ದಿನದ ಸುದ್ದಿ

ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ : ಭವ್ಯ ನರಸಿಂಹಮೂರ್ತಿ

Published

on

ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು ಸ್ವಾಮಿ ವಿವೇಕಾನಂದರ 160ನೇ ಜನ್ಮದಿನದ ಅಂಗವಾಗಿ ಅವರ ತತ್ವ ಆದರ್ಶಗಳು ಹಾಗೂ ಯುವ ಜನತೆಗೆ ನೀಡಿರುವ ಸಂದೇಶಗಳನ್ನು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಜನತೆಗೆ ತಲುಪುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಭವ್ಯ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೈಕ್ ರ್ಯಾಲಿ ಬೆಳಿಗ್ಗೆ 09-00 ಕ್ಕೆ ರಾಜಾಜಿನಗರ Entrance Bridge ಇಂದ ಪ್ರಾರಂಭವಾಗಿ ನವರಂಗ ಚಿತ್ರಮಂದಿರ – ಶಂಕರ್ ಮಠ – ಹಾವನೂರ್ ಸರ್ಕಲ್ – ಹೌಸಿಂಗ್ ಬೋರ್ಡ್ – ಕಾಮಾಕ್ಷಿಪಾಳ್ಯ ಬಸ್ ಸ್ಟಾಂಡ್ – ಹಾವನೂರ್ – ಅಕ್ಷಯ ಉಪಹಾರ – ಮೋದಿ ಹಾಸ್ಪಿಟಲ್ – ನವರಂಗ ಬ್ರಿಡ್ಜ್ – ಗಿರಿಯಾಸ್ ಸಿಗ್ನಲ್ – 6th ಬ್ಲಾಕ್ – ಕೊನೆಯದಾಗಿ 12 ಗಂಟೆಗೆ ಭಾಷ್ಯಮ್ ಸರ್ಕಲ್ ನಲ್ಲಿ ಕೊನೆಗೊಳ್ಳುತ್ತದೆ.

ದಾರಿಯಲ್ಲಿ 4 ಕಡೆ ಸ್ವಾಮಿ ವಿವೇಕಾನಂದರಿಗೆ ಪೂಜೆ ಹಮ್ಮಿಕೊಳ್ಳಲಾಗಿದೆ. ಪೂಜೆಯ ನಂತರ ವಿವೇಕಾನಂದರ ತತ್ವ ಆದರ್ಶಗಳನ್ನೊಳಗೊಂಡ ಹತ್ತು ಸಾವಿರ ಪುಸ್ತಕಗಳನ್ನು ಕ್ಷೇತ್ರದಾದ್ಯಂತ ಉಚಿತವಾಗಿ ಹಂಚಲಾಗುವುದು ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿರುತ್ತದೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version