ಲೈಫ್ ಸ್ಟೈಲ್
ಕರುಗಳಲ್ಲಿ ಜೋಲುಗಡಿಗೆ ಹೊಟ್ಟೆ : ಏನು ಕಾರಣ..?
- ಡಾ.ಎನ್.ಬಿ.ಶ್ರೀಧರ, ಶಿವಮೊಗ್ಗ
ಮಿಶ್ರ ತಳಿಯ ಗಂಡು ಕರುಗಳಿರಲಿ ಅಥವಾ ಹೆಣ್ಣು ಕರುಗಳಿರಲಿ ಹುಟ್ಟಿದಾಗ ಒಂದು ತಿಂಗಳವರೆಗೂ ಮೈಕೈ ತುಂಬಿಕೊಂಡು ದಷ್ಟ ಪುಷ್ಠ ವಾಗಿರುವ ಕರುಗಳು ನಂತರ ಕ್ರಮೇಣವಾಗಿ ಜೋಲು ಹೊಟ್ಟೆ (Pot belly) ಹೊತ್ತುಕೊಂಡು ಓಡಾಡುವ ಪರಿಸ್ಥಿತಿಯನ್ನು ತಲುಪುತ್ತವೆ. ಹಲವಾರು ಕೃಷಿಕರು ಇಂತಹ ಕರುಗಳಿಗೆ ಜಂತುನಾಶಕವನ್ನು ಮೇಲಿಂದ ಮೇಲೆ ನೀಡುವುದರಿಂದ ಗುಣಮುಖವಾಗುತ್ತವೆ ಎಂದು ಭಾವಿಸುತ್ತಾರೆ. ಇದು ಸರಿಯೇ? ಇದಕ್ಕೆ ಏನು ಕಾರಣ ಅಂತ ತಿಳಿಯೋಣ.
ಇಂದಿನ ಮಗುವೇ ನಾಳಿನ ನಾಗರೀಕ ಎನ್ನುವುದು ಗಾದೆ. ಇದನ್ನು ಜಾನುವಾರುಗಳಿಗೆ ಅನ್ವಯಿಸಿದರೆ ‘ಇಂದಿನ ಕರುವೇ ನಾಳಿನ ಹಸು’ ಎನ್ನಬಹುದು. ಸಾಮಾನ್ಯವಾಗಿ ಕರುಗಳಿಗೆ ಆಕಳಿನ ಹಾಲೇ ಸರ್ವಶ್ರೇಷ್ಠವಾದ ಅಹಾರ. ಹುಟ್ಟಿದ ದಿನದಿಂದಲೂ ಕನೀಷ್ಟ 3-4 ತಿಂಗಳುಗಳವರೆಗೆ ಕರುಗಳಿಗೆ ಅದರ ಶರೀರದ ತೂಕದ ಶೇ 10 ರಷ್ಟು ಹಾಲನ್ನು ನೀಡಬೇಕು. ಒಂದು ಮಿಶ್ರ ತಳಿಯ ಕರು ಹುಟ್ಟುವಾಗ ಸುಮಾರು 40 ಕೆಜಿ ತೂಕವನ್ನು ಹೊಂದಿದ್ದು ಅದಕ್ಕೆ 4 ಲೀಟರ್ನಷ್ಟು ಹಾಲನ್ನು ನೀಡಬೇಕು. ಪ್ರತಿ ದಿನ ಕರು ಸುಮಾರು 100-500 ಗ್ರಾಂನಷ್ಟು ತೂಕದಲ್ಲಿ ವರ್ಧನೆಯನ್ನು ಹೊಂದುತ್ತದೆ.
ಇದಕ್ಕೆ ತಕ್ಕಂತೆ ಹಾಲಿನ ಪ್ರಮಾಣವನ್ನು ಸಹ ಹೆಚ್ಚಿಸುವುದು ಸಹ ಬಹಳ ಮುಖ್ಯ. ಆದರೆ ಹಲವಾರು ಬಾರಿ ಹೆಚ್ಚಿನ ಹೈನುಗಾರರು ಕರುವಿಗೆ ನೀಡುವುದನ್ನು ಕಡಿಮೆ ಮಾಡಿ ಬಿಡುತ್ತಾರೆ. ಇಷ್ಟು ಹಾಲನ್ನು ನೀಡಿದರೆ ಕರುವಿಗೆ ಅಜೀರ್ಣವಾಗಿ ಬೇಧಿಯುಂಟಾಗುತ್ತದೆ ಎಂದು ಹೆದರುತ್ತಾರೆ. ಆದರೆ ಈ ರೀತಿಯ ಬೇದಿಯಾಗುವುದು ಕರುವಿಗೆ ವಿವಿಧ ಕಾರಣಗಳಿಂದ ಅಜೀರ್ಣವಾದಾಗ ಮತ್ತು ಸೂಕ್ಷ್ಮಾಣು ಜೀವಿಗಳಿಂದ ಮಲೀನವಾದ ಹಾಲನ್ನು ಕೊಟ್ಟಾಗ ಅದಕ್ಕೆ ಬಿಳಿ ಬೇದಿಯಾಗಬಹುದು.
ಅಲ್ಲದೇ ಹಾಲು ಉತ್ಪಾದಕರ ಸಂಘಕ್ಕೆ ಹಾಲನ್ನು ಮಾರಿ ಹೆಚ್ಚಿನ ಲಾಭ ಪಡೆಯುವ ಆಸೆಯೂ ಸಹ ಒಂದು ಕಾರಣ. ಆದರೆ ಇದು ತಾತ್ಕಾಲಿಕ ಲಾಭ ಮಾತ್ರ. ದೂರಗಾಮಿ ದೃಷ್ಠಿಯಲ್ಲಿ ನೋಡಿದಾಗ ಕರುವಿಗೆ ಅದರ ತಾಯಿಯ ಹಾಲನ್ನು ನಿಗದಿತ ಪ್ರಮಾಣದಲ್ಲಿ ನಿಗದಿತ ದಿನಗಳವರೆಗೆ ನೀಡಿದರೆ ಮಾತ್ರ ಉತ್ತಮ ಪಡ್ಡೆಯನ್ನು ಪಡೆಯಲು ಸಾಧ್ಯ.
ಕರುಗಳಿಗೆ ಜೋಲು ಹೊಟ್ಟೆ ಬರಲು ಮುಖ್ಯವಾದ ಕಾರಣ ಅದಕ್ಕೆ ಬೆಳವಣಿಗೆಯ ಹಂತದಲ್ಲಿ ಹಾಲನ್ನು ಮತ್ತು ಪೌಷ್ಠಿಕ ಅಹಾರವನ್ಮ್ನ ಸೂಕ್ತ ಪ್ರಮಾಣದಲ್ಲಿ ನೀಡದಿರುವುದು ಮುಖ್ಯ ಕಾರಣ.. ಮತ್ತೊಂದು ಕಾರಣವೆಂದರೆ ಎಳೆ ಕರುಗಳಿಗೆ ಜಾನುವಾರುಗಳಿಗೆ ನೀಡುವ ಕಡಿಮೆ ಪೌಷ್ಟಿಕಾಂಶಗಳನ್ನು ಹೊಂದಿದ ಪಶು ಅಹಾರವನ್ನು ನೀಡುವುದು. ಬಹಳಷ್ಟು ಕರುಗಳು ತುಂಬಾ ಆಸ್ಥೆಯಿಂದ ಅದರ ತಾಯಿಗೆ ನೀಡಿದ ಅಹಾರವನ್ನು ತಿನ್ನುತ್ತವೆ.
ಇದನ್ನು ಗಮನಿಸಿದ ರೈತರು ಅದಕ್ಕೆ ಹಾಲನ್ನು ಕಡಿಮೆ ಮಾಡಿ ಪಶು ಅಹಾರವನ್ನು ನೀಡಲು ಪ್ರಾರಂಭಿಸುತ್ತಾರೆ. ಇದೇ ಸಮಯದಲ್ಲಿ ಕರು ಹುಲ್ಲನ್ನು ತಿನ್ನಲು ಪ್ರಾರಂಭಿಸುತ್ತದೆ. ಈ ಅಹಾರವನ್ನು ಪಚನ ಮಾಡಲು ಅನುವಾಗುವಂತೆ ಕರುವಿನ ಹೊಟ್ಟೆ, ಕರುಳು ಮತ್ತು ಜೀರ್ಣಾಂಗದ ವಿವಿಧ ಭಾಗಗಳು ಜಾಸ್ತಿ ಬೆಳವಣಿಗೆ ಹೊಂದುತ್ತವೆ. ಆದರೆ ಹಾಲಿನಿಂದ ಲಭ್ಯವಾಗುವ ಕ್ಯಾಲ್ಸಿಯಂ ಮತ್ತು ರಂಜಕ ಸೂಕ್ತ ಪ್ರಮಾಣದಲ್ಲಿ ಲಭ್ಯವಾಗದೇ ಅಸ್ಥಿವ್ಯೂಹದ ಸರಿಯಾದ ಬೆಳವಣಿಗೆಯಾಗುವುದಿಲ್ಲ.
ಎಲುಬುಗಳು ಅದರಲ್ಲೂ ಹಿಂಬಾಗದ ಎಲುಬುಗಳು ಉತ್ತಮ ಬೆಳವಣಿಗೆ ಹೊಂದದೇ ಇರುವುದರಿಂದ ಕರುವನ್ನು ಹಿಂಬಾಗದಿಂದ ಗಮನಿಸಿದಾಗ ಜೋಲು ಹೊಟ್ಟೆ ಎದ್ದು ಕಾಣುತ್ತದೆ. ಇದನ್ನು ಹಳ್ಳಿಯ ಭಾಷೆಯಲ್ಲಿ ‘ಹೊಟ್ಟೆ ಡುಮ್ಮಣ್ಣ ; ಕೈಕಾಲು ಸಣ್ಣಣ್ಣ’ ಎಂದು ಕರೆಯುತ್ತಾರೆ. ಕರುಗಳಿಗೆ ಈ ಕೆಳಗಿನ ಕೋಷ್ಠಕದಲ್ಲಿ ವಿವರಿಸಿದಂತೆ ಹಾಲು ಮತ್ತು ಅಹಾರವನ್ನು ನೀಡಬೇಕು.
ಕೋಷ್ಠಕ 1 : ಕರುಗಳಿಗೆ ನೀಡಬಹುದಾದ ಹಾಲು, ಹಿಂಡಿ ಮತ್ತು ಹುಲ್ಲಿನ ಪ್ರಮಾಣ.ವಯಸ್ಸು ನೀಡಬೇಕಾದ ಹಾಲಿನ ಪ್ರಮಾಣ ನೀಡಬೇಕಾದ ಹಿಂಡಿಯ ಪ್ರಮಾಣ ಹುಲ್ಲಿನ ಪ್ರಮಾಣ.
- 1-14 ದಿನ ಗಿಣ್ಣದ ಹಾಲು ದೇಹ ತೂಕದ ಶೇ 10 ರಷ್ಟು ದಿನಕ್ಕೆ ಮೂರು ಸಲ
- 15-21 ದಿನ ಹಾಲು ದೇಹ ತೂಕದ ಶೇ 10 ರಷ್ಟು ದಿನಕ್ಕೆ ಎರಡು ಸಲ ಒಂದುಮುಷ್ಠಿ-ಒಂದು ಮುಷ್ಠಿ
- 22-60 ದಿನ ಹಾಲು ದೇಹ ತೂಕದ ಶೇ 5 ರಷ್ಟು ದಿನಕ್ಕೆ ಎರಡು ಸಲ 100-250 ಗ್ರಾ0 ಹೊಟ್ಟೆ
ತುಂಬುವಷ್ಠು - 2- 3 ತಿಂಗಳು ಕ್ರಮೇಣ ಕಡಿಮೆ ಮಾಡಿ ನಿಲ್ಲಿಸುವುದು 500 ಗ್ರಾ0 ಹೊಟ್ಟೆ ತುಂಬುವಷ್ಠು
- 3-6 ತಿ0ಗಳು —– 750-950 ಗ್ರಾ0 ಹೊಟ್ಟೆ ತುಂಬುವಷ್ಠು
- 6-12 ತಿ0ಗಳು —– 1-2.5 ಕಿಲೋ ಹೊಟ್ಟೆ ತುಂಬುವಷ್ಠು
ಮೇಲ್ಕಾಣಿಸಿದಂತೆ ಅಹಾರ ಮತ್ತು ಹಾಲನ್ನು ನೀಡಿದಲ್ಲಿ ಕರುಗಳು ಉತ್ತಮ ಬೆಳವಣಿಗೆಯನ್ನು ಹೊಂದಿ 1 ವರ್ಷ ಅವಧಿಯಲ್ಲಿ ಸುಮಾರು ಅವಧಿಯಲ್ಲಿ 180 ಕಿಲೊ ತೂಕವನ್ನು ಹೊಂದಿ ಒಂದುವರೆ ವರ್ಷದಲ್ಲಿ 250 ಕಿಲೋ ತೂಕವನ್ನು ತಲುಪಿದರೆ ನಿಗದಿತ ಅವಧಿಯಲ್ಲಿ ಬೆದೆಗೆ ಬಂದು ವರ್ಷಕ್ಕೊಂದು ಕರುವನ್ನು ನೀಡುತ್ತವೆ.
ಇದನ್ನೂ ಓದಿ : ರಿಹನ್ನಾ-ಗ್ರೇಟಾ-ಮೀನಾ ಗ್ರೇಟಾ ಮೋದಿ ಗ್ರೇಟಾ..?
ಇಲ್ಲದಿದ್ದಲ್ಲಿ ಕರುಗಳು ಒರಟಾದ ಮತ್ತು ಒಣಕಲು ಚರ್ಮವನ್ನು ಹೊಂದಿದ್ದು ಉದ್ದನೇ ಕೂದಲನ್ನು ಹೊಂದಿರುತ್ತವೆ. ಕಣ್ಣುಗಳು ನಿಸ್ತೇಜವಾಗಿದ್ದು, ರಕ್ತಹೀನತೆಯನ್ನು ಹೊಂದಿರುತ್ತವೆ. ತಿಂದ ಅಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಇಂತಹ ಕರುಗಳು ನಿಗದಿತ ಪ್ರಮಾಣದಲ್ಲಿ ಬೆಳವಣಿಗೆ ಹೊಂದಿ ಸೂಕ್ತ ಸಮಯದಲ್ಲಿ ಬೆದೆಗೆ ಬರುವುದಿಲ್ಲ. ಬೆದೆಗೆ ಬಂದರೂ ಸಹ ಗರ್ಭ ಕೋಶ ಸೂಕ್ತ ರೀತಿಯಲ್ಲಿ ಬೆಳವಣಿಗೆಯಾಗದೇ ಇರುವುದರಿಂದ ಫಲ ಕಟ್ಟುವುದಿಲ್ಲ.
ಇಂತಹ ಕರುಗಳಿಗೆ ಜಂತು ನಾಶಕ ಹಾಕುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಬದಲಾಗಿ ಉತ್ತಮ ಪೌಷ್ಠಿಕಾಂಶವನ್ನು ಹೊಂದಿದ ಕರುಗಳಿಗೆಂದೇ ಲಭ್ಯವಿರುವ ಕನೀಷ್ಠ ಶೇ 22 ಪ್ರಮಾಣದಲ್ಲಿ ಸುಲಭವಾಗಿ ಜೀರ್ಣ ಹೊಂದುವ ಪ್ರೊಟೀನ್ಯುಕ್ತ ಅಹಾರವನ್ನು ದೇಹ ತೂಕಕ್ಕೆ ತಕ್ಕಂತೆ ತಜ್ಞ ಪಶು ವೈದ್ಯರ ಸಲಹೆಯಂತೆ ಬಳಸಬೇಕು.
ಉತ್ತಮ ಖನಿಜ ಮಿಶ್ರಣವನ್ನು ಸೂಕ್ತ ಪ್ರಮಾಣದಲ್ಲಿ ನೀಡಬೇಕು. ಇವೆಲ್ಲವುಗಳ ‘ಇಂದಿನ ಕರುವೇ ನಾಳಿನ ಹಸು’ ಎಂಬ ನಾಣ್ಣುಡಿಯನ್ನು ಜ್ಞಾಪಿಸಿಕೊಂಡು ಕರುವನ್ನು ಉತ್ತಮವಾಗಿ ಸಾಕಿ ಈ ಎಲ್ಲ ತೊಂದರೆಗಳನ್ನು ತಪ್ಪಿಸಿಕೊಳ್ಳುವುದು ಉತ್ತಮ.
ಇದರ ಕುರಿತು ಡಾ.ಎನ್.ಬಿ.ಶ್ರೀಧರ ಅವರ ಯು ಟ್ಯೂಬ್ ವಿಡಿಯೋ ವೀಕ್ಷಿಸಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

ದಿನದ ಸುದ್ದಿ
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್ಗಳಾದ ಓಲಾ, ಉಬರ್, ರ್ಯಾಪಿಡೋ ನಂತಹ ಆ್ಯಪ್ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
http://Visit : www.suddidina.com
ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.
ನಮ್ಮ ಬಿಎಂಟಿಸಿ 2.0′ ಆ್ಯಪ್ನಲ್ಲಿ ಏನಿದೆ ಹೊಸತು?
ಖಾಸಗಿ ಆ್ಯಪ್ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್ನಲ್ಲಿ ಬಿಎಂಟಿಸಿ ನೆಟ್ವರ್ಕ್ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್ಗಳು ಸೇರಿದಂತೆ ಒಟ್ಟು 6,938 ಬಸ್ಗಳಿವೆ. ಪ್ರತಿದಿನ ಸರಾಸರಿ 6,200 ಬಸ್ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.
ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ:
ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
200 ಹೊಸ ಮಿನಿ ಬಸ್ಗಳ ಖರೀದಿ:
ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.
ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:
ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್ಗಳ ಪೈಕಿ 200 ಮಿನಿ ಎಸಿ ಇ-ಬಸ್ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ದಿನದ ಸುದ್ದಿ
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.
http://Visit : www.suddidina.com
ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.
ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.
ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.
ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.
ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

-
ದಿನದ ಸುದ್ದಿ2 hours agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ10 hours agoಬೆಂಗಳೂರು ಇ-ಕಾಮರ್ಸ್ ಡಾರ್ಕ್ ಸ್ಟೋರ್ಗಳಲ್ಲಿ ಅವಧಿ ಮೀರಿದ ಆಹಾರ, ಔಷಧ ಪತ್ತೆ
-
ದಿನದ ಸುದ್ದಿ2 hours ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 hours agoಮೊದಲ ಬಾರಿಗೆ ಗೋನೂರು ಕೆರೆಗೆ ಹರಿದು ಬಂದ ಭದ್ರೆ – ರೈತರ ಸಂಭ್ರಮಾಚರಣೆ
-
ದಿನದ ಸುದ್ದಿ2 hours agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ2 hours agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ9 hours agoಸ್ಕ್ರೀನ್ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ
-
ದಿನದ ಸುದ್ದಿ9 hours agoಮಧ್ಯಪ್ರಾಚ್ಯದಲ್ಲಿ ಏಳು ತಿಂಗಳಿನಿಂದ ಯುದ್ಧದ ಕಾರ್ಮೋಡ – ಇರಾನ್–ಅಮೆರಿಕ ಸಂಘರ್ಷ ತೀವ್ರ


