಸಾದಂತೆ ಆಗುತ್ತದೆ ಎಂದು ಹೇಳಿದರು.
ಬಿಬಿಸಿ ಮೀಡಿಯಾ ಆಕ್ಷನ್ನ ಸಂಶೋಧನೆಯ ಪ್ರಕಾರ, ಬೆಂಗಳೂರಿನ ಬೀದಿಗಳಲ್ಲಿ ತ್ಯಾಜ್ಯವು ಗೋಚರಿಸುತ್ತಿದೆ. ವಾಸ್ತವದಲ್ಲಿ ಇದು ಕಳವಳಕಾರಿಯಾಗಿದ್ದರೂ, ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರು ವರ್ಚುವಲ್ ಆಗಿ ಹೆಚ್ಚಿನ ಜನರಿಗೆ ‘ಅಗೋಚರ’ವಾಗಿದ್ದಾರೆ ಎಂಬುದು ವ್ಯಕ್ತವಾಗಿದೆ. ಅಧ್ಯಯನ ಸಮೀಕ್ಷೆಯಲ್ಲಿ ಭಾಗವಹಿಸಿದ ಸುಮಾರು ಶೇಕಡ 55% ರಷ್ಟು ಜನ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರನ್ನು ನೋಡುವುದಕ್ಕೆ ಕೊಳಕಾಗಿ ಇರುತ್ತಾರೆ ಎಂದಿದ್ದಾರೆ.
ಶೇಕಡ 56% ರಷ್ಟು ಜನ ಕಟ್ಟಡ ಸಂಕೀರ್ಣಗಳು ಮತ್ತು ಸಮಾಜದೊಳಗೆ ಅವರ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ.
ಪ್ರಚಾರ ಪೂರ್ವದಲ್ಲಿ ಸಹಕರಿಸಿದ ಜನಪ್ರಿಯ ಹಾಸ್ಯ ನಿರೂಪಕಿ ಮತ್ತು ನಟಿ ಶ್ರದ್ಧಾ ಜೈನ್ (@AiyyoShraddha), “ಈ ಹ್ಯಾಪಿ ನಂಬರ್ ಹಾಡನ್ನು ಇನ್ನಷ್ಟು ಹೆಚ್ಚು ಜನರಿಗೆ ತಲುಪಿಸುವ ಅವಕಾಶ ಸಿಕ್ಕಿದ್ದು ಒಂದು ಸುಯೋಗವೆಂದು ಭಾವಿಸುತ್ತೇನೆ. ತ್ಯಾಜ್ಯ ಆಯುವವರು ಬೆಂಗಳೂರಿಗೆ ಏನು ಮಾಡುತ್ತಾರೆ ಎಂಬುದು ಮುಖ್ಯ. ಅವರ ಕೌಶಲ್ಯಪೂರ್ಣ ಕೆಲಸವು ನಮ್ಮ ಜೀವನವನ್ನು ಹಗುರಾಗಿಸುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಹ್ಯಾಪಿ ನಂಬರ್ ಮತ್ತು #InvaluableReclyers ಅಭಿಯಾನವು ಅವರ ಪಾತ್ರದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ಬೆಂಗಳೂರಿನ ಜನರು ಅವರ ಕೊಡುಗೆಯನ್ನು ಗುರುತಿಸಬೇಕಾಗಿದೆ” ಎಂದು ಹೇಳಿದರು.
ಪ್ಲಾಸ್ಟಿಕ್ ಅನ್ನು ಪರಿಣಾಮಕಾರಿಯಾಗಿ ಮರುಬಳಕೆ ಮಾಡುವುದಕ್ಕಾಗಿ ತ್ಯಾಜ್ಯ ಆಯುವವರು, ಗೋಡೌನ್ ಪ್ರಕಾರವನ್ನು ಅವಲಂಬಿಸಿ ಅವುಗಳನ್ನು 35 ರಿಂದ 70 ಕ್ಕೂ ಹೆಚ್ಚು ವರ್ಗಗಳಾಗಿ ವಿಂಗಡಿಸುತ್ತಾರೆ. ನೋಟ, ಸ್ಪರ್ಶದ ಧ್ವನಿ ಮತ್ತು ದಪ್ಪದ ಆಧಾರದ ಮೇಲೆ ವಸ್ತುಗಳನ್ನು ಗುರುತಿಸುವಲ್ಲಿ ಇವರು ಪರಿಣತರು ಮತ್ತು ಅನುಭವಿಗಳು.
ಗೊಬ್ಬರ ತಯಾರಿಕೆ ಮತ್ತು ನಗರ ಕೃಷಿ ಬಗ್ಗೆ ಒಲವು ಹೊಂದಿರುವ ಪರಿಸರವಾದಿ ವಾಣಿ ಮೂರ್ತಿ (@WormRani), “ನಗರದಿಂದ ಉತ್ಪತ್ತಿಯಾಗುವ ಪ್ಲಾಸ್ಟಿಕ್ ಮತ್ತು ಪೆಟ್ ತ್ಯಾಜ್ಯವನ್ನು ಸಂಗ್ರಹಿಸಿ ಮರುಬಳಕೆ ಮಾಡುವಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರು ಪ್ರಮುಖ ಪಾತ್ರ ವಹಿಸುತ್ತಾರೆ. ನಾವು ಪ್ಲಾಸ್ಟಿಕ್ ಆಹಾರದ ಪಾತ್ರೆಗಳನ್ನು ತ್ಯಾಜ್ಯವೆಂದು ಬಿಸಾಡುವ ಮೊದಲು ತೊಳೆಯುವಂತಹ ಸರಳ ಕ್ರಮಗಳನ್ನು ಅನುಸರಿಸಿದರೆ ಸಾಕು.
ಈ ಕ್ರಮವು ಪ್ಲಾಸ್ಟಿಕ್ ಅನ್ನು ಮರುಬಳಕೆಗೆ ಯೋಗ್ಯವಾಗಿಸುತ್ತದೆ. ಮಾತ್ರವಲ್ಲದೆ ತ್ಯಾಜ್ಯ ಸಂಗ್ರಾಹಕರ ಕೆಲಸವನ್ನು ಸುಲಭ ಮಾಡುತ್ತದೆ. ಅದೇ ರೀತಿ, ಆಹಾರ ಅಥವಾ ತ್ಯಾಜ್ಯ ಕೊಳೆತು ಸಂಗ್ರಾಹಕರಿಗೆ ಆಗಬಹುದಾದ ಅಪಾಯದಿಂದ ರಕ್ಷಿಸುತ್ತದೆ. ಒಟ್ಟಾಗಿ, ನಾವು ಬಿಸಾಡುವ ತ್ಯಾಜ್ಯದ ಮೌಲ್ಯವನ್ನು ತಿಳಿದಿರುವ ಜನರನ್ನು ಆದರಿಸೋಣ ಮತ್ತು ಗೌರವಿಸೋಣ”.
ಬೆಂಗಳೂರು ನಗರದಲ್ಲಿ ತ್ಯಾಜ್ಯ ಸಂಗ್ರಹ ಮತ್ತು ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಬಗ್ಗೆ ಇರುವ ಗ್ರಹಿಕೆಗಳನ್ನು ಬದಲಾಯಿಸುವ ನಿಟ್ಟಿನಲ್ಲಿ ಬಿಬಿಸಿ ಮೀಡಿಯಾ ಆಕ್ಷನ್ನ #Invaluables ಸಾಮಾಜಿಕ ಮಾಧ್ಯಮ ಅಭಿಯಾನದ ಎರಡನೇ ಹಂತ ಈ #InvaluableRecyclers. ಹಿಂದಿನ ಹಂತದ ಈ ಅಭಿಯಾನದ ನಂತರದಲ್ಲಿ ನಡೆದ ಸಂಶೋಧನೆಯು ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಜಾಗೃತಿ ವಿಚಾರಕ್ಕೆ ಪ್ರತಿಕ್ರಿಯಿಸಿದವರಲ್ಲಿ ಸುಮಾರು ಶೇಕಡ 6% ರಷ್ಟು ಹೆಚ್ಚಳವಾಗಿದೆ.
ತ್ಯಾಜ್ಯವನ್ನು ಆರಿಸುವ ಮತ್ತು ವಿಂಗಡಿಸುವ ಮೂಲಕ ಪರಿಸರಕ್ಕೆ ಸಹಾಯ ಮಾಡುವಲ್ಲಿ ಅವರ ಕೊಡುಗೆಯ ಅರಿವು ಅವರಿಗೆ ಆಗಿದೆ.
ಬೆಂಗಳೂರಿನಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಾಹಕರ ಜೀವನವನ್ನು ಸುಧಾರಿಸುವುದಕ್ಕಾಗಿ ಬಿಬಿಸಿ ಮೀಡಿಯಾ ಆಕ್ಷನ್ ಮಾಡುತ್ತಿರುವ ಕೆಲಸವು ಎಚ್&ಎಂ ಫೌಂಡೇಶನ್ ಅನುದಾನಿತ ಸಾಮೂಹಿಕ ಶಕ್ತಿ ಉಪಕ್ರಮದ ಭಾಗವಾಗಿದೆ. ಕೇರ್ ಇಂಡಿಯಾ, ಹಸಿರು ದಳ, ಲೇಬರ್ನೆಟ್, ಸೇವ್ ದಿ ಚಿಲ್ಡ್ರನ್, ಸೋಷಿಯಲ್ ಆಲ್ಫಾ ಮತ್ತು ವಾಟರ್ಏಡ್, ಜೊತೆಗೆ ದಿ ನಡ್ಜ್ ಫೌಂಡೇಶನ್ ಮಧ್ಯಸ್ಥಿಕೆಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತ ಈ ಸಹಯೋಗದ ಪಾಲುದಾರಿಕೆ ಹೊಂದಿವೆ.
ಬಿಬಿಸಿ ಮೀಡಿಯಾ ಆಕ್ಷನ್ನ ಕಿರುಪರಿಚಯ
ಬಿಬಿಸಿ ಮೀಡಿಯಾ ಆಕ್ಷನ್ ಎಂಬುದು ಬಿಬಿಸಿ ಅಂತಾರಾಷ್ಟ್ರೀಯ ಚಾರಿಟಿಯಾಗಿದೆ. ನಾವು ಮಾಧ್ಯಮ ಮತ್ತು ಸಂವಹನವಿರುವುದು ಒಳಿತಿಗಾಗಿ ಎಂದು ನಂಬುತ್ತೇವೆ. ಪ್ರಪಂಚದ ಕೆಲವು ಬಡ ಮತ್ತು ಅತ್ಯಂತ ದುರ್ಬಲ ದೇಶಗಳಲ್ಲಿ ನಾವು ಪ್ರತಿ ವರ್ಷ 100 ಮಿಲಿಯನ್ಗಿಂತಲೂ ಹೆಚ್ಚು ಜನರನ್ನು ತಲುಪುತ್ತೇವೆ. ನಮ್ಮ ಯೋಜನೆಗಳು ಮತ್ತು ಕಾರ್ಯಕ್ರಮಗಳು ಜೀವಗಳನ್ನು ಉಳಿಸುತ್ತವೆ ಹಾಗೂ ಜೀವನೋಪಾಯವನ್ನು ರಕ್ಷಿಸುತ್ತವೆ. ಅದೇ ರೀತಿ ತಪ್ಪು ಮಾಹಿತಿಯನ್ನು ನಿವಾರಿಸುತ್ತವೆ. ಪೂರ್ವಾಗ್ರಹಗಳಿಗೆ ಸವಾಲೊಡ್ಡಿ ಪ್ರಜಾಪ್ರಭುತ್ವಕ್ಕೆ ಬಲ ತುಂಬುತ್ತೇವೆ ಮಾನವ-ಕೇಂದ್ರಿತ ವಿನ್ಯಾಸ ವಿಧಾನವನ್ನು ಬಳಸಿಕೊಂಡು ಮಾಡುವ ನಮ್ಮ ಕೆಲಸವು ಪುರಾವೆಗಳು ಮತ್ತು ಒಳನೋಟಗಳಿಂದ ಕೂಡಿಕೊಂಡಿದೆ.
ಸಾಮಾಜಿಕ ಮತ್ತು ನಡವಳಿಕೆಯ ಬದಲಾವಣೆಯನ್ನು ತರುವುದಕ್ಕಾಗಿ ಪ್ರಭಾವ-ಪರೀಕ್ಷಿತ, ಸ್ಕೇಲೆಬಲ್, ದೊಡ್ಡ ಆಲೋಚನೆಗಳನ್ನು ನಿಯಂತ್ರಿಸುತ್ತ ಮುನ್ನಡೆಯುತ್ತೇವೆ. ಭಾರತದಲ್ಲಿ ಕಳೆದ ಎರಡು ದಶಕಗಳಲ್ಲಿ, ನಾವು ಆರೋಗ್ಯ (ಎಚ್ಐವಿ ತಡೆಗಟ್ಟುವಿಕೆ, ಕ್ಷಯರೋಗ, ರೋಗನಿರ್ಣಯ ಮತ್ತು ಚಿಕಿತ್ಸೆ, ಸಂತಾನೋತ್ಪತ್ತಿ, ತಾಯಿಯ, ನವಜಾತ ಶಿಶುಗಳು ಮತ್ತು ಮಕ್ಕಳ ಆರೋಗ್ಯ), ನೈರ್ಮಲ್ಯ, ಲಿಂಗ ಸಮಾನತೆ, ಹವಾಮಾನ ಬದಲಾವಣೆ ಮತ್ತು ಜೀತ ತಡೆಗಟ್ಟುವಿಕೆಯಲ್ಲಿ ನಿರ್ಣಾಯಕ ಪಾತ್ರವನ್ನು ನಿರ್ವಹಿಸಿದ್ದೇವೆ.
ವೆಬ್ಸೈಟ್:https://www.bbc.co.uk/mediaaction/where-we-work/asia/india/
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ5 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ3 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

