ದಿನದ ಸುದ್ದಿ
ಹುಟ್ಟು ಹಬ್ಬ | “ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ಸಿಡಿದೆದ್ದರೆ ನೀನು ನನ್ನ ಸಂಗಾತಿ”..! : ಚೆ ಗುವೆರಾ
- ಶಿವಸ್ವಾಮಿ, ಯುವಚಿಂತಕರು
“ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ, ಸೋಲಿಗಿಂತ ಸಾವನ್ನೆ ಹೆಚ್ಚು ಇಷ್ಟಪಡುತ್ತೇನೆ”. ಎಂದು ನಿರಂತರವಾಗಿ ಹೋರಾಡುತ್ತಲೇ ತನ್ನ ವಿರೋಧಿಗಳಿಗೆ ಸಿಂಹಸ್ವಪ್ನವಾಗಿ ಎಂದಿಗೂ ಸೋಲನ್ನು ಒಪ್ಪಿಕೊಳ್ಳದೆ ತನ್ನನ್ನು ತಾನೇ ಸಾವಿಗೆ ಅರ್ಪಿಸಿಕೊಂಡ ಮಹಾನ್ ಕ್ರಾಂತಿಕಾರಿ, ಮಾನವತಾವಾದಿ, ಗೆರಿಲ್ಲಾ ಯುದ್ಧ ತಂತ್ರದ ನಿಪುಣ, ವೈದ್ಯ, ಬರಹಗಾರ, ಬುದ್ಧಿಜೀವಿ ಹಾಗೂ ಕ್ಯೂಬಾ ಕ್ರಾಂತಿಯ ಪ್ರಮುಖ ನೇತಾರ ಅರ್ನೆಸ್ಟೋ ಚೆಗುವಾರ.
ಚೆಗುವಾರ ಹುಟ್ಟಿದ್ದು ಜೂನ್ 14, 1928ರಂದು ಲಿಂಚ್ ಮತ್ತು ಸೀಲಿಯಾ ಡ ಲಾ ಸೆರ್ನ್ ಎಂಬ ಸ್ಪ್ಯಾನಿಷ್ ಮತ್ತು ಐರಿಷ್ ದಂಪತಿಗಳ ಮಗನಾಗಿ ಅರ್ಜೆಂಟೀನಾದ ರೊಸಾರಿಯೋ ಪಟ್ಟಣದಲ್ಲಿ ಜನಿಸಿದನು.ಚೆಗುವರ ಚಿಕ್ಕಂದಿನಿಂದಲೇ ಶೋಷಿತ ಬಡವರ, ಶ್ರಮಿಕರ ಬಗ್ಗೆ ಅಪಾರವಾದ ಕಾಳಜಿ ಮತ್ತು ಪ್ರೀತಿಯನ್ನು ಬೆಳೆಸಿಕೊಂಡು ಎಡಪಂಥೀಯವಾದದ ಬಗ್ಗೆ ಒಲವು ಹೊಂದಿದ್ದ ಕುಟುಂಬದಲ್ಲಿ ಹುಟ್ಟಿಬೆಳೆದ ಅವನಿಗೆ ಚಿಕ್ಕಂದಿನಿಂದಲೇ ರಾಜಕೀಯ ದೃಷ್ಟಿಕೋನಗಳ ಬಗೆಗೆ ಪರಿಚಯವಾಗಿ ಗಣತಂತ್ರವಾದಿಗಳ ಪ್ರಬಲ ಸಮರ್ಥಕರಾಗಿದ್ದ ತಂದೆಯ ಪ್ರಭಾವ ಚೆಗುವಾರನ ಮೇಲೆ ಸಹಜವಾಗಿಯೇ ಬೀರಿತು.
19 ನೇಯ ವಯಸ್ಸಿನಲ್ಲಿಯೇ ವೈದ್ಯಕೀಯ ವೃತ್ತಿ ಕಲಿಕೆಗಾಗಿ ವಿಶ್ವವಿದ್ಯಾನಿಲಯಕ್ಕೆ ಪ್ರವೇಶಾತಿ ಪಡೆದು ಮತ್ತೆ ಒಂದು ವರ್ಷ ರಜೆ ಪಡೆದು ತನ್ನ ಮಿತ್ರ ಅಲ್ಬಟ್ರೋ ಗ್ರೆನಾಡೇ ಜೊತೆ ಸೇರಿ ಮೋಟಾರ್ ಸೈಕಲ್ ಮೂಲಕ ದಕ್ಷಿಣ ಅಮೇರಿಕಾ ಪ್ರವಾಸ ಮಾಡುತ್ತಾನೆ ತಾನೊಬ್ಬ ಕ್ರಾಂತಿಕಾರಿಯಾಗಲು ಈ ಪ್ರವಾಸದ ಅನುಭವಗಳೇ ಕಾರಣವೆಂದು ಅವನೇ ಬರೆದುಕೊಂಡಿದ್ದಾನೆ.
ದಕ್ಷಿಣ ಅಮೆರಿಕಾದ ಆಂಡೀಸ್ ಪರ್ವತದ ಮಾಚು ಪಿಚುವಿಗೆ ಹೋಗುವ ದಾರಿಯಲ್ಲಿ ಶ್ರೀಮಂತ ಭೂ ಮಾಲೀಕರಿಂದ ತುಂಡು ತುಂಡು ಭೂಮಿಗಳನ್ನು ಪಡೆದು ಕೃಷಿ ಮಾಡುತಿದ್ದ ರೈತಾಪಿ ಜನರ ಕಡುಬಡತನದ ಹೀನಾಯ ಬದುಕಿನ ಸ್ಥಿತಿಯನ್ನು ಹತ್ತಿರದಿಂದ ಕಂಡು ನಾನು ಈ ಜನರಿಗೆ ಏನಾದರೂ ಸಹಾಯ ಮಾಡಬೇಕೆಂದರೆ ನನ್ನ ವೈದ್ಯಕೀಯ ಅಭ್ಯಾಸವನ್ನು ಬಿಟ್ಟು ಸಶಸ್ತ್ರ ಹೋರಾಟದ ಮೂಲಕ ರಾಜಕೀಯ ರಂಗವನ್ನು ಪ್ರವೇಶಿಸಬೇಕೆಂದು ಮನವರಿಕೆಯಾಯಿತು ಎಂದು ತನ್ನ ಮೋಟಾರ್ ಸೈಕಲ್ ಡೈರಿಯಲ್ಲಿ ಬರೆದುಕೊಳ್ಳುತ್ತಾನೆ.
ಮೋಟಾರ್ ಸೈಕಲ್ ಪ್ರವಾಸ ಚೆಗುವಾರನ ಕ್ರಾಂತಿಕಾರಿ ಬದುಕಿನ ಒಂದು ದೊಡ್ಡ ತಿರುವು ಪ್ರವಾಸದ ಜೊತೆಗಾರ ಅಲ್ಬಟ್ರೋ ಗ್ರಾನಡಾಸ್ ಚೆಗುವಾರನ ಕುರಿತು ಹೇಳುತ್ತಾ…ಟೆಟೆ (ಚೇ ನನ್ನನ್ನು ಪ್ರೀತಿಯಿಂದ ಕರೆಯುತಿದ್ದ ಹೆಸರು )ನನ್ನು ನಾನು ಮೊದಲು ಭೇಟಿಯಾಗಿದ್ದು 1941 ರಲ್ಲಿ ನನ್ನ ಸಹೋದರ ಥಾಮಸ್ ಮೂಲಕ ನನಗಾಗ 13 ವರ್ಷ ನಮ್ಮಿಬ್ಬರನ್ನು ಒಟ್ಟಿಗೆ ಕೂಡಿಸಿದ ವಿಷಯವೆಂದರೆ ‘ಓದುವ ಅಭಿರುಚಿ ಮತ್ತು ನಿಸರ್ಗ ಪ್ರೇಮ’ ಚೇ…ಮನೆಗೆ ಪ್ರತಿದಿನ ಭೇಟಿ ನೀಡಿದಾಗಲೂ ನನ್ನನ್ನು ಆಕರ್ಷಿಸಿದ್ದ ಅಲ್ಲಿನ ಅಪಾರವಾದ ಗ್ರಂಥಭಂಡಾರವನ್ನು ನನ್ನದೆಂಬಂತೆ ಬಳಸುಕೊಳ್ಳುತಿದ್ದೆ.
ನಾವು ಎಷ್ಟೋ ರಾತ್ರಿಗಳನ್ನ ಚೆರ್ಚೆಗಳಲ್ಲಿ ಕಳೆದಿದ್ದೇವೆ, ಒಮ್ಮೆ ವಿದ್ಯಾರ್ಥಿ ಚಳುವಳಿಯಲ್ಲಿ ನನ್ನ ಬಂಧನವಾಯಿತು ಆಗ ನನ್ನ ಸಹೋದರ ಥಾಮಸ್ ಜೊತೆ ಚೆಗುವಾರ ನನ್ನ ನೋಡಲು ಪೊಲೀಸ್ ಠಾಣೆಗೆ ಬಂದಿದ್ದ ನಾನು ಅವನ ಜೊತೆ ಮಾತನಾಡುತ್ತಾ ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಕರೆತರುವಂತೆ ನಾನು ಅವನಿಗೆ ಹೇಳಿದೆ, ಅದಕ್ಕೆ ಅವನು ಹೇಳಿದ ಮಾತು ಬೀದಿಗಿಳಿಯಿರಿ ಎಂದು ಹೇಳುತಿದ್ದೀರಲ್ಲ!ಪೊಲೀಸರೆಲ್ಲ ನಮ್ಮ ಮೇಲೆ ದೊಣ್ಣೆಗಳಿಂದ ಸರಿಯಾಗಿ ಬಾರಿಸಲಿ ಅಂತಲೋ! ಅದೆಲ್ಲ ಆಗುವುದಿಲ್ಲ,ನನಗೆ ಪಿಸ್ತೂಲು ಕೊಟ್ಟರೆ ಮಾತ್ರ ನಾನು ಬೀದಿಗಿಳಿಯುತ್ತೇನೆ ಎಂದಿದ್ದ ಅದೆಷ್ಟೋ ! ನೆನಪುಗಳು ನನ್ನೊಂದಿಗಿವೆ.
ಚೆಗುವಾರ 1953 ರಲ್ಲಿ ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಮತ್ತೆ ಪ್ರವಾಸ ಹೊರಟು ಗ್ವಾಟಮಾಲಕ್ಕೆ ಬರುತ್ತಾನೆ ಅಲ್ಲಿ ಯುದ್ಧದಲ್ಲಿ ಮುಳುಗಿದ ದೇಶವೊಂದರ ಅನುಭವ ದೊರೆಯುತ್ತದೆ, ನಂತರ 1954 ರಲ್ಲಿ ಅರ್ಬೆನ್ಜ್ ರ ಸಮಾಜವಾದಿ ಸರ್ಕಾರದ ವಿರುದ್ಧ CIA ಪ್ರೇರಿತ ಕ್ಷಿಪ್ರ ಕ್ರಾಂತಿಯನ್ನು ಕಣ್ಣಾರೆ ಕಂಡು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಳನ್ನು ರೂಪಿಸಲು ಲ್ಯಾಟಿನ್ ಅಮೆರಿಕಾದಂತಹ ಯಾವುದೇ ಸರ್ಕಾರವನ್ನು ಅಮೆರಿಕಾದಂತ ಸಾಮ್ರಾಜ್ಯ ಷಾಹಿ ದೇಶ ವಿರೋಧಿಸುತ್ತದೆ ಮತ್ತು ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಯಥಾಸ್ಥಿಯಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಚೆಗುವಾರ ಸೂಕ್ಷ್ಮವಾಗಿ ಗ್ರಹಿಸಿದರು.
ಇಂತಹ ಸ್ಥಿತಿಯನ್ನು ಸರಿಪಡಿಸಲು ‘ಸಶಸ್ತ್ರ ಹೋರಾಟದ ಬುಲೆಟ್ ಕ್ರಾಂತಿಯೊಂದೇ ಮದ್ದು‘ಚೆಗುವಾರ ಯೋಚಿಸುತ್ತಾನೆ ನಂತರ ಗ್ವಾಟೆಮಾಲಾದಿಂದ ಹೊರಬಂದು ಚೆಗುವಾರ ಫಿಡೆಲ್ ಕ್ಯಾಸ್ಟ್ರೋರೊಂದಿಗೆ ಜೊತೆಯಾಗಿ ಕ್ಯೂಬಾದ ಸರ್ವಾಧಿಕಾರಿ ಜನರಲ್ ಪುಲ್ಗೆನ್ಸಿಯೋ ಬಟಿಸ್ಟಾ ರ ವಿರುದ್ಧ ಸೇನಾ ದಂಡಾಯಾತ್ರೆ ಕೈಗೊಳ್ಳುವ ಯೋಜನೆ ರೂಪಿಸಿ, 1956 ರಲ್ಲಿ ಚೆಗುವಾರ ಮತ್ತು ಕ್ಯಾಸ್ಟ್ರೊ ಒಂದಾಗಿ ಹಲವು ಹೋರಾಟಗಾರರೊಂದಿಗೆ ಜನರಲ್ ಬಟಿಸ್ಟಾ ನ ಸರ್ಕಾರವನ್ನು ಕಿತ್ತೊಗೆಯಲು ಕ್ಯೂಬಾಕ್ಕೆ ಬಂದು ಸಿಯೆರಾ ಮತ್ತು ಮೈ ಸ್ಟ್ರಾ ಪರ್ವತಗಳಲ್ಲಿ ಅಡಗಿಕೊಳ್ಳುತ್ತಾರೆ.
ಇದರ ಅರಿವಾಗಿ ಎಚ್ಚೆತ್ತ ಬಟಿಸ್ಟಾ ಸರ್ಕಾರ ಹೆಚೆಚ್ಚು ಸೈನಿಕ ಪಡೆಗಳನ್ನು ಸಜ್ಜುಗೊಳಿಸಿ ಚೆಗುವಾರ ಮತ್ತು ಕ್ಯಾಸ್ಟ್ರೋ ನೇತೃತ್ವದ ಕ್ರಾಂತಿಕಾರಿಗಳನ್ನು ಸದೆಬಡಿಯಲು 10 ಸಾವಿರ ಸೈನಿಕ ಪಡೆಗಳನ್ನು ನಿಯೋಜಿಸುತ್ತಾನೆ ಕ್ರಾಂತಿಕಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲೇಂದೆ ಸರ್ಕಾರಿ ಸೈನಿಕರು ಸಾಮಾನ್ಯ ಜನರನ್ನು ವಿಚಾರಣೆಗೆಂದೇ ಎಳೆದೊಯ್ಯುತ್ತಿದ್ದರು. ಜೊತೆಗೆ ಅಮಾಯಕರಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಮಕ್ಕಳನ್ನೂ ಒಳಗೊಂಡಂತೆ ಶಂಕಿತರನ್ನು ಸಾರ್ವಜನಿಕವಾಗಿ ಕೊಲೆಗೈದು ಅವರ ಶವಗಳನ್ನು ಬೀದಿಗಳಲ್ಲಿ ಸಾರ್ವಜನಿಕವಾಗಿ ನೇತು ಹಾಕುತ್ತಿದ್ದರು.
ಅಂದರೆ ಸಾಮಾನ್ಯ ಜನರು ಕ್ರಾಂತಿಕಾರಿಗಳ ಜೊತೆ ಸೇರದಂತೆ ಎಚ್ಚರಿಕೆ ನೀಡುವುದು ಮತ್ತು ಭಯ ಹುಟ್ಟಿಸುವುದು ಇದರ ಉದ್ದೇಶವಾಗಿತ್ತು. ಸರ್ವಾಧಿಕಾರಿ ಬಟಿಸ್ಟಾನ ಈ ವರ್ತನೆಗಳಿಂದ ಗೆರಿಲ್ಲಾ ಹೋರಾಟಗಾರರಿಗೆ ಬೆಂಬಲ ಇನ್ನಷ್ಟು ಹೆಚ್ಚಾಗುತ್ತಲೇ ಹೋಯಿತು. ಉದಾಹರಣೆ ವಕೀಲರು, ವಾಸ್ತುಶಿಲ್ಪಿಗಳು, ವೈದ್ಯರು, ಆಕೌಟೆಂಟ್ಗಳು ಸಾಮಾಜಿಕಕರ್ತರು ಮುಂತಾದ ಸುಮಾರು 45 ಸಂಘಟನೆಗಳು ಜುಲೈ 26ರ ಚಳುವಳಿಗೆ ಬೆಂಬಲ ಘೋಷಿಸಿದವು. ಅಮೇರಿಕಾ ಸರ್ವಾಧಿಕಾರಿ ಬಟಿಸ್ಟಾಗೆ, ವಿಮಾನ, ಹಡಗು, ಟ್ಯಾಂಕ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ಒದಗಿಸಿತು.
‘ನಾಪಾಂಬಾಂಬಿ’ನಂತಹ ವಿನಾಶಕಾರಿ ಅಸ್ತ್ರಗಳು ಇದ್ದಾಗಲೂ ಬಟಿಸ್ಟಾನಿಂದ ಗೆರಿಲ್ಲಾ ಹೋರಾಟಗಾರರನ್ನು ಸೋಲಿಸಲು ಸಾಧ್ಯವಾಗಲಿಲ್ಲ. 1958 ಮಾರ್ಚ್ ಚುನಾವಣೆಗಳನ್ನು ಸರ್ವಾಧಿಕಾರಿ ಬಟಿಸ್ಟಾ ವಿರುದ್ಧ ಕ್ಯೂಬಾ ಜನತೆ ಬಹಿಷ್ಕರಿಸಿತು. ರಾಜಧಾನಿ ಹವಾನದಲ್ಲಿ 75% ಚುನಾವಣಾ ಬಹಿಷ್ಕಾರ ಇದ್ದರೆ ಸ್ಯಾಂಟಿಯಾಗೋ ನಗರದಲ್ಲಿ ಶೇ 98% ರಷ್ಟು ಬಹಿಷ್ಕಾರಗಳು ನಡೆದವು. ಇದೇ ಸಂದರ್ಭದಲ್ಲಿ ಕ್ರಾಂತಿಕಾರಿಗಳು ಬಟಿಷ್ಟಾನನನ್ನು ನೇರವಾಗಿ ಸೋಲಿಸಲು ಮುಖ್ಯ ನಗರಗಳಿಗೆ ಬಂದರು.
ಆದರೆ ಸರ್ವಾಧಿಕಾರಿ ಬಟಿಷ್ಟಾ ಅಮೆರಿಕಾದೊಂದಿಗೆ ಸಮಾಲೋಚಿಸಿ ದೇಶಬಿಟ್ಟು ಪಲಾಯನ ಮಾಡಿದ. 1958 ಡಿಸೆಂಬರ್ 31ರಂದು ಬಟಿಸ್ಟಾ ದುರಾಡಳಿತವನ್ನು ಪತನ ಮಾಡಲಾಯಿತು. 1959ರ ಜನವರಿಯಲ್ಲಿ ರಾಜಧಾನಿ ಹವಾನ ನಗರವನ್ನು ಪ್ರವೇಶಿಸಿ ಅಧಿಕಾರವನ್ನು ವಶಕ್ಕೆ ತೆಗೆದುಕೊಂಡ ಮೊಟ್ಟ ಮೊದಲ ಬಂಡಾಯಗಾರ ಪಿಡಲ್ ಕ್ಯಾಸ್ಟ್ರೋ ಜೊತೆ ಚೆಗುವಾರ ಕೂಡ ಇದ್ದರು. ಚೆಗುವಾರ ಮತ್ತು ಕ್ಯಾಸ್ಟ್ರೋ ಕ್ಯೂಬಾದ ಹೊಸ ನಾಯಕರಾದರು.
ಸರ್ಕಾರದ ನೇತೃತ್ವವನ್ನು ಕ್ಯಾಸ್ಟ್ರೋ ವಹಿಸಿಕೊಂಡರು. ಮುಂದೆ ಪಿಡಲ್ ಕ್ಯಾಸ್ಟ್ರೊ ಸರ್ಕಾರದಲ್ಲಿ ಚೆಗುವಾರ ಕೃಷಿ ಮಂತ್ರಿಯಾಗಿ ಕ್ರಾಂತಿಕಾರಿ ಸುಧಾರಣೆಗಳನ್ನು ತಂದರು. ಭೂಸುಧಾರಣೆಯೊಂದಿಗೆ ಚೆಗುವಾರ ಕೇಂದ್ರೀಕರಿಸಿದ ಮತ್ತೊಂದು ಪ್ರಧಾನ ಕ್ಷೇತ್ರವೆಂದರೆ ‘ಶಿಕ್ಷಣಕ್ಷೇತ್ರ’ ಅವರು ರಾಷ್ಟ್ರೀಯ ಸಾಕ್ಷರತೆಗಾಗಿ ಹೆಚ್ಚು ಹೊತ್ತುಕೊಟ್ಟರು. ಅವರ ಒತ್ತಾಸೆಯಂತೆ ಕ್ಯೂಬಾ ಸಕಾರವೂ 1961ನೇ ವರ್ಷವನ್ನು ಶಿಕ್ಷಣ ವರ್ಷವೆಂದು ಘೋಷಿಸಿತು.
ಇದರ ಸಲುವಾಗಿ ಹಳ್ಳಿಗಾಡುಗಳಲ್ಲಿ ಬಹುತೇಕ ಅಕ್ಷರಸ್ಥರಿಗೆ ಓದುಬರಹ ಕಲಿಸಲು ಸಾಕ್ಷರತ ಆಂದೋಲವನ್ನು ಕೈಗೊಳ್ಳಲಾಯಿತು. ಈ ಆಂದೋಲನ ಮುಗಿಯುವ ವೇಳೆಗೆ 7 ಲಕ್ಷಕ್ಕೂ ಹೆಚ್ಚು ಮಂದಿಗೆ ಓದು ಬರಹ ಕಲಿಸಲಾಯಿತು. ಇಂತಹ ಕ್ರಾಂತಿಕಾರ ಕೆಲಸದಿಂದ ದೇಶದ ಸಾಕ್ಷರತೆ ಶೇ 96 ಕ್ಕೆ ಏರಿಕೆಯಾಯಿತು. ಆನಂತರ ಅವರು 1965ರಲ್ಲಿ ಕ್ಯೂಬಾವನ್ನು ಬಿಟ್ಟು ಹೊರಟು ತೃತೀಯ ಜಗತ್ತಿನ ಕ್ರಾಂತಿಗಳಿಗೆ ಬೆಂಬಲವಾಗಿ ಅವರು ತನ್ನ ಸುತ್ತಾಟವನ್ನು ಮುಂದುವರಿಸಿದರು. ಅದರ ಭಾಗವಾಗಿಯೇ ಅವರು ಬೊಲಿವಿಯದಲ್ಲಿ ಗೆರಿಲ್ಲಾ ಯೋಧರನ್ನು ಸಂಘಟಿಸಲು ಯತ್ನಿಸಿದರು.
ಆದರೆ ಬೊವಿಲಿಯಾದಲ್ಲಿ ಚೆಗುವಾರಗೆ ಸಾಮಾನ್ಯ ಜನರ ನೆರವು ಸಿಗಲಿಲ್ಲಾ ಕ್ರಾಂತಿಕಾರಿಗಳ ಜೊತೆ ಸೇರಲು ಸಾಮಾನ್ಯಜನ ಎದುರುತ್ತಿದ್ದರು. ಆದರೂ ಎದೆಗುಂದದೆ ಚೆಗುವಾರ ತನ್ನ ಹೋರಾಟವನ್ನು ಮುಂದುವರಿಸಿದರು. ಆದರೆ ಅಮೆರಿಕಾದ CIA ನೆರವಿನಿಂದ ಬೊಲಿವಿಯಾ ಪಡೆಗಳು ಗೆರಿಲ್ಲಾ ಹೋರಾಟಗಾರರನ್ನು ಪತ್ತೆಹಚ್ಚಿ ಹಲವು ಗೆರಿಲ್ಲಾ ಯೋಧರನ್ನು ಕೊಂದು ಚೆಗುವಾರನನ್ನು 1967 ಅಕ್ಟೋಬರ್ 8ರಂದು ಸೆರೆಹಿಡಿದರು.
ನಂತರ ಹಿಗುಎರಾ ಎಂಬ ಗ್ರಾಮದ ಶಾಲೆಯಲ್ಲಿ ಕೂಡಿಹಾಕಿ ಮಾರನೆ ದಿನ ಅಕ್ಟೋಬರ್ 9 ರಂದು ಮಧ್ಯಾಹ್ನ 1.30ರ ಸುಮಾರಿಗೆ ಅಮೆರಿಕಾದ CIA ಅಧಿಕಾರಿಗಳ ಸಮ್ಮುಖದಲ್ಲಿ ಸಿಐಎ ರೇಂಜರ್ಗಳು ತೀರ ಸಮೀಪದಿಂದ ಗುಂಡಿಟ್ಟು ಚೆಗುವಾರನನ್ನು ಹತ್ಯೆಗೈಯುತ್ತಾರೆ. ನಂತರ ಅವನ ಮುಖವನ್ನು ಪಡಿಯಚ್ಚು ತೆಗೆದು ಅವನ ದೇಹವನ್ನು ಹತ್ತಿರದಿಂದ ಫೊಟೋ ತೆಗೆಯಲಾಯಿತು. ಮತ್ತು ಅವನ ಕೈಗಳನ್ನು ಮುಂಗೈಬಳಿ ಕತ್ತರಿಸಿ ಅವನ್ನು ಆಲ್ಕೊಹಾಲಿನಲ್ಲಿ ರಕ್ಷಿಸಿಟ್ಟರು. ಕಾರಣ ನಾವು ಕೊಂದ ವ್ಯಕ್ತಿ ಚೆಗೆವಾರ ಎಂಬುದರ ಋಜುವಾತುವಿಗಾಗಿ ಅವರ ಹಾಗೆ ಮಾಡಿದರು.
ಚೆ ಗುವೆರಾ ಸತ್ತ ಸುದ್ದಿ ತಿಳಿದು ಜಗತ್ತಿನಾದ್ಯಂತ ಅವನ ಸಂಗಾತಿಗಳು ಶೋಕತಪ್ತರಾದರು. ಈಗ ಚೆ ಕೈಗಳನ್ನು ಕ್ಯೂಬಾ ರಕ್ಷಿಸಿಟ್ಟಿದೆ. ಮತ್ತು ಇವು ವಿಮೋಚನೆಗಾಗಿ ಹೋರಾಟದಲ್ಲಿ ಅಸ್ತ್ರಗಳನ್ನು ಹಿಡಿದ ಕೈಗಳೂ, ತಮ್ಮ ಗಮನಾರ್ಹ ಚಿಂತನೆಗಳನ್ನು ಬರೆದು ಹಂಚಿದ ಕೈಗಳು, ಕಬ್ಬಿನ ಪ್ಲಾಂಟೇಷನ್ಗಳಲ್ಲಿ, ಬಂದರುಕಟ್ಟೆಗಳ ಮುಂತಾದ ನಿರ್ಮಾಣದ ಸ್ಥಳಗಳಲ್ಲಿ ಕೆಲಸ ಮಾಡಲು ಬಳಸಿದ ಕೈಗಳು ಎಂದು ಕ್ಯಾಸ್ಟ್ರೊ ಉದ್ಘರಿಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಅಮೇರಿಕಾದಂತ ದುಷ್ಟಶಕ್ತಿಗಳು ಚೆ ನ ದೇಹವನ್ನು ಮಾತ್ರ ಹತ್ಯೆ ಮಾಡಿರಬಹುದು.
ಆದರೆ ಚೆಗುವಾರ ಹಂಚಿದ ಕ್ರಾಂತಿಕಾರಿ ಆಲೋಚನೆಗಳನ್ನು ನಿಯಂತ್ರಿಸಲು ಅಥವಾ ಹತ್ಯೆ ಮಾಡಲು ಸಾಧ್ಯವಿಲ್ಲಾ ! ಚೆಗೆವಾರ ಶೋಷಿತ ಜನತೆಗೆ ತಮ್ಮ ಬದುಕನ್ನು ಅರ್ಪಿಸಿಕೊಂಡವರು. ಆಗಾಗಿ ಅವಕಾಶವಂಚಿತ ಸಮುದಾಯಗಳಿಗೆ ಚೆಗುವಾರ ಎಂದೆಂದಿಗೂ ಸ್ಫೂರ್ತಿಯಾಗಿರುತ್ತಾರೆ ಅನ್ನುವುದರಲ್ಲಿ ಯಾವ ಅನುಮಾವೂ ಇಲ್ಲ.
ಐರಿಶ್ ಬಂಡಾಯಗಾರರ ರಕ್ತ ನನ್ನ ಮಗನ ಧಮನಿಗಳಲ್ಲಿ ಹರಿಯುತ್ತಿತ್ತು ಎಂಬುದನ್ನು ನಾವು ಮೊಟ್ಟ ಮೊದಲು ಗಮನಿಸೇಕಾದ ವಿಚಾರ’ ಎಂದು ಚೆಗುವಾರನ ಮರಣದ ನಂತರ ಅವರ ತಂದೆ ಪ್ರತಿಕ್ರಿಯಿಸಿದ ಹಾಗೆ, ಚೆ… ಇಲ್ಲವಾಗಿ ಹಲವು ವರ್ಷಗಳು ಕಳೆದಿದ್ದರೂ ಅವನು ತನ್ನ ವಿಚಾರ, ಆಲೋಚನೆಗಳ, ಮಾನವೀಯವಾದ ವ್ಯಕ್ತಿತ್ವಗಳ ಮೂಲಕ ದಬ್ಬಾಳಿಕೆ, ಶೋಷಣೆ ಅನ್ಯಾಯಗಳ ವಿರುದ್ಧಾ ಇಂದಿಗೂ ಸಿಡಿದೇಳುವ ಕ್ರಾಂತಿಯ ಕಿಡಿಯಾಗಿ ತನ್ನ ನಂತರದ ತಲೆಮಾರಿಗೆ ಸ್ಫೂರ್ತಿಯ ಚಿಲುಮೆಯಾಗಿ ಸದಾ ಜೊತೆಯಾಗುತ್ತಲೇ ಇರುತ್ತಾನೆ.
ನಮ್ಮ ನಡುವೆ ಇರುವ ವಿದ್ಯಾವಂತ ಬುದ್ಧಿವಂತ ರೆನಿಸಿಕೊಂಡವರು, ನಾವು ಶ್ರೇಷ್ಠ ಉಳಿದವರು ಕನಿಷ್ಠವೆಂದು ಜಾತಿ ಧರ್ಮ ದೇವರುಗಳ ಹೆಸರಿನಲ್ಲಿ ಭಯ ಹುಟ್ಟಿಸಿ ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯವೆಸಗುತಿದ್ದರು ಇಲ್ಲಿನ ಸರ್ಕಾರಗಳು ಮತ್ತು ಜನಸಾಮಾನ್ಯರು ಅದರ ವಿರುದ್ಧ ಸಿಡಿದೇಳುವುದಿರಲಿ, ಕೊನೆ ಪಕ್ಷ ವಿರೋಧ ವ್ಯಕ್ತ ಪಡಿಸದೆ ಜಾಣ ಕುರುಡರಂತೆ ಮೌನವಹಿಸುತ್ತಿರುವುದು ದುರಂತವೇ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ4 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ4 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ4 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ4 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



