Connect with us

ಲೈಫ್ ಸ್ಟೈಲ್

ಹಲ್ಲುಗಳನ್ನು ಕಪ್ಪುಗೊಳಿಸುವ ಹಲ್ಲಿಟ್ಟು ಗಿಲಾವು ಎಂಬ ಸಾಂಪ್ರದಾಯಿಕ ಕಲೆ..!

Published

on

 

“Some pains are physical,
And some are mental,
But the one that is both Is dental.”

-Ogden Nash.

“ಕೆಲವು ನೋವುಗಳು ದೈಹಿಕ. ಹಾಗೂ ಕೆಲವು ಮಾನಸಿಕ. ಎರಡೂ ಆಗಿರುವ ನೋವೇ ದಾಂತಿಕ!”

– ಆಗ್ಡನ್ ನ್ಯಾಶ್

ದೈಹಿಕವಾಗಿಯೂ ಮಾನಸಿಕವಾಗಿಯೂ ಬಾಧಿಸುವ ದಂತ ನೋವಿಗೆ ನಮ್ಮ ಪೂರ್ವಿಕರು ಅನೇಕ ರೀತಿಯ ಪರಿಹಾರೋಪಾಯಗಳನ್ನು ಕಂಡುಕೊಂಡಿದ್ದರು. ಅಂತಹ ಉಪಾಯಗಳಲ್ಲಿ ಹಲ್ಲಿಟ್ಟು ಎಂಬ ಪುಡಿಯಿಂದ ಹಲ್ಲುಗಳಿಗೆ ಕಪ್ಪು ಗಿಲಾವು ಮಾಡಿಕೊಳ್ಳುವ ಕಲೆಯೂ ಒಂದು. ನನ್ನ ಅಪ್ಪನ ಚಿಕ್ಕಮ್ಮನ ಹೆಸರು ಬುಡ್ಡಕದರಮ್ಮಜ್ಜಿ. ಸುಮಾರು ನಾಲ್ಕೂವರೆ ಅಡಿಗಳಷ್ಟು ಎತ್ತರದ ಮಟ್ಟಸವಾದ ಆಳ್ತನದ ಅವಳು ಕೆಂಪನೆ ಮೈಬಣ್ಣದ ಚೆಲುವೆ. ನಮ್ಮ ಪಕ್ಕದ ಮನೆಯಲ್ಲಿ ತುಂಬು ಸಂಸಾರವಂದಿಗಳಾಗಿ ವಾಸವಿದ್ದಳು. ನನ್ನ ಬಾಲ್ಯದ ದಿನಗಳಲ್ಲಿ ಅವಳು ನಮ್ಮ ಮನೆಗೆ ಬಂದಾಗಲೆಲ್ಲಾ ಕೆಂಪು ವಸಡಿಗೆ ಸಾಲಾಗಿ ಜೋಡಿಸಿದ ಕಪ್ಪು ಮುತ್ತಿನ ಮಣಿಗಳಂತಹ ಅವಳ ಹಲ್ಲುಗಳನ್ನು ತದೇಕ ಚಿತ್ತನಾಗಿ ನೋಡುತ್ತಿದ್ದೆ. “ಏನ್ಮಾಡ್ತಾ ಇದ್ದೀಯೇ…ಗ್ಗೇ.. ಕದರಿ… ಒಂದು ತಾಳೆ ಇಳೆದೆಲೆ ಕೊಡೆ” ಎಂದು ಬುಡ್ಡಕದರಮ್ಮಜ್ಜಿ ನನ್ನ ಅಮ್ಮನನ್ನು ಮಾತಾಡಿಸಿಕೊಂಡು ನಮ್ಮ ಪಕ್ಕದ ಮನೆಯಿಂದ ಗೋಡೆ ತಡವಿಕೊಂಡು ನಮ್ಮ ಮನೆಗೆ ಬರುತ್ತಿದ್ದಳು. ಕೇವಲ ಗೋಟಡಿಕೆ ಚೂರುಗಳನ್ನು ಬಾಯೊಳಗೆ ಅತ್ತಲಿತ್ತ ನಾಗೆಯಿಂದ ಹೊರಳಾಡಿಸುತ್ತಾ ಯಾವುದೋ ಗಂಧರ್ವ ಲೋಕದಿಂದ ಇಳಿದು ಬಂದ ಕನ್ಯೆಯಂತೆ ತರಕು ವಿಳೆದೆಲೆಗಾಗಿ ಬರುತ್ತಿದ್ದಳು. ಕಟವಾಯಿಯಲ್ಲಿ ಸೋರುತ್ತಿದ್ದ ತೊಂಬುಲವನ್ನು ಸೊರ್ರನೆ ಒಳಗೆಳೆದುಕೊಂಡು ಬಾಯಲ್ಲಿ ತೊಂಬುಲ ತುಂಬಿಕೊಂಡೇ ಮಾತಾಡುತ್ತಿದ್ದ ಅವಳ ಮಾತನ್ನು ಆಲಿಸುವುದೊಂದು ಚೆಂದವಾಗಿತ್ತು. ಬಾಯೊಳಗಿನ ತೊಂಬುಲವನ್ನು ಆಚೆಗೆ ಉಗುಳಿ ಬಂದು, ಗಳಾಗಂಟೆ ಬಿಟ್ಟುಕೊಂಡು ನಿಂತುಕೊಂಡಿದ್ದ ನನ್ನ ಕಡೆಗೆ ನೋಡಿ ಕರ್ರಗೆ ನಗುತ್ತಾ, ನನ್ನ ಕೆನ್ನೆ ಸವರಿ ನೆಟಿಗಿಕೊಂಡು, ನನ್ನ ಬುಲಕಾಯಿ ಹಿಡಿದು ಸವರಿ ತನ್ನ ಬೆರಳುಗಳಿಗೆ ತಾನೇ ಮುತ್ತು ಕೊಟ್ಟುಕೊಳ್ಳುತ್ತಿದ್ದಳು.

ನನ್ನ ಅಮ್ಮನ ಹಲ್ಲುಗಳು ಬೆಳ್ಳಗಿದ್ದರೆ ಬುಡ್ಡಕದರಮ್ಮಜ್ಜಿಯ ಹಲ್ಲುಗಳು ಮಾತ್ರ ಕರ್ರಗಿದ್ದವು. ದಿನವೆಲ್ಲಾ ಎಲೆಅಡಕೆ ನಮುಲಿ ನಮುಲಿ ಹಲ್ಲುಗಳು ಹೀಗೆ ಕರ್ರಗಾಗಿರಬಹುದೆಂದೂ, ಮುಂದೊಂದು ದಿನ ನನ್ನ ಅಮ್ಮನು ಮುದುಕಿಯಾಗುವ ಹೊತ್ತಿಗೆ ಅವಳ ಹಲ್ಲುಗಳೂ ಬುಡ್ಡಕದರಮ್ಮಜ್ಜಿಯ ಹಲ್ಲುಗಳಂತೆ ಕರ್ರಗಾಗಬಹುದೆಂದು ನಾನು ಯೋಚಿಸುತ್ತಿದ್ದೆ. ಆದರೆ ನಂತರದ ದಿನಗಳಲ್ಲಿ ಕರಿಹಲ್ಲುಗಳ ಹಿಂದಿನ ಸೀಕ್ರೆಟ್ ಏನೆಂಬುದನ್ನು ನಾನು ಕಂಡುಕೊಂಡೆ. ನಮ್ಮೂರಿನ ಹತ್ತಿರದ ಯಾದಗೆರೆ ಗ್ರಾಮದ ಅಲೆಮಾರಿ ಕೊರಮ ಸಮುದಾಯದ ಹೆಂಗಸರಿಂದ ನಮ್ಮೂರಿನ ಕೆಲವು ಮಧ್ಯ ವಯಸ್ಕ ಹೆಂಗಸರು ಹಲ್ಲಿಟ್ಟು ಎಂಬ ಗಿಡಮೂಲಿಕೆಯ ಪುಡಿಯನ್ನು ತಮ್ಮ ಹಲ್ಲುಗಳಿಗೆ ತಿಕ್ಕಿಸಿಕೊಂಡು ಬಾಯೊಳಗಿದ್ದ ಎಲ್ಲಾ ಹಲ್ಲುಗಳನ್ನು ಕರ್ರಗೆ ಹೊಳೆಯುವಂತೆ ಗಿಲಾವು ಮಾಡಿಕೊಳ್ಳುತ್ತಿದ್ದ ದೃಶ್ಯ ನನ್ನ ಕಣ್ಣಿಗೆ ಬಿತ್ತು. ಬುಡ್ಡಕದರಮ್ಮಜ್ಜಿಯೂ ಕೂಡಾ ಬಲು ಹಿಂದೆ ಇದೇ ಅಲೆಮಾರಿಗಳಿಂದ ತನ್ನ ಹಲ್ಲುಗಳಿಗೆ ಹಲ್ಲಿಟ್ಟು ಹಾಕಿಸಿ ಗಿಲಾವು ಮಾಡಿಸಿಕೊಂಡಿದ್ದಳು.

ನನ್ನ ಅಪ್ಪನ ಅಕ್ಕ ಅಂದರೆ ನನ್ನ ಸೋದರತ್ತೆಯ ಬೆಲ್ಲದಹಳ್ಳಿ ಎಂಬ ಊರಿನಲ್ಲಿಯೂ ಎಲ್ಲಕ್ಕ ಎಂಬ ಕೆಂಪನೆ ಅಜ್ಜಿಯೊಬ್ಬಳು ತನ್ನ ಹಲ್ಲುಗಳನ್ನು ಹಲ್ಲಿಟ್ಟಿನಿಂದ ತಿಕ್ಕಿಕೊಂಡು ಹೊಳೆಯುವ ಕರಿ ಇದ್ದಿಲಿನಂತೆ ಮೆರಗು ಮಾಡಿಕೊಂಡಿದ್ದಳು. ಎಲ್ಲಕ್ಕಜ್ಜಿಯು ವಾರಕ್ಕೊಮ್ಮೆ ಹಲ್ಲಿಟ್ಟಿನ ಪುಡಿಯಿಂದ ಹಲ್ಲುಗಳನ್ನು ಉಜ್ಜಿಕೊಳ್ಳುತ್ತಿದ್ದಳು. ನೂರು ವರ್ಷಗಳಿಗೂ ಹೆಚ್ಚು ಕಾಲ ಬದುಕಿದ್ದ ಆ ಬೆನ್ನು ಬಾಗಿದ ಅಜ್ಜಿಯ ಬಳಿ ನಾನೊಂದು ದಿನ ಅದೂ ಇದೂ ಮಾತಾಡುತ್ತಾ ಹಲ್ಲಿಟ್ಟು ಹಾಕಿಸಿಕೊಳ್ಳುವ ಉದ್ದೇಶ ಕುರಿತು ಕೇಳಿದೆ. “ನಾವು ಸದಾ ಕಾಲ ಬದುಕಿನ ಮ್ಯಾಲಿರೋರು…. ಕೆಲಸ ಮಾಡುವಾಗ ಆಸರಿಕೆ ಬ್ಯಾಸರಿಕೆ ಕಳೆಯೋದಕ್ಕೆ ಎಲೆಅಡಕೆ ಹಾಕ್ತೀವಿ… ಸದಾ ಎಲೆಅಡಕೆ ಹಾಕಿ ಹಲ್ಲುಜ್ಕಂಡ್ ಬೆಳ್ಳಗೆ ಮಾಡ್ಕಂಡ್ ಕೂತ್ಕಮಾಕೆ ಸಾಧ್ಯನಾ ನಮಗೆ? ಒಂದೊಂದ್ ಸಲಿ ಬದುಕಿನ ಯಾಳ್ಯದಾಗೆ ನಮ್ಮ ತಿಕ ಕೆರ್ಕಳಕೂ ಸಡುವಿರಾದಿಲ್ಲ. ಅದುಕ್ಕೆ ಇಂಗೆ ಹಲ್ಲಿಟ್ಟು ಹಾಕಸ್ಕಮ್ತೀವಿ” ಅಂದಳು.

ಈಗಿನ ನಾವು ಬಿಳಿಕೂದಲಿಗೆ ಕಪ್ಪು ಡೈ ಹಾಕುವ ರೀತಿಯಲ್ಲಿಯೇ ಆಗಿನ ಕೆಲವು ಮುದುಕ ಮುದುಕಿಯರು ಹಲ್ಲಿಟ್ಟಿನಿಂದ ಹಲ್ಲುಜ್ಜುವುದನ್ನು ನಾನು ನೋಡಿದ್ದೆ. ಈಗಲೂ ನನ್ನ ನೆನಪಿನಿಂದ ಆ ದೃಶ್ಯಗಳು ಮಾಸಿಲ್ಲ. ಆಗಿನ ದಿನಗಳಲ್ಲಿ ಪ್ರತಿನಿತ್ಯ ಬೆಳಗ್ಗೆ ಎದ್ದು ಮುಖ ತೊಳೆಯುವಾಗ ಮನೆಗಳ ಮಣ್ಣೆಂಟೆಯ ಗೋಡೆಗೆ ನೀರು ಚಿಮುಕಿಸಿ ಬೆರಳಿನಿಂದ ಮಣ್ಣನ್ನು ನಾದಿಕೊಂಡು ಹಲ್ಲುಜ್ಜುವುದು ಅಥವಾ ತೆಂಗಿನ ಕುರಂಬಳೆಯ ಇದ್ದಿಲನ್ನು ಕರಕರನೆ ಜಗಿದು ಬೆರಳಿನಿಂದ ಹಲ್ಲುಜ್ಜುವುದು ಸಾಮಾನ್ಯ ದೃಶ್ಯಗಳಾಗಿದ್ದವು. ಬೇವಿನ ಕಡ್ಡಿಯಿಂದ, ನಂಜನಗೂಡು ಹಲ್ಲುಪುಡಿ ಅಥವಾ ಚಂಪಕಾ ದಂತಚೂರ್ಣದಿಂದ ಹಲ್ಲುಜ್ಜುವುದನ್ನು ಮೇಲ್ವರ್ಗದ ಕಲಿತ ಜನರಲ್ಲಿ ಮಾತ್ರ ನೋಡಬಹುದಾಗಿತ್ತು. ಈಗಿನಂತೆ ಆಗಿನ ಕಾಲದಲ್ಲಿ ದುಬಾರಿ ಬೆಲೆಯ ತರಹೇವಾರಿ ಟೂತ್ ಪೇಸ್ಟು ಬ್ರಶ್ ಗಳು ಹಾಗೂ ದಂತ ಚಿಕಿತ್ಸಾಲಯಗಳು ಮಾರುಕಟ್ಟೆ ಪ್ರವೇಶಿಸಿರಲಿಲ್ಲ. ಆಗಿನ ಜನ ಹಲ್ಲುಗಳ ಬಗ್ಗೆಯಾಗಲೀ ತಲೆಕೂದಲಿನ ಬಗ್ಗೆಯಾಗಲೀ ಅತಿಯಾದ ಎಚ್ಚರಿಕೆ ಮತ್ತು ಆಸಕ್ತಿ ತೋರಿಸುವಂತೆ ಕಾಣಿಸದಿದ್ದರೂ ಅವರು ಮುಪ್ಪಾನು ಮುಪ್ಪಾಗಿ ಸಾಯುವ ದಿನಗಳವರೆಗೂ ತಲೆಕೂದಲು ಕಡುಕಪ್ಪಗೆ ಮತ್ತು ಹಲ್ಲುಗಳು ಸುಭದ್ರವಾಗಿರುವುದನ್ನು ನಾವು ಕಾಣುತ್ತಿದ್ದೆವು.

ಮುದುಕರಿಗಿಂತಲೂ ಹೆಚ್ಚಾಗಿ ಮುದುಕಿಯರು ಮಾತ್ರ ಹಲ್ಲಿಟ್ಟು ತಿಕ್ಕಿಕೊಂಡು ಹಲ್ಲುಗಳನ್ನು ಕರ್ರಗೆ ಮೆರಗುಗೊಳಿಸಿಕೊಳ್ಳುವುದು ಸಾಮಾನ್ಯವಾಗಿತ್ತು. ಆಗಿನ ಅಜ್ಜಿಯರಿಗೆ ಹಲ್ಲುಗಳನ್ನು ಕಪ್ಪುಗೊಳಿಸಿಕೊಳ್ಳುವುದು ಬಹುಶಃ ಫ್ಯಾಷನ್ ಆಗಿರಲಿಲ್ಲ. ವಯೋವೃದ್ಧರಾಗುವತನಕ ಎಲೆಅಡಕೆ ಜಗಿಯಲು ಎಮಕೆ- ಕಾಳುಕಡ್ಡಿ ಮುಂತಾದ ಗಟ್ಟಿ ಪದಾರ್ಥಗಳನ್ನು ಜಗಿಯಲು ಅನುಕೂಲವಾಗುವಂತೆ ಹಲ್ಲುಗಳನ್ನು ಸುಭದ್ರಪಡಿಸಿಕೊಳ್ಳುವುದೇ ಅವರಿಗಿದ್ದ ಮುಖ್ಯ ಉದ್ದೇಶವೆನ್ನಿಸುತ್ತದೆ. ಹಲ್ಲಿಟ್ಟು ಹಾಕಿಸಿಕೊಂಡವರಿಗೆ ಎಂದಿಗೂ ಹುಳುಕುಹಲ್ಲು, ಹಲ್ಲು ಕುಳಿ ಬೀಳುವುದು, ಹಲ್ಲುಗಳ ನಡುವೆ ಸದುವುಗಳಾಗುವುದು ಮುಂತಾದ ಸಮಸ್ಯೆ ಎದುರಾಗುತ್ತಿರಲಿಲ್ಲ. ಫ್ಲೋರೈಡ್ ಯುಕ್ತ ಉಪ್ಪುನೀರು ಸೇವನೆಯ ಪರಿಣಾಮದಿಂದ ಹಲ್ಲುಗಳು ಹಳದಿಗಟ್ಟುವ ಸಮಸ್ಯೆಯೂ ಕಾಣಿಸುತ್ತಿರಲಿಲ್ಲ.

ಇಂದಿಗೂ ನಮ್ಮ ಹಳ್ಳಿಗಳಲ್ಲಿ ಇಂತಹ ಕಪ್ಪು ಹಲ್ಲುಗಳ ಮುದುಕಿಯರು ವಿರಳವಾಗಿ ಕಾಣಸಿಗುತ್ತಾರೆ. ಕೆಲವು ಜನ ತಮ್ಮ ನೆನಪಿಗಾಗಿ ಹಚ್ಚೆ ಹಾಕಿಸುವುದು ಮತ್ತು ಹಲ್ಲಿಗೆ ಹಲ್ಲಿಟ್ಟು ಹಾಕಿಸುವುದು ರೂಢಿಗತ ವಿದ್ಯಮಾನವಾಗಿತ್ತು. “ಸತ್ತಾಗ ನಮ್ಮ ಜೊತೆಗೆ ಯಾರೂ ಬರಲ್ಲ… ಬರೋದೊಂದೇ ಹಚ್ಚೆ ಹಲ್ಲಿಟ್ಟು” ಎಂಬ ಲೋಕರೂಢಿಯ ಮಾತು ಜನಜನಿತವಾಗಿತ್ತು. ಇವತ್ತಿನ ಹೊಸ ತಲೆಮಾರಿನ ಜನರಿಗೆ ಹಲ್ಲಿಟ್ಟು ಅಂದ್ರೆ ಗೊತ್ತೇ ಇಲ್ಲ. ಹಲ್ಲಿಟ್ಟು ಕಣ್ಮರೆಯಾಗಿ ರಾಕ್ಷಸ ಸ್ವರೂಪಿಯಾದ ಟ್ಯಾಟೂ ಸಂಸ್ಕೃತಿ ಎಲ್ಲೆಲ್ಲೂ ರಾರಾಜಿಸುತ್ತಿದೆ. ಕವಿಗಳು ಹೆಣ್ಣಿನ ಚಿತ್ತಾಕರ್ಷಕ ಹಲ್ಲುಗಳನ್ನು ದಾಳಿಂಬೆ ಬೀಜಗಳಿಗೆ ಹೋಲಿಸಿದ್ದಾರೆ. ಕೆಂಪು ದಾಳಿಂಬೆ ಬೀಜಗಳನ್ನು ಮತ್ತು ಬಿಳಿಯ ಹಲ್ಲುಗಳನ್ನು ಹೇಗೆ ಒಂದನ್ನೊಂದು ಹೋಲಿಸಿದರೋ ಕಾಣೆ. ಹಲ್ಲಿಟ್ಟು ಹಾಕಿಸಿಕೊಂಡು ಕರ್ರಗೆ ಗಿಲಾವು ಮಾಡಿಕೊಂಡ ಹಲ್ಲುಗಳಂತೂ ಸೀತಾಫಲ ಅಥವಾ ಕಲ್ಲಂಗಡಿ ಹಣ್ಣಿನ ಬೀಜಗಳಂತೆ ಕರ್ರಗೆ ಕಾಣಿಸುತ್ತವೆ.

ಹಿಂದೆ ಪರಕೀಯರು ಮತ್ತು ಕುಲೀನ ರಾಜಮಹಾರಾಜರು ಆಳ್ವಿಕೆ ಮಾಡುತ್ತಿದ್ದ ಕಾಲದಲ್ಲಿ ತಳಸ್ತರ ಸಾಮಾಜಿಕ ವಲಯಗಳ ಹೆಣ್ಣಿನ ಮೇಲೆ ನಡೆಯುತ್ತಿದ್ದ ಶೋಷಣೆಯನ್ನು ತಡೆಗಟ್ಟಲು ಹಲ್ಲಿಟ್ಟಿನ ಗಿಲಾವು ಮಾಡಿಸಿಕೊಳ್ಳುವ ಉಪಾಯವನ್ನು ಮಹಿಳೆಯರು ಕಂಡುಕೊಂಡಿದ್ದರೆಂಬ ಅಭಿಪ್ರಾಯ ಚಾಲ್ತಿಯಲ್ಲಿದೆ. ಈ ಅಭಿಪ್ರಾಯವನ್ನು ಅಷ್ಟಾಗಿ ಒಪ್ಪಲು ಸಾಧ್ಯವಿಲ್ಲ. ಯಾಕೆಂದರೆ ಹಲ್ಲಿಟ್ಟು ಹಾಕಿಕೊಳ್ಳುವುದು ವಿಶ್ವಾದ್ಯಂತ ರೂಢಿಯಲ್ಲಿದ್ದ ಪದ್ದತಿಯಾಗಿತ್ತು. ಕೆಲವು ಆದಿವಾಸಿಗಳು ಮತ್ತು ದುಡಿಯುವ ವರ್ಗಗಳ ಮಹಿಳೆಯರಲ್ಲಿ ಈ ಪದ್ದತಿ ಹೆಚ್ಚು ಚಾಲ್ತಿಯಲ್ಲಿತ್ತು. ಹಲ್ಲಿಟ್ಟನ್ನು ಹಾಕಿಸಿಕೊಂಡು ಹಲ್ಲು ಸವಕಳಿ, ಹುಳುಕಲ್ಲು, ದಂತಕುಳಿ, ಸದುವಲ್ಲು, ವಸಡು ಬಾಧೆ, ಹಲ್ಲು ಕೀಸುಗಟ್ಟುವಿಕೆ ಆಗದಂತೆ ಶಾಶ್ವತವಾಗಿ ದಂತ ರಕ್ಷಣೆ ಮಾಡಿಕೊಳ್ಳುವ ಹಾಗೂ ಮಿರುಗುವ ಕಡುಕಪ್ಪು ದಂತಕಾಂತಿಯನ್ನು ಹೊಂದುವ ಸಾಂಪ್ರದಾಯಿಕತೆ ಮತ್ತು ವೈಜ್ಞಾನಿಕತೆಗಳೇ ಹಲ್ಲಿಟ್ಟು ಹಾಕಿಸಿಕೊಳ್ಳುವುದರ ಹಿಂದಿನ ಅಸಲಿ ಕಾರಣವಿರಬೇಕು ಅನ್ನಿಸುತ್ತಿದೆ. ಹಲ್ಲಿಟ್ಟು ಬಳಸಿ ತೊಳೆದ ಬಾಯಿಯು ಸ್ವಚ್ಛವಾಗಿಯೂ ತಾಜಾತನದಿಂದಲೂ ಇರುವುದರಿಂದ ದುರ್ವಾಸನೆಯಿಂದ ಮುಕ್ತವಾಗಿ ಒಳ್ಳೆಯ ಪರಿಮಳ ತುಂಬಿಕೊಳ್ಳುತ್ತದೆಂಬುದು ಹಲ್ಲಿಟ್ಟು ಹಾಕಿಸಿಕೊಂಡವರ ಅನುಭವದ ಮಾತು. ಹಲ್ಲಿಟ್ಟಿನ ಅತಿಯಾದ ಬಳಕೆಯು ಆರೋಗ್ಯದ ಮೇಲೆ ಅಡ್ಡಪರಿಣಾಮವನ್ನು ಬೀರುತ್ತದೆಂದು ಹೇಳುತ್ತಾರೆ.

ಈಗಿನ ಆಧುನಿಕ ತರುಣಿಯರಿಗೆ ಬಣ್ಣಗುರುಡುತನ ಜಾಸ್ತಿ. ಸಹಜ ರೂಪವತಿಯರೂ ಕೂಡ ತಮ್ಮ ತುಟಿಗಳಿಗೆ ಬಣ್ಣ ಹಚ್ಚಿಕೊಳ್ಳದೆ ಮನೆಯಿಂದಾಚೆಗೆ ಹೋಗಲು ನಿರಾಕರಿಸುತ್ತಾರೆ. ಅವರಿಗೆ ಬಿಳಿ ಹಲ್ಲುಗಳ ಮೇಲೆಯೇ ಹೆಚ್ಚು ವ್ಯಾಮೋಹ. ಹಲ್ಲಿಟ್ಟಾಕಿ ಹಲ್ಲು ಕಪ್ಪಾಗಿಸಿಕೊಳ್ಳಲು ಇವರು ಒಪ್ಪುವುದಿಲ್ಲ. ಹಲ್ಲು ಮತ್ತು ವಸಡಿನ ಆರೋಗ್ಯಕ್ಕಿಂತಲೂ ಹಲ್ಲು ಬೆಳ್ಳಗಿರೋದು ಮುಖ್ಯ. ಆದುದರಿಂದಲೇ ಈಗಿನವರು ಹಲ್ಲುಗಳು ಥಳಥಳಿಸುವಂತೆ ಬ್ಲೀಚ್ ಮಾಡಿಸಿಕೊಳ್ಳುತ್ತಾರೆ. ಇಂತಹ ಸೌಂದರ್ಯ ವ್ಯಸನದಿಂದ ಸನ್ಯಾಸಿಗಳೂ ಕೂಡಾ ಮುಕ್ತರಾಗಿಲ್ಲವೆಂಬುದಕ್ಕೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರಾವಧೂತ ಮಠದ ಶ್ರೀ ನಂಜಾವಧೂತ ಸ್ವಾಮೀಜಿಯು ತನ್ನ ಹಲ್ಲುಗಳಿಗೆ ಬ್ಲೀಚ್ ಮಾಡಿಸಿಕೊಂಡಿದ್ದಾರೆ. ಆಗಿಂದಾಗ್ಗೆ ಪುರುಷರ ಪಾರ್ಲರ್ ಗೆ ಹೋಗುವ ಪಾರ್ಲರ್ ಸ್ವಾಮೀಜಿಯಾಗಿ ಹೆಸರುವಾಸಿಯಾಗಿದ್ದಾರೆ. ಕೆಲವರಂತೂ ತಮ್ಮ ಹಲ್ಲುಗಳಿಗೆ ಗೋಲ್ಡನ್ ಓವರ್ ಕೋಟ್ ಮಾಡಿಸಿಕೊಂಡಿದ್ದಾರೆ. ಅದು ಅವರವರ ವಯಕ್ತಿಕ ಅಭಿರುಚಿಯೂ ಸ್ವಾತಂತ್ರ್ಯವೂ ಆಗಿರುತ್ತದೆ.

ಹಲ್ಲಿಟ್ಟನ್ನು ದಾಲ್ಚುಣ್ಣ- ಕಾಚು – ಹಸಿರೆಲೆಗಳ ರಸ- ಗಿಡಮೂಲಿಕೆಯ ಪುಡಿಗಳಿಂದ ತಯಾರಿಸುತ್ತಾರೆಂದು ನನ್ನ ಅಪ್ಪ ಹೇಳುತ್ತಿದ್ದದ್ದು ನನಗಿಂದಿಗೂ ನೆನಪಿಗಿದೆ. ನೈಸರ್ಗಿಕ ಸಸ್ಯ ಮೂಲಿಕಾಂಶಗಳಿಂದ ತಯಾರಿಸಲಾದ ಹಲ್ಲಿಟ್ಟು ಹಲ್ಲುಗಳಿಗೆ ಸುರಕ್ಷಿತವೂ ಉಪಯುಕ್ತವೂ ಆಗಿದೆ. ಅದು ಹಲ್ಲುಗಳನ್ನು ಆಳವಾಗಿ ಕಪ್ಪುಗೊಳಿಸುವುದು ಮಾತ್ರವಲ್ಲದೆ ಹಲ್ಲುಗಳ ಕಲೆಗಳು ಮತ್ತೆ ರೂಪುಗೊಳ್ಳುವುದನ್ನು ತಡೆಗಟ್ಟುತ್ತದೆ. ಹಲ್ಲು ಕಪ್ಪು ಮಾಡುವಿಕೆಯು ಧೂಮಪಾನ ಮತ್ತು ಚಹಾ ಅಥವಾ ಕಾಫಿಯನ್ನು ಕುಡಿಯುವುದರಿಂದ ಉಂಟಾದ ಕಲೆಗಳನ್ನು ಕಾಣದ ರೀತಿಯಲ್ಲಿ ಮರೆಮಾಚುತ್ತದೆ, ಹಳದಿ ಹಲ್ಲುಗಳನ್ನು ಹಲ್ಲಿಟ್ಟು ಸಂಪೂರ್ಣವಾಗಿ ಕಪ್ಪುಗೊಳಿಸುತ್ತದೆ. ಈ ಪುಡಿಯು ಕಪ್ಪು ಬಣ್ಣದ ಪರಿಣಾಮವನ್ನು ವ್ಯಕ್ತಿಯ ಜೀವಿತಾಂತ್ಯದವರೆಗೂ ಕಾಪಾಡಿಕೊಳ್ಳುವಂತಹ ಉತ್ತಮ ಗುಣಮಟ್ಟವನ್ನು ಹೊಂದಿದ್ದು ಸರಳ ದೇಶಿ ತಂತ್ರಜ್ಞಾನದಿಂದ ರೂಪಿಸಲಾಗಿರುತ್ತದೆ. ಅದು ಯಾವುದೇ ಹೊಸ ಬಣ್ಣದ ವರ್ಣದ್ರವ್ಯವನ್ನು ಹಲ್ಲುಗಳಿಗೆ ಅಂಟಿಕೊಳ್ಳದಂತೆ ತಡೆಯುತ್ತದೆ.

ಹಲ್ಲುಗಳನ್ನು ಕಪ್ಪಾಗಿಸಿಕೊಳ್ಳುವುದು ಚೀನಾ, ಪೆಸಿಫಿಕ್ ದ್ವೀಪಗಳು ಮತ್ತು ಆಗ್ನೇಯ ಏಷ್ಯಾದ ಜನರಲ್ಲಿ ಇಂದಿಗೂ ವಿರಳವಾಗಿ ರೂಢಿಗಿದೆ. ದಕ್ಷಿಣ ಚೀನಾದಲ್ಲಿ ಮತ್ತು ಜಪಾನ್ ದೇಶದಲ್ಲಿ ಹಲ್ಲು ಕಪ್ಪಾಗಿಸಿಕೊಳ್ಳುವ ಸಂಪ್ರದಾಯಬದ್ಧ ಆಚರಣೆಗಳಿವೆ. ಹಲ್ಲು ಗಿಲಾವು ಮಾಡಿಕೊಳ್ಳುವುದನ್ನು ಪ್ರಬುದ್ಧತೆ, ಸೌಂದರ್ಯ ವರ್ಧನೆ ಮತ್ತು ನಾಗರಿಕತೆಯ ಸಂಕೇತವೆಂದು ನಂಬಲಾಗಿದೆ. ಕಪ್ಪಾದ ಹಲ್ಲುಗಳು ಮನುಷ್ಯರನ್ನು ಪ್ರಾಣಿಗಳಿಂದ ಪ್ರತ್ಯೇಕಿಸುತ್ತವೆಂಬುದು ಮತ್ತೊಂದು ಸಾಮಾನ್ಯ ನಂಬಿಕೆ. ಇದು ಮುಖ್ಯವಾಗಿ ವಯಸ್ಸಾದ ಮಹಿಳೆಯರಲ್ಲಿ ಪ್ರಚಲಿತದಲ್ಲಿದೆ. 1938 ರಲ್ಲಿ ನಡೆದ ಫ್ರೆಂಚ್ ಸಮೀಕ್ಷೆಯೊಂದರ ಪ್ರಕಾರ ವಿಯೆಟ್ನಾಂ ದೇಶದ 80% ಗ್ರಾಮಾಂತರ ಜನಪದರು ಹಲ್ಲುಗಳನ್ನು ಕಪ್ಪಾಗಿಸಿಕೊಂಡಿದ್ದಾರೆ. ವಿಯೆಟ್ನಾಂ ಮತ್ತು ಇತರ ಆಗ್ನೇಯ ಏಷ್ಯಾದ ಮಧ್ಯಕಾಲೀನ ರಾಜರು ಸಹ ಹಲ್ಲುಗಳನ್ನು ಕಪ್ಪಾಗಿಸಿಕೊಂಡಿದ್ದರು. ವಸಾಹತುಶಾಹಿ ಯುಗದಲ್ಲಿ ಪಾಶ್ಚಾತ್ಯ ಸೌಂದರ್ಯದ ಮಾನದಂಡಗಳು ಪರಿಚಯವಾದ ನಂತರದ ಕಾಲದಲ್ಲಿ ಹಲ್ಲಿಟ್ಟು ಗಿಲಾವು ಸಂಸ್ಕೃತಿಯು ಕಣ್ಮರೆಯಾಗುತ್ತಾ ಬಂತು.

ದಕ್ಷಿಣ ಭಾರತದಲ್ಲಿ ಹಲ್ಲುಗಳನ್ನು ಕಪ್ಪಾಗಿಸುವಿಕೆಯು ಲೈಂಗಿಕ ಪರಿಪಕ್ವತೆಗೆ ಸಂಬಂಧಿಸಿದ ಜೀವನ ಚಕ್ರ ಘಟನೆಯಾಗಿ ಮತ್ತು ಲೈಂಗಿಕ ಪ್ರಚೋದಕವಾಗಿ ದೇವದಾಸಿ ಮಹಿಳೆಯರಲ್ಲಿ ಹೆಚ್ಚಾಗಿ ಅಭ್ಯಾಸಕ್ಕೆ ಬಂದಂತಿದೆ. ತಾಂಬೂಲ ಸೇವನೆ ಮತ್ತು ಹಲ್ಲಿಟ್ಟು ಮೆರುಗು ಆರೋಗ್ಯಕರವಾದ ಹಲ್ಲುಗಳನ್ನು ಕಾಪಾಡಿಕೊಳ್ಳುವುದರ ಜೊತೆಗೆ ಲೈಂಗಿಕ ಆಕರ್ಷಣೆಯನ್ನು ಹೆಚ್ಚಿಸಲು ಸಹಕಾರಿ ಎಂದು ನಂಬಲಾಗಿದೆ. ಏಷ್ಯಾದ ಇತಿಹಾಸದುದ್ದಕ್ಕೂ ಹಲ್ಲು ಕಪ್ಪಾಗಿಸುವ ಸಾಂಪ್ರದಾಯಿಕ ಜನಪದ ಸಂಸ್ಕೃತಿಯು ಸಾಕಷ್ಟು ಜನಪ್ರಿಯವಾಗಿದೆ.

ಫೋಟೋ : ಅಂತರ್ಜಾಲ
ವಿಡಿಯೋ ನೆರವು : ಅಂಬಿಕಾ ವಾಸುದೇವ್
ಪ್ರಸ್ತುತ ಪೋಸ್ಟ್ ನ ವಿಡಿಯೋ ವಕ್ತೃ : ಸಾವಂತಮ್ಮ (ಸು.70), ಹೆರಗು ಗ್ರಾಮ, ದುದ್ದ ಹೋಬಳಿ, ಹಾಸನ ತಾಲ್ಲೂಕು, ಹಾಸನ ಜಿಲ್ಲೆ.

ಡಾ.ವಡ್ಡಗೆರೆ ನಾಗರಾಜಯ್ಯ
8722724174

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

Published

on

ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌!

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ

  • ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌!
  • ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಸುದ್ದಿದಿನ,ಮಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್‌: ಎ ಫೇರಿ ಟೇಲ್‌ ಫಾರ್ ಗ್ರೋನ್-ಅಪ್ಸ್‌’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್‌ 26ರಂದು ಚಿತ್ರ ತೆರೆಗೆ ಬರಲಿದ್ದು, ಬಿಡುಗಡೆಗೂ ಮುನ್ನ ಯಶ್‌ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌!

ನಿನ್ನೆ ಚೆನ್ನೈನಲ್ಲಿ ನಡೆದ ‘ಟಾಕ್ಸಿಕ್‌’ ಪ್ರೀ-ರಿಲೀಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್‌, ಕಾರ್ಯಕ್ರಮ ಮುಗಿದ ಬಳಿಕ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಧರ್ಮಸ್ಥಳಕ್ಕೆ ಆಗಮಿಸಿದ ಅವರು, ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ ಎನ್ನಲಾಗಿದೆ.

http://Visit : www.suddidina.com

ರಿಲೀಸ್‌ಗೂ ಮುನ್ನ ದೇವರ ದರ್ಶನದ ಸಂಪ್ರದಾಯ

ಸಿನಿಮಾ ಬಿಡುಗಡೆಗೂ ಮುನ್ನ ದೇವಸ್ಥಾನಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯುವುದು ಯಶ್‌ ಅವರಲ್ಲಿ ಹಿಂದಿನಿಂದಲೂ ಕಂಡುಬರುವ ಸಂಪ್ರದಾಯ. ‘ಕೆಜಿಎಫ್‌: ಚಾಪ್ಟರ್‌ 2’ ಬಿಡುಗಡೆಯ ಮುನ್ನವೂ ಯಶ್‌ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಇದೀಗ ‘ಟಾಕ್ಸಿಕ್‌’ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುವ ಮೂಲಕ ತಮ್ಮ ಆ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.

ಯಶ್‌ ಸೂರ್ಯ ದೇವಸ್ಥಾನಕ್ಕೂ ಭೇಟಿ ನೀಡಿ ಹರಕೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯೂ ಇದೆ. ಹೀಗಾಗಿ ಸಿನಿಮಾ ಬಿಡುಗಡೆಗೂ ಮುನ್ನ ಯಶ್‌ ಅವರ ದೇವಸ್ಥಾನ ಭೇಟಿ ಅಭಿಮಾನಿಗಳ ಗಮನ ಸೆಳೆದಿದೆ.

ಟಾಕ್ಸಿಕ್‌ ಮೇಲೆ ಭಾರಿ ನಿರೀಕ್ಷೆ

ಗೀತು ಮೋಹನ್‌ದಾಸ್‌ ನಿರ್ದೇಶನದ ‘ಟಾಕ್ಸಿಕ್‌’ ಪ್ಯಾನ್‌ ಇಂಡಿಯಾ ಆಕ್ಷನ್‌ ಥ್ರಿಲ್ಲರ್‌ ಆಗಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿದೆ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಿಗೂ ಚಿತ್ರ ಡಬ್‌ ಆಗಿದೆ.

ಯಶ್‌ ಪ್ರಮುಖ ಪಾತ್ರದಲ್ಲಿರುವ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್‌, ಹುಮಾ ಖುರೇಷಿ ಹಾಗೂ ನಯನತಾರಾ ಸೇರಿದಂತೆ ಬಹುಭಾಷಾ ತಾರೆಯರ ದೊಡ್ಡ ಬಳಗವೇ ಇದೆ. ಹೀಗಾಗಿ ಕನ್ನಡ ಮಾತ್ರವಲ್ಲದೆ ದಕ್ಷಿಣ ಹಾಗೂ ಉತ್ತರ ಭಾರತದ ಮಾರುಕಟ್ಟೆಗಳಲ್ಲೂ ಚಿತ್ರದ ಮೇಲೆ ಭಾರಿ ನಿರೀಕ್ಷೆ ಮೂಡಿದೆ.

ಬೆಂಗಳೂರಿನಲ್ಲಿ ಟಿಕೆಟ್‌ ದರಕ್ಕೆ ಶಾಕ್‌!

‘ಟಾಕ್ಸಿಕ್‌’ ಅಡ್ವಾನ್ಸ್‌ ಬುಕ್ಕಿಂಗ್‌ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಕೆಲವು ಪ್ರೀಮಿಯಂ ಥಿಯೇಟರ್‌ಗಳಲ್ಲಿ ಟಿಕೆಟ್‌ ದರ ₹3,600ರ ಗಡಿ ತಲುಪಿರುವುದು ಗಮನ ಸೆಳೆದಿದೆ. ಕೆಲವು ಮಲ್ಟಿಪ್ಲೆಕ್ಸ್‌ಗಳಲ್ಲಿ ರೆಕ್ಲೈನರ್‌ ಟಿಕೆಟ್‌ಗಳು ₹700ರಿಂದ ₹1,600ರವರೆಗೆ ಲಭ್ಯವಿದ್ದರೆ, ಕೆಲವು ಪ್ರೀಮಿಯಂ ಸ್ಕ್ರೀನ್‌ಗಳಲ್ಲಿ ದರ ಇನ್ನಷ್ಟು ಹೆಚ್ಚಾಗಿದೆ.

ಸಾಕ್ನಿಲ್ಕ್‌ ವರದಿಯ ಪ್ರಕಾರ, ಅಡ್ವಾನ್ಸ್‌ ಬುಕ್ಕಿಂಗ್‌ ಆರಂಭವಾದ ಎರಡು ದಿನಗಳಲ್ಲಿ ‘ಟಾಕ್ಸಿಕ್‌’ ಸುಮಾರು ₹18.73 ಕೋಟಿ ಮುಂಗಡ ಬುಕ್ಕಿಂಗ್‌ ದಾಖಲಿಸಿದೆ ಎನ್ನಲಾಗಿದೆ. ಟಿಕೆಟ್‌ ದರ ಏರಿಕೆಯ ನಡುವೆಯೂ ಬುಕ್ಕಿಂಗ್‌ ವೇಗ ಕುಂದಿಲ್ಲ.

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ನಾಳೆ ತೆರೆಗೆ ‘ಟಾಕ್ಸಿಕ್‌’

ಯಶ್‌ ಮತ್ತು ಗೀತು ಮೋಹನ್‌ದಾಸ್‌ ಕಥೆ ಬರೆದಿರುವ ಈ ಚಿತ್ರವು ಭಿನ್ನ ಕಥಾಹಂದರ ಹಾಗೂ ಭರ್ಜರಿ ಆಕ್ಷನ್‌ ಮೂಲಕ ಪ್ರೇಕ್ಷಕರನ್ನು ಸೆಳೆಯುವ ನಿರೀಕ್ಷೆ ಮೂಡಿಸಿದೆ. ಈಗ ಧರ್ಮಸ್ಥಳದ ಸನ್ನಿಧಿಯಲ್ಲಿ ಯಶ್‌ ಪಡೆದ ಆಶೀರ್ವಾದದ ಬೆನ್ನಲ್ಲೇ, ನಾಳೆ ‘ಟಾಕ್ಸಿಕ್‌’ ಬಾಕ್ಸ್‌ ಆಫೀಸ್‌ನಲ್ಲಿ ಹೇಗೆ ಸದ್ದು ಮಾಡಲಿದೆ ಎಂಬ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

Continue Reading

ದಿನದ ಸುದ್ದಿ

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

Published

on

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ‘ಬುಲ್ಡೋಜರ್’ ಆ್ಯಕ್ಷನ್: ₹25 ಕೋಟಿ ಮೌಲ್ಯದ ಆಸ್ತಿ ವಶ!

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ

  • 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
    ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!

http://Visit : www.suddidina.com

ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:

ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.

https://x.com/BDAOfficialGok/status/2092121239175512436?s=20

ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:

ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್‌ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ

ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.

ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

Continue Reading

ದಿನದ ಸುದ್ದಿ

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

Published

on

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!

  • ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ 100% ಶುಲ್ಕ?
  • ಶೇ.2ಕ್ಕೆ ಇಳಿದ ಶುಲ್ಕದ ಬಳಿಕ ಅರ್ಜಿ ಹೆಚ್ಚಾದರೂ, ತಾಂತ್ರಿಕ ಸಮಸ್ಯೆಯಿಂದ ಜನರಿಗೆ ಸಂಕಷ್ಟ
  • 7.50 ಲಕ್ಷ ಬಿ-ಖಾತೆ ಆಸ್ತಿಗಳ ಪೈಕಿ ಕೇವಲ 90 ಸಾವಿರ ಅರ್ಜಿಗಳು, 20 ಸಾವಿರಕ್ಕಷ್ಟೇ ಎ-ಖಾತೆ ಭಾಗ್ಯ

ಸುದ್ದಿದಿನ,ಬೆಂಗಳೂರು: ‘ಮನೆ ನಮ್ಮದು, ಖಾತೆಯೂ ನಮ್ಮ ಹಕ್ಕು’ ಎಂಬ ನಿರೀಕ್ಷೆಯೊಂದಿಗೆ ಎ-ಖಾತೆ ಪಡೆಯಲು ಮುಂದಾದ ಬೆಂಗಳೂರಿನ ಸಾವಿರಾರು ಆಸ್ತಿ ಮಾಲೀಕರಿಗೆ ಇದೀಗ ನಿರಾಸೆ ಎದುರಾಗಿದೆ. ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯ ಭಾಗವಾಗಿ ಆರಂಭಿಸಿದ್ದ ‘ನನ್ನ ಖಾತಾ ನನ್ನ ಹಕ್ಕು’ ಕಾರ್ಯಕ್ರಮದ ಗಡುವು ಮುಕ್ತಾಯಗೊಂಡಿದ್ದು, ಯೋಜನೆಯ ಅನುಷ್ಠಾನದಲ್ಲಿ ಎದುರಾದ ತಾಂತ್ರಿಕ ಸಮಸ್ಯೆ ಹಾಗೂ ಅಧಿಕಾರಿಗಳ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು ನಗರದಲ್ಲಿ ಸುಮಾರು 7.50 ಲಕ್ಷ ಬಿ-ಖಾತೆ ಆಸ್ತಿಗಳಿವೆ ಎನ್ನಲಾಗಿದ್ದು, ಈ ಪೈಕಿ ಕೇವಲ 90 ಸಾವಿರ ಆಸ್ತಿ ಮಾಲೀಕರು ಮಾತ್ರ ಎ-ಖಾತೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿ ಸಲ್ಲಿಸಿದವರಿಗೂ ತಕ್ಷಣ ಪರಿಹಾರ ಸಿಗಲಿಲ್ಲ. ಅಧಿಕಾರಿಗಳ ಪ್ರಕ್ರಿಯೆ ವಿಳಂಬದಿಂದಾಗಿ ಇದುವರೆಗೆ ಕೇವಲ 20 ಸಾವಿರ ಆಸ್ತಿಗಳಿಗೆ ಮಾತ್ರ ಎ-ಖಾತೆ ಮಂಜೂರಾಗಿದೆ. ಇನ್ನೂ 60 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ.

ಶುಲ್ಕ ಕಡಿತದ ಬಳಿಕ ಹೆಚ್ಚಿದ ನಿರೀಕ್ಷೆ

ಆರಂಭದಲ್ಲಿ ಎ-ಖಾತೆ ಪಡೆಯಲು ಮಾರ್ಗಸೂಚಿ ಮೌಲ್ಯದ ಶೇ.5ರಷ್ಟು ಶುಲ್ಕ ವಿಧಿಸಲು ಸರ್ಕಾರ ನಿರ್ಧರಿಸಿತ್ತು. ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶುಲ್ಕವನ್ನು ಶೇ.2ಕ್ಕೆ ಇಳಿಸಲಾಯಿತು. ಶುಲ್ಕ ಕಡಿಮೆಯಾದ ಬಳಿಕ ಎ-ಖಾತೆ ಪಡೆಯುವ ಆಸಕ್ತಿಯೂ ಹೆಚ್ಚಾಯಿತು. ಆದರೆ, ಇದೇ ಸಂದರ್ಭದಲ್ಲಿ ಮತ್ತೊಂದು ಸಮಸ್ಯೆ ಎದುರಾಯಿತು. ಅರ್ಜಿ ಸಲ್ಲಿಸಲು ಬಳಸುತ್ತಿದ್ದ ಜಿಬಿಎ ವೆಬ್‌ಸೈಟ್‌ನಲ್ಲಿ ಸರ್ವರ್ ಡೌನ್, ತಾಂತ್ರಿಕ ದೋಷ ಮತ್ತು ಮೂಲಸೌಕರ್ಯ ಕೊರತೆ ಕಾಣಿಸಿಕೊಂಡಿದ್ದರಿಂದ ಅನೇಕ ಆಸ್ತಿ ಮಾಲೀಕರು ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಪರದಾಡಿದರು. ಅರ್ಜಿ ಸಲ್ಲಿಸಿದವರಲ್ಲೂ ಹಲವರ ಅರ್ಜಿಗಳು ಅಧಿಕಾರಿಗಳ ಪರಿಶೀಲನೆಗಾಗಿ ಬಾಕಿ ಉಳಿದಿವೆ.

ಗಡುವು ಮುಗಿದ ಬಳಿಕ ಶುಲ್ಕದ ಹೊರೆ?

ಈಗ ‘ನನ್ನ ಖಾತಾ ನನ್ನ ಹಕ್ಕು’ ಯೋಜನೆಯ ಗಡುವು ಮುಕ್ತಾಯಗೊಂಡಿರುವುದರಿಂದ, ಮುಂದಿನ ದಿನಗಳಲ್ಲಿ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತಿಸಿಕೊಳ್ಳುವವರು ಪೂರ್ಣ ಪ್ರಮಾಣದ ಶೇ.100 ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಈಗಾಗಲೇ ಅರ್ಜಿ ಸಲ್ಲಿಸಿ ಅಧಿಕಾರಿಗಳ ಅನುಮೋದನೆಗಾಗಿ ಕಾಯುತ್ತಿರುವ 60 ಸಾವಿರಕ್ಕೂ ಹೆಚ್ಚು ಆಸ್ತಿ ಮಾಲೀಕರಲ್ಲಿ ಆತಂಕ ಹೆಚ್ಚಾಗಿದೆ. “ಶುಲ್ಕ ವಸೂಲಿಗೆ ಸರ್ಕಾರ ತೋರಿದ ವೇಗವನ್ನು, ಜನರಿಗೆ ತಾಂತ್ರಿಕ ನೆರವು ನೀಡುವಲ್ಲಿ ತೋರಲಿಲ್ಲ” ಎಂಬ ಆಕ್ರೋಶವೂ ಕೇಳಿಬರುತ್ತಿದೆ.

ಈಗ ಎಲ್ಲರ ಕಣ್ಣು ಸರ್ಕಾರದತ್ತ ನೆಟ್ಟಿದೆ. ಗಡುವು ವಿಸ್ತರಣೆಯಾಗುತ್ತದೆಯೇ? ಬಾಕಿ ಅರ್ಜಿಗಳಿಗೆ ವಿಶೇಷ ಅವಕಾಶ ಸಿಗುತ್ತದೆಯೇ? ಅಥವಾ ಸಾವಿರಾರು ಜನರು ಶೇ.100 ಶುಲ್ಕದ ಹೊರೆ ಹೊರುವಂತಾಗುತ್ತದೆಯೇ? ಎಂಬ ಪ್ರಶ್ನೆಗಳಿಗೆ ಸರ್ಕಾರದ ಮುಂದಿನ ನಿರ್ಧಾರವೇ ಉತ್ತರ ನೀಡಬೇಕಿದೆ.

 

Continue Reading
Advertisement

Title

ದಿನದ ಸುದ್ದಿ13 hours ago

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು...

ದಿನದ ಸುದ್ದಿ14 hours ago

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ...

ದಿನದ ಸುದ್ದಿ14 hours ago

ಡಾಲಿಯ ಕನಸು ಒಂದೇ ಹೀರೋ ಆಗೋದು

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು! ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು...

ದಿನದ ಸುದ್ದಿ1 day ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ1 day ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
ದಿನದ ಸುದ್ದಿ1 day ago

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್ 658 OMR ಕಾರ್ಬನ್...

ದಿನದ ಸುದ್ದಿ1 day ago

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌! ಮಂಜುನಾಥನ...

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ ₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ದಿನದ ಸುದ್ದಿ1 day ago

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ ನಿವೇಶನ 13...

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
ದಿನದ ಸುದ್ದಿ1 day ago

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ...

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ!
ದಿನದ ಸುದ್ದಿ1 day ago

ಆನ್‌ಲೈನ್‌ನಲ್ಲಿ ಮಾರಾಟವಾಗ್ತಿತ್ತು ‘ವಿಷದ ಹಣ್ಣು’! ಇ-ಕಾಮರ್ಸ್‌ ದೈತ್ಯರಿಗೆ ನೋಟಿಸ್‌

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಆನ್‌ಲೈನ್‌ನಲ್ಲಿ ‘ವಿಷದ ಹಣ್ಣು’ ಮಾರಾಟ ಅಮೆಜಾನ್‌, ಫ್ಲಿಪ್‌ಕಾರ್ಟ್‌, ಮಿನಿಟ್ಸ್‌ಗೆ ಸರ್ಕಾರದೊಂದ ನೋಟಿಸ್‌ ಈ ಹಣ್ಣು ಖರೀದಿಸಿದ್ರೆ ಅಪಾಯ,...

Trending