ದಿನದ ಸುದ್ದಿ
ಆತ್ಮಕತೆ | ಹಾಸ್ಟೆಲ್ನಲ್ಲಿ ಜಾತಿ ಜಗಳ
![](https://suddidina.com/wp-content/uploads/2024/05/runadagani_rudrappa_hanagawadi_suddidina.jpg)
- ರುದ್ರಪ್ಪ ಹನಗವಾಡಿ
ನಾನು ಮೈಸೂರಿಗೆ ಬಂದು ಮಹಾರಾಜ ಕಾಲೇಜ್ ಹಾಸ್ಟೆಲ್ ಸೇರಿಕೊಂಡಾಗ ತಡವಾಗಿ ಸೇರಿಕೊಂಡವರಿಗೆ ಎರಡು ಮೂರು ಜನರಿರುವ ರೂಂಗಳನ್ನು ಅಲಾಟ್ ಮಾಡುತ್ತಿದ್ದರು. ನಮಗೆ ರೂಂ ನಂ. ಎ4 ಎಂಬಲ್ಲಿ ನಾಲ್ಕು ಜನರಿಗೆ ನಾನು ಮತ್ತು ಎಲ್. ರವೀಂದ್ರ, ಎರಡನೇ ಬಿ.ಎ.ಯವರಾಗಿದ್ದವರು.
ವೈ. ಮಹೇಶ ಮೊದಲ ಬಿ.ಎ. ಮತ್ತು ಪಿಯುಸಿಗೆ ಸೇರಿದ್ದ ಮುರಳೀಧರ ಇದ್ದೆವು. ರವೀಂದ್ರ ಸದಾ ಹಿಂದಿ ಹಾಡಿನ ಭಕ್ತನಾಗಿದ್ದು ರಾಜೇಶ್ ಖನ್ನಾನ ಹೇರ್ ಸ್ಟೈಲ್ನಲ್ಲಿ ಟಾಕುಟೀಕಾಗಿ ತರಗತಿಗೆ ಬರುತ್ತಿದ್ದ. ಮುರಳಿ ಹತ್ತಿರದ ಇಲವಾಲ ಊರಿನವನಾಗಿದ್ದರಿಂದ ದಿನವೂ ಅವರ ಊರಿನಿಂದ ಪರಿಚಯಸ್ಥರು ಬಂದು ಸಂಜೆ ವೇಳೆಯಲ್ಲಿ ಹೊರಗೆ ಹೋಗುತ್ತಿದ್ದ. ನಾನು ಮತ್ತು ಮಹೇಶ ಇಬ್ಬರೇ ಒಬ್ಬರಿಗೊಬ್ಬರು ಹತ್ತಿರವಾಗಿದ್ದೆವು. ಸಭೆ ಸಮಾರಂಭಗಳಿಗೆ ಮತ್ತು ಸಮಾಜವಾದಿ ಯುವ ಜನ ಸಭಾ ಕೆಲಸಗಳಿಗೆ ಜೊತೆಯಲ್ಲಿಯೇ ಹೋಗುತ್ತಿದ್ದೆವು.
ಮಹಾರಾಜ ಕಾಲೇಜ್ ಹಾಸ್ಟೆಲ್ವೊಂದು ಸಾರ್ವಜನಿಕ ಹಾಸ್ಟೆಲ್ ಆಗಿದ್ದು ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಅವಕಾಶವಿತ್ತಾದರೂ, ಸ್ಥಳೀಯ ಒಕ್ಕಲಿಗ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಇರುತ್ತಿತ್ತು. ಪರಿಶಿಷ್ಟ ಜಾತಿ / ಪಂಗಡಗಳಿಗೆ ಸಾಕಷ್ಟು ವಿದ್ಯಾರ್ಥಿಗಳಿದ್ದರೂ ಯಾರೂ ತಮ್ಮ ಜಾತಿ ಗುಂಪುಗಳಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ನಾನು ವಿಶೇಷವಾಗಿ 300 ಕಿ.ಮೀ. ದೂರದಿಂದ ಬಂದವನಾಗಿ ನನಗೆ ಪರಿಚಿತರು, ಜಾತಿಗರು ಯಾರೂ ಗೊತ್ತಿರಲಿಲ್ಲ.
ನನ್ನ ರೂಮ್ಮೇಟ್ಗಳಲ್ಲಿ ಮಹೇಶ ಮತ್ತು ಮುರಳಿ ಒಕ್ಕಲಿಗರಾಗಿದ್ದರು. ರವೀಂದ್ರ ಕೂಡ ಪರಿಶಿಷ್ಟ ಜಾತಿಯವನಾಗಿದ್ದರೂ ಅವರ ತಂದೆ ಆಗಿನ ಕಾಲದ ಅರಣ್ಯ ಇಲಾಖೆಯಲ್ಲಿ ಆರ್.ಎಫ್.ಓ. ಆಗಿದ್ದರಿಂದ ಅವನ ಸಾಮಾಜಿಕ ಹಿನ್ನೆಲೆ ಗೊತ್ತಾಗುತ್ತಿರಲಿಲ್ಲ. ನಾನು ದಾವಣಗೆರೆ ಕಡೆಯವ ಮತ್ತು ಹೆಸರು ರುದ್ರಪ್ಪ ಎಂಬೀ ಕಾರಣದಿಂದ ಯಾರೋ ಲಿಂಗಾಯತರವನಿರಬೇಕೆಂದು ನನ್ನ ಬಗ್ಗೆ ಏನೂ ತಿಳಿಯದವರು ಭಾವಿಸಿದ್ದರು.
ಮಹಾರಾಜಾ ಕಾಲೇಜ್ ಹಾಸ್ಟೆಲ್ನಲ್ಲಿನ ಊಟ ಬಹಳ ಅದ್ದೂರಿಯಾಗಿಯೇ ಇರುತ್ತಿತ್ತು. ಬೆಳಿಗ್ಗೆ ಕಾಫಿ, ಟೀ ನಂತರ 9 ರಿಂದ 11 ಗಂಟೆಯವರೆಗೆ ಊಟ, ಮಧ್ಯಾಹ್ನ 1 ರಿಂದ 2ಕ್ಕೆ ತಿಂಡಿ, ರಾತ್ರಿಗೆ 8 ರಿಂದ ಊಟವಿರುತ್ತಿತ್ತು. ಮಾಂಸಹಾರಕ್ಕೆ ಪ್ರತ್ಯೇಕವಾದ ಮೆಸ್ ಇದ್ದು, ಅಲ್ಲಿ ವಾರದಲ್ಲಿ 5 ದಿನಗಳು ಮಾಂಸಾಹಾರ ಇರುತ್ತಿತ್ತು. ಸಸ್ಯಾಹಾರಿ ಮೆಸ್ನಲ್ಲಿ ಮಜ್ಜಿಗೆ ಹುಳಿ, ತೊವೆ, ತುಪ್ಪ, ಮೊಸರು, ಬಾಳೆಹಣ್ಣುಗಳಿರುತ್ತಿದ್ದವು. ವಾರದ ಮತ್ತು ತಿಂಗಳ ಕೊನೆಯಲ್ಲಿ ವಿಶೇಷವಾದ ಊಟಗಳು ಇರುತ್ತಿದ್ದವು. ಅದಕ್ಕಾಗಿ ಹೊರಗಿನ ಸ್ನೇಹಿತರನ್ನು ಆಹ್ವಾನಿಸಬಹುದಿತ್ತು.
ಇಂತಹ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿಗಳು ಮೈಸೂರಿನ ಅಶೋಕಪುರಂ ಗೆಳೆಯರನ್ನು ಆಹ್ವಾನಿಸಿದ್ದರು. ಒಕ್ಕಲಿಗ ವಿದ್ಯಾರ್ಥಿಗಳೂ ಕೂಡ ಕೆ.ಜಿ. ಕೊಪ್ಪಲ ವಿದ್ಯಾರ್ಥಿಸ್ನೇಹಿತರನ್ನು ಆಹ್ವಾನಿಸಿದ್ದರು. ಊಟದ ಹಾಲ್ನಲ್ಲಿ ಮೊದಲ ಬ್ಯಾಚ್ನಲ್ಲಿಯೇ ಊಟ ಮಾಡುವ ಧಾವಂತದಲ್ಲಿ ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ವಿದ್ಯಾರ್ಥಿಗಳಲ್ಲಿ ಊಟಕ್ಕೆ ಕೂರುವ ಸೀಟಿನ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿತ್ತು. ಊಟದ ಸೀಟಿಗಾಗಿ ಆದ ಗಲಾಟೆ ಅಲ್ಲಿಗೆ ಮುಗಿಯದೆ ಹೊರಗಿನ ರೌಡಿಗಳನ್ನು ಕರೆತಂದು ಎಸ್.ಸಿ. ವಿದ್ಯಾರ್ಥಿಗಳಲ್ಲಿ ಒಬ್ಬೊಬ್ಬರನ್ನೂ ಗುರುತಿಸುತ್ತಾ ಥಳಿಸಿದರು.
ಎಸ್.ಸಿ. ಹುಡುಗರನ್ನು ಕಂಡರೆ ಜಾತಿವಾದಿ ಕೆಲವು ಒಕ್ಕಲಿಗ ವಿದ್ಯಾರ್ಥಿಗಳು ತಾವು ಪ್ರತಿ ತಿಂಗಳೂ ಹಣ ಪಾವತಿಸುತ್ತಿದ್ದು, ಎಸ್.ಸಿ. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಂದ ಹಣದಲ್ಲಿ ಬಿಟ್ಟಿ ಕೂಳು ತಿಂದು ಕೊಬ್ಬಿದ್ದಾರೆ ಎನ್ನುವ ಧೋರಣೆ ಅವರಲ್ಲಿತ್ತು. ಬಳೆ ಶ್ರೀನಿವಾಸ, ನಂಜಪ್ಪ ಮತ್ತು ಗೋವಿಂದ ಎಂಬ ಮೂವರು ಕಾಲೇಜಿನ ವಿದ್ಯಾರ್ಥಿಗಳಾಗಿದ್ದರೂ, ರೌಡಿಗಳಂತೆ ವರ್ತಿಸುತ್ತಿದ್ದರು. ಮೈಸೂರು ಜಿಲ್ಲೆಯ ಹತ್ತಿರದ ಹಳ್ಳಿಗರಾಗಿದ್ದರಿಂದ ಸದಾ ವಿದ್ಯಾರ್ಥಿಗಳಲ್ಲದವರ ಜೊತೆ ಹಾಸ್ಟೆಲ್ ಒಳಗೆ ಇದ್ದ ಸೋಮಾರಿ ಕಟ್ಟೆಯಲ್ಲಿ ಕೂತು ಹರಟುತ್ತಿದ್ದರು.
ಈ ರೀತಿ ಕರೆತಂದ ರೌಡಿಗಳಲ್ಲಿ ಒಬ್ಬ ನನ್ನನ್ನು ಹೊಡೆಯಲು ಬಂದು ಇನ್ನೇನು ಏಟು ಕೊಡುವುದರಲ್ಲಿದ್ದ. ಅಷ್ಟರಲ್ಲೇ ಅಲ್ಲಿದ್ದ ಗೋವಿಂದ `ಲೇ ಅವನು ಎಸ್.ಸಿ. ಅಲ್ಲ, ಲಿಂಗಾಯತ ಬಿಡ್ರೊ’ ಎಂದು ಕೂಗಿದ. ಹಾಗಾಗಿ ನಾನು ಏಟು ಬೀಳುವುದನ್ನು ತಪ್ಪಿಸಿಕೊಂಡು ರೂಮ್ಗೆ ಹೋಗಿ ಬಚಾವಾಗಿದ್ದೆ. ನಂತರದ ದಿನಗಳಲ್ಲಿ ನನ್ನ ಜಾತಿ ಅವನಿಗೆ ತಿಳಿದು ತನ್ನ ಅಂದಿನ ದಿನದ ತಪ್ಪಿನ ಅರಿವಾಗಿತ್ತು.
ಇದೆಲ್ಲ ಆಗಿ ಕೆಲವು ದಿನಗಳಲ್ಲಿ ಮಳವಳ್ಳಿ ತಾಲ್ಲೂಕಿನ ದಲಿತರಾಗಿದ್ದ ರಾಜಕಾರಣಿ ಮಾಜಿ ಮಂತ್ರಿ ಮಲ್ಲಿಕಾರ್ಜುನ ಸ್ವಾಮಿ ಆಗ ಸಿಂಡಿಕೇಟ್ ಸದಸ್ಯರಾಗಿದ್ದು, ಕಾಲೇಜ್ ಹಾಸ್ಟೆಲ್ನಲ್ಲಿದ್ದ ವಿಶೇಷವಾಗಿ ಏಟು ತಿಂದಿದ್ದ ಹುಡುಗರನ್ನು ನೋಡಲು ವಾರ್ಡನ್ ಶಿವಲಿಂಗಯ್ಯನವರ ಜೊತೆ ಬಂದಿದ್ದರು. ಆಗ ನನ್ನನ್ನು ಸಹ ಕರೆಸಿ ವಿಚಾರಿಸಿ ಚೆನ್ನಾಗಿ ಓದುವ ಬಗ್ಗೆ ಬುದ್ಧಿ ಮಾತು ಹೇಳಿದ್ದರು. ಆದರೆ ನಮ್ಮ ರೂಮ್ನಲ್ಲಿ ಮಹೇಶನಾಗಲೀ ಮುರಳಿಯಾಗಲೀ ಜಾತಿಕೂಪದ ಜಗಳಗಳಿಂದ ದೂರ ಇದ್ದರು. ಮತ್ತೆ ನಾನು ಎಂ.ಎ.ನಲ್ಲಿ ಗಂಗೋತ್ರಿಯ ಪಿ.ಜಿ. ಹಾಸ್ಟೆಲ್ ಸೇರಿದಾಗ ಅಲ್ಲಿಯೂ ಒಕ್ಕಲಿಗ ವಿದ್ಯಾರ್ಥಿಗಳಲ್ಲಿನ ಕೆಲವರು ದಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಬ್ರಾಹ್ಮಣರೆಂದು ಹಂಗಿಸುತ್ತಿದ್ದರು.
ನಾನೊಮ್ಮೆ ಬೀರು ಬಾಟಲಿಯಲ್ಲಿ ಕುಡಿಯಲು ನೀರು ತುಂಬಿಕೊಳ್ಳಲು ಹೋಗುವಾಗ `ಇವರಿಗೆ ಬಿಟ್ಟಿ ಊಟದ ಜೊತೆ ಸರ್ಕಾರ ಬೀರು ಕೂಡ ಕೊಡುತ್ತದೆ ನೋಡ್ರೋ ಎಂದು ವ್ಯಂಗ್ಯವಾಗಿ ಮಾತಾಡುತ್ತಿದ್ದನ್ನು ನಾನು ಮಹದೇವನಿಗೆ ಹೇಳಿದ್ದೆ. ಅವನು ಮುಂದೊAದು ದಿನ ಪೂರ್ಣಚಂದ್ರ ತೇಜಸ್ವಿ ಅವರಿಗೆ ತಿಳಿಸಿದ ಕಾರಣ ಅವರು ಹಾಸ್ಟೆಲ್ನಲ್ಲಿದ್ದ ಕೆಲವು ಒಕ್ಕಲಿಗ ಹುಡುಗರನ್ನು ಕರೆಸಿ ಚೆನ್ನಾಗಿ ಬೈದು ಕಳಿಸಿದ್ದರಂತೆ. ಆ ನಂತರದ ದಿನಗಳಲ್ಲಿ ಅವರೆಲ್ಲ ನಮ್ಮನ್ನು ಕಂಡರೆ ಕೃತಕ ಗೌರವ ತೋರುತ್ತಿದ್ದರು. ನಂತರ ಎಂ.ಎ. ಮುಗಿಯುವವರೆಗೆ ಮತ್ತಾವ ಜಾತಿ ಜಗಳದ ಸೋಂಕು ಹಾಸ್ಟೆಲ್ನಲ್ಲಿ ಮರುಕಳಿಸಲಿಲ್ಲ.
ಮೈಸೂರಿನಲ್ಲಿ ಓದಲು ಮಹಾರಾಜಾ ಕಾಲೇಜು ನಂತರ ಗಂಗೋತ್ರಿಯಲ್ಲಿ ಎಂ.ಎ. ಮಾಡಲು ಸಿಕ್ಕ ಅವಕಾಶದ ಜೊತೆಗೆ ಸಿಕ್ಕ ಹಾಸ್ಟೆಲ್ ಸೌಲಭ್ಯಗಳು, ಜೊತೆಗೆ ಅನೇಕ ಹಿನ್ನೆಲೆಯ ಸ್ನೇಹಿತರ ಬಳಗ ದೊರಕಲು ಅವಕಾಶವಾಯಿತು. ಶೈಕ್ಷಣಿಕ ಶಿಕ್ಷಣದ ಜೊತೆಗೆ ಹಲವು ಹಿನ್ನೆಲೆಯ ವಿದ್ಯಾರ್ಥಿಗಳ ಪರಿಚಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಬಹುದೊಡ್ಡ ಬುನಾದಿಯಾಯಿತು. ಅದಕ್ಕೆಲ್ಲ ಕಾರಣರಾದವರನ್ನು ಸದಾ ನೆನೆಯದಿರಲಾರೆ.
ಮುಂದುವರಿಯುವುದು…
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!