Connect with us

ರಾಜಕೀಯ

ಕಾಂಗ್ರೇಸ್ ಮತ್ತು ಎಡರಂಗವೆಂಬ ಭಾರತದ ಆತ್ಮಾಹುತಿ ದಳದ ಪಕ್ಷಗಳು

Published

on

  • ಜಗದೀಶ್ ಕೊಪ್ಪ

ತ್ತೀಚೆಗಿನ ಎರಡು ರಾಜಕೀಯ ಬೆಳವಣಿಗೆಗಳು ಭಾರತದ ಪ್ರಜ್ಞಾವಂತ ನಾಗರೀಕರಲ್ಲಿ ಅಸಹ್ಯ ಮಾತ್ರವಲ್ಲ, ಜಿಗುಪ್ಸೆ ತರಿಸುವ ಸಂಗತಿಗಳಾಗಿ ಮಾರ್ಪಟ್ಟಿವೆ. ಇವುಗಳಲ್ಲಿ ಮೊದಲನೆಯದು,ಸೀತಾರಾಂ ಯಚೂರಿಗೆ ಸಿ.ಪಿ.ಐ ( ಎಂ) ಪಕ್ಷದಿಂದ ರಾಜಸಭೆಗೆ ಸೀಟು ನಿರಾಕರಿಸಿದ್ದು.

ಎರಡನೆಯದು, ಮಧ್ಯಪ್ರದೇಶದಲ್ಲಿ ಕಾಂಗ್ರೇಸ್ ಪಕ್ಷದ ಯುವ ನಾಯಕ ಜ್ಯೋತಿರಾಧ್ಯ ಸಿಂದ್ಯಾ ಕಾಂಗ್ರೇಸ್ ಪಕ್ಷವನ್ನು ತೊರೆದು ಬಿ.ಜೆ.ಪಿ. ಪಕ್ಷ ಸೇರಿದ ಘಟನೆ.

ಈ ಎರಡು ಘಟನೆಗಳನ್ನು ಸಿನಿಕತನದಿಂದ ನೋಡದೆ, ಈಗನ ವರ್ತಮಾನದ ಪರಿಸ್ಥಿತಿಗೆ ಹೋಲಿಸಿ ನೋಡಿದಾಗ, ದಶಕಗಳಷ್ಟೇ ಅಲ್ಲ, ಅರ್ಧ ಶತಮಾನದಿಂದ ತಮ್ಮ ರಾಜಕೀಯ ತಂತ್ರಗಾರಿಕೆಯಲ್ಲಿ ಯಾವುದೇ ಬದಲಾವಣೆ ಮಾಡದ ಅಥವಾ ಬಯಸದ ಕಾಂಗ್ರೇಸ್ ಮತ್ತು ಎಡರಂಗಗಳು ಅವನತಿಯ ಹಾದಿಯಲ್ಲಿ ಶರವೇಗದಲ್ಲಿ ಚಲಿಸುತ್ತಿವೆ ಎನ್ನ ಬಹುದು.

ಸಿ.ಪಿ.ಐ. ಪಾಲಿಟ್ ಬ್ಯೂರೊ ಎಂಬ ಅತ್ಯುನ್ನತ ಕಾರ್ಯಕಾರಿ ಸಮಿತಿ ಈ ಗಾಗಲೇ ಎರಡು ಬಾರಿ ರಾಜ್ಯ ಸಭೆಯ ಸದಸ್ಯರಾಗಿದ್ದ ಯಚೂರಿಯವರಿಗೆ ಟಿಕೇಟ್ ನಿರಾಕರಿಸಲು ನೀಡಿದ ಕಾರಣ ಪಕ್ಷದ ನಿಯಾಮಾವಳಿ ಪ್ರಕಾರ ಒಬ್ಬ ಸದಸ್ಯ ಎರಡು ಬಾರಿ ಮಾತ್ರ ಸದಸ್ಯನಾಗಬಹುದು ಎಂಬ ನಿಯಮ. ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಎಡರಂಗಕ್ಕೆ ಸದಸ್ಯನನ್ನು ಆಯ್ಕೆ ಮಾಡಿ ಕಳಿಸುವಷ್ಟು ಸದಸ್ಯರ ಸಂಖ್ಯೆ ಇರಲಿಲ್ಲ.

ಕಾಂಗ್ರೇಸ್ ಪಕ್ಷ ಎಡ ರಂಗಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿತ್ತು. ಅದನ್ನು ಕೂಡ ಪಕ್ಷ ನಿರಾಕರಿಸಿದೆ. ಈಗ ರಾಜ್ಯ ಸಭೆಯಲ್ಲಿ ಅಥವಾ ಲೋಕ ಸಭೆಯಲ್ಲಿ ಆಡಳಿತಾರೂಢ ಪಕ್ಷವಾದ ಬಿ.ಜೆ.ಪಿ. ಪಕ್ಷವನ್ನು ಎದುರಿಸಿ, ಮಾತನಾಡುವ ಓರ್ವ ಹಿರಿಯ ಸದಸ್ಯರಿಲ್ಲ. ಇಂತಹ ಸಂದರ್ಭದಲ್ಲಿ ತನ್ನ ನಿಯಾಮಾವಳಿಗಳಲ್ಲಿ ತಿದ್ದುಪಡಿ ಮಾಡಿ ಹಿರಿಯ ನಾಯಕರನ್ನು ಕಳಿಸಬಹುದಿತ್ತು. ಈ ಹಿಂದೆ 34 ವರ್ಷಗಳ ಕಾಲ ಪಶ್ಚಿಮ ಬಂಗಾಳವನ್ನು ಆಳಿದ ಜ್ಯೋತಿ ಬಸು ಎಂಬ ಸಜ್ಜನ ಹಿರಿಯ ರಾಜಕಾರಣಿಯನ್ನು ಭಾರತದ ಬಹುತೇಕ ರಾಜಕೀಯ ಪಕ್ಷಗಳು ಒಗ್ಗೂಡಿ, ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಿದಾಗ, ಇದೇ ಪಾಲಿಟ್ ಬ್ಯೂರೊ ಎಂಬ ಎಡರಂಗದ ಗರ್ಭಗುಡಿ ಅವರಿಗೆ ಅವಕಾಶವನ್ನು ನಿರಾಕರಿಸಿತು.

ಲೋಕಸಭೆಯಲ್ಲಿ ಕೇವಲ ಎರಡು ಸದಸ್ಯರಿದ್ದ ನಮ್ಮ ದೇವೇಗೌಡರಿಗೆ ಅದೃಷ್ಟು ಕೂಡಿ ಬಂತು. ಕೊನೆಗೂ ಮಾಜಿ ಪ್ರದಾನಿ ಎನಿಸಿಕೊಂಡರು.
ದೇಶದ ಆಡಳಿತದ ಚುಕ್ಕಾಣಿ ಹಿಡಿದು ತಮ್ಮ ಪಕ್ಷದಲ್ಲಿ ವಂಶಾಡಳಿತ ರಾಜಕಾರಣವಿಲ್ಲ, ಭ್ರಷ್ಟಾರಗಳಿಲ್ಲ ಎಂದು ದೇಶಕ್ಕೆ ತೋರಿಸಿ, ಪಕ್ಷದ ಸಂಘಟನೆಯನ್ನು ದೇಶ ವ್ಯಾಪಿ ವಿಸ್ತರಿಸುವ ಅವಕಾಶವನ್ನು ಸಿ.ಪಿ.ಐ. (ಏಂ) ಕಳೆದು ಕೊಳ್ಳುವುದರ ಮೂಲಕ ಆತ್ಮಹತ್ಯೆಯ ಹಾದಿ ಹಿಡಿಯಿತು.

ಇನ್ನು, ಕಾಂಗ್ರೇಸ್ ನ ಹಾದಿ ಇದಕ್ಕಿಂತ ಭಿನ್ನವಾಗಿಲ್ಲ. ಎಪ್ಪತ್ತು ದಾಟಿದ ತಲೆ ಮಾಸಿದವರೇ ಪಕ್ಷದ ಆಸ್ತಿ ಎಂಬ ನಂಬಿಕೆ ಇನ್ನೂ ಪಕ್ಷದಿಂದ ಹೊರಹೋಗಿಲ್ಲ. ಕಳೆದ ವರ್ಷದ ಚುನಾವಣೆಯಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಾಗ, ರಾಜಸ್ಥಾನದಲ್ಲಿ ಸಚಿನ್ ಪೈಲೆಟ್ ಎಂಬ ಯುವಕನ್ನು ಮುಖ್ಯ ಮಂತ್ರಿ ಮಾಡುವ ಬದಲು ಗೆಹ್ಲೋಟ್ ಎಂಬಾತನ್ನು ತಂದು ಕೂರಿಸಲಾಯಿತು. ಜೊತೆಗೆ ಸಚಿನ್ ಹೋರಾಟವನ್ನು ಕಡೆಗಣಿಸಲಾಯಿತು. ಮಧ್ಯ ಪ್ರದೇಶದಲ್ಲಿ ಜ್ಯೋತಿರಾದ್ಯ ಸಿಂದ್ಯಾ ಬದಲು ಕಮಲ್ ನಾಥ್ ರವರನ್ನು ಕೂರಿಸಿ ಭಿನ್ನಮತಕ್ಕೆ ದಾರಿ ಮಾಡಿಕೊಡಲಾಯಿತು.

ಸೋನಿಯಾ ಗಾಂಧಿ ಸುತ್ತ ಇರುವ ಅಷ್ಟ ದಿಕ್ಕುಗಳ ನಾಯಕರನ್ನು ಒಮ್ಮೆ ಗಮನಿಸಿ, ಆಸ್ಕರ್ ಫೆರ್ನಾಂಟಿಸ್, ಅಹಮದ್ ಪಟೇಲ್, ದಿಗ್ವಿಜಯ ಸಿಂಗ್, ಬಿ.ಕೆ. ಹರಿಪ್ರಸಾದ್ ಇವರೆಲ್ಲರೂ ತಮ್ಮ ತಮ್ಮ ರಾಜ್ಯಗಳ ನಗರಗಳಲ್ಲಿ ಒಂದು ನಗರದ ಕಾರ್ಪೋರೇಷನ್ ಸಿಟು ಗೆಲ್ಲಲಾರದ ಗಿರಾಕಿಗಳು. ಪಕ್ಷ ದೇಶ ವ್ಯಾಪಿ ತನ್ನ ಬೇರುಗಳನ್ನು ಕಳಚಿಕೊಂಡು ಒಣಗುತ್ತಿದ್ದರೂ ಸಹ ನೇರವಾಗಿ ಕಾರ್ಯಕರ್ತರ ಜೊತೆ ಕುಳಿತು ಸಂವಹನ ಮಾಡುವ ವ್ಯವಧಾನ ತಾಯಿ ಮತ್ತು ಮಗನಿಗೆ ಇಲ್ಲ. ಇವೊತ್ತಿಗೂ ಕಾಂಗೇಸ್ ಮುಖ್ಯಮಂತ್ರಿಯಾದವನು ಇವರನ್ನು ಭೇಟಿ ಮಾಡಲು ಮೂರು ದಿನ ದೆಹಲಿಯಲ್ಲಿ ಕಾಯಬೇಕು. ಇಂತಹ ಸ್ಥಿತಿಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಭವಿಷ್ಯ ಇದೆ ಎಂದು ಹೇಳಲು ಸಾಧ್ಯವಿದೆಯಾ?

ನರೇಂದ್ರಮೋದಿ ಎರಡನೆಯ ಬಾರಿ ಪ್ರಧಾನಿಯಾದದ್ದು ತನ್ನ ಸಾಧನೆಗಳ ಮೂಲಕ ಅಲ್ಲ, ದೇಶದಲ್ಲಿ ಒಂದು ಪರ್ಯಾಯ ರಾಜಕೀಯ ವೇದಿಕೆಯನ್ನು ಹುಟ್ಟು ಹಾಕಲು ರಾಜಕೀಯ ಪಕ್ಷಗಳು ಸೋತಿದ್ದು ಮೂಲ ಕಾರಣವಾಗಿದೆ. ನಾವು ಈ ದಿನ ಮೋದಿ ಸರ್ಕಾರದ ತಪ್ಪುಗಳ ಬಗ್ಗೆ ಕೂಗುಮಾರಿಗಳಂತೆ ಆರ್ಭಟಿಸುತ್ತಿದ್ದೆವೆ ನಿಜ. ಒಬ್ಬ ಸಾಮಾನ್ಯ ಮತದಾರ ನನಗೆ ಪರ್ಯಾಯ ತೋರಿಸಿ ಎಂದಾಗ ನಮ್ಮಲ್ಲಿ ಈಗಲೂ ಉತ್ತರವಿಲ್ಲ.
ಎಲ್ಲವನ್ನೂ ಸಹಜ ಸಾವಿಗೆ ಬಿಟ್ಟು ಮೌನ ಸಾಕ್ಷಷಿಯಾಗಿ ಇರಬೇಕಾಗಿರುವುದು ಕಾಲದ ಅಗತ್ಯವೇನೋ ಎಂದು ಅನಿಸತೊಡಗಿದೆ.

(ಇದು ನನ್ನ ವೈಯಕ್ತಿಕ ಅನಿಸಿಕೆ ಮಾತ್ರ. ಯಾವುದೇ ಚರ್ಚೆಗೆ ಅಥವಾ ವಾದಕ್ಕೆ ನಾನು ಇಳಿಯಲಾರೆ ಕ್ಷಮಿಸಿ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪರೀಕ್ಷೆಯಲ್ಲಿ ಕೃಪಾಂಕ ನೀಡಿಕೆ ನಿಲ್ಲಬೇಕು : ಸಿಎಂ ಸಿದ್ದರಾಮಯ್ಯ ಒತ್ತಾಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಕೃಪಾಂಕಗಳನ್ನು ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ನೀಡಿಕೆ ಪದ್ಧತಿಯನ್ನು ನಿಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು. ರಾಜ್ಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಕಡಿಮೆಗೊಳಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವೇದಿಕೆ ಸಜ್ಜಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಸಲಾಗುವುದೆಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending