ದಿನದ ಸುದ್ದಿ
ಆತ್ಮಕತೆ | ಹಾಸ್ಟೆಲ್ನಲ್ಲಿ ಜಾತಿ ಜಗಳ
- ರುದ್ರಪ್ಪ ಹನಗವಾಡಿ
ನಾನು ಮೈಸೂರಿಗೆ ಬಂದು ಮಹಾರಾಜ ಕಾಲೇಜ್ ಹಾಸ್ಟೆಲ್ ಸೇರಿಕೊಂಡಾಗ ತಡವಾಗಿ ಸೇರಿಕೊಂಡವರಿಗೆ ಎರಡು ಮೂರು ಜನರಿರುವ ರೂಂಗಳನ್ನು ಅಲಾಟ್ ಮಾಡುತ್ತಿದ್ದರು. ನಮಗೆ ರೂಂ ನಂ. ಎ4 ಎಂಬಲ್ಲಿ ನಾಲ್ಕು ಜನರಿಗೆ ನಾನು ಮತ್ತು ಎಲ್. ರವೀಂದ್ರ, ಎರಡನೇ ಬಿ.ಎ.ಯವರಾಗಿದ್ದವರು.
ವೈ. ಮಹೇಶ ಮೊದಲ ಬಿ.ಎ. ಮತ್ತು ಪಿಯುಸಿಗೆ ಸೇರಿದ್ದ ಮುರಳೀಧರ ಇದ್ದೆವು. ರವೀಂದ್ರ ಸದಾ ಹಿಂದಿ ಹಾಡಿನ ಭಕ್ತನಾಗಿದ್ದು ರಾಜೇಶ್ ಖನ್ನಾನ ಹೇರ್ ಸ್ಟೈಲ್ನಲ್ಲಿ ಟಾಕುಟೀಕಾಗಿ ತರಗತಿಗೆ ಬರುತ್ತಿದ್ದ. ಮುರಳಿ ಹತ್ತಿರದ ಇಲವಾಲ ಊರಿನವನಾಗಿದ್ದರಿಂದ ದಿನವೂ ಅವರ ಊರಿನಿಂದ ಪರಿಚಯಸ್ಥರು ಬಂದು ಸಂಜೆ ವೇಳೆಯಲ್ಲಿ ಹೊರಗೆ ಹೋಗುತ್ತಿದ್ದ. ನಾನು ಮತ್ತು ಮಹೇಶ ಇಬ್ಬರೇ ಒಬ್ಬರಿಗೊಬ್ಬರು ಹತ್ತಿರವಾಗಿದ್ದೆವು. ಸಭೆ ಸಮಾರಂಭಗಳಿಗೆ ಮತ್ತು ಸಮಾಜವಾದಿ ಯುವ ಜನ ಸಭಾ ಕೆಲಸಗಳಿಗೆ ಜೊತೆಯಲ್ಲಿಯೇ ಹೋಗುತ್ತಿದ್ದೆವು.
ಮಹಾರಾಜ ಕಾಲೇಜ್ ಹಾಸ್ಟೆಲ್ವೊಂದು ಸಾರ್ವಜನಿಕ ಹಾಸ್ಟೆಲ್ ಆಗಿದ್ದು ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಅವಕಾಶವಿತ್ತಾದರೂ, ಸ್ಥಳೀಯ ಒಕ್ಕಲಿಗ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಇರುತ್ತಿತ್ತು. ಪರಿಶಿಷ್ಟ ಜಾತಿ / ಪಂಗಡಗಳಿಗೆ ಸಾಕಷ್ಟು ವಿದ್ಯಾರ್ಥಿಗಳಿದ್ದರೂ ಯಾರೂ ತಮ್ಮ ಜಾತಿ ಗುಂಪುಗಳಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ನಾನು ವಿಶೇಷವಾಗಿ 300 ಕಿ.ಮೀ. ದೂರದಿಂದ ಬಂದವನಾಗಿ ನನಗೆ ಪರಿಚಿತರು, ಜಾತಿಗರು ಯಾರೂ ಗೊತ್ತಿರಲಿಲ್ಲ.
ನನ್ನ ರೂಮ್ಮೇಟ್ಗಳಲ್ಲಿ ಮಹೇಶ ಮತ್ತು ಮುರಳಿ ಒಕ್ಕಲಿಗರಾಗಿದ್ದರು. ರವೀಂದ್ರ ಕೂಡ ಪರಿಶಿಷ್ಟ ಜಾತಿಯವನಾಗಿದ್ದರೂ ಅವರ ತಂದೆ ಆಗಿನ ಕಾಲದ ಅರಣ್ಯ ಇಲಾಖೆಯಲ್ಲಿ ಆರ್.ಎಫ್.ಓ. ಆಗಿದ್ದರಿಂದ ಅವನ ಸಾಮಾಜಿಕ ಹಿನ್ನೆಲೆ ಗೊತ್ತಾಗುತ್ತಿರಲಿಲ್ಲ. ನಾನು ದಾವಣಗೆರೆ ಕಡೆಯವ ಮತ್ತು ಹೆಸರು ರುದ್ರಪ್ಪ ಎಂಬೀ ಕಾರಣದಿಂದ ಯಾರೋ ಲಿಂಗಾಯತರವನಿರಬೇಕೆಂದು ನನ್ನ ಬಗ್ಗೆ ಏನೂ ತಿಳಿಯದವರು ಭಾವಿಸಿದ್ದರು.
ಮಹಾರಾಜಾ ಕಾಲೇಜ್ ಹಾಸ್ಟೆಲ್ನಲ್ಲಿನ ಊಟ ಬಹಳ ಅದ್ದೂರಿಯಾಗಿಯೇ ಇರುತ್ತಿತ್ತು. ಬೆಳಿಗ್ಗೆ ಕಾಫಿ, ಟೀ ನಂತರ 9 ರಿಂದ 11 ಗಂಟೆಯವರೆಗೆ ಊಟ, ಮಧ್ಯಾಹ್ನ 1 ರಿಂದ 2ಕ್ಕೆ ತಿಂಡಿ, ರಾತ್ರಿಗೆ 8 ರಿಂದ ಊಟವಿರುತ್ತಿತ್ತು. ಮಾಂಸಹಾರಕ್ಕೆ ಪ್ರತ್ಯೇಕವಾದ ಮೆಸ್ ಇದ್ದು, ಅಲ್ಲಿ ವಾರದಲ್ಲಿ 5 ದಿನಗಳು ಮಾಂಸಾಹಾರ ಇರುತ್ತಿತ್ತು. ಸಸ್ಯಾಹಾರಿ ಮೆಸ್ನಲ್ಲಿ ಮಜ್ಜಿಗೆ ಹುಳಿ, ತೊವೆ, ತುಪ್ಪ, ಮೊಸರು, ಬಾಳೆಹಣ್ಣುಗಳಿರುತ್ತಿದ್ದವು. ವಾರದ ಮತ್ತು ತಿಂಗಳ ಕೊನೆಯಲ್ಲಿ ವಿಶೇಷವಾದ ಊಟಗಳು ಇರುತ್ತಿದ್ದವು. ಅದಕ್ಕಾಗಿ ಹೊರಗಿನ ಸ್ನೇಹಿತರನ್ನು ಆಹ್ವಾನಿಸಬಹುದಿತ್ತು.
ಇಂತಹ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿಗಳು ಮೈಸೂರಿನ ಅಶೋಕಪುರಂ ಗೆಳೆಯರನ್ನು ಆಹ್ವಾನಿಸಿದ್ದರು. ಒಕ್ಕಲಿಗ ವಿದ್ಯಾರ್ಥಿಗಳೂ ಕೂಡ ಕೆ.ಜಿ. ಕೊಪ್ಪಲ ವಿದ್ಯಾರ್ಥಿಸ್ನೇಹಿತರನ್ನು ಆಹ್ವಾನಿಸಿದ್ದರು. ಊಟದ ಹಾಲ್ನಲ್ಲಿ ಮೊದಲ ಬ್ಯಾಚ್ನಲ್ಲಿಯೇ ಊಟ ಮಾಡುವ ಧಾವಂತದಲ್ಲಿ ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ವಿದ್ಯಾರ್ಥಿಗಳಲ್ಲಿ ಊಟಕ್ಕೆ ಕೂರುವ ಸೀಟಿನ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿತ್ತು. ಊಟದ ಸೀಟಿಗಾಗಿ ಆದ ಗಲಾಟೆ ಅಲ್ಲಿಗೆ ಮುಗಿಯದೆ ಹೊರಗಿನ ರೌಡಿಗಳನ್ನು ಕರೆತಂದು ಎಸ್.ಸಿ. ವಿದ್ಯಾರ್ಥಿಗಳಲ್ಲಿ ಒಬ್ಬೊಬ್ಬರನ್ನೂ ಗುರುತಿಸುತ್ತಾ ಥಳಿಸಿದರು.
ಎಸ್.ಸಿ. ಹುಡುಗರನ್ನು ಕಂಡರೆ ಜಾತಿವಾದಿ ಕೆಲವು ಒಕ್ಕಲಿಗ ವಿದ್ಯಾರ್ಥಿಗಳು ತಾವು ಪ್ರತಿ ತಿಂಗಳೂ ಹಣ ಪಾವತಿಸುತ್ತಿದ್ದು, ಎಸ್.ಸಿ. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಂದ ಹಣದಲ್ಲಿ ಬಿಟ್ಟಿ ಕೂಳು ತಿಂದು ಕೊಬ್ಬಿದ್ದಾರೆ ಎನ್ನುವ ಧೋರಣೆ ಅವರಲ್ಲಿತ್ತು. ಬಳೆ ಶ್ರೀನಿವಾಸ, ನಂಜಪ್ಪ ಮತ್ತು ಗೋವಿಂದ ಎಂಬ ಮೂವರು ಕಾಲೇಜಿನ ವಿದ್ಯಾರ್ಥಿಗಳಾಗಿದ್ದರೂ, ರೌಡಿಗಳಂತೆ ವರ್ತಿಸುತ್ತಿದ್ದರು. ಮೈಸೂರು ಜಿಲ್ಲೆಯ ಹತ್ತಿರದ ಹಳ್ಳಿಗರಾಗಿದ್ದರಿಂದ ಸದಾ ವಿದ್ಯಾರ್ಥಿಗಳಲ್ಲದವರ ಜೊತೆ ಹಾಸ್ಟೆಲ್ ಒಳಗೆ ಇದ್ದ ಸೋಮಾರಿ ಕಟ್ಟೆಯಲ್ಲಿ ಕೂತು ಹರಟುತ್ತಿದ್ದರು.
ಈ ರೀತಿ ಕರೆತಂದ ರೌಡಿಗಳಲ್ಲಿ ಒಬ್ಬ ನನ್ನನ್ನು ಹೊಡೆಯಲು ಬಂದು ಇನ್ನೇನು ಏಟು ಕೊಡುವುದರಲ್ಲಿದ್ದ. ಅಷ್ಟರಲ್ಲೇ ಅಲ್ಲಿದ್ದ ಗೋವಿಂದ `ಲೇ ಅವನು ಎಸ್.ಸಿ. ಅಲ್ಲ, ಲಿಂಗಾಯತ ಬಿಡ್ರೊ’ ಎಂದು ಕೂಗಿದ. ಹಾಗಾಗಿ ನಾನು ಏಟು ಬೀಳುವುದನ್ನು ತಪ್ಪಿಸಿಕೊಂಡು ರೂಮ್ಗೆ ಹೋಗಿ ಬಚಾವಾಗಿದ್ದೆ. ನಂತರದ ದಿನಗಳಲ್ಲಿ ನನ್ನ ಜಾತಿ ಅವನಿಗೆ ತಿಳಿದು ತನ್ನ ಅಂದಿನ ದಿನದ ತಪ್ಪಿನ ಅರಿವಾಗಿತ್ತು.
ಇದೆಲ್ಲ ಆಗಿ ಕೆಲವು ದಿನಗಳಲ್ಲಿ ಮಳವಳ್ಳಿ ತಾಲ್ಲೂಕಿನ ದಲಿತರಾಗಿದ್ದ ರಾಜಕಾರಣಿ ಮಾಜಿ ಮಂತ್ರಿ ಮಲ್ಲಿಕಾರ್ಜುನ ಸ್ವಾಮಿ ಆಗ ಸಿಂಡಿಕೇಟ್ ಸದಸ್ಯರಾಗಿದ್ದು, ಕಾಲೇಜ್ ಹಾಸ್ಟೆಲ್ನಲ್ಲಿದ್ದ ವಿಶೇಷವಾಗಿ ಏಟು ತಿಂದಿದ್ದ ಹುಡುಗರನ್ನು ನೋಡಲು ವಾರ್ಡನ್ ಶಿವಲಿಂಗಯ್ಯನವರ ಜೊತೆ ಬಂದಿದ್ದರು. ಆಗ ನನ್ನನ್ನು ಸಹ ಕರೆಸಿ ವಿಚಾರಿಸಿ ಚೆನ್ನಾಗಿ ಓದುವ ಬಗ್ಗೆ ಬುದ್ಧಿ ಮಾತು ಹೇಳಿದ್ದರು. ಆದರೆ ನಮ್ಮ ರೂಮ್ನಲ್ಲಿ ಮಹೇಶನಾಗಲೀ ಮುರಳಿಯಾಗಲೀ ಜಾತಿಕೂಪದ ಜಗಳಗಳಿಂದ ದೂರ ಇದ್ದರು. ಮತ್ತೆ ನಾನು ಎಂ.ಎ.ನಲ್ಲಿ ಗಂಗೋತ್ರಿಯ ಪಿ.ಜಿ. ಹಾಸ್ಟೆಲ್ ಸೇರಿದಾಗ ಅಲ್ಲಿಯೂ ಒಕ್ಕಲಿಗ ವಿದ್ಯಾರ್ಥಿಗಳಲ್ಲಿನ ಕೆಲವರು ದಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಬ್ರಾಹ್ಮಣರೆಂದು ಹಂಗಿಸುತ್ತಿದ್ದರು.
ನಾನೊಮ್ಮೆ ಬೀರು ಬಾಟಲಿಯಲ್ಲಿ ಕುಡಿಯಲು ನೀರು ತುಂಬಿಕೊಳ್ಳಲು ಹೋಗುವಾಗ `ಇವರಿಗೆ ಬಿಟ್ಟಿ ಊಟದ ಜೊತೆ ಸರ್ಕಾರ ಬೀರು ಕೂಡ ಕೊಡುತ್ತದೆ ನೋಡ್ರೋ ಎಂದು ವ್ಯಂಗ್ಯವಾಗಿ ಮಾತಾಡುತ್ತಿದ್ದನ್ನು ನಾನು ಮಹದೇವನಿಗೆ ಹೇಳಿದ್ದೆ. ಅವನು ಮುಂದೊAದು ದಿನ ಪೂರ್ಣಚಂದ್ರ ತೇಜಸ್ವಿ ಅವರಿಗೆ ತಿಳಿಸಿದ ಕಾರಣ ಅವರು ಹಾಸ್ಟೆಲ್ನಲ್ಲಿದ್ದ ಕೆಲವು ಒಕ್ಕಲಿಗ ಹುಡುಗರನ್ನು ಕರೆಸಿ ಚೆನ್ನಾಗಿ ಬೈದು ಕಳಿಸಿದ್ದರಂತೆ. ಆ ನಂತರದ ದಿನಗಳಲ್ಲಿ ಅವರೆಲ್ಲ ನಮ್ಮನ್ನು ಕಂಡರೆ ಕೃತಕ ಗೌರವ ತೋರುತ್ತಿದ್ದರು. ನಂತರ ಎಂ.ಎ. ಮುಗಿಯುವವರೆಗೆ ಮತ್ತಾವ ಜಾತಿ ಜಗಳದ ಸೋಂಕು ಹಾಸ್ಟೆಲ್ನಲ್ಲಿ ಮರುಕಳಿಸಲಿಲ್ಲ.
ಮೈಸೂರಿನಲ್ಲಿ ಓದಲು ಮಹಾರಾಜಾ ಕಾಲೇಜು ನಂತರ ಗಂಗೋತ್ರಿಯಲ್ಲಿ ಎಂ.ಎ. ಮಾಡಲು ಸಿಕ್ಕ ಅವಕಾಶದ ಜೊತೆಗೆ ಸಿಕ್ಕ ಹಾಸ್ಟೆಲ್ ಸೌಲಭ್ಯಗಳು, ಜೊತೆಗೆ ಅನೇಕ ಹಿನ್ನೆಲೆಯ ಸ್ನೇಹಿತರ ಬಳಗ ದೊರಕಲು ಅವಕಾಶವಾಯಿತು. ಶೈಕ್ಷಣಿಕ ಶಿಕ್ಷಣದ ಜೊತೆಗೆ ಹಲವು ಹಿನ್ನೆಲೆಯ ವಿದ್ಯಾರ್ಥಿಗಳ ಪರಿಚಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಬಹುದೊಡ್ಡ ಬುನಾದಿಯಾಯಿತು. ಅದಕ್ಕೆಲ್ಲ ಕಾರಣರಾದವರನ್ನು ಸದಾ ನೆನೆಯದಿರಲಾರೆ.
ಮುಂದುವರಿಯುವುದು…
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ23 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ23 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ23 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!


