ರಾಜಕೀಯ
ಬಹುಜನ ಸಮಾಜ ಪಕ್ಷ ನಿಜಕ್ಕೂ ಬಹು ಜನರನ್ನು ಒಳಗೊಂಡಿದೆಯೇ..?
- ವಿವೇಕಾನಂದ. ಹೆಚ್.ಕೆ
ಭಾರತದಲ್ಲಿ ಅಸ್ತಿತ್ವದಲ್ಲಿರುವ ಬಹುಮುಖ್ಯ ರಾಷ್ಟ್ರೀಯ ಪಕ್ಷಗಳಲ್ಲಿ ಒಂದು. ಕಾಂಗ್ರೆಸ್, ಬಿಜೆಪಿ, ಕಮ್ಯುನಿಸ್ಟ್ ಪಕ್ಷಗಳ ನಂತರ ಹೆಚ್ಚು ಜನಪ್ರಿಯತೆ ಗಳಿಸಿರುವ ಪಕ್ಷ. ಉತ್ತರ ಪ್ರದೇಶದಲ್ಲಿ ಮೂರು ಬಾರಿ ಅಧಿಕಾರವನ್ನು ನಡೆಸಿದೆ ಮತ್ತು ಕೆಲವು ರಾಜ್ಯಗಳಲ್ಲಿ ಸಮ್ಮಿಶ್ರ ಸರ್ಕಾರದ ಭಾಗವೂ ಆಗಿದ್ದಿತು.ಕಾನ್ಷಿರಾಂ ಎಂಬುವವರು ಬಹು ಶ್ರಮದಿಂದ ಕಟ್ಟಿದ ಮತ್ತು ಈಗ ಮಾಯಾವತಿಯವರು ಅಧ್ಯಕ್ಷರಾಗಿರುವ ಪಕ್ಷವದು.ಅಂಬೇಡ್ಕರ್ ಮತ್ತು ಅವರ ವಿಚಾರಗಳ ಆಧಾರದ ಮೇಲೆ ಈ ಪಕ್ಷ ಹೋರಾಟ ಮಾಡುತ್ತಿದೆ ಎಂಬುದು ಅದರ ಅನುಯಾಯಿಗಳ ಸಮರ್ಥನೆ ಮತ್ತು ಮೂಲ ಆಶಯ.
ಹಾಗಾದರೆ ಇದು ವಾಸ್ತವವೇ ?
ಅದರ ಒಟ್ಟು ಇತಿಹಾಸದ ರಾಜಕೀಯ ನಡೆಗಳನ್ನು ಗಮನಿಸಿದಾಗ ನಮ್ಮ ಕರ್ನಾಟಕದ ಜನತಾದಳ ಪಕ್ಷದಂತೆ ಬಹುತೇಕ ಅಧಿಕಾರದ ಲಾಭ ನಷ್ಟಗಳನ್ನು ನೋಡಿಕೊಂಡು ಎಲ್ಲಾ ಕಡೆಯೂ ಸಲ್ಲುವ ಅನುಕೂಲಕರ ನಿರ್ಧಾರಗಳನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ.
ತನ್ನ ಸಿದ್ದಾಂತಗಳಿಗೆ ವಿರುದ್ಧ ನಿಲುವಿನ ಬಿಜೆಪಿಯ ಜೊತೆಗೂ, ತನ್ನ ಮೇಲೆ ಹಲ್ಲೆ ಮಾಡಿದ ಪ್ರಬಲ ಯಾದವ ಜಾತಿಯ ಸಮಾಜವಾದಿ ಪಕ್ಷದ ಜೊತೆಗೂ, ಕೆಲವು ಕಡೆ ತಾವು ವಿರೋಧಿಸುವ ಗಾಂಧಿ ತತ್ವದ ನೆಲೆಯ ಕಾಂಗ್ರೆಸ್ ಪಕ್ಷದ ಜೊತೆಯೂ ಸೇರುತ್ತಾರೆ.
ಅಂದರೆ ಅಂಬೇಡ್ಕರ್ ಶೋಷಿತರ ಜಾಗೃತಿಗಾಗಿ ಘೋಷಿಸಿದ ಶಿಕ್ಷಣ ಸಂಘಟನೆ ಹೋರಾಟ ಎಂಬ ತ್ರಿವಳಿ ಸಂದೇಶಕ್ಕೆ ಎಲ್ಲವೂ ಅಧಿಕಾರಕ್ಕಾಗಿ ಎಂಬುದನ್ನು ಹೊಸದಾಗಿ ಸೇರ್ಪಡೆಯಾದಂತೆ ಆಗುತ್ತದೆ. ಅಂಬೇಡ್ಕರ್ ರಾಜಕೀಯ ಅಧಿಕಾರದ ಪ್ರಾಮುಖ್ಯತೆ ಬಗ್ಗೆ ಖಂಡಿತ ಹೇಳಿದ್ದಾರೆ. ಅದರ ಜೊತೆಗೆ ಮಾರ್ಗವೂ ಮುಖ್ಯವಾಗಬೇಕಾಗುತ್ತದೆ.
ವಿಶಾಲ ತಳಹದಿಯ ಮೇಲೆ ಒಂದು ಪಕ್ಷ ಮತ್ತು ಸಂಘಟನೆ ದೊಡ್ಡದಾಗಿ ಬೆಳೆಯಬೇಕಾದರೆ ದೀರ್ಘಕಾಲದಲ್ಲಿ ಹೇಗೆಂದರೆ ಹಾಗೆ ತತ್ ಕ್ಷಣದ ಲಾಭವನ್ನು ನೋಡಬಾರದು. ಒಂದು ಪಕ್ಷದ ಕಾರ್ಯಕರ್ತರಲ್ಲಿ ಮತ್ತು ಸಾರ್ವಜನಿಕರಲ್ಲಿ ಕೂಡ ಆ ಪಕ್ಷದ ಬಗ್ಗೆ ಅದರ ನ್ಯಾಯ ನೀತಿ ಧರ್ಮದ ಬಗ್ಗೆ ಸಹಜ ಗೌರವ ಮೂಡುವಂತಿರಬೇಕು. ಅದರಲ್ಲಿ ಬಿಎಸ್ಪಿ ವಿಫಲವಾಗಿದೆ ಎಂದು ಹೇಳಬಹುದು.
ಮಾಯಾವತಿ ಹೊರತುಪಡಿಸಿ ಮತ್ತೊಂದಿಷ್ಟು ನಾಯಕರಗಳನ್ನು ಅವರ ಮಟ್ಟಕ್ಕೆ ಬೆಳೆಸಲು ಪ್ರಯತ್ನಿಸಲಿಲ್ಲ ಅಥವಾ ಉದ್ದೇಶಪೂರ್ವಕವಾಗಿಯೇ ನಿರ್ಲಕ್ಷಿಸಿದಂತೆ ಕಾಣುತ್ತದೆ . ಅಂಬೇಡ್ಕರ್ ವಾದದ ಹಿನ್ನೆಲೆಯ ಅನೇಕ ಯುವ ಮತ್ತು ಅನುಭವಿ ಸಂಘಟಕರನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸದೆ ಪರ್ಯಾಯ ನಾಯಕತ್ವದ ಅಸೂಯೆಯಿಂದ ಅವರಿಗೆ ಪ್ರೋತ್ಸಾಹ ನೀಡಲಿಲ್ಲ.
ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು ಸಿದ್ಧವಾಗುತ್ತಿರುವಾಗಲೇ ರಾಜಕೀಯ ಪ್ರವೇಶಿಸಿದ ವಿದ್ಯಾವಂತೆ ಮತ್ತು ಬುದ್ದಿವಂತೆಯಾದ ಮಾಯಾವತಿಯರ ಬಹುದೊಡ್ಡ ಸಮಸ್ಯೆ ಸರ್ವಾಧಿಕಾರಿ ಮನೋಭಾವ, ಅಧಿಕಾರ ಲಾಲಸೆ ಮತ್ತು ಹೊಂದಾಣಿಕೆಯ ಮನೋಭಾವದ ಕೊರತೆ. ಜೊತೆಗೆ ಆಡಳಿತಾತ್ಮಕ ದಕ್ಷತೆಯೂ ಕಡಿಮೆ.
ಸರಿಯೋ ತಪ್ಪೋ ಆದರೆ ಜನರ ಬೆಂಬಲವನ್ನು ನಿರಂತರವಾಗಿ ಗಳಿಸಿದ ದೆಹಲಿಯ ಶೀಲಾ ದೀಕ್ಷಿತ್, ಪಶ್ಚಿಮ ಬಂಗಾಳದ ಜ್ಯೋತಿ ಬಸು, ಗುಜರಾತಿನ ನರೇಂದ್ರ ಮೋದಿ, ಒರಿಸ್ಸಾದ ನವೀನ್ ಪಾಟ್ನಾಯಕ್ ಮುಂತಾದವರ ಸಾಲಿನಲ್ಲಿ ನಿಲ್ಲುವ ಪ್ರಯತ್ನ ಮಾಡಲಿಲ್ಲ.
ಅಧಿಕಾರಕ್ಕೆ ಏರುವುದು ಒಂದು ಸಾಧನೆಯಾದರೆ ಅದನ್ನು ನಿರಂತರವಾಗಿ ಉಳಿಸಿಕೊಳ್ಳುವುದು ಸಹ ಮುಖ್ಯವಾಗುತ್ತದೆ. ಅದರಲ್ಲೂ ಒಬ್ಬ ದಲಿತ ಹೆಣ್ಣು ಮಗಳು ತಮಗೆ ಸಿಕ್ಕಿದ ಅಪರೂಪದ ಅವಕಾಶವನ್ನು ಇನ್ನಷ್ಟು ಜನರಿಗೆ ಹತ್ತಿರವಾಗುವ ರೀತಿ ಬಳಸಬಹುದಿತ್ತು.ಹೌದು, ಅದಕ್ಕೆ ಹಲವಾರು ಕಾರಣಗಳು ಇರಬಹುದು. ಆದರೆ ಜನರಿಗೆ ಅನುಕೂಲಕರ ಕೆಲಸ ಮಾಡುವಾಗ ಖಂಡಿತ ಜನರಿಂದ ಪ್ರೋತ್ಸಾಹ ಸಿಕ್ಕೇ ಸಿಗುತ್ತದೆ.
ನಮ್ಮ ಜನರ ಮನಸ್ಥಿತಿ ಹೇಗಿದೆ ಎಂದರೆ, ನೀವು ಸಾರ್ವಜನಿಕವಾಗಿ ಒಳ್ಳೆಯ ಉದ್ದೇಶಕ್ಕೇ ಆದರೂ ಸ್ವಲ್ಪ ಕೆಟ್ಟ ಅಥವಾ ತಪ್ಪು ನಿರ್ಧಾರ ಕೈಗೊಂಡರೇ ಜನ ಅದನ್ನೇ ಉದಾಹರಣೆಯಾಗಿ ತೆಗೆದುಕೊಂಡು ತಮ್ಮ ವೈಯಕ್ತಿಕ ಸ್ವಾರ್ಥ ಸಾಧನೆಗೆ ಇದನ್ನೇ ನಿದರ್ಶನವಾಗಿ ಉಪಯೋಗಿಸಿಕೊಳ್ಳುತ್ತಾರೆ.
ಇದೇ ಬಹುಮುಖ್ಯವಾಗಿ ಇಂದು ಅಂಬೇಡ್ಕರ್ ವಾದದ ಬಹುಜನ ಚೆಲ್ಲಾಪಿಲ್ಲಿಯಾಗಿ ಒಂದೊಂದು ಪಕ್ಷ ಅಥವಾ ಸಂಘಟನೆಯ ದಾರಿ ಹಿಡಿದಿದ್ದಾರೆ. ಸಹಜವಾಗಿ ಅದರ ವಿರೋಧಿಗಳು ಇದರ ಲಾಭ ಪಡೆಯುತ್ತಿದ್ದಾರೆ. ಬಹುಜನರ ಪಕ್ಷ ಆಂತರಿಕವಾಗಿಯೂ ಬಹುಜನರ ಪಕ್ಷವಾಗೇ ಇರಬೇಕೆ ಹೊರತು ಹೆಸರಿಗೆ ಮಾತ್ರ ಇದ್ದು ಸಂಘಟನೆಯಲ್ಲಿ ನೆಪ ಮಾತ್ರದ ನಡವಳಿಕೆ ಇದ್ದರೆ ಖಂಡಿತ ಬಹುಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ.
ಜೊತೆಗೆ ಹೋರಾಟ ಸಿದ್ದಾಂತಗಳೊಂದಿಗೆ ಆಡಳಿತಾತ್ಮಕ ದಕ್ಷತೆ ಸಹ ಮುಖ್ಯವಾಗುತ್ತದೆ. ಅಧಿಕಾರಕ್ಕೆ ಬರುವವರೆಗೂ ಚಳವಳಿ ಮುಖ್ಯ. ಬಂದ ನಂತರ ಆಡಳಿತ ಮಾಡುವುದು ಅತಿಮುಖ್ಯ ಇಲ್ಲದಿದ್ದರೆ ಜನ ಬಹುಬೇಗ ನಿರಾಸೆಗೊಳಗಾಗಿ ಪಕ್ಷ ತಿರಸ್ಕರಿಸಲ್ಪಡುತ್ತದೆ. ಆಗ ಪಕ್ಷ ಬೆಳೆಸಲು ಅಡ್ಡ ದಾರಿ ಹಿಡಿಯುವ ಅವಶ್ಯಕತೆ ಬರುತ್ತದೆ. ಅದು ಒಂದು ಸಿದ್ಧಾಂತದ ಅವಸಾನಕ್ಕೆ ದಾರಿ ಮಾಡಿಕೊಡುತ್ತದೆ.
ಬಹುಶಃ ಇಂದು ಕವಲು ದಾರಿಯಲ್ಲಿ ಸಾಗುತ್ತಿರುವ ಬಹುಜನ ಸಮಾಜ ಪಕ್ಷದ ಆತ್ಮಾವಲೋಕನಕ್ಕೆ ಇದು ಸರಿಯಾದ ಸಮಯವೆಂದು ಭಾವಿಸಬಹುದು.ಯಾವುದೇ ವ್ಯಕ್ತಿ ಪಕ್ಷ ಸಂಘಟನೆ ಸಿದ್ಧಾಂತ ಸಾಮಾಜಿಕ ಮೌಲ್ಯಗಳನ್ನು ಸದಾ ಪ್ರತಿನಿಧಿಸುವಂತಿರಬೇಕು. ಅದರ ಸ್ವಾರ್ಥದ ನಡೆಯನ್ನು ಜನ ಗಮನಿಸುತ್ತಿರುತ್ತಾರೆ. ಅಧಿಕಾರವೇ ಎಲ್ಲವೂ ಅಲ್ಲ. ಅದರಲ್ಲೂ ಶೋಷಿತ ಸಮುದಾಯಗಳ ಒಂದು ಪಕ್ಷ ಅತ್ಯಂತ ಶುದ್ದ ಪ್ರಾಮಾಣಿಕ ದೂರದೃಷ್ಟಿಯ ನಿಲುವುಗಳನ್ನು ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಪರ್ಯಾಯ ವ್ಯವಸ್ಥೆ ಇರುವುದಕ್ಕಿಂತ ಮತ್ತಷ್ಟು ಉತ್ತಮವಾಗಬೇಕು. ದೇಶದ ಸಮಗ್ರ ಅಭಿವೃದ್ಧಿಗೆ ಇದು ಬಹಳ ಮುಖ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ5 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ5 days agoಕವಿತೆ | ದೇವರ ಹೂವು
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ2 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

