Connect with us

ಬಹಿರಂಗ

ಕತ್ತೆಗೆ ಇಲ್ಲದ ಹಿರಿಮೆ ಗೋವಿಗೇಕೆ..!

Published

on

ದು ಆಗಸ್ಟ್ 15. ಸ್ವಾತಂತ್ರ್ಯ ದೊರೆತ ದಿನ.ಕೀಲರಾಘವೇಂದ್ರ ಅವರೊಡನೆ 7 ದಶಕಗಳಲ್ಲಿ ನಾವುಗಳುಸಾಗಿಬಂದ ಹಾದಿಯನ್ನು ಮೆಲುಕುಹಾಕುತ್ತಿದ್ದೆ.ನಮ್ಮಮಾತುಕತೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಸುತ್ತಿಬಂತು. ಮಾತಿನ ಮಧ್ಯೆದಲ್ಲಿ ಗೋವಿನ ಹೆಸರಲ್ಲಿ ನರಮೇಧನಡೆಯುತ್ತಿದೆ. ಜನ ಅಭದ್ರತೆ, ಭಯ, ಆತಂಕದಿಂದ ಬದುಕುದೂಡುವ ಸ್ಥಿತಿ ನಿರ್ಮಾಣವಾಯಿತಲ್ಲ ಎಂಬ ವಿಚಾರವೂಬಂದಿತು. ನಾನಾಗ ಗೋವು ಕಾಮಧೇನು.ಅದರ ಹಾಲು,ಗಂಜಲ,ಸೆಗಣಿ ಎಲ್ಲವೂ ಬಳಕೆಗೆ ಯೋಗ್ಯ. ಸಾಲದಕ್ಕೆಹಿಂದುಳಿದ ಗೊಲ್ಲ ಸಮುದಾಯದ ಜೀವನಾಧಾರ ಕೂಡಆಗಿದೆ. ಆದರೆ, ಗೋವಿಗಿಂತ ಕತ್ತೆ ಬಹುಪಯೋಗಿ. ಇದನ್ನೇಕೆಜನ ಪೂಜಿಸುವುದಿಲ್ಲ, ಗೌರವಿಸುವುದಿಲ್ಲ? ಇದರ ರಕ್ಷಣೆಗಾಗಿಬಡಿದಾಡುವುದಿಲ್ಲ. ಸಂರಕ್ಷಣೆಗಾಗಿ ಸಮಿತಿಯನ್ನು ಮಾಡಿಲ್ಲ. ಸರ್ಕಾರ ಕೂಡ ಒಂದು ಬಿಡಿಗಾಸನ್ನೂ ಕತ್ತೆ ಸಂರಕ್ಷಣೆಗೆನೀಡಿಲ್ಲ ಎಂದುಒಂದೇ ಸಮನೆ ಉಸುರಿದೆ.ಎದುರು ಕುಳಿತಿದ್ದವಕೀಲ ರಾಘವೇಂದ್ರ ಹೌದಲ್ವ! ಗೋವಿಗೆ ನೀಡಿದಷ್ಟು ಮಹತ್ವಕತ್ತೆಗೇಕೆ ನೀಡಿಲ್ಲ? ನಾವೇಕೆ ಕತ್ತೆ ಸಂರಕ್ಷಣೆಗಾಗಿ ಹೋರಾಟ ಮಾಡಬಾರದೆಂದು ಪ್ರಶ್ನಿಸಿದರು.

ಇದೇ ಹೊತ್ತಿನಲ್ಲಿ ನಾಲ್ಕು ಘಟನೆಗಳು ನನ್ನನ್ನು ಬಹುವಾಗಿಕಾಡಿದವು. ಒಂದು ಉತ್ತರಖಂಡ್ ವಿಧಾನಸಭೆಯಲ್ಲಿ ಅಲ್ಲಿನಪಶುಸಂಗೋಪನಾ ಇಲಾಖೆ ಸಚಿವೆ ರೇಖಾ ಆರ್ಯ ಗೋವಿಗೆ’ರಾಷ್ಟ್ರಮಾತೆ’ ಸ್ಥಾನಮಾನ ನೀಡಬೇಕೆಂಬ ನಿರ್ಣಯಮಂಡಿಸಿದ್ದರು. ಎರಡು, ದೂರದ ಕೊಲಂಬಿಯಾದಲ್ಲಿಕತ್ತೆಗಳಿಗೆ ಸೌಂದರ್ಯ ಸ್ಪರ್ಧೆಯನ್ನು ಏರ್ಪಡಿಸಿದ್ದರು. ಕಳೆದ15 ವರ್ಷಗಳಿಂದ ಮೋನಿಕ್ಯುಯಿರಾ ಪಟ್ಟಣದಲ್ಲಿ ಕತ್ತೆಉತ್ಸವ ಆಯೋಜಿಸಲಾಗುತ್ತಿದೆ. ಮೂರು, ಈಜಿಪ್ಟ್‌ನ ಮೃಗಾಲಯದಲ್ಲಿ ಕತ್ತೆಗೆ ಕಪ್ಪು-ಬಿಳಿ ಬಣ್ಣ ಬಳಿದು ’ಜೀಬ್ರಾ’ ಎಂದು ಜನರನ್ನು ನಂಬಿಸುತ್ತಿದ್ದರಂತೆ. ಇದನ್ಹೇಗೋಅರಿತವನೊಬ್ಬ ನಕಲಿ ಜೀಬ್ರಾದ ಫೋಟೋ ಸೆರೆ ಹಿಡಿದುಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾನೆ. ನಾಲ್ಕು, ಗಾಜಾದಲ್ಲಿರುವ ಎರಡು ಕತ್ತೆಗಳಿಗೆ ಬಣ್ಣ ಬಳಿದು ಜೀಬ್ರಾಎಂದು ನಂಬಿಸಲಾಗಿದೆ. ಇದೇ ರೀತಿ ಚೀನಾಮೃಗಾಲಯವೊಂದರಲ್ಲಿ ಟಿಬೇಟಿಯನ್‌ನ ಮುಸ್ಟೀಫ್ಜಾತಿಯ ನಾಯಿಯೊಂದನ್ನು ಸಿಂಹ ಎಂದುನಂಬಿಸಲಾಗಿತ್ತು. ಜನ ಬೋನಿನ ಬಳಿ ಹೋದಾಗ ಸಿಂಹಸ್ವರೂಪದ ನಾಯಿ ಬೊಗಳಿ ತನ್ನ ನಿಜ ಬಣ್ಣ ತಿಳಿಸಿದೆ! ಇದನ್ನೆಲ್ಲಾ ಕೇಳಿದಾಗ ಅಮಾಯಕ ಪ್ರಾಣಿಗಳನ್ನು ಮನುಷ್ಯತನ್ನ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳುವುದನ್ನುಕಾಣಬಹುದು. ಅತ್ಯಂತ ಸಾಧು ಪ್ರಾಣಿ ಎಂದೇಕರೆಸಿಕೊಂಡಿರುವ ಹಸು ಕೂಡ ಕೋಪ ಬಂದಾಗಒದೆಯುವುದು, ಹಾಯುವುದು ಮಾಡುತ್ತದೆ. ಸ್ವಾಮಿನಿಷ್ಟೆಗೆಹೆಸರಾದ ನಾಯಿ ಕೂಡ ತನ್ನ ಯಜಮಾನನನ್ನು ಕಚ್ಚಿರುವಉದಾಹರಣೆಗಳಿವೆ. ಆದರೆ, ಕತ್ತೆಯ ಮೇಲೆ ಎಷ್ಟೇ ಮಣಭಾರಹಾಕಿ, ಮೇವು, ನೀರು ನೀಡದಿದ್ದರೂ ಅದುವ್ಯಗ್ರಗೊಳ್ಳುವುದಿಲ್ಲ. ಹೊಟ್ಟೆ ತುಂಬಾ ಹಾಕಿದರೂ ಅದು ಸಂತಸಗೊಳ್ಳುವುದಿಲ್ಲ. ಸದಾ ಸಮಚಿತ್ತದಿಂದ ಕೂಡಿರುತ್ತದೆ. ಸುಖದುಃಖ ಯಾವುದಕ್ಕೂ ತಲೆಕೆಡಿಸಿಕೊಳ್ಳದೇ, ತಾನು ಜನ್ಮತಳೆದಿರುವುದೇ ಸೇವೆಗಾಗಿ, ಇನ್ನೊಬ್ಬರ ಹಿತಕ್ಕಾಗಿ ಎಂದುಕಿವುಡನಂತೆ, ಮೂಕನಂತೆ ಬದುಕು ಸವೆಸುತ್ತದೆ.ಗಡಿಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಎಂತಹುದ್ದೇಕುರುಕಲು ಸ್ಥಳ ಇದ್ದರೂ, ಸೈನಿಕರಿಗೆಊಟ – ನೀರು, ಮದ್ದುಗುಂಡುಸಾಗಿಸುವ ಏಕೈಕ ಜೀವಿ ಕತ್ತೆ. ಮನುಷ್ಯನಿಂದತಲುಪಲು, ಹೊರಲು ಆಗದ ಭಾರವನ್ನು ಹೊತ್ತು ನಿಸ್ವಾರ್ಥಸೇವೆ ನೀಡುವ ಜೀವಿ ಕತ್ತೆ. ತನ್ನ ಹೆಗಲ ಮೇಲೆ ಮೈಲಿಗೆ ಬಟ್ಟೆ, ಮಡಿಬಟ್ಟೆ; ಸ್ಪೃಷ್ಯರ ಬಟ್ಟೆ, ಅಸ್ಪೃಷ್ಯರ ಬಟ್ಟೆ; ಬಡವನ ಬಟ್ಟೆ – ಶ್ರೀಮಂತನ ಬಟ್ಟೆ ಎಂದೆಲ್ಲಾ ಎಣಿಸದೇ ಹೊತ್ತು ಸಾಗುವ ಕತ್ತೆನಿಜಾರ್ಥದಲ್ಲಿ ’ಜಾತ್ಯಾತೀತ’ವಾದಿ. ಗೋವಿನ ಹಾಲನ್ನುಜೀವನಪೂರ್ತಿಸೇವಿಸಬೇಕು.ಕತ್ತೆ ಹಾಲನ್ನು ಜೀವನದಲ್ಲೊಮ್ಮೆಸೇವಿಸಿದರೆ ಸಾಕು ಅದು One time booster. ಐದು ಹನಿಕತ್ತೆ ಹಾಲು 100 ವರ್ಷ ರೋಗ ನಿರೋಧಕ ಶಕ್ತಿಯಾಗಿಕಾರ್ಯನಿರ್ವಹಿಸುತ್ತೆ. ನನಗೆ ಈಗಲೂ ನೆನಪಿದೆ. ಸಣ್ಣವನಿದ್ದಾಗ ನನಗೂ ಕತ್ತೆ ಹಾಲು ಕುಡಿಸಲಾಗಿತ್ತು. ಮಾತ್ರವಲ್ಲ, ನಾನು ನನ್ನ ಮೂರು ಮಕ್ಕಳಿಗೂ ಕತ್ತೆ ಹಾಲಿನ booster ಹಾಕಿಸಿರುವೆ.

ಕತ್ತೆಗಳನ್ನಿಂದು ಅಭಿವೃದ್ಧಿ ಕಾಣದ ರಾಷ್ಟ್ರಗಳಲ್ಲಿಯೇ ಹೆಚ್ಚಾಗಿಬಳಸಲಾಗುತ್ತಿದೆ. ಇವನ್ನು ಸರಕು ಸಾಗಾಣಿಕೆಗೆ ಮಾತ್ರವಲ್ಲದೇ, ಕೃಷಿ ಬಳಕೆಗೆ, ಬರ ಪರಿಹಾರದಕಾರ್ಯಗಳಲ್ಲಿಯೂ ಬಳಸಿಕೊಳ್ಳಲಾಗುತ್ತಿದೆ. ಕೃಷಿಯಲ್ಲಿಅತ್ಯಂತ ಅಗ್ಗದ ಬೆಲೆಗೆ ಬಳಕೆಯಾಗುವ ಶ್ರಮಜೀವಿಗಳಲ್ಲಿಮನುಷ್ಯ ಮೊದಲಿಗನಾದರೆ, ಕತ್ತೆ ಎರಡನೇ ಸ್ಥಾನವನ್ನುಅಲಂಕರಿಸಿದೆ. ಕತ್ತೆಯನ್ನು ಕುರಿ ಕಾಯಲೂ ಬಳಸಲಾಗುತ್ತದೆ. ಕತ್ತೆ ಸವಾರಿ ಮಕ್ಕಳಿಗೆ ಮಾತ್ರವಲ್ಲ, ಪ್ರಯಾಣಿಕರಿಗೂ ಅಚ್ಚುಮೆಚ್ಚು.ಕತ್ತೆ ಹಾಲು ಮತ್ತು ಮಾಂಸಕ್ಕೆ ಇಟಲಿಯಲ್ಲಿ ಹೆಚ್ಚು ಬೇಡಿಕೆಇದೆ. ಯೂರೋಪ್‌ನ ಹಲವು ಕಡೆ ಮಾಂಸದ ಖಾದ್ಯಗಳುಹೆಚ್ಚು ಜನಪ್ರಿಯಗೊಂಡಿವೆ. ಇದರ ಹಾಲಿನಿಂದ ಸೋಪು, ಕ್ರೀಂಗಳನ್ನು ಉತ್ಪಾದಿಸಲಾಗುತ್ತದೆ. ಕತ್ತೆಯ ಹಾಲು, ಕ್ರೀಂನಿಂದ ಚರ್ಮವ್ಯಾದಿಗಳು ಗುಣವಾಗುತ್ತವೆ. ಅಲ್ಲದೆಕತ್ತೆಯ ಚರ್ಮವನ್ನು ಕಾಗದ ತಯಾರಿಸಲು ಬಳಸಲಾಗುತ್ತದೆ. ಕತ್ತೆಯ ಮಾಂಸದಲ್ಲಿ ರೋಗ ನಿರೋಧಕ ಶಕ್ತಿಹೆಚ್ಚಾಗಿರುವುದರಿಂದ ಚೀನಿಯರಂತು ಮುಗಿಬಿದ್ದುತಿನ್ನುತ್ತಾರೆ.ಇವನ್ನೆಲ್ಲಾ ಕಂಡಾಗ ಅಮಾಯಕ ಪ್ರಾಣಿಗಳನ್ನು ಮನುಷ್ಯತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿರುವುದು ಕಂಡುಬರುತ್ತದೆ. ಇಲ್ಲಿ ಕತ್ತೆಯನ್ನು ಬಲಿಪಶು ಮಾಡಲಾಗಿದೆ ಎಂದುಮೇಲ್ನೋಟಕ್ಕೆ ಅನಿಸಬಹುದು. ಆದರೆ, ವಾಸ್ತವದಲ್ಲಿ ಬಲಿಪಶುಕತ್ತೆಯಲ್ಲ, ಬದಲಾಗಿ ಮನುಷ್ಯನೇ ಆಗಿದ್ದಾನೆ.ಕತ್ತೆಯನ್ನು ಜೀಬ್ರಾ ಎಂದು ಬಣ್ಣಿಸಲು, ತೋರಿಸಲು, ವೈಭವೀಕರಿಸಬೇಕಾಗುತ್ತದೆ. ಚತುರತೆ ಮತ್ತು ಬುದ್ಧಿವಂತಿಕೆಎರಡನ್ನೂ ಬೆರಸಿ ಜನರನ್ನು ನಂಬಿಸಬೇಕಾಗುತ್ತದೆ. ಪಾಪದಕತ್ತೆ ಹೊಸವೇಷ ಹೊತ್ತು, ತಾನು ಜೀಬ್ರಾ ಎಂದುತೋರಿಸಿಕೊಳ್ಳುವ ದುಸ್ಥಿತಿಯಲ್ಲಿದೆ. ’ಒಂದು ಭ್ರಷ್ಟ ಕತ್ತೆ ಹೆಚ್ಚಿನಮಟ್ಟದ ಪುರಸ್ಕಾರಕ್ಕೆ ಪಾತ್ರವಾಗುತ್ತದೆ’. ’ಹಗರಣದ ಕತ್ತೆಕಾನೂನಿನ ಅಡಿಯಲ್ಲಿ ಆಶ್ರಯ ಪಡೆಯುತ್ತದೆ’. ’ಎದುರಾಡದಕತ್ತೆಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’. ’ವಂಚಕ ಕತ್ತೆಹುಲುಸಾಗಿ ಬೆಳೆಯುತ್ತದೆ’. ಕತ್ತೆಯ ಈ ಎಲ್ಲಾ ರೂಪಕಗಳುಜೀವಂತವಾಗಿ ಮನುಜರಲ್ಲಿಯೂ ಇವೆ. ಕೆಲವು ಕಡೆಕತ್ತೆಗಳನ್ನು ಮಳೆ ಬಾರದಿದ್ದಾಗ ಪೂಜೆ ಮಾಡಲು, ಮದುವೆಮಾಡಿಸಲು ಬಳಸಲಾಗುತ್ತದೆ. ವಿಚಿತ್ರವೆಂದರೆ, ಹೊಲಸುತಿನ್ನುವ ಹಂದಿಗಳನ್ನು ಗುಡಿಯಲ್ಲಿಟ್ಟು ಪೂಜಿಸಲಾಗುತ್ತದೆ!’ದಿನ ಬೆಳಗೆದ್ದು ನನ್ನನ್ನು ನೋಡಿ, ನಿಮಗೆ ಶುಭವಾಗುತ್ತದೆ’ ಎಂದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾರಾಟವಾಗುವ ಕತ್ತೆ, ಅಲೆದಾಡಿ ಹೊಟ್ಟೆ ತುಂಬಿಸಿಕೊಳ್ಳಬೇಕು. ನಿರ್ಲಕ್ಷಕ್ಕೆಈಡಾಗುವ ಕತ್ತೆ ಎರಡನೇ ದರ್ಜೆಯ ಪ್ರಾಣಿ. ಶೋಷಿತ ಪ್ರಾಣಿಆಗಿದೆ. ಮನುಷ್ಯ ತನ್ನ ಅನುಕೂಲಕ್ಕಾಗಿ ಕತ್ತೆಯನ್ನುಜೀಬ್ರಾವನ್ನಾಗಿ, ಸಿಂಹವನ್ನಾಗಿ ಹೇಗೆ ಬೇಕಾದರೂಬದಲಾಯಿಸಿಬಿಡುತ್ತಾನೆ. ಹೀಗೆ ಬಣ್ಣ ಬಳಿಸಿಕೊಂಡ ಕತ್ತೆಗಳುಹಾಗೆಯೇ ಇರುವುದಿಲ್ಲ. ಮಳೆ ಬಿದ್ದರೆ ಅವು ಕತ್ತೆಯಾಗುತ್ತವೆ. ಅದು ಪ್ರಧಾನಿ ಬಟ್ಟೆ ಹೊತ್ತು ನಡೆದರೂ ಸರಿ, ಪರಿಚಾರಕನಬಟ್ಟೆ ಹೊತ್ತು ನಡೆದರೂ ಸರಿ, ಅದರ ಬೆನ್ನು ತೂಕಹೊರಲೇಬೇಕು. ನನಗನಿಸಿದಂತೆ ಇವು ಟನ್‌ಗಟ್ಟಲೆ ತೂಕಮಾತ್ರ ಹೊರುವುದಿಲ್ಲ, ಅವಮಾನವನ್ನು ಹೊರುತ್ತವೆ. ಯಾವುದೇ ಬಣ್ಣ ಬಳಿದುಕೊಂಡರೂ ಕತ್ತೆಯಾಗಿಯೇಉಳಿಯುತ್ತವೆ.

ಯಾರನ್ನಾದರೂ ಕೂಗಿದಾಗ ಸ್ಪಂದಿಸದಿದ್ದರೆ, ಏಯ್ ಕತ್ತೆಎಂದು ಕೂಗಿ ಕರೆಯುವುದು ವಾಡಿಕೆಯಾಗಿಬಿಟ್ಟಿದೆ. ಎಲ್ಲರೂಕತ್ತೆಯನ್ನು ಕಿವುಡ, ಮೂಕ ಪ್ರಾಣಿ ಎಂದುಕೊಂಡುಬಿಟ್ಟಿದ್ದಾರೆ. ಇದು ಮೂಕವೂ ಅಲ್ಲ, ಬದಲಿಗೆ ಅತೀವ ತಾಳ್ಮೆಯನ್ನುಹೊಂದಿದೆ. ಹೀಗಾಗಿಯೆ ಕತ್ತೆಗೆ ಇಂತಹದ್ದೊಂದು ವಿಶೇಷಣಬಂದಿರಬಹುದು.ಕತ್ತೆಯ ಮುಂದೆ ನೀರು ಮತ್ತು ಆಹಾರ ಎರಡನ್ನೂ ಇಟ್ಟರೆ, ಯಾವುದನ್ನೂ ಸೇವಿಸದೆ ಪ್ರಾಣ ಬಿಡುತ್ತದೆ. ಕಾರಣ ಕತ್ತೆಗೆಹಸಿವು ಮತ್ತು ದಾಹ ಎರಡರಲ್ಲಿ ಯಾವುದನ್ನು ಮೊದಲಿಗೆಆಯ್ಕೆ ಮಾಡಿಕೊಳ್ಳಬೇಕೆಂಬ ಜ್ಞಾನ ಹೊಂದಿರುವುದಿಲ್ಲ. ಕತ್ತೆಯ ಮೇಲೆ ಹಣ ಹೂಡಿರಿ. ಅದು ನಿಮಗೆ ಸದಾವಿಧೇಯತೆಯಿಂದ ನಡೆದುಕೊಳ್ಳುತ್ತದೆ. ನಿಮ್ಮನ್ನು ಸ್ವಾಮಿಎಂಬಂತೆ ಭಾವಿಸುತ್ತದೆ. ಅದರಲ್ಲೂ ಕತ್ತೆಗಳು ಹೆಂಗಸರಂತೆಆಡು-ಕುರಿಗಳಂತೆ ತಲೆ ತಗ್ಗಿಸಿಕೊಂಡು ಹೇಳಿದ್ದನ್ನು ಪಾಲಿಸುತ್ತದೆ. ಕೆಲೆವೆಡೆ ಕುದುರೆಗಿಂತ ಕತ್ತೆ ವಾಸಿ ಎಂಬಮಾತಿದೆ. ಕತ್ತೆಯ ಮೇಲೆ ಕೂತರೆ ಹೊರುತ್ತದೆ. ಹೊರಿಸಿದರೆಸಾಗುತ್ತದೆ. ಆದರೆ ಕುದುರೆ ಮೇಲೆ ಕೂತರೆ, ಹೊರಿಸಿದರೆ ಎತ್ತಿಬೀಸಾಡುತ್ತದೆ. ಹೀಗಾಗಿ ಕತ್ತೆ ಪವಿತ್ರ ಸ್ಥಳ ಮೆಕ್ಕಾಗಿ ಹೋಗಿಬಂದರೂ,ಅದು ಕತ್ತೆಯಾಗಿಯೇ ಬದುಕು ದೂಡುತ್ತದೆ.Democratic Party of UnitedStates ನ ಚಿಹ್ನೆ ಕೂಡಕತ್ತೆಯೇ ಆಗಿದೆ.ಕುದುರೆಗಿಂತ ಕತ್ತೆ ಬಲಶಾಲಿ.ಗಾಬರಿಗೆಒಳಗಾಗುವುದಿಲ್ಲ.ನೆನಪಿನ ಶಕ್ತಿಯೂ ಹೆಚ್ಚಾಗಿದೆ. ಒಮ್ಮೆಒಂದು ದಾರಿಯಲ್ಲಿ ಸಾಗಿದರೆ 20 ವರ್ಷವಾದರೂ ಆದಾರಿಯನ್ನು ಗುರುತಿಟ್ಟುಕೊಂಡು ಸಾಗುವ ಪ್ರಾಣಿ. ಜೊತೆಗೆಇದು ಒಂಟಿಯಾಗಿ ಇರಲು ಬಯಸುವುದಿಲ್ಲ. ಜೋಡಿಇರಲೇಬೇಕು. ಇಲ್ಲ ಆಡು,ಕುರಿಯ ಸಂಗಡವಾದರೂಇರಬೇಕು. ಮಾನವನಿಗೆ ಕತ್ತೆಯು ಶತಮಾನಕ್ಕೂ ಹಿಂದಿನಿಂದಸಹಕಾರಿಯಾಗಿದೆ.ಗಂಡುಕತ್ತೆ, ಹೆಣ್ಣು ಕುದುರೆಯೊಂದಿಗೆ ಕೂಡಿದಾಗಜನಿಸುವುದೇ ಹೆಸರಗತ್ತೆ. ಗಂಡು ಕುದುರೆ, ಹೆಣ್ಣುಕತ್ತೆಯೊಂದಿಗೆ ಕೂಡಿದಾಗ ಜನಿಸುವುದು ಹಿನ್ನಿ. ಜೀಬ್ರಾ ಮತ್ತುಕತ್ತೆ ಕೂಡಿದಾಗ ಹುಟ್ಟುವುದು ಜೊಂಕಿ, ಜೀಬ್ರಾಯ್ಡ್ಎನ್ನುತ್ತಾರೆ.
ಹೆಸರಗತ್ತೆಯನ್ನು ಸರಕು ಸಾಗಾಣಿಕೆಗೆ ಬಳಸುವುದರಿಂದ, ಅವುಗಳನ್ನು ನಿರ್ವೀರ್ಯರನ್ನಾಗಿಸಲಾಗಿರುತ್ತದೆ. ಅಸಿನೋಡಿಮಾರ್ಟಿನಾ, ಫ್ರಾಂಕಾ, ಮೊಮತ್ತ್ ಜಾಕ್ ತಳಿಯಕತ್ತೆಗಳನ್ನು ಗೂಳಿಯಂತೆ ಬಳಸಲಾಗುತ್ತದೆ.

ಇಷ್ಟಕ್ಕೂ ಕತ್ತೆಯ ಮೂಲ ಸೊಮಾಲಿಯಾ. ಆಡುಕುರಿ, ಗೋವನ್ನು ಸಾಕುತ್ತಿದ್ದ ಕಾಲದಿಂದಲೂ ಕತ್ತೆ ಇದೆ. ಗಂಡುದನವನ್ನು ಕೃಷಿ ಮತ್ತು ಸಾಗಾಣಿಕೆಗೆ ಬಳಸುತ್ತಿದ್ದರೂ, ದುರ್ಗಮಹಾದಿ ಕ್ರಮಿಸಲು ಕತ್ತೆಯೇ ಬೇಕಿತ್ತು. ಇದಲ್ಲದೇ, ಕತ್ತೆ ತಿಂದಮೇವನ್ನು ಮೆಲುಕು ಹಾಕುತ್ತಾ, ನೀರಿನ ಅವಶ್ಯಕತೆಇಲ್ಲದೆಯೂ ಬದುಕುತ್ತದೆ. ಸಾಲದಕ್ಕೆ ಇದರ ಹಾಲನ್ನುಗೋವಿನ ಹಾಲಿನಂತೆ ಬಳಸಲಾಗಿದೆ. ಮಾಂಸವನ್ನುಸವಿಯಲಾಗಿದೆ.ಸಿರಿಯಾದಲ್ಲಿ ಕತ್ತೆಯನ್ನು ಅಲ್ಲಿನ ಡಿಯೋನಿಸಿಸ್ ದೇವತೆಗೆಹೋಲಿಸಲಾಗಿದೆ. ಈಜಿಪ್ಟ್‌ನಲ್ಲಿ ಮನುಷ್ಯರನ್ನು ಅಂತ್ಯಸಂಸ್ಕಾರ ಮಾಡಿದಂತೆ ಕತ್ತೆಗೂ ಅಂತಿಮ ಗೌರವಕೊಡಲಾಗಿದೆ. ೧೬೭೯ರಲ್ಲೇ ಆರಿಜೋನ ಎಂಬಲ್ಲಿ ಕತ್ತೆಯಬಳಕೆ ಕುರಿತಂತೆ ದಾಖಲೆಗಳಿವೆ. The Domestic Animal Diversity InformationSystem ನ 2006ರ ವರದಿಯಂತೆ ಜಗತ್ತಿನಲ್ಲಿ ೪೧ ಮಿಲಿಯನ್ ಕತ್ತೆಗಳಿವೆ. ಕತ್ತೆಯ ಬಳಕೆಯಲ್ಲಿ ಭಾರತಕ್ಕಿಂತ ಚೀನಾಮುಂದಿದೆ.
ಕತ್ತೆ ಸಂಸ್ಕೃತಿಯ ಒಂದು ಭಾಗ. ಈಜಿಪ್ಟಿನ ಸೂರ್ಯದೇವನಸಂಕೇತ ಕೂಡ ಕತ್ತೆ ಆಗಿದೆ. ಜೀಸಸ್ ಕೂಡ ಕತ್ತೆಯ ಮೇಲೆಸವಾರಿ ಮಾಡುತ್ತಾ ಜೆರುಸಲೇಂ ಪ್ರವೇಶಿಸಿದ್ದಾರೆ. ಬೈಬಲ್‌ನಹಲವು ಕಡೆ ಕತ್ತೆ ಕುರಿತಂತೆ ಉಲ್ಲೇಖಗಳಿವೆ. ಕತ್ತೆಯಹಿಂಭಾಗ ಮತ್ತು ತೋಳಿನ ಭಾಗದಲ್ಲಿ ಜೀಸಸ್ ಗುರುತುಹಾಕಿದ್ದಾರೆಂದು ಇಂದಿಗೂ ನಂಬಲಾಗಿದೆ. ಹಿಂದೂಧರ್ಮದಲ್ಲಿ ಕತ್ತೆ ಲಕ್ಷ್ಮಿಯ ವಾಹನ, ಕರಾಳ ರಾತ್ರಿ ದೇವರವಾಹನ ಎಂದೂ ನಂಬಲಾಗಿದೆ. ಪಂಚತಂತ್ರ ಕಥೆಗಳಲ್ಲಿ ಕೂಡಕತ್ತೆಯ ಉಲ್ಲೇಖ ಇದೆ.ಜೋಹರ್ ಧರ್ಮದಲ್ಲಿ ಮಾತ್ರ ಕತ್ತೆ ಅಶುದ್ಧ ಪ್ರಾಣಿ. ಹೋಮರ್‌ನ ಕಾವ್ಯಗಳಲ್ಲಿ, ಷೇಕ್ಸ್‌ಫಿಯರ್ ಸಾನೆಟ್ಟುಗಳಲ್ಲಿಕೂಡ ಕತ್ತೆಯ ಪಾತ್ರ ಇದೆ. ವಿಲಿಯಂ ವರ್ಡ್ಸ್‌ವರ್ಥ್ ತನ್ನ’ಬೆಲ್‌ಎಬೆಲ್’ನಲ್ಲಿ ಕತ್ತೆ ಕ್ರೈಸ್ತರ ಸಂಕೇತ. ಇದೊಂದು ವಿಧೇಯಮತ್ತು ತಾಳ್ಮೆಯ ಪ್ರಾಣಿ ಎಂದಿರುವನು.’ಕತ್ತೆಯೊಂದಿಗೆಪಯಣ’ ಕೃತಿಯಲ್ಲಿ ಕತ್ತೆ ಹಠಮಾರಿ ಮತ್ತು ಭಾರ ಹೊರುವಪ್ರಾಣಿ ಎಂದು ರಾಬರ್ಟ್ ಲೂಯಿಸ್ ಸ್ಟೀವನ್‌ಸನ್ಬಣ್ಣಿಸಿದ್ದಾನೆ. ೧೯೪೦ರಲ್ಲಿ ಬಂದ ಡಿಸ್ನಿ ಫಿಲಂ ಫಂಟಾಸಿಯಾಮತ್ತು ೧೯೬೭ರ ಬ್ರೈಟಿ ಆಫ್ ದಿ ಗ್ರ್ಯಾಂಡ್ ಕ್ಯಾಂಗನ್ಚಿತ್ರಗಳಲ್ಲಿಯೂ ಕತ್ತೆಯ ಪಾತ್ರವಿದೆ.

ಇತಿಹಾಸದ ಉದ್ದಕ್ಕೂ ಕತ್ತೆ ಎಂದರೆ ಭಾರ ಹೊರುವ ಪ್ರಾಣಿ. ಇದು ಸಾಮಾನ್ಯವಾಗಿ ೫೦೦ ಕೆ.ಜಿ. ವರೆಗೂ ತೂಗಬಲ್ಲವು. ೨೦ರಿಂದ ೩೦ ವರ್ಷಗಳ ಕಾಲ ಜೀವಿಸಬಲ್ಲವು. ಕತ್ತೆಮನುಷ್ಯರಂತೆ ಅವಳಿ ಮರಿಗಳಿಗೆ ಜನ್ಮ ನೀಡುವುದುಅಪರೂಪ. ಮನುಷ್ಯನಿಗಿಂತ ಅತ್ಯಂತ ಜತನವಾಗಿ ತನ್ನಮರಿಯನ್ನು ನೋಡಿಕೊಳ್ಳುತ್ತದೆ.ಇದೆಲ್ಲಕ್ಕಿಂತಲೂ ಮುಖ್ಯವಾಗಿ ರಾಜಕಾರಣಿ ಎಂಬ ಶಬ್ಧಕೂಡ ’ಗದಾ’ ಎಂಬ ಅರ್ಥವನ್ನು ನೀಡುತ್ತದೆ ಎಂಬುದನ್ನುಕೇಳಿ ಅಚ್ಚರಿಗೊಂಡೆ. ಗದಾ ಎಂಬ ಪದ ಸಂಸ್ಕೃತಮೂಲದ್ದಾಗಿದೆ. ಆಗಲೇ ನನಗೆ ಗಾರ್ದಭ ಗಾನ ಗುನುಗಿತು.ಮುತ್ತುಗದ ಹೂವಿಗಿಂತ ಕತ್ತೆಯ ಮರಿ ಚಂದ ಹೌದು ಕತ್ತೆಯಮರಿ ನೋಡಲು ಬಲು ಸುಂದರ. ಅದರ ದಪ್ಪಾದಾದಬಲ್ಬಿನಂತಹ ಕಣ್ಣುಗಳು, ಅಗಲವಾದ ಕಿವಿಗಳನ್ನುಹೊಂದಿರುವ ಪಾಪದ ಪ್ರಾಣಿಯನ್ನು ನೋಡಿದಾಗ ಕತ್ತೆಎನ್ನಲು ಮನಸ್ಸು ಬಾರದು. ಅರ್ಥಶಾಸ್ತ್ರದ ಚಾಣಕ್ಯ ಕೂಡಕತ್ತೆಯ ಗುಣಗಾನ ಮಾಡಿ ಅದರ ವಿಶೇಷತೆಯನ್ನುಉಲ್ಲೇಖಿಸಿದ್ದಾನೆ. ಕತ್ತೆ ಮಳೆ, ಗಾಳಿ, ಚಳಿ ಯಾವುದನ್ನೂಲೆಕ್ಕಿಸದೇ ದುಡಿಯುವ ಪ್ರಾಣಿ. ಇದು ನಾಯಿ, ಬೆಕ್ಕುಗಳಂತೆಸುಲಭವಾಗಿ ಪಳಗುವುದಿಲ್ಲ. ಪಳಗಿಸುವುದು ಕಷ್ಟಕರ. ಪಳಗಿದರೆ, ನಾಯಿಗಿಂತ ನಿಷ್ಠೆಯಿಂದ, ಓರ್ವ ಸ್ನೇಹಿತನಂತೆಜೊತೆಗಿರುತ್ತವೆ.

-ಡಾ.ಎಂ.ಎಸ್.ಮಣಿ
ಹಿರಿಯ ಪತ್ರಕರ್ತರು,ಬೆಂಗಳೂರು

ದಿನದ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!

Published

on

  • ಚೇತನ್ ನಾಡಿಗೇರ್

ಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್‍ಗೋಪಾಲ್‍ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್‍ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್‍ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್‍’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್‍ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್‍ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.

ಶಂಕರ್‍ ಚಿತ್ರಗಳೆಂದರೆ ಅದ್ಧೂರಿತನ, ಹಿಟ್‍ ಹಾಡುಗಳು, ದೊಡ್ಡ ಕ್ಯಾನ್ವಾಸ್‍, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್‍ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್‍ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್‍ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.

ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್‍ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್‍’, ‘ಮುದಲ್ವನ್‍’, ‘ಅನ್ನಿಯನ್‍’, ‘ಶಿವಾಜಿ: ದಿ ಬಾಸ್‍’ ಮತ್ತು ‘ಇಂಡಿಯನ್‍ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.

ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್‍ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್‍ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್‍’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್‍’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್‍ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್‍ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್‍ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.

ಇಷ್ಟಕ್ಕೂ ಶಂಕರ್‍ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್‍ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್‍ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.

ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್‍ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್‍ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್‍ಗೆ ಅನ್ನಿಯನ್‍ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್‍ಗಿಂತ ಮ್ಯಾಜಿಕ್‍ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್‍ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.

ಈಗೆಲ್ಲಾ Cinematic Universeಗಳ ಕಾಲ. ಯಶ್‍ರಾಜ್‍ ಸ್ಪೈ ಯೂನಿವರ್ಸ್‍, ಲೋಕೇಶ್‍ ಕನಕರಾಜ್‍ ಯೂನಿವರ್ಸ್, ರೋಹಿತ್‍ ಶೆಟ್ಟಿ ಪೊಲೀಸ್‍ ಯೂನಿವರ್ಸ್‍ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್‍’ನ ಸೇತುಪತಿ, ‘ಶಿವಾಜಿ: ದಿ ಬಾಸ್‍’ನ ಶಿವಾಜಿ ಮತ್ತು ‘ಮುದಲ್ವನ್‍’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.

ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್‍’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್‍.

Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್‍ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್‍ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್‍ ಚೇಂಜರ್‍’ ಎಂಬ ರಾಮ್‍ಚರಣ್‍ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್‍ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್‌ಬುಕ್‌ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್‍ ಆಫ್‍ ದಿ ನೇಷನ್‍ ಅಂತಾರೆ..!

Published

on

  • ಚೇತನ್ ನಾಡಿಗೇರ್

‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್‍ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಸಂಬಳ. ಅದರ ಬಗ್ಗೆ ಮಾತಾಡೋಣ. ಮಿಕ್ಕವರೆಲ್ಲಾ ಬಹಳ ಬ್ಯುಸಿಯಾಗಿರುವುದರಿಂದ ನಾವು ಇದರ ಬಗ್ಗೆ ಮಾತಾಡೋಣ್ವಾ?’

ಮಾರ್ಮಿಕವಾಗಿ ಕೇಳಿದರು ಪ್ರಕಾಶ್‍ ರೈ. ಅವರಿಗೆ ಆ ವಿಷಯದ ಬಗ್ಗೆ ಮಾತಾಡುವುದಕ್ಕೆ ಇಷ್ಟವಿರಲಿಲ್ಲ. ಆದರೂ ಕನ್ನಡ ಚಿತ್ರರಂಗದಲ್ಲಿ ಕಳೆದ ಒಂದು ತಿಂಗಳಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂಬ ಪ್ರಶ್ನೆ ಬಂತು. ಅದನ್ನು ಬಹಳ ಜಾಣ್ಮೆಯಿಂದ ತಳ್ಳಿಹಾಕಿದರು ರೈ. ಅದೊಂದು ಬಿಟ್ಟು ಹಲವು ವಿಷಯಗಳ ಬಗ್ಗೆ ಮಾತನಾಡಿದರು. ತಮ್ಮ ಇಷ್ಟದ ಚಿತ್ರದ ಬಗ್ಗೆ, ಕನ್ನಡ ಚಿತ್ರರಂಗದ ಸದ್ಯದ ಪರಿಸ್ಥಿತಿಯ ಬಗ್ಗೆ, ಸೋಷಿಯಲ್ ಮೀಡಿಯಾವನ್ನು ಕೆಲವರು ಕೆಟ್ಟದಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ, ತಂದೆ-ಮಗನ ಸಂಬಂಧದ ಬಗ್ಗೆ, STARDOM ಸಂಭಾಳಿಸುವ ಬಗ್ಗೆ, ಕಲಿಕೆಯ ಬಗ್ಗೆ … ಹೀಗೆ ಹಲವು ವಿಷಯಗಳನ್ನು ಅವರು ಮಾತನಾಡಿದರು. ಅದಕ್ಕೆ ವೇದಿಕೆಯಾಗಿದ್ದು, ಆರ್. ಚಂದ್ರು ನಿರ್ಮಾಣದ, ‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಫಾದರ್‍’ ಚಿತ್ರದ ಪತ್ರಿಕಾಗೋಷ್ಠಿ. ಈ ಚಿತ್ರದಲ್ಲಿನ ತಮ್ಮ ಪಾತ್ರ ಮತ್ತ ತಂದೆಯ ವ್ಯಾಖ್ಯಾನವನ್ನು ರೈ ಎಷ್ಟು ಚೆನ್ನಾಗಿ ಮಾಡಿದರು ಗೊತ್ತಾ? ನೀವೇ ಓದಿ …

ನಾನು ನನ್ನ ಮೂರು ದಶಕಗಳ ವೃತ್ತಿಜೀವನದಲ್ಲಿ ಯಶಸ್ಸಿನಿಂದ ಹಾಳಾದ ಬಹಳಷ್ಟು ಜನರನ್ನು ನೋಡಿದ್ದೇನೆ. ಸೋಲಿನಿಂದ ಹಾಳಾದವರನ್ನು ನೋಡಿದ್ದು ಕಡಿಮೆ. ಯಶಸ್ಸು ಎನ್ನುವುದು ಒಂದು ನಶೆ. ಯಶಸ್ವಿಯಾಗುವುದು ದೊಡ್ಡ ವಿಷಯವಲ್ಲ. ಅದನ್ನು ದಕ್ಕಿಸಿಕೊಳ್ಳೋದು, ಉಳಿಸಿಕೊಳ್ಳೋದು ಬಹಳ ಮುಖ್ಯ. ಹಾಗಾಗಿ, ಡಾ. ರಾಜಕುಮಾರ್, ರಜನಿಕಾಂತ್‍, ಕಮಲ್ ಹಾಸನ್‍ ಮುಂತಾದವರು ಆರು ದಶಕ, ಐದು ದಶಕಗಳ ಕಾಲ ಕೆಲಸ ಮಾಡಿದವರನ್ನು ನಾವು ನೋಡಬಹುದು. ಈಗ ಅಂಥವರು ಸಿಗುವುದೇ ಇಲ್ಲ ನಮಗೆ. ಬಹಳಷ್ಟು ಯುವಕರು stardomಗೆ ತಯಾರಾಗಿರುವುದಿಲ್ಲ. ಎಷ್ಟು ನಾವು ಅದನ್ನು ಇಳಿಸಿಕೊಂಡು ಹೊರಗೆ ಬರುತ್ತೀವೋ, ಅಷ್ಟು ಒಳ್ಳೆಯದು. ಇಲ್ಲದಿದ್ದರೆ ಅದು ನಮ್ಮನ್ನು ಸುಟ್ಟುಹಾಕುತ್ತದೆ. ಕೆಲವರು ಕಲಿಯುತ್ತಿದ್ದಾರೆ, ಕೆಲವರು ಕಲಿಯುವುದಿಲ್ಲ.

ಪ್ರತಿಯೊಬ್ಬರಿಗೂ ಇಗೋ ಇರಬೇಕು. ಅದು ಸ್ವಾಭಿಮಾನವಾಗಿರುವವರೆಗೂ ಇರಬೇಕು. ಅದು ಅಹಂಕಾರವಾದರೆ ಇಬ್ಬರಿಗೂ ಒಳ್ಳೆಯದಲ್ಲ. ಒಂದು ಇಗೋ ನನ್ನನ್ನು ಬೆಳೆಸುವುದಕ್ಕೆ ಸಾಧ್ಯವಾದರೆ, ಇನ್ನೊಂದನ್ನು ರೂಪಿಸುವುದಕ್ಕೆ ಸಾಧ್ಯವಾದರೆ, ಒಂದು ಧಾರ್ಮಿಕ ಕೋಪವಾದರೆ ಒಳ್ಳೆಯದಲ್ವಾ? ಅದು ಆಯಾ ಪರಿಸ್ಥಿತಿಗೆ ಬದಲಾಗುತ್ತಿರುತ್ತದೆ. ಒಂದು ಪದದ ಅರ್ಥ ಪದಕೋಶದಲ್ಲಿ ಸಿಗುವುದಿಲ್ಲ, ಆ ಸಂದರ್ಭದಲ್ಲಿ ಸಿಗುತ್ತದೆ. ಯಾವ ಸಂದರ್ಭದಲ್ಲಿ ಆ ಪದವನ್ನು ಉಪಯೋಗಿಸುತ್ತೀವೋ, ಆ ಪದಕ್ಕೆ ಅರ್ಥ ಇರುತ್ತದೆಯೇ ಹೊರತು, ಇಗೋ ಎಂದರೆ ಒಂದು definite ಅರ್ಥವಿರುವುದಿಲ್ಲ.

ಕೆಲವು ನಟರು ಸಹ ತಾವು ಜಿಮ್‍ಗೆ ಹೋಗಿಯೇ ನಟ ಆಗುತ್ತೀನಿ ಎಂದರೆ ಆಗುವುದಿಲ್ಲ. ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ತಿಳಿದುಕೊಳ್ಳೋದು, ಕಲೆಯ ಪ್ರಕಾರಗಳನ್ನು ಅರಿತುಕೊಳ್ಳೋದು, ಅದರಿಂದ ನನಗೆ ಹೆಸರಾಗಬೇಕೆಂದು ಬಯಸೋದು ಸಹ ಮುಖ್ಯ. ಎಲ್ಲಕ್ಕಿಂತ ಹೆಚ್ಚಾಗಿ, ಪ್ರತಿಯೊಬ್ಬರು ಗೆಲ್ಲಬೇಕೆಂಬ ಒತ್ತಡ ಯಾಕೆ? ಸೋಲು ಸಂತೋಷ ಯಾಕೆ ನಾವು ಕೊಟ್ಟಿಲ್ಲ? ಕ್ಷಮಿಸುವ ಸಂತೋಷವನ್ನು ನಾವು ಯಾಕೆ ಕೊಟ್ಟಿಲ್ಲ? ನಮಗೂ ಅವನೇನು ಹೇಳುತ್ತೇನೆ ಎನ್ನುವ ತಾಳ್ಮೆಯೇ ಇಲ್ಲ. ನಾನು ಅಂದುಕೊಂಡಿರುವ ಸಿನಿಮಾ ತೆಗೆದಿದ್ದೀಯಾ? ಅಂತಲೇ ಎಲ್ಲರೂ ಕೇಳೋದು. ಏನು ಹೇಳುತ್ತಾನೆ ಎನ್ನುವ ತಾಳ್ಮೆಯೇ ಯಾರಿಗೂ ಇಲ್ಲ.

ನಾನೇ ಈಗ ಮತ್ತೆ ಕಲಿಯಬೇಕಾದ ಪರಿಸ್ಥಿತಿಯಲ್ಲಿದ್ದೀನಿ. ಇಷ್ಟು ಸಿನಿಮಾಗಳನ್ನು ಮಾಡಿದ್ದೇನೆ, ಹೊಸಹೊಸ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದೇನೆ. ಇವತ್ತು ಹೊಸಬರ ಜೊತೆಗೆ ಮಾಡುವಾಗ, ಅವರು ಬೇರೇನೋ ಕೇಳುತ್ತಿದ್ದಾರೆ ಅಂತನಿಸುತ್ತಿದೆ. ಹಾಗಾಗಿ, ಇದುವರೆಗೂ ಕಲಿತಿದ್ದನ್ನು ಮರೆತು, ಹೊಸದಾಗಿ ಕಲಿಯಬೇಕು. ಇದೊಂದು ಸವಾಲು. ಖುಷಿಯಾಗುತ್ತಿದೆ. ಇತ್ತೀಚೆಗೆ ‘ರಾಯನ್‍’ ಸಿನಿಮಾದ ಸಮಾರಂಭದಲ್ಲಿದ್ದೆ. ಆ ಚಿತ್ರಕ್ಕೆ ರೆಹಮಾನ್‍ ಸಂಗೀತ ಸಂಯೋಜಿಸುತ್ತಿದ್ದು, ರೆಹಮಾನ್‍ ಚಿತ್ರರಂಗಕ್ಕೆ ಬಂದು 30 ವರ್ಷಗಳಾಗಿವೆ. ನನ್ನ ಮೊದಲ ತಮಿಳು ಚಿತ್ರಕ್ಕೆ ಅವರೇ ಸಂಗೀತ ನಿರ್ದೇಶಕರು.

30 ವರ್ಷಗಳ ನಂತರವೂ ನಾವಿನ್ನೂ ಇದ್ದೀವಲ್ಲ ಎನ್ನುವುದೇ ಬಹಳ ಸಂತೋಷದ ವಿಷಯ. ಒಬ್ಬ ಕಲಾವಿದ ಬೆಳೆಯೋದು ಬರೀ ಅವನ ಪ್ರತಿಭೆಯಿಂದ ಮಾತ್ರವಲ್ಲ. ಜನರ ಪ್ರೀತಿಯಿಂದ ಮತ್ತು ಅದಕ್ಕಿಂತ ಜನರು ಅವನ ಮೇಲಿಟ್ಟಿರುವ ನಂಬಿಕೆಯಿಂದ. ಆ ನಂಬಿಕೆಯನ್ನು 30 ವರ್ಷಗಳ ಕಾಲ ಉಳಿಸಿಕೊಂಡಿದ್ದೇವೆ ಎನ್ನುವುದೇ ನಮ್ಮ ಹೆಮ್ಮೆ ಆಗುತ್ತದೆ. ಏಕೆಂದರೆ, ಅವರು ನಮ್ಮನ್ನು ನಂಬಿ ಒಂದು ವೇದಿಕೆ ಕೊಟ್ಟಿದ್ದಾರೆ. ಅವರಿಗೆ ಇಷ್ಟ ಆದರಂತೂ, ನಿಮ್ಮನ್ನು ಪ್ರೀತಿಸೋಕೆ ಕಾರಣಗಳನ್ನು ಹುಡುಕುತ್ತಾನೆ. ಒಬ್ಬ ವ್ಯಕ್ತಿಯ ಬೆಳವಣಿಗೆ ಬರೀ ಅವನು ಬೆಳೆದ ಎತ್ತರ ನೋಡಿ ಲೆಕ್ಕ ಹಾಕುವುದಲ್ಲ, ಅವನು ಎತ್ತರವಾಗಿ ಬೆಳೆದ ಮೇಲೆ ಎಷ್ಟು ಜನರನ್ನ ಬೆಳೆಸಿದ ಎನ್ನುವುದು ಬಹಳ ಮುಖ್ಯ.

‘ನಾನು ನನ್ನ ಕನಸು’ ಇರಬಹುದು, ‘ಒಗ್ಗರಣೆ’ ಅಥವಾ ‘ಇದೆಂಥಾ ರಾಮಾಯಣ’ ಚಿತ್ರಗಳು ನನ್ನ ಅಭಿರುಚಿ. ತಂದೆ-ಮಗನ ಸಂಬಂಧದ ಕುರಿತು ಸಾಕಷ್ಟು ಚಿತ್ರೆಗಳು ಬಂದಿವೆ. ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್‍ ಆಫ್‍ ದಿ ನೇಷನ್‍ ಅಂತಾರೆ. ಏಕೆಂದರೆ, ಅಷ್ಟೊಂದು ತಂದೆಯ ಪಾತ್ರಗಳನ್ನು ನಾನು ಇದುವರೆಗೂ ಮಾಡಿಬಿಟ್ಟಿದ್ದೀನಿ. ಇದು ತೀವ್ರವಾಗಿ ಕಾಡುವ ಸಿನಿಮಾ. ತಂದೆ-ಮಗನ ಬಾಂಧವ್ಯಕ್ಕಿಂತ, ಇಲ್ಲಿ ಮಗನನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಹಿರಿಯರನ್ನೂ ಅರ್ಥ ಮಾಡಿಕೊಳ್ಳಬೇಕು ಎಂದು ಸೂಕ್ಷ್ಮವಾಗಿ ಹೇಳಲಾಗಿದೆ. ಪರಿಸ್ಥಿತಿಯ ವಿಕೋಪಗಳಿಗೆ ಅಥವಾ ಕೆಲವು ಒತ್ತಡಗಳಿಗೆ ಆ ಸಂಬಂಧ ಪ್ರಶ್ನಿಸಲ್ಪಡುತ್ತದೆ. ಜೀವನದಲ್ಲಿ ಕೆಲವು ಸಂಘರ್ಷಗಳು ಬಂದಾಗ ನಮಗೊಂದು ಲಿಬರೇಶನ್ ‍ಸಿಗುತ್ತದೆ. ಒಂದು ಪರಿಸ್ಥಿತಿ ಎದುರಾದಾಗ ನಮ್ಮಳೊಗಿರುವ ಇನ್ನೊಂದು ಶಕ್ತಿ ನಮಗೆ ಅರ್ಥವಾಗೋದು ಅಥವಾ ನಾವು ಇನ್ನಷ್ಟು ಬೆಳೆಯೋದಕ್ಕೆ ಸಾಧ್ಯ. ಅದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಇದೊಂದು ಜನ ಸಾಮಾನ್ಯರ ಸಿನಿಮಾ. ನಿಜವಾಗಲೂ ಕಾಡುವ ಸಿನಿಮಾ.

ಒಬ್ಬ ಗಂಡಸು ಮಕ್ಕಳು ಹುಟ್ಟುವ ತನಕ ಬರೀ ಒಬ್ಬ ಗಂಡ ಆಗಿರುತ್ತಾನೆ. ಮಕ್ಕಳು ಹುಟ್ಟಿದ ನಂತರ ಅಪ್ಪ ಎನ್ನುವ ಸ್ಥಿತಿ. ಅಪ್ಪನಿಗೂ, ಮಕ್ಕಳಿಗೂ ಒಂದೇ ವಯಸ್ಸು. ಅದರಲ್ಲೂ ಒಂದು ಹೆಣ್ಣು ಮಗಳ ಜೊತೆಗಿನ ಸಂಬಂಧ ಎಂದರೆ, ಅವನ ಜೀವನದಲ್ಲಿ ಬರುವ ಎಲ್ಲಾ ಸಂಬಂಧಗಳು, ಅಂದರೆ ತಾಯಿ ಇರಬಹುದು, ಹೆಂಡತಿ ಇರಬಹುದು, ತಂಗಿ ಇರಬಹುದು, ಸ್ನೇಹಿತೆ ಇರಬಹುದು. ಆದರೆ, ಮಗಳ ಜೊತೆಗೆ ಬೇರೆ ಸಂಬಂಧ ಇರುತ್ತದೆ. ಚೆನ್ನಾಗಿ ಬೆಳಸಿ ಯಾವುದನ್ನೂ ಎದುರು ನೋಡದೆ ಬಿಟ್ಟು ಕೊಡುವುದು. ತಂದೆ-ಮಗನ ಸಂಬಂಧ ಹಾಗಿರುವುದಿಲ್ಲ. ನನ್ನ ನಂತರ ನೀನು, ನನ್ನ ಇನ್ನೊಂದು ಛಾಯೆ ನೀನು ಎನ್ನುವ ಸಂಬಂಧ ಅದು. ಅದೊಂಥರಾ Love-Hate relationship. ತಂದೆ ತನ್ನ ಮಗನಿಗೆ ಕಲಿಸೋದಕ್ಕಿಂತ, ಅವನ behaviourನಿಂದ ಮಕ್ಕಳು ಕಲಿಯೋದು ತುಂಬಾ ಇರುತ್ತದೆ.

ನನಗೆ ನನ್ನ ಮಗಳ ಜೊತೆಗೆ ಇರುವ relationship ಬೇರೆ, ಮಗನ ಜೊತೆಗೆ ಇರುವ ಸಂಬಂಧ ಬೇರೆ. ಇವತ್ತಿನ ಪ್ರಪಂಚದಲ್ಲಿ ಹೊರಗೆ ಹೋಗಬೇಕು. ಸಾಕಷ್ಟು ಸಮಸ್ಯೆಗಳು ಇರುತ್ತವೆ. ಅದನ್ನು ಹೇಳಿಕೊಳ್ಳುವುದಕ್ಕೆ ಆಗಲ್ಲ. ಅದನ್ನು ಅವರೇ ನಿಭಾಯಿಸಬೇಕು. ಮಗ ಎಷ್ಟೇ ದೊಡ್ಡವನಾದರೂ, ತಂದೆಗೆ ಇನ್ನೂ ಚಿಕ್ಕವನು ಎಂದನಿಸುತ್ತದೆ. ಅದರ ಜೊತೆಗ ಮಗನಿಗೆ ತನ್ನದೇ ಆದ ನಿರ್ಧಾರಗಳೂ ಇರುತ್ತವೆ. ಅದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ನಿನಗೆ ಇಷ್ಟು ಮಾಡಿದೆ, ನೀನೇನು ವಾಪಸ್ಸು ಕೊಡುತ್ತೀಯ ಎನ್ನುವುದಕ್ಕಿಂತ ಅವನನ್ನೂ ಅರ್ಥ ಮಾಡಿಕೊಳ್ಳಬೇಕಾಗುತ್ತದೆ.

ಒಬ್ಬ ನಟನಾಗಿ ನನಗೆ ‘ನಾನು ನನ್ನ ಕನಸು’ ಬಹಳ ಇಷ್ಟವಾದ ಮತ್ತು ಕಾಡುವ ಸಿನಿಮಾ. ಏಕೆಂದರೆ, ನನ್ನ ಹೆಂಡತಿ ನನ್ನ ಹೆಂಡತಿಯಾಗಿಯೇ ಇರುತ್ತಾಳೆ. ಮಗಳು ಮದುವೆಯಾದಾಗ, ಮಾವ ಆಗ ನನಗೆ ಅರ್ಥಾವಾಗುತ್ತಾನೆ. ಅಲ್ಲಿಯವರೆಗೂ ಹೆಂಡತಿ ಅಪ್ಪ ಅಂತ ಜಗಳ ಆಡುತ್ತಿರುತ್ತೀವಿ. ನನ್ನ ಮಗಳಿಗೆ ಮಾವ ಸಿಗುತ್ತಾನೆ ಎಂದಾಗ, ನನಗೆ ಹೆಂಡತಿ ಅರ್ಥವಾಗುತ್ತಾ ಹೋಗುತ್ತಾಳೆ. ಅವಳು ಇನ್ನೊಬ್ಬಳ ಮಗಳಾಗಿದ್ದಳು, ನಾನು ಅವಳನ್ನು ಇನ್ನೊಬ್ಬರ ಮಗಳು ಅಂತ ನೋಡಿರಲೇ ಇಲ್ಲ. ನನ್ನ ಮಗಳನ್ನು ನಾನು ನೋಡುತ್ತಿದ್ದ ಹಾಗೆ, ಅವಳ ಅಪ್ಪ ಸಹ ಅವಳನ್ನು ಹಾಗೆಯೇ ನೋಡುತ್ತಿದ್ದ. ಮಗಳು ಮತ್ತು ತಂದೆಯ ಸಂಬಂಧದಲ್ಲಿ ಆ ಚಿತ್ರ ನನಗೆ ಬಹಳಷ್ಟು ವಿಷಯಗಳನ್ನು ಕಲಿಸಿತು. ಆ ಚಿತ್ರವನ್ನು ಬರೆಯುತ್ತಾ, ನಿರ್ದೇಶನ ಮಾಡುತ್ತಾ ತುಂಬಾ ಕಲಿತೆ. ಹಾಗಾಗಿ, ನನಗೆ ಅದು ಬಹಳ ಇಷ್ಟವಾದ ಚಿತ್ರ.

ಮಾಣಿಕ್ಯ ಒಳ್ಳೆಯದೇ? ಅದು ಕೋತಿ ಕೈಗೆ ಸಿಕ್ಕಿದರೆ? ಅದರ ಬಗ್ಗೆ ನಾವು ಯೋಚಿಸಬೇಕು. ಪ್ಲಸ್‍, ಮೈನಸ್‍ ಇದ್ದೇ ಇರುತ್ತದೆ. ಒಳಗಿನ ಅಸಹ್ಯವೂ ಹೊರಗೆ ಬರುತ್ತದೆ, ವಿಕಾರಗಳೂ ಹೊರಗ ಬರುತ್ತಿವೆ. ಅವೆರಡೂ ಬರಬೇಕು. ಸೋಷಿಯಲ್‍ ಮೀಡಿಯಾಗಳು ಬಹಳ ಮುಖ್ಯವಾದ ವಿಷಯಗಳನ್ನು ತಲುಪಿಸೋಕೆ ಮಹತ್ವದ ಪಾತ್ರ ವಹಿಸುತ್ತಿದೆ. ಇದರಲ್ಲಿ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಅವೆರಡರಲ್ಲಿ ನಾವು ಯಾವುದನ್ನು ತೆಗೆದುಕೊಳ್ಳುತ್ತೇವೆ ಎನ್ನುವುದು ಬಹಳ ಮುಖ್ಯ. ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಲ್ಲಿ ಅನಂತ್‍ ನಾಗ್‍ ಒಂದು ಸಂಭಾಷಣೆ ಹೇಳ್ತಾರೆ. ‘ನಮ್ಮೆಲ್ಲರಲ್ಲೂ ಕಪ್ಪು ನಾಯಿ, ಬಿಳಿ ನಾಯಿ ಇರತ್ತೆ. ಕಪ್ಪು ನಾಯಿ ಕೆಟ್ಟದ್ದು, ಬಿಳಿ ನಾಯಿ ಒಳ್ಳೇದು.

ಅವೆರಡರಲ್ಲಿ ನಾವು ಯಾವುದಕ್ಕೆ ಊಟ ಜಾಸ್ತಿ ಹಾಕುತ್ತೇವೆ ಅನ್ನೋದು ಮುಖ್ಯ’ ಅಂತಾರೆ. ನಾವು ಎರಡನ್ನೂ ನೋಡಬೇಕು. ಅಣು ಬಾಂಬ್‍ ಕಂಡುಹಿಡಿದಿದ್ದು ಎನರ್ಜಿಗೆ, ಇನ್ನೊಬ್ಬರನ್ನು ಕೊಲ್ಲುವುದಕ್ಕೆ ಅಲ್ಲ. ಇಲ್ಲಿ ನಮ್ಮ ಮನಸ್ಸಾಕ್ಷಿ, ಆತ್ಮಾವಲೋಕನ ಬಹಳ ಮುಖ್ಯ. ಇದನ್ನು ಯಾರೋ ಒಬ್ಬರು ನೋಡುವುದಿಲ್ಲ. ಹೆಣ್ಮಕ್ಕಳು ನೋಡುತ್ತಿರುತ್ತಾರೆ. ಸಮಾಜದ ಒಂದು ಸ್ವಾಸ್ತ್ಯ ನೋಡುತ್ತಿರುತ್ತದೆ. ಅವರಿಗೆ ನಾವೇನು ತಲುಪಿಸಬೇಕು, ಯಾವುದು ಮುಖ್ಯ ಆಗಬೇಕು ಎಂಬುದು ನಮ್ಮ ಕೈಯಲ್ಲಿರೋದು. ಇವತ್ತಿನ ಯುವ ಜನಾಂಗದ ತಪ್ಪೇನು ಇಲ್ಲ. ಒಬ್ಬಿಬ್ಬರು ತಪ್ಪು ಮಾಡಿದರೆ, ಎಲ್ಲರೂ ತಪ್ಪು ಮಾಡುತ್ತಾರೆ ಎನ್ನುವುದು ತಪ್ಪು. Let’s be responsible ಅಷ್ಟೇ. (ಬರಹ : ಚೇತನ್ ನಾಡಿಗೇರ್, ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ

Published

on

  • ಶಂಕರ ದೇವರು ಹಿರೇಮಠ, ಸಾಹಿತಿಗಳು

ಮಸ್ಕಿ ಭಾರತ ದೇಶ ಕೃಷಿ ಪ್ರಧಾನವಾದ ದೇಶ.ಇಲ್ಲಿ ಹಲವಾರು ಭಾಷೆ, ಹಲವಾರು ಸಂಸ್ಕೃತಿ ಹಾಗೂ ಹಲವಾರು ರಾಜ್ಯಗಳನ್ನು ಒಳಗೊಂಡ ಭಾರತ. ತನ್ನೊಳಗೆ ವಿಭಿನ್ನ ಸಂಸ್ಕೃತಿಯನ್ನು ಐತಿಹಾಸಿಕ ಹಿನ್ನೆಲೆಯನ್ನು ಒಳಗೊಂಡಿದೆ. ಇಲ್ಲಿ ಆಚರಿಸುವ ಬಹುತೇಕ ಹಬ್ಬಗಳು ಹಳ್ಳಿಯ ಸೊಗಡಿನೊಂದಿಗೆ ಸಮ್ಮಿಲಿತಗೊಂಡಿವೆ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಬಹುತೇಕ ಹಬ್ಬಗಳ ಹಿನ್ನೆಲೆಯನ್ನು ಒಳಗೊಂಡಿವೆ .

ಮಳೆಗಾಲದಲ್ಲಿ ಬರುವ ವಿಶೇಷ ಹಬ್ಬವೇ ಮಣ್ಣೆತ್ತಿನ ಅಮಾವಾಸ್ಯೆ. ಮಳೆಗಾಲದ ಪ್ರಾರಂಭದ ದಿನಗಳಲ್ಲಿ ಬರುವ ಈ ಹಬ್ಬ ಉತ್ತರ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡುತ್ತದೆ .ಮುಂಗಾರು ಪ್ರಾರಂಭವಾಗಿ ರೈತರು ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಿ ಹೊಲಗಳನ್ನು ಹಸನು ಮಾಡಿ ಬಿತ್ತನೆ ಹಾಗೂ ನಾಟಿಯನ್ನು ಮಾಡಿರುತ್ತಾರೆ. ಹೊಲಗಳು ಹಸಿರಿನಿಂದ ಕಂಗೊಳಿಸುತ್ತಿರುತ್ತವೆ ಇಂತಹ ದಿನಗಳಲ್ಲಿ ರೈತರು ವಿಶ್ರಾಂತಿಯನ್ನು ಪಡೆಯುವ ಜೊತೆಗೆ ತಮ್ಮ ಒಡನಾಡಿಯಾದ ಜಾನುವಾರುಗಳನ್ನು, ಎತ್ತುಗಳನ್ನು ಪ್ರೀತಿಯಿಂದ ಪೋಷಿಸುತ್ತಾರೆ .ಕಾರ ಹುಣ್ಣಿಮೆಯ ನಂತರ ಬರುವ ಮಣ್ಣೆತ್ತಿನ ಅಮವಾಸೆ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಬಹು ಸಂಭ್ರಮದ ಹಬ್ಬ .

ರೈತರ ಒಡನಾಡಿ ಹಾಗೂ ರೈತರ ಉಸಿರೆಂದರೆ ಎತ್ತುಗಳು ಎತ್ತುಗಳೊಂದಿಗೆ ರೈತರು ಅವಿನಾಭಾವ ಸಂಬಂಧವನ್ನು ಹೊಂದಿರುತ್ತಾರೆ .ಎತ್ತುಗಳನ್ನು ಕೇವಲ ಪ್ರಾಣಿಗಳೆಂದು ಪರಿಗಣಿಸದೆ ತಮ್ಮ ಮನೆಯ ಸದಸ್ಯರಂದೇ ಪರಿಗಣಿಸಿ ಅವುಗಳನ್ನು ಪ್ರೀತಿಯಿಂದ ಅಕ್ಕರೆಯಿಂದ ಸಾಕುತ್ತಿರುತ್ತಾರೆ. ರಾಮ, ಲಕ್ಷ್ಮಣ ಭೀಮ, ಕರಿಯ, ಚೆನ್ನ,ಬಸವ, ಕೆಂಪ ಹಾಗೂ ತಮ್ಮ ನೆಚ್ಚಿನ ನಾಯಕ ನಟರ ಹೆಸರನ್ನು ತಮ್ಮ ಪ್ರೀತಿಯ ಎತ್ತುಗಳಿಗೆ ಇಟ್ಟು ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಾರೆ. ರೈತರ ಕಷ್ಟ ,ಸುಖಗಳಲ್ಲಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಎತ್ತುಗಳಿಗೆ ರೈತರು ಅಪಾರ ಗೌರವವನ್ನು ನೀಡುತ್ತಾರೆ.

ಶಂಕರ ದೇವರು ಹಿರೇಮಠ, ಸಾಹಿತಿಗಳು

ಮಣ್ಣೆತ್ತಿನ ಅಮಾವಾಸ್ಯೆ ದಿನದ ಮೊದಲೇ ಹಳ್ಳ, ಹೊಳೆ, ಗದ್ದೆಗಳಿಂದ ಮಣ್ಣನ್ನು ತಂದು ಜೋಡಿ ಎತ್ತುಗಳನ್ನು ಮಾಡಿ ಎತ್ತುಗಳಿಗೆ ಮೇವು ಹಾಕುವ ಒಂದು ಗೋದಲಿಯನ್ನು ಮಾಡುತ್ತಾರೆ. ಎತ್ತುಗಳನ್ನು ಮಣ್ಣಿನಿಂದಲೇ ಮಾಡಿ ಅವುಗಳನ್ನು ದೇವರ ಮನೆಯ ಜಗಲಿ ಮೇಲಿಟ್ಟು ಪೂಜೆ ಮಾಡುತ್ತಾರೆ. ಇನ್ನೂ ಕೆಲವರು ಹೊಲಗಳಿಗೆ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಮಾಡುತ್ತಾರೆ .

ರೈತ ಹಾಗೂ ಎತ್ತುಗಳಿಗೆ ಅವಿನಾಭಾವ ಸಂಬಂಧ ಶತಶತಮಾನಗಳಿಂದ ಇದೆ. ಭಾರತದ ಪ್ರತಿಯೊಂದು ಕೃಷಿ ಕುಟುಂಬವು ಕೃಷಿಯೊಂದಿಗೆ ಹಾಗೂ ಮಣ್ಣಿನೊಂದಿಗೆ ಅವಿನಾಭಾವ ಸಂಬಂಧದ ನಂಟಿದೆ .ಮಳೆಗಾಲದಲ್ಲಿ ಬಿತ್ತನೆಯಾಗಿ ಬೆಳೆ ಬೆಳೆದು ಹಸಿರಿನಿಂದ ಭೂಮಿ ಕಂಗೊಳಿಸುತ್ತಿರುವ ಈ ದಿನಗಳಲ್ಲಿ ಕೃಷಿಯಲ್ಲಿ ಭಾಗಿಯಾಗುವ ಎತ್ತುಗಳಿಗೆ ಗೌರವಿಸುವ ಮೂಲಕ ಈ ದಿನಗಳಲ್ಲಿ ಶ್ರಮ ಶ್ರಮ ಸಂಸ್ಕೃತಿಯನ್ನು ಗೌರವಿಸುವ ಕಾರ್ಯ ಶತಮಾನಗಳಿಂದ ನಡೆದುಕೊಂಡು ಬಂದಿದೆ .

ಹಳ್ಳಿಗಳಲ್ಲಿ ಕುಂಬಾರರು ತಯಾರಿಸಿದ ಸುಂದರವಾದ ಎತ್ತುಗಳನ್ನು ಕೊಂಡು ತಂದು ಅವುಗಳಿಗೆ ಪೂಜೆ ಸಲ್ಲಿಸಿ ಸಂಭ್ರಮಿಸಿ ಸಂತೋಷಪಡುವರು. ರೈತರು ಹಿಂದೆ ಎತ್ತುಗಳನ್ನು ಕೊಟ್ಟು ಅದರ ಬದಲಾಗಿ ದವಸ ಧಾನ್ಯಗಳನ್ನು ಪಡೆಯುತ್ತಿದ್ದರು. ಇಂದು ನಗರೀಕರಣದ ಪರಿಣಾಮ ಎತ್ತುಗಳು ಮಾರಾಟದ ಸರಕಾಗಿ ಪರಿಣಮಿಸಿವೆ. ಆದರೂ ಇನ್ನೂ ಹಳ್ಳಿಗಳಲ್ಲಿ ಎತ್ತುಗಳನ್ನು ಪೂಜ್ಯನೀಯ ಸ್ಥಾನದಲ್ಲಿ ಇಟ್ಟು ಗೌರವಿಸುತ್ತಾರೆ. ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಮಕ್ಕಳಿಗೆ ಸಂಭ್ರಮದ ಹಬ್ಬ. ಹಬ್ಬದ ಮರುದಿನ ಮಕ್ಕಳು ಮನೆ ಮನೆಗೆ ತೆರಳಿ ಕುಂಟೆತ್ತು ಬಂದಿದೆ ಅಂತ ಹೇಳಿ ಅಕ್ಕಿ, ಜೋಳ, ಕಾಳು, ಬೆಲ್ಲ ತಂದು ಅವುಗಳಿಂದ ಸಿಹಿ ಅಡಿಗೆ ಮಾಡಿಕೊಂಡು ಎಲ್ಲ ಮಕ್ಕಳು ಊಟ ಮಾಡಿ ಎತ್ತುಗಳಿಗೆ ಮತ್ತೊಮ್ಮೆ ಪೂಜೆ ಸಲ್ಲಿಸಿ ಅವುಗಳನ್ನು ವಿಸರ್ಜಿಸುವ ಪದ್ಧತಿ ರೂಢಿ ಇದೆ. ಮಕ್ಕಳೆಲ್ಲ ಸಂಭ್ರಮದಿಂದ ಈ ಕಾರ್ಯದಲ್ಲಿ ಭಾಗವಹಿಸಿ ಮಣ್ಣೆತ್ತಿನ ಅಮಾವಾಸ್ಯೆ ಯನ್ನು ಜೀವಂತವಾಗಿಸುವ ಕಾರ್ಯವನ್ನು ಈಗಲೂ ಮಾಡುತ್ತಿದ್ದಾರೆ .

ಈಗೀಗ ಕೃಷಿ ಚಟುವಟಿಕೆಗಳಿಗೆ ಹೆಚ್ಚಾಗಿ ಯಂತ್ರಗಳನ್ನು ಹಾಗೂ ಟ್ರ್ಯಾಕ್ಟರ್ ಗಳನ್ನು ಬಳಸುತ್ತಿರುವ ಕಾರಣದಿಂದ ಎತ್ತುಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ರೈತರ ಒಡನಾಡಿಯಾದ ಎತ್ತುಗಳು ಇಂದು ಪ್ರತಿಷ್ಠೆಯ ಪ್ರತೀಕವಾಗಿ ಇನ್ನೂ ಕುಟುಂಬದ ಕೆಲವರು ಲಕ್ಷ ಲಕ್ಷ ಹಣ ಕೊಟ್ಟು ಖರೀದಿಸಿ ಮನೆಗೆ ತಂದು ಎತ್ತುಗಳನ್ನು ಸಾಕುತ್ತಿದ್ದಾರೆ. ಎತ್ತುಗಳು ನಮ್ಮ ಅನ್ನದಾತರ ಗೌರವ ಪ್ರತೀಕ .ನಾವೆಲ್ಲರೂ ಕುಳಿತು ಊಟ ಮಾಡುವ ಪ್ರತಿಯೊಂದು ಅನ್ನದ ಅಗಳಿನ ಹಿಂದೆ ಕೋಟಿಗಟ್ಟಲೆ ರೈತರ ಶ್ರಮ ಇದೆ .ಆ ಶ್ರಮದ ಹಿಂದೆ ಎತ್ತುಗಳ ಒಡೆಯನಾದ ರೈತನ ಮೇಲಿನ ಪ್ರೀತಿ ಇದೆ .(ಬರಹ-ಶಂಕರ ದೇವರು ಹಿರೇಮಠ, ಸಾಹಿತಿಗಳು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ19 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ19 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ19 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ20 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ20 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ21 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ22 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending