ಲೈಫ್ ಸ್ಟೈಲ್
ಹೊಕ್ಕುಳ ಬಳ್ಳಿಯ ಸುತ್ತ..!

- ಯಶೋಧ ಪೂಜಾರಿ, ಮುಂಬೈ
ಮನುಷ್ಯನ ದೇಹದಲ್ಲಿಯ ಉಳಿದೆಲ್ಲ ಅಂಗಗಳಿಗಿಂತ ಮೊಟ್ಟ ಮೊದಲಿಗೆ ರಚನೆಯಾಗುವ ಮಹತ್ವದ ಅಂಗ ಅಂದರೆ ಅದು ಹೊಕ್ಕುಳು . ಇದನ್ನು ನಾಭಿ , ಹೊಕ್ಕುಳು, ನಾವೇಲ್ (Naval) ಬೆಲ್ಲಿ ಬಟನ್ (Belly button) ಮತ್ತು ಸಂಸ್ಕೃತದಲ್ಲಿ ನಭಿ ಅನ್ನುತ್ತಾರೆ. ನಾವು ದೇಹದಲ್ಲಿಯ ಉಳಿದ ಭಾಗಗಳಿಗೆ ಗಮನ ಕೊಡುವಂತೆ ಹೊಕ್ಕುಳಕ್ಕೆ ಕೊಡುವುದಿಲ್ಲ. ಕಾರಣ ಆ ಭಾಗಕ್ಕೆ ಯಾವ ರೋಗವು ತಗುಲುವ ಚಿಂತೆ ಇರುವುದಿಲ್ಲವೆಂದು. ಹಾಗಾಗಿ ನಾಭಿಯ ಬಗ್ಗೆ ಸದಾ ದುರ್ಲಕ್ಷ ಮಾಡುವುದು ಸಾಮಾನ್ಯ.
ಶಿಶು ಗರ್ಭದಲ್ಲಿದ್ದಾಗ ಅದು ದೈಹಿಕ ಮತ್ತು ಮಾನಸಿಕ ಬೆಳವಣಿಗಾಗಿ ಹೊಕ್ಕುಳು ಬಳ್ಳಿಯನ್ನೆ ಅವಲಂಬಿತವಾಗಿರುತ್ತದೆ. ಶಿಶುವಿನ ಸಂಪೂರ್ಣ ಶರೀರದ ವಿಕಾಸಗೊಳ್ಳವುದು ಹೊಕ್ಕುಳದ ಸಹಾಯದಿಂದ. ಒಮ್ಮೆ ಶಿಶು ತಾಯಿ ದೇಹದಿಂದ ಬೇರ್ಪಟ್ಟ ನಂತರ ಹೊಕ್ಕುಳ ಬಳ್ಳಿಯ ಕತ್ತರಿಸಿ ಅದಕ್ಕೆ ಯಾವುದೆ ತರಹದ ಇನ್ಫೆಕ್ಷನ್ ಆಗದಂತೆ ಕ್ಲಿಪ್ ಹಾಕಲಾಗುತ್ತದೆ . ಮುಂದೆ ಎರಡು ಮೂರು ವಾರಗಳ ನಂತರ ಈ ಬಳ್ಳಿಯು ಒಣಗಿ ನೈಸರ್ಗಿಕವಾಗಿ ಶಿಶುವಿನ ದೇಹದಿಂದ ಉದುರುವುದು.
ಹಾಗೆ ಹೊರಚಾಚಿದ ಹೊಕ್ಕುಳಿನ ಭಾಗ ತುಸು ಒಣಗಿದ ನಂತರ ನಿಧಾನ ಸುರುಟಿಯಾಗಿ ಒಳ ಸರಿದು ಆದರ ಮೇಲೆ ಚರ್ಮದ ತೆಳು ಪದರು ಹಬ್ಬಿ ಒಳಮುಖವಾಗಿ ಮುಚ್ಚಿಕೊಂಡು ಬಿಡುತ್ತದೆ. ಹೀಗೆ ಸಹಜವಾಗಿ ನಮ್ಮ ದೇಹ ಯಾವ ವೈದ್ಯಕೀಯ ಸಹಾಯವಿರದೆ ತನ್ನನ್ನು ತಾನು ಸರಿ ಪಡಿಸಿಕೊಳ್ಳುವುದು. ಇಲ್ಲಿಗೆ ಹೊಕ್ಕುಳಿನ ಬಾಹ್ಯ ರೂಪದಿಂದ ಚಟುವಟಿಕೆ ಮುಗಿದರು ದೇಹದ ಒಳಗಡೆ ಅದು ಕೊನೆಯ ತನಕ ಸಕ್ರೀಯವಾಗಿರುವ ಅಂಗವಾಗಿದೆ. ಹಾಗಾಗಿ ಅದನ್ನು ಕಡೆಗಣಿಸಲಾಗದು.
ನಿರ್ಜಿವವಾಗಿರುವಂತೆ ಕಾಣುವ ನಾಭಿಯ ಮಹತ್ವವನ್ನು ಸರಿಯಾಗಿ ತಿಳಿದುಕೊಂಡಲ್ಲಿ ದೇಹದಲ್ಲಿನ ಹಲವು ರೋಗಗಳನ್ನು ವೈದ್ಯರ ಬಳಿ ಹೋಗದೆಯೆ ನಿವಾರಿಸಿಕೊಳ್ಳಲು ಸಾಧ್ಯವಿದೆ.
ನಮ್ಮ ದೇಹಕ್ಕೆ ಬರುವ ಹಲವು ಅನಾರೋಗ್ಯಗಳಿಂದ ಗುಣಪಡಿಸಿ ದೇಹದ ಆಂತರಿಕ ಶಕ್ತಿಯನ್ನು ಬಲಪಡಿಸುವ ಮತ್ತು ಸಕ್ರಿಯಗೊಳಿಸುವ ಸರ್ವೋಚ್ಚ ಶಕ್ತಿ ಈ ಹೊಕ್ಕುಳಕ್ಕೆ ಇದೆ. ಹೊಕ್ಕುಳದ ಸುತ್ತಲು ಶರೀರದ ಪ್ರಮುಖ ಅಂಗಗಳು ಇರುವುದು. ಹೊಕ್ಕುಳವು ಸಂಪೂರ್ಣ ದೇಹಕ್ಕೆ ಶಕ್ತಿಯನ್ನು ಹರಿಸುವುದು ಮತ್ತು ಪ್ರಮುಖ ನರಗಳೆಲ್ಲಾ ನಾಭಿಯ ಮೇಲೆ ಇರುವುದಲ್ಲದೆ ನಮ್ಮ ದೇಹದಲ್ಲಿರುವ ಎಪ್ಪತ್ತೆರಡು ಸಾವಿರಗಿಂತಲೂ ಹೆಚ್ಚು ನರನಾಡಿಗಳು ಈ ನಾಭಿಗೆ ಹಾಯ್ದು ಹೋಗುವವು ಹಾಗಾಗಿ ಹೊಕ್ಕಳ ದೇಹಕ್ಕೆ ಹೆದ್ದಾರಿ ಸಂಪರ್ಕವಿದ್ದಂತೆ.
ಭ್ರೂಣವು ಗರ್ಭದಲ್ಲಿದ್ದಾಗ ನೇರವಾಗಿ ತಾಯಿಯ ದೇಹಕ್ಕೆ ಜೊತೆಯಾಗಿರದೆ ಅದು ಜರಾಯು ಎಂಬ ಅಂಗದ ಮೇಲೆ ಅವಲಂಬಿತವಾಗಿರುತ್ತದೆ. ಭ್ರೂಣವನ್ನು ಗರ್ಭಶಯದ ಭಿತ್ತಿಗೆ ಜೋಡಿಸುವ ಜರಾಯು ಎಂಬ ಈ ಅಂಗವು ಚಪ್ಪಟೆಯಾಗಿ ಗೋಲಾಕಾರದ ಕೆಂಪು ಬಣ್ಣದ ಡಿಸ್ಕ್ ನಂತೆ ಇದ್ದು ಸ್ಪೋಂಜಿಯಾಗಿ ಅಂದರೆ ಮೃದುವಾಗಿ ಇರುವುದು.
ಇದು ಗರ್ಭಧಾರಣೆಯ ಸಂದರ್ಭದಲ್ಲಿ ಬೆಳೆದು ಶಿಶುವಿನಂತೆ ಇದು ಕೂಡ ಬೆಳೆಯುತ್ತಾ ಕೊನೆಯವರೆಗೆ ಸುಮಾರು 1 ಪೌಂಡ್ ನಷ್ಟು ದೊಡ್ಡದಾಗುವುದು. ಇದು ಗರ್ಭಶಯ ಮತ್ತು ಭ್ರೂಣದ ನಡುವೆ ಪೊರೆ, ತೆಳು ಪದರದಂತಿರುವುದು. ಜರಾಯುಗೆ ಪ್ಲಾಸೆಂಟಾ (Placenta) ಅನ್ನುತ್ತಾರೆ. ಭ್ರೂಣದ ಹೊಕ್ಕುಳು ಬಳ್ಳಿಯಂತೆ ಜರಾಯುಗೆ ಕೂಡ ಬಳ್ಳಿ ಇರುತ್ತದೆ. ಜರಾಯು ಬಳ್ಳಿಗೆ placental cord ಎನ್ನುತ್ತಾರೆ. ಶಿಶುವಿನ ಹೊಕ್ಕುಳ ಬಳ್ಳಿಯ ಮತ್ತೊಂದು ತುದಿಯು ಜರಾಯು ಬಳ್ಳಿಗೆ ಜೋಡಣೆಯಾಗಿದ್ದು ಶಿಶು ತನಗೆ ಬೆಳೆಯಲು ಬೇಕಾಗಿರುವ ಅವಶ್ಯಕತೆಯನ್ನು ಈ ಜರಾಯು ಮುಖಾಂತರ ಪಡೆಯುವುದು.
ಈ ಜರಾಯು ಮಗು ಮತ್ತು ಗರ್ಭಕೋಶದ ಒಳಗೋಡೆಯ ನಡುವಣ ಮೆತ್ತೆಯಂತಿದ್ದು ಮಗುವಿಗೆ ಪ್ರತಿಜೀವಕಗಳನ್ನು ನೀಡುತ್ತಾ ಸೋಂಕಿನಿಂದ ರಕ್ಷಿಸುತ್ತದೆ. ಇದು ಗರ್ಭಶಯದೊಳಗಿದ್ದು ತಾಯಿಯ ರಕ್ತದಿಂದ ಮಗುವಿಗೆ ಬೇಕಾಗುವ ಪೌಷ್ಟಿಕಾಂಶಗಳ್ಳನ್ನು ಹೀರಿ ಮಗುವಿಗೆ ತಲುಪಿಸುವುದಲ್ಲದೆ ಶಿಶುವಿಗೆ ಬೇಕಾಗಿರುವ ಅನಿಲದ ವಿನಿಮಯವನ್ನು ಮತ್ತು ವ್ಯರ್ಥ ಪದಾರ್ಥಗಳ ವಿಸರ್ಜನೆಯ ಹೊಣೆಯನ್ನು ನಿರ್ವಹಿಸುತ್ತದೆ.
ಜರಾಯು ಸ್ತ್ರೀಯರ ದೇಹದಲ್ಲಿ ಅಂಡಾಣು ಫಲಿತವಾದ ಕ್ಷಣದಿಂದಲೇ ಮೊತ್ತಾ ಮೊದಲಿಗೆ ಬೆಳೆಯುವುದು. ಭ್ರೂಣ ಗರ್ಭಾಶಯದೊಳಗೆ ಬೆಳೆದಂತೆ ಅದು ಬೆಳೆಯುತ್ತಾ ಶಿಶುವಿನ ಸಂಪೂರ್ಣ ಸಂರಕ್ಷಣೆ ಮಾಡುವುದಲ್ಲದೆ ಗರ್ಭಿಣಿಯ ಶರೀರದ ಹಾರ್ಮೋನ್ ಗ್ರಂಥಿ ಯನ್ನು ನಿಯಂತ್ರಿಸುವುದು. ಶಿಶು ತಾಯಿಯ ಗರ್ಭದಿಂದ ಹೊರಬಂದ ಬಳಿಕ ಈ ಜರಾಯು ಕೂಡ ಗರ್ಭಕೋಶದಿಂದ ಹೊರ ಹಾಕಲ್ಪಡುತ್ತದೆ.
ಹೊರಗೆ ಬಂದ ಜರಾಯು ತನ್ನಲ್ಲಿರುವ ಪೌಷ್ಟಿಕಾಂಶಗಳನೆಲ್ಲಾ ಕರುಳು ಬಳ್ಳಿಯ ಮೂಖಾಂತರ ಮಗುವಿಗೆ ವರ್ಗಾವಣೆ ಮಾಡಿ ಕೊನೆಗೆ ನಿಷ್ಫಲವಾಗುತ್ತದೆ. ಹೀಗೆ ಸ್ತ್ರೀಯರ ದೇಹದಲ್ಲಿ ಪ್ರತಿ ಹೆರಿಗೆಯಲ್ಲು ಹೊಸ ಜರಾಯು ತಯಾರಾಗಿ ಹೆರಿಗೆಯ ಸಮಯದಲ್ಲಿ ಕೊನೆಗೆ ಕಸದಂತೆ ಹೊರ ಬರುವುದು. ಇದನ್ನು ಮಾಸುಚೀಲ ಅಥವಾ ಕಸ ಅನ್ನುವ ವಾಡಿಕೆ ಇದೆ.
ತಾಯಿಯ ಗರ್ಭದಿಂದ ಹೊರಕ್ಕೆ ಬರುವ ಶಿಶುವಿನ ನಾಭಿ ಬಳ್ಳಿಯನ್ನು ಜರಾಯು ಬಳ್ಳಿಯಿಂದ ಬೇರ್ಪಡಿಸಿದ ಬಳಿಕ ಶಿಶು ತನ್ನ ಅವಶ್ಯಕತೆಗಳಿಗಾಗಿ ಬಾಹ್ಯ ಸಂಪರ್ಕಗಳಿಗೆ ಹೊಂದಿಕೊಳ್ಳುವುದು. ಅಲ್ಲಿಂದ ನಾಭಿಯ ದ್ವಾರ ಹೊರಗಡೆಯಿಂದ ಮುಚ್ಚಿದರೂ ಒಳಗಡೆಯಿಂದ ನಮ್ಮ ಇಡಿ ದೇಹಕ್ಕೆ ತಾಯಿ ಬೇರಿನ ಪಾತ್ರವಹಿಸುತ್ತದೆ.
ನವಜಾತ ಶಿಶುವಿಗೆ ಎರಡು ಮೂರು ವರ್ಷಗಳ ತನಕ ನಿತ್ಯ ತೈಲದ ಮಸಾಜ್ ಮಾಡಿ ಹೊಕ್ಕಳಕ್ಕೆ ಕೆಲವು ತೊಟ್ಟು ಎಣ್ಣೆ ಹಾಕಿ ಕ್ಷಣಕಾಲ ಬಿಟ್ಟು ಆ ಮೇಲೆ ಮಗುವಿಗೆ ಸ್ನಾನ ಹಾಕಿಸುವ ರೂಡಿ ಈಗಲೂ ನಮ್ಮಲ್ಲಿ ಕಾಣುತ್ತೇವೆ. ಇದರಿಂದಾಗಿ ಶಿಶುವಿನ ದೇಹ ಕೋಮಲವಾಗಿ ಇರುವುದಲ್ಲದೆ ನಾಭಿ ಮೂಲಕ ಹೀರಿಕೊಂಡ ಎಣ್ಣೆ ಇಡಿ ಶರೀರದೊಳಗೆ ತಲುಪಿ ಮಗುವು ಆರೋಗ್ಯಕರವಾಗಿ ಇರುವಂತೆ ಸಹಾಯ ಮಾಡುತ್ತದೆ.
ಅದಲ್ಲದೆ ಶಿಶುವಿಗೆ ಹೊಟ್ಟೆ ಉಬ್ಬರಿಸಿ ನೋವು ಅನುಭವಿಸಿದರೆ, ಮಲವಿಸರ್ಜನೆಗೆ ತೊಂದರೆ ಇದ್ದರೆ ನಮ್ಮ ಹಿರಿಯರು ಹಿಂಗಿನ ನೀರನ್ನು ಹೊಕ್ಕಳಿನ ಸುತ್ತಲೂ ಉಜ್ಜುವುದು ಅಥವಾ ಓಮ ಕಾಳನ್ನು ಉಗುರು ಬೆಚ್ಚಗೆ ಮಾಡಿ ತೆಳು ಬಟ್ಟೆಯಲ್ಲಿ ಕಟ್ಟಿ ನಾಭಿಯ ಸುತ್ತಾ ಮಸಾಜ್ ಮಾಡವುದನ್ನು ನೋಡುತ್ತೇವೆ. ಹೀಗೆ ಮಾಡುವುದರಿಂದ ಶಿಶುವಿನ ಹೊಟ್ಟೆ ನೋವು ಶಮನವಾಗುತ್ತದೆ.
ಹಿಂದಿನಿಂದಲೂ “ಆಯುರ್ವೇದ ” ವೈದ್ಯಕೀಯ ಪದ್ಧತಿ ಮತ್ತು “ಪ್ರಕೃತಿ ಚಿಕಿತ್ಸೆ ” ಪದ್ದತಿ ಎರಡರಲ್ಲೂ ನಾಭಿಗೆ ಎಣ್ಣೆ ಹಾಕಿದಲ್ಲಿ ಹಲವು ಆರೋಗ್ಯ ದೋಷಗಳಿಂದ ಮುಕ್ತರಾಗಬಹುದು ಎಂಬ ನಂಬಿಕೆ ಈಗಲೂ ಇದೆ. ಹೊಕ್ಕುಳಕ್ಕೆ ಎಣ್ಣೆಯನ್ನು ಹಾಕುವುದರಿಂದ ನಮ್ಮ ಚರ್ಮದ ಆರೈಕೆಗೆ , ಕೂದಲಿನ ಆರೈಕೆ ಮತ್ತು ಮುಟ್ಟಿನ ನೋವು, ಕೀಲು ನೋವು ಮತ್ತು ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಗೆ ಸಂಬಂಧಿಸಿದ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವು ಸಿಗುವುದೆಂದು ಹಿಂದಿನವರ ಹೇಳಿಕೆ. ಹಾಗಾಗಿ ನಾಭಿ ಚಿಕಿತ್ಸೆಯು ಇತ್ತೀಚೆಗೆ ಬಹಳ ವಿಶೇಷತೆಯನ್ನು ಪಡೆದಿದೆ.
ಇಂದಿನ ಆತುರಾತುರವಾದ ಬದುಕಿನಲ್ಲಿ ಎಣ್ಣೆ ಸವರಿ ಕುಳಿತುಕೊಳ್ಳಲು ಯಾರಿಗೆ ತಾನೆ ಸಮಯವಿದೆ ? ಎನ್ನುವ ಯೋಚನೆ ತಕ್ಷಣ ನಮ್ಮಲ್ಲಿ ಬರುವುದು ಸ್ವಾಭಾವಿಕ. ಆದರೆ ಪ್ರಕೃತಿಯಲ್ಲಿ ಸುಲಭವಾಗಿ ಲಭ್ಯವಿರುವ ಪದಾರ್ಥಗಳಿಂದಲೆ ನಾವು ಆರೋಗ್ಯಕರರಾಗಿ ಇರಬಹುದಾದಲ್ಲಿ ಸ್ವಲ್ಪ ಸಮಯ ಸ್ವಂತಕ್ಕಾಗಿ ಬಳಸಿಕೊಂಡಲ್ಲಿ ತಪ್ಪೆನಿದೆ. ಹಾಗಾದರೆ ಬನ್ನಿ
ಹೊಕ್ಕುಳಕ್ಕೆ ತೈಲ ಚಿಕಿತ್ಸೆಯಿಂದ ತ್ವಚೆಯ ಆರೈಕೆಯನ್ನು ಮಾಡಿಕೊಳ್ಳುವ ವಿಧಾನ ತಿಳಿಯೋಣ.
ಎಳ್ಳೆಣ್ಣೆ ( Sesame oil)
ಎಣ್ಣೆಯುಕ್ತ ತ್ವಚೆ( oily skin ) ಇಂತಹ ತ್ವಚೆಯವರಿಗೆ ಹದಿ ಹರೆಯದಲ್ಲಿ ಮೊಡವೆಗಳ ತೊಂದರೆ ಅಧಿಕವಾಗಿರುತ್ತದೆ. ಯಾಕೆಂದರೆ ಇಂತಹ ಚರ್ಮ ಮೇದೋಜೀರಕ ಎಂಬ ಗ್ರಂಥಿಯನ್ನು ಅತಿಯಾಗಿ ಸ್ರವಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಎಣ್ಣೆಯನ್ನು ಬಿಡುಗಡೆ ಮಾಡುತ್ತದೆ. ಹಾಗಾಗಿ ಎಣ್ಣೆಯುಕ್ತ ಚರ್ಮ ಉಳ್ಳವರು ತಮ್ಮ ತ್ವಚೆಯ ಬಗ್ಗೆ ಸ್ವಲ್ಪ ಹೆಚ್ಚು ಕಾಳಜಿವಹಿಸಬೇಕು.
ಈ ತ್ವಚೆಯಲ್ಲಿ ಎಣ್ಣೆಯಂಶ ಅತಿಯಾಗಿ ಕಾಣಿಸಿಕೊಳ್ಳುವುದಲ್ಲದೆ ತ್ವಚೆಯು ಸದಾ ಜಿಡ್ಡು ಜಿಡ್ಡಾಗಿದ್ದು ಹೊರಗಿನ ದೂಳು ಪ್ರದೂಷಣಗಳಿಗೆ ಬಹು ಬೇಗ ಪ್ರತಿಕ್ರಿಯಿಸುವುದರಿಂದಾಗಿ ಮುಖದಲ್ಲಿ ಮೊಡವೆ ಮತ್ತು ಬೊಕ್ಕಗಳು ಮೂಡುತ್ತದೆ.
ಇಂತಹ ಎಣ್ಣೆಯುಕ್ತ ತ್ವಚೆಯುಳ್ಳವರು ಸ್ನಾನದ ಬಳಿಕ ಮತ್ತು ಮಲಗುವ ಮುನ್ನ ತಮ್ಮ ನಾಭಿಗೆ ಎಳ್ಳೆಣ್ಣೆಯ ನಾಲ್ಕು ಹನಿಯನ್ನು ಹಾಕಿ ಹತ್ತು ಹದಿನೈದು ನಿಮಿಷ ಬಿಡುವುದರಿಂದ ಮುಖದಲ್ಲಿರುವ ಮೊಡವೆಗಳ ತೊಂದರೆಯನ್ನು ನಿವಾರಿಸಿಕೊಳ್ಳಬಹುದು. ಹೀಗೆ ಮಾಡುವುದರಿಂದಾಗಿ ತ್ವಚೆಯು ಅತಿಯಾಗಿ ಎಣ್ಣೆಯಾಂಶ ಬಿಡುಗಡೆ ಮಾಡುವುದನ್ನು ಕ್ರಮೇಣವಾಗಿ ಒಳಗಿನಿಂದಲೇ ನಿಯಂತ್ರಿಸುವುದುರಿಂದಾಗಿ ಕ್ರಮೇಣ ಜಿಡ್ಡಿರದ ಸಾಮಾನ್ಯ ತ್ವಚೆಯಾಗಿ ಮಾರ್ಪಾಡಾಗುತ್ತದೆ.
ಬಾದಾಮಿ ಎಣ್ಣೆ (Almond oil)
ಈ ಎಣ್ಣೆಯು ವಿಟಮಿನ್ ಇ ಅಂದರೆ ನೈಸರ್ಗಿಕವಾಗಿ ಎಣ್ಣೆಯುಕ್ತ ವಾಗಿದೆ. ಒಣ ತ್ವಚೆ ಅಥವಾ ಶುಷ್ಕ ತ್ವಚೆ (dry skin) ತ್ವಚೆಯಲ್ಲಿ ಎಣ್ಣೆಯಂಶ ಕಡಿಮೆ ಇದ್ದು ಸದಾ ಒಣಗಿದಂತಿರುತ್ತದೆ. ಇಂತಹ ಚರ್ಮವು ವಯಸ್ಸಿಗಿಂತಲೂ ಬೇಗನೆ ಸುಕ್ಕು ಗಟ್ಟಿ ಹೊಳಪಿಲ್ಲದೆ ಕಳೆಗುಂದಿದಂತೆ ಕಾಣುತ್ತದೆ. ಒಣ ಚರ್ಮವನ್ನು ಕಾಂತಿಯುತವಾಗಿ ಮತ್ತು ಆಧ್ರ೯ಕವಾಗಿ ಇಡಲು ಹೊಕ್ಕುಳಕ್ಕೆ ಬಾದಾಮಿ ಎಣ್ಣೆ ಬಳಸಬೇಕು.
ಬಾದಾಮಿ ಎಣ್ಣೆಯನ್ನು ನಾಭಿಗೆ ಹಾಕುವುದರಿಂದ ಇದು ದೇಹದ ಸಂಪೂರ್ಣ ತ್ವಚೆಗೆ ಪೋಷಣೆ ಕೊಡುವುದಲ್ಲದೆ ನಿಮ್ಮ ತ್ವಚೆಗೆ ನೈಸರ್ಗಿಕವಾಗಿ ಹೊಳಪು ಕೊಡುತ್ತದೆ. ಇದರಿಂದಾಗಿ ವಯಸ್ಸಿಗೆ ಪೂರ್ವವಾಗಿ ಬರುವ ಮುಪ್ಪಿನ ಲಕ್ಷಣಗಳನ್ನು ತಡೆಯಬಹುದು.
ಸಾಸಿವೆ ಎಣ್ಣೆ (Mustard oil)
ಹೆಚ್ಚಿನವರಲ್ಲಿ ತಮ್ಮ ತ್ವಚೆ complexion ಅಂದರೆ ಬಣ್ಣದ ಬಗ್ಗೆ ಕೀಳರಿಮೆ ಇರುತ್ತೆ . ಅಂತವರು ತ್ವಚೆಯ (complexion lmprove ) ಬಣ್ಣದ ಮಟ್ಟ ತಿಳಿ ಮಾಡಲು ಹೊಕ್ಕುಳಕ್ಕೆ ಸಾಸಿವೆ ಎಣ್ಣೆಯನ್ನು ಉಪಯೋಗಿಸ ತಕ್ಕದ್ದು. ಸಾಸಿವೆ ಎಣ್ಣೆಯಲ್ಲಿ ತ್ವಚೆಯ ತೇಜಸ್ಸನ್ನು ಹೆಚ್ಚಿಸುವ ಗುಣವಿದೆ. ಹಾಗೆಂದು ಇದನ್ನು ಮುಖಕ್ಕೆ ನೇರವಾಗಿ ಹಚ್ಚಿಕೊಂಡರೆ ಮುಖ ಇನ್ನು ಹೆಚ್ಚು ಕಪ್ಪಾಗುವ ಸಂಭವ ಇರುತ್ತದೆ.
ಹಾಗಾಗಿ ನಾಭಿಗೆ ಈ ಎಣ್ಣೆಯನ್ನು ಹಾಕುವುದರಿಂದ ಇದು ದೇಹದ ಒಳಗಿಂದಲೇ ಆರೈಕೆ ಮಾಡುವುದು. ಸಾಸಿವೆ ಎಣ್ಣೆ ದಣಿವು, ಕಳಪೆ ಸ್ಮರಣೆ ಮತ್ತು ಖಿನ್ನತೆಯ ನಿವಾರಣೆಗೆ ಸಹಾಯ ಮಾಡುತ್ತದೆ. ಕಣ್ಣಿನ ಸೋಂಕು ಮತ್ತು ಕಣ್ಣಿನ ಕಾಯಿಲೆಗಳಿಗೆ ಸಹಾಯ ಮಾಡುತ್ತದೆ. ತಲೆನೋವು ಮತ್ತು ಮೈಗ್ರೇನ್ ಕಡಿಮೆ ಮಾಡುತ್ತದೆ.
ಸೂರ್ಯಕಾಂತಿ ಎಣ್ಣೆ (sunflower oil)
ಕಾಂತಿಯುತವಾದ ತ್ವಚೆ ಅಂದರೆ glowing skin ತ್ವಚೆಯ ಕಾಮನೆ ಸಾಮಾನ್ಯವಾಗಿ ಎಲ್ಲರಲ್ಲೂ ಇರುತ್ತದೆ. ಇಂತಹ ತ್ವಚೆಯನ್ನು ಪಡೆಯಲು ಸೂರ್ಯಕಾಂತಿ ಎಣ್ಣೆಯ 2 , 3 ಹನಿಯನ್ನು ಹೊಕ್ಕುಳಿಗೆ ಬಿಡಬೇಕು. ಈ ಎಣ್ಣೆಯು ನಮ್ಮ ತ್ವಚೆಯ ಕಾಂತಿಯನ್ನು ನೈಸರ್ಗಿಕವಾಗಿ ಹೆಚ್ಚಿಸುತ್ತದೆ.
ತೆಂಗಿನ ಎಣ್ಣೆ (coconut oil )
ಈ ಎಣ್ಣೆಯಲ್ಲಿ ವಿಟಮಿನ್ ಇ ಸಮೃದ್ಧವಾಗಿರುವುದು. ಇದು ಕೂದಲ ಬೆಳವಣಿಗೆಗೆ ಅತಿ ಮುಖ್ಯ. ಇದರಿಂದ ಚರ್ಮವು ಮೃದುವಾಗಿ ಇರುವುದು. ಮಹಿಳೆಯರಲ್ಲಿ ಸಂತಾನೋತ್ಪತ್ತಿ ವ್ಯವಸ್ಥೆಗೆ ಇದು ಉತ್ತಮವೆಂದು ಹೇಳಲಾಗುತ್ತದೆ. ತಲೆ ಹೊಟ್ಟು ಮತ್ತು ಒಣ ನೆತ್ತಿಯ ತೊಂದರೆ ನಿವಾರಿಸುತ್ತದೆ.
ಬೇವಿನ ಎಣ್ಣೆ (Neem oil)
ಈ ಎಣ್ಣೆಯು ಮುಖದ ಗುಳ್ಳೆಗಳನ್ನು ಮತ್ತು ಮೊಡವೆಗಳನ್ನು ಕಡಿಮೆ ಮಾಡುತ್ತದೆ. ತುರಿಕೆ ಮತ್ತು ದದ್ದುಗಳ ಮೇಲೆ ಪರಿಣಾಮಕಾರಿ.
ಹಸುವಿನ ತುಪ್ಪ ( Cow Ghee )
ಈ ಎಣ್ಣೆಯು ನಯವಾದ ಚರ್ಮಕ್ಕಾಗಿ ಮತ್ತು
ನವಜಾತ ಶಿಶುಗಳ ಮೂಳೆಗಳನ್ನು ಬಲಪಡಿಸಲು ಉಪಯೋಗಕಾರಿ.
ಕ್ಯಾಸ್ಟರ್ ಆಯಿಲ್ (Castor oil)
ಮೊಣಕಾಲು ನೋವು ಮತ್ತು ಇತರ ಕೀಲು ನೋವುಗಳಿಗಾಗಿ,
ಉದ್ದನೆಯ ರೆಪ್ಪೆಗೂದಲಿಗೆ, ಉದ್ದನೆಯ ದಟ್ಟ ಕೂದಲಿಗಾಗಿ,
ಹೆಚ್ಚಿನ ರೀತಿಯ ಹೊಟ್ಟೆಯ ಸಮಸ್ಯೆಗಳ ನಿವಾರಣೆಗೆ ಈ ಎಣ್ಣೆಯು ಉಪಯುಕ್ತ.
ಆಲೀವ್ ಎಣ್ಣೆ ( Olive oil )
ಈ ಎಣ್ಣೆ ಹಾಕುವುದರಿಂದ ಮುಟ್ಟಿನ ನೋವು ಮತ್ತು ಸೆಳೆತಕ್ಕೆ ಸಹಾಯ ಮಾಡುತ್ತದೆ. ಮಕ್ಕಳ ಮೂಳೆ ಮತ್ತು ಸ್ನಾಯುಗಳನ್ನು ಬಲಪಡಿಸುವುದು. ಒಳ್ಳೆಯ ನಿದ್ರೆಗಾಗಿ ಸಹಾಯ ಮಾಡುತ್ತದೆ.
ಹಸಿವಿನ ಕೊರತೆಯ ನಿವಾರಿಸುವುದು. ಮಲಬದ್ಧತೆಗೆ ಪರಿಣಾಮಕಾರಿ.
ಇಲ್ಲಿ ಮುಖ್ಯವಾಗಿ ನೆನಪಿನಲ್ಲಿಡಬೇಕಾದ ಅಂಶವೆಂದರೆ ಹೊಕ್ಕಳಕ್ಕೆ ಉಪಯೋಗಿಸಲು ಅತಿ ಶುದ್ಧವಾದ ನೈಸರ್ಗಿಕವಾದ ಎಣ್ಣೆಯನ್ನೆ ಬಳಸಬೇಕು. ಕಲಬೆರಕೆಯ ಎಣ್ಣೆಯನ್ನು ಬಳಸದಿರಿ. ಎಣ್ಣೆಯ ಮೂಲ ಗುಣ ಸಕ್ರೀಯಗೊಳ್ಳಲು ಬಳಸುವ ಮುನ್ನ ಸ್ವಲ್ಪ ಬಿಸಿ ಮಾಡಿಕೊಂಡು ಬಳಸಬೇಕು.
ಹೀಗೆ ಉಗುರು ಬೆಚ್ಚಗಿನ ಎಣ್ಣೆಯನ್ನು ರಾತ್ರಿಯಲ್ಲಿ ಮಲಗುವ ಮುನ್ನ ಹತ್ತಿಯಲ್ಲಿ ಅದ್ದಿ 2-3 ಹನಿ ಹೊಕಳಕ್ಕೆ ಬಿಡಬೇಕು. 15-20 ನಿಮಿಷದ ಬಳಿಕ ವೃತ್ತಾಕಾರದ ಪ್ರದಕ್ಷಿಣಾಕಾರದ ಚಲನೆಯಲ್ಲಿ ನಾಭಿಯ ಸುತ್ತಾ ಮಸಾಜ್ ಮಾಡಿಕೊಳ್ಳಬೇಕು. ಹಾಗೆಯೇ ನಿತ್ಯ ಸ್ನಾನ ಮಾಡುವಾಗ ಹೊಕ್ಕುಳವನ್ನು ತೊಳೆದು ಶುಚಿಯಾಗಿ ಇಟ್ಟುಕೊಳ್ಳಬೇಕು. ಇಲ್ಲಾವಾದಲ್ಲಿ ಸೊಂಕು ತಗಲುವ ಸಾಧ್ಯತೆ ಇರುತ್ತದೆ. ಹೀಗೆ ಮಾಡಿ ನೋಡಿ ತಮ್ಮ ತ್ವಚೆಯಲ್ಲಿ ಆರೋಗ್ಯದಲ್ಲಿ ಆಗುವ ವ್ಯತ್ಯಾಸವನ್ನು ತಾವಾಗಿಯೇ ಗಮನಿಸಿ ಆನಂದಿಸಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

~ಡಾ. ಪುಷ್ಪಲತ ಸಿ ಭದ್ರಾವತಿ
ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು
ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.
ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.
ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.
ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.
ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ