ರಾಜಕೀಯ
ಹರತಾಳು ಹಾಲಪ್ಪ ಕಂಡಂತೆ ಯಡಿಯೂರಪ್ಪ..!

ಈ ನಿಷ್ಕಲ್ಮಶ ನಗುವಿನಲ್ಲಿ ಅದೆಷ್ಟು ಹೋರಾಟಗಳಿವೆಯೋ, ಅದೆಷ್ಟು ನೋವು- ಅನುಭವಿಸಿದ ಮೋಸಗಳಿವೆಯೋ ಹೇಳತೀರದು. ಗೆದ್ದಲು ಕಟ್ಟಿದ ಹುತ್ತದೊಳಗೆ ಹಾವುಗಳು ಬಂದು ಸೇರಿಕೊಳ್ಳುವಂತೆ ಅನೇಕರು ಕಟ್ಟಿ ಬೆಳೆಸಿದ ಪಕ್ಷದೊಳೆಗೆ ಇನ್ಯಾರೋ ಬಂದು ಅಧಿಕಾರ ಚಲಾಯಿಸುತ್ತಾರೆ.
ದಕ್ಷಿಣ ಭಾರತದಲ್ಲಿ (ಕರ್ನಾಟಕ) ಜನಸಂಘ -ಬಿಜೆಪಿ ಎಂಬ ಸಸಿ ಆಗಿನ್ನೂ ಮೊಳಕೆಯೋಡಿಯುತ್ತಿದ್ದ ಸಮಯದಲ್ಲಿ ಅದಕ್ಕೆ ಸಿಕ್ಕಂತಹ ತಾಯಿಬೇರು ಯಡಿಯೂರಪ್ಪ ಎಂಬ ಹೆಸರಾದರೆ, ಕಾರಣವಾಗಿದ್ದು ಅನಂತ ಕುಮಾರ್. ಕಾರ್ಯಕರ್ತರನ್ನು ಬಡಿದೆಬ್ಬಿಸಿ ಅನ್ಯಾಯ ಕಂಡಲ್ಲಿ ಹೋರಾಟ ಮಾಡುತ್ತಾ ಜನರಿಗೆ ಸ್ಥರ್ಯ ತುಂಬಿ,ನ್ಯಾಯ ದೊರಕಿಸುತ್ತ ಸಹಜ ಹೋರಟಗಾರನಾಗಿ ಜನರ ಮನಸಿನಲ್ಲಿ ಅಚ್ಚಳಿಯದಂತೆ ಉಳಿದ ಹೆಸರು ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಎಂಬ ಛಲದಂಕಮಲ್ಲ.
ದೇವರಾಜ್ ಅರಸು, ಗುಂಡುರಾವ್, ರಾಮಕೃಷ್ಣ ಹೆಗ್ಡೆ,ನಿಜಲಿಂಗಪ್ಪ,ಜೆ.ಹೆಚ್.ಪಟೇಲ್,ಬಂಗಾರಪ್ಪ,ದೇವೇಗೌಡ. ಎಂಬ ರಾಜಕೀಯ ಮೇರು ಪರ್ವತಗಳ ಎದುರು ತನ್ನದೆಯಾದ ಕಾರ್ಯಕರ್ತರ ಸಾಮ್ರಾಜ್ಯ ಕಟ್ಟುತ್ತಾ ತಳ ಹಂತದಿಂದ ಪಕ್ಷಕಟ್ಟಿ ಯಾವತ್ತೂ ಅವಕಾಶವಾದಿ ರಾಜಕಾರಣ ಮಾಡದೆ, ಮೊದಲಬಾರಿಗೆ 2 ಅಂಕಿಯಿಂದ ಪ್ರಾರಂಭವಾದ ಬಿಜೆಪಿಯ ಗೆಲುವಿನ ಅಭಿಯಾನ 40ರ ಗಡಿಗೆ ಬಂದು ನಿಂತಾಗ, 2004 ರಲ್ಲಿ ಬಂಗಾರಪ್ಪ ನವರು ಬಿಜೆಪಿ ಸೇರ್ಪಡೆಯಾದಾಗ 79 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು. ಆ 79 ಶಾಸಕರಲ್ಲಿ ನಾನು ಒಬ್ಬನಾಗಿದ್ದೆ ಬಂಗಾರಪ್ಪ ನವರು ಬಿಜೆಪಿ ಪಕ್ಷ ತೊರೆದಾಗ ಇನ್ನೇನು ಬಿಜೆಪಿ ಸ್ಥಿತಿ ಡೋಲಾಯಮಾನವಾಗಿ ಹೋಯ್ತು, ಇನ್ನು ಬಿಜೆಪಿ ನೆಲ ಕಚ್ಚಿತ್ತು ಎಂಬ ಮಾತುಗಳು ಆರಂಭವಾದಾಗ,
ಸಮಿಶ್ರ ಸರ್ಕಾರದ ಭಾಗವಾಗಿ ಉಪಮುಖ್ಯಮಂತ್ರಿ ಗಳಾದ ಯಡಿಯೂರಪ್ಪ ನವರು, ನಂತರ 20-20 ಸರ್ಕಾರದ ಕೊನೆ ಅವಧಿಗೆ ಮುಖ್ಯಮಂತ್ರಿ ಗಳಾದರು ಜೆಡಿಎಸ್ ನವರ ಮೋಸಕ್ಕೆ ಬೇಸತ್ತು ಮೈತ್ರಿಯಿಂದ ಹೊರಬಂದು ಪಕ್ಷಕ್ಕೆ ಯಾವುದೇ ಕುಂದು ಬಾರದಂತೆ ಪಕ್ಷವನ್ನು ತನ್ನ ಸದೃಢ ನಾಯಕತ್ವದಲ್ಲಿ ಮುನ್ನೆಡೆಸಿ 2008 ರ ಚುನಾವಣೆಯಲ್ಲಿ 110 ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ತನ್ನ ರಾಜಕೀಯ ಚಾಣಾಕ್ಷತೆ, ತನ್ನ ಸಾಮರ್ಥ್ಯವನ್ನು ನಿರೂಪಿಸಿ, ಸರ್ಕಾರ ಸುಭದ್ರವಾಗಲು ಮತ್ತೆ ನೆಡೆದ ಉಪಚುನಾವಣೆಗಳಲ್ಲಿ ಗೆದ್ದು ಬಹುಮತದ ಸರ್ಕಾರ ರಚಿಸಿದರು.
ತಮ್ಮ ಸಂಪುಟದಲ್ಲಿ ನನ್ನನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಂತ್ರಿಯನ್ನಾಗಿಸಿದ್ದು ಯಡಿಯೂರಪ್ಪ ನವರ ಜಾತ್ಯತೀತ ನಿಲುವಿಗೆ ಹಾಗೂ ಸಣ್ಣ ಸಮುದಾಯಗಳನ್ನು ಮುನ್ನೆಲೆಗೆ ತರುವ ರಾಜಕೀಯ ಇಚ್ಛಾಶಕ್ತಿ ಗೆ ಹಿಡಿದ ಕೈಗನ್ನಡಿಯಾಗಿದೆ.
ಆನಂತರ ನೆಡೆದ ರಾಜಕೀಯ ವಿಪ್ಲವಗಳಿಂದ ಮನನೊಂದು ತಾನು ಬೆವರು ಸುರಿಸಿ ಬೆಳೆಸಿದ ಪಕ್ಷದಿಂದ ಹೊರಬಂದು ಕೆ.ಜೆ.ಪಿ ಸ್ಥಾಪಿಸಿ ಕೆಲ ತಿಂಗಳುಗಳಲ್ಲಿ ನೆಡೆದ ಚುನಾವಣೆಯಲ್ಲಿ ಶೇ 10% ಮತಗಳನ್ನು ಪಡೆದು ತನ್ನ ಸಾಮರ್ಥ್ಯವನ್ನು ನಿರೂಪಿಸಿದನ್ನು ರಾಜಕೀಯ ಎನ್ನುವ ಪುಸ್ತಕದಲ್ಲಿ ಬರೆದಿಡುವಂತಹ ಸಾಧನೆ ಮಾಡಿದ್ದು ವಿರೋಧಿಗಳ ಎದೆಯಲ್ಲಿ ಇನ್ನು ಮಾಸದಂತೆ ಅಚ್ಚುಳಿದಿದೆ. ನಂತರ ಬಿಜೆಪಿ ಸೇರ್ಪಡೆಯಾಗಿ 2014 ರ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಿಸಿಕೊಡುವ ಮೂಲಕ ಮೋದಿಯ ನಾಯಕತ್ವವೇ ಸೂಕ್ತ ಎಂದು ಮೊಟ್ಟ ಮೊದಲು ಉಚ್ಚರಿಸಿದ ನಾಯಕ BSY.
76 ರ ಹರೆಯದಲ್ಲಿ ಯುವಕರು ನಾಚಿಸುವಂತ ಓಡಾಟ ಸದಾ ಅಭಿವೃದ್ಧಿ ಪರ ಚಿಂತನೆಗಳು, ರೈತ ಪರ ನಿಲುವುಗಳು 2018 ರ ಚುನಾವಣೆಯಲ್ಲಿ ಮತ್ತೆ ಯಡಿಯೂರಪ್ಪ ನವರನ್ನು ಮುಖ್ಯಮಂತ್ರಿ ಯನ್ನಾಗಿ ನೋಡಬೇಕೆನ್ನುವ ಜನರು ಹಂಬಲಿಸುತ್ತಿದ್ದರು. ತನ್ನನ್ನು ನಂಬಿದವರನ್ನು ಎಂದು ಕೈಬಿಡದ ಯಡಿಯೂರಪ್ಪ ನವರು ಸಾಗರ ಕ್ಷೇತ್ರದಲ್ಲಿ ನಾನು ಗೆಲ್ಲುತ್ತೇನೆ ಎಂದು ವಿಶ್ವಾಸವಿಟ್ಟು ಹಲವರ ವಿರೋದದ ನಡುವೆ ಟಿಕೆಟ್ ನೀಡಿ ನನ್ನ ಕೈ ಹಿಡಿದರು. ರಾಜ್ಯದಲ್ಲಿ ಅಂದಿನ ಚುನಾವಣಾ ಫಲಿತಾಂಶ ಬಿಜೆಪಿಯನ್ನು ಅದಿಕಾರದ ಹೊಸ್ತಿಲಿಗೆ ತಂದು ನಿಲ್ಲಿಸಿತು. ( ಯಡಿಯೂರಪ್ಪ ನವರಿಗೆ ಸಂಪೂರ್ಣ ಜವಾಬ್ದಾರಿ ನೀಡಿದ್ದಾರೆ ಒಂದೂವರೆ ವರ್ಷ ವಿರೋಧಪಕ್ಷದಲ್ಲಿ ಕೂರುವ ಸ್ಥಿತಿ ಬರುತ್ತಿರಲಿಲ್ಲ )
ಅನಂತರ ನೆಡೆದ ರಾಜಕೀಯ ಪಗಡೆಯಾಟದಲ್ಲಿ #ವಾಚಾಮಗೋಚರವಾಗಿ ಬೈದಾಡಿಕೊಂಡಿದ್ದವರು ಸರ್ಕಾರ ರಚಿಸಿ ಜನರ ಭಾವನೆಗಳಿಗೆ ಧಕ್ಕೆ ತಂದರು. ಇವರ ಉಪಟಳಗಳನ್ನು ಸಹಿಸದ ಕೆಲ ಶಾಸಕರು ಬಂಡಾಯವೇದ್ದು ಸರ್ಕಾರ ಕೆಡವಿದರು. ತನ್ನ ಅವಕಾಶವಾಧಿ ರಾಜಕಾರಣದಿಂದ ಸ್ವಯಂ ಘೋಷಿತ ಸಭ್ಯಸ್ತರು ಅನರ್ಹರು ಎಂಬ ಹಣೆಪಟ್ಟಿ ನೀಡಿದರು. ನಂತರದ ಘಟನೆಗಳು ಜನರ ಕಣ್ಮುಂದಿದೆ, 4ನೇ ಬಾರಿ ಮುಖ್ಯಮಂತ್ರಿಯಾಗಿ ಎದುರಿಸಿದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದು ವಿರೋಧಿಗಳನ್ನು ರಾಜ್ಯದ ಜನತೆ ಎದುರು ಬೆತ್ತಲೆ ನಿಲ್ಲಿಸಿ ಇತಿಹಾಸ ನಿರ್ಮಿಸಿದ ಕೀರ್ತಿ ಯಡಿಯೂರಪ್ಪ ನವರದ್ದು …ಗಾಡ್ ಫಾದರ್ ಇಲ್ಲದೆ ಬೆಳೆದು ಬಂದು, ನನ್ನಂತಹ ಅನೇಕ ರಾಜಕಾರಣಿಗಳ ಬಾಳಿಗೆ ಗಾಡ್ ಆದ ಯಡಿಯೂರಪ್ಪ ನವರ ಯಶಸ್ಸಿನ ಜೀವನ ಘಾತೆ.
2009ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿ ಕಳಪೆ ಪ್ರದರ್ಶನ ಮಾಡಿದ್ದಾಗ ಕರ್ನಾಟಕದಿಂದ 19 ಸಂಸದರನ್ನು ಕಳುಹಿಸಿ ಕೊಟ್ಟಿದ್ದ ಯಡಿಯೂರಪ್ಪನವರಿಗೆ ಅಂದು ಶ್ರೀ ಲಾಲ್ ಕೃಷ್ಣ ಅಡ್ವಾಣಿಯವರಿಂದ ತುಂಬಿದ ಸಭೆಯಲ್ಲಿ
ಪುಷ್ಪಗುಚ್ಚ ನೀಡಿ ವಿಶೇಷ ಸನ್ಮಾನಿಸಿದ್ದರ.
2019 ರ ಲೋಕಸಭೆಯಲ್ಲಿ 25 ಹಾಗೂ ವಿಧಾನಸಭಾ ಉಪಚುನಾವಣೆಯಲ್ಲಿ ಒಂಟಿಯಾಗಿ ಸಮರ್ಥ ನಾಯಕತ್ವದಲ್ಲಿ 12 ಸ್ಥಾನ ಗೆಲ್ಲಿಸಿದಕ್ಕಾಗಿ ಇಂದು ನರೇಂದ್ರ ಮೋದಿಯವರಿಂದ “ಸ್ಟ್ಯಾಂಡಿಂಗ್ ಓವೇಷನ್”, ಮೂಲಕ ಯಡಿಯೂರಪ್ಪನವರಿಗೆ ಎಲ್ಲಾ ಸಂಸದರು ಎದ್ದು ನಿಂತು ಚಪ್ಪಾಳೆ ತಟ್ಟಿ ಗೌರವಿಸಿದ್ದಾರೆ. ಈಗ ಹೇಳಿ ರಾಜ್ಯ ಆಳೋಕೆ ವಯಸ್ಸು ಬೇಡ, ಸಮರ್ಥ ನಾಯಕತ್ವ ಸಂಘಟನೆ ಚತುರತೆ ಇದ್ದರೆ ಸಾಕು.
ಇನ್ನಾದರೂ ವಿರೋಧಿಸುವವರು,ವಿಪಕ್ಷಗಳು, ದುರಹಂಕಾರಿ ಮಾತುಗಳಾಡುವವರು ಅರಿತು ನೆಡೆದರೆ ಒಳ್ಳೆಯದು.
–ಹೆಚ್.ಹಾಲಪ್ಪ ಹರತಾಳು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ

ಸುದ್ದಿದಿನ,ದಾವಣಗೆರೆ:ಇದೇ 12 ರಂದು ಮಧ್ಯಾಹ್ನ 3 ಗಂಟೆಗೆ ನಗರದ ದೊಡ್ಡಬೂದಿಹಾಳ್ ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್ನಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ಸಂತೋಷ್.ಎಸ್.ಲಾಡ್ ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಘನುಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಧ ಶಾಮನೂರು.ಟಿ.ಬಸವರಾಜ್, ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಶಾಮನೂರು ಶಿವಶಂಕರಪ್ಪ ಚಾಲನೆ

ಸುದ್ದಿದಿನ,ದಾವಣಗೆರೆ:ದಾವಣಗೆರೆಯ ಕೆ.ಆರ್. ರಸ್ತೆಯಲ್ಲಿರುವ ಎಸ್.ಎಸ್. ಜನರಲ್ ಆಸ್ಪತ್ರೆ, ದಾವಣಗೆರೆ ದಕ್ಷಿಣದ ಜನರಿಗೆ, ವಿಶೇಷವಾಗಿ ನಗರದ ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಕೈಗೆಟುಕುವ, ಸುಲಭವಾಗಿ ಸಿಗುವ ಆರೋಗ್ಯ ಸೇವೆಯನ್ನು ಒದಗಿಸಲು ಮುಂದಾಗಿದೆ.
ಇಂದು ಸಂಜೆ ಶಾಸಕರು, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ಚಾಲನೆ ನೀಡಿ ಮಾತನಾಡಿ ಈಗಾಗಲೇ ಹೊರರೋಗಿಗಳ ವಿಭಾಗ, ಡಯಾಲಿಸಿಸ್ ಕೇಂದ್ರ ಸೇರಿದಂತೆ ವಿವಿಧ ಆರೋಗ್ಯ ಸೇವೆಯನ್ನು ನೀಡುತ್ತಿರುವ ಈ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದಿನಿಂದ ಮಹಿಳೆಯರು ಮತ್ತು ಮಕ್ಕಳಿಗೆ ಕೈಗೆಟುಕುವ ಒಳರೋಗಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪೂರೈಸುವ ಉದ್ದೇಶದಿಂದ 50 ಹಾಸಿಗೆಗಳ ಒಳರೋಗಿ ವಿಭಾಗವನ್ನು ಆರಂಭಿಸಲಾಗುತ್ತಿದೆ ಎಂದರು.
ಸಮುದಾಯ ವೈದ್ಯಕೀಯ ವಿಭಾಗದಿಂದ ನಡೆಸುವ ಕ್ಯಾನ್ಸರ್ ಪತ್ತೆ ಪರೀಕ್ಷಾ ಕ್ಲಿನಿಕ್, ಉಚಿತ ಡಯಾಲಿಸಿಸ್ ಸೇವೆಗಳು, ರಕ್ತದಲ್ಲಿನ ಸಕ್ಕರೆ, ಹಿಮೋಗ್ಲೋಬಿನ್, ಮೂತ್ರಪಿಂಡದ ಕಾರ್ಯ ಪರೀಕ್ಷೆಗಳು ಮತ್ತು ಮೂತ್ರ ಪರೀಕ್ಷೆಗಳಂತಹ ಮೂಲಭೂತ ಪ್ರಯೋಗಾಲಯ ಪರೀಕ್ಷೆಗಳು ನಡೆಯುತ್ತಿದ್ದು, ಆಸ್ಪತ್ರೆಯಲ್ಲಿ ಇಲ್ಲಿನ ಜನರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಒಳರೋಗಿಗಳ ವಿಭಾಗವನ್ನು ಆರಂಬಿಸಿದ್ದು, ಈ ಭಾಗದ ಜನರು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಒಳರೋಗಿ ವಿಭಾಗದ ಸೇವೆಗಳನ್ನು ಬೆಂಬಲಿಸುವ ಉದ್ದೇಶದಿಂದ, ಅಲ್ಟ್ರಾಸೌಂಡ್ ಮತ್ತು ಎಕ್ಸ್-ರೇ, ಡಯೊಗ್ನೊಸ್ಟಿಕ್ ಸೇರಿದಂತೆ ಇತರೆ ಆರೋಗ್ಯ ಸೇವೆಗಳನ್ನೂ ಪರಿಚಯಿಸಿ ರಿಯಾಯಿತಿ ದರದಲ್ಲಿ ಒದಗಿಸಲಾಗುವುದು, ಯಾವುದೇ ರೋಗಿಯನ್ನು ವೆಚ್ಚದ ಕಾರಣದಿಂದಾಗಿ ವಾಪಾಸ್ ಕಳಿಸುವುದಿಲ್ಲ ಎಂದು ಭರವಸೆ ನೀಡಿದರು.
ಸಾರ್ವಜನಿಕರಿಗೆ ಹೆಚ್ಚಿನ ನೆರವು ನೀಡಲು ಎಸ್.ಎಸ್.ಕೇರ್ ಟ್ರಸ್ಟ್ ಕೂಡ ನಮ್ಮೊಂದಿಗೆ ಕೈಜೋಡಿಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ಲೈಫ್ ಟ್ಟಸ್ರಿಗಳು, ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ 2019ರಿಂದ ಆರಂಭವಾದ ಎಸ್.ಎಸ್.ಕೇರ್ ಟ್ರಸ್ಟ್ ಅನೇಕ ಆರೋಗ್ಯ ಸೇವೆಗಳನ್ನು ಒದಗಿಸಲು ಡಾ|| ಶಾಮನೂರು ಶಿವಶಂಕರಪ್ಪನವರ ಪ್ರೇರಣೆಯೇ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ಬಾಪೂಜಿ ಆಡಳಿತ ಮಂಡಳಿಯ ಸದಸ್ಯರಾದ ಅಥಣಿ ವೀರಣ್ಣನವರು, ಶ್ರೀಮತಿ ಕಿರುವಾಡಿ ಗಿರಿಜಮ್ಮ, ಸಂಪನ್ನ ಮುತಾಲಿಕ್, ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಪ್ರೊ|| ಬಕ್ಕಪ್ಪ, ಎಸ್ಎಸ್ಐಎಂಎಸ್ಆರ್ಸಿ ಪ್ರಾಂಶುಪಾಲರಾದ ಡಾ. ಪ್ರಸಾದ್, ಎಸ್ಎಸ್ಐಎಂಎಸ್ಆರ್ಸಿ ವೈದ್ಯಕೀಯ ನಿರ್ದೇಶಕರಾದ ಡಾ. ಅರುಣಕುಮಾರ್ ಅಜ್ಜಪ್ಪ, ಬಾಪೂಜಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕುಮಾರ್, ಸತ್ಯನಾರಾಯಣ, ಡಾ|| ಪ್ರಶಾಂತಕುಮಾರಿ, ಡಾ|| ಶ್ರೇಷ್ಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ದಾದು ಸೇಠ್, ಚಮನ್ ಸಾಬ್, ಮುನ್ನಾ ಪೈಲ್ವಾನ್, ಮುದೇಗೌಡ್ರು ಗಿರೀಶ್, ಜಿ.ಎಸ್.ಮಂಜುನಾಥ್ (ಗಡಿಗುಡಾಳ್) ಮತ್ತಿತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ23 hours ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ23 hours ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ23 hours ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್