Connect with us

ಬಹಿರಂಗ

ಕತ್ತೆಗೆ ಇಲ್ಲದ ಹಿರಿಮೆ ಗೋವಿಗೇಕೆ..!

Published

on

ದು ಆಗಸ್ಟ್ 15. ಸ್ವಾತಂತ್ರ್ಯ ದೊರೆತ ದಿನ.ಕೀಲರಾಘವೇಂದ್ರ ಅವರೊಡನೆ 7 ದಶಕಗಳಲ್ಲಿ ನಾವುಗಳುಸಾಗಿಬಂದ ಹಾದಿಯನ್ನು ಮೆಲುಕುಹಾಕುತ್ತಿದ್ದೆ.ನಮ್ಮಮಾತುಕತೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಸುತ್ತಿಬಂತು. ಮಾತಿನ ಮಧ್ಯೆದಲ್ಲಿ ಗೋವಿನ ಹೆಸರಲ್ಲಿ ನರಮೇಧನಡೆಯುತ್ತಿದೆ. ಜನ ಅಭದ್ರತೆ, ಭಯ, ಆತಂಕದಿಂದ ಬದುಕುದೂಡುವ ಸ್ಥಿತಿ ನಿರ್ಮಾಣವಾಯಿತಲ್ಲ ಎಂಬ ವಿಚಾರವೂಬಂದಿತು. ನಾನಾಗ ಗೋವು ಕಾಮಧೇನು.ಅದರ ಹಾಲು,ಗಂಜಲ,ಸೆಗಣಿ ಎಲ್ಲವೂ ಬಳಕೆಗೆ ಯೋಗ್ಯ. ಸಾಲದಕ್ಕೆಹಿಂದುಳಿದ ಗೊಲ್ಲ ಸಮುದಾಯದ ಜೀವನಾಧಾರ ಕೂಡಆಗಿದೆ. ಆದರೆ, ಗೋವಿಗಿಂತ ಕತ್ತೆ ಬಹುಪಯೋಗಿ. ಇದನ್ನೇಕೆಜನ ಪೂಜಿಸುವುದಿಲ್ಲ, ಗೌರವಿಸುವುದಿಲ್ಲ? ಇದರ ರಕ್ಷಣೆಗಾಗಿಬಡಿದಾಡುವುದಿಲ್ಲ. ಸಂರಕ್ಷಣೆಗಾಗಿ ಸಮಿತಿಯನ್ನು ಮಾಡಿಲ್ಲ. ಸರ್ಕಾರ ಕೂಡ ಒಂದು ಬಿಡಿಗಾಸನ್ನೂ ಕತ್ತೆ ಸಂರಕ್ಷಣೆಗೆನೀಡಿಲ್ಲ ಎಂದುಒಂದೇ ಸಮನೆ ಉಸುರಿದೆ.ಎದುರು ಕುಳಿತಿದ್ದವಕೀಲ ರಾಘವೇಂದ್ರ ಹೌದಲ್ವ! ಗೋವಿಗೆ ನೀಡಿದಷ್ಟು ಮಹತ್ವಕತ್ತೆಗೇಕೆ ನೀಡಿಲ್ಲ? ನಾವೇಕೆ ಕತ್ತೆ ಸಂರಕ್ಷಣೆಗಾಗಿ ಹೋರಾಟ ಮಾಡಬಾರದೆಂದು ಪ್ರಶ್ನಿಸಿದರು.

ಇದೇ ಹೊತ್ತಿನಲ್ಲಿ ನಾಲ್ಕು ಘಟನೆಗಳು ನನ್ನನ್ನು ಬಹುವಾಗಿಕಾಡಿದವು. ಒಂದು ಉತ್ತರಖಂಡ್ ವಿಧಾನಸಭೆಯಲ್ಲಿ ಅಲ್ಲಿನಪಶುಸಂಗೋಪನಾ ಇಲಾಖೆ ಸಚಿವೆ ರೇಖಾ ಆರ್ಯ ಗೋವಿಗೆ’ರಾಷ್ಟ್ರಮಾತೆ’ ಸ್ಥಾನಮಾನ ನೀಡಬೇಕೆಂಬ ನಿರ್ಣಯಮಂಡಿಸಿದ್ದರು. ಎರಡು, ದೂರದ ಕೊಲಂಬಿಯಾದಲ್ಲಿಕತ್ತೆಗಳಿಗೆ ಸೌಂದರ್ಯ ಸ್ಪರ್ಧೆಯನ್ನು ಏರ್ಪಡಿಸಿದ್ದರು. ಕಳೆದ15 ವರ್ಷಗಳಿಂದ ಮೋನಿಕ್ಯುಯಿರಾ ಪಟ್ಟಣದಲ್ಲಿ ಕತ್ತೆಉತ್ಸವ ಆಯೋಜಿಸಲಾಗುತ್ತಿದೆ. ಮೂರು, ಈಜಿಪ್ಟ್‌ನ ಮೃಗಾಲಯದಲ್ಲಿ ಕತ್ತೆಗೆ ಕಪ್ಪು-ಬಿಳಿ ಬಣ್ಣ ಬಳಿದು ’ಜೀಬ್ರಾ’ ಎಂದು ಜನರನ್ನು ನಂಬಿಸುತ್ತಿದ್ದರಂತೆ. ಇದನ್ಹೇಗೋಅರಿತವನೊಬ್ಬ ನಕಲಿ ಜೀಬ್ರಾದ ಫೋಟೋ ಸೆರೆ ಹಿಡಿದುಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾನೆ. ನಾಲ್ಕು, ಗಾಜಾದಲ್ಲಿರುವ ಎರಡು ಕತ್ತೆಗಳಿಗೆ ಬಣ್ಣ ಬಳಿದು ಜೀಬ್ರಾಎಂದು ನಂಬಿಸಲಾಗಿದೆ. ಇದೇ ರೀತಿ ಚೀನಾಮೃಗಾಲಯವೊಂದರಲ್ಲಿ ಟಿಬೇಟಿಯನ್‌ನ ಮುಸ್ಟೀಫ್ಜಾತಿಯ ನಾಯಿಯೊಂದನ್ನು ಸಿಂಹ ಎಂದುನಂಬಿಸಲಾಗಿತ್ತು. ಜನ ಬೋನಿನ ಬಳಿ ಹೋದಾಗ ಸಿಂಹಸ್ವರೂಪದ ನಾಯಿ ಬೊಗಳಿ ತನ್ನ ನಿಜ ಬಣ್ಣ ತಿಳಿಸಿದೆ! ಇದನ್ನೆಲ್ಲಾ ಕೇಳಿದಾಗ ಅಮಾಯಕ ಪ್ರಾಣಿಗಳನ್ನು ಮನುಷ್ಯತನ್ನ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳುವುದನ್ನುಕಾಣಬಹುದು. ಅತ್ಯಂತ ಸಾಧು ಪ್ರಾಣಿ ಎಂದೇಕರೆಸಿಕೊಂಡಿರುವ ಹಸು ಕೂಡ ಕೋಪ ಬಂದಾಗಒದೆಯುವುದು, ಹಾಯುವುದು ಮಾಡುತ್ತದೆ. ಸ್ವಾಮಿನಿಷ್ಟೆಗೆಹೆಸರಾದ ನಾಯಿ ಕೂಡ ತನ್ನ ಯಜಮಾನನನ್ನು ಕಚ್ಚಿರುವಉದಾಹರಣೆಗಳಿವೆ. ಆದರೆ, ಕತ್ತೆಯ ಮೇಲೆ ಎಷ್ಟೇ ಮಣಭಾರಹಾಕಿ, ಮೇವು, ನೀರು ನೀಡದಿದ್ದರೂ ಅದುವ್ಯಗ್ರಗೊಳ್ಳುವುದಿಲ್ಲ. ಹೊಟ್ಟೆ ತುಂಬಾ ಹಾಕಿದರೂ ಅದು ಸಂತಸಗೊಳ್ಳುವುದಿಲ್ಲ. ಸದಾ ಸಮಚಿತ್ತದಿಂದ ಕೂಡಿರುತ್ತದೆ. ಸುಖದುಃಖ ಯಾವುದಕ್ಕೂ ತಲೆಕೆಡಿಸಿಕೊಳ್ಳದೇ, ತಾನು ಜನ್ಮತಳೆದಿರುವುದೇ ಸೇವೆಗಾಗಿ, ಇನ್ನೊಬ್ಬರ ಹಿತಕ್ಕಾಗಿ ಎಂದುಕಿವುಡನಂತೆ, ಮೂಕನಂತೆ ಬದುಕು ಸವೆಸುತ್ತದೆ.ಗಡಿಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಎಂತಹುದ್ದೇಕುರುಕಲು ಸ್ಥಳ ಇದ್ದರೂ, ಸೈನಿಕರಿಗೆಊಟ – ನೀರು, ಮದ್ದುಗುಂಡುಸಾಗಿಸುವ ಏಕೈಕ ಜೀವಿ ಕತ್ತೆ. ಮನುಷ್ಯನಿಂದತಲುಪಲು, ಹೊರಲು ಆಗದ ಭಾರವನ್ನು ಹೊತ್ತು ನಿಸ್ವಾರ್ಥಸೇವೆ ನೀಡುವ ಜೀವಿ ಕತ್ತೆ. ತನ್ನ ಹೆಗಲ ಮೇಲೆ ಮೈಲಿಗೆ ಬಟ್ಟೆ, ಮಡಿಬಟ್ಟೆ; ಸ್ಪೃಷ್ಯರ ಬಟ್ಟೆ, ಅಸ್ಪೃಷ್ಯರ ಬಟ್ಟೆ; ಬಡವನ ಬಟ್ಟೆ – ಶ್ರೀಮಂತನ ಬಟ್ಟೆ ಎಂದೆಲ್ಲಾ ಎಣಿಸದೇ ಹೊತ್ತು ಸಾಗುವ ಕತ್ತೆನಿಜಾರ್ಥದಲ್ಲಿ ’ಜಾತ್ಯಾತೀತ’ವಾದಿ. ಗೋವಿನ ಹಾಲನ್ನುಜೀವನಪೂರ್ತಿಸೇವಿಸಬೇಕು.ಕತ್ತೆ ಹಾಲನ್ನು ಜೀವನದಲ್ಲೊಮ್ಮೆಸೇವಿಸಿದರೆ ಸಾಕು ಅದು One time booster. ಐದು ಹನಿಕತ್ತೆ ಹಾಲು 100 ವರ್ಷ ರೋಗ ನಿರೋಧಕ ಶಕ್ತಿಯಾಗಿಕಾರ್ಯನಿರ್ವಹಿಸುತ್ತೆ. ನನಗೆ ಈಗಲೂ ನೆನಪಿದೆ. ಸಣ್ಣವನಿದ್ದಾಗ ನನಗೂ ಕತ್ತೆ ಹಾಲು ಕುಡಿಸಲಾಗಿತ್ತು. ಮಾತ್ರವಲ್ಲ, ನಾನು ನನ್ನ ಮೂರು ಮಕ್ಕಳಿಗೂ ಕತ್ತೆ ಹಾಲಿನ booster ಹಾಕಿಸಿರುವೆ.

ಕತ್ತೆಗಳನ್ನಿಂದು ಅಭಿವೃದ್ಧಿ ಕಾಣದ ರಾಷ್ಟ್ರಗಳಲ್ಲಿಯೇ ಹೆಚ್ಚಾಗಿಬಳಸಲಾಗುತ್ತಿದೆ. ಇವನ್ನು ಸರಕು ಸಾಗಾಣಿಕೆಗೆ ಮಾತ್ರವಲ್ಲದೇ, ಕೃಷಿ ಬಳಕೆಗೆ, ಬರ ಪರಿಹಾರದಕಾರ್ಯಗಳಲ್ಲಿಯೂ ಬಳಸಿಕೊಳ್ಳಲಾಗುತ್ತಿದೆ. ಕೃಷಿಯಲ್ಲಿಅತ್ಯಂತ ಅಗ್ಗದ ಬೆಲೆಗೆ ಬಳಕೆಯಾಗುವ ಶ್ರಮಜೀವಿಗಳಲ್ಲಿಮನುಷ್ಯ ಮೊದಲಿಗನಾದರೆ, ಕತ್ತೆ ಎರಡನೇ ಸ್ಥಾನವನ್ನುಅಲಂಕರಿಸಿದೆ. ಕತ್ತೆಯನ್ನು ಕುರಿ ಕಾಯಲೂ ಬಳಸಲಾಗುತ್ತದೆ. ಕತ್ತೆ ಸವಾರಿ ಮಕ್ಕಳಿಗೆ ಮಾತ್ರವಲ್ಲ, ಪ್ರಯಾಣಿಕರಿಗೂ ಅಚ್ಚುಮೆಚ್ಚು.ಕತ್ತೆ ಹಾಲು ಮತ್ತು ಮಾಂಸಕ್ಕೆ ಇಟಲಿಯಲ್ಲಿ ಹೆಚ್ಚು ಬೇಡಿಕೆಇದೆ. ಯೂರೋಪ್‌ನ ಹಲವು ಕಡೆ ಮಾಂಸದ ಖಾದ್ಯಗಳುಹೆಚ್ಚು ಜನಪ್ರಿಯಗೊಂಡಿವೆ. ಇದರ ಹಾಲಿನಿಂದ ಸೋಪು, ಕ್ರೀಂಗಳನ್ನು ಉತ್ಪಾದಿಸಲಾಗುತ್ತದೆ. ಕತ್ತೆಯ ಹಾಲು, ಕ್ರೀಂನಿಂದ ಚರ್ಮವ್ಯಾದಿಗಳು ಗುಣವಾಗುತ್ತವೆ. ಅಲ್ಲದೆಕತ್ತೆಯ ಚರ್ಮವನ್ನು ಕಾಗದ ತಯಾರಿಸಲು ಬಳಸಲಾಗುತ್ತದೆ. ಕತ್ತೆಯ ಮಾಂಸದಲ್ಲಿ ರೋಗ ನಿರೋಧಕ ಶಕ್ತಿಹೆಚ್ಚಾಗಿರುವುದರಿಂದ ಚೀನಿಯರಂತು ಮುಗಿಬಿದ್ದುತಿನ್ನುತ್ತಾರೆ.ಇವನ್ನೆಲ್ಲಾ ಕಂಡಾಗ ಅಮಾಯಕ ಪ್ರಾಣಿಗಳನ್ನು ಮನುಷ್ಯತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿರುವುದು ಕಂಡುಬರುತ್ತದೆ. ಇಲ್ಲಿ ಕತ್ತೆಯನ್ನು ಬಲಿಪಶು ಮಾಡಲಾಗಿದೆ ಎಂದುಮೇಲ್ನೋಟಕ್ಕೆ ಅನಿಸಬಹುದು. ಆದರೆ, ವಾಸ್ತವದಲ್ಲಿ ಬಲಿಪಶುಕತ್ತೆಯಲ್ಲ, ಬದಲಾಗಿ ಮನುಷ್ಯನೇ ಆಗಿದ್ದಾನೆ.ಕತ್ತೆಯನ್ನು ಜೀಬ್ರಾ ಎಂದು ಬಣ್ಣಿಸಲು, ತೋರಿಸಲು, ವೈಭವೀಕರಿಸಬೇಕಾಗುತ್ತದೆ. ಚತುರತೆ ಮತ್ತು ಬುದ್ಧಿವಂತಿಕೆಎರಡನ್ನೂ ಬೆರಸಿ ಜನರನ್ನು ನಂಬಿಸಬೇಕಾಗುತ್ತದೆ. ಪಾಪದಕತ್ತೆ ಹೊಸವೇಷ ಹೊತ್ತು, ತಾನು ಜೀಬ್ರಾ ಎಂದುತೋರಿಸಿಕೊಳ್ಳುವ ದುಸ್ಥಿತಿಯಲ್ಲಿದೆ. ’ಒಂದು ಭ್ರಷ್ಟ ಕತ್ತೆ ಹೆಚ್ಚಿನಮಟ್ಟದ ಪುರಸ್ಕಾರಕ್ಕೆ ಪಾತ್ರವಾಗುತ್ತದೆ’. ’ಹಗರಣದ ಕತ್ತೆಕಾನೂನಿನ ಅಡಿಯಲ್ಲಿ ಆಶ್ರಯ ಪಡೆಯುತ್ತದೆ’. ’ಎದುರಾಡದಕತ್ತೆಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’. ’ವಂಚಕ ಕತ್ತೆಹುಲುಸಾಗಿ ಬೆಳೆಯುತ್ತದೆ’. ಕತ್ತೆಯ ಈ ಎಲ್ಲಾ ರೂಪಕಗಳುಜೀವಂತವಾಗಿ ಮನುಜರಲ್ಲಿಯೂ ಇವೆ. ಕೆಲವು ಕಡೆಕತ್ತೆಗಳನ್ನು ಮಳೆ ಬಾರದಿದ್ದಾಗ ಪೂಜೆ ಮಾಡಲು, ಮದುವೆಮಾಡಿಸಲು ಬಳಸಲಾಗುತ್ತದೆ. ವಿಚಿತ್ರವೆಂದರೆ, ಹೊಲಸುತಿನ್ನುವ ಹಂದಿಗಳನ್ನು ಗುಡಿಯಲ್ಲಿಟ್ಟು ಪೂಜಿಸಲಾಗುತ್ತದೆ!’ದಿನ ಬೆಳಗೆದ್ದು ನನ್ನನ್ನು ನೋಡಿ, ನಿಮಗೆ ಶುಭವಾಗುತ್ತದೆ’ ಎಂದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾರಾಟವಾಗುವ ಕತ್ತೆ, ಅಲೆದಾಡಿ ಹೊಟ್ಟೆ ತುಂಬಿಸಿಕೊಳ್ಳಬೇಕು. ನಿರ್ಲಕ್ಷಕ್ಕೆಈಡಾಗುವ ಕತ್ತೆ ಎರಡನೇ ದರ್ಜೆಯ ಪ್ರಾಣಿ. ಶೋಷಿತ ಪ್ರಾಣಿಆಗಿದೆ. ಮನುಷ್ಯ ತನ್ನ ಅನುಕೂಲಕ್ಕಾಗಿ ಕತ್ತೆಯನ್ನುಜೀಬ್ರಾವನ್ನಾಗಿ, ಸಿಂಹವನ್ನಾಗಿ ಹೇಗೆ ಬೇಕಾದರೂಬದಲಾಯಿಸಿಬಿಡುತ್ತಾನೆ. ಹೀಗೆ ಬಣ್ಣ ಬಳಿಸಿಕೊಂಡ ಕತ್ತೆಗಳುಹಾಗೆಯೇ ಇರುವುದಿಲ್ಲ. ಮಳೆ ಬಿದ್ದರೆ ಅವು ಕತ್ತೆಯಾಗುತ್ತವೆ. ಅದು ಪ್ರಧಾನಿ ಬಟ್ಟೆ ಹೊತ್ತು ನಡೆದರೂ ಸರಿ, ಪರಿಚಾರಕನಬಟ್ಟೆ ಹೊತ್ತು ನಡೆದರೂ ಸರಿ, ಅದರ ಬೆನ್ನು ತೂಕಹೊರಲೇಬೇಕು. ನನಗನಿಸಿದಂತೆ ಇವು ಟನ್‌ಗಟ್ಟಲೆ ತೂಕಮಾತ್ರ ಹೊರುವುದಿಲ್ಲ, ಅವಮಾನವನ್ನು ಹೊರುತ್ತವೆ. ಯಾವುದೇ ಬಣ್ಣ ಬಳಿದುಕೊಂಡರೂ ಕತ್ತೆಯಾಗಿಯೇಉಳಿಯುತ್ತವೆ.

ಯಾರನ್ನಾದರೂ ಕೂಗಿದಾಗ ಸ್ಪಂದಿಸದಿದ್ದರೆ, ಏಯ್ ಕತ್ತೆಎಂದು ಕೂಗಿ ಕರೆಯುವುದು ವಾಡಿಕೆಯಾಗಿಬಿಟ್ಟಿದೆ. ಎಲ್ಲರೂಕತ್ತೆಯನ್ನು ಕಿವುಡ, ಮೂಕ ಪ್ರಾಣಿ ಎಂದುಕೊಂಡುಬಿಟ್ಟಿದ್ದಾರೆ. ಇದು ಮೂಕವೂ ಅಲ್ಲ, ಬದಲಿಗೆ ಅತೀವ ತಾಳ್ಮೆಯನ್ನುಹೊಂದಿದೆ. ಹೀಗಾಗಿಯೆ ಕತ್ತೆಗೆ ಇಂತಹದ್ದೊಂದು ವಿಶೇಷಣಬಂದಿರಬಹುದು.ಕತ್ತೆಯ ಮುಂದೆ ನೀರು ಮತ್ತು ಆಹಾರ ಎರಡನ್ನೂ ಇಟ್ಟರೆ, ಯಾವುದನ್ನೂ ಸೇವಿಸದೆ ಪ್ರಾಣ ಬಿಡುತ್ತದೆ. ಕಾರಣ ಕತ್ತೆಗೆಹಸಿವು ಮತ್ತು ದಾಹ ಎರಡರಲ್ಲಿ ಯಾವುದನ್ನು ಮೊದಲಿಗೆಆಯ್ಕೆ ಮಾಡಿಕೊಳ್ಳಬೇಕೆಂಬ ಜ್ಞಾನ ಹೊಂದಿರುವುದಿಲ್ಲ. ಕತ್ತೆಯ ಮೇಲೆ ಹಣ ಹೂಡಿರಿ. ಅದು ನಿಮಗೆ ಸದಾವಿಧೇಯತೆಯಿಂದ ನಡೆದುಕೊಳ್ಳುತ್ತದೆ. ನಿಮ್ಮನ್ನು ಸ್ವಾಮಿಎಂಬಂತೆ ಭಾವಿಸುತ್ತದೆ. ಅದರಲ್ಲೂ ಕತ್ತೆಗಳು ಹೆಂಗಸರಂತೆಆಡು-ಕುರಿಗಳಂತೆ ತಲೆ ತಗ್ಗಿಸಿಕೊಂಡು ಹೇಳಿದ್ದನ್ನು ಪಾಲಿಸುತ್ತದೆ. ಕೆಲೆವೆಡೆ ಕುದುರೆಗಿಂತ ಕತ್ತೆ ವಾಸಿ ಎಂಬಮಾತಿದೆ. ಕತ್ತೆಯ ಮೇಲೆ ಕೂತರೆ ಹೊರುತ್ತದೆ. ಹೊರಿಸಿದರೆಸಾಗುತ್ತದೆ. ಆದರೆ ಕುದುರೆ ಮೇಲೆ ಕೂತರೆ, ಹೊರಿಸಿದರೆ ಎತ್ತಿಬೀಸಾಡುತ್ತದೆ. ಹೀಗಾಗಿ ಕತ್ತೆ ಪವಿತ್ರ ಸ್ಥಳ ಮೆಕ್ಕಾಗಿ ಹೋಗಿಬಂದರೂ,ಅದು ಕತ್ತೆಯಾಗಿಯೇ ಬದುಕು ದೂಡುತ್ತದೆ.Democratic Party of UnitedStates ನ ಚಿಹ್ನೆ ಕೂಡಕತ್ತೆಯೇ ಆಗಿದೆ.ಕುದುರೆಗಿಂತ ಕತ್ತೆ ಬಲಶಾಲಿ.ಗಾಬರಿಗೆಒಳಗಾಗುವುದಿಲ್ಲ.ನೆನಪಿನ ಶಕ್ತಿಯೂ ಹೆಚ್ಚಾಗಿದೆ. ಒಮ್ಮೆಒಂದು ದಾರಿಯಲ್ಲಿ ಸಾಗಿದರೆ 20 ವರ್ಷವಾದರೂ ಆದಾರಿಯನ್ನು ಗುರುತಿಟ್ಟುಕೊಂಡು ಸಾಗುವ ಪ್ರಾಣಿ. ಜೊತೆಗೆಇದು ಒಂಟಿಯಾಗಿ ಇರಲು ಬಯಸುವುದಿಲ್ಲ. ಜೋಡಿಇರಲೇಬೇಕು. ಇಲ್ಲ ಆಡು,ಕುರಿಯ ಸಂಗಡವಾದರೂಇರಬೇಕು. ಮಾನವನಿಗೆ ಕತ್ತೆಯು ಶತಮಾನಕ್ಕೂ ಹಿಂದಿನಿಂದಸಹಕಾರಿಯಾಗಿದೆ.ಗಂಡುಕತ್ತೆ, ಹೆಣ್ಣು ಕುದುರೆಯೊಂದಿಗೆ ಕೂಡಿದಾಗಜನಿಸುವುದೇ ಹೆಸರಗತ್ತೆ. ಗಂಡು ಕುದುರೆ, ಹೆಣ್ಣುಕತ್ತೆಯೊಂದಿಗೆ ಕೂಡಿದಾಗ ಜನಿಸುವುದು ಹಿನ್ನಿ. ಜೀಬ್ರಾ ಮತ್ತುಕತ್ತೆ ಕೂಡಿದಾಗ ಹುಟ್ಟುವುದು ಜೊಂಕಿ, ಜೀಬ್ರಾಯ್ಡ್ಎನ್ನುತ್ತಾರೆ.
ಹೆಸರಗತ್ತೆಯನ್ನು ಸರಕು ಸಾಗಾಣಿಕೆಗೆ ಬಳಸುವುದರಿಂದ, ಅವುಗಳನ್ನು ನಿರ್ವೀರ್ಯರನ್ನಾಗಿಸಲಾಗಿರುತ್ತದೆ. ಅಸಿನೋಡಿಮಾರ್ಟಿನಾ, ಫ್ರಾಂಕಾ, ಮೊಮತ್ತ್ ಜಾಕ್ ತಳಿಯಕತ್ತೆಗಳನ್ನು ಗೂಳಿಯಂತೆ ಬಳಸಲಾಗುತ್ತದೆ.

ಇಷ್ಟಕ್ಕೂ ಕತ್ತೆಯ ಮೂಲ ಸೊಮಾಲಿಯಾ. ಆಡುಕುರಿ, ಗೋವನ್ನು ಸಾಕುತ್ತಿದ್ದ ಕಾಲದಿಂದಲೂ ಕತ್ತೆ ಇದೆ. ಗಂಡುದನವನ್ನು ಕೃಷಿ ಮತ್ತು ಸಾಗಾಣಿಕೆಗೆ ಬಳಸುತ್ತಿದ್ದರೂ, ದುರ್ಗಮಹಾದಿ ಕ್ರಮಿಸಲು ಕತ್ತೆಯೇ ಬೇಕಿತ್ತು. ಇದಲ್ಲದೇ, ಕತ್ತೆ ತಿಂದಮೇವನ್ನು ಮೆಲುಕು ಹಾಕುತ್ತಾ, ನೀರಿನ ಅವಶ್ಯಕತೆಇಲ್ಲದೆಯೂ ಬದುಕುತ್ತದೆ. ಸಾಲದಕ್ಕೆ ಇದರ ಹಾಲನ್ನುಗೋವಿನ ಹಾಲಿನಂತೆ ಬಳಸಲಾಗಿದೆ. ಮಾಂಸವನ್ನುಸವಿಯಲಾಗಿದೆ.ಸಿರಿಯಾದಲ್ಲಿ ಕತ್ತೆಯನ್ನು ಅಲ್ಲಿನ ಡಿಯೋನಿಸಿಸ್ ದೇವತೆಗೆಹೋಲಿಸಲಾಗಿದೆ. ಈಜಿಪ್ಟ್‌ನಲ್ಲಿ ಮನುಷ್ಯರನ್ನು ಅಂತ್ಯಸಂಸ್ಕಾರ ಮಾಡಿದಂತೆ ಕತ್ತೆಗೂ ಅಂತಿಮ ಗೌರವಕೊಡಲಾಗಿದೆ. ೧೬೭೯ರಲ್ಲೇ ಆರಿಜೋನ ಎಂಬಲ್ಲಿ ಕತ್ತೆಯಬಳಕೆ ಕುರಿತಂತೆ ದಾಖಲೆಗಳಿವೆ. The Domestic Animal Diversity InformationSystem ನ 2006ರ ವರದಿಯಂತೆ ಜಗತ್ತಿನಲ್ಲಿ ೪೧ ಮಿಲಿಯನ್ ಕತ್ತೆಗಳಿವೆ. ಕತ್ತೆಯ ಬಳಕೆಯಲ್ಲಿ ಭಾರತಕ್ಕಿಂತ ಚೀನಾಮುಂದಿದೆ.
ಕತ್ತೆ ಸಂಸ್ಕೃತಿಯ ಒಂದು ಭಾಗ. ಈಜಿಪ್ಟಿನ ಸೂರ್ಯದೇವನಸಂಕೇತ ಕೂಡ ಕತ್ತೆ ಆಗಿದೆ. ಜೀಸಸ್ ಕೂಡ ಕತ್ತೆಯ ಮೇಲೆಸವಾರಿ ಮಾಡುತ್ತಾ ಜೆರುಸಲೇಂ ಪ್ರವೇಶಿಸಿದ್ದಾರೆ. ಬೈಬಲ್‌ನಹಲವು ಕಡೆ ಕತ್ತೆ ಕುರಿತಂತೆ ಉಲ್ಲೇಖಗಳಿವೆ. ಕತ್ತೆಯಹಿಂಭಾಗ ಮತ್ತು ತೋಳಿನ ಭಾಗದಲ್ಲಿ ಜೀಸಸ್ ಗುರುತುಹಾಕಿದ್ದಾರೆಂದು ಇಂದಿಗೂ ನಂಬಲಾಗಿದೆ. ಹಿಂದೂಧರ್ಮದಲ್ಲಿ ಕತ್ತೆ ಲಕ್ಷ್ಮಿಯ ವಾಹನ, ಕರಾಳ ರಾತ್ರಿ ದೇವರವಾಹನ ಎಂದೂ ನಂಬಲಾಗಿದೆ. ಪಂಚತಂತ್ರ ಕಥೆಗಳಲ್ಲಿ ಕೂಡಕತ್ತೆಯ ಉಲ್ಲೇಖ ಇದೆ.ಜೋಹರ್ ಧರ್ಮದಲ್ಲಿ ಮಾತ್ರ ಕತ್ತೆ ಅಶುದ್ಧ ಪ್ರಾಣಿ. ಹೋಮರ್‌ನ ಕಾವ್ಯಗಳಲ್ಲಿ, ಷೇಕ್ಸ್‌ಫಿಯರ್ ಸಾನೆಟ್ಟುಗಳಲ್ಲಿಕೂಡ ಕತ್ತೆಯ ಪಾತ್ರ ಇದೆ. ವಿಲಿಯಂ ವರ್ಡ್ಸ್‌ವರ್ಥ್ ತನ್ನ’ಬೆಲ್‌ಎಬೆಲ್’ನಲ್ಲಿ ಕತ್ತೆ ಕ್ರೈಸ್ತರ ಸಂಕೇತ. ಇದೊಂದು ವಿಧೇಯಮತ್ತು ತಾಳ್ಮೆಯ ಪ್ರಾಣಿ ಎಂದಿರುವನು.’ಕತ್ತೆಯೊಂದಿಗೆಪಯಣ’ ಕೃತಿಯಲ್ಲಿ ಕತ್ತೆ ಹಠಮಾರಿ ಮತ್ತು ಭಾರ ಹೊರುವಪ್ರಾಣಿ ಎಂದು ರಾಬರ್ಟ್ ಲೂಯಿಸ್ ಸ್ಟೀವನ್‌ಸನ್ಬಣ್ಣಿಸಿದ್ದಾನೆ. ೧೯೪೦ರಲ್ಲಿ ಬಂದ ಡಿಸ್ನಿ ಫಿಲಂ ಫಂಟಾಸಿಯಾಮತ್ತು ೧೯೬೭ರ ಬ್ರೈಟಿ ಆಫ್ ದಿ ಗ್ರ್ಯಾಂಡ್ ಕ್ಯಾಂಗನ್ಚಿತ್ರಗಳಲ್ಲಿಯೂ ಕತ್ತೆಯ ಪಾತ್ರವಿದೆ.

ಇತಿಹಾಸದ ಉದ್ದಕ್ಕೂ ಕತ್ತೆ ಎಂದರೆ ಭಾರ ಹೊರುವ ಪ್ರಾಣಿ. ಇದು ಸಾಮಾನ್ಯವಾಗಿ ೫೦೦ ಕೆ.ಜಿ. ವರೆಗೂ ತೂಗಬಲ್ಲವು. ೨೦ರಿಂದ ೩೦ ವರ್ಷಗಳ ಕಾಲ ಜೀವಿಸಬಲ್ಲವು. ಕತ್ತೆಮನುಷ್ಯರಂತೆ ಅವಳಿ ಮರಿಗಳಿಗೆ ಜನ್ಮ ನೀಡುವುದುಅಪರೂಪ. ಮನುಷ್ಯನಿಗಿಂತ ಅತ್ಯಂತ ಜತನವಾಗಿ ತನ್ನಮರಿಯನ್ನು ನೋಡಿಕೊಳ್ಳುತ್ತದೆ.ಇದೆಲ್ಲಕ್ಕಿಂತಲೂ ಮುಖ್ಯವಾಗಿ ರಾಜಕಾರಣಿ ಎಂಬ ಶಬ್ಧಕೂಡ ’ಗದಾ’ ಎಂಬ ಅರ್ಥವನ್ನು ನೀಡುತ್ತದೆ ಎಂಬುದನ್ನುಕೇಳಿ ಅಚ್ಚರಿಗೊಂಡೆ. ಗದಾ ಎಂಬ ಪದ ಸಂಸ್ಕೃತಮೂಲದ್ದಾಗಿದೆ. ಆಗಲೇ ನನಗೆ ಗಾರ್ದಭ ಗಾನ ಗುನುಗಿತು.ಮುತ್ತುಗದ ಹೂವಿಗಿಂತ ಕತ್ತೆಯ ಮರಿ ಚಂದ ಹೌದು ಕತ್ತೆಯಮರಿ ನೋಡಲು ಬಲು ಸುಂದರ. ಅದರ ದಪ್ಪಾದಾದಬಲ್ಬಿನಂತಹ ಕಣ್ಣುಗಳು, ಅಗಲವಾದ ಕಿವಿಗಳನ್ನುಹೊಂದಿರುವ ಪಾಪದ ಪ್ರಾಣಿಯನ್ನು ನೋಡಿದಾಗ ಕತ್ತೆಎನ್ನಲು ಮನಸ್ಸು ಬಾರದು. ಅರ್ಥಶಾಸ್ತ್ರದ ಚಾಣಕ್ಯ ಕೂಡಕತ್ತೆಯ ಗುಣಗಾನ ಮಾಡಿ ಅದರ ವಿಶೇಷತೆಯನ್ನುಉಲ್ಲೇಖಿಸಿದ್ದಾನೆ. ಕತ್ತೆ ಮಳೆ, ಗಾಳಿ, ಚಳಿ ಯಾವುದನ್ನೂಲೆಕ್ಕಿಸದೇ ದುಡಿಯುವ ಪ್ರಾಣಿ. ಇದು ನಾಯಿ, ಬೆಕ್ಕುಗಳಂತೆಸುಲಭವಾಗಿ ಪಳಗುವುದಿಲ್ಲ. ಪಳಗಿಸುವುದು ಕಷ್ಟಕರ. ಪಳಗಿದರೆ, ನಾಯಿಗಿಂತ ನಿಷ್ಠೆಯಿಂದ, ಓರ್ವ ಸ್ನೇಹಿತನಂತೆಜೊತೆಗಿರುತ್ತವೆ.

-ಡಾ.ಎಂ.ಎಸ್.ಮಣಿ
ಹಿರಿಯ ಪತ್ರಕರ್ತರು,ಬೆಂಗಳೂರು

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

Published

on

~ಗೋವರ್ಧನ ನವಿಲೇಹಾಳು

ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.

ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು  ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ  ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ;  ಎಚ್ಚರಿಕೆಯೂ ಹೌದು.

ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಎಲೆಕ್ಟ್ರಾಲ್ ಬಾಂಡ್‌ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್‌ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.

ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.

ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್‌ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.

ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್‌ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್‌ಗಳಾಗಿ ಪರಿವರ್ತಿಸುತ್ತದೆ.

ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.

ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ

ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.

ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.

ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.

ಸುದ್ದಿದಿನ | ವಾಟ್ಸಾಪ್ | 9980346243

Continue Reading

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading
Advertisement

Title

ದಿನದ ಸುದ್ದಿ2 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ2 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ3 days ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

ದಿನದ ಸುದ್ದಿ3 days ago

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

~ಗೋವರ್ಧನ ನವಿಲೇಹಾಳು ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ...

ದಿನದ ಸುದ್ದಿ4 days ago

ಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ‌ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ದಿನದ ಸುದ್ದಿ4 days ago

ಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ: ಜನರು ಹೆಚ್ಚಿನ ನಿರೀಕ್ಷೆಯೊಂದಿಗೆ ಮತದಾನಕ್ಕೆ ಸಜ್ಜಾಗಿದ್ದಾರೆ. ಅಪ್ಪಾಜಿ ಅವರು ಜಾತಿ, ಮತ, ಪಕ್ಷ ಮತ್ತು ಧರ್ಮ ಬೇಧವಿಲ್ಲದೆ ಎಲ್ಲರನ್ನು ಸಮಾನವಾಗಿ ನೋಡುತ್ತಿದ್ದ ಅಜಾತ ಶತ್ರುಗಳಾಗಿದ್ದರು. ಅದೇ...

ದಿನದ ಸುದ್ದಿ4 days ago

ಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು

–ಗೋವರ್ಧನ ನವಿಲೇಹಾಳು ಕರ್ನಾಟಕದ ರಾಜಕೀಯ ಆಖಾಡದಲ್ಲಿ ಏಪ್ರಿಲ್ 9, 2026ರಂದು ನಡೆಯುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗಳು ಕೇವಲ ಎರಡು ಸೀಟುಗಳ ಚುನಾವಣೆಯಲ್ಲ. ಇದು...

ದಿನದ ಸುದ್ದಿ2 weeks ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ2 weeks ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ3 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

Trending