Connect with us

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು : ಪತ್ರಿಕೋದ್ಯಮ ವಿಭಾಗದಿಂದ ‘ಚಿಗುರು’ ಪತ್ರಿಕೆ ಹಾಗೂ ಸಾಕ್ಷಚಿತ್ರ ಬಿಡುಗಡೆ

Published

on

ಸುದ್ದಿದಿನ, ದಾವಣಗೆರೆ : ಪತ್ರಿಕೆ ಹಾಳೆಯ ಗುಣಮಟ್ಟಕ್ಕಿಂತ ಪತ್ರಿಕೆಯ ಒಳಗಿರುವ ಸುದ್ದಿ ಹೆಚ್ಚು ಮಹತ್ವವನ್ನು ಪಡೆದುಕೊಳ್ಳಲಿದೆ.ಇಂದು ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚು ನಿಭಾಯಿಸಬೇಕಿದೆ ಎಂದು ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕರಾದ ಸದಾನಂದ ಹೆಗಡೆಯವರು ಅಭಿಪ್ರಾಯ ಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗ ಮತ್ತು ಅಂತರಿಕ ಗುಣಮಟ್ಟ ಕೋಶದಿಂದ ಆಯೋಜಿಸಲಾಗಿದ್ದ “ಚಿಗುರು” ಪತ್ರಿಕೆ ಹಾಗೂ ಸಾಕ್ಷಚಿತ್ರ ಬಿಡುಗಡೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ಪತ್ರಿಕೋದ್ಯಮ ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಬರೆದ ನಮ್ಮ ಭಾರತೀಯ ಸಂವಿಧಾನದ ಮಾರ್ಗದರ್ಶನದಲ್ಲಿ ಬರೆಯುವ ಕಲೆಯನ್ನು ಕರಗತಮಾಡಿಕೊಳ್ಳಬೇಕು.

ಇಂದು ಬರೆಯುವವರ ಸಂಖ್ಯೆ ಬಹಳ ಕಡಿಮೆಯಿದೆ.ಹೆಚ್ಚು ಓದಿದಾಗ ಮಾತ್ರ ಪ್ರಬುದ್ಧವಾಗಿ ಬರೆಯಲು ಸಾಧ್ಯ,ಹೊಸದಾಗಿ ಬರೆಯುವವರು ತಮ್ಮ ದೈನಂದಿನ ಬದುಕಿನ ಘಟನೆಗಳನ್ನು ವಸ್ತುವನ್ನಾಗಿಸಬೇಕು. ಬೇರೆಯವರ ಅನಾವಶ್ಯಕ ಭಯವನ್ನು ಬದಿಗೊತ್ತಿ ನಮ್ಮ ಅಂತರಿಕ ಸ್ಪಷ್ಟತೆಗಾಗಿ ಬರೆಯಬೇಕಾಗಿದೆ ಎಂದು ಹೇಳಿದರು.

ಅಧ್ಯಕ್ಷೀಯ ನುಡಿಗಳನ್ನಾಡಿದ ಪ್ರಾಂಶುಪಾಲರಾದ ಡಾ.ಎಸ್.ಆರ್.ಅಂಜನಪ್ಪ .ಪತ್ರಿಕೋದ್ಯಮವು ಸಮಾಜದ ವೈದ್ಯನಂತೆ ಕಾರ್ಯವನ್ನು ನಿರ್ವಹಿಸಬೇಕಿದೆ.ಪ್ರಜಾಪ್ರಭುತ್ವದ ಕಾವಲುಗಾರನಾಗಿರುವ ಪತ್ರಿಕಾರಂಗ ನೊಂದವರ ನೋವನ್ನು ಹೇಳುವ ಸಾಧನವಾಗಬೇಕು.ಬದ್ಧತೆ ಹಾಗೂ ಆಳವಾದ ಜ್ಞಾನ ಇದ್ದರೆ ಮಾತ್ರ ಉತ್ತಮ ಬರಹಗಾರನಾಗಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.ಪತ್ರಿಕೋದ್ಯಮ ವಿದ್ಯಾರ್ಥಿಗಳು ಹೊರತಂದಿರುವ ಚಿಗುರು ಪತ್ರಿಕೆ ಮುಂದೆ ಬೆಳೆದು ಹೆಮ್ಮರವಾಗಲಿ ನಮ್ಮ ವಿದ್ಯಾರ್ಥಿಗಳು ಹೆಚ್ಚು ಕ್ರಿಯಾಶೀಲ ಮೈಗೂಡಿಸಿಕೊಂಡು ಅತ್ಯುತ್ತಮ ಪತ್ರಕರ್ತರಾಗಲಿ ಎಂದು ಮೆಚ್ಚುಗೆ ವ್ಯಕ್ತಪಡಿಸುವುದರೊಂದಿಗೆ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅಂತರಿಕ ಗುಣಮಟ್ಟ ಕೋಶದ ಸಹ ಸಂಚಾಲಕರಾದ ನಟರಾಜ್.ಜಿ.ಆರ್.ಪತ್ರಾಂಕಿತ ವ್ಯವಸ್ಥಾಪಕರಾದ ಶ್ರೀಮತಿ ಗೀತಾದೇವಿ.ಟಿ.ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಗಿರಿಸ್ವಾಮಿ,ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ,ಸಾಂಸ್ಕೃತಿಕ ಸಂಚಾಲಕರಾದ ಡಾ.ಲತಾ. ಕು.ಲಕ್ಷ್ಮಿ ಆರ್ ಹಾಗೂ ಪ್ರಾಧ್ಯಾಪಕರಾದ ಲೋಲಕ್ಷಿ.ರಿಹಾನಬಾನು.ಡಾ.ಲತಾ ಸಿ.ಹಾಗೂ ಹುಚ್ಚಂಗಿ ಪ್ರಸಾದ್ ಉಪಸ್ಥಿತರಿದ್ದರು. ಮತ್ತು ವಿವಿಧ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು .

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending