ಬಹಿರಂಗ
CAA, NRC, NPR ಭಾರತದ ಎದೆ ಸೀಳುವ ತ್ರಿಶೂಲ : ಮೋದಿ-ಶಾ ಕಾರ್ಖಾನೆಯ ಹತ್ತು ಮಹಾ ಸುಳ್ಳುಗಳು
ಮೋದಿ ಸರಕಾರದ ಭಾರತದ ಎದೆ ಸೀಳುವ ಕ್ರಮಗಳಾದ CAA, NRC, NPR ಕುರಿತುಸಿಪಿಐ(ಎಂ) ಸದ್ಯದಲ್ಲೇ ಪ್ರಕಟಿಸಲಿರುವ ಪುಸ್ತಿಕೆಯ ಸಾರಾಂಶಇಲ್ಲಿದೆ. ಇವುಗಳ ವಿರುದ್ಧತೀವ್ರ ಪ್ರತಿಭಟನೆಯ ನಂತರ ಈ ಕುರಿತು ಮೋದಿ ಸರಕಾರ ಹರಿಯಬಿಟ್ಟಿರುವ ಹತ್ತು ಮಹಾ ಸುಳ್ಳುಗಳನ್ನು ಬಯಲು ಮಾಡಿ ಸತ್ಯ ಸಂಗತಿಯನ್ನುಈ ಪುಸ್ತಿಕೆಯಲ್ಲಿ ವಿವರಿಸಲಾಗಿದೆ. ಇಲ್ಲಿ ಹತ್ತು ಮಹಾ ಸುಳ್ಳುಗಳು ಮತ್ತುಚುಟುಕಾದ ಉತ್ತರವಿದೆ.
ಮೋದಿ ಸರಕಾರವು ಭಾರತದ ಎದೆಯನ್ನೇ ಸೀಳಲು ಇರಿದಿರುವ ತ್ರಿಶೂಲದ ಮೂರು ಅಲಗುಗಳೆಂದರೆ : ಪೌರತ್ವತಿದ್ದುಪಡಿ ಕಾಯಿದೆ(CAA), ನಾಗರಿಕರ ರಾಷ್ಟ್ರೀಯ ರಿಜಿಸ್ಟರ್(NRC) ಮತ್ತುರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್(NRC). ರಾಷ್ಟ್ರೀಯ ಜನ ಸಂಖ್ಯಾ ರಿಜಿಸ್ಟರ್ (ಎನ್.ಪಿ.ಆರ್) ನ್ನು ಸಮಕಾಲೀನಗೊಳಿಸಲು ತಕ್ಷಣತಯಾರಿ ನಡೆಸಲುಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಸಿಪಿಐ(ಎಂ) ಬಲವಾಗಿ ವಿರೋಧಿಸಿದ ಪೌರತ್ವ ತಿದ್ದುಪಡಿಕಾಯಿದೆ (ಸಿಎಎ) ಮಂಜೂರಾದ ನಂತರ, ಪೌರತ್ವ ಹಕ್ಕುಗಳಿಗೆ ಕೋಮುವಾದಿ ಬಣ್ಣಕೊಡುವ ಚೌಕಟ್ಟು ಸಾಧಿಸುವತ್ತ ಇದು ಎರಡನೇ ಅಪಾಯಕಾರಿ ಹೆಜ್ಜೆ.
ಆಸ್ಸಾಂಒಪ್ಪಂದದಚಾರಿತ್ರಿಕ ಸನ್ನಿವೇಶದಿಂದಾಗಿ ಸಿಎಎ ಮತ್ತುಅದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳಿಂದ ಈಶಾನ್ಯ ಭಾರತದ ಪ್ರದೇಶಗಳನ್ನು ಹೊರಗಿಡಬೇಕೆಂಬುದು ಸಿಪಿಐ(ಎಂ) ನಿಲುವು. ಪೌರತ್ವತಿದ್ದುಪಡಿ ಮಸೂದೆ (ಸಿಎಬಿ) ಗೆ ಇದನ್ನುತಿದ್ದುಪಡಿಯಾಗಿ ಸಿಪಿಐ(ಎಂ) ಸೂಚಿಸಿತ್ತು. ಆದರೆಅದನ್ನು ಸರಕಾರ ತಿರಸ್ಕರಿಸಿದೆ. ಆಸ್ಸಾಂಒಪ್ಪಂದದದಲ್ಲಿ ಪೌರತ್ವಕ್ಕೆ 1971ರ ಗಡುವನ್ನು ನಿಗದಿ ಪಡಿಸಲಾಗಿದೆ. ಅದರ ನಂತರ ಬಂದವರ ನಡುವೆ ಮತಧರ್ಮದಆಧಾರದ ಮೇಲೆ ಯಾವುದೇತಾರತಮ್ಯ ಮಾಡಲಾಗಿಲ್ಲಎಂಬುದು ಗಮನಿಸಬೇಕಾದಅರ್ಥಪೂರ್ಣ ಅಂಶ. ಸಿಎಎ ಆಸ್ಸಾಂಒಪ್ಪಂದದ ನೇರ ಹಲ್ಲೆ ನಡೆಸುತ್ತದೆ ಮತ್ತು “ವಿದೇಶೀಯರ” ಪ್ರಶ್ನೆಗೆ ಕೋಮುವಾದಿ ಆಯಾಮವನ್ನು ಸೇರಿಸುತ್ತದೆ.
ಈಗ ದೇಶದಾದ್ಯಂತ ಭಾರೀ ಪ್ರತಿಭಟನೆಗಳು ವ್ಯಕ್ತವಾಗಿರುವುದರಿಂದ ಮೊದಿ-ಶಾ ಜೋಡಿತಮ್ಮ ಸುಳ್ಳಿನ ಸಾಮೂಹಿಕ ಉತ್ಪಾದನೆಯ ಫ್ಯಾಕ್ಟರಿಗಳನ್ನು ಕೆಲಸಕ್ಕೆ ಹಚ್ಚಿದ್ದಾರೆ. ಹಿಟ್ಲರನಜರ್ಮನಿಯಲ್ಲಿ ನಾಜೀ ಪ್ರಚಾರದ ನೀತಿಯೊಂದನ್ನುಇಲ್ಲಿ ನೆನಪಿಸಿಕೊಳ್ಳಬಹುದು : “ಒಂದು ಸುಳ್ಳನ್ನು ಸಾವಿರ ಬಾರಿ ಹೇಳುತ್ತಾ ಹೋದರೆಅದು ಸತ್ಯವಾಗುತ್ತದೆ”. ಅದೇ ಮೋದಿ ಸರಕಾರದ ನೀತಿ ಸಹ ಆಗಿದೆ. ಆದ್ದರಿಂದ ಈ ಮೋದಿ ಸರಕಾರದ ಪ್ರತಿಯೊಂದು ಸುಳ್ಳನ್ನು ಬಯಲುಪಡಿಸಬೇಕಾಗಿದೆ.ಅವರ ಸುಳ್ಳಿನ ಪಟ್ಟಿ ದಿನೇ ಹೆಚ್ಚುತ್ತಲೇಇದೆ.
ಇಲ್ಲಿಯವರೆಗಿನ ಹತ್ತು ಮಹಾ ಸುಳ್ಳುಗಳು ಹೀಗಿವೆ
ಮಹಾಸುಳ್ಳು 1 : ಸಿಎಎ ಕಾಯಿದೆಯಲ್ಲಿ ತಾರತಮ್ಯವಿಲ್ಲ. ಕಿರುಕುಳಕ್ಕೊಳಗಾದವರ ನೆರವಿಗೆ ಧಾವಿಸುವುದು ಭಾರತದ ಸಂಸ್ಕøತಿ. ಯಾವ ಭಾರತೀಯ ನಾಗರಿಕನಿಗೂ ಇದರಿಂದ ತೊಂದರೆಯಾಗುವುದಿಲ್ಲ.
ಸತ್ಯ ಸಂಗತಿ : ಭಾರತೀಯ ಪೌರತ್ವಕಾಯಿದೆ 1955ರ ಪ್ರಕಾರ ಭಾರತೀಯ ನಾಗರಿಕನಾಗುವಐದು ವಿಧಾನಗಳಲ್ಲಿ (ಹುಟ್ಟಿನಿಂದ, ತಂದೆ-ತಾಯಿ ನಾಗರಿಕತ್ವದಿಂದ, ನೆಲೆಸುವಿಕೆಯಿಂದ, ರಿಜಿಸ್ಟರ್ ಮಾಡುವ ಮೂಲಕ, ಪ್ರದೇಶದ ಸೇರಿಸುವಿಕೆಯಿಂದ) ಮತಧರ್ಮದ ಅಥವಾ ಇನ್ಯಾವುದೇ ಆಧಾರದ ಮೇಲೆ ಯಾವುದೇತಾರತಮ್ಯವಿರಲಿಲ್ಲ. ಇದು ಪೌರತ್ವಕ್ಕೆ ಮತಧರ್ಮ ಸೇರಿದಂತೆಯಾವುದೇ ನೆಲೆಯಲ್ಲಿ ತಾರತಮ್ಯ ಮಾಡದಿರುವ ನಮ್ಮ ಸಂವಿಧಾನದ ಆಶಯಕ್ಕೆ ಅನುಗುಣವಾಗಿದೆ. ಸಿಎಎ ಮೂರು ವಿಧದ ತಾರತಮ್ಯವನ್ನು ಸೇರಿಸಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದೆ. ನೆರೆಯ ದೇಶಗಳಲ್ಲಿ ಮೂರು ದೇಶಗಳ – ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ– ವಲಸೆಗಾರರಿಗೆ ಬೇರೆ ನಿಯಮಗಳನ್ನು ರೂಪಿಸಿದೆ.
ಈ ಮೂರು ದೇಶಗಳ ವಲಸೆಗಾರರಲ್ಲೂ ಮುಸ್ಲಿಮರನ್ನು ಹೊರಗಿಡಲಾಗಿದೆ. ಈ ಮೂರು ದೇಶಗಳ ಮುಸ್ಲಿಮೇತರ ವಲಸೆಗಾರರಿಗೆ ಪೌರತ್ವಕ್ಕೆ ಅರ್ಹತೆಯ ಅವಧಿಯನ್ನು ಇತರರಿಗೆ ಇರುವ 11 ವರ್ಷಗಳಿಂದ 5 ವರ್ಷಕ್ಕೆ ಕಡಿತಗೊಳಿಸಲಾಗಿದೆ. ಕಿರುಕುಳಕ್ಕೊಳಗಾದವರ ಮತ್ತು ನಿರಾಶ್ರಿತರ ನೆರವಿಗೆಧಾವಿಸುವುದು ಸರಿಯಾದ್ದೇ. ಆದರೆಅಲ್ಲೂ ಮತಧರ್ಮ, ದೇಶ, ಭಾಷೆಗಳ ಆಧಾರದಲ್ಲಿ ತಾರತಮ್ಯ ತೋರಲಾಗಿದೆ.
ಶ್ರೀಲಂಕಾದಲ್ಲಿ ಧಾರ್ಮಿಕ, ಭಾಷೆಎರಡೂ ನೆಲೆಗಳಲ್ಲಿ ತಾರತಮ್ಯ ಕಿರುಕುಳ ತಾಳಲಾರದೆ ಭಾರತದಲ್ಲಿ ದಶಕಗಳಿಂದ ನೆಲೆಸಿರುವ ಹತ್ತಾರು ಲಕ್ಷ ತಮಿಳರನ್ನು ಹೊರಗಿಡಲಾಗಿದೆ. ಪಾಕಿಸ್ತಾನದಲ್ಲಿಧಾರ್ಮಿಕ ತಾರತಮ್ಯಕ್ಕೊಳಗಾಗಿರುವ ಶಿಯಾ, ಅಹಮದೀಯ ಮುಂತಾದ ಅಲ್ಪಸಂಖ್ಯಾತರನ್ನೂ, ಮ್ಯಾನ್ಮಾರಿನರೋಹಿಂಗ್ಯ ಮುಸ್ಲಿಮರ ನೆರವಿಗೆಧಾವಿಸದಿರುವುದು ಭಾರತೀಯ ಸಂಸೃತಿಯ ಘನತೆ ಮತ್ತು ಸಂವಿಧಾನದ ಆಶಯ ಎರಡಕ್ಕೂತಕ್ಕುದಲ್ಲ.
ಮಹಾಸುಳ್ಳು 2 : ವಲಸಿಗ ಸಮುದಾಯಗಳನ್ನು ಹಿಂದೆಬೆಂಬಲಿಸಿದ ಕಾಂಗ್ರೆಸ್ ಮತ್ತು ಸಿಪಿಐ(ಎಂ) (20ನೇ ಮಹಾಧಿವೇಶನದ ನಿರ್ಣಯ ಮತ್ತು ಆಗಿನ ಪ್ರಧಾನ ಕಾರ್ಯದರ್ಶಿಯ ಪತ್ರದಲ್ಲಿ ದಾಖಲಿಸಿದಂತೆ) ಪಕ್ಷಗಳು ಈಗ ಮತಬ್ಯಾಂಕ್ ರಾಜಕೀಯದಿಂದಾಗಿ ಈ ತಿದ್ದುಪಡಿಯನ್ನು ವಿರೋಧಿಸುತ್ತಿವೆ.
ಸತ್ಯ ಸಂಗತಿ : ಕಿರುಕುಳಕ್ಕೊಳಗಾದವರಿಗೆ ನಿರಾಶ್ರಿತರಾದವರಿಗೆ ಆಶ್ರಯಕೊಡಬೇಕೆಂಬುದು ಯಾವತ್ತೂ ಕಮ್ಯುನಿಸ್ಟ್, ಎಡ ಚಳುವಳಿಗಳ, ಸಿಪಿಐ(ಎಂ) ಪಕ್ಷದ ನಿಲುವಾಗಿತ್ತು.1947ರ ದೇಶ ವಿಭಜನೆ ಮತ್ತು 1971ರ ಪಾಕಿಸ್ತಾನಿ ಮಿಲಿಟರಿ ಸರಕಾರದ ದೌರ್ಜನ್ಯಗಳ ಬಲಿಪಶುಗಳಾದ ಈಗಿನ ಬಾಂಗಾದೇಶದ ನಿರಾಶ್ರಿತರಿಗೆ ನೆಲೆ ಒದಗಿಸಲು ಪೌರತ್ವ ಕೊಡಲು ಸಿಪಿಐ(ಎಂ)ಹೋರಾಡಿತ್ತು. ಮಾತ್ರವಲ್ಲ ನಿರಾಶ್ರಿತರಾಗಿ ಬಂದು ನೆಲೆಸಿದ ನಾಮಶೂದ್ರರಿಗೆದಲಿತ ಸ್ಥಾನಮಾನವನ್ನೂ ಪಶ್ಚಿಮ ಬಂಗಾಳದಲ್ಲಿ ಒದಗಿಸಿತ್ತು. ಅವರು ನೆಲೆಸಿದ ಇತರ ರಾಜ್ಯಗಳಲ್ಲೂ ಈ ಸ್ಥಾನಮಾನ ಸಿಗುವಂತೆ ಹೋರಾಟ ನಡೆಸಿತ್ತು.
ಆದರೆಯಾವತ್ತೂ ಮತಧರ್ಮದ ಅಥವಾ ಇನ್ಯಾವುದೇ ಆಧಾರದ ಮೇಲೆ ತಾರತಮ್ಯದ ನೀತಿಯನ್ನು ಬೆಂಬಲಿಸಿರಲಿಲ್ಲ. ಸಿಎಬಿ ಗೆ ಸಿಪಿಐ(ಎಂ) ಮಂಡಿಸಿದ ತಿದ್ದುಪಡಿಯಲ್ಲಿ ನಿರಾಶ್ರಿತರಿಗೆ ವಲಸಿಗರಿಗೆ ಆಶ್ರಯಕೊಡುವಲ್ಲಿ ತಾರತಮ್ಯವನ್ನು ತೆಗೆದು ಹಾಕುವ ತಿದ್ದುಪಡಿಗಳನ್ನು ಮಂಡಿಸಿತ್ತು. ಈಗ ಮೊಸಳೆ ಕಣ್ಣೀರು ಹಾಕುವ ಆರೆಸ್ಸೆಸ್ ಆಗ ಬಂಗಾಳದ ನಿರಾಶ್ತಿತರ ಬಗ್ಗೆ ಮೌನವಾಗಿತ್ತು.ಬಿಜೆಪಿ ಆಡಳಿತದ ಯು.ಪಿ, ಉತ್ತರಾಖಂಡ, ಮಧ್ಯಪ್ರದೇಶದ ಬಿಜೆಪಿ ಸರಕಾರಗಳು ನಾಮಶೂದ್ರರಿಗೆ ದಲಿತ ಸ್ಥಾನಮಾನಕೊಡುವುದಕ್ಕೆ ನಿರಾಕರಿಸಿದ್ದವು.
ಮಹಾಸುಳ್ಳು 3 :ಸಿಎಎ (ಪೌರತ್ವತಿದ್ದುಪಡಿಕಾಯಿದೆ) ಗೂ ಎನ್.ಆರ್.ಸಿ.(ನಾಗರಿಕರರಾಷ್ಟ್ರೀಯರಿಜಿಸ್ಟರ್)ಗೂ ಯಾವುದೇ ಸಂಬಂಧವಿಲ್ಲ. ಅವುಗಳು ಪ್ರತ್ಯೇಕವಾದುವುಗಳು. ವಿರೋಧ ಪಕ್ಷಗಳು ಇವೆರಡರ ನಡುವೆತಪ್ಪಾಗಿ ಸಂಬಂಧಕಲ್ಪಿಸುತ್ತಿವೆ.
ಸತ್ಯ ಸಂಗತಿ :ಸಿಎಎ ಗೂ ಎನ್.ಆರ್.ಸಿ. ಗೂ ಸಂಬಂಧ ಕಲ್ಪಿಸಿರುವುದು ಗೃಹಮಂತ್ರಿಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷಜೆ ಪಿ ನಡ್ಡಾಅವರು, ವಿರೋಧ ಪಕ್ಷಗಳಲ್ಲ. ಈ ವರ್ಷವೇಏಪ್ರಿಲ್ ನಲ್ಲಿ ಬಂಗಾಳದಲ್ಲಿ ಮತ್ತುಡಿಸೆಂಬರ್ 9 ರಂದು ಪಾರ್ಲಿಮೆಂಟಿನಲ್ಲಿ ಮಾಡಿದ ಹೇಳಿಕೆಗಳಲ್ಲಿ ಅಮಿತ್ ಶಾ ಮತ್ತುಡಿಸೆಂಬರ್ 19 ರಂದುಜೆ ಪಿ ನಡ್ಡಾ ಹೇಳಿಕೆಗಳಿಂದ ಬಿಜೆಪಿಯ ಈ ಹುನ್ನಾರ ಸ್ಪಷ್ಟ. ಸಿಎಎ ಮುಸ್ಲಿಮೇತರ ‘ನಿರಾಶ್ರಿತ’ರಿಗೆ ನಾಗರಿಕತ್ವಕೊಡುತ್ತದೆ. ಎನ್. ಆರ್.ಸಿ. “ನುಸುಳುಕೋರರ”ನ್ನು ಗುರುತಿಸುತ್ತದೆ. ಸಿಎಎ ನಲ್ಲಿ ಹೊರಗಿಟ್ಟ ಮುಸ್ಲಿಮರನ್ನು “ನುಸುಳುಕೋರರ”ನ್ನಾಗಿ ಮಾಡಿ ಹೊರಗಟ್ಟುವುದು ಬಿಜೆಪಿಯ ಹುನ್ನಾರ
ಮಹಾಸುಳ್ಳು 4 : ಡಿಸೆಂಬರ್ 22ರ ದೆಹಲಿ ರ್ಯಾಲಿಯಲ್ಲಿ “ತಮ್ಮ ಸರಕಾರ 2014ರಲ್ಲಿ ನನ್ನ ಸರಕಾರಕ್ಕೆಅಧಿಕಾರಕ್ಕೆ ಬಂದಾಗಿನಿಂದ ಎನ್.ಆರ್.ಸಿ ಬಗ್ಗೆ ಎಲ್ಲೂಯಾವುದೇಚರ್ಚೆ ನಡೆದಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಸತ್ಯ ಸಂಗತಿ : ಜೂನ್20, 2019 ರ ಸದನಗಳ ಜಂಟಿಅಧಿವೇಶನಕ್ಕೆಅಧ್ಯಕ್ಷರು ಮಾಡಿದ ಭಾಷಣದಲ್ಲಿ, ನವೆಂಬರ್ 21, 2019ರಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿಎನ್.ಆರ್.ಸಿ ಬಗ್ಗೆ ಸ್ಪಷ್ಟಉಲ್ಲೇಖವಿದೆ. ಮಾತ್ರವಲ್ಲ, ಎನ್.ಆರ್.ಸಿಜಾರಿಯ ಬಗ್ಗೆ ಕೇಂದ್ರ ಸರಕಾರದ ಮಂತ್ರಿಗಳ 9 ಅಧಿಕೃತ ಹೇಳಿಕೆಗಳಿವೆ. ಇವೆಲ್ಲ ಹೇಳಿಕೆಗಳನ್ನು ಕೇಂದ್ರ ಸಂಪುಟದಲ್ಲಿ ಯಾವುದೇ ಚರ್ಚೆಯಿಲ್ಲದೆ ಮಾಡಲಾಗಿದೆಯೇ?
ಮಹಾಸುಳ್ಳು 5 :ಎನ್.ಆರ್.ಸಿ. ಪ್ರಕ್ರಿಯೆ ಕಾನೂನು ಪ್ರಕಾರಈವರೆಗೆ ಸ್ಥಾಪಿತವಾಗಿಲ್ಲ ಮತ್ತು ವಿರೋಧ ಪಕ್ಷಗಳು ಸುಳ್ಳುಗಳನ್ನು ಹರಡುತ್ತಿವೆ ಎಂದು ಪ್ರಧಾನಿ ಮೋದಿ, ಅವರ ಸಂಪುಟ ಸಚಿವರುಗಳು, ಪಕ್ಷದವಕ್ತಾರರು ಹಾಗೂ ಬಾಲಡುಕ ಮಾಧ್ಯಮ ಮಿತ್ರರು ವಿರೋಧ ಪಕ್ಷಗಳನ್ನು ದೂರುತ್ತಿದ್ದಾರೆ. “ದೇಶದಾದ್ಯಂತ ಎನ್.ಆರ್.ಸಿ ಪ್ರಕ್ರಿಯೆಯನ್ನು ಈ ವರೆಗೆ ಅಧಿಸೂಚಿತಗೊಳಿಸಿಲ್ಲ ಮತ್ತುಯಾರೂ ಈ ಕುರಿತು ಹೆದರಬೇಕಾಗಿಲ್ಲ.” ಎಂದು ಗೃಹ ಖಾತೆಯರಾಜ್ಯ ಮಂತ್ರಿ ಜಿ. ಕಿಶನ್ರೆಡ್ಡಿ ಹೇಳಿಕೆ ನೀಡಿದ್ದಾರೆ.
ಸತ್ಯ ಸಂಗತಿ : ಎನ್.ಆರ್.ಸಿ. ಪ್ರಕ್ರಿಯೆಯನ್ನು ಕಾನೂನು ಪ್ರಕಾರ ಸ್ಥಾಪಿಸಲು ವಾಜಪೇಯಿ ಸರಕಾರದ ಅವಧಿಯಲ್ಲಿ ಗೃಹ ಮಂತ್ರಿ ಎಲ್.ಕೆ.ಅಡ್ವಾಣಿ ಅವರಿಂದ ಮಂಡಿತವಾಗಿ 2003ರಲ್ಲಿ ಅಂಗೀಕೃತವಾಯಿತು. ಇದಕ್ಕಾಗಿ ಪ್ರತ್ಯೇಕ ಕಾನೂನು ರಚನೆಯಾಗಿಲ್ಲ. ಬದಲಿಗೆ, ಭಾರತ ಪೌರತ್ವಕಾಯಿದೆ 1955ಗೆ ತಿದ್ದುಪಡಿಮಾಡಲಾಗಿದೆ. ಎನ್.ಆರ್.ಸಿ.ಜಾರಿಗೆ ನಿಯಮಾವಳಿಯನ್ನು ಸಹ ರಚಿಸಿ 2003ರಲ್ಲೇ ಅಂಗೀಕರಿಸಲಾಗಿದೆ.
ಮಹಾಸುಳ್ಳು 6 : ಎನ್.ಆರ್.ಸಿ. ಪ್ರಕ್ರಿಯೆ ಇ್ಲನ್ನೂ ಆರಂಭವಾಗಿಲ್ಲ ಮತ್ತು ಆ ಕುರಿತು ಯಾವುದೇ ಅಧಿಸೂಚನೆಯೂ ಇಲ್ಲ.
ಎನ್.ಆರ್.ಸಿ.ಜಾರಿಗೆ ನಿಯಮಾವಳಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ರಾಷ್ಟ್ರೀಯ ಜನಸಂಖ್ಯಾರಿಜಿಸ್ಟರ್ (ಎನ್.ಪಿಆರ್.) ಪ್ರಕ್ರಿಯೆಯೊಂದಿಗೆ ಆರಂಭವಾಗುತ್ತದೆಎಂದು ಸ್ಪಷ್ಟವಾಗಿ ಹೇಳಲಾಗಿದೆ. ಎನ್.ಪಿ.ಆರ್. ಪ್ರಕ್ರಿಯೆ ಮುಗಿದ ನಂತರ ಅದರ ಆಧಾರದ ಮೇಲೆ ಎನ್.ಆರ್.ಸಿ.ರಚಿಸಲಾಗುವುದು. ಎನ್.ಪಿ.ಆರ್. ಮತ್ತುಎನ್.ಆರ್.ಸಿ ನಡುವಿನ ಸಂಬಂಧದ ಬಗ್ಗೆ ಕೇಂದ್ರ ಗೃಹ ರಾಜ್ಯ ಮಂತ್ರಿಜುಲೈ 23, 2014ರಲ್ಲಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಎನ್.ಪಿ.ಆರ್. ಪ್ರಕ್ರಿಯೆ ಆರಂಭಿಸಲುಜುಲೈ 31, 2019ರಂದು ಅಧಿಸೂಚನೆ ಹೊರಡಿಸಲಾಗಿದೆ.
ಮಹಾಸುಳ್ಳು 7 : ಎನ್.ಆರ್.ಸಿ. (ಪೌರತ್ವರಿಜಿಸ್ಟರ್)ಗೂ ಎನ್.ಪಿ.ಆರ್. (ಜನಸಂಖ್ಯಾರಿಜಿಸ್ಟರ್)ಗೂ ಏನೂ ಸಂಬಂಧವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಎನ್.ಪಿ.ಆರ್ ಹೆಚ್ಚಿನ ಪ್ರಶ್ನೆಗಳೊಂದಿಗೆ ಸಮಕಾಲೀನಗೊಳಿಸುವ ಕೇಂದ್ರ ಸಂಪುಟದ ನಿರ್ಧಾರದ ಸಂದರ್ಭದಲ್ಲಿ ಈ ಹೇಳಿಕೆ ಕೊಟ್ಟಿದ್ದಾರೆ. ಎನ್.ಪಿ.ಆರ್. ಜನಗಣತಿಯ ಉದ್ದೇಶಕ್ಕೆ ಮಾತ್ರವಿದೆ. ಎನ್.ಆರ್.ಸಿ. ಅಥವಾ ಪೌರತ್ವಕ್ಕೂ ಅದಕ್ಕೂಯಾವುದೇ ಸಂಬಂಧವಿಲ್ಲ. ಆದ್ದರಿಂದ ಭಾರತೀಯ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂದು ವಿರೋಧ ಪಕ್ಷಗಳು ಯಾಕೆ ಹೇಳುತ್ತಿವೆ ಎಂದುಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ ಜಾವಡೇಕರ್ ಹೇಳಿದ್ದಾರೆ.
ಸತ್ಯ ಸಂಗತಿ :ಗೃಹ ಸಚಿವಾಲಯದ2018-19 ವಾರ್ಷಿಕ ವರದಿಯಅಧ್ಯಾಯ 15 ಪಾರಾ 15.40 ಎನ್.ಪಿ.ಆರ್ ಮತ್ತು ಎನ್.ಆರ್.ಸಿ. (ಅಂದರೆ ಪೌರತ್ವದ) ಗಳ ಸಂಬಂಧದ ಬಗೆಗ ಸ್ಪಷ್ಟವಿದೆ. ಎನ್.ಪಿ.ಆರ್ ಮತ್ತು ಜನಗಣತಿಯನ್ನು ಜನಗಣತಿ ಅಧಿಕಾರಿಗಳು ನಡೆಸುತ್ತಾರೆಎಂದು ಬಿಟ್ಟರೆ ಅವೆರಡಕ್ಕೆ ಸಂಬಂಧವಿಲ್ಲ. ಎನ್.ಪಿ.ಆರ್. ಪ್ರಶ್ನಾವಳಿಯಲ್ಲಿ ಹಿಂದಿನ 15 ಪ್ರಶ್ನೆಗಳಿಗೆ ಆರು ಹೊಸ ಪ್ರಶ್ನೆಗಳÀನ್ನು ಸೇರಿಸಲಾಗಿದೆ. ತಂದೆ, ತಾಯಿ ಹುಟ್ಟಿದತಾರೀಕು, ಸ್ಥಳಗಳ ಮತ್ತುಆಧಾರ್ ಬಗ್ಗೆ ಬಗ್ಗೆ ಕೇಳಲಾಗಿದ್ದು, ಇವನ್ನುಎನ್.ಆರ್.ಸಿ. ಮತ್ತು ಪೌರತ್ವಕ್ಕೆ ಸಂಬಂಧಿಸಿ ಕೇಳಲಾಗುತ್ತಿದೆ.
ಮಹಾಸುಳ್ಳು 8 :ಯಾವುದೇ ಭಾರತೀಯ ಭಯಪಡುವಂಥದ್ದೇನಿಲ್ಲ.
ಸತ್ಯ ಸಂಗತಿ :ಎಲ್ಲಾ ಸಮುದಾಯಗಳ ಬಡವರು ಮತ್ತು ಅಂಚಿಗೆ ತಳ್ಳಲ್ಲಪಟ್ಟವರು ಭಯ ಪಡುವಂಥದ್ದು ಖಂಡಿತ ಇದೆ. ತಂದೆ, ತಾಯಿ ಹುಟ್ಟಿದತಾರೀಕು, ಸ್ಥಳಗಳ ಮಾಹಿತಿ ಒದಗಿಸುವುದು ಹೆಚ್ಚಿನ ಶಾಶ್ವತ ಸೂರುಇಲ್ಲದ, ನೆರೆ ಬರ ಮುಂತಾದ ಪ್ರಾಕೃತಿಕ ವಿಕೋಪಗಳಿಗೆ ತುತ್ತಾಗುವ, ಆಗಾಗ ವಲಸೆ ಹೋಗುವ ಅನಕ್ಷರಸ್ಥ ಬಡವರಿಗೆ ಕಷ್ಟಕರ ವಿಷಯ. ಇದು ಆಸ್ಸಾಂನಲ್ಲಿ ನಡೆದಎನ್.ಆರ್.ಸಿ. ಪ್ರಕ್ರಿಯೆಯ ಅನುಭವ ಕೂಡಾ. ಸಾಲದ್ದಕ್ಕೆ ಬಯೋಮೆಟ್ರಿಕ್ ಕೊಡಬೇಕಾಗಿದೆ.
ಬಯೋಮೆಟ್ರಿಕ್ ಮತ್ತು ಆಧಾರ್ ಮ್ಯಾಚಿಂಗ್ ಹಲವು ಕಾರಣಗಳಿಗೆ ವಿಫಲವಾಗುವುದು ಸಹ ವ್ಯಾಪಕವಾದ ಬಡವರ ಅನುಭವ. ಇದರಿಂದಾಗಿ ರೇಶನ್, ರೇಗಾ ಕೂಲಿ ಕಳೆದುಕೊಂಡ ಲಕ್ಷಾಂತರ ಬಡವರ ದೃಷ್ಟಾಂತಗಳಿವೆ. ಮುಂದಿನ ಹಂತದಲ್ಲಿ ಅಧಿಕಾರಿಗಳು ಕೇಳಿದರೆ ತಂದೆ-ತಾಯಿಗಳ ಸೇರಿದಂತೆ ಹಲವು ದಾಖಲೆಗಳನ್ನು ಒದಗಿಸಬೇಕು.
ಆಸ್ಸಾಂ ಎನ್.ಆರ್.ಸಿ ಪ್ರಕ್ರಿಯೆ ಸ್ಪಷ್ಟ ಪಡಿಸಿದಂತೆ ಸಾಮಾನ್ಯಗುರುತಿನ ದಾಖಲೆ (ಜನ್ಮಪತ್ರ, ಆಧಾರ್, ವೋಟರ್ಐಡಿ, ಪಾನ್ಕಾರ್ಡ್, ಪಾಸ್ ಪೋರ್ಟ್) ಸಾಕಾಗುವುದಿಲ್ಲ. ತಂದೆತಾಯಿ ಇಬ್ಬರದಾಖಲೆ ಬೇಕಾಗುತ್ತದೆ. ಆದ್ದರಿಂದಲೇಎನ್.ಪಿ.ಆರ್-ಎನ್.ಆರ್.ಸಿ. ಪ್ರಕ್ರಿಯೆ ಬಗ್ಗೆ ವ್ಯಾಪಕ ಭಯ ಉಂಟಾಗಿದೆ. ಇದು ಬಿಜೆಪಿ ಸರಕಾರದ ನೋಟು ನಿಷೇಧ ಮುಂತಾದಕ್ರೂರ ಕ್ರಮಗಳ ಹಿಂದಿನ ರೆಕಾರ್ಡಿನಿಂದ ಬಂದಸಹಜ ವಾಸ್ತವಿಕ ಭಯ.
ಇನ್ನೊಂದು ಕಾರಣಕ್ಕಾಗಿ ಮೋದಿ ಸರಕಾರ ಝಳಪಿಸುತ್ತಿರುವ ಸಿಎಎ-ಎನ್.ಪಿ.ಆರ್-ಎನ್.ಸಿ.ಆರ್ ಎಂಬ ಮೂರು ಅಲಗುಗಳ ತ್ರಿಶೂಲದ ಬಗ್ಗೆ ಚರಿತ್ತೆಯಿಂದ ಪಾಠಕಲಿತಎಲ್ಲಾ ಪ್ರಜ್ಞಾವಂತ ನಾಗರಿಕರು ಭಯ ಪಡಬೇಕಾಗಿದೆ. ನಾಜಿವಾದಿ ಮಾದರಿಯನ್ನು ಹಂತ ಹಂತವಾಗಿ ಕಾಪಿ ಹೊಡೆದು ಸಾಗಿರುವ ಸಂಘ ಪರಿವಾರದ ‘ಹಿಂದೂರಾಷ್ಟ್ರ’ದ ಯೋಜನೆಯಲ್ಲಿ ಈ ಕಾನೂನುಗಳ ತ್ರಿಶೂಲ ವಹಿಸಬಹುದಾದ ಪಾತ್ರದ ಬಗ್ಗೆ ಭಯ ಪಡಬೇಕಾಗಿದೆ. 1935ರಲ್ಲಿ ನಾಜಿಗಳು ತಂದ ಕುಪ್ರಸಿದ್ಧ ‘ನ್ಯುರೆಂಬರ್ಗ್ ಕಾನೂನುಗಳು’ ಒಂದೇ ಏಟಿಗೆಯೆಹೂದಿಯರ ಪೌರತ್ವ ಕಸಿದುಕೊಂಡು ಅವರನ್ನು ಯಾವುದೇ ಹಕ್ಕುಗಳಿಲ್ಲದ ಎರಡನೇದರ್ಜೆಯ ನಾಗರಿಕರನ್ನಾಗಿ ಮಾಡಿದ್ದವು.
ಕೊನೆಗೆ ಇದು 60 ಲಕ್ಷಯೆಹೂದಿಯರ ಸಾಮೂಹಿಕ ಬಂಧನ, ಯಾತನಾ ಶಿಬಿರಗಳಲ್ಲಿ ದೌರ್ಜನ್ಯ ಮತ್ತುಅವರ ನರಮೇಧದಲ್ಲಿ ಕೊನೆಗೊಂಡಿತ್ತು. ಇದು ಇಡೀ ಜರ್ಮನ್ ದೇಶದಲ್ಲಿ ಫ್ಯಾಸಿಸ್ಟ್ ಆಡಳಿತ ಸ್ಥಾಪಿಸುವಲ್ಲಿ, ಜನತೆಯನ್ನು ಫ್ಯಾಸಿಸ್ಟ್ ಕ್ರೌರ್ಯದ ಮತ್ತು ಯುದ್ಧದ ಉನ್ಮಾದದಲ್ಲಿ ಮುಳುಗಿಸಿ, ಎರಡನೇ ಮಹಾಯುದ್ಧಕ್ಕೆ ಮತ್ತುಜರ್ಮನರು ಸೇರಿದಂತೆ ಜಗತ್ತಿನಾದ್ಯಂತ ವ್ಯಾಪಕ ವಿನಾಶ ನರಮೇಧಗಳಿಗೆ ಕಾರಣವಾಗುವುದರಲ್ಲಿ ತನ್ನದೇ ಪಾತ್ರ ವಹಿಸಿತ್ತು.
ನಾಜಿಗಳು ಒಂದೇ ಏಟಿಗೆ ತಂದ ಕುಪ್ರಸಿದ್ಧ ‘ನ್ಯುರೆಂಬರ್ಗ್ ಕಾನೂನುಗಳು’ ಮಾಡಿದ ಪರಿಣಾಮವನ್ನು ಮೋದಿ ಸರಕಾರ ಹಂತ ಹಂತವಾಗಿ ಈ ಕಾನೂನುಗಳ ತ್ರಿಶೂಲದಿಂದ ಸಾಧಿಸುವ ಹಠತೊಟ್ಟಿರುವಂತೆ ಕಾಣುತ್ತದೆ ಎನ್ನುವ ಭಯ ಸಹಜವಾಗಿಯೇ ಉಂಟಾಗುತ್ತಿದೆ.
ಮಹಾಸುಳ್ಳು 9 :ದೇಶದಎಲ್ಲೂ ಬಂಧನ ಕೇಂದ್ರಗಳು ಇಲ್ಲಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.
ಸತ್ಯ ಸಂಗತಿ : ಕಾನೂನುಬಾಹಿರ ವಲಸೆಗಾರರು ಮತ್ತು ವಿದೇಶಿ ಅಪರಾಧಿಗಳನ್ನು ಇಡಲು ಬಂಧನ ಕೇಂದ್ರಗಳನ್ನು ಕಟ್ಟುವಂತೆ
ಜನವರಿ 9, 2019ರಂದು ಕೇಂದ್ರ ಸರಕಾರ ಸರಕಾರ ನಿರ್ದೇಶನ ನೀಡಿದೆ(ಮಾಹಿತಿ ಮೂಲ : ಡಿಸೆಂಬರ್ 11, 2019 ರಾಜ್ಯ ಸಭೆಯಲ್ಲಿ ಗೃಹ ರಾಜ್ಯ ಸಚಿವರಉತ್ತರ). ಆಸ್ಸಾಂ ನಲ್ಲಿ 6 ಬಂದನ ಕೇಂದ್ರಗಳಿವೆ. ಅದರಲ್ಲಿ 988 “ವಿಧೇಶಿಯರು” ಇದ್ದು 28 ಬಂಧಿತರು ಸತ್ತಿದ್ದಾರೆ ಎಂದು ನವೆಂಬರ್ 2019ರಲ್ಲಿ ಪ್ರಶ್ನೋತ್ತರದಲ್ಲಿ ಗೃಹ ರಾಜ್ಯ ಸಚಿವರ ಹೇಳಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ ಮುಂತಾದ ರಾಜ್ಯಗಳಲ್ಲಿ ಬಂಧನಕೇಂದ್ರಕಟ್ಟುವ ಕೆಲಸ ಆರಂಭವಾಗಿದೆ.
ಮಹಾಸುಳ್ಳು 10 : ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಲಾಗಿಲ್ಲ. ವ್ಯಾಪಕ ಪ್ರತಿಭಟನೆ ನಡೆದಿರುವದೆಹಲಿ, ಯುಪಿ ಮತ್ತುಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೋಲಿಸರು ಗೋಲಿಬಾರು ಮಾಡಿಲ್ಲ.
ಸತ್ಯ ಸಂಗತಿ :ಬಹುಪಾಲು ಭಾರೀ ಪ್ರತಿಭಟನಾ ಪ್ರದರ್ಶನಗಳು ಶಾಂತಿಯುತವಾಗಿ ನಡೆದಿವೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಾತ್ರ ಪೋಲಿಸರದಮನ ಕ್ರಮಗಳಿಂದ ಕೆಲವು ಹಿಂಸಾಕೃತ್ಯಗಳು ಜರುಗಿವೆ.ಜಾಮಿಯಾ ಮಿಲಿಯ, ಅಲಿಘರ್, ದೆಹಲಿ ವಿವಿ ಗಳಲ್ಲಿ ಪೋಲಿಸರ ದೌರ್ಜನ್ಯಗಳು ಮುಗಿಲು ಮುಟ್ಟಿವೆ. ಯು.ಪಿ. ಒಂದೇ 21 ಜನ ಗೋಲಿಬಾರಿನಲ್ಲಿ ಸತ್ತಿದ್ದಾರೆ. ದಿನೇ ಈ ಸಂಖ್ಯೆ ಹೆಚ್ಚುತ್ತಿದೆ. ಆದರೆ ಪೋಲಿಸ್ ಗೋಲಿಬಾರು ಮಾಡಿರುವುದನ್ನೇ ನಿರಾಕರಿಸಿದ್ದಾರೆ.
ಪೋಲಿಸರು ಪ್ರತಿಭನಾಕಾರರು ಮತ್ತು ಮಾಯಕ ನಾಗರಿಕರ ಮೇಲೆ ಗೋಲಿಬಾರು ಮಾಡಿರುವುದು, ಬೇಕಾಬಿಟ್ಟಿ ದೌರ್ಜನ್ಯಗಳನ್ನು ಎಸಗಿರುವುದು, ತಾವೇ ವಿಧ್ವಂಸಕ ಕೃತ್ಯಗಳಲಿ ತೊಡಗಿರುವುದು – ದಿನೇ ಈ ಬಗ್ಗೆ ವಿಡಿಯೋ ಪುರಾವೆಗಳು ಹೊರ ಬರುತ್ತಿವೆ. ಆಸ್ಸಾಂನಲ್ಲಿ 5, ಕರ್ನಾಟಕದಲ್ಲಿ ಇಬ್ಬರು ಗೋಲಿಬಾರಿನಲ್ಲಿ ಸತ್ತಿದ್ದಾರೆ. ಯುಪಿ, ಕರ್ನಾಟಕ ಮುಂತಾದ ರಾಜ್ಯಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ಕಲಮು 144 ಹೇರುವ ಮೂಲಕ ನಿಷೇಧಿಸಿದ್ದು ಮತ್ತು ಪ್ರತಿಭಟನಾಕಾರರನ್ನು ಉದ್ರೇಕಿಸಿದ್ದು ಈಗ ನಡೆದಿರುವ ಸೀಮಿತ ಹಿಂಸಾಚಾರಕ್ಕೆಕಾರಣ.
ಕೃಪೆ : ಜನಶಕ್ತಿ ಮೀಡಿಯ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ4 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ4 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ4 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


