Connect with us

ರಾಜಕೀಯ

ಪೌರತ್ವ (ತಿದ್ದುಪಡಿ) ಮಸೂದೆ : ಹೊಸ ವಿಭಜನಕಾರೀ ಅಜೆಂಡಾ

Published

on

ಪೌರತ್ವ (ತಿದ್ದುಪಡಿ) ಮಸೂದೆ ಅಥವ ಸಿ.ಎ.ಬಿ. ಮುಸ್ಲಿಮೇತರ ವಲಸಿಗರನ್ನು ನಾಗರಿಕರೆಂದು ಕಾನೂನುಬದ್ಧಗೊಳಿಸುವ ದುಷ್ಟತನದಿಂದ ತುಂಬಿರುವ ಶಾಸನವಾದರೆ ಎನ್.ಆರ್.ಸಿ., ಅಂದರೆ, ರಾಷ್ಟ್ರೀಯ ಪೌರರ ನೋಂದಣಿ ಎಂಬುದು ಮುಸ್ಲಿಂ ನುಸುಳುಕೋರರು ಎನ್ನಲಾಗುವವರ ಮೇಲೆ ಗುರಿಯಿಡುತ್ತದೆ.ಬಿಜೆಪಿ ಇಟ್ಟುಕೊಂಡಿರುವ ಗುರಿಯೆಂದರೆ, ಎರಡನೇ ದರ್ಜೆಯ ನಾಗರಿಕರು ಎಂಬೊಂದು ವಿಧವನ್ನು ಸೃಷಿಸುವುದು ಮತ್ತು ಅವರ ಹಕ್ಕುಗಳನ್ನು ತೀವ್ರವಾಗಿ ಮಿತಿಗೊಳಿಸುವುದು.

ಈ ಯೋಚನೆಯ ಹಿಂದೆ ಇರುವುದು ವಿ.ಡಿ.ಸಾವರ್ಕರ್ ಪ್ರತಿಪಾದಿಸಿದ ಎರಡು-ರಾಷ್ಟ್ರಗಳ ಸಿದ್ಧಾಂತ. ಸಿ.ಎ.ಬಿ. ಮತ್ತು ಎನ್.ಆರ್.ಸಿ.ಯ ಎರಡು ಕಡೆಗಳಿಂದ ಸುತ್ತುವರೆಯುವ ತಂತ್ರವನ್ನು ಬಿಜೆಪಿ-ಆರೆಸ್ಸೆಸ್‌ನ ಸಂಕುಚಿತ ರಾಜಕಾರಣಕ್ಕೆ ಹೊಂದುವಂತೆ ಕೋಮು ಆತಂಕಗಳನ್ನು ಹೆಚ್ಚಿಸಲು ಮತ್ತು ಒಂದು ಹೊಸ ವಿಭಜನಕಾರೀ ಅಜೆಂಡಾವನ್ನು ಸೃಷ್ಟಿಸಲು ಉಪಯೋಗಿಸಲಾಗುತ್ತದೆ.

ಬಿಜೆಪಿಯ ದುಷ್ಟತಂತ್ರಗಳನ್ನು ವಿಫಲಗೊಳಿಸಲು ಈ ಮಸೂದೆಗೆ ಸುಪ್ರಿಂ ಕೋರ್ಟಿನಲ್ಲಿ ಸವಾಲು ಹಾಕುವುದರೊಂದಿಗೇ, ಅವನ್ನು ಬಯಲಿಗೆಳೆಯಲು ವ್ಯಾಪಕವಾದ ಪ್ರಚಾರಾಂದೋಲನವನ್ನು ನಡೆಸಬೇಕು.

  • ಪ್ರಕಾಶ ಕಾರಟ್

ಪೌರತ್ವ (ತಿದ್ದುಪಡಿ) ಮಸೂದೆ, 2019(ಸಿ.ಎ.ಬಿ.) ಸಂಸತ್ತಿನ ಒಳಗೂ, ಹೊರಗೂ ಬಲವಾದ ಪ್ರತಿಭಟನೆಗಳ ನಡುವೆ ಅಂಗೀಕಾರಗೊಂಡಿದೆ. ಸಿ.ಎ.ಬಿ. ಸಂವಿಧಾನದ ಮೂಲ ನೀತಿಗಳಿಗೆ ತದ್ವಿರುದ್ಧವಾಗಿರುವ ಒಂದು ಅಪಯಕಾರಿ ಶಾಸನ. ಈ ಮಸೂದೆಯಲ್ಲಿ ವಿಧಿಸಿರುವ ಅಂಶಗಳು ಸಂವಿಧಾನದಲ್ಲಿ ಪ್ರತಿಷ್ಠಾಪಿತಗೊಂಡಿರುವ ಪೌರತ್ವದ ಜಾತ್ಯತೀತ ಪರಿಕಲ್ಪನೆಯನ್ನು ಶಿಥಿಲಗೊಳಿಸುತ್ತವೆ.

ಸಂವಿಧಾನದ ಕಲಮು 14, ಭಾರತದ ಪ್ರದೇಶದ ಒಳಗೆ ಯಾವುದೇ ವ್ಯಕ್ತಿಗೆ ಕಾನೂನಿನ ಎದುರು ಸಮಾನತೆ ಅಥವ ಕಾನೂನಿನ ಸಮಾನ ರಕ್ಷಣೆಯನ್ನು ನಿರಾಕರಿಸಲಾಗದು ಎಂದು ವಿಧಿಸಿದೆ. ಸಂವಿಧಾನವು ಮತ, ಜಾತಿ, ಪಂಥ ಅಥವ ಲಿಂಗದ ಆಧಾರದಲ್ಲಿ ತಾರತಮ್ಯವನ್ನು ಕೂಡ ನಿಷೇದಿಸಿದೆ.

ಸಿ.ಎ.ಬಿ. ಕೆಲವು ವಿಭಾಗಗಳ ಜನರನ್ನು ಪೌರತ್ವ ನೀಡಿಕೆಗೆ ಪರಿಶೀಲಿಸುವಾಗ ಒಂದು ಮತೀಯ ಮಾನದಂಡವನ್ನು ಸೇರಿಸಿದೆ. ಈ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಅಫಘಾನಿಸ್ತಾನ, ಬಾಂಗ್ಲಾದೇಶ್ ಅಥವ ಪಾಕಿಸ್ತಾನದಿಂದ ಬಂದಿರುವ ಹಿಂದೂಗಳು, ಸಿಖ್ಖರು, ಔದ್ಧರು, ಜೈನರು, ಪಾರ್ಸಿಗಳು ಅಥವ ಕ್ರಿಶ್ಚಿಯನ್ನರನ್ನು ಕಾನೂನುಬಾಹಿರ ವಲಸಿಗರು ಎಂದು ಕಾಣುವುದಿಲ್ಲ.

ಅವರು ಭಾರತದಲ್ಲಿ ಕನಿಷ್ಟ ಐದು ವರ್ಷಗಳನ್ನು ಕಳೆದಿದ್ದರೆ,ಸಹಜೀಕರಣ(ನೆಚುರಲೈಸೇಶನ್)ದಿಂದ ಪೌರತ್ವಕ್ಕೆ ಅರ್ಹರಾಗಬಹುದು. ಈ ಮೊದಲು ಸಹಜೀಕರಿಸಲು ಸಮಯಮಿತಿ ಹನ್ನೊಂದು ವರ್ಷಗಳಾಗಿದ್ದವು. ಅಂದರೆ ಈ ಮಿತಿಯನ್ನು ಸಡಿಲಿಸಲಾಗುತ್ತಿದೆ.

ಅದರೆ ಇದು ಈ ಮೂರು ದೇಶಗಳಿಂದ ಬಂದಿರುವ ಮುಸ್ಲಿಮರಿಗೆ ಅನ್ವಯಿಸುವುದಿಲ್ಲ. ಅವರನ್ನು ಕಾನೂನುಬಾಹಿರ ವಲಸಿಗರೆಂದು ಪರಿಗಣಿಸಲಾಗುತ್ತದೆ. ಮತೀಯ ಆಧಾರದಲ್ಲಿ ಈ ತಾರತಮ್ಯವೇ ಪೌರತ್ವದ ಕಾಯ್ದೆಗೆ ಈ ತಿದ್ದುಪಡಿಯನ್ನು ಅಸಂವಿಧಾನಿಕ ಮತ್ತು ಕಾನೂನುಬಾಹಿರಗೊಳಿಸುತ್ತದೆ.

ಬಿಜೆಪಿ ಈ ಮೊದಲೇ ಹಿಂದಿನ ಲೋಕಸಭೆಯಲ್ಲಿ ಈ ಮಸೂದೆಯನ್ನು ಪಾಸುಮಾಡಿಕೊಂಡಿತ್ತು. ಆದರೆ ರಾಜ್ಯಸಭೆಯಲ್ಲಿ ಬಹುಮತವಿಲ್ಲದ್ದರಿಂದ ಪಾಸಾಗಲಿಲ್ಲ. ಈ ಮಸೂದೆಯ ಉದ್ದೇಶ ಬಾಂಗ್ಲಾದೇಶದಿಂದ ಅಸ್ಸಾಂಗೆ ಬಂದಿರುವ ಹಿಂದೂ ವಲಸಿಗರಿಗೆ ಪೌರತ್ವವನ್ನು ಖಾತ್ರಿಪಡಿಸುತ್ತಲೇ, ಆ ದೇಶದಿಂದ ಬರುವ ಯಾವುದೇ ಮುಸ್ಲಿಂ ವಲಸಿಗರನ್ನು ಹೊರಗಿಡುವ ಕೋಮುವಾದಿ ಅಜೆಂಡಾ. ಅಸ್ಸಾಂನಲ್ಲಿ ಎನ್.ಆರ್.ಸಿ. ಪ್ರಕ್ರಿಯೆ ಮಾರ್ಚ್ 24, 1971ರ ನಂತರ ಪ್ರವೇಶಿಸಿರುವ ಎಲ್ಲರನ್ನೂ ಹೊರಗಿಡುವುದರಿಂದಾಗಿ ಈ ಕ್ರಮ ಅಗತ್ಯವಾಗಿತ್ತು.

ಅಸ್ಸಾಂನಲ್ಲಿ ರಾಷ್ಟ್ರೀಯ ಪೌರರ ನೋಂದಣಿ(ಎನ್.ಆರ್.ಸಿ.)ಯ ಅಂತಿಮ ಪಟ್ಟಿಯನ್ನು ಈ ವರ್ಷ ಆಗಸ್ಟ್ 31ರಂದು ಸಿ.ಎ.ಬಿ.ಯನ್ನು ಜಾರಿಗೊಳಿಸುವ ಮೊದಲು ಪ್ರಕಟಿಸಲಾಯಿತು. ಇದರ ಫಲಿತಾಂಶವಾಗಿ ಬಾಂಗ್ಲಾದೇಶದಿಂದ ಬಂದು ಹಿಂದೂಗಳನ್ನೂ ದೊಡ್ಡ ಸಂಖ್ಯೆಯಲ್ಲಿ ಹೊರಗಿಡಲಾಗಿದೆ. ಆದ್ದರಿಂದಲೇ ಅಸ್ಸಾಂನ ಬಿಜೆಪಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಎನ್.ಆರ್.ಸಿ. ಪಟ್ಟಿಯನ್ನು ವಿರೋಧಿಸಿವೆ.

ಹೀಗೆ ಮೋದಿ ಸರಕಾರಕ್ಕೆ ಇಡೀ ದೇಶಕ್ಕೆ ಎನ್.ಆರ್.ಸಿ. ಯನ್ನು ಸಿದ್ದಪಡಿಸುವ ಕೆಲಸಕ್ಕೆ ಕೈಹಾಕುವ ಮೊದಲು ಸಿ.ಎ.ಬಿ.ಯನ್ನು ಅಂಗೀಕರಿಸುವ ತುರ್ತು ಬಂದಿತು. ಗೃಹಮಂತ್ರಿ ಅಮಿತ್ ಷಾ ಕಪಟತನದಿಂದ ಅಸ್ಸಾಂನಲ್ಲಿ ಎನ್.ಆರ್.ಸಿ. ಯನ್ನು ಇಡೀ ದೇಶದ ಜತೆಗೆ ಮತ್ತೊಮ್ಮೆ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಈ ಸಿ.ಎ.ಬಿ. ಗೆ ಅಸ್ಸಾಂ ಮತ್ತು ಈಶಾನ್ಯ ಭಾರತದ ಜನಗಳಿಂದ ಕೋಪಾವೇಶದ ಪ್ರತಿಕ್ರಿಯೆ ಎದುರಾಗಿದೆ. ಅಸ್ಸಾಂನ ಜನರು ಈ ಶಾಸನ ಅಸ್ಸಾಂ ಒಪ್ಪಂದದಲ್ಲಿ ನೀಡಿದ ವಚನಕ್ಕೆ ಮಾಡಿರುವ ವಿಶ್ವಾಸದ್ರೋಹ ಎಂದು ಕಾಣುತ್ತಿದ್ದಾರೆ. ಏಕೆಂದರೆ ಆ ಒಪ್ಪಂದದ ಪ್ರಕಾರ ಮಾರ್ಚ್ 1971ರ ನಂತರ ಅಸ್ಸಾಂ ಪ್ರವೇಶಿಸಿದವರಿಗೆ ಪೌರತ್ವವನ್ನು ಕೊಡಲಾಗುವುದಿಲ್ಲ.

ಸಿ.ಎ.ಬಿ. ಈ ಸಮಯಮಿತಿಯನ್ನು ಡಿಸೆಂಬರ್ 31, 2014 ರ ವರೆಗೆ ವಿಸ್ತರಿಸಿ ಕಾನೂನುಬಾಹಿರ ವಲಸಿಗರನ್ನು ಕಾನೂನುಬದ್ಧಗೊಳಿಸಿ, 1985ರಲ್ಲಿ ಅಸ್ಸಾಂ ಒಪ್ಪಂದದ ಮೂಲಕ ಏರ್ಪಟ್ಟಿರುವ ಜಾಗರೂಕತೆಯಿಂದ ಸಮತೋಲಗೊಳಿಸಿದ್ದ ಒಡಂಬಡಿಕೆಯನ್ನು ತಲೆಕೆಳಗಾಗಿಸಿದೆ.

ಈಶಾನ್ಯ ಭಾರತದ ಎಲ್ಲ ರಾಜ್ಯಗಳಲ್ಲಿ ಅಲ್ಲಿಯ ಮೂಲನಿವಾಸಿಗಳ ಅಸ್ಮಿತೆಗಳು ಹೊಸದಾಗಿ ಪೌರತ್ವ ಪಡೆಯುವ ಜನಗಳು ದೊಡ್ಡಪ್ರಮಾಣದಲ್ಲಿ ಬಂದು ಸೇರುವುದರಿಂದಾಗಿ ಮುಳುಗಿ ಹೋಗಬಹುದು ಎಂಬ ಭಯ ಮೂಡಿದೆ.

ಸಂವಿಧಾನದ ಆರನೇ ಶೆಡ್ಯೂಲಿನ ಅಡಿಯಲ್ಲಿ ಬರುವ ಬುಡಕಟ್ಟು ಪ್ರದೇಶಗಳಿಗೆ ಮತ್ತು ಇನ್ನರ್ ಲೈನ್(ಒಳಗಣ ರೇಖೆ) ಇರುವ ಪ್ರದೇಶಗಳಿಗೆ ಈ ಸಿ.ಎ.ಬಿ.ಯಿಂದ ವಿನಾಯ್ತಿ ಕೊಟ್ಟು ಅವರನ್ನು ಸಮಾಧಾನ ಪಡಿಸುವ ಮೋದಿ ಸರಕಾರದ ಪ್ರಯತ್ನ ವಿಫಲವಾಗಿದೆ. ಈ ಸುರಕ್ಷಿತ ಕ್ಷೇತ್ರಗಳು ಹೊರಗಿಂದ ಅಲ್ಲಿಯೇ ನೆಲೆಸಲು ಬರುವ ಜನಗಳಿಂದ ಸತತವಾಗಿ ಒತ್ತಡಗಳನ್ನು ಎದುರಿಸುತ್ತಲೇ ಇರುವುದರಿಂದಾಗಿ ಮೋದಿ ಸರಕಾರದ ಈ ಪ್ರಯತ್ನ ಫಲ ಕೊಟ್ಟಿಲ್ಲ.

ಸಿ.ಎ.ಬಿ. ಮತ್ತು ಎನ್.ಆರ್.ಸಿ. ಯನ್ನು ಒಟ್ಟಾಗಿ ಕಾಣಬೇಕು. ಸಿ.ಎ.ಬಿ. ಮುಸ್ಲಿಮೇತರ ವಲಸಿಗರನ್ನು ನಾಗರಿಕರೆಂದು ಕಾನೂನುಬದ್ಧಗೊಳಿಸಿದರೆ, ಎನ್.ಆರ್.ಸಿ. ಮುಸ್ಲಿಂ ನುಸುಳುಕೋರರು ಎನ್ನಲಾಗುವವರ ಮೇಲೆ ಗುರಿಯಿಡುತ್ತದೆ. ಬಿಜೆಪಿ ಇಟ್ಟುಕೊಂಡಿರುವ ಗುರಿಯೆಂದರೆ, ಎರಡನೇ ದರ್ಜೆಯ ನಾಗರಿಕರು ಎಂಬೊಂದು ವಿಧವನ್ನು ಸೃಷಿಸುವುದು ಮತ್ತು ಅವರ ಹಕ್ಕುಗಳನ್ನು ತೀವ್ರವಾಗಿ ಮಿತಿಗೊಳಿಸುವುದು. ಈ ಯೋಚನೆಯ ಹಿಂದೆ ಇರುವುದು ವಿ.ಡಿ.ಸಾವರ್ಕರ್ ಪ್ರತಿಪಾದಿಸಿದ ಎರಡು-ರಾಷ್ಟ್ರಗಳ ಸಿದ್ಧಾಂತ.

ಸಿ.ಎ.ಬಿ. ಮತ್ತು ಎನ್.ಆರ್.ಸಿ.ಯ ಎರಡು ಕಡೆಗಳಿಂದ ಸುತ್ತುವರೆಯುವ ತಂತ್ರವನ್ನು ಬಿಜೆಪಿ-ಆರೆಸ್ಸೆಸ್‌ನ ಸಂಕುಚಿತ ರಾಜಕಾರಣಕ್ಕೆ ಹೊಂದುವಂತೆ ಕೋಮು ಆತಂಕಗಳನ್ನು ಹೆಚ್ಚಿಸಲು ಮತ್ತು ಒಂದು ಹೊಸ ವಿಭಜನಕಾರೀ ಅಜೆಂಡಾವನ್ನು ಸೃಷ್ಟಿಸಲು ಉಪಯೋಗಿಸಲಾಗುತ್ತದೆ.

ಈ ಪೌರತ್ವ ತಿದ್ದುಪಡಿ ಮಸೂದೆಗೆ ಸುಪ್ರಿಂ ಕೋರ್ಟಿನಲ್ಲಿ ಸವಾಲು ಹಾಕಬೇಕು. ಹಾಗೆ ಮಾಡುತ್ತಲೇ, ಸಿ.ಎ.ಬಿ.-ಎನ್.ಆರ್.ಸಿ.ಗೆ ಸಂಬಂಧಪಟ್ಟಂತೆ ಬಿಜೆಪಿಯ ದುಷ್ಟತಂತ್ರಗಳನ್ನು ಬಯಲಿಗೆಳೆಯಲು ವ್ಯಾಪಕವಾದ ಪ್ರಚಾರಾಂದೋಲನವನ್ನು ನಡೆಸಬೇಕು.

(ಈ ವಾರದ ಜನಶಕ್ತಿ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

Published

on

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.

ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.

ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending