ರಾಜಕೀಯ
ಬಜೆಟ್ ಮಂಡನೆ | ಸಾಲಮನ್ನಾ ಮಾರ್ಗ ಸೂಚಿಗಳು |ತಪ್ಪದೇ ಓದಿ
ಸುದ್ದಿದಿನ ಡೆಸ್ಕ್ : ಇಂದು (ಜುಲೈ 05) ಮೈತ್ರಿ ಸರ್ಕಾರ ಚೊಚ್ಚಲ ಬಜೆಟ್ ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ರೈತರ ಸಾಲಮನ್ನಾ ಮಾಡಿದ್ದಾರೆ. ಆದರೆ ಈ ಸಾಲಾ ಮನ್ನಾದಲ್ಲಿ ಯಾವ ಸಾಲಾ ಮನ್ನಾ ಆಗುತ್ತದೆ , ಯಾವುದು ಆಗುವುದಿಲ್ಲ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಮನ್ನಾ ಆಗುವ ಸಾಲ
• ರೈತರ ಪ್ರತಿ ಕುಟುಂಬದ ಗರಿಷ್ಠ 2 ಲಕ್ಷ ವರೆಗಿನ ಸುಸ್ತಿ ಸಾಲಮನ್ನಾ ಆಗುತ್ತದೆ.
•2009 ಏಪ್ರಿಲ್ 1 ರ ನಂತರ 2017 ಡಿಸೆಂಬರ್ ಒಳಗಿನ ಬಾಕಿ ಇರುವ ಅವಧಿ ಮೀರಿದ ಬೆಳೆ ಸಾಲ.
• ಪ್ಲಾಂಟೇಷನ್, ತೋಟಗಾರಿಕೆ ಬೆಳೆಗಳಿಗೆ ನೀಡಿದ ಸಾಲ ಒಳಗೊಂಡಿರುತ್ತದೆ.
• ರಾಷ್ಟ್ರೀಕೃತ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಸಹಕಾರ ಕ್ರೆಡಿಟ್ ಸೊಸೈಟ್, ರೈತ ಸೇವಾ ಸಹಕಾರ ಬ್ಯಾಂಕ್, ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಅನ್ವಯ, ರಾಜ್ಯದಲ್ಲಿರುವ ಒಟ್ಟು ಬೆಳೆ ಸಾಲ 55,328 ಕೋಟಿ ರೂ, ಒಟ್ಟು ಸುಸ್ತಿ ಸಾಲಗಳ ಸಂಖ್ಯೆ ಅಂದಾಜು 17.32 ಲಕ್ಷ ,ಸುಸ್ತಿ ಸಾಲದ ಮೊತ್ತ 30,266 ಕೋಟಿ ರೂ
ಚಾಲ್ತಿ ಸಾಲ ಹೊಂದಿರುವ ಸಾಲಗಾರರ ಸಂಖ್ಯೆ 26.67 ಲಕ್ಷ , ರೈತರ 44. 89 ಲಕ್ಷ ಸಾಲದ ಖಾತೆಗಳಿಗೆ 30, 159 ಕೋಟಿ ರೂ ಪ್ರಯೋಜನವಾಗಲಿದೆ.
ಯಾವುದು ಸಾಲ ಮನ್ನಾಗೆ ಒಳಪಡಲ್ಲ
1.ವೈಯಕ್ತಿಕ ರೈತ, ಹಿಂದೂ ಅವಿಭಾಜ್ಯ ಕುಟುಂಬ ಹೊರತು ಪಡಿಸಿ ಕಾನೂನು ಬದ್ಧ ಸಂಸ್ಥೆ.
2.ಆಭರಣ ಅಡಮಾನ ಸಾಲ-(ಚಿನ್ನ ಅಡವಿಟ್ಟು ಪಡೆದ ಸಾಲ).
3.ವಾಹನ ಖರೀದಿಗೆ ತೆಗೆದುಕೊಂಡ ಸಾಲ.
4.ಕೃಷಿ ಉತ್ಪನ್ನಗಳನ್ನು ಅಡವಿಟ್ಟು ಪಡೆದ ಸಾಲ.
5. ಸರ್ಕಾರಿ ನೌಕರರು- ಶಿಕ್ಷಣ ಸಂಸ್ಥೆಗಳ ಉದ್ಯೋಗಿಗಳಿಗೆ ನೀಡಿದ ಸಾಲ.
6.ನಾಲ್ಕು ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿ, ಆದಾಯ ತೆರಿಗೆ ಪಾವತಿ ಮಾಡಿರುವ ರೈತರ ಸಾಲ ಮನ್ನಾ ಇಲ್ಲ.
7.ಸ್ವಸಹಾಯ ಗುಂಪುಗಳು, ಜಂಟಿ ಹೊಣೆಗಾರಿಕೆ ಗುಂಪುಗಳು ಪಡೆದ ಸಾಲ ಮನ್ನ ಇಲ್ಲ.
8.ಪಿಂಚಿಣಿ ಪಡೆಯುತ್ತಿರುವ ನಿವೃತ್ತ ಸರ್ಕಾರಿ ನೌಕರರು ಪಡೆದಿರುವ ಕೃಷಿ ಸಾಲ ಮನ್ನಾ ಇಲ್ಲ .
9.ಗುತ್ತಿಗೆ ಕೃಷಿ ಮಾಡುವ ವ್ಯಕ್ತಿಗಳ ಸಾಲ ಮನ್ನ ಇಲ್ಲ.
10. ಸಕ್ಕರೆ ಕಾರ್ಖಾನೆಗಳಿಂದ ಪಡೆದ ಸಾಲ ಮನ್ನಾ ಇಲ್ಲ.
11.ಮೀನುಗಾರಿಕೆ, ಹೈನುಗಾರಿಕೆ ಸಾಲ ಮನ್ನ ಇಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ.
ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ಮಾಹೆಯಲ್ಲಿ ವಿತರಿಸಲಾಗುವುದು. ಮಾರ್ಚ್ 1 ರಿಂದ ಮಾರ್ಚ್ 31 ರ ವರಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು.
ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಿ ಕ್ರಮಕೈಗೊಳ್ಳಲಾಗುವುದು. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಕೈಗೊಳ್ಳಲಾಗುವುದು.
ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ