ಬಹಿರಂಗ
ಕತ್ತೆಗೆ ಇಲ್ಲದ ಹಿರಿಮೆ ಗೋವಿಗೇಕೆ..!
ಅದು ಆಗಸ್ಟ್ 15. ಸ್ವಾತಂತ್ರ್ಯ ದೊರೆತ ದಿನ.ಕೀಲರಾಘವೇಂದ್ರ ಅವರೊಡನೆ 7 ದಶಕಗಳಲ್ಲಿ ನಾವುಗಳುಸಾಗಿಬಂದ ಹಾದಿಯನ್ನು ಮೆಲುಕುಹಾಕುತ್ತಿದ್ದೆ.ನಮ್ಮಮಾತುಕತೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಸುತ್ತಿಬಂತು. ಮಾತಿನ ಮಧ್ಯೆದಲ್ಲಿ ಗೋವಿನ ಹೆಸರಲ್ಲಿ ನರಮೇಧನಡೆಯುತ್ತಿದೆ. ಜನ ಅಭದ್ರತೆ, ಭಯ, ಆತಂಕದಿಂದ ಬದುಕುದೂಡುವ ಸ್ಥಿತಿ ನಿರ್ಮಾಣವಾಯಿತಲ್ಲ ಎಂಬ ವಿಚಾರವೂಬಂದಿತು. ನಾನಾಗ ಗೋವು ಕಾಮಧೇನು.ಅದರ ಹಾಲು,ಗಂಜಲ,ಸೆಗಣಿ ಎಲ್ಲವೂ ಬಳಕೆಗೆ ಯೋಗ್ಯ. ಸಾಲದಕ್ಕೆಹಿಂದುಳಿದ ಗೊಲ್ಲ ಸಮುದಾಯದ ಜೀವನಾಧಾರ ಕೂಡಆಗಿದೆ. ಆದರೆ, ಗೋವಿಗಿಂತ ಕತ್ತೆ ಬಹುಪಯೋಗಿ. ಇದನ್ನೇಕೆಜನ ಪೂಜಿಸುವುದಿಲ್ಲ, ಗೌರವಿಸುವುದಿಲ್ಲ? ಇದರ ರಕ್ಷಣೆಗಾಗಿಬಡಿದಾಡುವುದಿಲ್ಲ. ಸಂರಕ್ಷಣೆಗಾಗಿ ಸಮಿತಿಯನ್ನು ಮಾಡಿಲ್ಲ. ಸರ್ಕಾರ ಕೂಡ ಒಂದು ಬಿಡಿಗಾಸನ್ನೂ ಕತ್ತೆ ಸಂರಕ್ಷಣೆಗೆನೀಡಿಲ್ಲ ಎಂದುಒಂದೇ ಸಮನೆ ಉಸುರಿದೆ.ಎದುರು ಕುಳಿತಿದ್ದವಕೀಲ ರಾಘವೇಂದ್ರ ಹೌದಲ್ವ! ಗೋವಿಗೆ ನೀಡಿದಷ್ಟು ಮಹತ್ವಕತ್ತೆಗೇಕೆ ನೀಡಿಲ್ಲ? ನಾವೇಕೆ ಕತ್ತೆ ಸಂರಕ್ಷಣೆಗಾಗಿ ಹೋರಾಟ ಮಾಡಬಾರದೆಂದು ಪ್ರಶ್ನಿಸಿದರು.
ಇದೇ ಹೊತ್ತಿನಲ್ಲಿ ನಾಲ್ಕು ಘಟನೆಗಳು ನನ್ನನ್ನು ಬಹುವಾಗಿಕಾಡಿದವು. ಒಂದು ಉತ್ತರಖಂಡ್ ವಿಧಾನಸಭೆಯಲ್ಲಿ ಅಲ್ಲಿನಪಶುಸಂಗೋಪನಾ ಇಲಾಖೆ ಸಚಿವೆ ರೇಖಾ ಆರ್ಯ ಗೋವಿಗೆ’ರಾಷ್ಟ್ರಮಾತೆ’ ಸ್ಥಾನಮಾನ ನೀಡಬೇಕೆಂಬ ನಿರ್ಣಯಮಂಡಿಸಿದ್ದರು. ಎರಡು, ದೂರದ ಕೊಲಂಬಿಯಾದಲ್ಲಿಕತ್ತೆಗಳಿಗೆ ಸೌಂದರ್ಯ ಸ್ಪರ್ಧೆಯನ್ನು ಏರ್ಪಡಿಸಿದ್ದರು. ಕಳೆದ15 ವರ್ಷಗಳಿಂದ ಮೋನಿಕ್ಯುಯಿರಾ ಪಟ್ಟಣದಲ್ಲಿ ಕತ್ತೆಉತ್ಸವ ಆಯೋಜಿಸಲಾಗುತ್ತಿದೆ. ಮೂರು, ಈಜಿಪ್ಟ್ನ ಮೃಗಾಲಯದಲ್ಲಿ ಕತ್ತೆಗೆ ಕಪ್ಪು-ಬಿಳಿ ಬಣ್ಣ ಬಳಿದು ’ಜೀಬ್ರಾ’ ಎಂದು ಜನರನ್ನು ನಂಬಿಸುತ್ತಿದ್ದರಂತೆ. ಇದನ್ಹೇಗೋಅರಿತವನೊಬ್ಬ ನಕಲಿ ಜೀಬ್ರಾದ ಫೋಟೋ ಸೆರೆ ಹಿಡಿದುಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾನೆ. ನಾಲ್ಕು, ಗಾಜಾದಲ್ಲಿರುವ ಎರಡು ಕತ್ತೆಗಳಿಗೆ ಬಣ್ಣ ಬಳಿದು ಜೀಬ್ರಾಎಂದು ನಂಬಿಸಲಾಗಿದೆ. ಇದೇ ರೀತಿ ಚೀನಾಮೃಗಾಲಯವೊಂದರಲ್ಲಿ ಟಿಬೇಟಿಯನ್ನ ಮುಸ್ಟೀಫ್ಜಾತಿಯ ನಾಯಿಯೊಂದನ್ನು ಸಿಂಹ ಎಂದುನಂಬಿಸಲಾಗಿತ್ತು. ಜನ ಬೋನಿನ ಬಳಿ ಹೋದಾಗ ಸಿಂಹಸ್ವರೂಪದ ನಾಯಿ ಬೊಗಳಿ ತನ್ನ ನಿಜ ಬಣ್ಣ ತಿಳಿಸಿದೆ! ಇದನ್ನೆಲ್ಲಾ ಕೇಳಿದಾಗ ಅಮಾಯಕ ಪ್ರಾಣಿಗಳನ್ನು ಮನುಷ್ಯತನ್ನ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳುವುದನ್ನುಕಾಣಬಹುದು. ಅತ್ಯಂತ ಸಾಧು ಪ್ರಾಣಿ ಎಂದೇಕರೆಸಿಕೊಂಡಿರುವ ಹಸು ಕೂಡ ಕೋಪ ಬಂದಾಗಒದೆಯುವುದು, ಹಾಯುವುದು ಮಾಡುತ್ತದೆ. ಸ್ವಾಮಿನಿಷ್ಟೆಗೆಹೆಸರಾದ ನಾಯಿ ಕೂಡ ತನ್ನ ಯಜಮಾನನನ್ನು ಕಚ್ಚಿರುವಉದಾಹರಣೆಗಳಿವೆ. ಆದರೆ, ಕತ್ತೆಯ ಮೇಲೆ ಎಷ್ಟೇ ಮಣಭಾರಹಾಕಿ, ಮೇವು, ನೀರು ನೀಡದಿದ್ದರೂ ಅದುವ್ಯಗ್ರಗೊಳ್ಳುವುದಿಲ್ಲ. ಹೊಟ್ಟೆ ತುಂಬಾ ಹಾಕಿದರೂ ಅದು ಸಂತಸಗೊಳ್ಳುವುದಿಲ್ಲ. ಸದಾ ಸಮಚಿತ್ತದಿಂದ ಕೂಡಿರುತ್ತದೆ. ಸುಖದುಃಖ ಯಾವುದಕ್ಕೂ ತಲೆಕೆಡಿಸಿಕೊಳ್ಳದೇ, ತಾನು ಜನ್ಮತಳೆದಿರುವುದೇ ಸೇವೆಗಾಗಿ, ಇನ್ನೊಬ್ಬರ ಹಿತಕ್ಕಾಗಿ ಎಂದುಕಿವುಡನಂತೆ, ಮೂಕನಂತೆ ಬದುಕು ಸವೆಸುತ್ತದೆ.ಗಡಿಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಎಂತಹುದ್ದೇಕುರುಕಲು ಸ್ಥಳ ಇದ್ದರೂ, ಸೈನಿಕರಿಗೆಊಟ – ನೀರು, ಮದ್ದುಗುಂಡುಸಾಗಿಸುವ ಏಕೈಕ ಜೀವಿ ಕತ್ತೆ. ಮನುಷ್ಯನಿಂದತಲುಪಲು, ಹೊರಲು ಆಗದ ಭಾರವನ್ನು ಹೊತ್ತು ನಿಸ್ವಾರ್ಥಸೇವೆ ನೀಡುವ ಜೀವಿ ಕತ್ತೆ. ತನ್ನ ಹೆಗಲ ಮೇಲೆ ಮೈಲಿಗೆ ಬಟ್ಟೆ, ಮಡಿಬಟ್ಟೆ; ಸ್ಪೃಷ್ಯರ ಬಟ್ಟೆ, ಅಸ್ಪೃಷ್ಯರ ಬಟ್ಟೆ; ಬಡವನ ಬಟ್ಟೆ – ಶ್ರೀಮಂತನ ಬಟ್ಟೆ ಎಂದೆಲ್ಲಾ ಎಣಿಸದೇ ಹೊತ್ತು ಸಾಗುವ ಕತ್ತೆನಿಜಾರ್ಥದಲ್ಲಿ ’ಜಾತ್ಯಾತೀತ’ವಾದಿ. ಗೋವಿನ ಹಾಲನ್ನುಜೀವನಪೂರ್ತಿಸೇವಿಸಬೇಕು.ಕತ್ತೆ ಹಾಲನ್ನು ಜೀವನದಲ್ಲೊಮ್ಮೆಸೇವಿಸಿದರೆ ಸಾಕು ಅದು One time booster. ಐದು ಹನಿಕತ್ತೆ ಹಾಲು 100 ವರ್ಷ ರೋಗ ನಿರೋಧಕ ಶಕ್ತಿಯಾಗಿಕಾರ್ಯನಿರ್ವಹಿಸುತ್ತೆ. ನನಗೆ ಈಗಲೂ ನೆನಪಿದೆ. ಸಣ್ಣವನಿದ್ದಾಗ ನನಗೂ ಕತ್ತೆ ಹಾಲು ಕುಡಿಸಲಾಗಿತ್ತು. ಮಾತ್ರವಲ್ಲ, ನಾನು ನನ್ನ ಮೂರು ಮಕ್ಕಳಿಗೂ ಕತ್ತೆ ಹಾಲಿನ booster ಹಾಕಿಸಿರುವೆ.
ಕತ್ತೆಗಳನ್ನಿಂದು ಅಭಿವೃದ್ಧಿ ಕಾಣದ ರಾಷ್ಟ್ರಗಳಲ್ಲಿಯೇ ಹೆಚ್ಚಾಗಿಬಳಸಲಾಗುತ್ತಿದೆ. ಇವನ್ನು ಸರಕು ಸಾಗಾಣಿಕೆಗೆ ಮಾತ್ರವಲ್ಲದೇ, ಕೃಷಿ ಬಳಕೆಗೆ, ಬರ ಪರಿಹಾರದಕಾರ್ಯಗಳಲ್ಲಿಯೂ ಬಳಸಿಕೊಳ್ಳಲಾಗುತ್ತಿದೆ. ಕೃಷಿಯಲ್ಲಿಅತ್ಯಂತ ಅಗ್ಗದ ಬೆಲೆಗೆ ಬಳಕೆಯಾಗುವ ಶ್ರಮಜೀವಿಗಳಲ್ಲಿಮನುಷ್ಯ ಮೊದಲಿಗನಾದರೆ, ಕತ್ತೆ ಎರಡನೇ ಸ್ಥಾನವನ್ನುಅಲಂಕರಿಸಿದೆ. ಕತ್ತೆಯನ್ನು ಕುರಿ ಕಾಯಲೂ ಬಳಸಲಾಗುತ್ತದೆ. ಕತ್ತೆ ಸವಾರಿ ಮಕ್ಕಳಿಗೆ ಮಾತ್ರವಲ್ಲ, ಪ್ರಯಾಣಿಕರಿಗೂ ಅಚ್ಚುಮೆಚ್ಚು.ಕತ್ತೆ ಹಾಲು ಮತ್ತು ಮಾಂಸಕ್ಕೆ ಇಟಲಿಯಲ್ಲಿ ಹೆಚ್ಚು ಬೇಡಿಕೆಇದೆ. ಯೂರೋಪ್ನ ಹಲವು ಕಡೆ ಮಾಂಸದ ಖಾದ್ಯಗಳುಹೆಚ್ಚು ಜನಪ್ರಿಯಗೊಂಡಿವೆ. ಇದರ ಹಾಲಿನಿಂದ ಸೋಪು, ಕ್ರೀಂಗಳನ್ನು ಉತ್ಪಾದಿಸಲಾಗುತ್ತದೆ. ಕತ್ತೆಯ ಹಾಲು, ಕ್ರೀಂನಿಂದ ಚರ್ಮವ್ಯಾದಿಗಳು ಗುಣವಾಗುತ್ತವೆ. ಅಲ್ಲದೆಕತ್ತೆಯ ಚರ್ಮವನ್ನು ಕಾಗದ ತಯಾರಿಸಲು ಬಳಸಲಾಗುತ್ತದೆ. ಕತ್ತೆಯ ಮಾಂಸದಲ್ಲಿ ರೋಗ ನಿರೋಧಕ ಶಕ್ತಿಹೆಚ್ಚಾಗಿರುವುದರಿಂದ ಚೀನಿಯರಂತು ಮುಗಿಬಿದ್ದುತಿನ್ನುತ್ತಾರೆ.ಇವನ್ನೆಲ್ಲಾ ಕಂಡಾಗ ಅಮಾಯಕ ಪ್ರಾಣಿಗಳನ್ನು ಮನುಷ್ಯತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿರುವುದು ಕಂಡುಬರುತ್ತದೆ. ಇಲ್ಲಿ ಕತ್ತೆಯನ್ನು ಬಲಿಪಶು ಮಾಡಲಾಗಿದೆ ಎಂದುಮೇಲ್ನೋಟಕ್ಕೆ ಅನಿಸಬಹುದು. ಆದರೆ, ವಾಸ್ತವದಲ್ಲಿ ಬಲಿಪಶುಕತ್ತೆಯಲ್ಲ, ಬದಲಾಗಿ ಮನುಷ್ಯನೇ ಆಗಿದ್ದಾನೆ.ಕತ್ತೆಯನ್ನು ಜೀಬ್ರಾ ಎಂದು ಬಣ್ಣಿಸಲು, ತೋರಿಸಲು, ವೈಭವೀಕರಿಸಬೇಕಾಗುತ್ತದೆ. ಚತುರತೆ ಮತ್ತು ಬುದ್ಧಿವಂತಿಕೆಎರಡನ್ನೂ ಬೆರಸಿ ಜನರನ್ನು ನಂಬಿಸಬೇಕಾಗುತ್ತದೆ. ಪಾಪದಕತ್ತೆ ಹೊಸವೇಷ ಹೊತ್ತು, ತಾನು ಜೀಬ್ರಾ ಎಂದುತೋರಿಸಿಕೊಳ್ಳುವ ದುಸ್ಥಿತಿಯಲ್ಲಿದೆ. ’ಒಂದು ಭ್ರಷ್ಟ ಕತ್ತೆ ಹೆಚ್ಚಿನಮಟ್ಟದ ಪುರಸ್ಕಾರಕ್ಕೆ ಪಾತ್ರವಾಗುತ್ತದೆ’. ’ಹಗರಣದ ಕತ್ತೆಕಾನೂನಿನ ಅಡಿಯಲ್ಲಿ ಆಶ್ರಯ ಪಡೆಯುತ್ತದೆ’. ’ಎದುರಾಡದಕತ್ತೆಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’. ’ವಂಚಕ ಕತ್ತೆಹುಲುಸಾಗಿ ಬೆಳೆಯುತ್ತದೆ’. ಕತ್ತೆಯ ಈ ಎಲ್ಲಾ ರೂಪಕಗಳುಜೀವಂತವಾಗಿ ಮನುಜರಲ್ಲಿಯೂ ಇವೆ. ಕೆಲವು ಕಡೆಕತ್ತೆಗಳನ್ನು ಮಳೆ ಬಾರದಿದ್ದಾಗ ಪೂಜೆ ಮಾಡಲು, ಮದುವೆಮಾಡಿಸಲು ಬಳಸಲಾಗುತ್ತದೆ. ವಿಚಿತ್ರವೆಂದರೆ, ಹೊಲಸುತಿನ್ನುವ ಹಂದಿಗಳನ್ನು ಗುಡಿಯಲ್ಲಿಟ್ಟು ಪೂಜಿಸಲಾಗುತ್ತದೆ!’ದಿನ ಬೆಳಗೆದ್ದು ನನ್ನನ್ನು ನೋಡಿ, ನಿಮಗೆ ಶುಭವಾಗುತ್ತದೆ’ ಎಂದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾರಾಟವಾಗುವ ಕತ್ತೆ, ಅಲೆದಾಡಿ ಹೊಟ್ಟೆ ತುಂಬಿಸಿಕೊಳ್ಳಬೇಕು. ನಿರ್ಲಕ್ಷಕ್ಕೆಈಡಾಗುವ ಕತ್ತೆ ಎರಡನೇ ದರ್ಜೆಯ ಪ್ರಾಣಿ. ಶೋಷಿತ ಪ್ರಾಣಿಆಗಿದೆ. ಮನುಷ್ಯ ತನ್ನ ಅನುಕೂಲಕ್ಕಾಗಿ ಕತ್ತೆಯನ್ನುಜೀಬ್ರಾವನ್ನಾಗಿ, ಸಿಂಹವನ್ನಾಗಿ ಹೇಗೆ ಬೇಕಾದರೂಬದಲಾಯಿಸಿಬಿಡುತ್ತಾನೆ. ಹೀಗೆ ಬಣ್ಣ ಬಳಿಸಿಕೊಂಡ ಕತ್ತೆಗಳುಹಾಗೆಯೇ ಇರುವುದಿಲ್ಲ. ಮಳೆ ಬಿದ್ದರೆ ಅವು ಕತ್ತೆಯಾಗುತ್ತವೆ. ಅದು ಪ್ರಧಾನಿ ಬಟ್ಟೆ ಹೊತ್ತು ನಡೆದರೂ ಸರಿ, ಪರಿಚಾರಕನಬಟ್ಟೆ ಹೊತ್ತು ನಡೆದರೂ ಸರಿ, ಅದರ ಬೆನ್ನು ತೂಕಹೊರಲೇಬೇಕು. ನನಗನಿಸಿದಂತೆ ಇವು ಟನ್ಗಟ್ಟಲೆ ತೂಕಮಾತ್ರ ಹೊರುವುದಿಲ್ಲ, ಅವಮಾನವನ್ನು ಹೊರುತ್ತವೆ. ಯಾವುದೇ ಬಣ್ಣ ಬಳಿದುಕೊಂಡರೂ ಕತ್ತೆಯಾಗಿಯೇಉಳಿಯುತ್ತವೆ.
ಯಾರನ್ನಾದರೂ ಕೂಗಿದಾಗ ಸ್ಪಂದಿಸದಿದ್ದರೆ, ಏಯ್ ಕತ್ತೆಎಂದು ಕೂಗಿ ಕರೆಯುವುದು ವಾಡಿಕೆಯಾಗಿಬಿಟ್ಟಿದೆ. ಎಲ್ಲರೂಕತ್ತೆಯನ್ನು ಕಿವುಡ, ಮೂಕ ಪ್ರಾಣಿ ಎಂದುಕೊಂಡುಬಿಟ್ಟಿದ್ದಾರೆ. ಇದು ಮೂಕವೂ ಅಲ್ಲ, ಬದಲಿಗೆ ಅತೀವ ತಾಳ್ಮೆಯನ್ನುಹೊಂದಿದೆ. ಹೀಗಾಗಿಯೆ ಕತ್ತೆಗೆ ಇಂತಹದ್ದೊಂದು ವಿಶೇಷಣಬಂದಿರಬಹುದು.ಕತ್ತೆಯ ಮುಂದೆ ನೀರು ಮತ್ತು ಆಹಾರ ಎರಡನ್ನೂ ಇಟ್ಟರೆ, ಯಾವುದನ್ನೂ ಸೇವಿಸದೆ ಪ್ರಾಣ ಬಿಡುತ್ತದೆ. ಕಾರಣ ಕತ್ತೆಗೆಹಸಿವು ಮತ್ತು ದಾಹ ಎರಡರಲ್ಲಿ ಯಾವುದನ್ನು ಮೊದಲಿಗೆಆಯ್ಕೆ ಮಾಡಿಕೊಳ್ಳಬೇಕೆಂಬ ಜ್ಞಾನ ಹೊಂದಿರುವುದಿಲ್ಲ. ಕತ್ತೆಯ ಮೇಲೆ ಹಣ ಹೂಡಿರಿ. ಅದು ನಿಮಗೆ ಸದಾವಿಧೇಯತೆಯಿಂದ ನಡೆದುಕೊಳ್ಳುತ್ತದೆ. ನಿಮ್ಮನ್ನು ಸ್ವಾಮಿಎಂಬಂತೆ ಭಾವಿಸುತ್ತದೆ. ಅದರಲ್ಲೂ ಕತ್ತೆಗಳು ಹೆಂಗಸರಂತೆಆಡು-ಕುರಿಗಳಂತೆ ತಲೆ ತಗ್ಗಿಸಿಕೊಂಡು ಹೇಳಿದ್ದನ್ನು ಪಾಲಿಸುತ್ತದೆ. ಕೆಲೆವೆಡೆ ಕುದುರೆಗಿಂತ ಕತ್ತೆ ವಾಸಿ ಎಂಬಮಾತಿದೆ. ಕತ್ತೆಯ ಮೇಲೆ ಕೂತರೆ ಹೊರುತ್ತದೆ. ಹೊರಿಸಿದರೆಸಾಗುತ್ತದೆ. ಆದರೆ ಕುದುರೆ ಮೇಲೆ ಕೂತರೆ, ಹೊರಿಸಿದರೆ ಎತ್ತಿಬೀಸಾಡುತ್ತದೆ. ಹೀಗಾಗಿ ಕತ್ತೆ ಪವಿತ್ರ ಸ್ಥಳ ಮೆಕ್ಕಾಗಿ ಹೋಗಿಬಂದರೂ,ಅದು ಕತ್ತೆಯಾಗಿಯೇ ಬದುಕು ದೂಡುತ್ತದೆ.Democratic Party of UnitedStates ನ ಚಿಹ್ನೆ ಕೂಡಕತ್ತೆಯೇ ಆಗಿದೆ.ಕುದುರೆಗಿಂತ ಕತ್ತೆ ಬಲಶಾಲಿ.ಗಾಬರಿಗೆಒಳಗಾಗುವುದಿಲ್ಲ.ನೆನಪಿನ ಶಕ್ತಿಯೂ ಹೆಚ್ಚಾಗಿದೆ. ಒಮ್ಮೆಒಂದು ದಾರಿಯಲ್ಲಿ ಸಾಗಿದರೆ 20 ವರ್ಷವಾದರೂ ಆದಾರಿಯನ್ನು ಗುರುತಿಟ್ಟುಕೊಂಡು ಸಾಗುವ ಪ್ರಾಣಿ. ಜೊತೆಗೆಇದು ಒಂಟಿಯಾಗಿ ಇರಲು ಬಯಸುವುದಿಲ್ಲ. ಜೋಡಿಇರಲೇಬೇಕು. ಇಲ್ಲ ಆಡು,ಕುರಿಯ ಸಂಗಡವಾದರೂಇರಬೇಕು. ಮಾನವನಿಗೆ ಕತ್ತೆಯು ಶತಮಾನಕ್ಕೂ ಹಿಂದಿನಿಂದಸಹಕಾರಿಯಾಗಿದೆ.ಗಂಡುಕತ್ತೆ, ಹೆಣ್ಣು ಕುದುರೆಯೊಂದಿಗೆ ಕೂಡಿದಾಗಜನಿಸುವುದೇ ಹೆಸರಗತ್ತೆ. ಗಂಡು ಕುದುರೆ, ಹೆಣ್ಣುಕತ್ತೆಯೊಂದಿಗೆ ಕೂಡಿದಾಗ ಜನಿಸುವುದು ಹಿನ್ನಿ. ಜೀಬ್ರಾ ಮತ್ತುಕತ್ತೆ ಕೂಡಿದಾಗ ಹುಟ್ಟುವುದು ಜೊಂಕಿ, ಜೀಬ್ರಾಯ್ಡ್ಎನ್ನುತ್ತಾರೆ.
ಹೆಸರಗತ್ತೆಯನ್ನು ಸರಕು ಸಾಗಾಣಿಕೆಗೆ ಬಳಸುವುದರಿಂದ, ಅವುಗಳನ್ನು ನಿರ್ವೀರ್ಯರನ್ನಾಗಿಸಲಾಗಿರುತ್ತದೆ. ಅಸಿನೋಡಿಮಾರ್ಟಿನಾ, ಫ್ರಾಂಕಾ, ಮೊಮತ್ತ್ ಜಾಕ್ ತಳಿಯಕತ್ತೆಗಳನ್ನು ಗೂಳಿಯಂತೆ ಬಳಸಲಾಗುತ್ತದೆ.
ಇಷ್ಟಕ್ಕೂ ಕತ್ತೆಯ ಮೂಲ ಸೊಮಾಲಿಯಾ. ಆಡುಕುರಿ, ಗೋವನ್ನು ಸಾಕುತ್ತಿದ್ದ ಕಾಲದಿಂದಲೂ ಕತ್ತೆ ಇದೆ. ಗಂಡುದನವನ್ನು ಕೃಷಿ ಮತ್ತು ಸಾಗಾಣಿಕೆಗೆ ಬಳಸುತ್ತಿದ್ದರೂ, ದುರ್ಗಮಹಾದಿ ಕ್ರಮಿಸಲು ಕತ್ತೆಯೇ ಬೇಕಿತ್ತು. ಇದಲ್ಲದೇ, ಕತ್ತೆ ತಿಂದಮೇವನ್ನು ಮೆಲುಕು ಹಾಕುತ್ತಾ, ನೀರಿನ ಅವಶ್ಯಕತೆಇಲ್ಲದೆಯೂ ಬದುಕುತ್ತದೆ. ಸಾಲದಕ್ಕೆ ಇದರ ಹಾಲನ್ನುಗೋವಿನ ಹಾಲಿನಂತೆ ಬಳಸಲಾಗಿದೆ. ಮಾಂಸವನ್ನುಸವಿಯಲಾಗಿದೆ.ಸಿರಿಯಾದಲ್ಲಿ ಕತ್ತೆಯನ್ನು ಅಲ್ಲಿನ ಡಿಯೋನಿಸಿಸ್ ದೇವತೆಗೆಹೋಲಿಸಲಾಗಿದೆ. ಈಜಿಪ್ಟ್ನಲ್ಲಿ ಮನುಷ್ಯರನ್ನು ಅಂತ್ಯಸಂಸ್ಕಾರ ಮಾಡಿದಂತೆ ಕತ್ತೆಗೂ ಅಂತಿಮ ಗೌರವಕೊಡಲಾಗಿದೆ. ೧೬೭೯ರಲ್ಲೇ ಆರಿಜೋನ ಎಂಬಲ್ಲಿ ಕತ್ತೆಯಬಳಕೆ ಕುರಿತಂತೆ ದಾಖಲೆಗಳಿವೆ. The Domestic Animal Diversity InformationSystem ನ 2006ರ ವರದಿಯಂತೆ ಜಗತ್ತಿನಲ್ಲಿ ೪೧ ಮಿಲಿಯನ್ ಕತ್ತೆಗಳಿವೆ. ಕತ್ತೆಯ ಬಳಕೆಯಲ್ಲಿ ಭಾರತಕ್ಕಿಂತ ಚೀನಾಮುಂದಿದೆ.
ಕತ್ತೆ ಸಂಸ್ಕೃತಿಯ ಒಂದು ಭಾಗ. ಈಜಿಪ್ಟಿನ ಸೂರ್ಯದೇವನಸಂಕೇತ ಕೂಡ ಕತ್ತೆ ಆಗಿದೆ. ಜೀಸಸ್ ಕೂಡ ಕತ್ತೆಯ ಮೇಲೆಸವಾರಿ ಮಾಡುತ್ತಾ ಜೆರುಸಲೇಂ ಪ್ರವೇಶಿಸಿದ್ದಾರೆ. ಬೈಬಲ್ನಹಲವು ಕಡೆ ಕತ್ತೆ ಕುರಿತಂತೆ ಉಲ್ಲೇಖಗಳಿವೆ. ಕತ್ತೆಯಹಿಂಭಾಗ ಮತ್ತು ತೋಳಿನ ಭಾಗದಲ್ಲಿ ಜೀಸಸ್ ಗುರುತುಹಾಕಿದ್ದಾರೆಂದು ಇಂದಿಗೂ ನಂಬಲಾಗಿದೆ. ಹಿಂದೂಧರ್ಮದಲ್ಲಿ ಕತ್ತೆ ಲಕ್ಷ್ಮಿಯ ವಾಹನ, ಕರಾಳ ರಾತ್ರಿ ದೇವರವಾಹನ ಎಂದೂ ನಂಬಲಾಗಿದೆ. ಪಂಚತಂತ್ರ ಕಥೆಗಳಲ್ಲಿ ಕೂಡಕತ್ತೆಯ ಉಲ್ಲೇಖ ಇದೆ.ಜೋಹರ್ ಧರ್ಮದಲ್ಲಿ ಮಾತ್ರ ಕತ್ತೆ ಅಶುದ್ಧ ಪ್ರಾಣಿ. ಹೋಮರ್ನ ಕಾವ್ಯಗಳಲ್ಲಿ, ಷೇಕ್ಸ್ಫಿಯರ್ ಸಾನೆಟ್ಟುಗಳಲ್ಲಿಕೂಡ ಕತ್ತೆಯ ಪಾತ್ರ ಇದೆ. ವಿಲಿಯಂ ವರ್ಡ್ಸ್ವರ್ಥ್ ತನ್ನ’ಬೆಲ್ಎಬೆಲ್’ನಲ್ಲಿ ಕತ್ತೆ ಕ್ರೈಸ್ತರ ಸಂಕೇತ. ಇದೊಂದು ವಿಧೇಯಮತ್ತು ತಾಳ್ಮೆಯ ಪ್ರಾಣಿ ಎಂದಿರುವನು.’ಕತ್ತೆಯೊಂದಿಗೆಪಯಣ’ ಕೃತಿಯಲ್ಲಿ ಕತ್ತೆ ಹಠಮಾರಿ ಮತ್ತು ಭಾರ ಹೊರುವಪ್ರಾಣಿ ಎಂದು ರಾಬರ್ಟ್ ಲೂಯಿಸ್ ಸ್ಟೀವನ್ಸನ್ಬಣ್ಣಿಸಿದ್ದಾನೆ. ೧೯೪೦ರಲ್ಲಿ ಬಂದ ಡಿಸ್ನಿ ಫಿಲಂ ಫಂಟಾಸಿಯಾಮತ್ತು ೧೯೬೭ರ ಬ್ರೈಟಿ ಆಫ್ ದಿ ಗ್ರ್ಯಾಂಡ್ ಕ್ಯಾಂಗನ್ಚಿತ್ರಗಳಲ್ಲಿಯೂ ಕತ್ತೆಯ ಪಾತ್ರವಿದೆ.
ಇತಿಹಾಸದ ಉದ್ದಕ್ಕೂ ಕತ್ತೆ ಎಂದರೆ ಭಾರ ಹೊರುವ ಪ್ರಾಣಿ. ಇದು ಸಾಮಾನ್ಯವಾಗಿ ೫೦೦ ಕೆ.ಜಿ. ವರೆಗೂ ತೂಗಬಲ್ಲವು. ೨೦ರಿಂದ ೩೦ ವರ್ಷಗಳ ಕಾಲ ಜೀವಿಸಬಲ್ಲವು. ಕತ್ತೆಮನುಷ್ಯರಂತೆ ಅವಳಿ ಮರಿಗಳಿಗೆ ಜನ್ಮ ನೀಡುವುದುಅಪರೂಪ. ಮನುಷ್ಯನಿಗಿಂತ ಅತ್ಯಂತ ಜತನವಾಗಿ ತನ್ನಮರಿಯನ್ನು ನೋಡಿಕೊಳ್ಳುತ್ತದೆ.ಇದೆಲ್ಲಕ್ಕಿಂತಲೂ ಮುಖ್ಯವಾಗಿ ರಾಜಕಾರಣಿ ಎಂಬ ಶಬ್ಧಕೂಡ ’ಗದಾ’ ಎಂಬ ಅರ್ಥವನ್ನು ನೀಡುತ್ತದೆ ಎಂಬುದನ್ನುಕೇಳಿ ಅಚ್ಚರಿಗೊಂಡೆ. ಗದಾ ಎಂಬ ಪದ ಸಂಸ್ಕೃತಮೂಲದ್ದಾಗಿದೆ. ಆಗಲೇ ನನಗೆ ಗಾರ್ದಭ ಗಾನ ಗುನುಗಿತು.ಮುತ್ತುಗದ ಹೂವಿಗಿಂತ ಕತ್ತೆಯ ಮರಿ ಚಂದ ಹೌದು ಕತ್ತೆಯಮರಿ ನೋಡಲು ಬಲು ಸುಂದರ. ಅದರ ದಪ್ಪಾದಾದಬಲ್ಬಿನಂತಹ ಕಣ್ಣುಗಳು, ಅಗಲವಾದ ಕಿವಿಗಳನ್ನುಹೊಂದಿರುವ ಪಾಪದ ಪ್ರಾಣಿಯನ್ನು ನೋಡಿದಾಗ ಕತ್ತೆಎನ್ನಲು ಮನಸ್ಸು ಬಾರದು. ಅರ್ಥಶಾಸ್ತ್ರದ ಚಾಣಕ್ಯ ಕೂಡಕತ್ತೆಯ ಗುಣಗಾನ ಮಾಡಿ ಅದರ ವಿಶೇಷತೆಯನ್ನುಉಲ್ಲೇಖಿಸಿದ್ದಾನೆ. ಕತ್ತೆ ಮಳೆ, ಗಾಳಿ, ಚಳಿ ಯಾವುದನ್ನೂಲೆಕ್ಕಿಸದೇ ದುಡಿಯುವ ಪ್ರಾಣಿ. ಇದು ನಾಯಿ, ಬೆಕ್ಕುಗಳಂತೆಸುಲಭವಾಗಿ ಪಳಗುವುದಿಲ್ಲ. ಪಳಗಿಸುವುದು ಕಷ್ಟಕರ. ಪಳಗಿದರೆ, ನಾಯಿಗಿಂತ ನಿಷ್ಠೆಯಿಂದ, ಓರ್ವ ಸ್ನೇಹಿತನಂತೆಜೊತೆಗಿರುತ್ತವೆ.
-ಡಾ.ಎಂ.ಎಸ್.ಮಣಿ
ಹಿರಿಯ ಪತ್ರಕರ್ತರು,ಬೆಂಗಳೂರು

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ3 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ21 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


