ದಿನದ ಸುದ್ದಿ
ದಾವಣಗೆರೆ | ವಿದ್ಯಾರ್ಥಿನಿಯ ವರ್ಗಾವಣೆ ಪತ್ರ ಕೊಡುವ ಹಿನ್ನೆಲೆ; ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್ಮೂರ್ತಿ ಬೇಜವಾಬ್ದಾರಿ ನಡೆ , ಸೂಕ್ತ ಕ್ರಮಕ್ಕೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಆಗ್ರಹ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2021/12/gov_suddidina.jpg&description=ದಾವಣಗೆರೆ | ವಿದ್ಯಾರ್ಥಿನಿಯ ವರ್ಗಾವಣೆ ಪತ್ರ ಕೊಡುವ ಹಿನ್ನೆಲೆ; ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್ಮೂರ್ತಿ ಬೇಜವಾಬ್ದಾರಿ ನಡೆ , ಸೂಕ್ತ ಕ್ರಮಕ್ಕೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಆಗ್ರಹ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2021/12/gov_suddidina.jpg&description=ದಾವಣಗೆರೆ | ವಿದ್ಯಾರ್ಥಿನಿಯ ವರ್ಗಾವಣೆ ಪತ್ರ ಕೊಡುವ ಹಿನ್ನೆಲೆ; ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್ಮೂರ್ತಿ ಬೇಜವಾಬ್ದಾರಿ ನಡೆ , ಸೂಕ್ತ ಕ್ರಮಕ್ಕೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಆಗ್ರಹ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ: ವಿದ್ಯಾರ್ಥಿನಿಯ ವರ್ಗಾವಣೆ ಪತ್ರ ಕೊಡುವ ಹಿನ್ನೆಲೆ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್ಮೂರ್ತಿ ಅವರ ಬೇಜಾಬ್ದಾರಿ ನಡೆಯ ಕುರಿತುರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ. ಓಬಳೇಶ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ತಾಲ್ಲೂಕು ಗೋಣಿವಾಡ ಕ್ಯಾಂಪ್ ನಿವಾಸಿಗಳಾದ ಪಟ್ಟಾಬಿ ಎನ್. ಇವರು ತಮ್ಮ ಮಗಳಾದ ಕುಶಿ.ಎನ್. ಇವರನ್ನು ದಾವಣಗೆರೆ ನಗರದ ಡಿ.ಸಿ.ಎಂ. ಟೌನ್ಶಿಪ್ನಲ್ಲಿರುವ ಗೋಲ್ಡನ್ ಪಬ್ಲಿಕ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಎಲ್.ಕೆ.ಜಿ ಯಿಂದ ೨ನೇ ತರಗತಿಯವರೆಗೆ ವ್ಯಾಸಾಂಗ ಮಾಡಿಸಿರುತ್ತಾರೆ.
ಕರೋನಾ ಬಿಕ್ಕಟ್ಟಿನ ಕಾರಣದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಸದರಿ ಪೋಷಕರು 202-22ನೇ ಸಾಲಿನ ಶಾಲಾ ಶುಲ್ಕವನ್ನು ತುಂಬಿ, ತಮ್ಮ ಮಗಳನ್ನು ತಮ್ಮ ಸ್ವಗ್ರಾಮವಾದ ಗೋಣಿವಾಡ ಕ್ಯಾಂಪಿನಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿಗೆ ದಾಖಲು ಮಾಡಿರುತ್ತಾರೆ. ಆದರೆ ಹಿಂದಿನ ಶಾಲೆಯ ಆಡಳಿತ ಮಂಡಳಿಯು ಕುಶಿ.ಎನ್ ಎಂಬ ಮಗುವಿನ ವರ್ಗಾವಣೆ ಪ್ರಮಾಣಪತ್ರವನ್ನು ಕೊಡಲು ಪೋಷಕರಿಗೆ ನಿರಾಕರಿಸಿರುತ್ತಾರೆ ಎಂದು ತಿಳಿಸಿದರು.
ಇದಕ್ಕೆ ಕಾರಣ 2021-22ನೇ ಸಾಲಿನಲ್ಲಿ ಈ ಮಗುವಿಗೆ ವರ್ಗಾವಣೆ ಪ್ರಮಾಣಪತ್ರವನ್ನು ಕೊಡಬೇಕಾದರೆ ಸದರಿ ವರ್ಷದ ಶೇ 70ರಷ್ಟು ಶುಲ್ಕವನ್ನು ತುಂಬಿದರೆ ಮಾತ್ರ ವರ್ಗಾವಣೆ ಪ್ರಮಾಣಪತ್ರವನ್ನು ನೀಡುತ್ತೇವೆ ಎಂದು ತಾಕೀತು ಮಾಡಿರುತ್ತಾರೆ. ಹಾಗೆಯೇ ಸದರಿ ವರ್ಷದಲ್ಲಿ ಮಗು ದಾಖಲಾಗಿರುವ ಸರ್ಕಾರಿ ಶಾಲೆಯ ಮುಖ್ಯೋಪಧ್ಯಾಯರು ಕೂಡ ವರ್ಗಾವಣೆ ಪತ್ರವನ್ನು ನೀಡುವಂತೆ ಪತ್ರದ ಮುಖಾಂತರ ಮನವಿ ಮಾಡಿಕೊಂಡಿರುತ್ತಾರೆ.
ಇದಕ್ಕೂ ಖಾಸಗಿ ಶಾಲೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಇದರಿಂದ ಆತಂಕಗೊಂಡ ಪೋಷಕರು ತಮ್ಮ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಾದ ಎನ್.ಎಂ.ಮಂಜುನಾಥ್ ಅವರ ಬಳಿ ತಮ್ಮ ಅಳಲನ್ನು ಹಂಚಿಕೊಂಡಾಗ, ಮತ್ತಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಮಂಜುನಾಥ್ ಇವರು ಇದಕ್ಕೆ ಸಂಬಂಧಿಸಿದ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ನಿರಂಜನ್ಮೂರ್ತಿಯವರಿಗೆ ಕರೆ ಮಾಡಿ, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದೂರು ಹೇಳಿದಾಗ, ಹಿಂದಿನ ವರ್ಷದ ಶಾಲಾ ಶುಲ್ಕವನ್ನು ಸಂದಾಯ ಮಾಡಿದರೆ ಮಾತ್ರ ವರ್ಗಾವಣೆ ಪತ್ರವನ್ನು ನೀಡುತ್ತಾರೆ.
ಇಲ್ಲದೆ ಹೋದರೆ ವರ್ಗಾವಣೆ ಪತ್ರ ನೀಡಲು ಸಾಧ್ಯವಿಲ್ಲ ಎಂದು ತಿಳಿಸುತ್ತಾರೆ. ಇದಕ್ಕೆ ಪ್ರತಿಯಾಗಿ ಶ್ರೀ ಎನ್.ಎಂ.ಮಂಜುನಾಥ್ ಅವರು ಮಗುವಿನ ಪೋಷಕರು ಹಿಂದಿನ ವರ್ಷದ ಎಲ್ಲ ಶುಲ್ಕವನ್ನು ಪಾವತಿಸಿದರೂ ಶಾಲಾ ಆಡಳಿತ ಮಂಡಳಿಯು ವರ್ಗಾವಣೆ ಪತ್ರ ನೀಡಲು ನಿರಾಕರಿಸಿದೆ. ಅಲ್ಲದೆ ಸದರಿ ವರ್ಷದ ಶೇ 70 ರಷ್ಟು ಶುಲ್ಕ ನೀಡಿದರೆ ಮಾತ್ರ ವರ್ಗಾವಣೆ ಪತ್ರ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ.
ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ‘ಇನ್ನೂ ಮುಂದೆ ಖಾಸಗಿ ಶಾಲೆಗಳು ಮಕ್ಕಳಿಗೆ ವರ್ಗಾವಣೆ ಪತ್ರ ನೀಡಲು ನಿರಾಕರಿಸಿದರೆ ಪೋಷಕರು ಆತಂಕ ಪಡುವ ಅವಶ್ಯಕತೆಯಿಲ್ಲ. ಆಯಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ನೇರವಾಗಿ ವರ್ಗಾವಣೆ ಪತ್ರ ಪಡೆಯುವ ಅವಕಾಶ ನೀಡಲಾಗಿದೆ’ ಎಂದು ಪತ್ರಿಕೆ ಹೇಳಿಕೆಯನ್ನು ನೀಡಿದ್ದಾರೆ.
ಅದರಂತೆ ತಾವೇ ಈ ಮಗುವಿಗೆ ವರ್ಗಾವಣೆ ಪತ್ರ ನೀಡಿ ಎಂದು ಕೇಳಿಕೊಂಡಾಗ, ಹೀಗೆ ಕೊಡುವುದಕ್ಕೆ ಸಾಧ್ಯವಿಲ್ಲ. ‘ನಮಗೆ ಇಂತಹ ಯಾವುದೇ ಆದೇಶ ಬಂದಿಲ್ಲ. ಖಾಸಗಿ ಶಾಲೆಗಳನ್ನು ನಾವು ಕಾಪಾಡಬೇಕು. ಆದ್ದರಿಂದ ನೀವು ಹೇಳಿದಂತೆ ಕೇಳಲು ಸಾಧ್ಯವಿಲ್ಲ. ಇದಕ್ಕೆ ಸಂಬAಧಿಸಿದ ಪೋಷಕರಿಗೆ ಕರೆ ಮಾಡಲು ಹೇಳಿ, ನಾನು ಸದರಿ ವಿಷಯದ ಬಗ್ಗೆ ಅವರಿಗೆ ಅರಿವು ಮೂಡಿಸುತ್ತೇನೆ’ ಎಂಬುದಾಗಿ ಹೇಳಿರುತ್ತಾರೆ.
ಮಾನ್ಯರಾದ ತಮ್ಮಲ್ಲಿ ಈ ಮೂಲಕ ವಿನಂತಿಸಿಕೊಳ್ಳುವುದೇನೆಂದರೆ, ಕರೋನಾ ಸಂಕಷ್ಟದಿಂದಾಗಿ ಸಾಮಾನ್ಯ ಜನರ ಬದುಕು ಬೀದಿಗೆ ಬಂದಿರುವ ಸ್ಥಿತಿ ತಮಗೆಲ್ಲ ತಿಳಿದಿದೆ. ಹೀಗಾಗಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲಾಗದೆ ಪೋಷಕರು ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಿದೆ.
ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಪೋಷಕರಿಗೆ ಆರ್ಥಿಕ ಹೊರೆಯನ್ನು ತಪ್ಪಿಸುವ ನಿಟ್ಟಿನಲ್ಲಿ, ಪ್ರತಿಯೊಂದು ಮಗುವಿಗೂ ಶಿಕ್ಷಣವು ಸುಲಭವಾಗಿ ತಲುಪುವಂತೆ ಮಾಡುವುದಕ್ಕಾಗಿ, ಪೋಷಕರು ಖಾಸಗಿ ಶಾಲೆಗೆ ಅಲೆಯುವುದನ್ನು ತಪ್ಪಿಸಲು ವರ್ಗಾವಣೆ ಪತ್ರ ಕೊಡದ ಶಾಲೆಗಳ ವರ್ಗಾವಣೆ ಪತ್ರವನ್ನು ಆಯಾ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡುವ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂಬ ವಿಷಯ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಉಮಾಶಂಕರ್ ಅವರು ಪತ್ರಿಕಾ ಹೇಳಿಕೆಯನ್ನು ನೀಡಿರುತ್ತಾರೆ. ಇಂತಹ ಸಂದರ್ಭದಲ್ಲಿ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್ಮೂರ್ತಿಯವರು ಅನ್ಯಾಯಕ್ಕೆ ಒಳಗಾದ ಪೋಷಕರ ಪರವಾಗಿ ನಿಲ್ಲದೆ, ಖಾಸಗಿ ಶಾಲೆಗಳ ಹಿತಕಾಯುವಂತಹ ಬೇಜವಬ್ದಾರಿ ಮಾತುಗಳನ್ನಾಡಿರುವುದು ನಿಜಕ್ಕೂ ಶೋಚನೀಯವಾದ ಸಂಗತಿಯಾಗಿದೆ.
ಆದ್ದರಿಂದ ಸದರಿ ಅರ್ಜಿಯೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎನ್.ಎಂ.ಮಂಜುನಾಥ್ ಅವರೊಂದಿಗೆ ನಡೆಸಿದ ಸಂಭಾಷಣೆಯ ತುಣುಕನ್ನು ಸಿ.ಡಿಯಲ್ಲಿ ಲಗತ್ತಿಸಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಮಾನ್ಯ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ದಾವಣಗೆರೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ ಇವರಿಗೆ ಬೇಜವಬ್ದಾರಿ ಹೇಳಿಕೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಾಗೆಯೇ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸಂಕಷ್ಟಕ್ಕೆ ಒಳಗಾಗಿರುವ ಪೋಷಕರ ಆರ್ಥಿಕ ಒತ್ತಡವನ್ನು ತಪ್ಪಿಸಿ, ಸರ್ಕಾರಿ ಶಾಲೆಯತ್ತ ಮುಂದಾಗಿರುವ ಮಕ್ಕಳ ಹಿತಕಾಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕದ ವತಿಯಿಂದ ಲಿಖಿತ ದೂರು ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗೋವರ್ಧನ್, ಗ್ರಾಮ ಪಂಚಾಯತಿ ಸದಸ್ಯ ಎಂ,ಎನ್ ಮಂಜುನಾಥ, ಹೂವಿನ ಮಡು ರವಿ, ನಾಗೇಶ್ವರರಾವ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.
ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’ ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು. ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್ಸಿ ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.
ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.
ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
-
ದಿನದ ಸುದ್ದಿ5 days agoಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
-
ದಿನದ ಸುದ್ದಿ11 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು

