Connect with us

ರಾಜಕೀಯ

ಹರತಾಳು ಹಾಲಪ್ಪ ಕಂಡಂತೆ ಯಡಿಯೂರಪ್ಪ..!

Published

on

ನಿಷ್ಕಲ್ಮಶ ನಗುವಿನಲ್ಲಿ ಅದೆಷ್ಟು ಹೋರಾಟಗಳಿವೆಯೋ, ಅದೆಷ್ಟು ನೋವು- ಅನುಭವಿಸಿದ ಮೋಸಗಳಿವೆಯೋ ಹೇಳತೀರದು. ಗೆದ್ದಲು ಕಟ್ಟಿದ ಹುತ್ತದೊಳಗೆ ಹಾವುಗಳು ಬಂದು ಸೇರಿಕೊಳ್ಳುವಂತೆ ಅನೇಕರು ಕಟ್ಟಿ ಬೆಳೆಸಿದ ಪಕ್ಷದೊಳೆಗೆ ಇನ್ಯಾರೋ ಬಂದು ಅಧಿಕಾರ ಚಲಾಯಿಸುತ್ತಾರೆ.

ದಕ್ಷಿಣ ಭಾರತದಲ್ಲಿ (ಕರ್ನಾಟಕ) ಜನಸಂಘ -ಬಿಜೆಪಿ ಎಂಬ ಸಸಿ ಆಗಿನ್ನೂ ಮೊಳಕೆಯೋಡಿಯುತ್ತಿದ್ದ ಸಮಯದಲ್ಲಿ ಅದಕ್ಕೆ ಸಿಕ್ಕಂತಹ ತಾಯಿಬೇರು ಯಡಿಯೂರಪ್ಪ ಎಂಬ ಹೆಸರಾದರೆ, ಕಾರಣವಾಗಿದ್ದು ಅನಂತ ಕುಮಾರ್. ಕಾರ್ಯಕರ್ತರನ್ನು ಬಡಿದೆಬ್ಬಿಸಿ ಅನ್ಯಾಯ ಕಂಡಲ್ಲಿ ಹೋರಾಟ ಮಾಡುತ್ತಾ ಜನರಿಗೆ ಸ್ಥರ್ಯ ತುಂಬಿ,ನ್ಯಾಯ ದೊರಕಿಸುತ್ತ ಸಹಜ ಹೋರಟಗಾರನಾಗಿ ಜನರ ಮನಸಿನಲ್ಲಿ ಅಚ್ಚಳಿಯದಂತೆ ಉಳಿದ ಹೆಸರು ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಎಂಬ ಛಲದಂಕಮಲ್ಲ.

ದೇವರಾಜ್ ಅರಸು, ಗುಂಡುರಾವ್, ರಾಮಕೃಷ್ಣ ಹೆಗ್ಡೆ,ನಿಜಲಿಂಗಪ್ಪ,ಜೆ.ಹೆಚ್.ಪಟೇಲ್,ಬಂಗಾರಪ್ಪ,ದೇವೇಗೌಡ. ಎಂಬ ರಾಜಕೀಯ ಮೇರು ಪರ್ವತಗಳ ಎದುರು ತನ್ನದೆಯಾದ ಕಾರ್ಯಕರ್ತರ ಸಾಮ್ರಾಜ್ಯ ಕಟ್ಟುತ್ತಾ ತಳ ಹಂತದಿಂದ ಪಕ್ಷಕಟ್ಟಿ ಯಾವತ್ತೂ ಅವಕಾಶವಾದಿ ರಾಜಕಾರಣ ಮಾಡದೆ, ಮೊದಲಬಾರಿಗೆ 2 ಅಂಕಿಯಿಂದ ಪ್ರಾರಂಭವಾದ ಬಿಜೆಪಿಯ ಗೆಲುವಿನ ಅಭಿಯಾನ 40ರ ಗಡಿಗೆ ಬಂದು ನಿಂತಾಗ, 2004 ರಲ್ಲಿ ಬಂಗಾರಪ್ಪ ನವರು ಬಿಜೆಪಿ ಸೇರ್ಪಡೆಯಾದಾಗ 79 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು. ಆ 79 ಶಾಸಕರಲ್ಲಿ ನಾನು ಒಬ್ಬನಾಗಿದ್ದೆ ಬಂಗಾರಪ್ಪ ನವರು ಬಿಜೆಪಿ ಪಕ್ಷ ತೊರೆದಾಗ ಇನ್ನೇನು ಬಿಜೆಪಿ ಸ್ಥಿತಿ ಡೋಲಾಯಮಾನವಾಗಿ ಹೋಯ್ತು, ಇನ್ನು ಬಿಜೆಪಿ ನೆಲ ಕಚ್ಚಿತ್ತು ಎಂಬ ಮಾತುಗಳು ಆರಂಭವಾದಾಗ,

ಸಮಿಶ್ರ ಸರ್ಕಾರದ ಭಾಗವಾಗಿ ಉಪಮುಖ್ಯಮಂತ್ರಿ ಗಳಾದ ಯಡಿಯೂರಪ್ಪ ನವರು, ನಂತರ 20-20 ಸರ್ಕಾರದ ಕೊನೆ ಅವಧಿಗೆ ಮುಖ್ಯಮಂತ್ರಿ ಗಳಾದರು ಜೆಡಿಎಸ್ ನವರ ಮೋಸಕ್ಕೆ ಬೇಸತ್ತು ಮೈತ್ರಿಯಿಂದ ಹೊರಬಂದು ಪಕ್ಷಕ್ಕೆ ಯಾವುದೇ ಕುಂದು ಬಾರದಂತೆ ಪಕ್ಷವನ್ನು ತನ್ನ ಸದೃಢ ನಾಯಕತ್ವದಲ್ಲಿ ಮುನ್ನೆಡೆಸಿ 2008 ರ ಚುನಾವಣೆಯಲ್ಲಿ 110 ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ತನ್ನ ರಾಜಕೀಯ ಚಾಣಾಕ್ಷತೆ, ತನ್ನ ಸಾಮರ್ಥ್ಯವನ್ನು ನಿರೂಪಿಸಿ, ಸರ್ಕಾರ ಸುಭದ್ರವಾಗಲು ಮತ್ತೆ ನೆಡೆದ ಉಪಚುನಾವಣೆಗಳಲ್ಲಿ ಗೆದ್ದು ಬಹುಮತದ ಸರ್ಕಾರ ರಚಿಸಿದರು.

ತಮ್ಮ ಸಂಪುಟದಲ್ಲಿ ನನ್ನನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಂತ್ರಿಯನ್ನಾಗಿಸಿದ್ದು ಯಡಿಯೂರಪ್ಪ ನವರ ಜಾತ್ಯತೀತ ನಿಲುವಿಗೆ ಹಾಗೂ ಸಣ್ಣ ಸಮುದಾಯಗಳನ್ನು ಮುನ್ನೆಲೆಗೆ ತರುವ ರಾಜಕೀಯ ಇಚ್ಛಾಶಕ್ತಿ ಗೆ ಹಿಡಿದ ಕೈಗನ್ನಡಿಯಾಗಿದೆ.

ಆನಂತರ ನೆಡೆದ ರಾಜಕೀಯ ವಿಪ್ಲವಗಳಿಂದ ಮನನೊಂದು ತಾನು ಬೆವರು ಸುರಿಸಿ ಬೆಳೆಸಿದ ಪಕ್ಷದಿಂದ ಹೊರಬಂದು ಕೆ.ಜೆ.ಪಿ ಸ್ಥಾಪಿಸಿ ಕೆಲ ತಿಂಗಳುಗಳಲ್ಲಿ ನೆಡೆದ ಚುನಾವಣೆಯಲ್ಲಿ ಶೇ 10% ಮತಗಳನ್ನು ಪಡೆದು ತನ್ನ ಸಾಮರ್ಥ್ಯವನ್ನು ನಿರೂಪಿಸಿದನ್ನು ರಾಜಕೀಯ ಎನ್ನುವ ಪುಸ್ತಕದಲ್ಲಿ ಬರೆದಿಡುವಂತಹ ಸಾಧನೆ ಮಾಡಿದ್ದು ವಿರೋಧಿಗಳ ಎದೆಯಲ್ಲಿ ಇನ್ನು ಮಾಸದಂತೆ ಅಚ್ಚುಳಿದಿದೆ. ನಂತರ ಬಿಜೆಪಿ ಸೇರ್ಪಡೆಯಾಗಿ 2014 ರ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಿಸಿಕೊಡುವ ಮೂಲಕ ಮೋದಿಯ ನಾಯಕತ್ವವೇ ಸೂಕ್ತ ಎಂದು ಮೊಟ್ಟ ಮೊದಲು ಉಚ್ಚರಿಸಿದ ನಾಯಕ BSY.

76 ರ ಹರೆಯದಲ್ಲಿ ಯುವಕರು ನಾಚಿಸುವಂತ ಓಡಾಟ ಸದಾ ಅಭಿವೃದ್ಧಿ ಪರ ಚಿಂತನೆಗಳು, ರೈತ ಪರ ನಿಲುವುಗಳು 2018 ರ ಚುನಾವಣೆಯಲ್ಲಿ ಮತ್ತೆ ಯಡಿಯೂರಪ್ಪ ನವರನ್ನು ಮುಖ್ಯಮಂತ್ರಿ ಯನ್ನಾಗಿ ನೋಡಬೇಕೆನ್ನುವ ಜನರು ಹಂಬಲಿಸುತ್ತಿದ್ದರು. ತನ್ನನ್ನು ನಂಬಿದವರನ್ನು ಎಂದು ಕೈಬಿಡದ ಯಡಿಯೂರಪ್ಪ ನವರು ಸಾಗರ ಕ್ಷೇತ್ರದಲ್ಲಿ ನಾನು ಗೆಲ್ಲುತ್ತೇನೆ ಎಂದು ವಿಶ್ವಾಸವಿಟ್ಟು ಹಲವರ ವಿರೋದದ ನಡುವೆ ಟಿಕೆಟ್ ನೀಡಿ ನನ್ನ ಕೈ ಹಿಡಿದರು. ರಾಜ್ಯದಲ್ಲಿ ಅಂದಿನ ಚುನಾವಣಾ ಫಲಿತಾಂಶ ಬಿಜೆಪಿಯನ್ನು ಅದಿಕಾರದ ಹೊಸ್ತಿಲಿಗೆ ತಂದು ನಿಲ್ಲಿಸಿತು. ( ಯಡಿಯೂರಪ್ಪ ನವರಿಗೆ ಸಂಪೂರ್ಣ ಜವಾಬ್ದಾರಿ ನೀಡಿದ್ದಾರೆ ಒಂದೂವರೆ ವರ್ಷ ವಿರೋಧಪಕ್ಷದಲ್ಲಿ ಕೂರುವ ಸ್ಥಿತಿ ಬರುತ್ತಿರಲಿಲ್ಲ )

ಅನಂತರ ನೆಡೆದ ರಾಜಕೀಯ ಪಗಡೆಯಾಟದಲ್ಲಿ #ವಾಚಾಮಗೋಚರವಾಗಿ ಬೈದಾಡಿಕೊಂಡಿದ್ದವರು ಸರ್ಕಾರ ರಚಿಸಿ ಜನರ ಭಾವನೆಗಳಿಗೆ ಧಕ್ಕೆ ತಂದರು. ಇವರ ಉಪಟಳಗಳನ್ನು ಸಹಿಸದ ಕೆಲ ಶಾಸಕರು ಬಂಡಾಯವೇದ್ದು ಸರ್ಕಾರ ಕೆಡವಿದರು. ತನ್ನ ಅವಕಾಶವಾಧಿ ರಾಜಕಾರಣದಿಂದ ಸ್ವಯಂ ಘೋಷಿತ ಸಭ್ಯಸ್ತರು ಅನರ್ಹರು ಎಂಬ ಹಣೆಪಟ್ಟಿ ನೀಡಿದರು. ನಂತರದ ಘಟನೆಗಳು ಜನರ ಕಣ್ಮುಂದಿದೆ, 4ನೇ ಬಾರಿ ಮುಖ್ಯಮಂತ್ರಿಯಾಗಿ ಎದುರಿಸಿದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದು ವಿರೋಧಿಗಳನ್ನು ರಾಜ್ಯದ ಜನತೆ ಎದುರು ಬೆತ್ತಲೆ ನಿಲ್ಲಿಸಿ ಇತಿಹಾಸ ನಿರ್ಮಿಸಿದ ಕೀರ್ತಿ ಯಡಿಯೂರಪ್ಪ ನವರದ್ದು …ಗಾಡ್ ಫಾದರ್ ಇಲ್ಲದೆ ಬೆಳೆದು ಬಂದು, ನನ್ನಂತಹ ಅನೇಕ ರಾಜಕಾರಣಿಗಳ ಬಾಳಿಗೆ ಗಾಡ್ ಆದ ಯಡಿಯೂರಪ್ಪ ನವರ ಯಶಸ್ಸಿನ ಜೀವನ ಘಾತೆ.

2009ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿ ಕಳಪೆ ಪ್ರದರ್ಶನ ಮಾಡಿದ್ದಾಗ ಕರ್ನಾಟಕದಿಂದ 19 ಸಂಸದರನ್ನು ಕಳುಹಿಸಿ ಕೊಟ್ಟಿದ್ದ ಯಡಿಯೂರಪ್ಪನವರಿಗೆ ಅಂದು ಶ್ರೀ ಲಾಲ್ ಕೃಷ್ಣ ಅಡ್ವಾಣಿಯವರಿಂದ ತುಂಬಿದ ಸಭೆಯಲ್ಲಿ
ಪುಷ್ಪಗುಚ್ಚ ನೀಡಿ ವಿಶೇಷ ಸನ್ಮಾನಿಸಿದ್ದರ.

2019 ರ ಲೋಕಸಭೆಯಲ್ಲಿ 25 ಹಾಗೂ ವಿಧಾನಸಭಾ ಉಪಚುನಾವಣೆಯಲ್ಲಿ ಒಂಟಿಯಾಗಿ ಸಮರ್ಥ ನಾಯಕತ್ವದಲ್ಲಿ 12 ಸ್ಥಾನ ಗೆಲ್ಲಿಸಿದಕ್ಕಾಗಿ ಇಂದು ನರೇಂದ್ರ ಮೋದಿಯವರಿಂದ “ಸ್ಟ್ಯಾಂಡಿಂಗ್ ಓವೇಷನ್”, ಮೂಲಕ ಯಡಿಯೂರಪ್ಪನವರಿಗೆ ಎಲ್ಲಾ ಸಂಸದರು ಎದ್ದು ನಿಂತು ಚಪ್ಪಾಳೆ ತಟ್ಟಿ‌ ಗೌರವಿಸಿದ್ದಾರೆ. ಈಗ ಹೇಳಿ ರಾಜ್ಯ ಆಳೋಕೆ ವಯಸ್ಸು ಬೇಡ, ಸಮರ್ಥ ನಾಯಕತ್ವ ಸಂಘಟನೆ ಚತುರತೆ ಇದ್ದರೆ ಸಾಕು.

ಇನ್ನಾದರೂ ವಿರೋಧಿಸುವವರು,ವಿಪಕ್ಷಗಳು, ದುರಹಂಕಾರಿ ಮಾತುಗಳಾಡುವವರು ಅರಿತು ನೆಡೆದರೆ ಒಳ್ಳೆಯದು.

ಹೆಚ್.ಹಾಲಪ್ಪ ಹರತಾಳು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎಪ್ರಿಲ್‌ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೆರವಣಿಗೆ ಮಾರ್ಗ

ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ‌ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆ‌ಎಸ್‌ಟಿ‌ಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending