ದಿನದ ಸುದ್ದಿ
BTV ನಿರೂಪಕಿಯಿಂದ ‘ಶಿಳ್ಳೇಕ್ಯಾತ’ ಪದಬಳಕೆಗೆ ಶಿಳ್ಳೆಕ್ಯಾತ ರಾಜ್ಯ ನಾಯಕರ ವಿರೋಧ
![](https://suddidina.com/wp-content/uploads/2019/01/Btvkannada-suddidina88.jpg)
ಸುದ್ದಿದಿನ ಡೆಸ್ಕ್ : ಕನ್ನಡ ಸುದ್ದಿ ವಾಹಿನಿ ‘ಬಿಟಿವಿ ನಿರೂಪಕಿ’ಯಿಂದ ‘ಶಿಳ್ಳೇಕ್ಯಾತ’ ಪದಬಳಕೆಗೆ ಶಿಳ್ಳೆಕ್ಯಾತ ರಾಜ್ಯ ನಾಯಕರು ಭಾರೀ ವಿರೋಧ ವ್ಯಕ್ತ ಪಡಿಸಿದ್ದಾರೆ.
‘ಒಬ್ಬ ತೆಳ್ಳಗಿರುವ, ನಕಲಿ ಪೊಲೀಸ್ ಒಬ್ಬನ ಬಗ್ಗೆ ನೀಡುವ ಸುದ್ದಿಯನ್ನು ಭಿತ್ತರಿಸುವಾಗ BTVಯ ಆ ಆಂಕರ್, “ನೋಡೋಕೆ ಶಿಳ್ಳೆಕ್ಯಾತನಂತಿದ್ರೂ ಥೇಟ್ ಎಸ್ ಐ ವೇಷ ಹಾಕಿಕೊಂಡಿರುವ ಮಹಾಶಯನ ಹೆಸರು…” ಹೀಗೆ ಬರೆದಿರುವ ಸುದ್ದಿಯನ್ನು ಸುದ್ದಿ ನಿರೂಪಕಿ ವಾಚಿಸುತ್ತಾರೆ. “ಹೀಗೆ ಕಳ್ಳರಿಗೆ, ಸಣ್ಣಗೆ ಇರುವವರಿಗೆ, ವಿಕೃತವಾಗಿರುವವರಿಗೆ ಉದಾಹರಣೆಗಳನ್ನು ಕೊಟ್ಟುಕೊಂಡು ಮಾನವೀಯತೆಯಿಂದ ಬದುಕುತ್ತಿರುವ, ಬಹುದೊಡ್ಡ ಇತಿಹಾಸವಿರುವ ತೊಗಲುಗೊಂಬೆ ಆಟದ ನಮ್ಮ ಜನಾಂಗದ ಹೆಸರನ್ನು ಈ ರೀತಿ ಅವಹೇಳನ ಕಾರಿಯಾಗಿ ಬಳಸಿಕೊಳ್ಳುತ್ತಿರುವುದು ಬೇಸರ ತಂದಿದೆ” ಎಂದು ‘ಕರ್ನಾಟಕ ರಾಜ್ಯ ಶಿಳ್ಳೆಕ್ಯಾತ ಜನಾಂಗದ ಅಭಿವೃದ್ಧಿ ವೇದಿಕೆಯ,ರಾಜ್ಯಾಧ್ಯಕ್ಷರಾದ ಡಿ.ಎಚ್.ಮಂಜುನಾಥ್ ಅವರು ‘ಸುದ್ದಿದಿನ’ಕ್ಕೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಕಾನೂನಾತ್ಮಕ ಹೋರಾಟ ಮಾಡುವುದಾಗಿಯೂ ಹೇಳಿದ್ದಾರೆ.
“ಶಿಳ್ಳೆಕ್ಯಾತ ಸಮುದಾಯದ ಬಗ್ಗೆ ಹಿಂದಿನಿಂದಲೂ ಈ ರೀತಿಯಾದಂದತಹ ಅವಮಾನ ನಡೆಯುತ್ತಲೇ ಇದೆ. ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುವವರು ಶಿಕ್ಷಿತರಿದ್ದಾರೆ, ಅವರೂ ಕೂಡ ಪದಗಳನ್ನು ಬಳಸುವಾಗ ಎಚ್ಚರಿಕೆಯಿಂದ ಬಳಸ ಬೇಕಾಗುತ್ತದೆ. ಹಲವು ಸಿನೆಮಾಗಳಲ್ಲಿಯೂ ಶಿಳ್ಳೆಕ್ಯಾತ ಸಮುದಾಯವನ್ನು ಅವಮಾನ ಮಾಡುವಂತಹ ಹಲವು ದೃಶ್ಯಗಳಿವೆ. ಇನ್ನಾದರೂ ಮಾಧ್ಯಮಗಳು ಸಮುದಾಯದ ಹೆಸರುಗಳನ್ನು ಅವಹೇಳನಕಾರಿಯಾಗಿ ಬಳಸಿಕೊಳ್ಳುವುದನ್ನು ಬಿಡಬೇಕು. ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಕಾರ್ಯನಿವರ್ವಗಿಸ ಬೇಕು” ಎಂದು ಹೇಳಿರುವ ‘ಕರ್ನಾಟಕ ರಾಜ್ಯ ಶಿಳ್ಳೆಕ್ಯಾತ ಜನಾಂಗದ ಅಭಿವೃದ್ಧಿ ವೇದಿಕೆಯ,ಉಪಾಧ್ಯಕ್ಷರಾದ ಸುಭಾಷ್ ಚೌಹಾಣ್ ಈ ಸುದ್ದಿಗೆ ಸಂಬಂಧಿಸಿದಂತೆ ರಾಜ್ಯಾದ್ಯಕ್ಷರೊಂದಿಗೆ ಚರ್ಚಿಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬಿತ್ತರಗೊಂಡ ಸುದ್ದಿಯನ್ನು ಡಿಲೀಟ್ ಮಾಡಿರುವ ಬಿಟಿವಿ. (ಕೆಳಗಿನ ಲಿಂಕ್)
https://m.facebook.com/story.php?story_fbid=2402302569800278&id=798350103528874
ಒಟ್ಟಾರೆ ಒಂದು ಸಮುದಾಯ ಹೆಸರನ್ನು ಅವಹೇಳನಕಾರಿಯಾಗಿ ಬಳಸಿಕೊಳ್ಳುವಾಗ ಮಾಧ್ಯಮಗಳು ಎಚ್ಚರ ವಹಿಸಿಬೇಕಿದೆ.
ಈ ಸುದ್ದಿಗೆ ಸಂಬಂಧಿಸಿದಂತೆ ಪತ್ರಕರ್ತ ಹರ್ಷ ಕುಮಾರ್ ಕುಗ್ವೆ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಖಂಡಿಸಿ ಹೀಗೆ ಬರೆದಿದ್ದಾರೆ.
https://m.facebook.com/story.php?story_fbid=10213177497064147&id=1596920893
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!