ಲೈಫ್ ಸ್ಟೈಲ್
ಹೊಕ್ಕುಳ ಬಳ್ಳಿಯ ಸುತ್ತ..!
- ಯಶೋಧ ಪೂಜಾರಿ, ಮುಂಬೈ
ಮನುಷ್ಯನ ದೇಹದಲ್ಲಿಯ ಉಳಿದೆಲ್ಲ ಅಂಗಗಳಿಗಿಂತ ಮೊಟ್ಟ ಮೊದಲಿಗೆ ರಚನೆಯಾಗುವ ಮಹತ್ವದ ಅಂಗ ಅಂದರೆ ಅದು ಹೊಕ್ಕುಳು . ಇದನ್ನು ನಾಭಿ , ಹೊಕ್ಕುಳು, ನಾವೇಲ್ (Naval) ಬೆಲ್ಲಿ ಬಟನ್ (Belly button) ಮತ್ತು ಸಂಸ್ಕೃತದಲ್ಲಿ ನಭಿ ಅನ್ನುತ್ತಾರೆ. ನಾವು ದೇಹದಲ್ಲಿಯ ಉಳಿದ ಭಾಗಗಳಿಗೆ ಗಮನ ಕೊಡುವಂತೆ ಹೊಕ್ಕುಳಕ್ಕೆ ಕೊಡುವುದಿಲ್ಲ. ಕಾರಣ ಆ ಭಾಗಕ್ಕೆ ಯಾವ ರೋಗವು ತಗುಲುವ ಚಿಂತೆ ಇರುವುದಿಲ್ಲವೆಂದು. ಹಾಗಾಗಿ ನಾಭಿಯ ಬಗ್ಗೆ ಸದಾ ದುರ್ಲಕ್ಷ ಮಾಡುವುದು ಸಾಮಾನ್ಯ.
ಶಿಶು ಗರ್ಭದಲ್ಲಿದ್ದಾಗ ಅದು ದೈಹಿಕ ಮತ್ತು ಮಾನಸಿಕ ಬೆಳವಣಿಗಾಗಿ ಹೊಕ್ಕುಳು ಬಳ್ಳಿಯನ್ನೆ ಅವಲಂಬಿತವಾಗಿರುತ್ತದೆ. ಶಿಶುವಿನ ಸಂಪೂರ್ಣ ಶರೀರದ ವಿಕಾಸಗೊಳ್ಳವುದು ಹೊಕ್ಕುಳದ ಸಹಾಯದಿಂದ. ಒಮ್ಮೆ ಶಿಶು ತಾಯಿ ದೇಹದಿಂದ ಬೇರ್ಪಟ್ಟ ನಂತರ ಹೊಕ್ಕುಳ ಬಳ್ಳಿಯ ಕತ್ತರಿಸಿ ಅದಕ್ಕೆ ಯಾವುದೆ ತರಹದ ಇನ್ಫೆಕ್ಷನ್ ಆಗದಂತೆ ಕ್ಲಿಪ್ ಹಾಕಲಾಗುತ್ತದೆ . ಮುಂದೆ ಎರಡು ಮೂರು ವಾರಗಳ ನಂತರ ಈ ಬಳ್ಳಿಯು ಒಣಗಿ ನೈಸರ್ಗಿಕವಾಗಿ ಶಿಶುವಿನ ದೇಹದಿಂದ ಉದುರುವುದು.
ಹಾಗೆ ಹೊರಚಾಚಿದ ಹೊಕ್ಕುಳಿನ ಭಾಗ ತುಸು ಒಣಗಿದ ನಂತರ ನಿಧಾನ ಸುರುಟಿಯಾಗಿ ಒಳ ಸರಿದು ಆದರ ಮೇಲೆ ಚರ್ಮದ ತೆಳು ಪದರು ಹಬ್ಬಿ ಒಳಮುಖವಾಗಿ ಮುಚ್ಚಿಕೊಂಡು ಬಿಡುತ್ತದೆ. ಹೀಗೆ ಸಹಜವಾಗಿ ನಮ್ಮ ದೇಹ ಯಾವ ವೈದ್ಯಕೀಯ ಸಹಾಯವಿರದೆ ತನ್ನನ್ನು ತಾನು ಸರಿ ಪಡಿಸಿಕೊಳ್ಳುವುದು. ಇಲ್ಲಿಗೆ ಹೊಕ್ಕುಳಿನ ಬಾಹ್ಯ ರೂಪದಿಂದ ಚಟುವಟಿಕೆ ಮುಗಿದರು ದೇಹದ ಒಳಗಡೆ ಅದು ಕೊನೆಯ ತನಕ ಸಕ್ರೀಯವಾಗಿರುವ ಅಂಗವಾಗಿದೆ. ಹಾಗಾಗಿ ಅದನ್ನು ಕಡೆಗಣಿಸಲಾಗದು.
ನಿರ್ಜಿವವಾಗಿರುವಂತೆ ಕಾಣುವ ನಾಭಿಯ ಮಹತ್ವವನ್ನು ಸರಿಯಾಗಿ ತಿಳಿದುಕೊಂಡಲ್ಲಿ ದೇಹದಲ್ಲಿನ ಹಲವು ರೋಗಗಳನ್ನು ವೈದ್ಯರ ಬಳಿ ಹೋಗದೆಯೆ ನಿವಾರಿಸಿಕೊಳ್ಳಲು ಸಾಧ್ಯವಿದೆ.
ನಮ್ಮ ದೇಹಕ್ಕೆ ಬರುವ ಹಲವು ಅನಾರೋಗ್ಯಗಳಿಂದ ಗುಣಪಡಿಸಿ ದೇಹದ ಆಂತರಿಕ ಶಕ್ತಿಯನ್ನು ಬಲಪಡಿಸುವ ಮತ್ತು ಸಕ್ರಿಯಗೊಳಿಸುವ ಸರ್ವೋಚ್ಚ ಶಕ್ತಿ ಈ ಹೊಕ್ಕುಳಕ್ಕೆ ಇದೆ. ಹೊಕ್ಕುಳದ ಸುತ್ತಲು ಶರೀರದ ಪ್ರಮುಖ ಅಂಗಗಳು ಇರುವುದು. ಹೊಕ್ಕುಳವು ಸಂಪೂರ್ಣ ದೇಹಕ್ಕೆ ಶಕ್ತಿಯನ್ನು ಹರಿಸುವುದು ಮತ್ತು ಪ್ರಮುಖ ನರಗಳೆಲ್ಲಾ ನಾಭಿಯ ಮೇಲೆ ಇರುವುದಲ್ಲದೆ ನಮ್ಮ ದೇಹದಲ್ಲಿರುವ ಎಪ್ಪತ್ತೆರಡು ಸಾವಿರಗಿಂತಲೂ ಹೆಚ್ಚು ನರನಾಡಿಗಳು ಈ ನಾಭಿಗೆ ಹಾಯ್ದು ಹೋಗುವವು ಹಾಗಾಗಿ ಹೊಕ್ಕಳ ದೇಹಕ್ಕೆ ಹೆದ್ದಾರಿ ಸಂಪರ್ಕವಿದ್ದಂತೆ.
ಭ್ರೂಣವು ಗರ್ಭದಲ್ಲಿದ್ದಾಗ ನೇರವಾಗಿ ತಾಯಿಯ ದೇಹಕ್ಕೆ ಜೊತೆಯಾಗಿರದೆ ಅದು ಜರಾಯು ಎಂಬ ಅಂಗದ ಮೇಲೆ ಅವಲಂಬಿತವಾಗಿರುತ್ತದೆ. ಭ್ರೂಣವನ್ನು ಗರ್ಭಶಯದ ಭಿತ್ತಿಗೆ ಜೋಡಿಸುವ ಜರಾಯು ಎಂಬ ಈ ಅಂಗವು ಚಪ್ಪಟೆಯಾಗಿ ಗೋಲಾಕಾರದ ಕೆಂಪು ಬಣ್ಣದ ಡಿಸ್ಕ್ ನಂತೆ ಇದ್ದು ಸ್ಪೋಂಜಿಯಾಗಿ ಅಂದರೆ ಮೃದುವಾಗಿ ಇರುವುದು.
ಇದು ಗರ್ಭಧಾರಣೆಯ ಸಂದರ್ಭದಲ್ಲಿ ಬೆಳೆದು ಶಿಶುವಿನಂತೆ ಇದು ಕೂಡ ಬೆಳೆಯುತ್ತಾ ಕೊನೆಯವರೆಗೆ ಸುಮಾರು 1 ಪೌಂಡ್ ನಷ್ಟು ದೊಡ್ಡದಾಗುವುದು. ಇದು ಗರ್ಭಶಯ ಮತ್ತು ಭ್ರೂಣದ ನಡುವೆ ಪೊರೆ, ತೆಳು ಪದರದಂತಿರುವುದು. ಜರಾಯುಗೆ ಪ್ಲಾಸೆಂಟಾ (Placenta) ಅನ್ನುತ್ತಾರೆ. ಭ್ರೂಣದ ಹೊಕ್ಕುಳು ಬಳ್ಳಿಯಂತೆ ಜರಾಯುಗೆ ಕೂಡ ಬಳ್ಳಿ ಇರುತ್ತದೆ. ಜರಾಯು ಬಳ್ಳಿಗೆ placental cord ಎನ್ನುತ್ತಾರೆ. ಶಿಶುವಿನ ಹೊಕ್ಕುಳ ಬಳ್ಳಿಯ ಮತ್ತೊಂದು ತುದಿಯು ಜರಾಯು ಬಳ್ಳಿಗೆ ಜೋಡಣೆಯಾಗಿದ್ದು ಶಿಶು ತನಗೆ ಬೆಳೆಯಲು ಬೇಕಾಗಿರುವ ಅವಶ್ಯಕತೆಯನ್ನು ಈ ಜರಾಯು ಮುಖಾಂತರ ಪಡೆಯುವುದು.
ಈ ಜರಾಯು ಮಗು ಮತ್ತು ಗರ್ಭಕೋಶದ ಒಳಗೋಡೆಯ ನಡುವಣ ಮೆತ್ತೆಯಂತಿದ್ದು ಮಗುವಿಗೆ ಪ್ರತಿಜೀವಕಗಳನ್ನು ನೀಡುತ್ತಾ ಸೋಂಕಿನಿಂದ ರಕ್ಷಿಸುತ್ತದೆ. ಇದು ಗರ್ಭಶಯದೊಳಗಿದ್ದು ತಾಯಿಯ ರಕ್ತದಿಂದ ಮಗುವಿಗೆ ಬೇಕಾಗುವ ಪೌಷ್ಟಿಕಾಂಶಗಳ್ಳನ್ನು ಹೀರಿ ಮಗುವಿಗೆ ತಲುಪಿಸುವುದಲ್ಲದೆ ಶಿಶುವಿಗೆ ಬೇಕಾಗಿರುವ ಅನಿಲದ ವಿನಿಮಯವನ್ನು ಮತ್ತು ವ್ಯರ್ಥ ಪದಾರ್ಥಗಳ ವಿಸರ್ಜನೆಯ ಹೊಣೆಯನ್ನು ನಿರ್ವಹಿಸುತ್ತದೆ.
ಜರಾಯು ಸ್ತ್ರೀಯರ ದೇಹದಲ್ಲಿ ಅಂಡಾಣು ಫಲಿತವಾದ ಕ್ಷಣದಿಂದಲೇ ಮೊತ್ತಾ ಮೊದಲಿಗೆ ಬೆಳೆಯುವುದು. ಭ್ರೂಣ ಗರ್ಭಾಶಯದೊಳಗೆ ಬೆಳೆದಂತೆ ಅದು ಬೆಳೆಯುತ್ತಾ ಶಿಶುವಿನ ಸಂಪೂರ್ಣ ಸಂರಕ್ಷಣೆ ಮಾಡುವುದಲ್ಲದೆ ಗರ್ಭಿಣಿಯ ಶರೀರದ ಹಾರ್ಮೋನ್ ಗ್ರಂಥಿ ಯನ್ನು ನಿಯಂತ್ರಿಸುವುದು. ಶಿಶು ತಾಯಿಯ ಗರ್ಭದಿಂದ ಹೊರಬಂದ ಬಳಿಕ ಈ ಜರಾಯು ಕೂಡ ಗರ್ಭಕೋಶದಿಂದ ಹೊರ ಹಾಕಲ್ಪಡುತ್ತದೆ.
ಹೊರಗೆ ಬಂದ ಜರಾಯು ತನ್ನಲ್ಲಿರುವ ಪೌಷ್ಟಿಕಾಂಶಗಳನೆಲ್ಲಾ ಕರುಳು ಬಳ್ಳಿಯ ಮೂಖಾಂತರ ಮಗುವಿಗೆ ವರ್ಗಾವಣೆ ಮಾಡಿ ಕೊನೆಗೆ ನಿಷ್ಫಲವಾಗುತ್ತದೆ. ಹೀಗೆ ಸ್ತ್ರೀಯರ ದೇಹದಲ್ಲಿ ಪ್ರತಿ ಹೆರಿಗೆಯಲ್ಲು ಹೊಸ ಜರಾಯು ತಯಾರಾಗಿ ಹೆರಿಗೆಯ ಸಮಯದಲ್ಲಿ ಕೊನೆಗೆ ಕಸದಂತೆ ಹೊರ ಬರುವುದು. ಇದನ್ನು ಮಾಸುಚೀಲ ಅಥವಾ ಕಸ ಅನ್ನುವ ವಾಡಿಕೆ ಇದೆ.
ತಾಯಿಯ ಗರ್ಭದಿಂದ ಹೊರಕ್ಕೆ ಬರುವ ಶಿಶುವಿನ ನಾಭಿ ಬಳ್ಳಿಯನ್ನು ಜರಾಯು ಬಳ್ಳಿಯಿಂದ ಬೇರ್ಪಡಿಸಿದ ಬಳಿಕ ಶಿಶು ತನ್ನ ಅವಶ್ಯಕತೆಗಳಿಗಾಗಿ ಬಾಹ್ಯ ಸಂಪರ್ಕಗಳಿಗೆ ಹೊಂದಿಕೊಳ್ಳುವುದು. ಅಲ್ಲಿಂದ ನಾಭಿಯ ದ್ವಾರ ಹೊರಗಡೆಯಿಂದ ಮುಚ್ಚಿದರೂ ಒಳಗಡೆಯಿಂದ ನಮ್ಮ ಇಡಿ ದೇಹಕ್ಕೆ ತಾಯಿ ಬೇರಿನ ಪಾತ್ರವಹಿಸುತ್ತದೆ.
ನವಜಾತ ಶಿಶುವಿಗೆ ಎರಡು ಮೂರು ವರ್ಷಗಳ ತನಕ ನಿತ್ಯ ತೈಲದ ಮಸಾಜ್ ಮಾಡಿ ಹೊಕ್ಕಳಕ್ಕೆ ಕೆಲವು ತೊಟ್ಟು ಎಣ್ಣೆ ಹಾಕಿ ಕ್ಷಣಕಾಲ ಬಿಟ್ಟು ಆ ಮೇಲೆ ಮಗುವಿಗೆ ಸ್ನಾನ ಹಾಕಿಸುವ ರೂಡಿ ಈಗಲೂ ನಮ್ಮಲ್ಲಿ ಕಾಣುತ್ತೇವೆ. ಇದರಿಂದಾಗಿ ಶಿಶುವಿನ ದೇಹ ಕೋಮಲವಾಗಿ ಇರುವುದಲ್ಲದೆ ನಾಭಿ ಮೂಲಕ ಹೀರಿಕೊಂಡ ಎಣ್ಣೆ ಇಡಿ ಶರೀರದೊಳಗೆ ತಲುಪಿ ಮಗುವು ಆರೋಗ್ಯಕರವಾಗಿ ಇರುವಂತೆ ಸಹಾಯ ಮಾಡುತ್ತದೆ.
ಅದಲ್ಲದೆ ಶಿಶುವಿಗೆ ಹೊಟ್ಟೆ ಉಬ್ಬರಿಸಿ ನೋವು ಅನುಭವಿಸಿದರೆ, ಮಲವಿಸರ್ಜನೆಗೆ ತೊಂದರೆ ಇದ್ದರೆ ನಮ್ಮ ಹಿರಿಯರು ಹಿಂಗಿನ ನೀರನ್ನು ಹೊಕ್ಕಳಿನ ಸುತ್ತಲೂ ಉಜ್ಜುವುದು ಅಥವಾ ಓಮ ಕಾಳನ್ನು ಉಗುರು ಬೆಚ್ಚಗೆ ಮಾಡಿ ತೆಳು ಬಟ್ಟೆಯಲ್ಲಿ ಕಟ್ಟಿ ನಾಭಿಯ ಸುತ್ತಾ ಮಸಾಜ್ ಮಾಡವುದನ್ನು ನೋಡುತ್ತೇವೆ. ಹೀಗೆ ಮಾಡುವುದರಿಂದ ಶಿಶುವಿನ ಹೊಟ್ಟೆ ನೋವು ಶಮನವಾಗುತ್ತದೆ.
ಹಿಂದಿನಿಂದಲೂ “ಆಯುರ್ವೇದ ” ವೈದ್ಯಕೀಯ ಪದ್ಧತಿ ಮತ್ತು “ಪ್ರಕೃತಿ ಚಿಕಿತ್ಸೆ ” ಪದ್ದತಿ ಎರಡರಲ್ಲೂ ನಾಭಿಗೆ ಎಣ್ಣೆ ಹಾಕಿದಲ್ಲಿ ಹಲವು ಆರೋಗ್ಯ ದೋಷಗಳಿಂದ ಮುಕ್ತರಾಗಬಹುದು ಎಂಬ ನಂಬಿಕೆ ಈಗಲೂ ಇದೆ. ಹೊಕ್ಕುಳಕ್ಕೆ ಎಣ್ಣೆಯನ್ನು ಹಾಕುವುದರಿಂದ ನಮ್ಮ ಚರ್ಮದ ಆರೈಕೆಗೆ , ಕೂದಲಿನ ಆರೈಕೆ ಮತ್ತು ಮುಟ್ಟಿನ ನೋವು, ಕೀಲು ನೋವು ಮತ್ತು ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಗೆ ಸಂಬಂಧಿಸಿದ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವು ಸಿಗುವುದೆಂದು ಹಿಂದಿನವರ ಹೇಳಿಕೆ. ಹಾಗಾಗಿ ನಾಭಿ ಚಿಕಿತ್ಸೆಯು ಇತ್ತೀಚೆಗೆ ಬಹಳ ವಿಶೇಷತೆಯನ್ನು ಪಡೆದಿದೆ.
ಇಂದಿನ ಆತುರಾತುರವಾದ ಬದುಕಿನಲ್ಲಿ ಎಣ್ಣೆ ಸವರಿ ಕುಳಿತುಕೊಳ್ಳಲು ಯಾರಿಗೆ ತಾನೆ ಸಮಯವಿದೆ ? ಎನ್ನುವ ಯೋಚನೆ ತಕ್ಷಣ ನಮ್ಮಲ್ಲಿ ಬರುವುದು ಸ್ವಾಭಾವಿಕ. ಆದರೆ ಪ್ರಕೃತಿಯಲ್ಲಿ ಸುಲಭವಾಗಿ ಲಭ್ಯವಿರುವ ಪದಾರ್ಥಗಳಿಂದಲೆ ನಾವು ಆರೋಗ್ಯಕರರಾಗಿ ಇರಬಹುದಾದಲ್ಲಿ ಸ್ವಲ್ಪ ಸಮಯ ಸ್ವಂತಕ್ಕಾಗಿ ಬಳಸಿಕೊಂಡಲ್ಲಿ ತಪ್ಪೆನಿದೆ. ಹಾಗಾದರೆ ಬನ್ನಿ
ಹೊಕ್ಕುಳಕ್ಕೆ ತೈಲ ಚಿಕಿತ್ಸೆಯಿಂದ ತ್ವಚೆಯ ಆರೈಕೆಯನ್ನು ಮಾಡಿಕೊಳ್ಳುವ ವಿಧಾನ ತಿಳಿಯೋಣ.
ಎಳ್ಳೆಣ್ಣೆ ( Sesame oil)
ಎಣ್ಣೆಯುಕ್ತ ತ್ವಚೆ( oily skin ) ಇಂತಹ ತ್ವಚೆಯವರಿಗೆ ಹದಿ ಹರೆಯದಲ್ಲಿ ಮೊಡವೆಗಳ ತೊಂದರೆ ಅಧಿಕವಾಗಿರುತ್ತದೆ. ಯಾಕೆಂದರೆ ಇಂತಹ ಚರ್ಮ ಮೇದೋಜೀರಕ ಎಂಬ ಗ್ರಂಥಿಯನ್ನು ಅತಿಯಾಗಿ ಸ್ರವಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಎಣ್ಣೆಯನ್ನು ಬಿಡುಗಡೆ ಮಾಡುತ್ತದೆ. ಹಾಗಾಗಿ ಎಣ್ಣೆಯುಕ್ತ ಚರ್ಮ ಉಳ್ಳವರು ತಮ್ಮ ತ್ವಚೆಯ ಬಗ್ಗೆ ಸ್ವಲ್ಪ ಹೆಚ್ಚು ಕಾಳಜಿವಹಿಸಬೇಕು.
ಈ ತ್ವಚೆಯಲ್ಲಿ ಎಣ್ಣೆಯಂಶ ಅತಿಯಾಗಿ ಕಾಣಿಸಿಕೊಳ್ಳುವುದಲ್ಲದೆ ತ್ವಚೆಯು ಸದಾ ಜಿಡ್ಡು ಜಿಡ್ಡಾಗಿದ್ದು ಹೊರಗಿನ ದೂಳು ಪ್ರದೂಷಣಗಳಿಗೆ ಬಹು ಬೇಗ ಪ್ರತಿಕ್ರಿಯಿಸುವುದರಿಂದಾಗಿ ಮುಖದಲ್ಲಿ ಮೊಡವೆ ಮತ್ತು ಬೊಕ್ಕಗಳು ಮೂಡುತ್ತದೆ.
ಇಂತಹ ಎಣ್ಣೆಯುಕ್ತ ತ್ವಚೆಯುಳ್ಳವರು ಸ್ನಾನದ ಬಳಿಕ ಮತ್ತು ಮಲಗುವ ಮುನ್ನ ತಮ್ಮ ನಾಭಿಗೆ ಎಳ್ಳೆಣ್ಣೆಯ ನಾಲ್ಕು ಹನಿಯನ್ನು ಹಾಕಿ ಹತ್ತು ಹದಿನೈದು ನಿಮಿಷ ಬಿಡುವುದರಿಂದ ಮುಖದಲ್ಲಿರುವ ಮೊಡವೆಗಳ ತೊಂದರೆಯನ್ನು ನಿವಾರಿಸಿಕೊಳ್ಳಬಹುದು. ಹೀಗೆ ಮಾಡುವುದರಿಂದಾಗಿ ತ್ವಚೆಯು ಅತಿಯಾಗಿ ಎಣ್ಣೆಯಾಂಶ ಬಿಡುಗಡೆ ಮಾಡುವುದನ್ನು ಕ್ರಮೇಣವಾಗಿ ಒಳಗಿನಿಂದಲೇ ನಿಯಂತ್ರಿಸುವುದುರಿಂದಾಗಿ ಕ್ರಮೇಣ ಜಿಡ್ಡಿರದ ಸಾಮಾನ್ಯ ತ್ವಚೆಯಾಗಿ ಮಾರ್ಪಾಡಾಗುತ್ತದೆ.
ಬಾದಾಮಿ ಎಣ್ಣೆ (Almond oil)
ಈ ಎಣ್ಣೆಯು ವಿಟಮಿನ್ ಇ ಅಂದರೆ ನೈಸರ್ಗಿಕವಾಗಿ ಎಣ್ಣೆಯುಕ್ತ ವಾಗಿದೆ. ಒಣ ತ್ವಚೆ ಅಥವಾ ಶುಷ್ಕ ತ್ವಚೆ (dry skin) ತ್ವಚೆಯಲ್ಲಿ ಎಣ್ಣೆಯಂಶ ಕಡಿಮೆ ಇದ್ದು ಸದಾ ಒಣಗಿದಂತಿರುತ್ತದೆ. ಇಂತಹ ಚರ್ಮವು ವಯಸ್ಸಿಗಿಂತಲೂ ಬೇಗನೆ ಸುಕ್ಕು ಗಟ್ಟಿ ಹೊಳಪಿಲ್ಲದೆ ಕಳೆಗುಂದಿದಂತೆ ಕಾಣುತ್ತದೆ. ಒಣ ಚರ್ಮವನ್ನು ಕಾಂತಿಯುತವಾಗಿ ಮತ್ತು ಆಧ್ರ೯ಕವಾಗಿ ಇಡಲು ಹೊಕ್ಕುಳಕ್ಕೆ ಬಾದಾಮಿ ಎಣ್ಣೆ ಬಳಸಬೇಕು.
ಬಾದಾಮಿ ಎಣ್ಣೆಯನ್ನು ನಾಭಿಗೆ ಹಾಕುವುದರಿಂದ ಇದು ದೇಹದ ಸಂಪೂರ್ಣ ತ್ವಚೆಗೆ ಪೋಷಣೆ ಕೊಡುವುದಲ್ಲದೆ ನಿಮ್ಮ ತ್ವಚೆಗೆ ನೈಸರ್ಗಿಕವಾಗಿ ಹೊಳಪು ಕೊಡುತ್ತದೆ. ಇದರಿಂದಾಗಿ ವಯಸ್ಸಿಗೆ ಪೂರ್ವವಾಗಿ ಬರುವ ಮುಪ್ಪಿನ ಲಕ್ಷಣಗಳನ್ನು ತಡೆಯಬಹುದು.
ಸಾಸಿವೆ ಎಣ್ಣೆ (Mustard oil)
ಹೆಚ್ಚಿನವರಲ್ಲಿ ತಮ್ಮ ತ್ವಚೆ complexion ಅಂದರೆ ಬಣ್ಣದ ಬಗ್ಗೆ ಕೀಳರಿಮೆ ಇರುತ್ತೆ . ಅಂತವರು ತ್ವಚೆಯ (complexion lmprove ) ಬಣ್ಣದ ಮಟ್ಟ ತಿಳಿ ಮಾಡಲು ಹೊಕ್ಕುಳಕ್ಕೆ ಸಾಸಿವೆ ಎಣ್ಣೆಯನ್ನು ಉಪಯೋಗಿಸ ತಕ್ಕದ್ದು. ಸಾಸಿವೆ ಎಣ್ಣೆಯಲ್ಲಿ ತ್ವಚೆಯ ತೇಜಸ್ಸನ್ನು ಹೆಚ್ಚಿಸುವ ಗುಣವಿದೆ. ಹಾಗೆಂದು ಇದನ್ನು ಮುಖಕ್ಕೆ ನೇರವಾಗಿ ಹಚ್ಚಿಕೊಂಡರೆ ಮುಖ ಇನ್ನು ಹೆಚ್ಚು ಕಪ್ಪಾಗುವ ಸಂಭವ ಇರುತ್ತದೆ.
ಹಾಗಾಗಿ ನಾಭಿಗೆ ಈ ಎಣ್ಣೆಯನ್ನು ಹಾಕುವುದರಿಂದ ಇದು ದೇಹದ ಒಳಗಿಂದಲೇ ಆರೈಕೆ ಮಾಡುವುದು. ಸಾಸಿವೆ ಎಣ್ಣೆ ದಣಿವು, ಕಳಪೆ ಸ್ಮರಣೆ ಮತ್ತು ಖಿನ್ನತೆಯ ನಿವಾರಣೆಗೆ ಸಹಾಯ ಮಾಡುತ್ತದೆ. ಕಣ್ಣಿನ ಸೋಂಕು ಮತ್ತು ಕಣ್ಣಿನ ಕಾಯಿಲೆಗಳಿಗೆ ಸಹಾಯ ಮಾಡುತ್ತದೆ. ತಲೆನೋವು ಮತ್ತು ಮೈಗ್ರೇನ್ ಕಡಿಮೆ ಮಾಡುತ್ತದೆ.
ಸೂರ್ಯಕಾಂತಿ ಎಣ್ಣೆ (sunflower oil)
ಕಾಂತಿಯುತವಾದ ತ್ವಚೆ ಅಂದರೆ glowing skin ತ್ವಚೆಯ ಕಾಮನೆ ಸಾಮಾನ್ಯವಾಗಿ ಎಲ್ಲರಲ್ಲೂ ಇರುತ್ತದೆ. ಇಂತಹ ತ್ವಚೆಯನ್ನು ಪಡೆಯಲು ಸೂರ್ಯಕಾಂತಿ ಎಣ್ಣೆಯ 2 , 3 ಹನಿಯನ್ನು ಹೊಕ್ಕುಳಿಗೆ ಬಿಡಬೇಕು. ಈ ಎಣ್ಣೆಯು ನಮ್ಮ ತ್ವಚೆಯ ಕಾಂತಿಯನ್ನು ನೈಸರ್ಗಿಕವಾಗಿ ಹೆಚ್ಚಿಸುತ್ತದೆ.
ತೆಂಗಿನ ಎಣ್ಣೆ (coconut oil )
ಈ ಎಣ್ಣೆಯಲ್ಲಿ ವಿಟಮಿನ್ ಇ ಸಮೃದ್ಧವಾಗಿರುವುದು. ಇದು ಕೂದಲ ಬೆಳವಣಿಗೆಗೆ ಅತಿ ಮುಖ್ಯ. ಇದರಿಂದ ಚರ್ಮವು ಮೃದುವಾಗಿ ಇರುವುದು. ಮಹಿಳೆಯರಲ್ಲಿ ಸಂತಾನೋತ್ಪತ್ತಿ ವ್ಯವಸ್ಥೆಗೆ ಇದು ಉತ್ತಮವೆಂದು ಹೇಳಲಾಗುತ್ತದೆ. ತಲೆ ಹೊಟ್ಟು ಮತ್ತು ಒಣ ನೆತ್ತಿಯ ತೊಂದರೆ ನಿವಾರಿಸುತ್ತದೆ.
ಬೇವಿನ ಎಣ್ಣೆ (Neem oil)
ಈ ಎಣ್ಣೆಯು ಮುಖದ ಗುಳ್ಳೆಗಳನ್ನು ಮತ್ತು ಮೊಡವೆಗಳನ್ನು ಕಡಿಮೆ ಮಾಡುತ್ತದೆ. ತುರಿಕೆ ಮತ್ತು ದದ್ದುಗಳ ಮೇಲೆ ಪರಿಣಾಮಕಾರಿ.
ಹಸುವಿನ ತುಪ್ಪ ( Cow Ghee )
ಈ ಎಣ್ಣೆಯು ನಯವಾದ ಚರ್ಮಕ್ಕಾಗಿ ಮತ್ತು
ನವಜಾತ ಶಿಶುಗಳ ಮೂಳೆಗಳನ್ನು ಬಲಪಡಿಸಲು ಉಪಯೋಗಕಾರಿ.
ಕ್ಯಾಸ್ಟರ್ ಆಯಿಲ್ (Castor oil)
ಮೊಣಕಾಲು ನೋವು ಮತ್ತು ಇತರ ಕೀಲು ನೋವುಗಳಿಗಾಗಿ,
ಉದ್ದನೆಯ ರೆಪ್ಪೆಗೂದಲಿಗೆ, ಉದ್ದನೆಯ ದಟ್ಟ ಕೂದಲಿಗಾಗಿ,
ಹೆಚ್ಚಿನ ರೀತಿಯ ಹೊಟ್ಟೆಯ ಸಮಸ್ಯೆಗಳ ನಿವಾರಣೆಗೆ ಈ ಎಣ್ಣೆಯು ಉಪಯುಕ್ತ.
ಆಲೀವ್ ಎಣ್ಣೆ ( Olive oil )
ಈ ಎಣ್ಣೆ ಹಾಕುವುದರಿಂದ ಮುಟ್ಟಿನ ನೋವು ಮತ್ತು ಸೆಳೆತಕ್ಕೆ ಸಹಾಯ ಮಾಡುತ್ತದೆ. ಮಕ್ಕಳ ಮೂಳೆ ಮತ್ತು ಸ್ನಾಯುಗಳನ್ನು ಬಲಪಡಿಸುವುದು. ಒಳ್ಳೆಯ ನಿದ್ರೆಗಾಗಿ ಸಹಾಯ ಮಾಡುತ್ತದೆ.
ಹಸಿವಿನ ಕೊರತೆಯ ನಿವಾರಿಸುವುದು. ಮಲಬದ್ಧತೆಗೆ ಪರಿಣಾಮಕಾರಿ.
ಇಲ್ಲಿ ಮುಖ್ಯವಾಗಿ ನೆನಪಿನಲ್ಲಿಡಬೇಕಾದ ಅಂಶವೆಂದರೆ ಹೊಕ್ಕಳಕ್ಕೆ ಉಪಯೋಗಿಸಲು ಅತಿ ಶುದ್ಧವಾದ ನೈಸರ್ಗಿಕವಾದ ಎಣ್ಣೆಯನ್ನೆ ಬಳಸಬೇಕು. ಕಲಬೆರಕೆಯ ಎಣ್ಣೆಯನ್ನು ಬಳಸದಿರಿ. ಎಣ್ಣೆಯ ಮೂಲ ಗುಣ ಸಕ್ರೀಯಗೊಳ್ಳಲು ಬಳಸುವ ಮುನ್ನ ಸ್ವಲ್ಪ ಬಿಸಿ ಮಾಡಿಕೊಂಡು ಬಳಸಬೇಕು.
ಹೀಗೆ ಉಗುರು ಬೆಚ್ಚಗಿನ ಎಣ್ಣೆಯನ್ನು ರಾತ್ರಿಯಲ್ಲಿ ಮಲಗುವ ಮುನ್ನ ಹತ್ತಿಯಲ್ಲಿ ಅದ್ದಿ 2-3 ಹನಿ ಹೊಕಳಕ್ಕೆ ಬಿಡಬೇಕು. 15-20 ನಿಮಿಷದ ಬಳಿಕ ವೃತ್ತಾಕಾರದ ಪ್ರದಕ್ಷಿಣಾಕಾರದ ಚಲನೆಯಲ್ಲಿ ನಾಭಿಯ ಸುತ್ತಾ ಮಸಾಜ್ ಮಾಡಿಕೊಳ್ಳಬೇಕು. ಹಾಗೆಯೇ ನಿತ್ಯ ಸ್ನಾನ ಮಾಡುವಾಗ ಹೊಕ್ಕುಳವನ್ನು ತೊಳೆದು ಶುಚಿಯಾಗಿ ಇಟ್ಟುಕೊಳ್ಳಬೇಕು. ಇಲ್ಲಾವಾದಲ್ಲಿ ಸೊಂಕು ತಗಲುವ ಸಾಧ್ಯತೆ ಇರುತ್ತದೆ. ಹೀಗೆ ಮಾಡಿ ನೋಡಿ ತಮ್ಮ ತ್ವಚೆಯಲ್ಲಿ ಆರೋಗ್ಯದಲ್ಲಿ ಆಗುವ ವ್ಯತ್ಯಾಸವನ್ನು ತಾವಾಗಿಯೇ ಗಮನಿಸಿ ಆನಂದಿಸಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ6 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ6 days agoಕವಿತೆ | ದೇವರ ಹೂವು
-
ದಿನದ ಸುದ್ದಿ4 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

