ರಾಜಕೀಯ
ಪೌರತ್ವ (ತಿದ್ದುಪಡಿ) ಮಸೂದೆ : ಹೊಸ ವಿಭಜನಕಾರೀ ಅಜೆಂಡಾ
ಪೌರತ್ವ (ತಿದ್ದುಪಡಿ) ಮಸೂದೆ ಅಥವ ಸಿ.ಎ.ಬಿ. ಮುಸ್ಲಿಮೇತರ ವಲಸಿಗರನ್ನು ನಾಗರಿಕರೆಂದು ಕಾನೂನುಬದ್ಧಗೊಳಿಸುವ ದುಷ್ಟತನದಿಂದ ತುಂಬಿರುವ ಶಾಸನವಾದರೆ ಎನ್.ಆರ್.ಸಿ., ಅಂದರೆ, ರಾಷ್ಟ್ರೀಯ ಪೌರರ ನೋಂದಣಿ ಎಂಬುದು ಮುಸ್ಲಿಂ ನುಸುಳುಕೋರರು ಎನ್ನಲಾಗುವವರ ಮೇಲೆ ಗುರಿಯಿಡುತ್ತದೆ.ಬಿಜೆಪಿ ಇಟ್ಟುಕೊಂಡಿರುವ ಗುರಿಯೆಂದರೆ, ಎರಡನೇ ದರ್ಜೆಯ ನಾಗರಿಕರು ಎಂಬೊಂದು ವಿಧವನ್ನು ಸೃಷಿಸುವುದು ಮತ್ತು ಅವರ ಹಕ್ಕುಗಳನ್ನು ತೀವ್ರವಾಗಿ ಮಿತಿಗೊಳಿಸುವುದು.
ಈ ಯೋಚನೆಯ ಹಿಂದೆ ಇರುವುದು ವಿ.ಡಿ.ಸಾವರ್ಕರ್ ಪ್ರತಿಪಾದಿಸಿದ ಎರಡು-ರಾಷ್ಟ್ರಗಳ ಸಿದ್ಧಾಂತ. ಸಿ.ಎ.ಬಿ. ಮತ್ತು ಎನ್.ಆರ್.ಸಿ.ಯ ಎರಡು ಕಡೆಗಳಿಂದ ಸುತ್ತುವರೆಯುವ ತಂತ್ರವನ್ನು ಬಿಜೆಪಿ-ಆರೆಸ್ಸೆಸ್ನ ಸಂಕುಚಿತ ರಾಜಕಾರಣಕ್ಕೆ ಹೊಂದುವಂತೆ ಕೋಮು ಆತಂಕಗಳನ್ನು ಹೆಚ್ಚಿಸಲು ಮತ್ತು ಒಂದು ಹೊಸ ವಿಭಜನಕಾರೀ ಅಜೆಂಡಾವನ್ನು ಸೃಷ್ಟಿಸಲು ಉಪಯೋಗಿಸಲಾಗುತ್ತದೆ.
ಬಿಜೆಪಿಯ ದುಷ್ಟತಂತ್ರಗಳನ್ನು ವಿಫಲಗೊಳಿಸಲು ಈ ಮಸೂದೆಗೆ ಸುಪ್ರಿಂ ಕೋರ್ಟಿನಲ್ಲಿ ಸವಾಲು ಹಾಕುವುದರೊಂದಿಗೇ, ಅವನ್ನು ಬಯಲಿಗೆಳೆಯಲು ವ್ಯಾಪಕವಾದ ಪ್ರಚಾರಾಂದೋಲನವನ್ನು ನಡೆಸಬೇಕು.
- ಪ್ರಕಾಶ ಕಾರಟ್
ಪೌರತ್ವ (ತಿದ್ದುಪಡಿ) ಮಸೂದೆ, 2019(ಸಿ.ಎ.ಬಿ.) ಸಂಸತ್ತಿನ ಒಳಗೂ, ಹೊರಗೂ ಬಲವಾದ ಪ್ರತಿಭಟನೆಗಳ ನಡುವೆ ಅಂಗೀಕಾರಗೊಂಡಿದೆ. ಸಿ.ಎ.ಬಿ. ಸಂವಿಧಾನದ ಮೂಲ ನೀತಿಗಳಿಗೆ ತದ್ವಿರುದ್ಧವಾಗಿರುವ ಒಂದು ಅಪಯಕಾರಿ ಶಾಸನ. ಈ ಮಸೂದೆಯಲ್ಲಿ ವಿಧಿಸಿರುವ ಅಂಶಗಳು ಸಂವಿಧಾನದಲ್ಲಿ ಪ್ರತಿಷ್ಠಾಪಿತಗೊಂಡಿರುವ ಪೌರತ್ವದ ಜಾತ್ಯತೀತ ಪರಿಕಲ್ಪನೆಯನ್ನು ಶಿಥಿಲಗೊಳಿಸುತ್ತವೆ.
ಸಂವಿಧಾನದ ಕಲಮು 14, ಭಾರತದ ಪ್ರದೇಶದ ಒಳಗೆ ಯಾವುದೇ ವ್ಯಕ್ತಿಗೆ ಕಾನೂನಿನ ಎದುರು ಸಮಾನತೆ ಅಥವ ಕಾನೂನಿನ ಸಮಾನ ರಕ್ಷಣೆಯನ್ನು ನಿರಾಕರಿಸಲಾಗದು ಎಂದು ವಿಧಿಸಿದೆ. ಸಂವಿಧಾನವು ಮತ, ಜಾತಿ, ಪಂಥ ಅಥವ ಲಿಂಗದ ಆಧಾರದಲ್ಲಿ ತಾರತಮ್ಯವನ್ನು ಕೂಡ ನಿಷೇದಿಸಿದೆ.
ಸಿ.ಎ.ಬಿ. ಕೆಲವು ವಿಭಾಗಗಳ ಜನರನ್ನು ಪೌರತ್ವ ನೀಡಿಕೆಗೆ ಪರಿಶೀಲಿಸುವಾಗ ಒಂದು ಮತೀಯ ಮಾನದಂಡವನ್ನು ಸೇರಿಸಿದೆ. ಈ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಅಫಘಾನಿಸ್ತಾನ, ಬಾಂಗ್ಲಾದೇಶ್ ಅಥವ ಪಾಕಿಸ್ತಾನದಿಂದ ಬಂದಿರುವ ಹಿಂದೂಗಳು, ಸಿಖ್ಖರು, ಔದ್ಧರು, ಜೈನರು, ಪಾರ್ಸಿಗಳು ಅಥವ ಕ್ರಿಶ್ಚಿಯನ್ನರನ್ನು ಕಾನೂನುಬಾಹಿರ ವಲಸಿಗರು ಎಂದು ಕಾಣುವುದಿಲ್ಲ.
ಅವರು ಭಾರತದಲ್ಲಿ ಕನಿಷ್ಟ ಐದು ವರ್ಷಗಳನ್ನು ಕಳೆದಿದ್ದರೆ,ಸಹಜೀಕರಣ(ನೆಚುರಲೈಸೇಶನ್)ದಿಂದ ಪೌರತ್ವಕ್ಕೆ ಅರ್ಹರಾಗಬಹುದು. ಈ ಮೊದಲು ಸಹಜೀಕರಿಸಲು ಸಮಯಮಿತಿ ಹನ್ನೊಂದು ವರ್ಷಗಳಾಗಿದ್ದವು. ಅಂದರೆ ಈ ಮಿತಿಯನ್ನು ಸಡಿಲಿಸಲಾಗುತ್ತಿದೆ.
ಅದರೆ ಇದು ಈ ಮೂರು ದೇಶಗಳಿಂದ ಬಂದಿರುವ ಮುಸ್ಲಿಮರಿಗೆ ಅನ್ವಯಿಸುವುದಿಲ್ಲ. ಅವರನ್ನು ಕಾನೂನುಬಾಹಿರ ವಲಸಿಗರೆಂದು ಪರಿಗಣಿಸಲಾಗುತ್ತದೆ. ಮತೀಯ ಆಧಾರದಲ್ಲಿ ಈ ತಾರತಮ್ಯವೇ ಪೌರತ್ವದ ಕಾಯ್ದೆಗೆ ಈ ತಿದ್ದುಪಡಿಯನ್ನು ಅಸಂವಿಧಾನಿಕ ಮತ್ತು ಕಾನೂನುಬಾಹಿರಗೊಳಿಸುತ್ತದೆ.
ಬಿಜೆಪಿ ಈ ಮೊದಲೇ ಹಿಂದಿನ ಲೋಕಸಭೆಯಲ್ಲಿ ಈ ಮಸೂದೆಯನ್ನು ಪಾಸುಮಾಡಿಕೊಂಡಿತ್ತು. ಆದರೆ ರಾಜ್ಯಸಭೆಯಲ್ಲಿ ಬಹುಮತವಿಲ್ಲದ್ದರಿಂದ ಪಾಸಾಗಲಿಲ್ಲ. ಈ ಮಸೂದೆಯ ಉದ್ದೇಶ ಬಾಂಗ್ಲಾದೇಶದಿಂದ ಅಸ್ಸಾಂಗೆ ಬಂದಿರುವ ಹಿಂದೂ ವಲಸಿಗರಿಗೆ ಪೌರತ್ವವನ್ನು ಖಾತ್ರಿಪಡಿಸುತ್ತಲೇ, ಆ ದೇಶದಿಂದ ಬರುವ ಯಾವುದೇ ಮುಸ್ಲಿಂ ವಲಸಿಗರನ್ನು ಹೊರಗಿಡುವ ಕೋಮುವಾದಿ ಅಜೆಂಡಾ. ಅಸ್ಸಾಂನಲ್ಲಿ ಎನ್.ಆರ್.ಸಿ. ಪ್ರಕ್ರಿಯೆ ಮಾರ್ಚ್ 24, 1971ರ ನಂತರ ಪ್ರವೇಶಿಸಿರುವ ಎಲ್ಲರನ್ನೂ ಹೊರಗಿಡುವುದರಿಂದಾಗಿ ಈ ಕ್ರಮ ಅಗತ್ಯವಾಗಿತ್ತು.
ಅಸ್ಸಾಂನಲ್ಲಿ ರಾಷ್ಟ್ರೀಯ ಪೌರರ ನೋಂದಣಿ(ಎನ್.ಆರ್.ಸಿ.)ಯ ಅಂತಿಮ ಪಟ್ಟಿಯನ್ನು ಈ ವರ್ಷ ಆಗಸ್ಟ್ 31ರಂದು ಸಿ.ಎ.ಬಿ.ಯನ್ನು ಜಾರಿಗೊಳಿಸುವ ಮೊದಲು ಪ್ರಕಟಿಸಲಾಯಿತು. ಇದರ ಫಲಿತಾಂಶವಾಗಿ ಬಾಂಗ್ಲಾದೇಶದಿಂದ ಬಂದು ಹಿಂದೂಗಳನ್ನೂ ದೊಡ್ಡ ಸಂಖ್ಯೆಯಲ್ಲಿ ಹೊರಗಿಡಲಾಗಿದೆ. ಆದ್ದರಿಂದಲೇ ಅಸ್ಸಾಂನ ಬಿಜೆಪಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಎನ್.ಆರ್.ಸಿ. ಪಟ್ಟಿಯನ್ನು ವಿರೋಧಿಸಿವೆ.
ಹೀಗೆ ಮೋದಿ ಸರಕಾರಕ್ಕೆ ಇಡೀ ದೇಶಕ್ಕೆ ಎನ್.ಆರ್.ಸಿ. ಯನ್ನು ಸಿದ್ದಪಡಿಸುವ ಕೆಲಸಕ್ಕೆ ಕೈಹಾಕುವ ಮೊದಲು ಸಿ.ಎ.ಬಿ.ಯನ್ನು ಅಂಗೀಕರಿಸುವ ತುರ್ತು ಬಂದಿತು. ಗೃಹಮಂತ್ರಿ ಅಮಿತ್ ಷಾ ಕಪಟತನದಿಂದ ಅಸ್ಸಾಂನಲ್ಲಿ ಎನ್.ಆರ್.ಸಿ. ಯನ್ನು ಇಡೀ ದೇಶದ ಜತೆಗೆ ಮತ್ತೊಮ್ಮೆ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.
ಈ ಸಿ.ಎ.ಬಿ. ಗೆ ಅಸ್ಸಾಂ ಮತ್ತು ಈಶಾನ್ಯ ಭಾರತದ ಜನಗಳಿಂದ ಕೋಪಾವೇಶದ ಪ್ರತಿಕ್ರಿಯೆ ಎದುರಾಗಿದೆ. ಅಸ್ಸಾಂನ ಜನರು ಈ ಶಾಸನ ಅಸ್ಸಾಂ ಒಪ್ಪಂದದಲ್ಲಿ ನೀಡಿದ ವಚನಕ್ಕೆ ಮಾಡಿರುವ ವಿಶ್ವಾಸದ್ರೋಹ ಎಂದು ಕಾಣುತ್ತಿದ್ದಾರೆ. ಏಕೆಂದರೆ ಆ ಒಪ್ಪಂದದ ಪ್ರಕಾರ ಮಾರ್ಚ್ 1971ರ ನಂತರ ಅಸ್ಸಾಂ ಪ್ರವೇಶಿಸಿದವರಿಗೆ ಪೌರತ್ವವನ್ನು ಕೊಡಲಾಗುವುದಿಲ್ಲ.
ಸಿ.ಎ.ಬಿ. ಈ ಸಮಯಮಿತಿಯನ್ನು ಡಿಸೆಂಬರ್ 31, 2014 ರ ವರೆಗೆ ವಿಸ್ತರಿಸಿ ಕಾನೂನುಬಾಹಿರ ವಲಸಿಗರನ್ನು ಕಾನೂನುಬದ್ಧಗೊಳಿಸಿ, 1985ರಲ್ಲಿ ಅಸ್ಸಾಂ ಒಪ್ಪಂದದ ಮೂಲಕ ಏರ್ಪಟ್ಟಿರುವ ಜಾಗರೂಕತೆಯಿಂದ ಸಮತೋಲಗೊಳಿಸಿದ್ದ ಒಡಂಬಡಿಕೆಯನ್ನು ತಲೆಕೆಳಗಾಗಿಸಿದೆ.
ಈಶಾನ್ಯ ಭಾರತದ ಎಲ್ಲ ರಾಜ್ಯಗಳಲ್ಲಿ ಅಲ್ಲಿಯ ಮೂಲನಿವಾಸಿಗಳ ಅಸ್ಮಿತೆಗಳು ಹೊಸದಾಗಿ ಪೌರತ್ವ ಪಡೆಯುವ ಜನಗಳು ದೊಡ್ಡಪ್ರಮಾಣದಲ್ಲಿ ಬಂದು ಸೇರುವುದರಿಂದಾಗಿ ಮುಳುಗಿ ಹೋಗಬಹುದು ಎಂಬ ಭಯ ಮೂಡಿದೆ.
ಸಂವಿಧಾನದ ಆರನೇ ಶೆಡ್ಯೂಲಿನ ಅಡಿಯಲ್ಲಿ ಬರುವ ಬುಡಕಟ್ಟು ಪ್ರದೇಶಗಳಿಗೆ ಮತ್ತು ಇನ್ನರ್ ಲೈನ್(ಒಳಗಣ ರೇಖೆ) ಇರುವ ಪ್ರದೇಶಗಳಿಗೆ ಈ ಸಿ.ಎ.ಬಿ.ಯಿಂದ ವಿನಾಯ್ತಿ ಕೊಟ್ಟು ಅವರನ್ನು ಸಮಾಧಾನ ಪಡಿಸುವ ಮೋದಿ ಸರಕಾರದ ಪ್ರಯತ್ನ ವಿಫಲವಾಗಿದೆ. ಈ ಸುರಕ್ಷಿತ ಕ್ಷೇತ್ರಗಳು ಹೊರಗಿಂದ ಅಲ್ಲಿಯೇ ನೆಲೆಸಲು ಬರುವ ಜನಗಳಿಂದ ಸತತವಾಗಿ ಒತ್ತಡಗಳನ್ನು ಎದುರಿಸುತ್ತಲೇ ಇರುವುದರಿಂದಾಗಿ ಮೋದಿ ಸರಕಾರದ ಈ ಪ್ರಯತ್ನ ಫಲ ಕೊಟ್ಟಿಲ್ಲ.
ಸಿ.ಎ.ಬಿ. ಮತ್ತು ಎನ್.ಆರ್.ಸಿ. ಯನ್ನು ಒಟ್ಟಾಗಿ ಕಾಣಬೇಕು. ಸಿ.ಎ.ಬಿ. ಮುಸ್ಲಿಮೇತರ ವಲಸಿಗರನ್ನು ನಾಗರಿಕರೆಂದು ಕಾನೂನುಬದ್ಧಗೊಳಿಸಿದರೆ, ಎನ್.ಆರ್.ಸಿ. ಮುಸ್ಲಿಂ ನುಸುಳುಕೋರರು ಎನ್ನಲಾಗುವವರ ಮೇಲೆ ಗುರಿಯಿಡುತ್ತದೆ. ಬಿಜೆಪಿ ಇಟ್ಟುಕೊಂಡಿರುವ ಗುರಿಯೆಂದರೆ, ಎರಡನೇ ದರ್ಜೆಯ ನಾಗರಿಕರು ಎಂಬೊಂದು ವಿಧವನ್ನು ಸೃಷಿಸುವುದು ಮತ್ತು ಅವರ ಹಕ್ಕುಗಳನ್ನು ತೀವ್ರವಾಗಿ ಮಿತಿಗೊಳಿಸುವುದು. ಈ ಯೋಚನೆಯ ಹಿಂದೆ ಇರುವುದು ವಿ.ಡಿ.ಸಾವರ್ಕರ್ ಪ್ರತಿಪಾದಿಸಿದ ಎರಡು-ರಾಷ್ಟ್ರಗಳ ಸಿದ್ಧಾಂತ.
ಸಿ.ಎ.ಬಿ. ಮತ್ತು ಎನ್.ಆರ್.ಸಿ.ಯ ಎರಡು ಕಡೆಗಳಿಂದ ಸುತ್ತುವರೆಯುವ ತಂತ್ರವನ್ನು ಬಿಜೆಪಿ-ಆರೆಸ್ಸೆಸ್ನ ಸಂಕುಚಿತ ರಾಜಕಾರಣಕ್ಕೆ ಹೊಂದುವಂತೆ ಕೋಮು ಆತಂಕಗಳನ್ನು ಹೆಚ್ಚಿಸಲು ಮತ್ತು ಒಂದು ಹೊಸ ವಿಭಜನಕಾರೀ ಅಜೆಂಡಾವನ್ನು ಸೃಷ್ಟಿಸಲು ಉಪಯೋಗಿಸಲಾಗುತ್ತದೆ.
ಈ ಪೌರತ್ವ ತಿದ್ದುಪಡಿ ಮಸೂದೆಗೆ ಸುಪ್ರಿಂ ಕೋರ್ಟಿನಲ್ಲಿ ಸವಾಲು ಹಾಕಬೇಕು. ಹಾಗೆ ಮಾಡುತ್ತಲೇ, ಸಿ.ಎ.ಬಿ.-ಎನ್.ಆರ್.ಸಿ.ಗೆ ಸಂಬಂಧಪಟ್ಟಂತೆ ಬಿಜೆಪಿಯ ದುಷ್ಟತಂತ್ರಗಳನ್ನು ಬಯಲಿಗೆಳೆಯಲು ವ್ಯಾಪಕವಾದ ಪ್ರಚಾರಾಂದೋಲನವನ್ನು ನಡೆಸಬೇಕು.
(ಈ ವಾರದ ಜನಶಕ್ತಿ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ
ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.
ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ
ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.
ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ
ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.
ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ
ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.
ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ
ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.
ಭವಿಷ್ಯದ ಆಶಯ
ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ 19 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಐ.ಡಿ.ಪಿ ಅನುದಾನದ ಅಡಿಯಲ್ಲಿ ನಡೆದಿರುವ ರೂ. 2,59,89,250/-ಗಳ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತೆ ಮಂಜುಶ್ರೀ ಸೇರಿ 6 ಜನ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಐ.ಡಿ.ಪಿ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಆಯಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳೇ ನಿಯಮಾನುಸಾರ ಖರೀದಿ ವ್ಯವಹಾರ ನಡೆಸಬೇಕೆಂಬ ನಿಯಮವಿದ್ದರೂ, ಕಮೀಷನ್ ಆಸೆಗಾಗಿ ಕಾಲೇಜು ಶಿಕ್ಷಣ ಇಲಾಖೆ ಕೇಂದ್ರ ಕಛೇರಿಯ ಅಧಿಕಾರಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳ ಅಧಿಕಾರವನ್ನು ಕಿತ್ತುಕೊಂಡು 2024-25ನೇ ಸಾಲಿನಲ್ಲಿ ರೂ. 2,59,89,250/-ಗಳ ಖರೀದಿ ಪ್ರಕ್ರಿಯೆಗೆ ಮುಂದಾಗಿರುತ್ತಾರೆ. ಐ.ಡಿ.ಪಿ ಅನುದಾನದಲ್ಲಿ 19 ಕಾಲೇಜುಗಳಿಗೆ ಅಗತ್ಯವಿರುವ ಡೆಸ್ಕ್ಟಾಪ್, ಲ್ಯಾಪ್ಟಾಪ್, ಯು.ಪಿ.ಎಸ್ ಮತ್ತು ಪ್ರಿಂಟರ್ಗಳ ಖರೀದಿಯಲ್ಲಿ ಸಾಕಷ್ಟು ಲೋಪಗಳಿದ್ದು, ನಿಯಮಾನುಸಾರ ಟೆಂಡರ್ ಪ್ರಕ್ರಿಯೆ ನಡೆಸದೆ ಇರುವುದು, ಖರೀದಿಸಿದ ಸಾಮಾಗ್ರಿಗಳಿಗೆ ಮಾರುಕಟ್ಟೆಗಿಂತ ಅಧಿಕ ಬೆಲೆ ನೀಡಿರುವುದು ಸೇರಿ ಹಲವಾರು ಅಂಶಗಳನ್ನು ಗುರುತಿಸಿ ಹೆಚ್ಚಿನ ತನಿಖೆ ನಡೆಸುವಂತೆ ದೂರು ಅರ್ಜಿಯಲ್ಲಿ ತಿಳಿಸಿದ್ದಾರೆ.
ಇಷ್ಟೆ ಅಲ್ಲದೆ ಇದೇ ಸಮಯದಲ್ಲಿ ರೂಸಾ ಅನುದಾನದ ಅಡಿಯಲ್ಲಿ ನಡೆದ ಖರೀದಿ ವ್ಯವಹಾರ ಹಾಗೂ ಕಾಲೇಜುಗಳಿಗೆ ವಿಜ್ಞಾನ ಪರಿಕರಗಳ ಖರೀದಿ ವ್ಯವಹಾರವನ್ನು ನಡೆಸಿದ್ದು, ಇದರಲ್ಲಿಯೂ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಈ ಎಲ್ಲಾ ಖರೀದಿ ವ್ಯವಹಾರಗಳಲ್ಲಿ ಭಾಗಿಯಾಗಿರುವ ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಡಾ.ಶೋಭಾ ಜಿ, ನಿರ್ದೇಶಕರು. ಶ್ರೀ ಚೇತನ್ ಕುಮಾರ್ ಎನ್, ಲೆಕ್ಕಾಧಿಕಾರಿಗಳು, ಡಾ.ನಂದಿತಾ ಪ್ರಸಾದ್, ಮಾಹಿತಿ ತಂತ್ರಜ್ಞಾನ ಅಧಿಕಾರಿಗಳು. ಡಾ.ಶ್ರೀಕಾಂತ್ ಆರ್, ಸಮನ್ವಯಾಧಿಕಾರಿಗಳು. ಡಾ.ಸುಮ ಎಸ್, ರೂಸಾ ಸಮನ್ವಯಾಧಿಕಾರಿಗಳು ಇವರುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆರೋಪಿಸಿರುವುದಾಗಿ ತಿಳಿಸಿದ್ದಾರೆ.
2023ನೇ ಸಾಲಿನಲ್ಲಿ ಅಂದಾಜು 23 ಕೋಟಿ ರೂಪಾಯಿಗಳ ಖರೀದಿ ವ್ಯವಹಾರವನ್ನು ಕೇಂದ್ರ ಕಛೇರಿಯಿಂದ ನಡೆಸಿದ್ದು, ಇದಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿಯನ್ನು ನೀಡದ ಕಾರಣ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಗೆ ದೂರು ನೀಡಿ, ಇಲಾಖಾ ತನಿಖೆ ನಡೆಸುವಂತೆ ಕೋರಲಾಗಿದ್ದು, ನಿಗಧಿತ ಅವಧಿಯಲ್ಲಿ ಯಾವುದೇ ಪ್ರತ್ಯುತ್ತರ ಬಂದಿರುವುದಿಲ್ಲ. ಮುಂದಿನ ದಿನಗಳಲ್ಲಿ ಅಂದಾಜು 23 ಕೋಟಿ ಮೊತ್ತದ ಖರೀದಿ ವ್ಯವಹಾರವನ್ನು ತನಿಖೆ ನಡೆಸುವಂತೆ ದೂರು ನೀಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

