Connect with us

ದಿನದ ಸುದ್ದಿ

ಮನಸ್ಸು : ಬುದ್ಧನ ಬೋಧನೆಯ ಪ್ರಮುಖ ತಿರುಳು

Published

on

  • ರಘೋತ್ತಮ ಹೊ.ಬ

ಮ್ಮೆ ಭಗವಾನ್ ಬುದ್ಧರು ಶ್ರಾವಸ್ತಿಯಲ್ಲಿ ಉಳಿದುಕೊಂಡಿದ್ದರು. ಬುದ್ಧರು ಉಳಿದುಕೊಂಡಿದ್ದ ಆ ಸ್ಥಳಕ್ಕೆ ಕೋಸಲ ದೇಶದ ರಾಜ ಪ್ರಸೇನಜಿತ ಆಗಮಿಸಿದ. ರಥ ಇಳಿಯುತ್ತಿದ್ದಂತೆ ರಾಜ ಪ್ರಸೇನಜಿತ ಅತ್ಯುತ್ಕøಷ್ಟ ಗೌರವದಿಂದ ಬುದ್ಧರ ಬಳಿಗೆ ಬಂದ. ಬಂದವನೇ ಮಾರನೇ ದಿನ ತನ್ನ ನಗರಕ್ಕೆ ಬರುವಂತೆ, ತನ್ನ ಆತಿಥ್ಯವನ್ನು ಸ್ವೀಕರಿಸುವಂತೆ, ತಮ್ಮ ಬೋಧನೆ ಮತ್ತು ವ್ಯಕ್ತಿತ್ವದ ಶ್ರೇಷ್ಠತೆಯನ್ನು ತನ್ನ ಜನರ ಮುಂದೆ ಪ್ರದರ್ಶಿಸುವಂತೆ ಆತ ಬುದ್ಧರನ್ನು ಆಹ್ವಾನಿಸಿದ.

ಹಾಗೆಯೇ ಆತನ ಆಹ್ವಾನಕ್ಕೆ ಸಮ್ಮತಿಸಿದ ಬುದ್ಧರು ಮಾರನೆಯ ದಿನ ತನ್ನ ಉಪಾಸಕರೊಡನೆ ಪ್ರಸೇನಜಿತನ ನಗರವನ್ನು ಪ್ರವೇಶಿಸಿದರು. ನಗರದ ನಾಲ್ಕು ಬೀದಿಗಳ ಮೂಲಕ ನಡೆದು ಅವರು ತಮಗೆ ನಿಗಧಿಪಡಿಸಿದ ಸ್ಥಳದಲ್ಲಿ ಕುಳಿತುಕೊಂಡರು ಮತ್ತು ವಿನಯಪೂರ್ವಕವಾಗಿ ಪ್ರಸೇನಜಿತ ನೀಡಿದ ಆತಿಥ್ಯ ಸ್ವೀಕರಿಸಿ ಬುದ್ಧರು ನಗರದ ನಾಲ್ಕು ಹೆದ್ದಾರಿಗಳು ಕೂಡುವ ಸ್ಥಳದಲ್ಲಿ ವಿಶಾಲ ಸಭಿಕರ ಮುಂದೆ ತಮ್ಮ ಬೋಧನೆ ಪ್ರಾರಂಭಿಸಿದರು.

ಬುದ್ದರು ಹೀಗೆ ಬೋಧನೆ ನಡೆಸುತ್ತಿರಬೇಕಾದರೆ ಅಲ್ಲಿ ಇಬ್ಬರು ಶ್ರೀಮಂತರು ಉಪಸ್ಥಿತರಿದ್ದರು. ಅವರಲ್ಲಿ ಮೊದಲನೆಯವನು ಹೇಳಿದ “ಎಂತಹ ಶ್ರೇಷ್ಠ ಜ್ಞಾನ, ಅದರ ಅನ್ವಯದ ವ್ಯಾಪಕತೆ, ನಮ್ಮ ಅಂತರಂಗ ಪರಿಶೋಧಿಸುವ ಅದರ ಗುಣ ಇಂತಹದ್ದನ್ನು ಸಾರ್ವಜನಿಕವಾಗಿ ಬೋಧಿಸಲಾಗುತ್ತದೆಯೆಂದರೆ, ನಿಜಕ್ಕೂ ಇದು ರಾಜನ ಶ್ರೇಷ್ಠ ನಡವಳಿಕೆ”.

ಇನ್ನು ಇದಕ್ಕೆ ವಿರುದ್ಧವಾಗಿ ಎರಡನೆಯ ಶ್ರೀಮಂತ ಹೇಳಿದ್ದು “ಇಂತಹ ಮನುಷ್ಯನನ್ನು (ಬುದ್ಧನನ್ನು) ಕರೆತಂದು ಬೋಧನೆ ನೀಡಿಸುತ್ತಿರುವ ರಾಜನ ಈ ನಡೆ ಎಂಥ ಅವಿವೇಕದ್ದು? ಹಾಗೆಯೇ ಆ ಬುದ್ಧನೂ ಅಷ್ಟೆ ಹಸುವಿನ ಹಿಂದೆ ಕರು ಅಡ್ಡಾಡುವಂತೆ, ಕುರಿಯಂತೆ ಅರಚುತ್ತಾ ರಾಜನ ಹಿಂದೆ ಹೋಗುತ್ತಿದ್ದಾನೆ”. ಹೀಗೆ ಹೇಳುತ್ತಾ ಆ ಶ್ರೀಮಂತರಿಬ್ಬರು ಪರಸ್ಪರ ವಿದಾಯ ಹೇಳಿ ತಾವು ಉಳಿದುಕೊಂಡಿದ್ದ ವಸತಿಗೃಹಕ್ಕೆ ತೆರಳಿದರು. ಅದರಲ್ಲಿ ಮೊದಲನೆಯ ಶ್ರೀಮಂತ ಸ್ವಲ್ಪ ಮದ್ಯಪಾನ ಮಾಡಿ ತನ್ನನ್ನು ತಾನು ನಿಯಂತ್ರಣದಲ್ಲಿಟ್ಟುಕೊಂಡು ತನ್ನ ಸೇವಕರೊಡನೆ ವಸತಿಗೃಹದ ತನ್ನ ಕೋಣೆಯಲ್ಲಿ ಉಳಿದುಕೊಂಡ.

ಆದರೆ ಅದಕ್ಕೆ ತದ್ವಿರುದ್ಧವಾಗಿ ಎರಡನೆಯ ಶ್ರೀಮಂತ ಒಳಗಿನ ಕೆಟ್ಟತನದಿಂದ ಪ್ರೇರೇಪಿಸಲ್ಪಟ್ಟು ಮತಿಮೀರಿ ಮದ್ಯಪಾನ ಮಾಡಿದ. ಹೇಗೆಂದರೆ ಆತನಿಗೇ ಪರಿವೇ ಇಲ್ಲದೆ ತನ್ನ ವಸತಿಗೃಹದ ಮುಂಭಾಗದ ರಸ್ತೆಯಲ್ಲೇ ಆತ ಮಲಗಿದ ಮತ್ತು ಬೆಳಕುಹರಿಯುತ್ತಲೇ ಅವನದೇ ಸೇವಕರು ರಸ್ತೆಯಲ್ಲಿ ಮಲಗಿರುವುದು ಯಾರು ಎಂಬುದನ್ನು ಗುರುತಿಸದೇ ಕುದುರೆ ಗಾಡಿಯನ್ನು ಆತನ ಮೇಲೆ ಹರಿಸಿದರು. ಪರಿಣಾಮ ಆ ಶ್ರೀಮಂತ ಅಸುನೀಗಿದ.

ಆದರೆ ಮೊದಲನೆಯ ಶ್ರೀಮಂತ? ಆತ ದೂರದ ರಾಜ್ಯವೊಂದಕ್ಕೆ ತೆರಳುತ್ತಲೇ ಆತನ ಮುಂದೆ ಕುದುರೆಯೊಂದು ಬಂದು ಮೊಣಕಾಲೂರಿತು. ಆಶ್ಚರ್ಯವೆಂಬಂತೆ ಶ್ರೀಮಂತ ಆ ಕುದುರೆಯನ್ನೇರುತ್ತಲೇ ಅದು ಆತನನ್ನು ಆ ರಾಜ್ಯದ ಆಸ್ಥಾನಕ್ಕೆ ಹೊಯ್ದಿತ್ತು ಮತ್ತು ರಾಜಕುದುರೆ ಆರಿಸಿತರುವ ವ್ಯಕ್ತಿಗಾಗಿ ಕಾಯುತ್ತಿದ್ದ ಅಲ್ಲಿಯ ಜನರು ಕುದುರೆ ಹೀಗೆ ಶ್ರೀಮಂತನನ್ನು ಆರಿಸಿತರುತ್ತಿದ್ದಂತೆ ಆತನನ್ನು ಸಿಂಹಾಸನಕ್ಕೇರಿಸಿದರು. ಪರಿಣಾಮ ಆ ಶ್ರೀಮಂತ ಆ ರಾಜ್ಯದ ರಾಜನಾದ.

ಹೀಗೆ ಇಂತಹ ವಿಚಿತ್ರ ಘಟನೆಗಳು ನಡೆದ ಕೆಲ ದಿನಗಳ ತರುವಾಯ ರಾಜನಾದ ಆ ಶ್ರೀಮಂತ ಒಮ್ಮೆ ಸ್ವತಃ ಬುದ್ಧನನ್ನು ತನ್ನ ರಾಜ್ಯಕ್ಕೆ ಉಪದೇಶನೀಡುವಂತೆ ಆಹ್ವಾನಿಸಿದ. ರಾಜನಾಗಿ ನೇಮಕಗೊಂಡ ಆ ಶ್ರೀಮಂತನ ಆಹ್ವಾನಕ್ಕೆ ಮನ್ನಿಸಿದ ಬುದ್ಧರು ಆತನ ರಾಜ್ಯಕ್ಕೆ ಆಗಮಿಸಿದರು ಮತ್ತು ಆತನ ಆತಿಥ್ಯ ಸ್ವೀಕರಿಸಿ ಆ ಶ್ರೀಮಂತನ ಎದುರೇ “ಹೇಗೆ ಕೆಟ್ಟ ಮನಸ್ಸನ್ನು ಹೊಂದಿದ್ದ ಒಬ್ಬ ಶ್ರೀಮಂತ ಸಾವು ಕಂಡ, ಒಳ್ಳೆಯ ಮನಸ್ಸು ಹೊಂದಿದ್ದ ಮತ್ತೊಬ್ಬ ಹೇಗೆ ಉನ್ನತ ಸ್ಥಾನಕ್ಕೇರಿದ” ಎಂಬುದನ್ನು ವಿವರಿಸುತ್ತಾ “ಮನಸ್ಸೇ ಎಲ್ಲದಕ್ಕೂ ಮೂಲ. ಮನಸ್ಸೇ ಗುರು, ಮನಸ್ಸೇ ಕಾರಣ.ಮನಸ್ಸಿನ ಮಧ್ಯೆ ಕೆಟ್ಟ ಆಲೋಚನೆ ಇದ್ದರೆ ಆಗ ಮೂಡಿ ಬರುವ ಪದಗಳು ಕೆಟ್ಟದ್ದಾಗಿರುತ್ತವೆ, ಕ್ರಿಯೆಗಳೂ ಕೆಟ್ಟದ್ದಾಗಿರುತ್ತವೆ ಮತ್ತು ಅಂತಹ ಪಾಪದ ಫಲವಾಗಿ ಮೂಡಿಬರುವ ದುಃಖ ಆ ಮನುಷ್ಯನನ್ನು ಹೇಗೆ ರಥದ ಚಕ್ರಗಳು ಆತನನ್ನು ಹಿಂಬಾಲಿಸುತ್ತವೋ ಹಾಗೆ ಹಿಂಬಾಲಿಸುತ್ತವೆ” ಎನ್ನುತ್ತಾ…

“ಆದ್ದರಿಂದ ಮನಸ್ಸೇ ಎಲ್ಲದಕ್ಕೂ ಮೂಲ. ಇಂತಹದ್ದನ್ನು ಮಾಡು ಎಂದು ಆದೇಶಿಸುವುದೆಂದರೆ ಅದು ಮನಸ್ಸು.ಇಂತಹದ್ದನ್ನು ಯೋಚಿಸು ಎಂದು ಆದೇಶಿಸುವುದೆಂದರೆ ಅದು ಮನಸ್ಸು. ಮನಸ್ಸಿನಲ್ಲಿ ಒಳ್ಳೆಯ ಆಲೋಚನೆಗಳಿದ್ದರೆ ಆಗ ಮೂಡಿ ಬರುವ ಪದಗಳು, ಮಾಡುವ ಕ್ರಿಯೆ ಎಲ್ಲವೂ ಒಳ್ಳೆಯದ್ದಾಗಿರುತ್ತವೆ ಮತ್ತು ಅಂತಹ ಒಳ್ಳೆಯ ನಡವಳಿಕೆಯ ಫಲವಾಗಿ ಮೂಡಿಬರುವ ಸಂತೋಷ ಆ ಮನುಷ್ಯನನ್ನು ಹೇಗೆ ವಸ್ತುವೊಂದನ್ನು ಆತನ ನೆರಳು ಹಿಂಬಾಲಿಸುತ್ತದೆಯೋ ಹಾಗೆ ಹಿಂಬಾಲಿಸುತ್ತದೆ”. ಬುದ್ಧ ಹೀಗೆ ಹೇಳುತ್ತಲೇ ರಾಜನ ಸ್ಥಾನಕ್ಕೆ ಏರಿದ ಆ ಶ್ರೀಮಂತ, ಆತನ ಮಂತ್ರಿಗಳು, ಆತನ ರಾಣಿ ಎಲ್ಲರೂ ಬುದ್ಧನ ಅನುಯಾಯಿಗಳಾಗುತ್ತಾರೆ. (ಆಧಾರ: ‘ಬುದ್ಧ ಅಂಡ್ ಹಿಸ್ ಧಮ್ಮ’, ಲೇಖಕರು: ಡಾ.ಅಂಬೇಡ್ಕರ್, ಪು.282)

ಒಟ್ಟಾರೆ ಬುದ್ಧನ ಪ್ರಕಾರ ಜಗತ್ತಿನ್ನೆಲ್ಲ ದುಃಖಗಳಿಗೆ, ನೋವುಗಳಿಗೆ ಕಾರಣ ಮನುಷ್ಯನ ಮನಸ್ಸು. ಮನುಷ್ಯನ ಮನಸ್ಸಿನಲ್ಲಿ ಒಳ್ಳೆಯ ಆಲೋಚನೆ ಮೂಡಿಬಂದರೆ ಸಂತಸ ತಾನಾಗೇ ನಮ್ಮತ್ತ ಹರಿದುಬರುತ್ತದೆ. ಕೆಟ್ಟ ಆಲೋಚನೆ ಮೂಡಿಬಂದರೆ ದುಃಖ ತಾನಾಗೇ ಅಂತಹವರನ್ನು ಹಿಂಬಾಲಿಸುತ್ತದೆ. ಈ ನಿಟ್ಟಿನಲ್ಲಿ ಇಲ್ಲಿ ಪ್ರಸ್ತಾಪಿತವಾಗಿರುವ ಆ ಶ್ರೀಮಂತರಿಬ್ಬರ ದೃಷ್ಟಾಂತದಲ್ಲಿ ಬುದ್ಧನ ಬೋಧನೆಯ ಆ ಪ್ರಮುಖ ತಿರುಳು ನಮಗೆ ಸ್ಪಷ್ಟವಾಗುತ್ತದೆ, ಇಡೀ ಜಗತ್ತಿಗೇ ಸುಸ್ಪಷ್ಟವಾಗಿ ತಿಳಿಯುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

Published

on

  • ಪುರಂದರ್ ಲೋಕಿಕೆರೆ

ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.

ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.

100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.

ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.

ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.

ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.

ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending