Connect with us

ದಿನದ ಸುದ್ದಿ

Boycott China ಎನ್ನುವುದು ಬಹಳ ಸುಲಭ ಹಾಗೂ ಕೇಳಲೇನೋ ಚೆಂದ, ಆದರೆ ವಾಸ್ತವ..?

Published

on

  • ಗ್ಲಾಡ್ ಸನ್ ಅಲ್ಮೆಡಾ

Boycott China ಎನ್ನುವುದು ಬಹಳ ಸುಲಭ ಹಾಗೂ ಕೇಳಲೂ ಚೆಂದ. ಆದರೆ ವಾಸ್ತವ? ಸದ್ಯದ ಪರಿಸ್ಥಿತಿಯಲ್ಲಂತೂ ಅಲ್ಮೋಸ್ಟ್ ಇಂಪಾಸಿಬಲ್. ಯಾಕೆ ಗೊತ್ತೇ? ಚೀನಾದಿಂದ ಭಾರತ ಪಡೆಯುತ್ತಿರುವ ಆಮದಿನ ಒಟ್ಟು ಮೌಲ್ಯ ಸುಮಾರು 60 ಬಿಲಿಯನ್ ಡಾಲರ್. ಇದು ಚೀನಾದ ಒಟ್ಟು ರಫ್ತಿನ ಕೇವಲ 3% ಅಷ್ಟೇ.

ಹಾಗಾಗಿ ಭಾರತ ಸಂಪೂರ್ಣವಾಗಿ ಚೀನಾದ ಆಮದನ್ನು ನಿಲ್ಲಿಸಿದರೂ, ಚೀನಾಕ್ಕೆ ಹೊಡೆತ ಬೀಳಲ್ಲ. ಇನ್ನು ಈ ಆಮದಿನಲ್ಲಿ ಹಲವಾರು ಔಷಧಿಗಳ ಮೂಲಧಾತುಗಳನ್ನೂ ಕೂಡಾ ಭಾರತೀಯ ಜೌಷಧಿ ಕಂಪನಿಗಳು ತರಿಸುತ್ತಿವೆ. ಇವೆಲ್ಲಾವನ್ನು ಬೇರೆಡೆಯಿಂದ ತರಿಸಿಕೊಳ್ಳಲು ಭಾರತ ಶಕ್ತವಾಗಿದೆಯಾ ಎನ್ನುವ ಪ್ರಶ್ನೆಗೆ ಸರಕಾರದ ಬಳಿಯೇ ಉತ್ತರವಿಲ್ಲ.

ಆದರೆ ಚೀನಾದಿಂದ ಆಗುತ್ತಿರುವ ಆಮದು, ನಮ್ಮ ಒಟ್ಟು ಆಮದಿನ ಸುಮಾರು 14%. ಹಾಗಾಗಿ ಚೀನಾದಿಂದ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿದರೆ ಭಾರತದ ಆಮದಿನ ಮೇಲೆ ಭಾರೀ ಪರಿಣಾಮವುಂಟಾಗುತ್ತದೆ. ಒಂದೇ ಬೇರೆ ಯಾವುದೇ ದೇಶದಿಂದ ಭಾರತ ಆಮದು ಮಾಡಿ ಈ ಪರಿಣಾಮವನ್ನು ಸರಿದೂಗಿಸಬೇಕು ಇಲ್ಲವೇ ನಮ್ಮಲ್ಲೇ ಉತ್ಪಾದನೆ ಕೈಗೊಳ್ಳಬೇಕು. ಬೇರೆ ದೇಶದಿಂದ ಚೀನಾ ಮಾರುವ ಬೆಲೆಯಲ್ಲಿ ವಸ್ತುಗಳಂತೂ ಸಿಗೋಲ್ಲ. ಹಾಗಾಗಿ ಅದು ಕಷ್ಟಸಾಧ್ಯ. ಇನ್ನು ಭಾರತದಲ್ಲಿ ಉತ್ಪಾದನೆ.

ಮೇಕ್ ಇನ್ ಇಂಡಿಯಾ ಎಂದು ಸ್ಲೋಗನ್ ಮಾಡಿಕೊಂಡರೂ ಭಾರತದ ಉತ್ಪಾದನಾ ಕ್ಷೇತ್ರ ಕಳೆದ ಮೂರ್ನಾಲ್ಕು ವರುಷಗಳಲ್ಲಿ ಸತತವಾಗಿ ನಷ್ಟದಲ್ಲಿದೆ. ಹಾಗಾಗಿ ಮಾಧ್ಯಮಗಳು, ಭಕ್ತರು ಎಷ್ಟು ಬಾಯ್ಕಾಟ್, ಬಾಯ್ಕಾಟ್ ಎಂದರೂ, ನಮ್ಮ ಸರಕಾರ ಸದ್ಯಕ್ಕೆ ಚೀನಾದ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿದರೆ ನಮ್ಮ ಆರ್ಥಿಕತೆಯ ಮೇಲೆ ಆಗಬಹುದಾದ ಪರಿಣಾಮಗಳನ್ನೆದುರಿಸಲು ತಯಾರಾಗಿದೆಯೇ? ಶಕ್ತವಾಗಿದೆಯೇ? ನನ್ನ ಪ್ರಕಾರ ಎರಡೂ ಇಲ್ಲ. ವಿ ಆರ್ ನಾಟ್ ರೆಡಿ. ಐಟಿ ಸೆಲ್, ಫೇಸ್‍‍ಬುಕ್‍, ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಉತ್ಪಾದನೆ ಗಗನ ಮುಟ್ಟಿದೆಯಾದರೂ, ಆ ಔಟ್‍ಪುಟ್ಟನ್ನೂ ನಮ್ಮ ಸರ್ಕಾರನೇ ಖರೀದಿಸೋಲ್ಲ.

ಇನ್ನು ಸದ್ಯಕ್ಕೆ ಚೀನಾ ನಮ್ಮ ದೇಶದಲ್ಲಿ ಮಾಡಿರುವ ಹೂಡಿಕೆಯನ್ನು ಹೇಗೆ ನಿಲ್ಲಿಸುವುದು? ಭಕ್ತರು ಬಾಯ್ಕಾಟ್, ಬಾಯ್ಕಾಟ್ ಎಂದು ಊಳಿಡುತ್ತಿರುವಾಗಲೇ ಡೆಲ್ಲಿ-ಮೀರಟ್ ನಡುವಿನ ರೇಲ್ವೇ ಯೋಜನೆಯ ಕಾಮಗಾರಿಯೊಂದನ್ನು ಚೀನಾದ ಕಂಪನಿಯೊಂದಕ್ಕೆ ಗುತ್ತಿಗೆಗೆ ಕೊಡಲು ತಯಾರಿ ನಡೆಸುತ್ತಿದೆಯೆಂದು ವರದಿಯಾಗಿದೆ.

ಇನ್ನು ಈಗಾಗಲೇ ಆಗಿರುವ ಹೂಡಿಕೆ ದೊಡ್ಡ ಮೊತ್ತದ್ದು. ಬಾಯ್ಕಾಟ್ ಅನ್ನುವ ಮೊದಲು ವಾಸ್ತವವನ್ನು ಅರಿಯಿರಪ್ಪಾ. ಆರು ವರುಷಗಳಲ್ಲಿ ಚೀನಾಕ್ಕೆ ನಮ್ಮ ದೇಶದಲ್ಲಿ ಬೇಕಾಬಿಟ್ಟಿಯಾಗಿ ಹೂಡಿಕೆ ಮಾಡಲು ಬಿಟ್ಟು, ಅವರ ಆಮದನ್ನು ಹೆಚ್ಚಿಸಿ, ಈವಾಗ ಒಮ್ಮೆಗೆ ಬಾಯ್ಕಾಟ್ ಅಂದರೆ?

ಅದಕ್ಕೆ ಬಾಯ್ಕಾಟ್, ಬಾಯ್ಕಾಟ್ ಎನ್ನುವ ಕಾಂಟ್ರಾಕ್ಟನ್ನು ಸರಕಾರ ಮಾಧ್ಯಮಗಳು ಹಾಗೂ ಭಕ್ತ ಮಂಡಳಿಗೆ ಬಿಟ್ಟುಕೊಟ್ಟು, ತಾನು ಮಾತ್ರ ಮೌನಕ್ಕೆ ಜಾರಿದೆ. ಯಾಕೆಂದರೆ ಅವರಿಗೆ ವಾಸ್ತವ ತಿಳಿದಿದೆ. ಆದರೂ ಚುನಾವಣೆಗಳಿವೆಯಲ್ವಾ? ಹಾಂ! ಅದರಲ್ಲಿ ಈ ಬಾಯ್ಕಾಟ್, ಕಡೀ ನಿಂದಾಗಳು ತುಂಬಾ ಹೆಲ್ಪ್ ಮಾಡ್ತಾವೆ ಅಂತ ಬ್ರಹ್ಮಾಂಡ ಜ್ಯೋತಿಷಿಗಳು ಹೇಳಿದ ನೆನಪು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending