Connect with us

ಲೈಫ್ ಸ್ಟೈಲ್

ನಾಡಿಗೆ ಬಂದ ಕಾಡುಕೋಣ..!

Published

on

ಸಾಂದರ್ಭಿಕ ಚಿತ್ರ
  • ಪಶುವೈದ್ಯರುಗಳ ಪೇಷಂಟುಗಳು ಬರೀ ದನ, ಎಮ್ಮೆ, ಕೋಳಿ,ಕುರಿ, ಆಡು, ನಾಯಿ, ಬೆಕ್ಕು, ಕೋಳಿ, ಹಂದಿ ಇತ್ಯಾದಿಗಳಿಗೆ ಸೀಮಿತವಾಗಿರದೆ ಮೊಲ, ಇಲಿ, ಕೋತಿ, ಆಮೆ, ಹುಲಿ, ಸಿಂಹ, ಒಂಟೆ, ಆನೆ, ಚಿರತೆ, ಹಾವು , ನರಿ, ಜಿಂಕೆ, ಕಡಿವೆ ಇತ್ಯಾದಿ ತರಹೇವಾರಿ ವನ್ಯಜೀವಿಗಳ ಚಿಕಿತ್ಸೆ ಮತ್ತು ಜೀವನ ಕ್ರಮದ ಬಗ್ಗೆಯೂ ತಿಳಿದುಕೋಂಡಿರಬೇಕಾಗುತ್ತದೆ. ಕೆಲವೊಮ್ಮೆ ಈ ಪ್ರಾಣಿಗಳನ್ನು ಚಿಕಿತ್ಸೆ ಮಾಡುವಾಗ ಸಾಕಷ್ಟು ಅಪಾಯವೂ ಕಾದಿರುತ್ತದೆ. ಗಾಯಗೊಂಡ ಕಾಡುಕೋಣವೊಂದರ ಚಿಕಿತ್ಸೆಯ ರೋಚಕ ಅನುಭವ.

ಡಾ. ಎನ್.ಬಿ.ಶ್ರೀಧರ

ನಿವಾರವೊಂದರ ಮಧ್ಯಾಹ್ನ 11 ಘಂಟೆಯಿರಬಹುದು. ಆ ದಿನ ತಾಳಗುಪ್ಪದಲ್ಲಿ ಸಂತೆ. ಆಸ್ಪತ್ರೆಯಲ್ಲಿ ಗಿಜಿಗುಟ್ಟುವಷ್ಟು ಜನ ಮತ್ತು ತರಹೆವಾರಿ ಕೇಸುಗಳು. ಹುಳವಾಗಿ ಗಬ್ಬು ನಾರುವ ಗಾಯದಿಂದ ಹಿಡಿದು ಸಂತಾನಹರಣ ಚಿಕಿತ್ಸೆಗೆಂದು ಕಾಯುತ್ತಿರುವ ಪಕ್ಕದ ತಾಲೂಕು ಸೊರಬದ ಶ್ವಾನಗಳ ಸವಾರಿ ಕ್ಯೂನಲ್ಲಿತ್ತು. ಒಳರೋಗಿಗಳಾಗಿ ಮಾಡಿಕೊಂಡ ಕೆಲವು “ಪೇಷಂಟು”ಗಳ ಚಿಕಿತ್ಸೆಯೂ ಕಾದಿತ್ತು. ನಾನೇ ಪ್ರಯೋಗಕ್ಕೆಂದು ತಂದು ಸಂಶಯಿತ ವಿಷಗಿಡಗಳನ್ನು ತಿನ್ನಿಸುಸುತ್ತಿರುವ ಕರುಗಳ ಗುಂಪಿತ್ತು. ಮನೆಗೆ ಚಿಕಿತ್ಸೆಗೆ ಕರೆದಿರುವ “ಟೂರಿಂಗ್ ಪೇಷಂಟು”ಗಳ ಪಟ್ಟಿಯೂ ಸಹ ಬೆಳೆಯುತ್ತಿತ್ತು.

ಅಷ್ಟರಲ್ಲೇ ನನ್ನ ಶಿಷ್ಯ “ಸಾರ್..ಡಿ ಎಪ್ ಓ ಅವರು ಲೈನಿನಲ್ಲಿದ್ದಾರೆ. ಗರಂ ಆಗಿದಾರೆ.. ನಿಮ್ಮ ಜೊತೆ ಮಾತಾಡಬೇಕಂತೆ “ ಎಂದ. ಯಾವುದೋ ಕಾಡು ಕೋಣವೋ ಅಥವಾ ಹುಲಿ ಸಿಂಹ, ಜಿಂಕೆ ಇತ್ಯಾದಿ ವನ್ಯೃಗಗಳು ಕಾಡಿನಲ್ಲಿ ಸತ್ತಿರಬೇಕು. ಮರಣೋತ್ತರ ಪರೀಕ್ಷೆ ಮಾಡಲು ಕರೆಯುತ್ತಿದ್ದಾರೆ. ಈ ದಿನ ಹಳ್ಳ ಹಿಡಿಯಿತು. ದೇಶದ ಆರ್ಥಿಕತೆಗೆ ನಮ್ಮ ಹಸು ಎಮ್ಮೆಗಳಂತೆ ಒಂದಿನಿತೂ ಕೊಡುಗೆ ನೀಡದ, ಕರದಾತರು ಕಷ್ಟಪಟ್ಟು ನೀಡಿದ ಹಣವನ್ನು ಜೀವವೈವಿಧ್ಯದ ಸಂರಕ್ಷಣೆಯ ಹೆಸರಿನಲ್ಲಿ ನುಂಗಿ ನೀರು ಕುಡಿಯುತ್ತಿರುವ ಅಧಿಕಾರಿಗಳ ಗುಂಪೊಂದರ ಪುನರ್ವಸತಿಯಾಗಿ ಕೇಂದ್ರವಾಗಿ ಮಾರ್ಪಟ್ಟ ಇಲಾಖೆಯೆಂದು ನನ್ನ ಮಿತ್ರ ಹೇಳುವ ಅರಣ್ಯ ಇಲಾಖೆಯ ಯಾವುದೋ ಕಾಡು ಪ್ರಾಣಿ ಸತ್ತರೆ ಎಲ್ಲ ಕೆಲಸ ಬದಿಗೊತ್ತಿ ಅದರ ಕೊಳೆತು ಹೋದ ಶವಪರೀಕ್ಷೆಗೆ ಇಲ್ಲಿಂದ ಹೋಗಬೇಕಾದ ಅನಿವಾರ್ಯತೆಯನ್ನು ಶಪಿಸುತ್ತಾ ಫೋನು ಎತ್ತಿದೆ. ಆಕಡೆಯಿಂದ “ ಡಾಕ್ಟ್ರೇನ್ರಿ.. ಎಷ್ಟೊತ್ರಿ ಬರೋದು? ನಾನು ಸಾಗರ ಡಿಎಪ್ಪೋ ಕಣ್ರೀ… ತುಮರಿ ಹತ್ರ ಕಾಡುಕೋಣ ಅಡಿಕೆ ತೋಟದಲ್ಲಿ ಮನೆ ಮಾಡಿ ಬಿಟ್ಟಿದೆ.. ಅದ್ಕೆ ಒಂದಿಷ್ಟು ಚಿಕಿತ್ಸೆ ಆಗ್ಬೇಕಿತ್ತು.. ತುಮರಿಗೆ ಬೇಗ ಬಂದ್ಬಿಡಿ.. ಈ ಪೇಪರ್ರಿನವರು ತಲೆ ತಿಂತಾ ಇದ್ದಾರೆ” ಎಂದು ಅವರ ಅಧಿಕಾರಿ ಗತ್ತಿನಲ್ಲೇ ಗಾರ್ಡು ಫಾರೆಸ್ಟರುಗಳಿಗೆ ನೀಡುವಂತೆ ಆದೇಶ ನೀಡಿದರು.

ಇದೊಳ್ಳೆ ಕಥೆಯಾಯ್ತಲ್ಲ !! ದನದ ಚಿಕಿತ್ಸೆ ಬಿಟ್ಟು ಈ ಕಾಡುಕೋಣದ ಚಿಕಿತ್ಸೆಗೆ ಹೋಗ್ಬೇಕಲ್ಲ ? ಎಲ್ಲೋದ್ರು ಈ ಕಾಡುಪ್ರಾಣಿ ಡಾಕ್ಟರುಗಳು? ಎಂದು ಪರಿಚಿತರಾದ ಅರಣ್ಯ ಇಲಾಖೆಯ ಸ್ನೇಹಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಫೋನಾಯಿಸಿದೆ. ಅದರ ಪ್ರವರ ತಿಳಿಯಿತು.

“ಅಡಿಕೆ ತೋಟದಲ್ಲಿ ಮನೆ ಮಾಡಿದ ಕಾಡುಕೋಣ” “ಕಾಡಿನಿಂದ ನಾಡು ಸೇರಿದ ಕಾಡುಕೋಣ” ಇತ್ಯಾದಿ ಶಿರ್ಷಿಕೆಯ ಸುದ್ಧಿಗಳು ದಿನಪತ್ರಿಕೆಗಳಲ್ಲಿ ಬರತೊಡಗಿದ ಮೇಲೆಯೇ ನಮಗೆ ಗೊತ್ತಾಗಿದ್ದು ಕಾಡುಕೋಣವೊಂದು ತುಮರಿ ಭಾಗದ ಹೆಗಡೆಯೊಬ್ಬರ ತೋಟ ಸೇರಿ ಅಲ್ಲಿಯೇ ಠಿಕಾಣಿ ಹೂಡಿದೆ ಎಂದು. ಸಾಮಾನ್ಯವಾಗಿ ನಮ್ಮ ಜಾನುವಾರುಗಳ ಜಂಜಾಟದಲ್ಲಿಯೇ ಮುಳುಗಿಹೋಗುವ ನಾವು ಆಗೆಲ್ಲ ಕಾಡುಪ್ರಾಣಿಗಳ ಚಿಕಿತ್ಸೆಗೆ ಹೋಗುವುದು ಕಡಿಮೆಯಾಗಿತ್ತು. ಅದಕ್ಕೆಂದೇ ಶಿವಮೊಗ್ಗದಲ್ಲಿ ಅರಣ್ಯ ಇಲಾಖೆಯಲ್ಲಿರುವ ಇರುವ “ಆನೆ ಡಾಕ್ಟರು” ಹುಲಿ ಸಿಂಹ” ಡಾಕ್ಟರುಗಳಾದ ವನ್ಯಜೀವಿ ಪಶುವೈದ್ಯರು ಬಂದು ಏನೇನು ಬೇಕೋ ಅದೆಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದರು.

ಅದರೆ ಆಗ ವನ್ಯಜೀವಿ ತಜ್ಞ ಪಶುವೈದ್ಯರು ದೂರದೂರಿನಲ್ಲಿ ಪುಂಡ ಕಾಡಾನೆಗಳು ಊರು ನುಗ್ಗಿ ದಾಂಧಲೆ ಎಬ್ಬಿಸಿದ್ದರಿಂದ ಅವುಗಳ ತರಲೆ ನಿಲ್ಲಿಸಿ ಖೆಡ್ಡಾಕ್ಕೆ ಕೆಡವಲು ನಾಡಾನೆಗಳನ್ನು ತೆಗೆದುಕೊಂಡು ಹೋಗಿ ಕೊಡಗಿನ ಹತ್ತಿರ ಯಾವುದೇ ಹಳ್ಳಿಯಲ್ಲಿ ಕಳೆದು ೧೫ ದಿನಗಳಿಂದ ಬೀಡು ಬಿಟ್ಟಿದ್ದು ಅವರು ಬಂದು ಈ ಕಾಡು ಪ್ರಾಣಿಯ ಚಿಕಿತ್ಸೆ ಮಾಡುವವರೆಗೆ ದಿನನಿತ್ಯ ಕಾಟಕೊಡುವ ದಿನಪತ್ರಿಕೆಗಳಿಂದ ಬಚಾವಾಗಲು ಡಿಎಪ್ಪೋ ನನಗೆ ಫೋನಾಯಿಸಿದ್ದಾರೆಂದೂ, ಸಾಗರ ಪಶುವೈದ್ಯ ಆಸ್ಪತ್ರೆಯ ಪಶುವೈದ್ಯರೆಲ್ಲ ತುಮರಿ ಏರಿಯಾವು ನನ್ನ ವ್ಯಾಪ್ತಿಯಲ್ಲಿ ಬರುವುದರಿಂದ ನನಗೆ ತಿಳಿಸಲು ಸೂಚಿಸಿದ್ದಾರೆಂದೂ ತಿಳಿಯಿತು.

ಸರಿ ನಮ್ಮಾಸ್ಪತ್ರೆಯಿಂದ ಯಾವ ರೂಟಿನಲ್ಲೇ ಹೋದರು 60-70 ಕಿಲೋಮೀಟರು ಇರುವ ತುಮರಿಗೆ ಹೋಗಲು ಎಲ್ಲಾ ಚಿಕಿತ್ಸಾ ಪರಿಕರಗಳನ್ನು ಸಿದ್ಧ ಮಾಡಿಕೊಳ್ಳಲು ನನ್ನ ಶಿಷ್ಯನಿಗೆ ತಿಳಿಸಿದೆ. ಕಾಡು ಪ್ರಾಣಿಗಳಿಗೆ ಅರಿವಳಿಕೆ ನೀಡುವ ಡಾರ್ಟ್ ಗನ್ನು ಇಲ್ಲವೆಂದೂ, ಕಾಡೆಮ್ಮೆ (ಕಾಡು ಕೋಣ?), ಮೈಮೇಲೆ ಬಂದರೆ ಕಷ್ಟವಿದೆಯೆಂದೂ ಯಾವುದಕ್ಕೂ ಮನೆಗೆ ಹೋಗಿ ತಿಳಿಸಿ ಬರುವೆನೆಂದೂ ನನ್ನ ಶಿಷ್ಯ ಮನೆಗೆ ಹೊರಟ.

ತುಮರಿ, ಬ್ಯಾಕೋಡು, ಕಾರ್ಗಲ್ಲು, ಶಿರವಂತೆ, ಅರಳಗೋಡು, ಕೊಂಜವಳ್ಳಿ, ಸೈದೂರು ಇತ್ಯಾದಿ ಈಗ ಆಸ್ಪತ್ರೆಯಾಗಿರುವ ಸುಮಾರು 90ಕಿಲೋಮೀಟರ್ ವ್ಯಾಪ್ತಿಯ ವಿಸ್ತಾರ ಪ್ರದೇಶಗಳಿಗೆ ಏಕೈಕ ತಜ್ಞ ಪಶುವೈದ್ಯನಾದ ನಾನು ಈ ಭಾಗದಲ್ಲಿ ಯಾವುದೇ ನಾಡು ಅಥವಾ ಕಾಡು ಪ್ರಾಣಿಗಳಿಗೆ ತೊಂದರೆಯಾದರೂ ಮರಣೋತ್ತರ ಪರೀಕ್ಷೆ ಅಥವಾ ಚಿಕಿತ್ಸೆ ನೀಡುವ ಮಹತ್ತರ ಜವಾಬ್ದಾರಿ ಹೊತ್ತು ಕೊಂಡಿದ್ದೆ.

ಎಂದಿನಂತೆ ನನ್ನ ಸುಜ಼ುಕಿ ಸವಾರಿ ನನ್ನ ಶಿಷ್ಯನ ಜೊತೆ ತುಮರಿ ಕಡೆ ಹೊರಟಿತು. ಸಾಗರ ಸೇರಿ ಸಾಗರದಿಂದ ಹೊಳೆಬಾಗಿಲಿನ ಬಾರ್ಜು ದಾಟಿ ಇನ್ನೂ 25 ಕಿಮಿ ಅಂಕು ಡೊಂಕಾದ ರಸ್ತೆಗಳಲ್ಲಿ ಸಾಗಿ ಕಾಡುಕೋಣದ ವಿಷಯ ಕೇಳುತ್ತಾ ಸಾಗಿದೆವು. ಗಮನದ ಹಳ್ಳಿ ತಲುಪಿ ಅಲ್ಲಿ ಹೆಗ್ಡೇರ ತೋಟದಲ್ಲಿ ಗಮಯದ ಜಾಡು ಹಿಡಿದು ಸಾಗಿದೆವು. ಬೈಕಿನಲ್ಲಿ ಸಾಗಿ ಸಾಗಿ ಬೇಸರ ಎಷ್ಟೊತ್ತಿಗಪ್ಪಾ ಈ ಊರು ಬರುತ್ತೆ ಎನ್ನುವಷ್ಟರಲ್ಲಿ ಗಮಯದ ಉಗಮ ಸ್ಥಾನ ಬಂತು.

ಗಮಯದ ಸುತ್ತ ಜನವೋ ಜನ. ಕೆಲವು ಅರಣ್ಯ ಇಲಾಖೆ ಸಿಬ್ಬಂದಿ ಜಮೆಯಾಗಿ ಅವರ ಅಮೂಲ್ಯ ವಸ್ತುವಿನ ರಕ್ಷಣೆ ಮಾಡುತ್ತಿದ್ದರು. ಒಂದೆರಡು ಪೋಲೀಸ್ ಸಿಬ್ಬಂದಿಯೂ ಸಹ ಜನರ ಬೀಡು ಕಡಿಮೆ ಮಾಡಲು ಹರ ಸಾಹಸ ಪಡುತ್ತಿದ್ದರು. ಹೋಯ್.. ಹೋಯ್… ಡಾಕ್ಟ್ರು ಬಂದ್ರು .. ದಾರಿ ಬಿಡಿ” ಎನ್ನುವ ಆಜ್ಞೆ ಪೋಲೀಸರಿಂದ ಬಂದು ಎಲ್ಲಾ ಜನರಿಂದ ನಾನೇ ಫ಼ೋಕಸ್ಸಾದೆ. ಕಾಡು ಕೋಣವನ್ನು ಸುಮಾರು ೧೫ ಅಡಿ ದೂರದಿಂದ ನೋಡಿದೆ. ಬಿಳಿಯ ಪಟ್ಟಿಯ ಕುತ್ತಿಗೆ, ಕಟ್ಟು ಮಸ್ತಾದ ದೇಹ, ರಾಜಗಾಂಭೀರ್ಯದಲ್ಲಿ ಇರಬೇಕಾದ ಕಾಡುಕೋಣ ಲಾಚಾರ್ ಎದ್ದು ಬಡ್ಕಾಟೆ ಹೆಣದಂತೆ ಹಿಂಡಿ ನೀಡದೇ ಇರುವ ಏಳಲು ಸಾಧ್ಯವಾಗದ ಮುದಿ ಎಮ್ಮೆಯಾಗಿ ಹೋಗಿತ್ತು. ಆದರೂ ಅದರ ಸ್ಥಿತಿ ಗಮನಿಸಲು ಸ್ವಲ್ಪ ಹತ್ತಿರ ಹೋದರೆ ಬುಸ್ ಎಂದು ಶಬ್ಧ ಮಾಡುತ್ತಾ ಏರಿ ಬಂತು.

ಸರಿಯಾಗಿ ಗಮನಿಸಿದಾಗ ಮುಂದಿನ ಬಲಗಾಲಿನ ಮೇಲ್ಬಾಗ ಉಬ್ಬಿದಂತೆ ಕಂಡು ಬಂತು. ಇದರ ಚಿಕಿತ್ಸೆ ಮಾಡದೇ ಇದ್ದರೆ ಸತ್ತು ಹೋಗುವುದು ಗ್ಯಾರಂಟಿ ಅನ್ನಿಸಿತು. ಅರಣ್ಯ ಇಲಾಖೆಯವರಿಗೆ “ ಈ ಕೋಣನ್ನ ಹೇಗಾದ್ರೂ ಹಿಡಿದು ಕೊಟ್ರೆ, ಅದಕ್ಕೆ ಅರಿವಳಿಕೆ ಚುಚ್ಚುಮದ್ದು ನೀಡಿ ಏನಾದರೂ ಮಾಡಬಹುದು. ನಮ್ಮ ಹತ್ತಿರ ಅರಿವಳಿಕೆಯನ್ನು ದೂರದಿಂದಲೇ ನೀಡುವ “ಡಾರ್ಟ್ ಗನ್” ಇರದೇ ಇರುವುದರಿಂದ ಯಾವುದೇ ಕ್ಷಣದಲ್ಲಿ ಕಾಡು ಕೋಣ ನುಗ್ಗಿದರೆನಾಮಾವಶೇಷವಾಗುವ ಸಾಧ್ಯತೆ ಇತ್ತು. ಅದು ಕೃಷವಾಗಿರುವುದನ್ನು ಗಮನಿಸಿದರೆ ಅದಕ್ಕೆ ಗಂಭೀರವಾದ ಕಾಯಿಲೆ ಇರುವುದು ಗ್ಯಾರಂಟಿಯಾಗಿತ್ತು. ಚಿಕಿತ್ಸೆ ಮಾಡದೇ ಇದ್ದರೆ ಸತ್ತು ಯಮಪುರಿ ಸೇರಿ ಖಾಯಂ ಆಗಿ ಯಮನ ವಾಹನ ಆಗುವ ಸಾಧ್ಯತೆ ಇತ್ತು.

ನನ್ನ ಶಿಷ್ಯ ಖಾಯಂ ಎಮ್ಮೆಗಳನ್ನು ಕೆಡಗಿ ಅಭ್ಯಾಸ ಇದ್ದಾತ. ಆತ “ ಸಾರ್.. ಒಂದು ಕೈ ನೋಡಿಯೇ ಬಿಡ್ಲಾ ಸಾರ್.. ಕಾಡುಕೋಣ ಹ್ಯಾಂಗಿದ್ರೂ ಬಡಕಲಾಗಿದೆ. ನಮ್ಮ ಎಮ್ಮೆಗಳಷ್ಟೇ ತಾಕತ್ತು ಇರ್ಬಹುದು, ಹಗ್ಗ ಹಾಕಿ ಕೆಡವಿ ಬಿಡ್ತೀನಿ “ ಎಂದು ಹುಂಬ ಧೈರ್ಯ ತೋರಿದ. ನಾನು ಮಾತ್ರ ಈ ರಿಸ್ಕ್ ತೆಗೆದುಕೊಳ್ಳಲು ಸುತರಾಂ ಸಿದ್ದವಿರಲಿಲ್ಲ. ಎಲ್ಲಾದರೂ ನಮ್ಮ ಅಂದಾಜು ತಪ್ಪಿ ಈ ಕಾಡುಕೋಣ ನುಗ್ಗಿ ಯಾರನ್ನಾದರೂ ಕೆಡಗಿ ಕೊಂದರೆ ಯಾರು ಜವಾಬ್ದಾರರರು? ಎಂದು “ ಈ ಕಾಡು ಪ್ರಾಣಿ ಸಹವಾಸ ಸಾಕಪ್ಪಾ.. ಅದರ ಡಾಕ್ಟರುಗಳು ಬಂದು ಏನಾದರೂ ಮಾಡ್ಲಿ. ನಮ್ಮಿಂದ ದನ ಆರಾಮವಾದ್ರೆ ಸಾಕು” ಎಂದು ರಾಗ ಎಳೆದೆ. ಆದರೂ ವೃತ್ತಿಯ ತುಡಿತ ಇದೆಯಲ್ಲ.. ಏನಾದರೂ ಮಾಡಲೇ ಬೇಕು. ಸುತ್ತ ಮುತ್ತ ಸೇರಿದ ಜನ ಎಲ್ಲಾ ತರಹೇವಾರಿ ಕಾಮೆಂಟು ಪಾಸು ಮಾಡಲಿಕ್ಕೆ ಪ್ರಾರಂಭಿಸಿದರು.

ಅವರೊಲ್ಲಬ್ಬ “ಇವರು ದನಕ್ಕೆ ಮಾತ್ರ ಡಾಕ್ಟರು. ಎಮ್ಮೆ ಮುಕಳಿ ಒಳಗೆ ಕೈ ಹಾಕಿ ಇನ್ಸೆಮಿನೇಷನ್ ಮಾಡೋದು ಮಾತ್ರ ಇವರಿಗೆ ಕಲ್ಸಿರ್ತಾರೆ. ಈ ಕಾಡುಕೋಣದ ಟ್ರೀಟ್ಮೆಂಟಿಗೆಲ್ಲಾ ಮೈಸೂರಿನಿಂದ ಎಕ್ಸ್ಪರ್ಟ್ಸ್ ಬರ್ಬೇಕು. ಸುಮ್ನೇ ಟೈಮ್ ಪಾಸಿಗೆ ಬಂದಿದ್ದಾರೆ. ಅದ್ರ ಜೊತೆ ಈ ಫ಼ಾರೆಸ್ಟ್ ಖಾತೆ ಜನಾ ಬೇರೆ ದಂಡ” ಎಂದು ನನ್ನ ವೃತ್ತಿಯ ಘನತೆಯನ್ನು ಮೂರುಕಾಸಿಗಿಳಿಸಿ ನಿವಾಳಿಸಿ ಬಿಸಾಡಿದ ಹಾಗೂ ಫ಼ಾರೆಸ್ಟು ಇಲಾಖೆಯವರು ಕಳ್ಳ ನಾಟಾ ಮಾಡುತ್ತಿದ್ದ ಕೆಲ ಹಳ್ಳಿಯ ಜನರನ್ನು ಕುಂಡೆಯ ಮೇಲೆ ಹಾಕಿ ಕಟಕಟೆ ಒಳಗೆ ಹಾಕಿದ ಹಳೆ ಸೇಡು ತೀರಿಸಿಕೊಂಡ. ಹಳ್ಳಿಯಲ್ಲಿ ರಾತ್ರಿ ,10 ಘಂಟೆಗೆ ಕರು ಅಡ್ಡ ಸಿಕ್ಕಿಹಾಕಿಕೊಂಡಾಗ ಎಣ್ಣೆಯ ಮತ್ತನ್ನು ಏರಿಸಿಕೊಂಡವರಿಂದ ಈ ತರಹದ ಮಾತು ಕೇಳಿ ಅಭ್ಯಾಸವಾಗಿ ಹೋದ ನಾನು ಇದನ್ನು ಸೀರಿಯಸ್ ಆಗಿ ತೆಗೆದುಕೊಳ್ಳಲೇ ಇಲ್ಲ. ಆದರೆ ನನ್ನ ಶಿಷ್ಯನಿಗೆ ಮಾತ್ರ ನಖಶಿಖಾಂತ ಕೋಪ ಬಂದಿತ್ತು.

ಆತ “ಸಾರ್. ಏನೂ ತೊಂದರೆ ಇಲ್ಲದಂತೆ ಅದನ್ನು ಕೆಡಗಿ ಕೊಡ್ತೀನಿ ಸಾರ್. ಇಂಜೆಕ್ಷನ್ ಹಾಕಿ ಅನೇಸ್ಠೇಸಿಯಾ ಕೊಟ್ಟು ಕೆಲಸ ಮಾಡಿ.. ಫ಼ಾರೆಸ್ಟ್ ಡಿಪಾರ್ಟ್ಮೇಂಟಿನವರೂ ಸಹಾಯ ಮಾಡ್ತಾರೆ” ಅಂದ. ಅಷ್ಟು ಹೊತ್ತು ನಮ್ಮ ಪರಿಪಾಟಲು ನೋಡಿ ಮಜಾ ತಗಳ್ತಿದ್ದ ಅರಣ್ಯ ಇಲಾಖೆಯ ಗಾರ್ಡು ಫ಼ಾರೆಸ್ಟರುಗಳೂ ಜನರ ಮಾತಿನಿಂದ ರೇಗಿ ಏನಾದರೂ ಮಾಡಲೇಬೇಕೆಂಬ ತೀರ್ಮಾನಕ್ಕೆ ಬಂದಾಗಿತ್ತು, ಅವರು ನಾಟಾ ಸಾಗಿಸಲು ಕಳ್ಳ ಸಾಗಣೆಗೆ ಉಪಯೋಗಿಸುತ್ತಿದ್ದ ಸೀಜ಼್ ಮಾಡಿದ ದಪ್ಪನೇ ಹಗ್ಗ ತಂದರು.

ಅದನ್ನು ಎಂಟತ್ತು ಅಡಿಕೆ ಮರದ ಸುತ್ತ ಕಟ್ಟಿ ಕಾಡು ಕೋಣ ಹಗ್ಗದ ಕೋಟೆ ಒಳಗೆ ಭದ್ರವಾಗುವಂತೆ ದಿಗ್ಭಂಧನ ಹಾಕಿದರು. ಕಾಡುಕೋಣ ಇರುವ ಜಾಗದ ಸುತ್ತ ಗೂಟದ ಬೇಲಿ ರೆಡಿಯಾಗಿ ಅಕ್ಷರಷ: ಕೊರೋನಾ ಪೀಡಿತರನ್ನು ಕ್ವಾರಂಟೈನಿನೊಳಗೆ ಹಾಕಿದ ಹಾಗೇ ಲಾಕ್ ಮಾಡಿದರು. ಆದರೆ ಕೋಣಕ್ಕೆ ಅನೇಶ್ಥೆಸಿಯಾ ಇಂಜೆಕ್ಷನ್ ಚುಚ್ಚಬೇಕಲ್ಲ. “ಯಾರಾದ್ರೂ ಬಂದು ಇದನ್ನು ಮಾಂಸದಲ್ಲಿ ತೂರಿಸ್ರೋ” ಎಂದು ಸಿರಿಂಜಿನಲ್ಲಿ ತಕ್ಕ ಪ್ರಮಾಣದ ಅನೇಸ್ಥೆಸಿಯಾ ಚುಚ್ಚುಮದ್ದು ಲೋಡ್ ಮಾಡಿ ನೀಡಲು ಹೋದೆ. ಯಾರೂ ಮುಂದೆ ಬರಲಿಲ್ಲ.

ಒಂದು ಉಪಾಯ ಹೊಳೆಯಿತು. ನಾವು ನಿರ್ಮಿಸಿದ ಕೋಟೆಯೊಳಗೆ ಒಂದಿಷ್ಟು ಮುರುಗಲು ಮತ್ತು ಕೋಕೋ ಗಿಡಗಳಿದ್ದವು. ಅವುಗಳ ಮೇಲೆ ಹತ್ತಿ ಕುಳಿತರೆ ಮತ್ತು ಕಾಡುಕೋಣವನ್ನು ಅಲ್ಲಿಗೆ ನಿಧಾನವಾಗಿ ಚಲನೆಯಾಗುವಂತೆ ನೋಡಿಕೊಂಡರೆ ಅದಕ್ಕೆ ಕಚಕ್ ಎಂದು ಇಂಜೆಕ್ಷನ್ ಚುಚ್ಚಿಬಿಡುವ ಎಂದುಕೊಂಡೆ. ಆದರೆ ಇಲ್ಲಿ ತುಂಬಾ ರಿಸ್ಕ್ ಇತ್ತು. ಆದರೆ ಮೊದಲೇ ಗಾಯಾಳು ಕೋಣ, ಖಂಡಿತಾ ರೋಷ ಭರಿತವಾಗಿರುತ್ತದೆ. ಏನಾದರೂ ಹೆಚ್ಚುಕಮ್ಮಿ ಆಗಿ ಆಯ ತಪ್ಪಿದರೆ ಅದರ ಮೇಲೆಯೇ ಬೀಳುವ ಸಾಧ್ಯತೆ ಇತ್ತು. ಬಿದ್ದರೆ ತುಳಿದು ಖಂಡಿತಾ ತುಳಿದು ಯಮಪುರಿಗೆ ಕಳಿಸುತ್ತಿತ್ತು.

ಯಾರಿಗಾದರೂ ಮರ ಹತ್ತಿ ಅದು ಕೆಳಗೆ ಬಂದೊಡೆ ಇಂಜೆಕ್ಷನ್ ಚುಚ್ಚಿ ಎಮ್ದರೆ ಎಲ್ಲರೂ ಹೆದರು ಪುಕ್ಕಲರೆ. ಮತ್ತೆ ಕೆಲವರು ಹೊಟ್ಟೆ ಹೊತ್ತ ದಡೂತಿಗಳು. ಅಲ್ಲಿ ಇರುವವರಲ್ಲಿ ನಾನೇ ತೆಳ್ಳಗಿರುವವ. ಏನಾದರಾಗಲಿ ಎಂದು ಅನಸ್ಥೆಸಿಯಾವನ್ನು ತುಂಬಿಸಿದ ಸಿರಿಂಜ್ ಕೈಲಿ ಹಿಡಿದು ಅದು ನೇರವಾಗಿ ಕೆಳಗೆ ಬರಬಹುದಾದ ಕೋಕೋ ಗಿಡದ ಮೇಲೆ ಏರಿದೆ. ಕಾಡುಕೋಣವನ್ನು ಮರದ ಕೆಳಗೆ ಬಂದು ನಿಲ್ಲುವಂತೆ ಬೆದರಿಸಲು ಸೂಚಿಸಿದೆ.

ಹಲವು ರೌಂಡ್ ಕಾರ್ಯಾಚರಣೆಯ ನಂತರ ಯಾವುದೋ ಗಳಿಗೆಯಲ್ಲಿ ಕಾಡು ಕೋಣ ನಾನು ಮೇಲೆ ಇದ್ದ ಕೊಂಬೆಯ ಕೆಳಗೆ ಬಂದು ನಿಂತಿತು. ಇದೇ ಅವಕಾಶವೆಂದು ಅದರ ಹಿಂಬಾಗದ ಪ್ರಷ್ಠದ ಮೇಲೆ ಸೂಜಿಯ ಸಮೇತ ಸಿರಿಂಜ್ ಚುಚ್ಚಿ ಸರಕ್ಕನೇ ಔಷಧಿ ಸೇರಿಸಿದೆ. ಆಯ ತಪ್ಪಿ ಕೆಳಗೆ ಬಿದ್ದ ಹೊಡೆತಕ್ಕೆ ಕಾಡುಕೋಣದ ಎದುರು ಅಂಗಾತ ಬಿದ್ದೆ. ಇನ್ನೇನು ಕಾಡುಕೋಣ ನನ್ನನ್ನು ತಿವಿಯಬೇಕು.. ನೋಡ್ತೀನಿ .. ಏನೂ ಶಬ್ಧ ಇಲ್ಲ.

ನಾನು ಕೊಟ್ಟ ಅರಿವಳಿಕೆಯ ಪ್ರಭಾವದಿಂದ ಕಾಡುಕೋಣ ಧರಾಶಾಯಿಯಾಗಿತ್ತು.
ಕೂಡಲೇ ನನ್ನ ಶಿಷ್ಯ ಮತ್ತು ಅರಣ್ಯ ಇಲಾಖೆಯವರು ಕಾಡುಕೋಣವನ್ನು ನಾಡುಕೋಣ ಕಟ್ಟಿದಂತೆ ಹಗ್ಗದಿಂದ ಏಳದಂತೆ ಕ್ಷಣಮಾತ್ರದಲ್ಲಿ ಬಂಧಿಸಿದರು. ಕಾಡುಕೋಣದ ಮುಂಗಾಲಿನ ಮೇಲ್ಬಾಗದಲ್ಲಿ ಕೀವಿನಿಂದ ಕೂಡಿದ ಗಡ್ಡೆಯಿತ್ತು. ಸಾವಧಾನವಾಗಿ ಅದನ್ನು ಓಪನ್ ಮಾಡಿದಾಗ ಟಕ್ ಎಂದು ಅದರೊಳಗಿದ್ದ ಬುಲೆಟ್ ಹೊರಬಂತು. ಯಾರೋ ದುರುಳರು ಮಾಂಸದಾಸೆಗೆ ಕಾಡುಕೋಣಕ್ಕೆ ಗುಂಡು ಹೊಡೆದಾಗ ಅದು ಮಾಂಸದಲ್ಲಿ ಕಚ್ಚಿಕೊಂಡು ಅಲ್ಲಿ ಕೀವುಂಟುಮಾಡಿದೆ ಎಂದು ತಿಳಿಯಿತು.

ಕೀವು ಬಸಿದು ಹೋಗುವ ಹಾಗೇ ಮಾಡಿ ಅದರೊಳಗೆ ಟಿಂಚರ್ ಆಯೋಡಿನ್ ಯುಕ್ತ ಭಟ್ಟೆಯನ್ನಿರಿಸಿ ಸುತ್ತಲೂ ಮುಲಾಮು ಹಚ್ಚಿದೆ. ಅವಶ್ಯಕ ನಂಜುನಿವಾರಕಗಳು, ನೋವು ನಿವಾರಕಗಳು ಹಾಗೂ ಜೀವನಿರೋಧಕದ ಚುಚ್ಚುಮದ್ದು ನೀಡಿದೆ. ಕಾಡುಕೋಣ ಬಹಳ ಬಡಕಲುಗೊಂಡಿತ್ತು. ಬಹುಶ: ಕೀವಿನ ನೋವಿನ ಬಾಧೆಯಿಂದ ಇರಬಹುದೇನೋ? ಕಾಡು ಕೋಣ ನಾಡಿಗೆ ಆಶ್ರಯಕ್ಕೆ ಬಂದಿದೆ.ತೋಟದಲ್ಲಿ ಸುಲಭವಾಗಿ ಸಿಗುವ ಹಲಸಿನ ಹಣ್ಣು ಇತ್ಯಾದಿ ತಿಂದು ಸೆಟ್ಲ್ ಆಗಿದೆ ಎಂದು ಗೊತ್ತಾಯ್ತು. ಎಲ್ಲ ಕೆಲಸ ಮುಗಿಸಿ, ಅದರ ತಿಲಕಾಷ್ಠ ಮಹಿಷ ಬಂಧನ ಬಿಡಿಸಿ ದೂರ ಬಂದೆವು. ಕೋಟೆಯಂತೆ ಮಾಡಿದ ಹಗ್ಗದ ಬಿಗಿತವನ್ನೂ ಸಡಿಲ ಗೊಳಿಸಿದೆವು. ಸುಮಾರು ಮುಕ್ಕಾಲು ಘಂಟೆಗೆ ಕಾಡುಕೋಣಕ್ಕೆ ಪ್ರಜ್ಞೆ ಬಂತು. ಓಲಾಡುತ್ತಾ ಏಳಲು ಪ್ರಯತ್ನಿಸಿತು. ಸ್ವಲ್ಪ ಹೊತ್ತಿಗೆ ಎದ್ದು ನಿಂಟು ಮೈಕೊಡವಿಕೊಂಡಿತು. ದುಡುಕ್ಕನೆ ಪಕ್ಕಳದ ಹಳ್ಳದ ಮೇಲೆ ಏರಿ ನಿಂತಿತು. ನಮ್ಮೆಡೆ ಒಂತರಾ ಕೃತಜ್ಞತೆಯ ನೋಟ ಬೀರಿ ಕಾಡಿನಲ್ಲಿ ಜಿಗಿದು ಮಾಯವಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ಬೆಳಗಿನ ಸುದ್ದಿ ಮುಖ್ಯಾಂಶಗಳು

Published

on

ಬೆಳಗಿನ ಸುದ್ದಿ ಮುಖ್ಯಾಂಶಗಳು

  1. ರಾಜ್ಯ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮುಂದಿನ ತಿಂಗಳ 3 ರಂದು ಚುನಾವಣೆ ನಡೆಯಲಿದೆ. ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 91ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ.
  2. ದೇಶದ ಉತ್ತರದ ರಾಜ್ಯಗಳಲ್ಲಿ ನಿನ್ನೆ ತೀವ್ರ ಬಿಸಿಗಾಳಿ ವಾತಾವರಣ ಉಂಟಾಗಿತ್ತು. ಮುಂದಿನ 4 ದಿನಗಳಲ್ಲಿ ವಾಯವ್ಯ ಪೂರ್ವ ಹಾಗೂ ಮಧ್ಯಭಾರತದ ಬಯಲು ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚಿಸಿದೆ.
  3. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಪ್ರದೇಶಾದ್ಯಂತ 40 ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರ ಉಕ್ಕೇರಲಿದ್ದು, ಮುಂಜಾಗ್ರತಾ ಕ್ರಮವಾಗಿ ಬುಧವಾರದವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
  4. ತೈವಾನ್‌ನ ಅಧ್ಯಕ್ಷ ಹುದ್ದೆ ಆಯ್ಕೆಯಾಗಿರುವ ಲೈ ಛಿಂಗ್-ತೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ. ಕಳೆದ 4 ವರ್ಷಗಳಿಂದ ದೇಶದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ 64 ವರ್ಷದ ಲೈ ಅವರು, ತೈವಾನ್‌ನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.
  5. ಶ್ರೀಲಂಕಾದ ಸೀತಾಮಾತೆ ಮಂದಿರ-ಸೀತಾ ಇಳಿಯಾದಲ್ಲಿ ನಿನ್ನೆ ಕುಂಬಾಭಿಷೇಕ ಶ್ರದ್ಧಾ-ಭಕ್ತಿ ಸಡಗರ ಸಂಭ್ರಮಗಳಿಂದ ಜರುಗಿತು. ಅಯೋಧ್ಯೆಯ ಸರಯೂ ನದಿಯಿಂದ ತರಲಾಗಿದ್ದ ಸುಮಾರು 25ಲೀಟರ್ ಪವಿತ್ರ ಜಲದಿಂದ ಮಂದಿರದ ಗೋಪುರಕ್ಕೆ ಅಭಿಷೇಕ ನೆರವೇರಿಸಲಾಯಿತು. ಭಾರತ-ನೇಪಾಳ, ಶ್ರೀಲಂಕಾ ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ್ದ ಭಕ್ತಾದಿಗಳು ಈ ದೃಶ್ಯವನ್ನು ಕಣ್ಮನಗಳಲ್ಲಿ ತುಂಬಿಕೊಂಡರು.
  6. ಭಾರತದ ಗ್ರಾಂಡ್ ಮಾಸ್ಟರ್ ಅರವಿಂದ್ ಚಿದಂಬರಂ ಶಾರ್ಜಾ ಮಾಸ್ಟರ್‍ಸ್ ಚೆಸ್ ಪಂದ್ಯಾವಳಿಯಲ್ಲಿ ಅತಿಥೇಯ ಶಾರ್ಜಾದ ಎ.ಆರ್. ಸುಲೆಹ್ ಸಲೀಂ ಅವರನ್ನು ಪರಾಭವಗೊಳಿಸಿ 4.5ಅಂಕಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ.
  7. ಗುವಾಹಾಟಿಯಲ್ಲಿ ನಿನ್ನೆ ರಾತ್ರಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ಕೊಲ್ಕೊತ್ತಾ ನೈಟ್ ರೈಡರ್‍ಸ್ ನಡುವಿನ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಕೆಲಕಾಲ ಮಳೆ ಬಂದು ನಿಂತ ನಂತರ ನಡೆದ ಟಾಸ್ ಗೆದ್ದ ಕೊಲ್ಕತ್ತಾ ತಂಡ ಫೀಲ್ಡಿಂಗ್ ಆಯ್ದುಕೊಂಡಿತ್ತು. ಆದರೆ ಪುನಃ ಮಳೆ ಬಂದ ಹಿನ್ನೆಲೆ ಪಂದ್ಯ ರದ್ದುಗೊಳಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Published

on

  • ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ

90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು.

ಜನಸಾಮಾನ್ಯರ ಅರಿವಿನ-ಪರಿಧಿ ತಿಳಿಗೊಳ್ಳುವುದರ ಮೊದಲೇ ಊಹಿಸಲಾರದಷ್ಟು ಮಟ್ಟಿಗೆ ಇಂದು, ಸ್ವಚ್ಛಂದ ಹಳ್ಳಿ-ಸೊಬಗಿನ ಕೂಡು-ಕುಟುಂಬದ, ಮೈ-ಮನಸ್ಸು ತುಂಬಿದ, ಪರಿಶುದ್ಧ ಜೀವನ ಪ್ರೀತಿ, ಉತ್ಸಾಹ, ಮಮತೆಯನ್ನು ಇನ್ನಿಲ್ಲವಾಗಿಸಿದೆ ಎನಿಸುತ್ತದೆಯಲ್ಲವೆ?

ಹೇಗೆಂದರೆ, ಕಲ್ಪಿಸಿಕೊಂಡರೂ ಕಣ್ಣೆದುರಿಗೆ ತೆರೆದಿಡುವ ಅಮೂಲ್ಯ ಬದುಕು, ಅದೆಷ್ಟು ಬೇಗ ದಿಕ್ಕು-ದೆಸೆಯಿಲ್ಲದೆ ಕಣ್ಣು-ಕಟ್ಟಿದ ಸ್ಪರ್ಧೆಗಿಳಿದ ಕುದುರೆಯಂತೆ ಅಲೆಯುವಂತಾಗಿದೆ! ಅರೆಕ್ಷಣ, ಮೈಮನ ಕಸಿವಿಸಿಗೊಳ್ಳುತ್ತೆ! ಜೀವ ಮರುಗುತ್ತೆ. ಮತ್ತೆ ಮತ್ತೆ ಆ ಬಾಲ್ಯ, ಹಳ್ಳಿ ಬದುಕನ್ನ ಅರಸಿ ಬಯಸುತ್ತೆ! ಜನತೆ, ಹಳ್ಳಿಯಲ್ಲಿನ ಗಿಡ-ಮರ, ಪಶು-ಪಕ್ಷಿ, ಹಳ್ಳ-ಕೊಳ್ಳ, ಬೆಟ್ಟ-ಗುಡ್ಡ ಮುಂತಾದ ಪರಿಸರದ ಸಕಲ ಜೀವಿಗಳೊಂದಿಗೆ ಒಂದಾಗಿ ನಲ್ಮೆಯಿಂದ ಪರಿಶುದ್ಧ ಮನದಿ, ಭೂ ತಾಯಿ, ತಿಳಿ-ನೀಲಿ ಆಗಸ, ಮಳೆ, ಗಾಳಿ, ಬೆಳಕನ್ನ ಇನ್ನಿಲ್ಲದೆ ಅಪ್ಪಿ, ಅತ್ಯಂತ ಸಂತಸ-ಖುಷಿಯಿಂದ, ಇರುವ ಪರಿಸ್ಥಿತಿಗೆ ಒಗ್ಗಿ , ಬದುಕು ರೂಪಿಸಿಕೊಂಡು ಜೀವನೋತ್ಸಾಹ ತಳೆಯುತ್ತಿದ್ದರು.

ನಿಜ ಹೇಳಬೇಕೆಂದರೆ, ಪರಿಸರವೇ ಪಾಠ; ಭೂ ತಾಯಿಯೇ ಹಾಸಿಗೆ; ಆಗಸವೇ ಹೊದಿಕೆಯಾಗಿ, ದುಡಿದ, ದಣಿವರಿದ ಮನದಿ, ಕಣ್ತುಂಬಿ ನೆಮ್ಮದಿಯ ನಿಟ್ಟುಸಿರುಗೈವ ಕ್ಷಣಗಳು ಅದಾಗಿತ್ತು!

ಹಳ್ಳಿಯಲ್ಲಿನ ಆಟೋಟಗಳು, ತಮಾಷೆಯ ಕ್ಷಣಗಳು, ಆಟಿಕೆಗಳು, ಸಾಮಾನುಗಳು, ಹಬ್ಬ-ಹರಿದಿನಗಳು, ಜಾತ್ರೆ-ಸಂತೆಗಳು, ಒಕ್ಕಲು ಸಮಯದ ಸುಗ್ಗಿಯ ಮಧುರ ಕ್ಷಣಗಳು ಇತ್ಯಾದಿ ಜನತೆಯ ಮುಗ್ಧ -ಮನಸ್ಸು ಮತ್ತು ಹೊಳೆವ ಮುಖದಲ್ಲಿ, ನಿಷ್ಕಲ್ಮಶ ಮಂದಹಾಸ ಮೂಡಿಸಿ, ಬೆಲೆ ಕಟ್ಟಲಾಗದ ಖುಷಿಯ ಕ್ಷಣಗಳನ್ನು ಸದಾ ಅವರಲ್ಲಿ ಕಂಗೊಳಿಸುತ್ತಿದ್ದವು.

ಎಲ್ಲರೂ ದುಡಿವವರು; ಎಲ್ಲರೂ ಭಾಗಿಯಾಗುವವರು; ಎಲ್ಲರೊಳಗೊಂದಾಗಿ ಬಾಳುವವರು; ಎಲ್ಲರಲ್ಲೂ ಧನ್ಯತಾ ಭಾವ; ಆದರಣೀಯತೆ, ಪೂಜ್ಯತಾ-ಭಾವ ತುಂಬಿತ್ತು! ಅಂತಃಕರಣೆ, ಕರುಣೆ, ಪ್ರೀತಿ-ವಿಶ್ವಾಸ, ತಕ್ಕಮಟ್ಟಿಗೆ ಮಾನವೀಯತೆ ಬದುಕ-ಪ್ರೀತಿ ಹೆಚ್ಚಿಸಿತ್ತು!

ಈಗಾಗಲೇ, ನಾವು ಯಾವ ಸ್ಥಿತಿ ತಲುಪಿದ್ದೇವೆಂದರೆ: ಶಾಲಾ ರಜೆಯ ದಿನಗಳಲ್ಲಿ, ಈಗಿನ ಮಕ್ಕಳಿಗೆ ಆ ಕಾಲದ ಹಳ್ಳಿಗಳ ಜೀವನ ಪರಿಚಯಿಸಲು ಗೊಟಗೋಡಿಯ ರಾಕ್ ಗಾರ್ಡನ್ – ಹಾವೇರಿ, ಹೆರಿಟೇಜ್ ವಿಲೇಜ್ – ಮಣಿಪಾಲ, ಅಲ್ಲಲ್ಲಿ ಸಾರ್ವಜನಿಕ ಉದ್ಯಾನವನ, ಹಾಗೂ ಇತರೆ ಕೆಲವು ಮ್ಯೂಸಿಯಮ್ ಗಳತ್ತ ಮುಖ ಮಾಡಿಬೇಕೆ ಹೊರತು ನೈಜ ಚಿತ್ರಣ ಪ್ರಸ್ತುತ ಹಳ್ಳಿಗಾಡಿನಲ್ಲೂ ಕಾಣಸಿಗದು! ಸ್ವತಃ ಹಳ್ಳಿಗರೇ ಪರಿತಪಿಸುವ ಸ್ಥಿತಿ.

ಕಾರಣ ಇಷ್ಟೆ: ತಂತ್ರಜ್ಞಾನದ ಆವಿಷ್ಕಾರ ಮತ್ತು ಎಲ್ಲ ಕ್ಷೇತ್ರಗಳಲ್ಲೂ ಹೊಕ್ಕಿರುವ ಅದರ ಗಾಢವಾದ ಛಾಯೆ. ಇಡೀ ‘ಪ್ರಪಂಚವೇ ಒಂದು ಹಳ್ಳಿ’ (Global Village) ಯಾಗಿ ಮಾರ್ಪಟ್ಟಿರುವ ಭಾವನೆ. ವಿಶೇಷವಾಗಿ, ದೂರವಾಣಿ, ಇಂಟರ್ನೆಟ್, ಯುಟ್ಯೂಬ್, ನೇರ ಮೆದುಳಿಗೆ ಕೈ ಹಾಕಿರುವ ಸಾಮಾಜಿಕ ಜಾಲತಾಣಗಳ ಡ್ರಗ್ಸ್ ರೀತಿಯ ಮಾನಸಿಕ ಮೋಹ ಬೆಂಬಿಡದೆ ಇಂದಿನ ಆಧುನಿಕ ಜನತೆಯ ಚಿಂತನಾರ್ಹ ಯೋಚನಾ ಶಕ್ತಿ, ಆರೋಗ್ಯ , ಕೌಟುಂಬಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಒಟ್ಟಾರೆ ಜೀವನ ಶೈಲಿಯನ್ನೇ ಅಕ್ಷರಸಃ ನುಂಗಿಹಾಕಿವೆ! ಅಲ್ಲದೆ, ಇದು ಇಂದಿನ ಅನಿವಾರ್ಯವೆಂಬಂತೆ ಕಠೋರ ಸನ್ನಿವೇಶ ಹುಟ್ಟುಹಾಕಿವೆ.

ಒಂದೆಡೆ, ‘ಅತೀಯಾದ ಅಮೃತವೂ ವಿಷ’ವೆನ್ನುವಂತೆ, ಹಾಗೂ ಊಟದಲ್ಲಿ ‘ರುಚಿಗೆ ತಕ್ಕಷ್ಟು ಉಪ್ಪಿ’ರುವಂತೆ ಹಲವು ಒಳಿತು-ಕೆಡುಕಗಳ ನಡುವೆ ಎಲ್ಲವೂ ಹಿತಮಿತವಾಗಿ ಬಳಕೆಯಲ್ಲಿದ್ದರೆ ಚೆನ್ನ. ಅಲ್ವೇ? ಮೈ ಮನ ಆರೋಗ್ಯಕರವಾಗಿರುತ್ತೆ; ಜೀವನ ಉತ್ಸಾಹದಿಂದ ಕೂಡಿರುತ್ತೆ.
ಜೊತೆಗೆ, ಇತ್ತೀಚೆಗೆ ಜಗತ್ತಿನೆಲ್ಲೆಡೆ ಭಾರೀ ಸಂಚಲನ ಸೃಷ್ಟಿಸಿರುವ ‘ಕೃತಕ ಬುದ್ಧಿಮತ್ತೆ’ (Artificial Intelligence – AI) ಹಾಗೂ ‘ಬಯೋಚಿಪ್’ ತಂತ್ರಜ್ಞಾನಗಳು. ಈ ಎರಡೂ ತಂತ್ರಜ್ಞಾನಗಳು ಬಹುತೇಕ ಮನುಷ್ಯನನ್ನ ಸಹ ಒಂದು ಸರಕಾಗಿ ನೋಡುವ ದೂರದೃಷ್ಟಿ ಹೊಂದಿವೆ ಎಂದರೆ ತಪ್ಪಾಗಲಿಕ್ಕಿಲ್ಲ! ತೀರ ಇತ್ತೀಚೆಗೆ, ತಂತ್ರಜ್ಞಾನ ಜಗತ್ತಿನ ಹೆಸರಾಂತ ಉದ್ಯಮಿ: ಎಲಾನ್ ಮಸ್ಕ್ ತಮ್ಮ ‘ನ್ಯೂರಾಲಿಂಕ್’ (Neuralink) ಸಂಸ್ಥೆಯ ಮೂಲಕ ಪ್ರಪಂಚದ ಮೊಟ್ಟ ಮೊದಲ ಪ್ರಯತ್ನವಾಗಿ ಆರೋಗ್ಯವಂತ ವ್ಯಕ್ತಿಯೊಬ್ಬರ ಮೆದುಳಿನಲ್ಲಿ ಪ್ರಾಯೋಗಿಕ – ‘ಮೊದಲ ಬಯೋಚಿಪ್’ ಅಳವಡಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ! ಇದುವರೆಗೂ, ಮೊಬೈಲ್ ನಲ್ಲಿ ಕೇವಲ ‘ಮೆಮೊರಿ ಕಾರ್ಡ್’ ಬಳಸಿ, ಅದರಲ್ಲಿ ಸಂಗ್ರಹಿಸಿದ ಮಾಹಿತಿ ಬೇಕೆಂದಾಗ ಆಲಿಸುವ, ನೋಡುವ ಪರಿಪಾಠದ ಪರಿಚಯವಿದ್ದ ನಮಗೆ, AI ಹಾಗೂ Biochip ತಂತ್ರಜ್ಞಾನಗಳ ಅವತಾರಗಳು ಊಹೆಗೂ ಮೀರಿದ್ದು ಅನ್ಸುತ್ತೆ ಕೂಡ.

ಆಗ, ಜಗತ್ತು ಹೇಗಿರಬೇಡ? ತಂತ್ರಜ್ಞಾನ ತೊರೆದು ಮನುಷ್ಯ, ಜೀವನ ಕಲ್ಪಿಸಿಕೊಳ್ಳಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು, ಕೇವಲ ಮನುಷ್ಯನ ಅವಶ್ಯಕತೆಗಳಿಗೆ ಪೂರಕವಾಗಿರಬೇಕೆ ಹೊರತು; ಆತನನ್ನ ಆಳುವ ಸ್ಥಿತಿ ತಲುಪಬಾರದು! ಮುಂದಿನ ದಿನಗಳಲ್ಲಿ, ಮನುಷ್ಯ ಎದುರಿಸಬಹುದಾದ ಭಯಾನಕ ತಂತ್ರಜ್ಞಾನ ಸಂಕೋಲೆಗಳನ್ನು ಕುರಿತು ಚರ್ಚಿಸುವ ಅಗತ್ಯ ಇಂದಿನ ತುರ್ತು ಅನಿವಾರ್ಯ. ಆದರೆ, ಎಲ್ಲವೂ ಸಲೀಸಾಗಿ ಕೈಗೆಟುಕುವ ಇಂದಿನ ದಿನಗಳಲಿ, ಅತಿಯಾಗಿ ಮಿತಿಮೀರಿರುವ ಅನುಕೂಲಗಳು ಅಮೂಲ್ಯ ಖುಷಿಯ ಕ್ಷಣಗಳನ್ನು ಎಂದಿಗೂ ನೀಡಲಾರವು.

ಬದಲಿಗೆ, ಪ್ರತಿಷ್ಠೆಯ ಹೆಮ್ಮರಗಳಾಗಿ, ಜನತೆ ನಾಲ್ಕು ದಿನದ ಈ ಬಾಳಲಿ ಏನೋ ಬಹುದೊಡ್ಡ ಸಾಧನೆಗೈದವರಂತೆ, ಯಂತ್ರಮಾನವರಂತೆ ಬೀಗುವವರೆ!!? ಮೂಲಭೂತವಾಗಿ, ಮಾನವ ಸಹಿತ ಸಕಲ ಜೀವ-ಸಂಕುಲವೂ ವಾಸಯೋಗ್ಯ ಸ್ವಚ್ಛಂದ ಭೂಮಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಭೂಮಿಯಲ್ಲಿ, ಮಣ್ಣಿನ ಫಲವತ್ತತೆ ಹಾಗೂ ನೀರು ಸಂರಕ್ಷಿಸದೆ; ಗಿಡ-ಮರ ಬೆಳೆಸದೆ; ಹಸಿರು ಹೆಚ್ಚಿಸದೆ, ಮತ್ತು ಪರಿಸರ ಸಮತೋಲನ ಕಾಪಾಡದೆ; ಕೇವಲ ತಂತ್ರಜ್ಞಾನ ತಲೆಯಲಿ ಹೊತ್ತು, ಮನುಷ್ಯ ಉತ್ತಮ ಆಹಾರ, ಆರೋಗ್ಯ ಮತ್ತು ಜೀವನ ಕಟ್ಟಿಕೊಳ್ಳಲು ಎಂದಿಗೂ ಸಾಧ್ಯವಿಲ್ಲ. ಸಮರೋಪಾದಿಯಲ್ಲಿ, ಜನತೆ ಸ್ವ ಇಚ್ಛೆಯಿಂದ ಹಳ್ಳಿ-ಹಳ್ಳಿಗಳಿಂದ, ನಗರಗಳು, ಬೆಟ್ಟ-ಗುಡ್ಡಗಳಲ್ಲೆಡೆ ಬೃಹತ್ ಸಂಖ್ಯೆಯಲ್ಲಿ ಸಸಿಗಳನ್ನ ನೆಟ್ಟು, ಪಾಲನೆ-ಪೋಷಣೆಗೈಯ್ಯುವ ಚಳುವಳಿ ರೂಪದ ಆಂದೋಲನ ದೇಶಾದ್ಯಂತ ಅತ್ಯಂತ ತ್ವರಿತವಾಗಿ ಕೈಗೂಡಬೇಕು. ಈ ನಿಟ್ಟಿನಲ್ಲಿ, ಎಲ್ಲರೂ ಕೈಜೋಡಿಸಬೇಕು.

(ಲೇಖಕರು : ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್

Published

on

ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್‌ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.

ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್‌ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

ಹೇಳಿಕೆ


  • ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.

            | ಸಚಿವ ದಿನೇಶ್ ಗುಂಡೂರಾವ್


ಟ್ವೀಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 hour ago

ಆತ್ಮಕತೆ | ವಿಶ್ವವಿದ್ಯಾಲಯದ ವಿರುದ್ಧ ನಡೆಸಿದ ಎರಡು ಧರಣಿಗಳು

ರುದ್ರಪ್ಪ ಹನಗವಾಡಿ ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ, ಕುವೆಂಪು ಅವರ ಮಾನಸಪುತ್ರರೆಂದೇ ಖ್ಯಾತರಾಗಿದ್ದ ಕನ್ನಡದ ಗದ್ಯ ಬರಹಗಾರ ಪ್ರೊ. ದೇ.ಜ.ಗೌ. ಅವರು ಎರಡು ಅವಧಿಗೆ ಉಪಕುಲಪತಿಗಳಾಗಿದ್ದರು. ಅವರ...

ದಿನದ ಸುದ್ದಿ15 hours ago

ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ...

ದಿನದ ಸುದ್ದಿ15 hours ago

ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸುದ್ದಿದಿನ,ದಾವಣಗೆರೆ : ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿ ಆರೋಪಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆರೋಪಿಗೆ ಮೂರ್ಛೆ ರೋಗವಿದ್ದು...

ಕ್ರೀಡೆ22 hours ago

ಮಧ್ಯಾಹ್ನದ ಪ್ರಮುಖ ಸುದ್ದಿಗಳು 

ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು  ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ...

ದಿನದ ಸುದ್ದಿ2 days ago

ಈ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆ

ಸುದ್ದಿದಿನ ಡೆಸ್ಕ್ ; ರಾಜ್ಯದ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡುಗು ಜಿಲ್ಲೆಗಳ ಧಾರಾಕಾರ...

ದಿನದ ಸುದ್ದಿ2 days ago

ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ ಡೆಸ್ಕ್ : ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ...

ದಿನದ ಸುದ್ದಿ2 days ago

ಉಪೇಂದ್ರ UI ಸಿನೆಮಾ | ಇತಿಹಾಸ ನಿರ್ಮಿಸಲು ಸಜ್ಜು ; ಹಂಗೇರಿಯಲ್ಲಿ ಮ್ಯೂಸಿಕ್..!

“UI” ಭಾರತೀಯ ಚಿತ್ರರಂಗದಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಮೊದಲ ಬಾರಿಗೆ, ಹಂಗೇರಿಯ ಬುಡಾಪೆಸ್ಟ್‌ನಲ್ಲಿ 90-ಪೀಸ್ ಆರ್ಕೆಸ್ಟ್ರಾ ಭಾರತೀಯ ಚಲನಚಿತ್ರಕ್ಕಾಗಿ ಸಂಗೀತವನ್ನು ರೆಕಾರ್ಡ್ ಮಾಡುತ್ತಿದೆ. ಈ ಅದ್ಭುತ ಸಾಧನೆಯು...

ದಿನದ ಸುದ್ದಿ2 days ago

ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸರ್ಕಾರ ಸಿದ್ದ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ ಡೆಸ್ಕ್ : ಲೋಕಸಭೆ ಚುನಾವಣೆ ಫಲಿತಾಂಶ ಹೊರಬಂದ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ...

ದಿನದ ಸುದ್ದಿ2 days ago

ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವೋಟರ್ ಸ್ಲಿಪ್ ವಿತರಣೆಗೆ ಸೂಚನೆ : ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಸುದ್ದಿದಿನ,ದಾವಣಗೆರೆ : ರಾಜ್ಯ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ ನಡೆಯುತ್ತಿದ್ದು ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ತ ಶಿಕ್ಷಕರ ಹಾಗೂ ಪದವೀಧರರ...

ದಿನದ ಸುದ್ದಿ2 days ago

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರದ ಬುಡಕಟ್ಟು ವುವಹಾರಗಳ ಸಚಿವಾಲಯವು 2024-25ನೇ ಸಾಲಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು....

Trending