ರಾಜಕೀಯ
ವಿದ್ಯಾವಂತರಾದ ನಾವು ಬಹುಜನ ಚಳವಳಿಗೆ ಮಾಡುತ್ತಿರುವುದಾದರೂ ಏನು?

ಮಾನ್ಯ ಚಾಮರಾಜನಗರ ಲೋಕಸಭಾ ವ್ಯಾಪ್ತಿಯ ಬಂಧುಗಳೇ ಇತ್ತೀಚಿನ ವರದಿಯಂತೆ ಕರ್ನಾಟಕ ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷದ ಬಲವರ್ಧನೆಯು ಸಮೃದ್ಧವಾಗಿದೆ. ಈ ನಿಟ್ಟಿನಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಆನೆ ಸದ್ದಿಲ್ಲದೆ ಘೀಳಿಟ್ಟಿದೆ.
ಈ ಚುನಾವಣೆಯಲ್ಲಿ ಆನೆಯ ಮೇಲೆ ರಾಜ್ಯಧಿಕಾರವನ್ನು ಏರಲು ಮುನ್ನುಗುತ್ತಿರುವವರು ಯುವಕರ ಕಣ್ಮಣಿ, ನಾಡಿನ ಖ್ಯಾತ ಹೆಸರಾಂತ ಕನ್ನಡ ವಿದ್ವಾಂಸರು, ಪ್ರಗತಿಪರ ಚಿಂತಕರು ಹಾಗು ಎರಡನೇ ತಲೆಮಾರಿನ ಫುಲೆ-ಅಂಬೇಡ್ಕರ್ವಾದವನ್ನು ನಾಡಿನಾದ್ಯಂತ ಪಸರಿಸುತ್ತಿರುವ ಡಾ. ಶಿವಕುಮಾರರವರು. ಇವರು ಬಹುಜನ ಸಮಾಜ ಪಾರ್ಟಿ ಚಾಮರಾಜನಗರ ಲೋಕಸಬಾ ಕ್ಷೇತ್ರ (ಮೀಸಲು)ದಿಂದ ಸ್ಪರ್ಧಿಸಿದ್ದಾರೆ. ನಾಡಿನಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ಇವರು ೨೦೧೯ರ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಮುನ್ನುಗುತ್ತಿದ್ದಾರೆ. ಕ್ಷೇತ್ರದ ಎಲ್ಲಾ ಧರ್ಮಿಯ, ಜಾತಿಯ ಜನರು ಕಾಂಗ್ರೆಸ್, ಬಿಜೆಪಿ ಆಡಳಿತದಿಂದ ಬೇಸತ್ತು ಹೊಸ ಮುಖದತ್ತ ಒಲವು ತೋರುತ್ತಿದ್ದಾರೆ.ಈ ಸಮಯದಲ್ಲಿ ಬಹುಜನ ಚಳವಳಿಯ ಯುವಕರು, ನೌಕರರರು ಪ್ರಗತಿಪರರು ಡಾ. ಶಿವಕುಮಾರರವರನ್ನು ತಮ್ಮ ತನು-ಮನ-ಧನವನ್ನು ಉದಾರ ಮನೋಭಾವದಿಂದ ಅರ್ಪಿಸಿ ಇವರ ಬೆನ್ನೆಲುಬಾಗಿ ನಿಲ್ಲಬೇಕಿದೆ.
ಬಂಧುಗಳೇ ನಾವೆಲ್ಲ ಒಂದಲ್ಲ ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ಕಳೆದ 20 ವರ್ಷಗಳಿಂದ ಚಳವಳಿಯ ಒಂದು ಭಾಗವಾಗಿ ಸೇವೆ ಸಲ್ಲಿಸುತ್ತಿದ್ದೇವೆ. ಲಕ್ಷಾಂತರ ವಿದ್ಯಾರ್ಥಿಗಳು ಸಾವಿರಾರು ನೌಕರರು, ಕೆಲವು ಜನಪ್ರತಿನಿಧಿಗಳು, ಕಲಾವಿದರು ಚಳವಳಿಯಿಂದ ಸೃಷ್ಠಿಯಾಗಿದ್ದಾರೆ. ನಾವೆಲ್ಲರೂ ಸೇರಿ ವರ್ಷಪೂರ್ತಿ ಚಳವಳಿಯ ರಥವನ್ನು ಎಳೆದು ಚುನಾವಣೆಗಳು ಬಂದಾಗ ಎಷ್ಟು ಜನರು ನಿಷ್ಕ್ರೀಯರಾಗುವುದು ಅಥವ ಕೆಲಸವನ್ನು ಚುರುಕುಗೊಳಿಸದಿರುವುದು ಅಥವ ತಮ್ಮ ತಮ್ಮ ಬೂತುಗಳಲ್ಲಿ ಮತಬ್ಯಾಂಕ್ ಭದ್ರಪಡಿಸದಿರುವುದು ನಾನಾ ಕಾರಣಗಳಿಂದ ರಾಜಕಾರಣ ಮಾಡದಿರುವ ಕಾರಣ ಗಾಂಧಿವಾದಿ ಕಾಂಗ್ರೆಸ್, ಕೋಮುವಾದಿ ಬಿಜೆಪಿ, ಬಂಡವಾಳಶಾಹಿ ಜೆ.ಡಿ.ಎಸ್ ಪಕ್ಷಗಳು ದೇಶದಲ್ಲಿ ರಾರಾಜಿಸುತ್ತಿವೆ. ಇಂತಹ ಸಂಧಿಗ್ಧ ಪರಿಸ್ಥಿತಿಯಲ್ಲಿ ಚುನಾವಣೆ ಫಲಿತಾಂಶ ಕಾಣುವವರೆಗೂ ಮೈಮರೆಯದೆ ಕೆಲಸ ಮಾಡಬೇಕಿದೆ.
ಮತ್ತೊಂದು ವಿಷಯವನ್ನು ತಮ್ಮ ಗಮನಕ್ಕೆ ತಿಳಿಯಪಡಿಸಿಸುವುದೇನೆಂದರೆ ಈ 5 ವರ್ಷಗಳ ಅವಧಿಯಲ್ಲಿ ಶೈಕ್ಷಣಿಕ ವಲಯದಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಹೆಚ್ಚಾಗಿ ಪ್ರಶ್ನಿಸುತ್ತಿರುವವರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗು ವಿದ್ಯಾರ್ಥಿ ಸಂಘಟನೆಗಳು. ಉದಾಹರಣೆಗೆ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ, ದಲಿತ ಹೆಣ್ಣು ಮಕ್ಕಳಾದ ದಾನಮ್ಮ ಪ್ರಕರಣ, ಅನಿತಾಳ ಆತ್ಮಹತ್ಯೆ ಪ್ರಕರಣ, ಎಸ್.ಸಿ/ಎಸ್.ಟಿ ತಿದ್ದುಪಡಿ ವಿಧೇಯಕ, ಊನಾ ದೌರ್ಜನ್ಯ ಪ್ರಕರಣ, ಮುಸ್ಲಿಂ ವಿದ್ಯಾರ್ಥಿ ನಜೀಬ್ ನಾಪತ್ತೆ, ಬ್ಯಾಕ್ಲಾಗ್ ಭರ್ತಿ ಮಾಡಿ, ನಿರುದ್ಯೋಗ ನಿವಾರಿಸಿ ಎಂಬ ಹೋರಾಟ, ಆರ್.ಎಸ್.ಎಸ್ ಬಂಧುತ್ವದ ವಿರೋಧಧ ಹೋರಾಟ, ಸಂಶೋಧನಾ ವಿದ್ಯಾರ್ಥಿಗಳ ಫೆಲೋಷಿಪ್ ಗಾಗಿ, ಕೆಲವು ಸಚಿವರನ್ನು ವಜಾಗೊಳಿಸಿದಾಗ ಅವರ ಪರವಾಗಿ ಬೀದಿಗಿಳಿದಿದ್ದು, ಸಂವಿಧಾನವನ್ನು ಬದಲಾಯಿಸಬೇಕೆಂದಾಗ ಪ್ರಜಾಪ್ರಭುತ್ವವಾದಿಗಳಿಗೆ ಅಪ್ಪ-ಅಮ್ಮ ಇಲ್ಲ ಎಂದು ಚೀಡಿಸಿದಾಗ ಹೋರಾಟ ರೂಪಿಸಿದ್ದು, ಇಂತಹ ೧೦ ಹಲವು ಹೋರಾಟಗಳನ್ನು ವಿದ್ಯಾವಂತರಾದ ನಾವು ರೂಪಿಸಿದ್ದು ಯಾರ ವಿರುದ್ಧ? ಯಾವ ಸರ್ಕಾರದ ವಿರುದ್ಧ?
ವಿದ್ಯಾವಂತ ಬಂಧುಗಳೇ ದಯಮಾಡಿ ಒಮ್ಮೆ ಸೂಕ್ಷ್ಮಮತಿಯರಾಗಿ ಯೋಚಿಸಿ. ಇಂತಹ ಸಾವಿರಾರು ಹೋರಾಟಗಳನ್ನು ಮಾಡಿದ್ದು ಕೇಂದ್ರದ ಬಿಜೆಪಿ ಮತ್ತು ರಾಜ್ಯ ಕಾಂಗ್ರೆಸ್ ಮತ್ತು ಜೆ.ಡಿಎಸ್ ಸರ್ಕಾರದ ವಿರುದ್ಧವಲ್ಲವೇ? ಜಾಗೃತರಾಗಿ. ದಾದಾಸಾಹೇಬ್ ಕಾನ್ಷಿರಾಮ್ಜೀ ಹೇಳುವ ಹಾಗೆ ಅನ್ಯಾಯ, ದೌರ್ಜನ್ಯ-ದಬ್ಬಾಳಿಕೆಗಳು ಆಳುವ ವರ್ಗದ ಮೇಲೆ ನಡೆಯುವುದಿಲ್ಲ. ಬದಲಾಗಿ ಗುಲಾಮರ ಮೇಲೆ ನಡೆಯುತ್ತಿದೆ. ಈ ಮಾತು ಈ ಸಂದರ್ಭದಲ್ಲಿ ನಾವು ನೆನೆಯಬೇಕಲ್ಲವೇ? ನಾವೆಲ್ಲ ಇಷ್ಟೊಂದು ದೊಡ್ಡ ಪ್ರತಿಭಟನೆ, ಹೋರಾಟ, ಉಪವಾಸಗಳನ್ನು 5 ವರ್ಷಗಳ ಕಾಲ ಕಾಂಗ್ರೆಸ್ ಬಿಜೆಪಿ ಸರ್ಕಾರಗಳ ವಿರುದ್ಧ ತೊಡೆ ತಟ್ಟಿ ನಿಂತು ನಮ್ಮಗಳ ಬುದ್ಧಿಶಕ್ತಿಯನ್ನು ವರ್ಷವಿಡಿ ಇಂತಹ ಹೋರಾಟಗಳಿಗೆ ವ್ಯಯಿಸಿ, ಚುನಾವಣೆ ಇನ್ನೂ (ಏಪ್ರಿಲ್) ಒಂದು ತಿಂಗಳು ಇದ್ದು, ಈ ಸಮಯದಲ್ಲಿ ಕಾಂಗ್ರೆಸ್-ಬಿಜೆಪಿಯ ಪರವಾಗಿ ಕೆಲಸ ಮಾಡುವುದು ನ್ಯಾಯವೇ? ಇದು ಅನ್ಯಾಯವಲ್ಲದೇ ಮತ್ತೇನು? ಮಾನ್ಯ ಶೈಕ್ಷಣಿಕ ಮಿತ್ರರೇ ನಮ್ಮಗಳ ವಿರೋಧಾಭಾಸವನ್ನು ಕಾಂಗ್ರೆಸ್ ಬಿಜೆಪಿ ಮಿತ್ರರಿಗೆ ತಿಳಿಸಿ ಜಾಗೃತಗೊಳಿಸಿ ಅವರೆಲ್ಲರನ್ನು ಬಾಬಾಸಾಹೇಬ್ ಅಂಬೇಡ್ಕರ್ರವರ ಚಳವಳಿಯ ರಥದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾದ ಡಾ.ಶಿವಕುಮಾರರವರನ್ನು ಜಯಶೀಲರನ್ನಾಗಿಸುವುದು ನಮ್ಮ ನಿಮ್ಮೇಲರ ಆದ್ಯ ಕರ್ತವ್ಯವವಲ್ಲವೇ? ಚಿಂತಿಸಿ.
ಜೈ ಭೀಮ್ ಜೈ ಭಾರತ್
–ಡಾ. ನವೀನ್ ಮೌರ್ಯ
ಸಂಶೋಧಕರು, ಮೈಸೂರು ವಿಶ್ವವಿದ್ಯಾನಿಲಯ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.
ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್ಟಿ ಮೊತ್ತ ಎಷ್ಟು ಗೊತ್ತಾ?!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್ಟಿ ಆದಾಯ ಸಂಗ್ರಹವಾಗಿದೆ.
35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್ಟಿ, 83ಸಾವಿರದ 251 ಕೋಟಿ ರೂಪಾಯಿ ಸಮಗ್ರ ಸರಕು ಮತ್ತು ಸೇವಾ ತೆರಿಗೆ ಇದು ಒಳಗೊಂಡಿದೆ. 37 ಸಾವಿರದ 581 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆಗೆ ಹಾಗೂ 31 ಸಾವಿರದ 408ಕೋಟಿ ರೂಪಾಯಿಗಳನ್ನು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಯಿಂದ ರಾಜ್ಯ ಸರಕು ಮತ್ತು ಸೇವಾ ತೆರಿಗೆಗೆ ಸರ್ಕಾರ ಇತ್ಯರ್ಥ ಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ3 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ1 day ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ