ದಿನದ ಸುದ್ದಿ
Boycott China ಎನ್ನುವುದು ಬಹಳ ಸುಲಭ ಹಾಗೂ ಕೇಳಲೇನೋ ಚೆಂದ, ಆದರೆ ವಾಸ್ತವ..?
- ಗ್ಲಾಡ್ ಸನ್ ಅಲ್ಮೆಡಾ
Boycott China ಎನ್ನುವುದು ಬಹಳ ಸುಲಭ ಹಾಗೂ ಕೇಳಲೂ ಚೆಂದ. ಆದರೆ ವಾಸ್ತವ? ಸದ್ಯದ ಪರಿಸ್ಥಿತಿಯಲ್ಲಂತೂ ಅಲ್ಮೋಸ್ಟ್ ಇಂಪಾಸಿಬಲ್. ಯಾಕೆ ಗೊತ್ತೇ? ಚೀನಾದಿಂದ ಭಾರತ ಪಡೆಯುತ್ತಿರುವ ಆಮದಿನ ಒಟ್ಟು ಮೌಲ್ಯ ಸುಮಾರು 60 ಬಿಲಿಯನ್ ಡಾಲರ್. ಇದು ಚೀನಾದ ಒಟ್ಟು ರಫ್ತಿನ ಕೇವಲ 3% ಅಷ್ಟೇ.
ಹಾಗಾಗಿ ಭಾರತ ಸಂಪೂರ್ಣವಾಗಿ ಚೀನಾದ ಆಮದನ್ನು ನಿಲ್ಲಿಸಿದರೂ, ಚೀನಾಕ್ಕೆ ಹೊಡೆತ ಬೀಳಲ್ಲ. ಇನ್ನು ಈ ಆಮದಿನಲ್ಲಿ ಹಲವಾರು ಔಷಧಿಗಳ ಮೂಲಧಾತುಗಳನ್ನೂ ಕೂಡಾ ಭಾರತೀಯ ಜೌಷಧಿ ಕಂಪನಿಗಳು ತರಿಸುತ್ತಿವೆ. ಇವೆಲ್ಲಾವನ್ನು ಬೇರೆಡೆಯಿಂದ ತರಿಸಿಕೊಳ್ಳಲು ಭಾರತ ಶಕ್ತವಾಗಿದೆಯಾ ಎನ್ನುವ ಪ್ರಶ್ನೆಗೆ ಸರಕಾರದ ಬಳಿಯೇ ಉತ್ತರವಿಲ್ಲ.
ಆದರೆ ಚೀನಾದಿಂದ ಆಗುತ್ತಿರುವ ಆಮದು, ನಮ್ಮ ಒಟ್ಟು ಆಮದಿನ ಸುಮಾರು 14%. ಹಾಗಾಗಿ ಚೀನಾದಿಂದ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿದರೆ ಭಾರತದ ಆಮದಿನ ಮೇಲೆ ಭಾರೀ ಪರಿಣಾಮವುಂಟಾಗುತ್ತದೆ. ಒಂದೇ ಬೇರೆ ಯಾವುದೇ ದೇಶದಿಂದ ಭಾರತ ಆಮದು ಮಾಡಿ ಈ ಪರಿಣಾಮವನ್ನು ಸರಿದೂಗಿಸಬೇಕು ಇಲ್ಲವೇ ನಮ್ಮಲ್ಲೇ ಉತ್ಪಾದನೆ ಕೈಗೊಳ್ಳಬೇಕು. ಬೇರೆ ದೇಶದಿಂದ ಚೀನಾ ಮಾರುವ ಬೆಲೆಯಲ್ಲಿ ವಸ್ತುಗಳಂತೂ ಸಿಗೋಲ್ಲ. ಹಾಗಾಗಿ ಅದು ಕಷ್ಟಸಾಧ್ಯ. ಇನ್ನು ಭಾರತದಲ್ಲಿ ಉತ್ಪಾದನೆ.
ಮೇಕ್ ಇನ್ ಇಂಡಿಯಾ ಎಂದು ಸ್ಲೋಗನ್ ಮಾಡಿಕೊಂಡರೂ ಭಾರತದ ಉತ್ಪಾದನಾ ಕ್ಷೇತ್ರ ಕಳೆದ ಮೂರ್ನಾಲ್ಕು ವರುಷಗಳಲ್ಲಿ ಸತತವಾಗಿ ನಷ್ಟದಲ್ಲಿದೆ. ಹಾಗಾಗಿ ಮಾಧ್ಯಮಗಳು, ಭಕ್ತರು ಎಷ್ಟು ಬಾಯ್ಕಾಟ್, ಬಾಯ್ಕಾಟ್ ಎಂದರೂ, ನಮ್ಮ ಸರಕಾರ ಸದ್ಯಕ್ಕೆ ಚೀನಾದ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿದರೆ ನಮ್ಮ ಆರ್ಥಿಕತೆಯ ಮೇಲೆ ಆಗಬಹುದಾದ ಪರಿಣಾಮಗಳನ್ನೆದುರಿಸಲು ತಯಾರಾಗಿದೆಯೇ? ಶಕ್ತವಾಗಿದೆಯೇ? ನನ್ನ ಪ್ರಕಾರ ಎರಡೂ ಇಲ್ಲ. ವಿ ಆರ್ ನಾಟ್ ರೆಡಿ. ಐಟಿ ಸೆಲ್, ಫೇಸ್ಬುಕ್, ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಉತ್ಪಾದನೆ ಗಗನ ಮುಟ್ಟಿದೆಯಾದರೂ, ಆ ಔಟ್ಪುಟ್ಟನ್ನೂ ನಮ್ಮ ಸರ್ಕಾರನೇ ಖರೀದಿಸೋಲ್ಲ.
ಇನ್ನು ಸದ್ಯಕ್ಕೆ ಚೀನಾ ನಮ್ಮ ದೇಶದಲ್ಲಿ ಮಾಡಿರುವ ಹೂಡಿಕೆಯನ್ನು ಹೇಗೆ ನಿಲ್ಲಿಸುವುದು? ಭಕ್ತರು ಬಾಯ್ಕಾಟ್, ಬಾಯ್ಕಾಟ್ ಎಂದು ಊಳಿಡುತ್ತಿರುವಾಗಲೇ ಡೆಲ್ಲಿ-ಮೀರಟ್ ನಡುವಿನ ರೇಲ್ವೇ ಯೋಜನೆಯ ಕಾಮಗಾರಿಯೊಂದನ್ನು ಚೀನಾದ ಕಂಪನಿಯೊಂದಕ್ಕೆ ಗುತ್ತಿಗೆಗೆ ಕೊಡಲು ತಯಾರಿ ನಡೆಸುತ್ತಿದೆಯೆಂದು ವರದಿಯಾಗಿದೆ.
ಇನ್ನು ಈಗಾಗಲೇ ಆಗಿರುವ ಹೂಡಿಕೆ ದೊಡ್ಡ ಮೊತ್ತದ್ದು. ಬಾಯ್ಕಾಟ್ ಅನ್ನುವ ಮೊದಲು ವಾಸ್ತವವನ್ನು ಅರಿಯಿರಪ್ಪಾ. ಆರು ವರುಷಗಳಲ್ಲಿ ಚೀನಾಕ್ಕೆ ನಮ್ಮ ದೇಶದಲ್ಲಿ ಬೇಕಾಬಿಟ್ಟಿಯಾಗಿ ಹೂಡಿಕೆ ಮಾಡಲು ಬಿಟ್ಟು, ಅವರ ಆಮದನ್ನು ಹೆಚ್ಚಿಸಿ, ಈವಾಗ ಒಮ್ಮೆಗೆ ಬಾಯ್ಕಾಟ್ ಅಂದರೆ?
ಅದಕ್ಕೆ ಬಾಯ್ಕಾಟ್, ಬಾಯ್ಕಾಟ್ ಎನ್ನುವ ಕಾಂಟ್ರಾಕ್ಟನ್ನು ಸರಕಾರ ಮಾಧ್ಯಮಗಳು ಹಾಗೂ ಭಕ್ತ ಮಂಡಳಿಗೆ ಬಿಟ್ಟುಕೊಟ್ಟು, ತಾನು ಮಾತ್ರ ಮೌನಕ್ಕೆ ಜಾರಿದೆ. ಯಾಕೆಂದರೆ ಅವರಿಗೆ ವಾಸ್ತವ ತಿಳಿದಿದೆ. ಆದರೂ ಚುನಾವಣೆಗಳಿವೆಯಲ್ವಾ? ಹಾಂ! ಅದರಲ್ಲಿ ಈ ಬಾಯ್ಕಾಟ್, ಕಡೀ ನಿಂದಾಗಳು ತುಂಬಾ ಹೆಲ್ಪ್ ಮಾಡ್ತಾವೆ ಅಂತ ಬ್ರಹ್ಮಾಂಡ ಜ್ಯೋತಿಷಿಗಳು ಹೇಳಿದ ನೆನಪು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ5 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ5 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

