ದಿನದ ಸುದ್ದಿ
ಚಂಪಾ: ‘ಒಂದಾನೊಂದು ಕಾಲಕ್ಕ’
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/01/chandradhekhara-patil_suddidina-87.jpg&description=ಚಂಪಾ: ‘ಒಂದಾನೊಂದು ಕಾಲಕ್ಕ’', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/01/chandradhekhara-patil_suddidina-87.jpg&description=ಚಂಪಾ: ‘ಒಂದಾನೊಂದು ಕಾಲಕ್ಕ’', 'pinterestShare', 'width=750,height=350'); return false;" title="Pin This Post">
- ರಹಮತ್ ತರೀಕೆರೆ
ನನ್ನ ಬರೆಹದ ಬದುಕಿನ ಮೊದಲ ಘಟ್ಟದಲ್ಲಿ, ಗಾಢ ಪ್ರಭಾವ ಬೀರಿದವರಲ್ಲಿ ಚಂಪಾ ವ್ಯಕ್ತಿತ್ವ, ಬರೆಹ, ಸಂಕ್ರಮಣ ಪತ್ರಿಕೆ ಮತ್ತು ಅವರಿದ್ದ ಬಂಡಾಯ ಸಾಹಿತ್ಯ ಚಳುವಳಿಗಳೂ ಸೇರಿವೆ. ನನ್ನನ್ನು ಸದಾ ಕಾಡುವ, ಅಷ್ಟೇನೂ ದಿಟ್ಟತನವಿಲ್ಲದ ನನ್ನ ವ್ಯಕ್ತಿತ್ವದ ಮಿತಿಯನ್ನೂ ಕಾಣಿಸುವ ಅವರ ಕವನಗಳಲ್ಲಿ ‘ಒಂದಾನೊಂದು ಕಾಲಕ್ಕ’ ಕೂಡ ಒಂದು.
ಕಾವ್ಯದ ಪ್ರೇರಣೆಯನ್ನು ಕವಿಗಳ ಪ್ರತಿಭೆಯಲ್ಲಿ, ಅವರಿಗೆ ಇಂಬಾಗಿ ನಿಂತ ಪರಂಪರೆಯ ಕಸುವಿನಲ್ಲಿ, ಕವಿಯ ವಿಶಿಷ್ಟಾನುಭವದಲ್ಲಿ, ಅವರ ಕೈವಶವಾಗಿರುವ ಕಸುಬುದಾರಿಕೆಯಲ್ಲಿ ಹುಡುಕುವ ಪದ್ಧತಿಯಿದೆ. ಆದರೆ ಕವಿತೆ ಹುಟ್ಟುವ ಈ ಪ್ರೇರಣಾ ಮೂಲಗಳಲ್ಲಿ ಚಾರಿತ್ರಿಕ ಒತ್ತಡವೂ ಒಂದು.
ಸಾಮಾನ್ಯವಾಗಿ ಉಸಿರುಗಟ್ಟುವ ಒತ್ತಡಗಳಲ್ಲಿ ಹುಟ್ಟುವ ಎಲ್ಲ ನಮೂನೆಯ ಬರೆಹಗಳು, ತಮ್ಮ ಸಂವೇದನೆಯ ಪ್ರಾಮಾಣಿಕತೆಯಿಂದ ಸಹಜತೆಯಿಂದ ಓದುಗರ ಎದೆಗೆ ತಾಕಿ ಸಂವಾದ ಮಾಡುವ ಸ್ಪಂದನಶೀಲತೆಯನ್ನು ಪಡೆಯುತ್ತವೆ. ಸಾಧಾರಣ ಕವಿಗಳೂ ಮೃತ್ಯುವಿನ ಅಂಚಿನಲ್ಲಿ ಕುರಿತು ಭಾವದಿಂದ ಧಗಧಗಿಸುವ ಕವಿತೆ ಬರೆದಿರುವ ಅನೇಕ ನಿದರ್ಶನಗಳಿವೆ. ಕಾಫ್ಕಾನ `ರೂಪಾಂತರ’ ಕಾಮುನ `ಪ್ಲೇಗ್’ ಸಿದ್ಧಲಿಂಗಯ್ಯನವರ `ಹೊಲೆಮಾದಿಗರ ಹಾಡು’ ಟಿಪ್ಪು ಕುರಿತ ಜನಪದರ ಲಾವಣಿಗಳು ಹುಟ್ಟಿದ್ದು ಇಂತಹ ಚಾರಿತ್ರಿಕ ಒತ್ತಡಗಳಲ್ಲೇ.
ಬ್ರಿಟಿಶರ ಆಳ್ವಿಕೆಯಲ್ಲಿದ್ದಾಗ ಬೇಂದ್ರೆಯವರ `ನರಬಲಿ’ ಕವಿತೆ ಹುಟ್ಟಿದ್ದೂ ಹೀಗೇ. `ಬಡವರು ಸತ್ತರೆ ಸುಡಲಿಕ್ಕೆ ಸೌದಿಲ್ಲೊ’ ಎಂಬ ಚೀತ್ಕಾರ ಕೇಳಿಸುವಂತಿರುವ ಜನಪದ ತ್ರಿಪದಿಯೂ ಸನ್ನಿವೇಶದ ಕೂಸೇ ಆಗಿದೆ. ದರ್ವಿಶ್ ಮುಂತಾದ ಪ್ಯಾಲಸ್ತೈನೀ ಕವಿಗಳ ಕವಿತೆಗಳಲ್ಲಿ ತಮ್ಮ ನೆಲವನ್ನು ಉಳಿಸಿಕೊಳ್ಳುವುದು ಜೀವನ್ಮರಣದ ಪ್ರಶ್ನೆಯನ್ನಾಗಿಸಿಕೊಂಡು ನಡೆಸುತ್ತಿರುವ ಸೆಣಸಾಟವಿರುತ್ತದೆ. ಇದಕ್ಕಾಗಿ ತುಂಬಿದ ಅಣೆಕಟ್ಟಿಯಿಂದ ರಭಸವಾಗಿ ಧುಮಿಕ್ಕುವ ಜಲದಂತೆ ಅಲ್ಲಿ ಭಾವದ ಆವೇಗವಿರುತ್ತದೆ.
ಕುಮಾರವ್ಯಾಸನಲ್ಲಿ ಬರುವ `ಅರಸುರಾಕ್ಷಸ ಮಂತ್ರಿ ಮೊರೆವ ಹುಲಿ ಪರಿವಾರ ಹದ್ದಿನ ನೆರವಿ, ಬಡವರ ಬಿನ್ನಪವನಿನ್ನಾರು ಕೇಳುವರು’ ಎಂಬ ಸಾಲುಗಳು, ರಾಜಧರ್ಮದ ನಿರ್ಲಿಪ್ತ ಬೋಧೆಯ ಭಾಗವಾಗಿ ಅಳವಡಿಕೆಯಾಗಿವೆ, ನಿಜ. ಆದರೆ ಕವಿ ಅವನ್ನು ರಚಿಸುವಾಗ ತಾನು ಪಟ್ಟಿರುವ ಯಾವುದೊ ಆಳವಾದ ಸಂವೇದನೆಯನ್ನು ತುಂಬಿರಬಹುದು ಎಂಬಂತೆ ಅಲ್ಲಿ ವಿಷಾದವು ಮಡುಗಟ್ಟಿದೆ. ಎಂತಲೇ ಈ ಸಾಲುಗಳು ಬಿಕ್ಕಟ್ಟಿನಲ್ಲಿ ನಾಡು ಹಾಯುವಾಗೆಲ್ಲ ಬಳಕೆಗೊಳ್ಳುತ್ತ, ನಮಗಾಗೇ ಈಗ ರಚಿತವಾದವು ಎಂಬಂತೆ ಆವರ್ತನೆಗೊಳ್ಳುತ್ತಿವೆ. ತುರ್ತುಪರಿಸ್ಥಿತಿ ವಿರುದ್ಧ ಬಂದ ಕವಿತೆಗಳ ಸಂಕಲನದ (`ಆಪತ್ಕಾಲೀನ ಕವಿತೆಗಳು’ ಸಂ. ಕಿ.ರಂ.ನಾಗರಾಜ), ಈ ಸಾಲುಗಳನ್ನು ಮೊದಲಿಗೇ ಉದ್ಧರಿಸಲಾಗಿದೆ.
ಇದೇ ಹೊತ್ತಲ್ಲಿ ಚಂಪಾ ಎಮರ್ಜನ್ಸಿಯ ಹೊತ್ತಲ್ಲಿ ಬರೆದ ಪದ್ಯವೊಂದು ನೆನಪಾಗುತ್ತಿದೆ. ಅದರ ಹೆಸರು `ಒಂದಾನೊಂದು ಕಾಲಕ್ಕೆ’. ಇದು ಕನ್ನಡದ ಶ್ರೇಷ್ಠ ಕವಿತೆಗಳ ಪಟ್ಟಿಯಲ್ಲಿ ಒಂದೆಂದೇನೂ ಪರಿಗಣಿತವಾಗಿಲ್ಲ. ಆದರೆ ಸರಳವಾದ ಸಾದಾಸೀದಾ ಪದ್ಯವಾಗಿರುವ ಇದರೊಳಗೆ ತುಂಬಿಕೊಂಡಿರುವ ದುಗುಡ ಮತ್ತು ಉತ್ಕಟತೆಗಳು, ಸ್ವಾತಂತ್ರ್ಯದ ಬೇಡಿಕೆಯ ಭಾವವನ್ನು ನಮ್ಮ ಹೃದಯದೊಳಗೆ ಹುಗಿಸಿ ಕಂಪನ ಹುಟ್ಟಿಸುವಷ್ಟು ತೀವ್ರವಾಗಿವೆ. `ಓ ಎನ್ನ ದೇಶಬಾಂಧವರೇ’ (1977) ಸಂಕಲನದಲ್ಲಿರುವ ಆ ಕವಿತೆ ಹೀಗಿದೆ:
ಒಂದಾನೊಂದು ಕಾಲಕ್ಕೆ, ಗೆಳೆಯರೆ
ಈ ಬಾನಿಗೆ ಅಂಚೆಂಬುದು ಇರಲಿಲ್ಲ.
ಈ ನೆಲಕ್ಕೆ ಗಡಿಯೆಂಬುದು ಇರಲಿಲ್ಲ.
ನೀವು ಕೂಗಿದ್ದೇ ಆಗ ಕಾವ್ಯವಾಗಿತ್ತು.
ಕೇಳುವವರಿರಲಿಲ್ಲ
ನೀವು ಹಿಡಿದದ್ದೇ ಆಗ ಹಾದಿಯಾಗಿತ್ತು
ತುಳಿಯುವವರಿರಲಿಲ್ಲ
ನಿಮ್ಮ ಬಾಯಿಗೆ ಈಗ ಬಟ್ಟೆ ತುರುಕಿದ್ದಾರೆ.
ನಿಮ್ಮ ಕಾಲಿಗೆ ಈಗ ಬೇಡಿ ಬಿಗಿದಿದ್ದಾರೆ
ನೀವೀಗ ಸ್ವಲ್ಪ ಝಾಡಿಸಿದರೆ ಕಾಲು,
ಬೇಡಿ ಹರಿಯಲಿಕ್ಕಿಲ್ಲ; ಆದರೆ
ಬಾನಲ್ಲಿ ಹಾಲುಹಾದಿ ಮೂಡುತ್ತದೆ.
ಮೌನ ಮುರಿಯಲು ಸ್ವಲ್ಪ ಹೆಣಗಿದರೆ ನೀವು
ಶಬ್ದ ಹೊರಡಲಿಕ್ಕಿಲ್ಲ; ಆದರೆ
ನೆಲವೇ ಎದೆ ಬಿರಿತು ಹಾಡುತ್ತದೆ.
ಕವನವು `ಒಂದಾನೊಂದು ಕಾಲಕ್ಕೆ’ ಎಂಬ ಪದದ ಮೂಲಕ ಚರಿತ್ರೆಯಲ್ಲಿದ್ದ ಸ್ವತಂತ್ರ ಅವಸ್ಥೆಯನ್ನು ಸೂಚಿಸುವ ಮೂಲಕ ಆರಂಭವಾಗುತ್ತದೆ. ಆಗ ಇದ್ದ ಸ್ವಾತಂತ್ರ್ಯವನ್ನು ಗಡಿಯಿಲ್ಲದ ನೆಲ, ಅಂಚಿಲ್ಲದ ಬಾನು, ಕೂಗಿದರೂ ಕಾವ್ಯವಾಗುವ ಮತ್ತು ಹಿಡಿದಿದ್ದೇ ಹಾದಿಯಾಗುವ ಮುಕ್ತತೆಯ ಚಿತ್ರಗಳ ಮೂಲಕ ಮುಂದಿಡಲಾಗುತ್ತದೆ. ಚರಿತ್ರೆ ಬಲ್ಲವರಿಗೆ ತಿಳಿದಿದೆ, ಎಲ್ಲ ಕಾಲಕ್ಕೂ ಸ್ವಾತಂತ್ರ್ಯ ಕಸಿದುಕೊಳ್ಳುವ ಶಕ್ತಿಗಳಿದ್ದವು.
ಅವುಗಳ ವಿರುದ್ಧ ದನಿಯೆತ್ತಿ ಸತ್ತವರೂ ಗೆದ್ದವರೂ ಕೂಡ ಇದ್ದರು. ಸ್ವಾತಂತ್ರö್ಯ ಹರಣ ಮತ್ತು ಪಡೆಯುವುದಕ್ಕೆ ಮಾಡುವ ಸಂಘರ್ಷ, ಅದಕ್ಕಾಗಿ ಪಡೆಯುವ ಮರಣ, ಗೆಲುವುಗಳು ನಿರಂತರವಾಗಿರುತ್ತವೆ. ಆದರೆ ಗತದಲ್ಲಿ ಸ್ವಾತಂತ್ರö್ಯವಿತ್ತು ಎಂದು ಕವಿತೆ ಪ್ರಕೃತಿಯ ಚಿತ್ರಗಳ ಮೂಲಕ ತುಸು ಉತ್ಪ್ರೇಕ್ಷೆಯಲ್ಲಿ ಹೇಳುತ್ತಿರುವುದು ವರ್ತಮಾನದಲ್ಲಿ ಅದಿಲ್ಲ ಎಂದು ವಾಸ್ತವವನ್ನು ಸೂಚಿಸಲು; ಚರಿತ್ರೆಯ ನೆನಪು ವರ್ತಮಾನದಲ್ಲಿ ಕ್ರಿಯಾಶೀಲತೆ ಹುಟ್ಟಿಸಲಿ ಎಂದು ಪ್ರೇರಿಸಲು. ಇಲ್ಲಿ ಕವಿಯು ಜನತೆಯ ನಾಯಕನಾಗಿದ್ದಾನೆ. ಜನರ ಸ್ವಾತಂತ್ರ್ಯ ಮತ್ತು ಅವನ ಸ್ವಾತಂತ್ರö್ಯಗಳೆರಡೂ ಇಲ್ಲಿ ಏಕೀಭವಿಸಿವೆ.
ಎರಡನೇ ಖಂಡವು ವರ್ತಮಾನದಲ್ಲಿ ಈ ಸ್ವಾತಂತ್ರ್ಯಗಳು ಕಸಿಯಲ್ಪಟ್ಟ ದಾರುಣ ಸನ್ನಿವೇಶದ ಚಿತ್ರವನ್ನು ಮುಂದಿಡುತ್ತದೆ. ಆದರೆ ಈ ಬಂಧನದ ದಾರುಣತೆ ಖಾಯಮ್ಮಲ್ಲ. ಅದನ್ನು ನಿವಾರಿಸಬಹುದು. ಇದಕ್ಕಾಗಿ ದಂಗೆ ಚಳುವಳಿ ಹೋರಾಟ ಮುಂತಾದ ಮಹತ್ವಾಕಾಂಕ್ಷಿ ಪ್ರಯತ್ನಗಳನ್ನು ಕವಿತೆ ಮುಂದಿಡುತ್ತಿಲ್ಲ. ಬದಲಾಗಿ `ಸ್ವಲ್ಪ ಕಾಲು ಝಾಡಿಸಲು’ `ಮೌನ ಮುರಿಯಲು’ `ಸ್ವಲ್ಪ ಹೆಣಗಲು’ ಸೂಚಿಸುತ್ತದೆ.
ವ್ಯಕ್ತಿಗಳು ತಮ್ಮ ಪರಿಮಿತಿಯಲ್ಲೇ ಮಾಡುವ ಇಂತಹ ಸಣ್ಣಪುಟ್ಟ ಮಿಸುಗಾಟದಿಂದ ಇಡೀ ವ್ಯವಸ್ಥೆಯನ್ನು ಪಲ್ಲಟಿಸುವ ಮಹಾಕ್ರಾಂತಿ ಸಂಭವಿಸಿದೆ ಹೋಗಬಹುದು. ಆದರೆ ಅಂತಹ ಅದಕ್ಕೆ ಬೇಕಾದ ನಡಿಗೆ ಶುರುವಾಗುತ್ತದೆ. ಸಂಪೂರ್ಣ ಸ್ವಾತಂತ್ರ್ಯವು ನಾಡಿನ ಸಮುದಾಯವು ಪ್ರಜ್ಞೆ ಮತ್ತು ಪ್ರತಿರೋಧ ಗುಣವನ್ನು ಪಡೆದುಕೊಂಡು ಕೆಟ್ಟ ವ್ಯವಸ್ಥೆಯ ವಿರುದ್ಧ ಸಂಘಟಿತ ದನಿಯೆತ್ತಿದಾಗ ಮಾತ್ರ ಸಾಧ್ಯ. ಅದು ತಕ್ಷಣ ಸಾಧ್ಯವಾಗುವ ಸನ್ನಿವೇಶವಿಲ್ಲ. ಅದು ನಿಷ್ಕ್ರಿಯತೆಗೆ ಕಾರಣವಾಬೇಕಿಲ್ಲ. ಬದಲಾವಣೆ ಎಂಬ ದೀರ್ಘ ಯಾನವು ಸಣ್ಣಹೆಜ್ಜೆಗಳ ಮೂಲಕವೇ ಆರಂಭವಾಗುತ್ತದೆ. ಅಂತಹ ಮಿಸುಕಾಟ ಮಾಡಿದರೆ ಪರಿಣಾಮ ಹಾಲ ಹಾದಿ ಮೂಡುತ್ತದೆ; ನೆಲವೇ ಎದೆಬಿರಿತು ಹಾಡುತ್ತದೆ.
ನಿರ್ದಿಷ್ಟ ಹಾಡಿನ ಭಾವವು ಮನುಕುಲವು ಮತ್ತೆಮತ್ತೆ ಎದುರಿಸುವ ಸಮಸ್ಯೆಯನ್ನು ಕುರಿತು ಇದ್ದಾಗ, ಅದು ನಾನಾ ವಿನ್ಯಾಸದಲ್ಲಿ ಬೇರೆಬೇರೆ ಭಾಷೆಯಲ್ಲಿ ಎಲ್ಲ ಕಾಲಘಟ್ಟದಲ್ಲೂ ಪುನರಾವರ್ತನೆ ಆಗುತ್ತಲೇ ಇರುತ್ತದೆ. ದುಷ್ಟ ಸರ್ವಾಧಿಕಾರಗಳ ಅಡಿಯಲ್ಲಿ ಉಸಿರುಗಟ್ಟುವ ಸನ್ನಿವೇಶದಲ್ಲಿ ಬದುಕುವ ಎಲ್ಲ ಸಮಾಜಗಳು ತಮ್ಮ ಎದೆಯ ದನಿಯೆಂದೇ ಹಾಡಿಕೊಳ್ಳುವಷ್ಟು ಇದು ಸಾಧಾರಣೀಕರಣ ಪಡೆದಿದೆ.
ಹೀಗಾಗಿಯೇ ಇದರ ಭಾವವು ಗಂಡಾಳಿಕೆ ಸಮಾಜದಲ್ಲಿರುವ ವಿವಾಹ ಮತ್ತು ಕುಟುಂಬ ಮುಂತಾದ ವ್ಯವಸ್ಥೆಗಳಲ್ಲಿ ನಲುಗುತ್ತಿರುವ ಸ್ತ್ರೀಯರ ದನಿಯಾಗುವಂತಿದೆ. ಕನ್ನಡದ ಮಹಿಳಾ ಸಂವೇದನೆಯ ಕಾವ್ಯದಲ್ಲಿ ಇದರ ಪ್ರತಿಬಿಂಬಗಳನ್ನು ಕಾಣಬಹುದು. ಜೆಎನ್ಯು ವಿದ್ಯಾರ್ಥಿಗಳು ಕನ್ಹಯ್ಯಕುಮಾರ್ ಅವರ ನೇತೃತ್ವದಲ್ಲಿ ಕೂಗಿದ ಆಜಾದಿ ಘೋಷಣೆಯಲ್ಲಿ ಇದು ಅನುರಣನಗೊಂಡಿತು.
ಈಗಲೂ ಟರ್ಕಿಯ ಕುರ್ದಿಶರ, ಇಸ್ರೇಲಿ ಹುಕೂಮತ್ತಿನಲ್ಲಿರುವ ಪ್ಯಾಲಸ್ತೇನಿಯರ, ಚೀನಾದ ಪಾದದಡಿ ಅಪ್ಪಚ್ಚಿಯಾಗಿರುವ ವುಗೈರ್ ಮುಸ್ಲಿಮರ ಹಾಗೂ ಟಿಬೆಟಿಯನ್ ಬೌದ್ಧರ, ಬರ್ಮಾದ ರೋಹಿಂಗ್ಯಾಗಳ ಎದೆಯೊಳಗೆ ಈ ಕವನ ಹಲವಾರು ವಿನ್ಯಾಸಗಳಲ್ಲಿ ರೂಪುಗೊಳ್ಳುತ್ತಿರಬಹುದು.
ಬಾಬಾ ಸಾಹೇಬರು ಬೌದ್ಧಧರ್ಮವನ್ನು ಸ್ವೀಕಾರ ಮಾಡುವ ಮುನ್ನ ಇದೇ ಭಾವವುಳ್ಳ ಮಾತುಗಳನ್ನು ಆಡಿರುವರು ಮತ್ತು ಲೇಖನ ಬರೆದಿರುವರು.
ಸಾರಾ ಅಬೂಬಕರ್ ಅವರ ಕಥನದ ನಾಯಕಿಯರಲ್ಲಿ ಈ ಪದ್ಯವು ಬೇರೆ ಧಾಟಿಲಯದಲ್ಲಿ ಕಟ್ಟಲ್ಪಟ್ಟಿದೆ. ಸಿದ್ಧಲಿಂಗಯ್ಯನವರ `ಎಲ್ಲಿಗೆ ಬಂತು ಯಾರಿಗೆ ಬಂತು ಸ್ವಾತಂತ್ರ್ಯ’ ಕವನದಲ್ಲಿ ಈ ಹಾಡಿನ ಭಾವವು ಹೋರಾಟದ ಮೊದಲು ಹುಟುವ ಸವಾಲಿನಂತೆ ಕೇಳಲ್ಪಟ್ಟಿದೆ. ಶತಮಾನದ ಹಿಂದೆ ರವೀಂದ್ರನಾಥ ಟಾಗೂರರು ಗೀತಾಂಜಲಿ ಸಂಕಲನದಲ್ಲಿ ಸೇರಿಸಿದ `ವೇರ್ ದಿ ಮೈಂಡ್ ಈಸ್’ ಎಂಬ ಗೀತೆಯಲ್ಲಿ ಈ ಪದ್ಯದ ಭಾವವು ದೇಶಕಟ್ಟುವ ತತ್ವವಾಗಿ ಈಗಾಗಲೇ ಹೇಳಲ್ಪಟ್ಟಿದೆ. `ಆನುಒಲಿದಂತೆ ಹಾಡುವ’ ಎಂಬ ಬಸವಣ್ಣನವರ ವಚನ, ಕುವೆಂಪು ಅವರ `ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಲೇಖನ ಈ ಪದ್ಯದ ಮೂಲಮಾತೃಕೆಗಳಾಗಿದ್ದರೆ ಆಶ್ಚರ್ಯವಿಲ್ಲ.
ಎಲ್ಲ ದಮನಿತ ಸಮಾಜ ಕುಟುಂಬ ಧರ್ಮ ದೇಶಗಳಲ್ಲಿ ಇರುವ ಪ್ರಜ್ಞಾವಂತರಿಗೆ, ಸಂವೇದನಶೀಲರಿಗೆ ಸ್ವಾತಂತ್ರ್ಯ ಬಯಸುವವರಿಗೆ ಇದು ತಮ್ಮದೇ ಸ್ವಾತಂತ್ರ್ಯದ ಹಾಡೆನಿಸುತ್ತದೆ. ಈಗ ತಾಲಿಬಾನಿಗಳ ಕೋವಿಗೈಯಲ್ಲಿ ಸಿಲುಕಿರುವ ಆಫಘಾನಿಸ್ಥಾನದ ಮಹಿಳೆಯರು ಕಲಾವಿದರು ಈ ಹಾಡನ್ನು ಹಾಡುತ್ತಿರಬಹುದು. ಈಗ ಇಂಡಿಯಾದ ಬೀದಿಹಾದಿಗಳಲ್ಲಿ ನಿರ್ದಿಷ್ಟ ಲಿಂಗ, ಜಾತಿ, ಧರ್ಮಗಳಲ್ಲಿ ಹುಟ್ಟಿದ ಕಾರಣಕ್ಕೇ ಬಡಿಸಿಕೊಂಡು ಸಾಯುತ್ತಿರುವ ಮಹಿಳೆಯರೂ ದಲಿತರೂ ಮುಸ್ಲಿಮರೂ ಕ್ರೈಸ್ತರೂ ಹಾಡಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.
ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.
ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.
ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.
ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.
ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ6 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ7 hours agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

