ರಾಜಕೀಯ
ಬಿಜೆಪಿಯೂ ಮತ್ತು ಭ್ರಷ್ಟಾಚಾರವೂ..!
![](https://suddidina.com/wp-content/uploads/2018/03/BJP-Logo-suddidina.jpg)
- ಬಿಂದು ಗೌಡ
ಇತ್ತೀಚೆಗೆ ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯ ದ್ವೇಷದಿಂದ 4 ದಿನಗಳ ವಿಚಾರಣೆ ನಡೆಸಿದ ಇಡಿ ಸಂಸ್ಥೆ ಬಂಧಿಸಿತು. ರಾಜ್ಯಾದಾದ್ಯಂತ ಪ್ರತಿಕಾರದ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಯಿತು ಈಗಲೂ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳಿಗೆ ಅವಾಚ್ಯ, ಅವಹೇಳನಕಾರಿ ಪದಗಳಿಂದ ನಿಂದಿಸಲು ಪ್ರೋತ್ಸಾಹ ನೀಡುವ ತನ್ನ ಪವಿತ್ರವಾದ ವೃತ್ತಿಗೆ ಅವಮಾನ ಮಾಡುವ ಮಹಿಳೆಯೊಬ್ಬರು ವಿಡಿಯೋ ಒಂದನ್ನು ಮಾಡಿದ್ದಾರೆ. ಅವರಿಗೆ ತಾವು ಸಮರ್ಥಿಸುವ ಬಿಜೆಪಿ ಪಕ್ಷದ ಎಡಿಯೂರಪ್ಪ ಬಂಧನವಾಗಿದ್ದು ಲೋಕಾಯುಕ್ತ ನ್ಯಾಯಾಲಯದಲ್ಲಿ ವಕೀಲರೊಬ್ಬರು CRPC ಸೆಕ್ಷನ್ 200 ರ ಪ್ರಕಾರ ಸಲ್ಲಿಸಿದ ಖಾಸಗಿ ದೂರನ್ನ ಆಧರಿಸಿ ಅಕ್ರಮ ಡಿನೋಟಿಫಿಕೇಷನ್ ಆರೋಪದಲ್ಲಿ ಎಡಿಯೂರಪ್ಪನವರನ್ನು ಜೈಲಿಗೆ ಕಳುಹಿಸಿದ್ದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರೇ ಹೊರತು ಆಗಿನ UPA ಸರ್ಕಾರ ಅಲ್ಲ.
ಇನ್ನು ಆಧುನಿಕ ಕೃಷ್ಣ ದೇವರಾಯನ ಹಾಗೆ ಬಿಂಬಿಸಿಕೊಳ್ಳುತ್ತಿದ್ದ ಜನಾರ್ಧನ ರೆಡ್ಡಿ ಜೈಲಿಗೆ ಹೋಗಲು ಕಾರಣ ಅಂದಿನ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ಹಾಗೂ ಪ್ರಾಮಾಣಿಕ ಅಧಿಕಾರಿ ಯು.ವಿ. ಸಿಂಗ್ ಅವರು ಅಕ್ರಮ ಗಣಿಗಾರಿಕೆ ವರದಿ ಆಧಾರದ ಮೇಲೆ ಲೋಕಾಯುಕ್ತ ಸಂಸ್ಥೆ ಪ್ರಕರಣ ದಾಖಲಿಸಿಕೊಂಡ ಕಾರಣ ರಾಜ್ಯದಲ್ಲಿ ಆಡಳಿತದಲ್ಲಿದ್ದಿದ್ದು ಬಿಜೆಪಿ ಸರ್ಕಾರ ಎಂಬುದನ್ನು ಮರೆಯಬೇಡಿ. ಇನ್ನೂ ಗಣಿಗಾರಿಕೆ ಕುರಿತು ವರದಿ ತಯಾರಿಸಲು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ಯು.ವಿ ಸಿಂಗ್ ಇಬ್ಬರಿಗೂ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗಣಿ ಪ್ರದೇಶಗಳಿಗೆ ತೆರಳದಂತೆ ರೆಡ್ಡಿ ಅಂಡ್ ಟೀಮ್ ಜೀವ ಬೆದರಿಕೆ ಹಾಕಿದ್ದನ್ನು ಮರೆತು ಬಿಟ್ರ ಕ್ರಿಮಿನಲ್ ಗಳ ಸಮರ್ಥಕಿ. ಬೇಲೆಕೇರಿ ಬಂದರಿನಲ್ಲಿ ಲೋಕಾಯುಕ್ತ
ಮುಟ್ಟುಗೋಲು ಹಾಕಿಕೊಂಡಿದ್ದ 5 ಲಕ್ಷ ಮೆಟ್ರಿಕ್ ಟನ್ ಅದಿರನ್ನ ರಾತ್ರೋರಾತ್ರಿ ವಿದೇಶಕ್ಕೆ ಮಾರಿದ ಲೂಟಿಕೊರ ರೆಡ್ಡಿ ಗ್ಯಾಂಗ್ ವಿರುದ್ಧ CBI ತನಿಖೆ ಮಾಡದೆ ನೀವು ಮಾನಸಿಕ ಅಸ್ವಸ್ಥರಿಗೆ ಮಾಡಿದಂತೆ ಕರೆದು ಸನ್ಮಾನ ಮಾಡಬೇಕಿತ್ತ ವಕೀಲರೆ?
ಡಿಕೆಶಿ ರವರ ಮೇಲೆ ರೆಡ್ಡಿ ಮೇಲಿರುವ ಅರಣ್ಯ ಭೂಮಿಯನ್ನು ಬಗೆದು ಸರ್ವನಾಶ ಮಾಡಿದ ಗಂಭೀರ ಆರೋಪ ಇಲ್ಲ. ಎಡಿಯೂರಪ್ಪ ಹಾಗೂ ಜನತಾ ಬಜಾರ್ ಸೋಮಣ್ಣರಂತೆ ಸರ್ಕಾರಿ ಭೂಮಿಗಳನ್ನು ಕಬಳಿಸಿ ಡಿನೋಟಿಫಿಕೇಷನ್ ಮಾಡಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಆರೋಪ ಡಿಕೆಶಿ ಮೇಲೆ ಇಲ್ಲ.
ಅಂದು ಎಡ್ಡಿ , ರೆಡ್ಡಿ , ಸೋಮಣ್ಣ , KGF ಸಂಪಂಗಿ, ಕಟ್ಟ ಸುಬ್ರಮಣ್ಯ ನಾಯ್ಡು ಇವರೆಲ್ಲರನ್ನು ಕೇಂದ್ರದಲ್ಲಿ ಆಡಳಿತದಲ್ಲಿ ಇದ್ದ UPA ಸರ್ಕಾರ IT , ED , CBI ಸಂಸ್ಥೆಗಳನ್ನು ಈಗ ದುರುಪಯೋಗ ಮಾಡಿಕೊಂಡಂತೆ ಮಾಡಿ ಇವರನ್ನು ಜೈಲಿಗೆ ಪಾಲು ಮಾಡಿಲ್ಲ, ಬದಲಾಗಿ ನಮ್ಮ ರಾಜ್ಯದ ಪ್ರಾಮಾಣಿಕ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ಲೋಕಾಯುಕ್ತ ನ್ಯಾಯಾಲಯದ ನ್ಯಾಯಮೂರ್ತಿಗಳು ಈ ಭ್ರಷ್ಟರನ್ನು ಜೈಲಿಗೆ ಕಳಿಸಿದ್ದು.
ಸಂತೋಷ್ ಹೆಗ್ಡೆ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆ ನಿಮ್ಮ ಬಿಜೆಪಿಗರಿಗೆ ಇದೆಯೇ ?
ಇವತ್ತು ಡಿಕೆಶಿ ಅವರ ವಿಚಾರದಲ್ಲಿ ಅವರು ಮಾಡಿದ ಘೋರ ಅಪರಾಧ ನಿಮ್ಮ ಡಿಸಿಎಂ ಕಾರಜೋಳ ಹೇಳಿದಂತೆ ಗುಜುರಾತ್ ಶಾಸಕರನ್ನ ರಾಜ್ಯ ಸಭಾ ಚುನಾವಣೆ ವೇಳೆ ಬೆಂಗಳೂರಿನಲ್ಲಿ ಮೋದಿ ಮತ್ತು ಅಮಿತ್ ಶಾ ರವರ ಒತ್ತಡದಿಂದ ಬಚಾವ್ ಮಾಡಿದ್ದು. ರಾಜ್ಯದ ಶಾಸಕರನ್ನು ಮುಂಬೈನಲ್ಲಿ ಬಚ್ಚಿಟ್ಟಿದ್ದರ ವಿರುದ್ಧ ಬಂಡೆಯಂತೆ ಅಡ್ಡ ನಿಂತಿದ್ದು. ದೇಶದ ಸಂವಿಧಾನದ ಪ್ರಕಾರ ಆಸ್ತಿ ಮಾಡುವುದು ತಪ್ಪಲ್ಲ , ಅದೇ ಬಿಜೆಪಿ ಯ ಎಡ್ಡಿ ರೆಡ್ಡಿ ಗ್ಯಾಂಗ್ಗಳು ಮಾಡಿದಂತೆ ಸರ್ಕಾರದ ಬೊಕ್ಕಸವನ್ನು, ನೆಲದ ಸಂಪತ್ತನ್ನು ಲೂಟಿ ಮಾಡುವುದು ಅಪರಾಧ.
ನಿಂಬೆ ಹಣ್ಣು ಮಾರುತ್ತಿದ್ದ ಎಡ್ಡಿ , LIC ಏಜೆಂಟ್ ಆಗಿದ್ದ ಶೋಭಾ ಕರಂದ್ಲಾಜೆ , ಜನತಾ ಬಜಾರ್ ನ D ಗ್ರೂಪ್ ನೌಕರ ಸೋಮಣ್ಣ , ಇವರೆಲ್ಲ ಇವತ್ತು ಶಿಕ್ಷಣ ಸಂಸ್ಥೆಗಳನ್ನು , ಕಾಫಿ ತೋಟವನ್ನು ಕಾನೂನು ಪ್ರಕಾರ ಸಂಪಾದಿಸಿದ್ದ? ಭ್ರಷ್ಟಾಚಾರಿಗಳು ಇವತ್ತು ಹಗಲು ದರೋಡೆ ಮೂಲಕ ಬೇರೆ ಪಕ್ಷದ ಶಾಸಕರನ್ನು ಖರೀದಿಸಿ ಅಧಿಕಾರ ಹಿಡಿದಿದ್ದಾರೆ, ಮಂತ್ರಿ ಪದವಿ ಸಿಗದ ಕಾರಣಕ್ಕೆ ಶ್ರೀರಾಮುಲು , ಜಗದೀಶ್ ಶೆಟ್ಟರ್ ಬೆಂಬಲಿಗರು ಸಾರ್ವಜನಿಕರ ಆಸ್ತಿಯನ್ನ ಸುಟ್ಟು ಹಾಕಿದಾಗ ತಾವ್ಯಾಕೆ ಮೌನವಾಗಿ ಇದ್ದಿರಿ? ಮಹದಾಯಿ , ಕಾವೇರಿ , ರೈತರ ಮತ್ತು ನೆರೆ ಸಂತ್ರಸ್ತರ ಪರವಾಗಿ ಹೋರಾಟ ಮಾಡಿರುವುದು ಕಾಂಗ್ರೆಸ್ ಪಕ್ಷ ಮತ್ತು ಆ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದು ಇಲ್ಲಿನ ಪ್ರಾದೇಶಿಕ ಪಕ್ಷ JDS.
ಆದರೆ ಮಹದಾಯಿ ವಿಚಾರವನ್ನ ಮೋದಿ ಬಗೆಹರಿಸಲಿಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲಿಲ್ಲ ಆದರೂ ತಾವೆಲ್ಲ ಮೋದಿ ಭಜನೆ ಮಾಡುವುದನ್ನ ನಿಲ್ಲಿಸಲಿಲ್ಲ, ರಾಜ್ಯದ ಹಿತಾಸಕ್ತಿಗೆ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸದಾಕಾಲ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಕೆಶಿ ಮೇಲೆ ಕೇಂದ್ರ ಸರ್ಕಾರ ದ್ವೇಷದಿಂದ IT ಮತ್ತು ED ಇಲಾಖೆಯನ್ನು ಬಳಸಿಕೊಳ್ಳುತ್ತಿದೆ. 8 ಕೋಟಿ ಸಿಕ್ಕಿದ್ರೆ ಅದರ ಆದಾಯದ ಮೂಲವನ್ನು ಪರಿಶೀಲಿಸಿ ಅಕ್ರಮ ಕಂಡು ಬಂದ್ರೆ ದಂಡ ವಿಧಿಸಬಹುದು, ಅದನ್ನ ಬಿಟ್ಟು ಜೈಲಲ್ಲಿ ಇಟ್ಟು ಮುಂಬರುವ ಉಪ ಚುನಾವಣೆಯಲ್ಲಿ ಅವರು ಪಕ್ಷದ ಪರ ಕೆಲಸ ಮಾಡಬಾರದೆನ್ನುವ ದುರುದ್ದೇಶ ಇದರ ಹಿಂದೆ ಇದೆ.
ಒಟ್ಟಾರೆ ಭ್ರಷ್ಟರಾದ ಬಿಜೆಪಿಯ ಬೆಂಬಲಿಗರೇ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ. ಬ್ಲೂ ಫಿಲ್ಮ್ ನೋಡಿದವರು DCM , 800 ಕೋಟಿ ಬಿಬಿಎಂಪಿ ಹಗರಣ ಮಾಡಿದ ಅಶ್ವಥ್ ನಾರಾಯಣ್ ಮತ್ತೊಬ್ಬ ಡಿಸಿಎಂ , ಸರ್ಕಾರಿ ಜಮೀನು ಡಿನೋಟಿಫಿಕೇಷನ್ ಮೂಲಕ ಕಬಳಿಸಿದ ಮತ್ತೊಬ್ಬ ಮಹಾನ್ ಭ್ರಷ್ಟ ರಾಜ್ಯದ ಮುಖ್ಯಮಂತ್ರಿ ಇಂತವರನ್ನ ನಿಮ್ಮ ಮೋದಿ ಅಧಿಕಾರದಿಂದ ಹೊರ ಇಟ್ಟು ನೈತಿಕತೆ ತೋರಿಸಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ
![](https://suddidina.com/wp-content/uploads/2024/07/kargil_vijay_divas_suddidina.jpg)
ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ ವೀರ ಯೋಧರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಂಕುನ್ ಲಾ ಸುರಂಗ ಮಾರ್ಗ ಯೋಜನೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.
ಈ ಯೋಜನೆಯಡಿ ನಿಮು-ಪದುಮ್-ಡಾರ್ಚಾ ರಸ್ತೆಯಿಂದ ಲೇಹ್ಗೆ ಎಲ್ಲಾ ಹವಾಮಾನಗಳಲ್ಲೂ ಸಂಪರ್ಕ ಕಲ್ಪಿಸಲು ಸುಮಾರು 15 ಸಾವಿರದ 800 ಅಡಿ ಎತ್ತರದಲ್ಲಿ 4.1 ಕಿಲೋಮೀಟರ್ ಉದ್ದದ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ವಿಶ್ವದಲ್ಲೇ ಇದು ಅತಿ ಎತ್ತರದ ಸುರಂಗ ಮಾರ್ಗವಾಗಲಿದೆ. ಸಶಸ್ತ್ರ ಪಡೆಗಳ ಸುಗಮ ಪ್ರಯಾಣಕ್ಕಷ್ಟೇ ಅಲ್ಲದೇ ಲಡಾಕ್ನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಈ ಸುರಂಗ ಮಾರ್ಗವು ಸಹಕಾರಿಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಕೇಂದ್ರ ಬಜೆಟ್ : ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ
![](https://suddidina.com/wp-content/uploads/2024/07/union_budget_2024_suddidina.jpg)
ಸುದ್ದಿದಿನಡೆಸ್ಕ್:ಕೇಂದ್ರದ ಮುಂಗಡ ಪತ್ರ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತೆಲುಗು ದೇಶಂ ನಾಯಕ ಕೇಂದ್ರ ಸಚಿವ ಕಿಂಜರಪು ರಾಮಮೋಹನ ನಾಯ್ಡು ಹೇಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಬಜೆಟ್ ಎಲ್ಲರ ಕನಸಾಗಿದೆ ಎಂದು ಹೇಳಿದ್ದಾರೆ. ಈಶಾನ್ಯ ರಾಜ್ಯಗಳ ಬೆಳವಣಿಗೆಗೆ ಆಯ-ವ್ಯಯ ಪೂರಕವಾಗಿದೆ ಎಂದು ಹೇಳಿದರು.
ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಉದ್ಯೋಗ ಹೆಚ್ಚಿಸುವ ಕಾರ್ಯಕ್ರಮವನ್ನು ಹಣಕಾಸು ಸಚಿವರು ಪ್ರಕಟಿಸಿರುವುದಾಗಿ ಹೇಳಿದ್ದಾರೆ. ಜೆಡಿಯು ಮುಖಂಡ ರಾಜೀವ್ ರಂಜನ್ ಸಿಂಗ್, ಆಯ-ವ್ಯಯ ಬಿಹಾರ ಜನತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ನೀಡಿದೆ ಎಂದರು.
ಕಾಂಗ್ರೆಸ್ ಮುಖಂಡ ಶಶಿತರೂರ್ ಪ್ರತಿಕ್ರಿಯೆಸಿ, ಉದ್ಯೋಗ ಖಾತರಿ ಯೋಜನೆಯ ರಾಜ್ಯಗಳ ತಾರತಮ್ಯವನ್ನು ನಿಭಾಯಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಿವಸೇನಾ ನಾಯಕ ಪ್ರಿಯಾಂಕ ಚತುರ್ವೇದಿ, ಮಹಾರಾಷ್ಟ್ರ ರಾಜ್ಯಕ್ಕೆ ನಿರ್ಧಿಷ್ಟವಾದ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಿಎಂಕೆ ನಾಯಕ ಟಿ.ಆರ್.ಬಾಲು, ಟಿಎಂಸಿ ನಾಯಕಿ ಕಲ್ಯಾಣ ಬ್ಯಾನರ್ಜಿ ಅವರು, ಆಯ-ವ್ಯಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದ ಸಂಸದರಾದ ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಗದೀಶ್ ಶೆಟ್ಟರ್, ಜನಪರ ಸಾಮಾನ್ಯವರ್ಗದವರ ಆಯ-ವ್ಯಯವಾಗಿದೆ ಎಂದರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರ್ಸ್ವಾಮಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರುಗಳು ಆಯ-ವ್ಯಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಅನಿಶ್ ಶಹಾ ಪ್ರತಿಕ್ರಿಯಿಸಿ, ದೇಶದ ಬೆಳವಣಿಗೆಗೆ ಪೂರಕ ಆಯ-ವ್ಯಯ ರೈತರು, ಯುವಕರು, ಮಹಿಳೆಯರಿಗೆ ಸಹಕಾರಿ ಎಂದು ಹೇಳಿದ್ದಾರೆ.
ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರಗಳಿಗೆ ಅನುದಾನವನ್ನು ಗಣನೀಯವಾಗಿ ಖಡಿತ ಮಾಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಹಲವು ಯೋಜನೆಗಳ ಅನುಷ್ಠಾನಕ್ಕೆ ನೆರವು ಕೋರಿದ್ದೆವು. ಮಾಹಿತಿ ತಂತ್ರಜ್ಞಾನಕ್ಕೆ ನೀಡಿದ್ದ ಅನುದಾನವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರ, ಪರಿಶಿಷ್ಟ ಸಮುದಾಯ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಅನುದಾನವನ್ನು ಖಡಿತ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೂಲ ಸೌಕರ್ಯ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ಆಯ-ವ್ಯಯ ಪೂರಕವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಯ-ವ್ಯಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದೇಶದ ಉತ್ಪಾದನೆ ಹಾಗೂ ಬೆಳವಣಿಗೆಯ ಪ್ರಮಾಣದಲ್ಲಿ ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!