ದಿನದ ಸುದ್ದಿ
BTV ನಿರೂಪಕಿಯಿಂದ ‘ಶಿಳ್ಳೇಕ್ಯಾತ’ ಪದಬಳಕೆಗೆ ಶಿಳ್ಳೆಕ್ಯಾತ ರಾಜ್ಯ ನಾಯಕರ ವಿರೋಧ

ಸುದ್ದಿದಿನ ಡೆಸ್ಕ್ : ಕನ್ನಡ ಸುದ್ದಿ ವಾಹಿನಿ ‘ಬಿಟಿವಿ ನಿರೂಪಕಿ’ಯಿಂದ ‘ಶಿಳ್ಳೇಕ್ಯಾತ’ ಪದಬಳಕೆಗೆ ಶಿಳ್ಳೆಕ್ಯಾತ ರಾಜ್ಯ ನಾಯಕರು ಭಾರೀ ವಿರೋಧ ವ್ಯಕ್ತ ಪಡಿಸಿದ್ದಾರೆ.
‘ಒಬ್ಬ ತೆಳ್ಳಗಿರುವ, ನಕಲಿ ಪೊಲೀಸ್ ಒಬ್ಬನ ಬಗ್ಗೆ ನೀಡುವ ಸುದ್ದಿಯನ್ನು ಭಿತ್ತರಿಸುವಾಗ BTVಯ ಆ ಆಂಕರ್, “ನೋಡೋಕೆ ಶಿಳ್ಳೆಕ್ಯಾತನಂತಿದ್ರೂ ಥೇಟ್ ಎಸ್ ಐ ವೇಷ ಹಾಕಿಕೊಂಡಿರುವ ಮಹಾಶಯನ ಹೆಸರು…” ಹೀಗೆ ಬರೆದಿರುವ ಸುದ್ದಿಯನ್ನು ಸುದ್ದಿ ನಿರೂಪಕಿ ವಾಚಿಸುತ್ತಾರೆ. “ಹೀಗೆ ಕಳ್ಳರಿಗೆ, ಸಣ್ಣಗೆ ಇರುವವರಿಗೆ, ವಿಕೃತವಾಗಿರುವವರಿಗೆ ಉದಾಹರಣೆಗಳನ್ನು ಕೊಟ್ಟುಕೊಂಡು ಮಾನವೀಯತೆಯಿಂದ ಬದುಕುತ್ತಿರುವ, ಬಹುದೊಡ್ಡ ಇತಿಹಾಸವಿರುವ ತೊಗಲುಗೊಂಬೆ ಆಟದ ನಮ್ಮ ಜನಾಂಗದ ಹೆಸರನ್ನು ಈ ರೀತಿ ಅವಹೇಳನ ಕಾರಿಯಾಗಿ ಬಳಸಿಕೊಳ್ಳುತ್ತಿರುವುದು ಬೇಸರ ತಂದಿದೆ” ಎಂದು ‘ಕರ್ನಾಟಕ ರಾಜ್ಯ ಶಿಳ್ಳೆಕ್ಯಾತ ಜನಾಂಗದ ಅಭಿವೃದ್ಧಿ ವೇದಿಕೆಯ,ರಾಜ್ಯಾಧ್ಯಕ್ಷರಾದ ಡಿ.ಎಚ್.ಮಂಜುನಾಥ್ ಅವರು ‘ಸುದ್ದಿದಿನ’ಕ್ಕೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಕಾನೂನಾತ್ಮಕ ಹೋರಾಟ ಮಾಡುವುದಾಗಿಯೂ ಹೇಳಿದ್ದಾರೆ.
“ಶಿಳ್ಳೆಕ್ಯಾತ ಸಮುದಾಯದ ಬಗ್ಗೆ ಹಿಂದಿನಿಂದಲೂ ಈ ರೀತಿಯಾದಂದತಹ ಅವಮಾನ ನಡೆಯುತ್ತಲೇ ಇದೆ. ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುವವರು ಶಿಕ್ಷಿತರಿದ್ದಾರೆ, ಅವರೂ ಕೂಡ ಪದಗಳನ್ನು ಬಳಸುವಾಗ ಎಚ್ಚರಿಕೆಯಿಂದ ಬಳಸ ಬೇಕಾಗುತ್ತದೆ. ಹಲವು ಸಿನೆಮಾಗಳಲ್ಲಿಯೂ ಶಿಳ್ಳೆಕ್ಯಾತ ಸಮುದಾಯವನ್ನು ಅವಮಾನ ಮಾಡುವಂತಹ ಹಲವು ದೃಶ್ಯಗಳಿವೆ. ಇನ್ನಾದರೂ ಮಾಧ್ಯಮಗಳು ಸಮುದಾಯದ ಹೆಸರುಗಳನ್ನು ಅವಹೇಳನಕಾರಿಯಾಗಿ ಬಳಸಿಕೊಳ್ಳುವುದನ್ನು ಬಿಡಬೇಕು. ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಕಾರ್ಯನಿವರ್ವಗಿಸ ಬೇಕು” ಎಂದು ಹೇಳಿರುವ ‘ಕರ್ನಾಟಕ ರಾಜ್ಯ ಶಿಳ್ಳೆಕ್ಯಾತ ಜನಾಂಗದ ಅಭಿವೃದ್ಧಿ ವೇದಿಕೆಯ,ಉಪಾಧ್ಯಕ್ಷರಾದ ಸುಭಾಷ್ ಚೌಹಾಣ್ ಈ ಸುದ್ದಿಗೆ ಸಂಬಂಧಿಸಿದಂತೆ ರಾಜ್ಯಾದ್ಯಕ್ಷರೊಂದಿಗೆ ಚರ್ಚಿಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬಿತ್ತರಗೊಂಡ ಸುದ್ದಿಯನ್ನು ಡಿಲೀಟ್ ಮಾಡಿರುವ ಬಿಟಿವಿ. (ಕೆಳಗಿನ ಲಿಂಕ್)
https://m.facebook.com/story.php?story_fbid=2402302569800278&id=798350103528874
ಒಟ್ಟಾರೆ ಒಂದು ಸಮುದಾಯ ಹೆಸರನ್ನು ಅವಹೇಳನಕಾರಿಯಾಗಿ ಬಳಸಿಕೊಳ್ಳುವಾಗ ಮಾಧ್ಯಮಗಳು ಎಚ್ಚರ ವಹಿಸಿಬೇಕಿದೆ.
ಈ ಸುದ್ದಿಗೆ ಸಂಬಂಧಿಸಿದಂತೆ ಪತ್ರಕರ್ತ ಹರ್ಷ ಕುಮಾರ್ ಕುಗ್ವೆ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಖಂಡಿಸಿ ಹೀಗೆ ಬರೆದಿದ್ದಾರೆ.
https://m.facebook.com/story.php?story_fbid=10213177497064147&id=1596920893
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ5 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ4 days ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ