ರಾಜಕೀಯ
‘ಯಡಿಯೂರಪ್ಪ ಸಿಎಂ ಆಗುವುದು ಅವರ ಹಣೆ ಬರಹ’ : ಬಿಜೆಪಿ ಶಾಸಕ ವಿ.ಸೋಮಣ್ಣ
ಸುದ್ದಿದಿನ, ತುಮಕೂರು : ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದು ಅವರ ಹಣೆಬರಹ, ಮುಂದೊಂದು ದಿನ ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ಶಾಸಕ ವಿ ಸೋಮಣ್ಣ ಹೇಳಿದರು.
ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು ಸಿದ್ದಗಂಗಾ ಶ್ರೀಗಳ ಜೊತೆಗಿನ ಅವಿನಾಭಾವ ಸಂಬಂಧ ಹೊಂದಿರುವ ಪರಮೇಶ್ವರ್ ಅವರ ಬಗ್ಗೆ ನನಗೆ ಅಪಾರವಾದ ಪ್ರೀತಿಯಿದೆ ಎಂದರು.
ಈ ಸಮಾರಂಭದಲ್ಲಿ ನೂತನ ವಾರ್ಡ್ ಕಛೇರಿ, ಗ್ರಂಥಾಲಯ ಸೇರಿ ಹಲವು ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಹಾಗುಹ ಡಾ. ಶಿವಕುಮಾರ ಸ್ವಾಮೀಜಿ ಸಾರ್ವಜನಿಕ ಸೇವ ಸಂಕೀರ್ಣದ ಉದ್ಘಾಟನೆ ಮಾಡಲಾಯಿತು. ಈಸಂದರ್ಭದಲ್ಲಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ, ಬಿಬಿಎಂಪಿ ಮೇಯರ್ ಗಂಗಾಂಭಿಕೆ ಮತ್ತಿತರ ಗಣ್ಯರು ಭಾಗಿಯಾಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401