ದಿನದ ಸುದ್ದಿ
ಕೈ ಕಮಲ ದಳ ಮಧ್ಯೆ ಟೈಟ್ ಫೈಟ್ : ಮೇ 13ಕ್ಕೆ ರಣಕಹಳೆ..!
- ಹುಲಿಗೆಪ್ಪ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ
ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರಾನೇರ ತುರುಸಿನ ಹಣಾಹಣಿ ನಡೆಯಲಿದೆ. ಇನ್ನು ಜಾತ್ಯತೀತ ಜನತಾದಳ ಬೆಂಬಲವೇ ಇಲ್ಲದೇ ಯಾವ ಪಕ್ಷವೂ ಅಧಿಕಾರದ ಗದ್ದು ಹಿಡಿಯೋದು ಅಸಾಧ್ಯವೆಂಬ ಸುಳಿವು ನೀಡುತ್ತಿದೆ. ಹಾಗೆಯೇ ನೋಡಿದರೆ, ರಾಜ್ಯದ ಮಟ್ಟಿಗೆ ದಳವನ್ನು ಬಗ್ಗಿಸೋಕೆ ಮೋದಿ, ಶಾ ಕೈಯಿಂದಲೂ ಸಾಧ್ಯವೇ ಇಲ್ಲ ಎಂಬ ಲಕ್ಷ್ಮಣ ರೇಖೆಯನ್ನೇ ಎಳೆದಿದೆ.
ಇತ್ತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆರವರು ಕರ್ನಾಟಕ ಕಾಂಗ್ರೆಸ್ ಕಲಿಗಳೆಲ್ಲಾ ಒಟ್ಟಾಗಿ ಸೇರಿ 2023ಗೆ ಕಾಂಗ್ರೆಸ್ ಗೆಲ್ಲಿಸೋಕೆ ರಣತಂತ್ರಗಳನ್ನ ಹೆಣೆದಿದ್ದಾರೆ. 2013-18ರಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಸ್ಥಿರ ಸರ್ಕಾರ ಮತ್ತು ಸ್ವಚ್ಛಂದ ಆಡಳಿತ ನೀಡಿದೆ.
ಕನ್ನಡಿಗರಿಗೆ ಬಿಜೆಪಿ ತಂದಿರುವ ಸಂಕಷ್ಟವನ್ನು ಹೋಗಲಾಡಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ನಮ್ಮ ಸಹೃದಯ ಕನ್ನಡಿಗರೊಂದಿಗೆ ಸೇರಿ ಕನಸಿನ ಕರುನಾಡನ್ನು ಕಟ್ಟಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿ ನಾವು ಜನರ ಆಶೋತ್ತರಗಳನ್ನು ಸಂಗ್ರಹಿಸುತ್ತಿದ್ದೇವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರು ಸ್ಪಷ್ಟಪಡಿದ್ದಾರೆ.
ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿ ಅವರಿಗೆ ಎಲ್ಲೋಂದು ಕಡೆ ಭಯ ಉಂಟಾಗಿದೆ. ಸಿದ್ದರಾಮಯ್ಯರವರು ವರುಣಾ ಕೇತ್ರದಲ್ಲಿ ಸ್ಪರ್ಧೆ ಮಾಡಿರುವ ಕಡುತ್ತಿದೆ. ಇಂತಹುದೇ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಿದ್ದರೆ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧೆ ಮಾಡಬಹುದು ಎಂಬ ಅನುಮಾನ ಇತ್ತು ಆದರೆ ಸಿದ್ದು ವರುಣಾದಲ್ಲಿ ಮಾತ್ರ ಸ್ಪರ್ಧೆ ರೆಡಿಯಾಗಿದ್ದು, ಇದೇ ಕ್ಷೇತ್ರದಿಂದ ಕ್ಲಿಯರ್ ಸಿಗುವುದು ಬಹುತೇಕ ಪಕ್ಕವಾಗಿದೆ.
ಈ ಮೊದಲು ಸಿದ್ದು ಬಗ್ಗೆ ಬರೀ ಚರ್ಚೆ ಗ್ರಾಸವಾಗಿತ್ತು. ಹಾಗಾಗಿ ಶಿಕಾರಿಪುರದ ಜತೆ ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಗಿಳಿಸುವ ಪ್ಲಾನ್ ಬದಲಾಗಿದೆ. ಅಂದಹಾಗೆ ಸಿದ್ದರಾಮಯ್ಯ ಕಟ್ಟಿ ಹಾಕಲು ವಿಜಯೇಂದ್ರ ಸ್ಪರ್ಧೆಗಿಳಿಸಲು ಬಿಜೆಪಿ ಹೈಕಮಾಂಡ್ ಪ್ಲಾನ್ ಆಗಿತ್ತು. ಕೊಚ್ಚ ಬದಲಾವಣೆಯಲ್ಲಿ ವರುಣಾದಲ್ಲಿ ವಿಜಯೇಂದ್ರ ಹವಾ ಇರುವ ಕಾರಣ ಅಲ್ಲಿ ಸಿದ್ದುಗೆ ಟಕ್ಕರ್ ಕೊಡುವ ತಂತ್ರ ಇತ್ತು.
ಆದರೆ ಯತೀಂದ್ರನ ಬಿಟ್ಟು ವರುಣಾ ದಲ್ಲಿ ತಮ್ಮ ತಂದೆಗೆ ಟಿಕೆಟ್ ಫೈನಲ್ ಮಾಡಿದೆ. ವಿಜಯೇಂದ್ರ ಸ್ಪರ್ಧೆ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ತಳಿಹಾಕಿದೆ.
ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ಐದು ವರ್ಷ ಹಿಂದಿನ ಶಪಥ ಕಾರಣ ಎನ್ನಲಾಗುತ್ತಿದೆ. ಸಿದ್ದು ಟೀಮ್ ಚಾಣಕ್ಯ ಇದೀಗ ಸಿದ್ದರಾಮಯ್ಯರನ್ನ ಕೋಲಾರಕ್ಕೆ ಕರೆತರುವುದು ಅನ್ನೋ ಚರ್ಚೆಯಾಗಿದ್ದು ನಗ್ನ ಸತ್ಯ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಕರ್ನಾಟಕಕ್ಕೆ ಭೇಟಿ ನೀಡಿ ಅಲೆ ಎಬ್ಬಿಸಲು ಶುರು ಮಾಡಿದ್ದು. ಬಿಜೆಪಿ 140 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿದೆ.
ಇಲ್ಲಿ ಯಡಿಯೂರಪ್ಪರವರನ್ನು ಮತ್ತೆ ಸಕ್ರಿಯ ರಾಜಕಾರಣಕ್ಕೆ ಕರೆತಂದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಸಕ್ರಿಯ ಪ್ರಚಾರದಲ್ಲಿ ತೊಡಗಿಸಬೇಕೆಂದು ಹಲವು ಶಾಸಕರು ಕೇಂದ್ರ ನಾಯಕರಿಗೆ ಸಲಹೆ ನೀಡಿದ್ದಾರೆ. ಕಳೆದ ಕೆಲವು ದಶಕಗಳಲ್ಲಿ ಕರ್ನಾಟಕವು ಯಡಿಯೂರಪ್ಪ ಇಲ್ಲದೆ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ. ಪಕ್ಷ ಮತ್ತು ಸರ್ಕಾರದೊಳಗೆ ಕಾರ್ಯತಂತ್ರದ ಬದಲಾವಣೆಗಳ ಅಲ್ಲದೆ, ಪವಾಡವನ್ನು ನಿರೀಕ್ಷಿಸುವುದು ಕಷ್ಟವಾಗಿದೆ.
ಯಡಿಯೂರಪ್ಪ ವಿರುದ್ಧ ವಿರೋಧಿ ಗುಂಪೊಂದನ್ನು ಹಿಡಿತ ಸಾದಿಸಿತ್ತು, ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿತ್ತು, ಹಿಂದುತ್ವ ಕಾರ್ಡ್ ಪ್ರಯೋಗ ನಿರೀಕ್ಷಿತ ಫಲಿತಾಂಶ ದೊರಕದು ಎಂಬುದನ್ನು ಅರ್ಥಮಾಡಿ ಕೊಂಡಿರುವ ಬಿಜೆಪಿ ಹೈಕಮಾಂಡ್, ಸೂಕ್ತವಾಗಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿದೆ. ಯಡಿಯೂರಪ್ಪ ಅವರ ಪುನರಾಗಮನದ ಕಾಂಗ್ರೆಸ್ ಗೆ ಒಳ್ಳೆಯ ಸುದ್ದಿಯಾಗುವುದಿಲ್ಲ.
ಏಕೆಂದರೆ ಯಡಿಯೂರಪ್ಪರವರ ನಿರಾಶೆಯನ್ನು ಕಾಂಗ್ರೆಸ್ ಲಾಭ ಮಾಡಿಕೊಳ್ಳಲು ಮುಂದಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಗೆಲ್ಲಬಹುದು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟ. ವಿರೋಧ ಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು. ಚುನಾವಣೆಯಲ್ಲಿ 140 ಸ್ಥಾನ ಪಡೆದು ಯಾರ ಬೆಂಬಲ ಇಲ್ಲದೇ ಸರ್ಕಾರ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಯಡಿಯೂರಪ್ಪ, ಗುರಿ ತಲುಪುವ ನಿಟ್ಟಿನಲ್ಲಿ ಎಲ್ಲರೂ ಕೂಡ ರಾಜ್ಯದಲ್ಲಿ ಪ್ರವಾಸ ಮಾಡಲು ಆರಂಭಿಸಿದ್ದೇವೆ.
ನಂತರ ಮತ್ತೆ ಎಲ್ಲಾ ಕಡೆ ಪ್ರವಾಸ ಕೈಗೊಂಡು ಪಕ್ಷ ಸಂಘಟಿಸುತ್ತೇವೆ. ಹಗಲು ಕನಸು ಕಾಣುತ್ತಿರುವ ಬಗ್ಗೆ ನಾವೇನು ಚರ್ಚೆ ಮಾಡಲ್ಲ. ಎಂದು ಮಾಜಿ ಸಿಎಂ ಯಡಿಯೂರಪ್ಪ ವ್ಯಕ್ತಡಿಸಿದರು. ಬಿ.ಎಸ್ ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಲ್ಲಿಂದ ಸ್ಪರ್ಧಿಸೋದೇ ಇಲ್ಲ ಅನ್ನೋ ಮೂಲಕ ಭವಿಷ್ಯ ನುಡಿದಿದ್ದಾರೆ. ಅಷ್ಟಕ್ಕೂ ಯಡಿಯೂರಪ್ಪ ನುಡಿದ ಸಿದ್ದರಾಮಯ್ಯ ಭವಿಷ್ಯ ಏನು ಅನ್ನೋದು ರಣರೋಚಕ ಸಂಗತಿಯಾಗಿದೆ.
2023ಕ್ಕೆ ಜೆಡಿಎಸ್ ಪಕ್ಷ ಈಗ ನಿರ್ಣಾಯಕ ಘಟ್ಟದಲ್ಲಿ ಇದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಾಲಿಗೆ ಅತ್ಯಂತ ಮಹತ್ವದ್ದು. ಜೆಡಿಎಸ್ ಪಕ್ಷ ಬಹುಮತ ಸಾಧಿಸಿ ಸರ್ಕಾರ ರಚಿಸಬೇಕು, ಇಲ್ಲವೇ ಕಿಂಗ್ ಮೇಕರ್ ಆಗಬೇಕು. ಎರಡೂ ಆಗದಿದ್ದರೆ ಜೆಡಿಎಸ್ ಭವಿಷ್ಯ ಏನಾಗಬಹುದು? ರಾಜ್ಯದಲ್ಲಿ ಈ ಬರೀ ಕೂಡ ಕಳೆದ ಬಾರಿಯಂತೆ ಅತಂತ್ರ ವಿಧಾನಸಭೆ ಸೃಷ್ಟಿಯಾಗಬಹುದಾ? ಒಂದು ವೇಳೆ ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಡ್ರೈವಿಂಗ್ ಸೀಟ್ನಲ್ಲಿ ಬಂದು ಕೂರೋದೇ ಕುಮಾರಣ್ಣನ ರಾಜ್ಯದಲ್ಲಿ ಮತ್ತೊಮ್ಮೆ ಜಾತ್ಯತೀತ ಜನತಾ ದಳ ಪಕ್ಷ 40ಕ್ಕಿಂತ ಹೆಚ್ಚಿನ ಸ್ಥಾನ ಗಳಿಸುವ ವಾತಾವರಣ ನಿರ್ಮಾಣವಾಗಲಿದೆ.
ಬಿಜೆಪಿಯ ಒಳಗಿನ ಆ ಮೂವರು ನಾಯಕರ ಪ್ರತ್ಯಕ್ಷ ಪರೋಕ್ಷ ಬಂಡಾಯಗಳೇ ಜೆಡಿಎಸ್ ಪಕ್ಷವನ್ನು ಗೆಲ್ಲಿಸಲಿದೆಯೇ? ಮತ್ತೊಮ್ಮೆ ಎಚ್ಡಿಕೆಗೆ ಪಟ್ಟ ಗಟ್ಟಿ ಮಾಡಿ ಕೊಡಲಿದೆಯೇ? ಅನ್ನು ಚರ್ಚೆ ಶುರುವಾಗಿದೆ.
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಸಾಕಷ್ಟು ಬಾರಿ ಅವಕಾಶ ಕೊಟ್ಟಿದ್ದಿರಿ, ನಮಗೂ ಒಮ್ಮೆ ಪೂರ್ಣ ಪ್ರಮಾಣದ ಸರ್ಕಾರ ರಚಿಸಲು ಅವಕಾಶ ಕೊಟ್ಟು ನೋಡಿ ಅನ್ನೋದು ಜೆಡಿಎಸ್ ಮನವಿ. ಇದಕ್ಕಾಗಿ ಪಂಚರತ್ನ ರಥಯಾತ್ರೆ, ಜನತಾ ಜಲಧಾರೆ ಸೇರಿದಂತೆ ಹಲವು ಅಭಿಯಾನಗಳನ್ನು ಯಾತ್ರೆಗಳನ್ನು ನಡೆಸಿದೆ. ಅದರಲ್ಲೂ ರಾಮನಗರದಲ್ಲಿ ಈ ಬಾರಿ ಅನಿತಾ ಕುಮಾರಸ್ವಾಮಿ ಬದಲಿಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ.
ಗಾಲಿ ಜನಾರ್ಧನ ರೆಡ್ಡಿರವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ನಾಡಿನ ಇಬ್ಬರು ಪ್ರಭಾವಿ ಮಾಜಿ ಸಿಎಂಗಳ ಬೆಂಬಲ ಇದ್ದು ಇದರ ಬಗ್ಗೆ ಈ ಇಬ್ಬರು ಮಾಜಿ ಸಿಎಂಗಳ ಜತೆಯಲ್ಲಿ ಗಾಲಿ ಗೇಮ್ ನಡೀತಿದೆ ಅನ್ನೋ ಚರ್ಚೆ ಜೋರಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಎಚ್ಚರಿಕೆಯ ಹೆಜ್ಜೆ ಇಡದೇ ಹೋದರೆ 2023ರ ಚುನಾವಣಾ ರಿಸಲ್ಟ್ ಬಳಿಕ ಬಹುದೊಡ್ಡ ಕ್ಷಿಪ್ರಕ್ರಾಂತಿ ನಡೆಯಲಿದೆ ಅನ್ನೋ ಮುನ್ನುಡಿಯನ್ನು ಖುದ್ದು ಗಾಲಿ ರೆಡ್ಡಿ ನೀಡುತ್ತಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಪಕ್ಷ ಸೇರುವ ಪ್ರಮುಖರಿಗೆ ಬಂಪರ್ ಆಫರ್ ನೀಡುತ್ತಿದ್ದಾರೆ.
ಗಂಗಾವತಿಯನ್ನೇ ರಾಜಧಾನಿಯನ್ನಾಗಿಸುವ ಮಟ್ಟಿಗೆ ಸರ್ಕಾರ ಯಾರದ್ದೇ ಇರಲಿ ಇಲ್ಲಿಂದಲ್ಲೇ ಸರ್ಕಾರ ನಡೆಯುವಂತೆ ನೋಡಿಕೊಳ್ಳುತ್ತೇನೆ ಎನ್ನುತ್ತಿದ್ದಾರೆ. ಬಹುಮುಖ್ಯವಾಗಿ ಪಕ್ಷ ಸೇರುವ ಯಾವುದೇ ವ್ಯಕ್ತಿ ಗೆದ್ದರೇ ಮಿನಿಸ್ಟರ್ ಆಗಿಯೇ ಆಗುತ್ತಾರೆ ಅನ್ನು ಸುಳಿವು ನೀಡುತ್ತಿದ್ದಾರೆ. ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸಚಿವ ಬಿ.ಶ್ರೀರಾಮುಲು ಸಹ ಸೇರಿಕೊಳ್ಳುತ್ತಾರೆ ಎಂಬ ಊಹಾಪೋಹಗಳ ಇತ್ತು ಇದರ ನಡುವೆ ಬಿ.ಶ್ರೀರಾಮುಲುರವರು ಜನಾರ್ದನ ರೆಡ್ಡಿಯವರ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿ ಟ್ವೀಟ್ ಮಾಡಿ ನಂತರ ಡಿಲೀಟ್ ಮಾಡಿದ ಪ್ರಸಂಗ ಈಗಾಗಲೇ ನಡೆದಿದೆ. ಈ ಸಂಗತಿ ಇದೀಗ ಬಿಜೆಪಿ ಪಕ್ಷಕ್ಕೂ ಎಚ್ಚರಿಕೆಯ ಸಂದೇಶವನ್ನು ಮಿತ್ರರಿಬ್ಬರೂ ರವಾನಿಸಿದ್ದಾರಾ ಎಂಬ ಚರ್ಚೆ ಹುಟ್ಟುಹಾಕಿದೆ.
ಜನಾರ್ದನ ರೆಡ್ಡಿ ಅವರ ಕನಸು ಕಲ್ಯಾಣ ರಾಜ್ಯ ಆಗಬೇಕು. ಬಳ್ಳಾರಿ ರಾಜ್ಯಮಟ್ಟದಲ್ಲಿಯೇ ಅಭಿವೃದ್ಧಿಯಾಗಬೇಕು. ರೆಡ್ಡಿಗೆ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧವಿದೆ. ಅದಕ್ಕಾಗಿ ಅವರ ಬದಲಿಗೆ ನಾನು ಬಳ್ಳಾರಿಯಿಂದ ಪ್ರಚಾರ ಆರಂಭಿಸುತ್ತಿರುವೆ. ಜನಾರ್ದನ ರೆಡ್ಡಿಯವರು ಎನೇ ಕೆಲಸ ಮಾಡಿದ್ದರೂ ಕುರುಬ ಸಮಾಜದ ಮನೆಯವರಿಂದ ಆರಂಭ ಮಾಡಿದ್ದಾರೆ.
ಹಾಗಾಗಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿ ಕೊಪ್ಪಳ ಕ್ಷೇತ್ರದಲ್ಲಿ ರಾಜಕೀಯವಾಗಿ ತೊಡಗಿಕೊಂಡಿದ್ದಾರೆ. ಇತ್ತ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ತನ್ನ ಪತ್ನಿ ಅರುಣಾ ಲಕ್ಷ್ಮೀ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧೆ ಮಾಡಿದ್ದಾರೆ.
ಚುನಾವಣೆಯ ಹೊತ್ತಲ್ಲೇ ಬಿಜೆಪಿ-ಕಾಂಗ್ರೆಸ್ ಜೆಡಿಎಸ್ ನಾಯಕರುಗಳ ಭಾರೀ ವಾಕ್ಸಮರ ನಡೆಯುತ್ತಿದೆ. ರಾಜಕೀಯ ವಿಚಾರ ಬಂದಾಗ ಒಂದು ಪಕ್ಷದ ನಾಯಕರು ಇನ್ನೊಂದು ಪಕ್ಷದ ನಾಯಕರನ್ನು ಬೈಯುವುದು, ದೂಷಿಸುವುದು, ಆರೋಪಿಸುವುದು ಸಾಮಾನ್ಯ. ಕೆಲವೊಮ್ಮೆ ಅದು ಮಿತಿ ಮೀರುತ್ತದೆ. ಇದು ಕೂಡ ರಾಜಕೀಯ ಬದಿಗಿಟ್ಟು ಹಲವು ಬಾರಿ ರಾಜಕೀಯ ನಾಯಕರು ಒಟ್ಟಿಗೆ ಇರುವುದು ಮಾತನಾಡುವುದು, ಬಾಂಧವ್ಯ ಹೊಂದಿರುವುದನ್ನು ನೋಡುತ್ತೇವೆ. ರಾಜಕೀಯ ವಿಚಾರ ಬಂದಾಗ ಕಾಂಗ್ರೆಸ್-ಬಿಜೆಪಿ ಬದ್ಧ ವೈರಿಗಳು. ಈ ಪಕ್ಷಗಳ ನಾಯಕರು ಒಬ್ಬರಿಗೊಬ್ಬರು ವೇದಿಕೆಗಳಲ್ಲಿ, ಸಾರ್ವಜನಿಕ ಭಾಷಣಗಳಲ್ಲಿ, ಮಾಧ್ಯಮಗಳ ಮುಂದೆ ಸಾಕಷ್ಟು ಟೀಕೆ ಮಾಡುತ್ತಾ, ಒಬ್ಬರಿಗೊಬ್ಬರು ಬೈಯುತ್ತಿರುವುದು ಪ್ರಚಲಿತದಲ್ಲಿರುವ ವಿಷಯವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ19 hours agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ


