Connect with us

ರಾಜಕೀಯ

ಬಿಜೆಪಿಯೂ ಮತ್ತು ಭ್ರಷ್ಟಾಚಾರವೂ..!

Published

on

  • ಬಿಂದು‌ ಗೌಡ

ತ್ತೀಚೆಗೆ ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯ ದ್ವೇಷದಿಂದ 4 ದಿನಗಳ ವಿಚಾರಣೆ ನಡೆಸಿದ ಇಡಿ ಸಂಸ್ಥೆ ಬಂಧಿಸಿತು. ರಾಜ್ಯಾದಾದ್ಯಂತ ಪ್ರತಿಕಾರದ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಯಿತು ಈಗಲೂ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳಿಗೆ ಅವಾಚ್ಯ, ಅವಹೇಳನಕಾರಿ ಪದಗಳಿಂದ ನಿಂದಿಸಲು ಪ್ರೋತ್ಸಾಹ ನೀಡುವ ತನ್ನ ಪವಿತ್ರವಾದ ವೃತ್ತಿಗೆ ಅವಮಾನ ಮಾಡುವ ಮಹಿಳೆಯೊಬ್ಬರು ವಿಡಿಯೋ ಒಂದನ್ನು ಮಾಡಿದ್ದಾರೆ. ಅವರಿಗೆ ತಾವು ಸಮರ್ಥಿಸುವ ಬಿಜೆಪಿ ಪಕ್ಷದ ಎಡಿಯೂರಪ್ಪ ಬಂಧನವಾಗಿದ್ದು ಲೋಕಾಯುಕ್ತ ನ್ಯಾಯಾಲಯದಲ್ಲಿ ವಕೀಲರೊಬ್ಬರು CRPC ಸೆಕ್ಷನ್ 200 ರ ಪ್ರಕಾರ ಸಲ್ಲಿಸಿದ ಖಾಸಗಿ ದೂರನ್ನ ಆಧರಿಸಿ ಅಕ್ರಮ ಡಿನೋಟಿಫಿಕೇಷನ್ ಆರೋಪದಲ್ಲಿ ಎಡಿಯೂರಪ್ಪನವರನ್ನು ಜೈಲಿಗೆ ಕಳುಹಿಸಿದ್ದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರೇ ಹೊರತು ಆಗಿನ UPA ಸರ್ಕಾರ ಅಲ್ಲ.

ಇನ್ನು ಆಧುನಿಕ ಕೃಷ್ಣ ದೇವರಾಯನ ಹಾಗೆ ಬಿಂಬಿಸಿಕೊಳ್ಳುತ್ತಿದ್ದ ಜನಾರ್ಧನ ರೆಡ್ಡಿ ಜೈಲಿಗೆ ಹೋಗಲು ಕಾರಣ ಅಂದಿನ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ಹಾಗೂ ಪ್ರಾಮಾಣಿಕ ಅಧಿಕಾರಿ ಯು.ವಿ. ಸಿಂಗ್ ಅವರು ಅಕ್ರಮ ಗಣಿಗಾರಿಕೆ ವರದಿ ಆಧಾರದ ಮೇಲೆ ಲೋಕಾಯುಕ್ತ ಸಂಸ್ಥೆ ಪ್ರಕರಣ ದಾಖಲಿಸಿಕೊಂಡ ಕಾರಣ ರಾಜ್ಯದಲ್ಲಿ ಆಡಳಿತದಲ್ಲಿದ್ದಿದ್ದು ಬಿಜೆಪಿ ಸರ್ಕಾರ ಎಂಬುದನ್ನು ಮರೆಯಬೇಡಿ. ಇನ್ನೂ ಗಣಿಗಾರಿಕೆ ಕುರಿತು ವರದಿ ತಯಾರಿಸಲು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ಯು.ವಿ ಸಿಂಗ್ ಇಬ್ಬರಿಗೂ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗಣಿ ಪ್ರದೇಶಗಳಿಗೆ ತೆರಳದಂತೆ ರೆಡ್ಡಿ ಅಂಡ್ ಟೀಮ್ ಜೀವ ಬೆದರಿಕೆ ಹಾಕಿದ್ದನ್ನು ಮರೆತು ಬಿಟ್ರ ಕ್ರಿಮಿನಲ್ ಗಳ ಸಮರ್ಥಕಿ. ಬೇಲೆಕೇರಿ ಬಂದರಿನಲ್ಲಿ ಲೋಕಾಯುಕ್ತ

ಮುಟ್ಟುಗೋಲು ಹಾಕಿಕೊಂಡಿದ್ದ 5 ಲಕ್ಷ ಮೆಟ್ರಿಕ್ ಟನ್ ಅದಿರನ್ನ ರಾತ್ರೋರಾತ್ರಿ ವಿದೇಶಕ್ಕೆ ಮಾರಿದ ಲೂಟಿಕೊರ ರೆಡ್ಡಿ ಗ್ಯಾಂಗ್ ವಿರುದ್ಧ CBI ತನಿಖೆ ಮಾಡದೆ ನೀವು ಮಾನಸಿಕ ಅಸ್ವಸ್ಥರಿಗೆ ಮಾಡಿದಂತೆ ಕರೆದು ಸನ್ಮಾನ ಮಾಡಬೇಕಿತ್ತ ವಕೀಲರೆ?
ಡಿಕೆಶಿ ರವರ ಮೇಲೆ ರೆಡ್ಡಿ ಮೇಲಿರುವ ಅರಣ್ಯ ಭೂಮಿಯನ್ನು ಬಗೆದು ಸರ್ವನಾಶ ಮಾಡಿದ ಗಂಭೀರ ಆರೋಪ ಇಲ್ಲ. ಎಡಿಯೂರಪ್ಪ ಹಾಗೂ ಜನತಾ ಬಜಾರ್ ಸೋಮಣ್ಣರಂತೆ ಸರ್ಕಾರಿ ಭೂಮಿಗಳನ್ನು ಕಬಳಿಸಿ ಡಿನೋಟಿಫಿಕೇಷನ್ ಮಾಡಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಆರೋಪ ಡಿಕೆಶಿ ಮೇಲೆ ಇಲ್ಲ.
ಅಂದು ಎಡ್ಡಿ , ರೆಡ್ಡಿ , ಸೋಮಣ್ಣ , KGF ಸಂಪಂಗಿ, ಕಟ್ಟ ಸುಬ್ರಮಣ್ಯ ನಾಯ್ಡು ಇವರೆಲ್ಲರನ್ನು ಕೇಂದ್ರದಲ್ಲಿ ಆಡಳಿತದಲ್ಲಿ ಇದ್ದ UPA ಸರ್ಕಾರ IT , ED , CBI ಸಂಸ್ಥೆಗಳನ್ನು ಈಗ ದುರುಪಯೋಗ ಮಾಡಿಕೊಂಡಂತೆ ಮಾಡಿ ಇವರನ್ನು ಜೈಲಿಗೆ ಪಾಲು ಮಾಡಿಲ್ಲ, ಬದಲಾಗಿ ನಮ್ಮ ರಾಜ್ಯದ ಪ್ರಾಮಾಣಿಕ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ಲೋಕಾಯುಕ್ತ ನ್ಯಾಯಾಲಯದ ನ್ಯಾಯಮೂರ್ತಿಗಳು ಈ ಭ್ರಷ್ಟರನ್ನು ಜೈಲಿಗೆ ಕಳಿಸಿದ್ದು.

ಸಂತೋಷ್ ಹೆಗ್ಡೆ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆ ನಿಮ್ಮ ಬಿಜೆಪಿಗರಿಗೆ ಇದೆಯೇ ?
ಇವತ್ತು ಡಿಕೆಶಿ ಅವರ ವಿಚಾರದಲ್ಲಿ ಅವರು ಮಾಡಿದ ಘೋರ ಅಪರಾಧ ನಿಮ್ಮ ಡಿಸಿಎಂ ಕಾರಜೋಳ ಹೇಳಿದಂತೆ ಗುಜುರಾತ್ ಶಾಸಕರನ್ನ ರಾಜ್ಯ ಸಭಾ ಚುನಾವಣೆ ವೇಳೆ ಬೆಂಗಳೂರಿನಲ್ಲಿ ಮೋದಿ ಮತ್ತು ಅಮಿತ್ ಶಾ ರವರ ಒತ್ತಡದಿಂದ ಬಚಾವ್ ಮಾಡಿದ್ದು. ರಾಜ್ಯದ ಶಾಸಕರನ್ನು ಮುಂಬೈನಲ್ಲಿ ಬಚ್ಚಿಟ್ಟಿದ್ದರ ವಿರುದ್ಧ ಬಂಡೆಯಂತೆ ಅಡ್ಡ ನಿಂತಿದ್ದು. ದೇಶದ ಸಂವಿಧಾನದ ಪ್ರಕಾರ ಆಸ್ತಿ ಮಾಡುವುದು ತಪ್ಪಲ್ಲ , ಅದೇ ಬಿಜೆಪಿ ಯ ಎಡ್ಡಿ ರೆಡ್ಡಿ ಗ್ಯಾಂಗ್‌ಗಳು ಮಾಡಿದಂತೆ ಸರ್ಕಾರದ ಬೊಕ್ಕಸವನ್ನು, ನೆಲದ ಸಂಪತ್ತನ್ನು ಲೂಟಿ ಮಾಡುವುದು ಅಪರಾಧ.

ನಿಂಬೆ ಹಣ್ಣು ಮಾರುತ್ತಿದ್ದ ಎಡ್ಡಿ , LIC ಏಜೆಂಟ್ ಆಗಿದ್ದ ಶೋಭಾ ಕರಂದ್ಲಾಜೆ , ಜನತಾ ಬಜಾರ್ ನ D ಗ್ರೂಪ್ ನೌಕರ ಸೋಮಣ್ಣ , ಇವರೆಲ್ಲ ಇವತ್ತು ಶಿಕ್ಷಣ ಸಂಸ್ಥೆಗಳನ್ನು , ಕಾಫಿ ತೋಟವನ್ನು ಕಾನೂನು ಪ್ರಕಾರ ಸಂಪಾದಿಸಿದ್ದ? ಭ್ರಷ್ಟಾಚಾರಿಗಳು ಇವತ್ತು ಹಗಲು ದರೋಡೆ ಮೂಲಕ ಬೇರೆ ಪಕ್ಷದ ಶಾಸಕರನ್ನು ಖರೀದಿಸಿ ಅಧಿಕಾರ ಹಿಡಿದಿದ್ದಾರೆ, ಮಂತ್ರಿ ಪದವಿ ಸಿಗದ ಕಾರಣಕ್ಕೆ ಶ್ರೀರಾಮುಲು , ಜಗದೀಶ್ ಶೆಟ್ಟರ್ ಬೆಂಬಲಿಗರು ಸಾರ್ವಜನಿಕರ ಆಸ್ತಿಯನ್ನ ಸುಟ್ಟು ಹಾಕಿದಾಗ ತಾವ್ಯಾಕೆ ಮೌನವಾಗಿ ಇದ್ದಿರಿ? ಮಹದಾಯಿ , ಕಾವೇರಿ , ರೈತರ ಮತ್ತು ನೆರೆ ಸಂತ್ರಸ್ತರ ಪರವಾಗಿ ಹೋರಾಟ ಮಾಡಿರುವುದು ಕಾಂಗ್ರೆಸ್ ಪಕ್ಷ ಮತ್ತು ಆ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದು ಇಲ್ಲಿನ ಪ್ರಾದೇಶಿಕ ಪಕ್ಷ JDS.
ಆದರೆ ಮಹದಾಯಿ ವಿಚಾರವನ್ನ ಮೋದಿ ಬಗೆಹರಿಸಲಿಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲಿಲ್ಲ ಆದರೂ ತಾವೆಲ್ಲ ಮೋದಿ ಭಜನೆ ಮಾಡುವುದನ್ನ ನಿಲ್ಲಿಸಲಿಲ್ಲ, ರಾಜ್ಯದ ಹಿತಾಸಕ್ತಿಗೆ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸದಾಕಾಲ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಕೆಶಿ ಮೇಲೆ ಕೇಂದ್ರ ಸರ್ಕಾರ ದ್ವೇಷದಿಂದ IT ಮತ್ತು ED ಇಲಾಖೆಯನ್ನು ಬಳಸಿಕೊಳ್ಳುತ್ತಿದೆ. 8 ಕೋಟಿ ಸಿಕ್ಕಿದ್ರೆ ಅದರ ಆದಾಯದ ಮೂಲವನ್ನು ಪರಿಶೀಲಿಸಿ ಅಕ್ರಮ ಕಂಡು ಬಂದ್ರೆ ದಂಡ ವಿಧಿಸಬಹುದು, ಅದನ್ನ ಬಿಟ್ಟು ಜೈಲಲ್ಲಿ ಇಟ್ಟು ಮುಂಬರುವ ಉಪ ಚುನಾವಣೆಯಲ್ಲಿ ಅವರು ಪಕ್ಷದ ಪರ ಕೆಲಸ ಮಾಡಬಾರದೆನ್ನುವ ದುರುದ್ದೇಶ ಇದರ ಹಿಂದೆ ಇದೆ.

ಒಟ್ಟಾರೆ ಭ್ರಷ್ಟರಾದ ಬಿಜೆಪಿಯ ಬೆಂಬಲಿಗರೇ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ. ಬ್ಲೂ ಫಿಲ್ಮ್ ನೋಡಿದವರು DCM , 800 ಕೋಟಿ ಬಿಬಿಎಂಪಿ ಹಗರಣ ಮಾಡಿದ ಅಶ್ವಥ್ ನಾರಾಯಣ್ ಮತ್ತೊಬ್ಬ ಡಿಸಿಎಂ , ಸರ್ಕಾರಿ ಜಮೀನು ಡಿನೋಟಿಫಿಕೇಷನ್ ಮೂಲಕ ಕಬಳಿಸಿದ ಮತ್ತೊಬ್ಬ ಮಹಾನ್ ಭ್ರಷ್ಟ ರಾಜ್ಯದ ಮುಖ್ಯಮಂತ್ರಿ ಇಂತವರನ್ನ ನಿಮ್ಮ ಮೋದಿ ಅಧಿಕಾರದಿಂದ ಹೊರ ಇಟ್ಟು ನೈತಿಕತೆ ತೋರಿಸಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

Published

on

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

Published

on

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.

ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

Published

on

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ2 days ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ4 days ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ4 days ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ6 days ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ1 week ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ1 week ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ1 week ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ1 week ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

ದಿನದ ಸುದ್ದಿ1 week ago

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು...

Trending