ರಾಜಕೀಯ
ಬಹುಜನ ಸಮಾಜ ಪಕ್ಷ ನಿಜಕ್ಕೂ ಬಹು ಜನರನ್ನು ಒಳಗೊಂಡಿದೆಯೇ..?
- ವಿವೇಕಾನಂದ. ಹೆಚ್.ಕೆ
ಭಾರತದಲ್ಲಿ ಅಸ್ತಿತ್ವದಲ್ಲಿರುವ ಬಹುಮುಖ್ಯ ರಾಷ್ಟ್ರೀಯ ಪಕ್ಷಗಳಲ್ಲಿ ಒಂದು. ಕಾಂಗ್ರೆಸ್, ಬಿಜೆಪಿ, ಕಮ್ಯುನಿಸ್ಟ್ ಪಕ್ಷಗಳ ನಂತರ ಹೆಚ್ಚು ಜನಪ್ರಿಯತೆ ಗಳಿಸಿರುವ ಪಕ್ಷ. ಉತ್ತರ ಪ್ರದೇಶದಲ್ಲಿ ಮೂರು ಬಾರಿ ಅಧಿಕಾರವನ್ನು ನಡೆಸಿದೆ ಮತ್ತು ಕೆಲವು ರಾಜ್ಯಗಳಲ್ಲಿ ಸಮ್ಮಿಶ್ರ ಸರ್ಕಾರದ ಭಾಗವೂ ಆಗಿದ್ದಿತು.ಕಾನ್ಷಿರಾಂ ಎಂಬುವವರು ಬಹು ಶ್ರಮದಿಂದ ಕಟ್ಟಿದ ಮತ್ತು ಈಗ ಮಾಯಾವತಿಯವರು ಅಧ್ಯಕ್ಷರಾಗಿರುವ ಪಕ್ಷವದು.ಅಂಬೇಡ್ಕರ್ ಮತ್ತು ಅವರ ವಿಚಾರಗಳ ಆಧಾರದ ಮೇಲೆ ಈ ಪಕ್ಷ ಹೋರಾಟ ಮಾಡುತ್ತಿದೆ ಎಂಬುದು ಅದರ ಅನುಯಾಯಿಗಳ ಸಮರ್ಥನೆ ಮತ್ತು ಮೂಲ ಆಶಯ.
ಹಾಗಾದರೆ ಇದು ವಾಸ್ತವವೇ ?
ಅದರ ಒಟ್ಟು ಇತಿಹಾಸದ ರಾಜಕೀಯ ನಡೆಗಳನ್ನು ಗಮನಿಸಿದಾಗ ನಮ್ಮ ಕರ್ನಾಟಕದ ಜನತಾದಳ ಪಕ್ಷದಂತೆ ಬಹುತೇಕ ಅಧಿಕಾರದ ಲಾಭ ನಷ್ಟಗಳನ್ನು ನೋಡಿಕೊಂಡು ಎಲ್ಲಾ ಕಡೆಯೂ ಸಲ್ಲುವ ಅನುಕೂಲಕರ ನಿರ್ಧಾರಗಳನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ.
ತನ್ನ ಸಿದ್ದಾಂತಗಳಿಗೆ ವಿರುದ್ಧ ನಿಲುವಿನ ಬಿಜೆಪಿಯ ಜೊತೆಗೂ, ತನ್ನ ಮೇಲೆ ಹಲ್ಲೆ ಮಾಡಿದ ಪ್ರಬಲ ಯಾದವ ಜಾತಿಯ ಸಮಾಜವಾದಿ ಪಕ್ಷದ ಜೊತೆಗೂ, ಕೆಲವು ಕಡೆ ತಾವು ವಿರೋಧಿಸುವ ಗಾಂಧಿ ತತ್ವದ ನೆಲೆಯ ಕಾಂಗ್ರೆಸ್ ಪಕ್ಷದ ಜೊತೆಯೂ ಸೇರುತ್ತಾರೆ.
ಅಂದರೆ ಅಂಬೇಡ್ಕರ್ ಶೋಷಿತರ ಜಾಗೃತಿಗಾಗಿ ಘೋಷಿಸಿದ ಶಿಕ್ಷಣ ಸಂಘಟನೆ ಹೋರಾಟ ಎಂಬ ತ್ರಿವಳಿ ಸಂದೇಶಕ್ಕೆ ಎಲ್ಲವೂ ಅಧಿಕಾರಕ್ಕಾಗಿ ಎಂಬುದನ್ನು ಹೊಸದಾಗಿ ಸೇರ್ಪಡೆಯಾದಂತೆ ಆಗುತ್ತದೆ. ಅಂಬೇಡ್ಕರ್ ರಾಜಕೀಯ ಅಧಿಕಾರದ ಪ್ರಾಮುಖ್ಯತೆ ಬಗ್ಗೆ ಖಂಡಿತ ಹೇಳಿದ್ದಾರೆ. ಅದರ ಜೊತೆಗೆ ಮಾರ್ಗವೂ ಮುಖ್ಯವಾಗಬೇಕಾಗುತ್ತದೆ.
ವಿಶಾಲ ತಳಹದಿಯ ಮೇಲೆ ಒಂದು ಪಕ್ಷ ಮತ್ತು ಸಂಘಟನೆ ದೊಡ್ಡದಾಗಿ ಬೆಳೆಯಬೇಕಾದರೆ ದೀರ್ಘಕಾಲದಲ್ಲಿ ಹೇಗೆಂದರೆ ಹಾಗೆ ತತ್ ಕ್ಷಣದ ಲಾಭವನ್ನು ನೋಡಬಾರದು. ಒಂದು ಪಕ್ಷದ ಕಾರ್ಯಕರ್ತರಲ್ಲಿ ಮತ್ತು ಸಾರ್ವಜನಿಕರಲ್ಲಿ ಕೂಡ ಆ ಪಕ್ಷದ ಬಗ್ಗೆ ಅದರ ನ್ಯಾಯ ನೀತಿ ಧರ್ಮದ ಬಗ್ಗೆ ಸಹಜ ಗೌರವ ಮೂಡುವಂತಿರಬೇಕು. ಅದರಲ್ಲಿ ಬಿಎಸ್ಪಿ ವಿಫಲವಾಗಿದೆ ಎಂದು ಹೇಳಬಹುದು.
ಮಾಯಾವತಿ ಹೊರತುಪಡಿಸಿ ಮತ್ತೊಂದಿಷ್ಟು ನಾಯಕರಗಳನ್ನು ಅವರ ಮಟ್ಟಕ್ಕೆ ಬೆಳೆಸಲು ಪ್ರಯತ್ನಿಸಲಿಲ್ಲ ಅಥವಾ ಉದ್ದೇಶಪೂರ್ವಕವಾಗಿಯೇ ನಿರ್ಲಕ್ಷಿಸಿದಂತೆ ಕಾಣುತ್ತದೆ . ಅಂಬೇಡ್ಕರ್ ವಾದದ ಹಿನ್ನೆಲೆಯ ಅನೇಕ ಯುವ ಮತ್ತು ಅನುಭವಿ ಸಂಘಟಕರನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸದೆ ಪರ್ಯಾಯ ನಾಯಕತ್ವದ ಅಸೂಯೆಯಿಂದ ಅವರಿಗೆ ಪ್ರೋತ್ಸಾಹ ನೀಡಲಿಲ್ಲ.
ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು ಸಿದ್ಧವಾಗುತ್ತಿರುವಾಗಲೇ ರಾಜಕೀಯ ಪ್ರವೇಶಿಸಿದ ವಿದ್ಯಾವಂತೆ ಮತ್ತು ಬುದ್ದಿವಂತೆಯಾದ ಮಾಯಾವತಿಯರ ಬಹುದೊಡ್ಡ ಸಮಸ್ಯೆ ಸರ್ವಾಧಿಕಾರಿ ಮನೋಭಾವ, ಅಧಿಕಾರ ಲಾಲಸೆ ಮತ್ತು ಹೊಂದಾಣಿಕೆಯ ಮನೋಭಾವದ ಕೊರತೆ. ಜೊತೆಗೆ ಆಡಳಿತಾತ್ಮಕ ದಕ್ಷತೆಯೂ ಕಡಿಮೆ.
ಸರಿಯೋ ತಪ್ಪೋ ಆದರೆ ಜನರ ಬೆಂಬಲವನ್ನು ನಿರಂತರವಾಗಿ ಗಳಿಸಿದ ದೆಹಲಿಯ ಶೀಲಾ ದೀಕ್ಷಿತ್, ಪಶ್ಚಿಮ ಬಂಗಾಳದ ಜ್ಯೋತಿ ಬಸು, ಗುಜರಾತಿನ ನರೇಂದ್ರ ಮೋದಿ, ಒರಿಸ್ಸಾದ ನವೀನ್ ಪಾಟ್ನಾಯಕ್ ಮುಂತಾದವರ ಸಾಲಿನಲ್ಲಿ ನಿಲ್ಲುವ ಪ್ರಯತ್ನ ಮಾಡಲಿಲ್ಲ.
ಅಧಿಕಾರಕ್ಕೆ ಏರುವುದು ಒಂದು ಸಾಧನೆಯಾದರೆ ಅದನ್ನು ನಿರಂತರವಾಗಿ ಉಳಿಸಿಕೊಳ್ಳುವುದು ಸಹ ಮುಖ್ಯವಾಗುತ್ತದೆ. ಅದರಲ್ಲೂ ಒಬ್ಬ ದಲಿತ ಹೆಣ್ಣು ಮಗಳು ತಮಗೆ ಸಿಕ್ಕಿದ ಅಪರೂಪದ ಅವಕಾಶವನ್ನು ಇನ್ನಷ್ಟು ಜನರಿಗೆ ಹತ್ತಿರವಾಗುವ ರೀತಿ ಬಳಸಬಹುದಿತ್ತು.ಹೌದು, ಅದಕ್ಕೆ ಹಲವಾರು ಕಾರಣಗಳು ಇರಬಹುದು. ಆದರೆ ಜನರಿಗೆ ಅನುಕೂಲಕರ ಕೆಲಸ ಮಾಡುವಾಗ ಖಂಡಿತ ಜನರಿಂದ ಪ್ರೋತ್ಸಾಹ ಸಿಕ್ಕೇ ಸಿಗುತ್ತದೆ.
ನಮ್ಮ ಜನರ ಮನಸ್ಥಿತಿ ಹೇಗಿದೆ ಎಂದರೆ, ನೀವು ಸಾರ್ವಜನಿಕವಾಗಿ ಒಳ್ಳೆಯ ಉದ್ದೇಶಕ್ಕೇ ಆದರೂ ಸ್ವಲ್ಪ ಕೆಟ್ಟ ಅಥವಾ ತಪ್ಪು ನಿರ್ಧಾರ ಕೈಗೊಂಡರೇ ಜನ ಅದನ್ನೇ ಉದಾಹರಣೆಯಾಗಿ ತೆಗೆದುಕೊಂಡು ತಮ್ಮ ವೈಯಕ್ತಿಕ ಸ್ವಾರ್ಥ ಸಾಧನೆಗೆ ಇದನ್ನೇ ನಿದರ್ಶನವಾಗಿ ಉಪಯೋಗಿಸಿಕೊಳ್ಳುತ್ತಾರೆ.
ಇದೇ ಬಹುಮುಖ್ಯವಾಗಿ ಇಂದು ಅಂಬೇಡ್ಕರ್ ವಾದದ ಬಹುಜನ ಚೆಲ್ಲಾಪಿಲ್ಲಿಯಾಗಿ ಒಂದೊಂದು ಪಕ್ಷ ಅಥವಾ ಸಂಘಟನೆಯ ದಾರಿ ಹಿಡಿದಿದ್ದಾರೆ. ಸಹಜವಾಗಿ ಅದರ ವಿರೋಧಿಗಳು ಇದರ ಲಾಭ ಪಡೆಯುತ್ತಿದ್ದಾರೆ. ಬಹುಜನರ ಪಕ್ಷ ಆಂತರಿಕವಾಗಿಯೂ ಬಹುಜನರ ಪಕ್ಷವಾಗೇ ಇರಬೇಕೆ ಹೊರತು ಹೆಸರಿಗೆ ಮಾತ್ರ ಇದ್ದು ಸಂಘಟನೆಯಲ್ಲಿ ನೆಪ ಮಾತ್ರದ ನಡವಳಿಕೆ ಇದ್ದರೆ ಖಂಡಿತ ಬಹುಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ.
ಜೊತೆಗೆ ಹೋರಾಟ ಸಿದ್ದಾಂತಗಳೊಂದಿಗೆ ಆಡಳಿತಾತ್ಮಕ ದಕ್ಷತೆ ಸಹ ಮುಖ್ಯವಾಗುತ್ತದೆ. ಅಧಿಕಾರಕ್ಕೆ ಬರುವವರೆಗೂ ಚಳವಳಿ ಮುಖ್ಯ. ಬಂದ ನಂತರ ಆಡಳಿತ ಮಾಡುವುದು ಅತಿಮುಖ್ಯ ಇಲ್ಲದಿದ್ದರೆ ಜನ ಬಹುಬೇಗ ನಿರಾಸೆಗೊಳಗಾಗಿ ಪಕ್ಷ ತಿರಸ್ಕರಿಸಲ್ಪಡುತ್ತದೆ. ಆಗ ಪಕ್ಷ ಬೆಳೆಸಲು ಅಡ್ಡ ದಾರಿ ಹಿಡಿಯುವ ಅವಶ್ಯಕತೆ ಬರುತ್ತದೆ. ಅದು ಒಂದು ಸಿದ್ಧಾಂತದ ಅವಸಾನಕ್ಕೆ ದಾರಿ ಮಾಡಿಕೊಡುತ್ತದೆ.
ಬಹುಶಃ ಇಂದು ಕವಲು ದಾರಿಯಲ್ಲಿ ಸಾಗುತ್ತಿರುವ ಬಹುಜನ ಸಮಾಜ ಪಕ್ಷದ ಆತ್ಮಾವಲೋಕನಕ್ಕೆ ಇದು ಸರಿಯಾದ ಸಮಯವೆಂದು ಭಾವಿಸಬಹುದು.ಯಾವುದೇ ವ್ಯಕ್ತಿ ಪಕ್ಷ ಸಂಘಟನೆ ಸಿದ್ಧಾಂತ ಸಾಮಾಜಿಕ ಮೌಲ್ಯಗಳನ್ನು ಸದಾ ಪ್ರತಿನಿಧಿಸುವಂತಿರಬೇಕು. ಅದರ ಸ್ವಾರ್ಥದ ನಡೆಯನ್ನು ಜನ ಗಮನಿಸುತ್ತಿರುತ್ತಾರೆ. ಅಧಿಕಾರವೇ ಎಲ್ಲವೂ ಅಲ್ಲ. ಅದರಲ್ಲೂ ಶೋಷಿತ ಸಮುದಾಯಗಳ ಒಂದು ಪಕ್ಷ ಅತ್ಯಂತ ಶುದ್ದ ಪ್ರಾಮಾಣಿಕ ದೂರದೃಷ್ಟಿಯ ನಿಲುವುಗಳನ್ನು ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಪರ್ಯಾಯ ವ್ಯವಸ್ಥೆ ಇರುವುದಕ್ಕಿಂತ ಮತ್ತಷ್ಟು ಉತ್ತಮವಾಗಬೇಕು. ದೇಶದ ಸಮಗ್ರ ಅಭಿವೃದ್ಧಿಗೆ ಇದು ಬಹಳ ಮುಖ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ6 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ5 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

