Connect with us

ದಿನದ ಸುದ್ದಿ

ಕಲ್ಪವೃಕ್ಷವೆಂದರೆ..!?

Published

on

  • ಕೆ.ಶ್ರೀಧರ್ (ಕೆ.ಸಿರಿ), ಯುವ ಸಾಹಿತಿಗಳು, ಚಾಮರಾಜನಗರ

ಕಲ್ಪವೃಕ್ಷವೆಂದರೆ ಬೇಡಿದ್ದನ್ನು ನೀಡುವ ಸ್ವರ್ಗ ಲೋಕದ ಮರ ಹೌದು ತೆಂಗಿನಮರವು ಕೂಡ ಮನುಷ್ಯನ ಜೀವನದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಉಪಯುಕ್ತವಾಗುವ ಮರ. ತೆಂಗಿನ ಮರದ ಜೀವ ಮತ್ತು ಜೀವನವೇ ಹಾಗೆ ಅದರ ಯಾವುದೇ ಒಂದೇ ಒಂದು ಭಾಗವು ಕೂಡ ಅನುಪಯುಕ್ತವಾದುದಲ್ಲ ಇಡೀ ಮರವೇ ಒಂದಲ್ಲ ಒಂದು ತರದಲ್ಲಿ ಮಾನವನ ಜೀವನಕ್ಕೆ ಬದುಕ ಸಾಗಿಸಲು ಸಹಾಯಕವಾಗುತ್ತದೆ.

ತೆಂಗಿನ ಮರ ಯಾವುದೇ ರೆಂಬೆ ಕೊಂಬೆಗಳನ್ನು ಹೊಂದಿರುವುದಿಲ್ಲ ಒಂದೇ ಕಾಂಡವು ಸುಮಾರು 20 ರಿಂದ 30 ಅಡಿಯವರೆಗೂ ಬೆಳೆದು ಗರಿ ಗರಿಯಾದ ಹಸಿರು ತೆಂಗಿನ ಗರಿಗಳನ್ನು ಹೊಂದಿರುತ್ತದೆ. ಸಾಮಾನ್ಯವಾಗಿ ತೆಂಗಿನ ಮರದ ಸಿಂಗಾರದಲ್ಲಿ ಅಂದರೆ ಹೊಂಬಾಳೆಯಲ್ಲಿ ಗಂಡು ಹೂವು ಹಾಗೂ ಹೆಣ್ಣು ಹೂವುಗಳು ಇರುತ್ತವೆ ಹೆಣ್ಣು ಹೂವುಗಳು ಅರಳಿದ ನಂತರವೇ ಸಿಂಗಾರದಲ್ಲಿ ಫಲ ಇಡಲು ಆರಂಭವಾಗುತ್ತದೆ.

ಸುಮಾರು 70 ರಿಂದ 80 ವರ್ಷಗಳ ಕಾಲ ಜೀವಿಸುವ ತೆಂಗಿನ ಮರದಲ್ಲಿ ತಿಂಗಳಿಗೊಂದು ಹೊಸ ಗರಿಯನ್ನು ಬಿಡುತ್ತದೆ. ಈ ಗರಿಯ ಜೀವನ ಕಾಲ 30 ತಿಂಗಳು ಮಾತ್ರ ಆಮೇಲೆ ಮರದಿಂದ ಉದುರಿ ಬೀಳುತ್ತದೆ. ಒಂದು ಮರದಲ್ಲಿ 30 ತನಕ ಹೂವಿನ ಜೊಂಪೆ ಇರುತ್ತದೆ.ತಿಂಗಳಿಗೊಂದು ಹೂ ಗೊಂಚಲು ಬಿಡುತ್ತದೆ.ಒಂದು ಮರದಿಂದ ಒಂದು ಸಂವತ್ಸರ ಕಾಲದಲ್ಲಿ 30 ರಿಂದ 60 ಕಾಯಿಗಳು ಉತ್ಪತ್ತಿಯಾಗುತ್ತವೆ.

ಹೆಣ್ಣು ಹೂವು ಹುಟ್ಟಿದ ಮೇಲೆ ಕಾಯಿ ಆಗುವುದಕ್ಕೆ ಒಂದು ಸಂವತ್ಸರ ಕಾಲಬೇಕು. ಬಹುತೇಕವಾಗಿ ಕರ್ನಾಟಕ,ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ ಗೋವಾ ರಾಜ್ಯಗಳ ಕರಾವಳಿ ಪ್ರಾಂತ್ಯಗಳಲ್ಲಿ ಹೆಚ್ಚಾಗಿ ಸಾಗುವಳಿ ಮಾಡುತ್ತಾರೆ ತೆಂಗಿನ ಮರದ ಫಲಗಳಿಗಿಂತ ಆ ಮರದ ಗರಿಗಳು ಬಡತನದಲ್ಲಿರುವವರಿಗೆ ಸೂರು ಒದಗಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ದುಡಿದು ತಿನ್ನುವ ವರ್ಗದವರು ಇಟ್ಟಿಗೆ, ಸಿಮೆಂಟು,ಕಬ್ಬಿಣ ಮತ್ತು ಗಾರೆ ಕೆಲಸದವರಿಗೆ ದುಡ್ಡು ಕೊಟ್ಟು ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಇಂತಹ ಸಂದರ್ಭದಲ್ಲಿ ಈ ವರ್ಗದವರು ತೆಂಗಿನ ಗರಿಗಳ ಕೊಂಡು ತೆಂಗಿನ ಗರಿಯ ಗುಡಿಸಲನ್ನು ಕಟ್ಟಿಕೊಂಡು ಜೀವನ ಸಾಗಿಸುವುದನ್ನು ನಾವು ಇಂದಿಗೂ ನೋಡುತ್ತೇವೆ ಈ ಸಂಗತಿ ನೋಡಿದೆ ನಿಜಕ್ಕೂ ತೆಂಗಿನ ಮರ ಕಲ್ಪತರುವೇ ಸರಿ ಇನ್ನು ಉಳ್ಳವರು ತೆಂಗಿನ ಮರವನ್ನು ಕಡಿಸಿ ತೆಂಗಿನ ತೀರು/ಅಡ್ಡತೊಲೆಯಾಗಿ ಬಳಸಿ ಸುಂದರ ಗೃಹ ನಿರ್ಮಾಣ ಮಾಡಿಕೊಳ್ಳುವಲ್ಲಿ ತೆಂಗಿನ ಮರದ ಪಾತ್ರ ನಿಜಕ್ಕೂ ಶ್ರೇಷ್ಠ.

ತ್ರಿನೇತ್ರಫಲ ಬರೀ ಗೃಹ ನಿರ್ಮಾಣ ಮಾಡಿಕೊಳ್ಳುವಲ್ಲಿ ಅಷ್ಟೇ ಉಪಯುಕ್ತ ಅಲ್ಲ ಸಾಂಸ್ಕೃತಿಕ ಒಡೆತನದ ರಾಯಭಾರಿಯೂ ಹೌದು ಬಾಲ್ಯದಲ್ಲಿ ಮಕ್ಕಳ ಆಟಿಕೆಗೆ ಉಪಯುಕ್ತವಾಗುವ ದುಡ್ಡೇ ನೀಡದೆ ಮನರಂಜನೆ ನೀಡುವ ಸಾಧನವೂ ಹೌದು. ತೆಂಗಿನ ಕಾಯಿ ಮನುಷ್ಯ ಜೀವನದ ಹುಟ್ಟಿನಿಂದ ಮರಣದವರೆಗೂ ಸಹ ಪ್ರಮುಖ ಪಾತ್ರ ವಹಿಸುತ್ತವೆ.

ಯಾವುದೇ ಒಂದು ಪೂಜೆ ಪುನಸ್ಕಾರಗಳು ಯಶಸ್ವಿಯಾಗಬೇಕಾದರೆ ತೆಂಗಿನ ಕಾಯಿ ಇರಲೇಬೇಕು ಮದುವೆಯ ಹಂದರಗಾಯಿಯಾಗಿಯೂ ಮರಣದ ಈಡು ಗಾಯಿಯೂ ಆಗಿಯೂ ತೆಂಗಿನ ಕಾಯಿ ಅತ್ಯವಶ್ಯಕ. ಇನ್ನೂ ಒಣಗಿದ ತೆಂಗಿನ ಕಾಯಿಂದ ಪರಿಶುದ್ಧ ಕೊಬ್ಬರಿ ಎಣ್ಣೆ ದೊರೆತರೆ ಹಸಿ ತೆಂಗಿನ ಕಾಯಿಯಿಂದ ದೋಸೆಗೆ ಚಟ್ನಿ ಹಾಗೂ ಕೊಬ್ಬರಿ ಹೋಳಿಗೆಯಲ್ಲಿಯೂ ಸಹ ತೆಂಗಿನ ಕಾಯಿ ಬಳಕೆಯಾಗುತ್ತದೆ.

ಒಣ ಕೊಬ್ಬರಿಯು ಪೌಷ್ಟಿಕ ಆಹಾರವಾಗಿ ಉಪಯುಕ್ತವಾಗುವುದರ ಜೊತೆಗೆ ಹೆಣ್ಣಿಗೆ ಉಡಿಹಕ್ಕಿ ಹಾಕುವ ಪದ್ದತಿಯಲ್ಲಿ ಒಣಕೊಬ್ಬರಿ ಪ್ರಮುಖ ಪಾತ್ರ ವಹಿಸುತ್ತದೆ. ಬರೀ ತೆಂಗಿನ ಕಾಯಿಯಷ್ಟೇ ಅಲ್ಲ ತೆಂಗಿನ ಚಿಪ್ಪುನ್ನು ಕೂಡ ಗೃಹ ಪೀಠೋಪಕರಣಗಳಾಗಿಯೂ ಬಳಸಬಹುದು ಅಲ್ಲದೆಯೂ ತೆಂಗಿನ ಕಾಯಿ ಚಿಪ್ಪಿನ್ನು ಚೆನ್ನಾಗಿ ಬೇಯಿಸಿ ಮದರಂಗಿಯಾಗಿಯೂ ಬಳಸಬಹುದು.

ತೆಂಗಿನ ನಾರು ಸುಲಿದು ದಿನ ನಿತ್ಯ ಬಳಕೆಯ ಹಗ್ಗವಾಗಿಯೂ ಮನೆಯಲ್ಲಿ ಕಾಲ್ವಸ್ತ್ರವಾಗಿಯೂ ಬಳಸಬಹುದು ಉಳಿದಂತೆ ತೆಂಗಿನ ಸಿಪ್ಪೆಯನ್ನು ಅಡುಗೆ ಬೇಯಿಸಲು ಕಟ್ಪಿಗೆಯಾಗಿಯೂ ಉಪಯೋಗವಾಗುತ್ತದೆ. ತೆಂಗಿನ ಗರಿಗಳಿಂದ ಚಿಕ್ಕ ವಯಸ್ಸಿನಲ್ಲಿ ಊದಲು ಪೀಪಿ ಹಾಗು ಕನ್ನಡಕ,ಜಡೆ ಹೆಣೆಯುವುದು ಹಾಗೂ ತೆಂಗಿನ ಗರಿಯ ಕಡ್ಡಿಗಳಿಂದ ಕಸ ಗುಡಿಸಲು ಪೊರಕೆ ಮಾಡಿಕೊಳ್ಳುವುದು ತೆಂಗಿನ ಗರಿಗಳನ್ನು ಒಂದು ತೊಟ್ಟಿಯಲ್ಲಿ ಹಾಕಿ ನೀರು ಬಿಟ್ಟರೆ ಕೊಳೆತು ಚೆನ್ನಾಗಿ ಕೊಬ್ಬರವಾಗುತ್ತದೆ.

ಇದನ್ನೂ ಓದಿ | ಕರ್ನಾಟಕ | ಶುಕ್ರವಾರ 592 ಮಂದಿ ಕೊರೋನಾದಿಂದ ಸಾವು, 50ಸಾವಿರ ಹೊಸ ಪ್ರಕರಣಗಳು ದಾಖಲು 

ಹೊಂಬಾಳೆಯಿಂದಲೂ ಕೆಲವರು ಅಂಗಳದ ಕಸ ಗುಡಿಸುತ್ತಾರೆ. ಇನ್ನೂ ವಿಶೇಷವೆಂದರೆ ತೆಂಗಿನ ಮರಗಳಲ್ಲಿಯೇ ಹೆಜ್ಜೇನುಗಳು ಆಶ್ರಯ ತಾಣಗಳಾಗಿ ಬಳಸುವುದು ಹೆಚ್ಚು ಗಿಣಿಗಳಂತೂ ತೆಂಗಿನ ಮರದಲ್ಲೊಂದು ಪೊಟರೆ ಕೊರೆದು ತಮ್ಮ ಗೂಡಾಡಗಿಸಿಕೊಂಡು ಸಂತಾನೋತ್ಪತ್ತಿ ಕಾರ್ಯ ಮಾಡುತ್ತವೆ. ಕೋತಿಗಳಂತೂ ಮರದಿಂದ ಮರಕ್ಕೆ ಹಾರುತ್ತಾ ತೆಂಗಿನ ತೋಟದಲ್ಲಿಯೇ ದಿನವೆಲ್ಲಾ ಕಳೆಯುತ್ತವೆ.

ನಿಮಗೆ ಅನಿಸಬಹುದು ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ ಇವನ್ಯಾಕೆ ಹೇಳುತ್ತಿದ್ದಾನೆಂದು, ಮೊನ್ನೆ ಮೊನ್ನೆಯಷ್ಟೇ ಚಾಮರಾಜನಗರದ ಕೋರ್ಟ್ ರೋಡಿನಿಂದ ಹೋಗುತ್ತಿರಬೇಕಾದರೆ ಮದ್ಯಾಹ್ನದ ಉರಿಬಿಸಿಲು ಹೊಟ್ಟೆಯಲ್ಲಿ ಒಂಚೂರು ಸಂಕಟವಾದ ಹಾಗೆ ಎನಿಸಿತು. ಸುಮ್ಮನೆ ಬೈಕಿನಲ್ಲಿ ಹೋಗುವಾಗ ಡಿವೈಎಸ್ಪಿ ಆಫೀಸಿನ ಪಕ್ಕದಲ್ಲಿಯೇ ಒಬ್ಬ ಎಳನೀರು ವ್ಯಾಪರಿಯೂ ಎಳನೀರು ಮಾರುತ್ತಿರುವುದನ್ನು ಕಂಡು ಒಂದೆಳ್ನೀರು ಕುಡಿಯುವ ಮನಸ್ಸಾಯಿತು.

ಹಾಗೆಯೇ ಬೈಕ್ ತಿರುಗಿಸಿಕೊಂಡು ಎಳ್ನೀರು ಕುಡಿಯಲು ಹೊರಟೆ ಸ್ವಲ್ಪ ವಯಸ್ಸಾದ ಮುದುಕಪ್ಪ ಒಂದು ಕೈಯಲ್ಲಿ ಎಳ್ನೀರು ಇನ್ನೊಂದು ಕೈಯಲ್ಲಿ ಹರಿತವಾದ ಮಚ್ಚನ್ನು ಹಿಡಿದು ಕೊಚ್ಚುತ್ತಿದ್ದರು ಒಂದಿಬ್ಬರು ಸ್ನೇಹಿತರು ಐದು ಎಳನೀರನ್ನು ಪಾರ್ಸೆಲ್ ಕೊಡುವಂತೆ ಹೇಳಿ ಈ ರೀತಿಯಾಗಿ ಮಾತಿಗಿಳಿದರು.

“ತಾತಪ್ಪ್ಯೋ ಐದೆಳ್ನೀರು ಕೊಡಿ”
“ಇಲ್ಲೆ ಕುಡ್ದರೋ ಮನಗ ಪಾರ್ಸೆಲ್ ಹೊಯ್ದರೋ?”
“ಎಲ್ಲಾ ಮನ್ಗೆಯಾ ಪಾರ್ಸೆಲ್ ಕಟ್ಟಿ”
“ಹೂಂ ಆಯ್ತೇಳಿ ” ಎಂದು ಒಂದು ತೆಂಗಿನ ಕಾಯಿ ಕೊಚ್ಚಲು ಮುಂದಾದರು.

“ತಾತ ಕೈ ಜೋಪಾನ ನಮ್ಗ ನೀವು ಕೊಚ್ಚದ್ ನೋಡಿದ್ರೆನೇ ಭಯವಾಯ್ತ್ ಆಮೇಗ ಕೈ ಗಿಯ್ಗೆ ಹಾಕಂಡರೀ” “ಯಾನು ಇಲ್ಲಾ ಕಣಾ ಐದಾ ಸಾಕ ಹ್ವೇಳಿ”?.”ಹೂಂ ಸಾಕು ಕೆಂಚಕಿರೋ ಕಾಯಿ ಕೊಚ್ಚರೀ”. “ಇದ್ಯಾಕ ಬೇರೆ ಯಾನಾಗಿದ್ದಾವು ಕಣೀ”! “ಕೆಂಚಗಿರೋವು ವಸಿ ಸಿಹಿ ಇರ್ತಾವೆ ಕಣ್ ತಾತ”,”ಸಿಹ್ಯೋ ಕಹ್ಯೋ (ಸಿಹಿಯೋ- ಕಹಿಯೋ) ಯಾವನಾರ ಒಳ್ಗ ನುಗ್ಗಿ ನೋಡಿದರಾ ಕಣೀ”? “ವ್ಹಾ…. ಇದ್ಸರಿ ಮತ್ತೆ ಕೆಂಚಗಿರೋವೆ ಕೆಚ್ಚಿ ”
ಎಂದು ತಾವೆ ಇನ್ನೆರಡು ತೆಂಗಿನ ಕಾಯಿಗಳನ್ನು ಆಯ್ಕೆ ಮಾಡಿಕೊಂಡು ಪಾರ್ಸೆಲ್ ಕೊಂಡು ಹೊರಟರು ನಾನು ಕೂಡ ಎರಡು ಎಳನೀರು ಕುಡಿದು ಸ್ವಲ್ಪ ಹೊತ್ತು ಅಲ್ಲಿಯೇ ನಿಂತು ನೆಮ್ಮದಿಯ ಉಸಿರು ಬಿಟ್ಟು ಹೊರಟೆ ಮನಸ್ಸು ಸ್ವಲ್ಪ ತಂಪಾಯಿತು.

ಹಾಗೆಯೇ ಬೈಕಿನಲ್ಲಿ ಹೋಗುತ್ತಿರುವಾಗ ಆ ತಾತ ಹೇಳಿದ ಮಾತು ನೆನಪಾಯಿತು.”ಸಿಹ್ಯೋ ಕಹ್ಯೋ (ಸಿಹಿಯೋ- ಕಹಿಯೋ) ಯಾವನಾರ ಒಳ್ಗ ನುಗ್ಗಿ ನೋಡಿದರಾ ಕಣೀ”? ಹೌದು ಈ ಮಾತು ಎಷ್ಟು ಸತ್ಯ ಅಲ್ಲವೇ ಎಳ್ನೀರು ಕೃತಕವಾಗಿ ತಯಾರಾಗುವಂತದ್ದಲ್ಲ ಮರದ ಮೇಲೆ ನೈಸರ್ಗಿಕವಾಗಿ ತಯಾರಾಗುವಂತದ್ದು ಅದರೊಳಗೆ ಸಿಹಿ ಕಹಿ ಎನ್ನುವುದು ಇರುವುದಿಲ್ಲ ಎಲ್ಲದು ಒಳ್ಳೆಯ ನೀರೆ.

ಆದರೆ ನಾವೇ ಅವುಗಳನ್ನು ಸಿಹಿ ಕಹಿ ಎಂದು ವಿಂಗಡಿಸಿಕೊಳ್ಳುತ್ತೇವೆ. ಇನ್ನೊಂದು ವಿಶೇಷವೆಂದರೆ ಎಳ್ನೀರು ಆರೋಗ್ಯಕ್ಕೆ ತುಂಬಾ ಒಳ್ಳೆಯದು ನೂರಾರು ತಂಪು ಪಾನೀಯ ಕೊಕೊ ಕೋಲಾ,ಮಜಾ ,ಪೆಪ್ಸಿಗಳಿಗಿಂತ ಒಂದು ಎಳ್ನೀರು ಶ್ರೇಷ್ಠ. ಆಧುನಿಕತೆಯ ಫಲವಾಗಿ ನಾವು ನಿಸರ್ಗದತ್ತವಾಗಿ ತಯಾರಾದ ಎಳ್ನೀರಿನ ಬದಲಾಗಿ ಕೃತಕವಾಗಿ ರಾಸಾಯನಿಕ ವಸ್ತುಗಳಿಂದ ತಯಾರಾಗುವ ಪಾನೀಯಗಳಿಗೆ ಮೊರೆ ಹೋಗುವುದೇ ವಿಷಾದನೀಯ ಸಂಗತಿ.

ಇದನ್ನೂ ಓದಿ | ನಿಮ್ಮ ಮಗುವಿಗೆ ಅನುವಂಶಿಕ ದೋಷಗಳಿವೆಯೇ..,? ತಿಳಿಯುವುದು ಹೇಗೆ..?

ಹೀಗೆ ಈ ಎಳ್ನೀರು ನನ್ನ ಕಾಡಿತು ಆ ತಾತಪ್ಪನ ಅನುಭವದ ಮಾತು ಪ್ರಕೃತಿಯ ಮಹತ್ವ ಮತ್ತು ವಾಸ್ತವತೆಯನ್ನು ತಿಳಿಸಿತು. ಈ ತೆಂಗಿನ ಮರದ ಕುರಿತಾಗಿ ವರಕವಿ ದ.ರಾ ಬೇಂದ್ರೆಯವರು ತಮ್ಮ ಸಖಿಗೀತದಲ್ಲಿ ತೆಂಗಿನ ಮರದ ಕುರಿತಾಗಿ ಈ ರೀತಿಯಾಗಿ ಉಲ್ಲೇಖಿಸಿದ್ದಾರೆ ‘ಇಕೋ ನೆಲ – ಅಕೋ ಜಲ, ಅದರ ಮೇಲೆ ಮರದ ಫಲ’.

(ಕೆ.ಶ್ರೀಧರ್ (ಕೆ.ಸಿರಿ)
ಯುವ ಸಾಹಿತಿಗಳು
ಚಾಮರಾಜನಗರ
9741270125)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.

ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.

‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.

ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

Published

on

ಗಿರೀಶ್ ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.

ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.

ಸಾಧಿಕ್ ಪೊಲೀಸರಿಗೆ ಸಾಥ್

ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.

“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

Published

on

~ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ ಕಲಿಕೆ ಎನ್ನುವುದು ಶಿಕ್ಷಣ ಕ್ಷೇತ್ರದಲ್ಲಿ ಬಳಸಲಾಗುವ ಒಂದು ವ್ಯವಸ್ಥಿತ ಮತ್ತು ಪ್ರಭಾವಶಾಲಿ ಬೋಧನಾ ವಿಧಾನವಾಗಿದ್ದು, ವಿಶೇಷವಾಗಿ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – NEP ಯಲ್ಲೂ ಇದರ ಪ್ರಸ್ತಾಪವಿದೆ ಎನ್ನಲಾಗಿದೆ.

ಪಂಚಪಾಡಿ ಎಂದರೇನು?

ಪಂಚಪಾಡಿ ಎಂದರೆ ಮಗುವಿನ ಸಮಗ್ರ ವಿಕಾಸಕ್ಕಾಗಿ ಐದು ಹಂತಗಳ ಕಲಿಕಾ ಪ್ರಕ್ರಿಯೆಯನ್ನು ಬಳಸಲಾಗುತ್ತದೆ.
​ಅಂದರೆ ಜ್ಞಾನರ್ಜನೆಗೆ ಐದು ಹೆಜ್ಜೆಗಳು ಅಥವಾ ಐದು ಹಂತಗಳು ಎಂದರ್ಥ.

ಜ್ಞಾನವನ್ನು ಕೇವಲ ನೆನಪಿನಲ್ಲಿಟ್ಟುಕೊಳ್ಳುವುದರ ಬದಲಾಗಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಈ ವಿಧಾನ ಸಹಾಯ ಮಾಡುತ್ತದೆ.

ಪಂಚಪಾಡಿ ಕಲಿಕೆಯ 5 ಹಂತಗಳು

ಅದಿತಿ ( ಪರಿಚಯ / ಗ್ರಹಿಕೆ): ​ಈ ಪದ್ಧತಿಯ ಮೊದಲ ಹಂತವೇ ಅದಿತಿ. ಇಲ್ಲಿ ವಿದ್ಯಾರ್ಥಿಗೆ ಹೊಸ ವಿಷಯವನ್ನು ಪರಿಚಯಿಸಲಾಗುತ್ತದೆ. ಶಿಕ್ಷಕರು ಕಥೆ,ಚಿತ್ರ ಉದಾಹರಣೆ ಅಥವಾ ಚಟುವಟಿಕೆಗಳ ಮೂಲಕ ಹೊಸ ವಿಷಯವನ್ನು ಮಗುವಿನ ಮುಂದೆ ಪ್ರಸ್ತುತಪಡಿಸುತ್ತಾರೆ. ಮಗು ವಿಷಯವನ್ನು ಕೇಳಿ, ನೋಡಿ ಗ್ರಹಿಸಲು ಆರಂಭಿಸುತ್ತದೆ.

ಬೋಧ : (ತಿಳುವಳಿಕೆ / ಅರ್ಥೈಸಿಕೊಳ್ಳುವಿಕೆ): ಪರಿಚಯಿಸಿಕೊಂಡ ವಿಷಯವನ್ನು ಆಳವಾಗಿ ಅರ್ಥಮಾಡಿಕೊಳ್ಳುವ ಹಂತವಿದು. ಮಗು ವಿಷಯದ ಹಿಂದಿರುವ ಪರಿಕಲ್ಪನೆ ಮತ್ತು ಕಾರಣಗಳನ್ನು ಅರ್ಥಮಾಡಿಕೊಳ್ಳುತ್ತದೆ. ಪ್ರಶ್ನೆಗಳನ್ನು ಕೇಳುವ ಮೂಲಕ ಮತ್ತು ಚರ್ಚೆಗಳಲ್ಲಿ ಭಾಗವಹಿಸುವ ಮೂಲಕ ತನ್ನ ಗೊಂದಲಗಳನ್ನು ನಿವಾರಿಸಿಕೊಳ್ಳುತ್ತದೆ.

ಅಭ್ಯಾಸ : (ರೂಢಿಸಿಕೊಳ್ಳುವುದು / ತರಬೇತಿ): ಕಲಿತ ವಿಷಯ ಮನಸ್ಸಿನಲ್ಲಿ ಗಟ್ಟಿಯಾಗಲು ನಿರಂತರ ಸ್ಮರಣೆ ಅಥವಾ ಅಭ್ಯಾಸದ ಅಗತ್ಯವಿದೆ. ಮಕ್ಕಳು ಕಲಿತ ವಿಷಯವನ್ನು ಬರವಣಿಗೆ, ಗಣಿತದ ಲೆಕ್ಕಗಳು, ಪ್ರಯೋಗಗಳು ಅಥವಾ ಪುನರಾವರ್ತನೆ (Revision) ಮೂಲಕ ಅಭ್ಯಾಸ ಮಾಡುತ್ತಾರೆ. ಇದು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಕೇವಲ ಪುಸ್ತಕದಲ್ಲಿ ಕಲಿತದ್ದನ್ನು ನಿಜ ಜೀವನದಲ್ಲಿ ಅಥವಾ ಹೊಸ ಸಂದರ್ಭಗಳಲ್ಲಿ ಬಳಸಿ ನೋಡುವುದೇ ಪ್ರಯೋಗ.

​ಉದಾಹರಣೆಗೆ, ಗಣಿತದಲ್ಲಿ ‘ಲಾಭ-ನಷ್ಟ’ ಕಲಿತ ನಂತರ ಮಗು ಮಾರುಕಟ್ಟೆಗೆ ಹೋಗಿ ವ್ಯವಹಾರ ಮಾಡುವುದು, ಅಥವಾ ವಿಜ್ಞಾನದ ತತ್ವವನ್ನು ಪ್ರಾಜೆಕ್ಟ್ ಮೂಲಕ ಮಾಡಿ ನೋಡುವುದು.

ಪ್ರಸಾರ : (ಹಂಚಿಕೊಳ್ಳುವುದು) ​ಕಲಿಕೆಯ ಅತ್ಯುನ್ನತ ಹಂತವೆಂದರೆ ತಾನು ಕಲಿತ ಜ್ಞಾನವನ್ನು ಇತರರಿಗೆ ಮನವರಿಕೆ ಮಾಡಿಕೊಡುವುದು. ​ವಿದ್ಯಾರ್ಥಿ ತನಗೆ ತಿಳಿದ ವಿಷಯವನ್ನು ತನ್ನ ಸಹಪಾಠಿಗಳಿಗೆ ವಿವರಿಸುವುದು, ಭಾಷಣ ಮಾಡುವುದು ಅಥವಾ ಗುಂಪು ಚರ್ಚೆಯಲ್ಲಿ ಹಂಚಿಕೊಳ್ಳುವುದು. “ಕಲಿಸುವುದರಿಂದ ಕಲಿಕೆ ಪೂರ್ಣವಾಗುತ್ತದೆ” ಎಂಬ ತತ್ವ ಇದರ ಹಿಂದಿದೆ.

ಪಂಚಪಾಡಿ ಕಲಿಕೆಯ ಮಹತ್ವ

​”ಶುಷ್ಕ ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನವೇ ಮೇಲು.”
​ಇದು ಮಕ್ಕಳಲ್ಲಿ ಸ್ವಯಂ ಕಲಿಕೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ.

​ಕಂಠಪಾಠ ಮಾಡುವ ಪದ್ಧತಿಯನ್ನು ತಪ್ಪಿಸಿ, ವಿಷಯದ ಆಳವಾದ ತಿಳುವಳಿಕೆಗೆ ನೆರವಾಗುತ್ತದೆ.
​ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸುತ್ತದೆ.

ಶಾಲೆಯ ವೈಶಿಷ್ಟ

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.

ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.

ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..

ಜೂನ್ 2ಕ್ಕೆ ಶಾಲಾ ಪ್ರವೇಶಕ್ಕೆ ಕೊನೆದಿನ

2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ.

ಶಾಲೆಯ ವೈಶಿಷ್ಟ

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.

ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.

ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..

2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ. ಕೇವಲ ಪುಸ್ತಕ ಆಧಾರಿತ ಆಧುನಿಕ ಪದ್ಧತಿಯ ಕಲಿಕೆ ಮಾತ್ರವಲ್ಲದೆ ಹಿಂದಿನ ಗುರುಕುಲ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡಿ ಮಕ್ಕಳಿಗೆ ಉತ್ತಮ ರೀತಿಯ ವಿದ್ಯಾಭ್ಯಾಸ ನೀಡುವ ಮಹಾದಾಸೆ ಇದೆ.”

|  ವೀಣಾ ಮಂಜುನಾಥ್ ಮುಖ್ಯಸ್ಥರು

ಪ್ರವೇಶ ಪ್ರಾರಂಭ : ಸದರಿ ಶಾಲೆಯಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಮೇ 17ರಿಂದ ಆರಂಭವಾದ ಪ್ರವೇಶ ಪ್ರಕ್ರಿಯೆ ಜೂನ್ 2ಕ್ಕೆ ಕೊನೆಗೂಳ್ಳುತ್ತದೆ. ಸಂಪರ್ಕಿಸಿ : Mandara School Tyavanige 919148141665

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending