Connect with us

ದಿನದ ಸುದ್ದಿ

ಬಳ್ಳಾರಿ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ರಚನೆಗೆ ಅಸ್ತು

Published

on

ಮಹಾನಗರ ಪಾಲಿಕೆ ಆಯುಕ್ತೆ | ಪ್ರೀತಿ ಗೆಹ್ಲೋಟ್

ಸುದ್ದಿದಿನ,ಬಳ್ಳಾರಿ: ವಾರ್ಡ್ ಸಮಿತಿಗಳನ್ನು ರಚಿಸಬೇಕೆಂಬ ಬಳ್ಳಾರಿ ನಗರದ ಸಾರ್ವಜನಿಕರ ಬೇಡಿಕೆಗೆ ಮನ್ನಣೆ ನೀಡಿರುವ ಬಳ್ಳಾರಿ ಮಹಾನಗರ ಪಾಲಿಕೆಗೆ ವಾರ್ಡ್ ಸಮಿತಿ ರಚನೆಗೆ ಅನುಮೋದನೆ ನೀಡಿದ್ದು ವಾರ್ಡ್ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸಿದೆ.

ಪಾಲಿಕೆಯ 39 ವಾರ್ಡ್‍ಗಳಿಗೆ ಸಾರ್ವಜನಿಕರು ಒಳಗೊಂಡಂತೆ 11 ಸದಸ್ಯರ ಸಮಿತಿ ರಚನೆಗೆ ಅರ್ಹ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವಾರ್ಡ್ ಪ್ರತಿನಿಧಿಸುವಂತಹ ಮಹಾನಗರ ಪಾಲಿಕೆಯ ಸದಸ್ಯನು ವಾರ್ಡ್ ಸಮಿತಿಯ ಅಧ್ಯಕ್ಷರಾಗಿರಲಿದ್ದು, ಇತರೆ ಹತ್ತು ಸದಸ್ಯರನ್ನು ಮಹಾನಗರ ಪಾಲಿಕೆ ನಾಮನಿರ್ದೇಶನ ಮಾಡಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ತಿಳಿಸಿದ್ದಾರೆ.

ನಾಮನಿರ್ದೇಶಿತ 10 ಸದಸ್ಯರ ಪೈಕಿ ಕನಿಷ್ಟ ಇಬ್ಬರು ಸದಸ್ಯರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದವರಾರಿತಕ್ಕದ್ದು.ಕನಿಷ್ಟ ಮೂರು ಮಂದಿ ಮಹಿಳಾ ಸದಸ್ಯರು ಮತ್ತು ನಿವಾಸಿ ಕ್ಷೇಮಾಭಿವೃದ್ದಿ ಸಂಘಗಳನ್ನು ಪ್ರತಿನಿಧಿಸುವಂತಹ ಕನಿಷ್ಟ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ.

ಕ್ಷೇಮಾಭಿವೃದ್ಧಿ ಸಂಘಗಳು ಯಾವುದೇ ಹೆಸರುಳ್ಳದಾಗಿದ್ದು, ಈ ಷರತ್ತುಗಳನ್ನು ಪೂರೈಸಿರತಕ್ಕದ್ದು( ಅದರ ನೋಂದಾಯಿತ ಕಛೇರಿಯ ಅ ವಾರ್ಡಿನ ಭೌಗೋಳಿಕ ವ್ಯಾಪ್ತಿಯಲ್ಲಿರತಕ್ಕದ್ದು. ಅದು ಬಹುತೇಕ ನಿವಾಸಿಗಳು, ಆಥವಾ ಪೌರಸಂಬಂಧಿ ಗುಂಪು ಅಥವಾ ವಾಣಿಜ್ಯ ಗುಂಪು ಅಥವಾ ಕೈಗಾರಿಕಾ ಗುಂಪುಗಳನ್ನು ಪ್ರತಿನಿಧಿಸುತ್ತಿರತಕ್ಕದ್ದು.

ಕನಿಷ್ಟ ಮೂರು ವರ್ಷ ಕಾಲ ತನ್ನ ಕಾರ್ಯಚಟುವಟಿಕೆಗಳಲ್ಲಿ ನಿರತವಾಗಿರತಕ್ಕದ್ದು. ಯಾವುದೇ ಹೆಸರಿನಿಂದ ನೊಂದಾಯಿಸಲ್ಪಟ್ಟಿದ್ದು, ಧರ್ಮದರ್ಶಿತ್ವದ ಮಟ್ಟದಲ್ಲಿ ಕಾರ್ಯನಿರ್ವಹಿಸುವಂತಹ ವ್ಯಕ್ತಿಗಳನ್ನು ಒಳಗೊಂಡಿರತಕ್ಕದ್ದು).ಇನ್ನುಳಿದಂತೆ ಮೂವರು ಸದಸ್ಯರನ್ನು ಮಹಾನಗರ ಪಾಲಿಕೆ ನೇಮಿಸಲಿದ್ದು, ಇದಕ್ಕೆ ಮಹಾನಗರ ಪಾಲಿಕೆ ಸದಸ್ಯನಾಗಿ ಆಯ್ಕೆಯಾಗಲು ಅನರ್ಹನಾಗಿರತಕ್ಕ ವ್ಯಕ್ತಿಯನ್ನು ಹೊರತುಪಡಿಸಿ ನೇಮಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಕಚೇರಿ ತಿಳಿಸಿದೆ.

ಅರ್ಜಿಗಳು ಎಲ್ಲಿ ಲಭ್ಯ..?

ಮಹಾನಗರಪಾಲಿಕೆಯ Website: www.bellarycity.mrc.gov.in
ನಲ್ಲಿ ಇತ್ತೀಚಿನ ಸುದ್ದಿಗಳು ಕಾಲಂನಲ್ಲಿ ಅರ್ಜಿ ನಮೂನೆಯನ್ನು ಅಪ್‍ಡೇಟ್ ಮಾಡಿದ್ದು ಅದನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ ಅಥವಾ ಬಳ್ಳಾರಿ ಮಹಾನಗರಪಾಲಿಕೆಯ ವಲಯ ಕಛೇರಿ 1,2 ಹಾಗೂ 3 ರಲ್ಲಿ ಅರ್ಜಿ ನಮೂನೆಗಳು ಲಭ್ಯವಿದ್ದು ಅಲ್ಲಿಯು ಸಹಾ ಪಡೆದು ಭರ್ತಿ ಮಾಡಿ ಮೇ 2ರೊಳಗೆ ಸಂಬಂಧಪಟ್ಟ ವಾರ್ಡಿನ ವಲಯ ಕಛೇರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಏನೇನು ದಾಖಲೆಗಳು ಬೇಕು…?

ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ (ಮೀಸಲಾತಿ ಕ್ಲೇಮ್ ಮಾಡಿದ್ದಲ್ಲಿ ತಹಸೀಲ್ದಾರರವರಿಂದ ಪಡದ ಪ್ರಮಾಣ ಪತ್ರ ಲಗತ್ತಿಸುವುದು), ಕುಟುಂಬದ ವಾರ್ಷಿಕ ವರಮಾನ (ತಹಶೀಲ್ದಾರರವರಿಂದ ಪಡೆದ ಪ್ರಮಾಣ ಪತ್ರ ಲಗತ್ತಿಸುವುದು),ದೈಹಿಕ ನ್ಯೂನ್ಯತೆ ಹೊಂದಿದ ಬಗ್ಗೆ ಪತ್ರ (ಪ್ರಾಥಮಿಕ ಆರೋಗ್ಯ ಕೇಂದ್ರ ದೃಢೀಕರಣ ಪತ್ರ), ಆರ್‍ಡಬ್ಲ್ಯೂಎ/ಎನ್‍ಜಿಓ ವರ್ಗದಲ್ಲಿ ಮೀಸಲಾತಿ ಕೋರಿದ್ದಲ್ಲಿ ಅಧ್ಯಕ್ಷರು/ಸಂಘ-ಸಂಸ್ಥೆಯ ಕಾರ್ಯದರ್ಶಿರವರಿಂದ ಶಿಫಾರಸ್ಸು ಪತ್ರ ಲಗತ್ತಿಸುವುದು. ವಿವಿಧ ಕ್ಷೇತ್ರಗಳಲ್ಲಿ ಅನುಭವ ಹೊಂದಿದ ಬಗ್ಗೆ ಪ್ರಶಸ್ತಿ/ಮನ್ನಣೆ ಪಡೆದಿರುವ ಕುರಿತು ಸಮರ್ಥಿಸುವಂತಹ ದಾಖಲೆಗಳು.

ವರ್ಗ ಅಧಾರಿತ ದಾಖಲೆಗಳು (ಆಸಕ್ತಿ/ಅನುಭವ ಹೊಂದಿದ ಕ್ಷೇತ್ರಗಳಿಂದ).ಚುನಾವಣಾ ಗುರುತಿನ ಚೀಟಿಯ ದೃಢೀಕರಣ ಪ್ರತಿಗಳನ್ನು ಭರ್ತಿ ಮಾಡಿದ ಅರ್ಜಿಯೊಂದಿಗೆ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿ ಹಾಗೂ ವಾರ್ಡ್ ಸಮಿತಿ ಸದಸ್ಯರ ಷರತ್ತುಗಳ ಕುರಿತು ಕಛೇರಿ ಅವಧಿಯಲ್ಲಿ ಮಹಾನಗರಪಾಲಿಕೆಯ ವಲಯ ಕಛೇರಿ-1,2 ಹಾಗೂ 3 ರ ವಲಯ ಆಯುಕ್ತರಿಗೆ ಭೇಟಿಯಾಗಿ ಪಡೆಯಬಹುದು ಎಂದು ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ಸ್ಪಷ್ಟಪಡಿಸಿದ್ದಾರೆ.

ವಾರ್ಡ್ ಸಮಿತಿ ರಚನೆ ; ಜನರ ಅಭಿಪ್ರಾಯ ಮಂಡಿಸಲು ವೇದಿಕೆ

ವಾರ್ಡ್ ಮಟ್ಟದಲ್ಲಿ ಜನರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಮತ್ತು ವಾರ್ಡ್‍ನ ಅಭಿವೃದ್ಧಿ ಕುರಿತು ಚರ್ಚಿಸಲು ವಾರ್ಡ್ ಸಮಿತಿ ರಚನೆ ಒಂದೊಳ್ಳೆ ವೇದಿಕೆ ಎನ್ನುತ್ತಾರೆ ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು. ವಾರ್ಡ್‍ನ ಎಲ್ಲ ಸಮಸ್ಯೆಗಳನ್ನು ಪ್ರತಿ ಬಾರಿ ಪಾಲಿಕೆ ಕಚೇರಿಗೆ ಹೋಗಿ ತಿಳಿಸಲು ಜನರಿಗೆ ಕಷ್ಟವಾಗಬಹುದು. ವಾರ್ಡ್ ಸಮಿತಿ ರಚನೆ ಆದ್ರೇ ವಾರ್ಡ್‍ನಲ್ಲಿಯೇ ಅವುಗಳನ್ನು ಪರಿಹರಿಸಿಕೊಳ್ಳಬಹುದು ಮತ್ತು ವಾರ್ಡ್‍ನ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಸಾರ್ವಜನಿಕರು ಬೇಗ ಅರ್ಜಿ ಸಲ್ಲಿಸಿದರೇ ಆದಷ್ಟು ಬೇಗ ಸಮಿತಿ ರಚಿಸಲು ಸಾಧ್ಯವಾಗುತ್ತದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending