Connect with us

ದಿನದ ಸುದ್ದಿ

ಕೈ ಕಮಲ ದಳ ಮಧ್ಯೆ ಟೈಟ್​ ಫೈಟ್ : ಮೇ 13ಕ್ಕೆ ರಣಕಹಳೆ..!

Published

on

 

 

  • ಹುಲಿಗೆಪ್ಪ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ

ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರಾನೇರ ತುರುಸಿನ ಹಣಾಹಣಿ ನಡೆಯಲಿದೆ. ಇನ್ನು ಜಾತ್ಯತೀತ ಜನತಾದಳ ಬೆಂಬಲವೇ ಇಲ್ಲದೇ ಯಾವ ಪಕ್ಷವೂ ಅಧಿಕಾರದ ಗದ್ದು ಹಿಡಿಯೋದು ಅಸಾಧ್ಯವೆಂಬ ಸುಳಿವು ನೀಡುತ್ತಿದೆ. ಹಾಗೆಯೇ ನೋಡಿದರೆ, ರಾಜ್ಯದ ಮಟ್ಟಿಗೆ ದಳವನ್ನು ಬಗ್ಗಿಸೋಕೆ ಮೋದಿ, ಶಾ ಕೈಯಿಂದಲೂ ಸಾಧ್ಯವೇ ಇಲ್ಲ ಎಂಬ ಲಕ್ಷ್ಮಣ ರೇಖೆಯನ್ನೇ ಎಳೆದಿದೆ.

ಇತ್ತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆರವರು ಕರ್ನಾಟಕ ಕಾಂಗ್ರೆಸ್ ಕಲಿಗಳೆಲ್ಲಾ ಒಟ್ಟಾಗಿ ಸೇರಿ 2023ಗೆ ಕಾಂಗ್ರೆಸ್ ಗೆಲ್ಲಿಸೋಕೆ ರಣತಂತ್ರಗಳನ್ನ ಹೆಣೆದಿದ್ದಾರೆ. 2013-18ರಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಸ್ಥಿರ ಸರ್ಕಾರ ಮತ್ತು ಸ್ವಚ್ಛಂದ ಆಡಳಿತ ನೀಡಿದೆ.

ಕನ್ನಡಿಗರಿಗೆ ಬಿಜೆಪಿ ತಂದಿರುವ ಸಂಕಷ್ಟವನ್ನು ಹೋಗಲಾಡಿಸಲು ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ. ನಮ್ಮ ಸಹೃದಯ ಕನ್ನಡಿಗರೊಂದಿಗೆ ಸೇರಿ ಕನಸಿನ ಕರುನಾಡನ್ನು ಕಟ್ಟಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿ ನಾವು ಜನರ ಆಶೋತ್ತರಗಳನ್ನು ಸಂಗ್ರಹಿಸುತ್ತಿದ್ದೇವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರು ಸ್ಪಷ್ಟಪಡಿದ್ದಾರೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿ ಅವರಿಗೆ ಎಲ್ಲೋಂದು ಕಡೆ ಭಯ ಉಂಟಾಗಿದೆ. ಸಿದ್ದರಾಮಯ್ಯರವರು ವರುಣಾ ಕೇತ್ರದಲ್ಲಿ ಸ್ಪರ್ಧೆ ಮಾಡಿರುವ ಕಡುತ್ತಿದೆ. ಇಂತಹುದೇ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಿದ್ದರೆ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧೆ ಮಾಡಬಹುದು ಎಂಬ ಅನುಮಾನ ಇತ್ತು ಆದರೆ ಸಿದ್ದು ವರುಣಾದಲ್ಲಿ ಮಾತ್ರ ಸ್ಪರ್ಧೆ ರೆಡಿಯಾಗಿದ್ದು, ಇದೇ ಕ್ಷೇತ್ರದಿಂದ ಕ್ಲಿಯರ್ ಸಿಗುವುದು ಬಹುತೇಕ ಪಕ್ಕವಾಗಿದೆ.

ಈ ಮೊದಲು ಸಿದ್ದು ಬಗ್ಗೆ ಬರೀ ಚರ್ಚೆ ಗ್ರಾಸವಾಗಿತ್ತು. ಹಾಗಾಗಿ ಶಿಕಾರಿಪುರದ ಜತೆ ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಗಿಳಿಸುವ ಪ್ಲಾನ್ ಬದಲಾಗಿದೆ. ಅಂದಹಾಗೆ ಸಿದ್ದರಾಮಯ್ಯ ಕಟ್ಟಿ ಹಾಕಲು ವಿಜಯೇಂದ್ರ ಸ್ಪರ್ಧೆಗಿಳಿಸಲು ಬಿಜೆಪಿ ಹೈಕಮಾಂಡ್ ಪ್ಲಾನ್ ಆಗಿತ್ತು. ಕೊಚ್ಚ ಬದಲಾವಣೆಯಲ್ಲಿ ವರುಣಾದಲ್ಲಿ ವಿಜಯೇಂದ್ರ ಹವಾ ಇರುವ ಕಾರಣ ಅಲ್ಲಿ ಸಿದ್ದುಗೆ ಟಕ್ಕರ್ ಕೊಡುವ ತಂತ್ರ ಇತ್ತು.

ಆದರೆ ಯತೀಂದ್ರನ ಬಿಟ್ಟು ವರುಣಾ ದಲ್ಲಿ ತಮ್ಮ ತಂದೆಗೆ ಟಿಕೆಟ್ ಫೈನಲ್ ಮಾಡಿದೆ. ವಿಜಯೇಂದ್ರ ಸ್ಪರ್ಧೆ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ತಳಿಹಾಕಿದೆ.

ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ಐದು ವರ್ಷ ಹಿಂದಿನ ಶಪಥ ಕಾರಣ ಎನ್ನಲಾಗುತ್ತಿದೆ. ಸಿದ್ದು ಟೀಮ್ ಚಾಣಕ್ಯ ಇದೀಗ ಸಿದ್ದರಾಮಯ್ಯರನ್ನ ಕೋಲಾರಕ್ಕೆ ಕರೆತರುವುದು ಅನ್ನೋ ಚರ್ಚೆಯಾಗಿದ್ದು ನಗ್ನ ಸತ್ಯ.

ಹುಲಿಗೆಪ್ಪ

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಕರ್ನಾಟಕಕ್ಕೆ ಭೇಟಿ ನೀಡಿ ಅಲೆ ಎಬ್ಬಿಸಲು ಶುರು ಮಾಡಿದ್ದು. ಬಿಜೆಪಿ 140 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿದೆ.

ಇಲ್ಲಿ ಯಡಿಯೂರಪ್ಪರವರನ್ನು ಮತ್ತೆ ಸಕ್ರಿಯ ರಾಜಕಾರಣಕ್ಕೆ ಕರೆತಂದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಸಕ್ರಿಯ ಪ್ರಚಾರದಲ್ಲಿ ತೊಡಗಿಸಬೇಕೆಂದು ಹಲವು ಶಾಸಕರು ಕೇಂದ್ರ ನಾಯಕರಿಗೆ ಸಲಹೆ ನೀಡಿದ್ದಾರೆ. ಕಳೆದ ಕೆಲವು ದಶಕಗಳಲ್ಲಿ ಕರ್ನಾಟಕವು ಯಡಿಯೂರಪ್ಪ ಇಲ್ಲದೆ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ. ಪಕ್ಷ ಮತ್ತು ಸರ್ಕಾರದೊಳಗೆ ಕಾರ್ಯತಂತ್ರದ ಬದಲಾವಣೆಗಳ ಅಲ್ಲದೆ, ಪವಾಡವನ್ನು ನಿರೀಕ್ಷಿಸುವುದು ಕಷ್ಟವಾಗಿದೆ.

ಯಡಿಯೂರಪ್ಪ ವಿರುದ್ಧ ವಿರೋಧಿ ಗುಂಪೊಂದನ್ನು ಹಿಡಿತ ಸಾದಿಸಿತ್ತು, ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿತ್ತು, ಹಿಂದುತ್ವ ಕಾರ್ಡ್ ಪ್ರಯೋಗ ನಿರೀಕ್ಷಿತ ಫಲಿತಾಂಶ ದೊರಕದು ಎಂಬುದನ್ನು ಅರ್ಥಮಾಡಿ ಕೊಂಡಿರುವ ಬಿಜೆಪಿ ಹೈಕಮಾಂಡ್, ಸೂಕ್ತವಾಗಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿದೆ. ಯಡಿಯೂರಪ್ಪ ಅವರ ಪುನರಾಗಮನದ ಕಾಂಗ್ರೆಸ್ ಗೆ ಒಳ್ಳೆಯ ಸುದ್ದಿಯಾಗುವುದಿಲ್ಲ.

ಏಕೆಂದರೆ ಯಡಿಯೂರಪ್ಪರವರ ನಿರಾಶೆಯನ್ನು ಕಾಂಗ್ರೆಸ್ ಲಾಭ ಮಾಡಿಕೊಳ್ಳಲು ಮುಂದಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಗೆಲ್ಲಬಹುದು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟ. ವಿರೋಧ ಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು. ಚುನಾವಣೆಯಲ್ಲಿ 140 ಸ್ಥಾನ ಪಡೆದು ಯಾರ ಬೆಂಬಲ ಇಲ್ಲದೇ ಸರ್ಕಾರ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಯಡಿಯೂರಪ್ಪ, ಗುರಿ ತಲುಪುವ ನಿಟ್ಟಿನಲ್ಲಿ ಎಲ್ಲರೂ ಕೂಡ ರಾಜ್ಯದಲ್ಲಿ ಪ್ರವಾಸ ಮಾಡಲು ಆರಂಭಿಸಿದ್ದೇವೆ.

ನಂತರ ಮತ್ತೆ ಎಲ್ಲಾ ಕಡೆ ಪ್ರವಾಸ ಕೈಗೊಂಡು ಪಕ್ಷ ಸಂಘಟಿಸುತ್ತೇವೆ. ಹಗಲು ಕನಸು ಕಾಣುತ್ತಿರುವ ಬಗ್ಗೆ ನಾವೇನು ಚರ್ಚೆ ಮಾಡಲ್ಲ. ಎಂದು ಮಾಜಿ ಸಿಎಂ ಯಡಿಯೂರಪ್ಪ ವ್ಯಕ್ತಡಿಸಿದರು. ಬಿ.ಎಸ್ ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಲ್ಲಿಂದ ಸ್ಪರ್ಧಿಸೋದೇ ಇಲ್ಲ ಅನ್ನೋ ಮೂಲಕ ಭವಿಷ್ಯ ನುಡಿದಿದ್ದಾರೆ. ಅಷ್ಟಕ್ಕೂ ಯಡಿಯೂರಪ್ಪ ನುಡಿದ ಸಿದ್ದರಾಮಯ್ಯ ಭವಿಷ್ಯ ಏನು ಅನ್ನೋದು ರಣರೋಚಕ ಸಂಗತಿಯಾಗಿದೆ.

2023ಕ್ಕೆ ಜೆಡಿಎಸ್ ಪಕ್ಷ ಈಗ ನಿರ್ಣಾಯಕ ಘಟ್ಟದಲ್ಲಿ ಇದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಾಲಿಗೆ ಅತ್ಯಂತ ಮಹತ್ವದ್ದು. ಜೆಡಿಎಸ್ ಪಕ್ಷ ಬಹುಮತ ಸಾಧಿಸಿ ಸರ್ಕಾರ ರಚಿಸಬೇಕು, ಇಲ್ಲವೇ ಕಿಂಗ್ ಮೇಕರ್ ಆಗಬೇಕು. ಎರಡೂ ಆಗದಿದ್ದರೆ ಜೆಡಿಎಸ್ ಭವಿಷ್ಯ ಏನಾಗಬಹುದು? ರಾಜ್ಯದಲ್ಲಿ ಈ ಬರೀ ಕೂಡ ಕಳೆದ ಬಾರಿಯಂತೆ ಅತಂತ್ರ ವಿಧಾನಸಭೆ ಸೃಷ್ಟಿಯಾಗಬಹುದಾ? ಒಂದು ವೇಳೆ ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಡ್ರೈವಿಂಗ್ ಸೀಟ್‌ನಲ್ಲಿ ಬಂದು ಕೂರೋದೇ ಕುಮಾರಣ್ಣನ ರಾಜ್ಯದಲ್ಲಿ ಮತ್ತೊಮ್ಮೆ ಜಾತ್ಯತೀತ ಜನತಾ ದಳ ಪಕ್ಷ 40ಕ್ಕಿಂತ ಹೆಚ್ಚಿನ ಸ್ಥಾನ ಗಳಿಸುವ ವಾತಾವರಣ ನಿರ್ಮಾಣವಾಗಲಿದೆ.

ಬಿಜೆಪಿಯ ಒಳಗಿನ ಆ ಮೂವರು ನಾಯಕರ ಪ್ರತ್ಯಕ್ಷ ಪರೋಕ್ಷ ಬಂಡಾಯಗಳೇ ಜೆಡಿಎಸ್ ಪಕ್ಷವನ್ನು ಗೆಲ್ಲಿಸಲಿದೆಯೇ? ಮತ್ತೊಮ್ಮೆ ಎಚ್​ಡಿಕೆಗೆ ಪಟ್ಟ ಗಟ್ಟಿ ಮಾಡಿ ಕೊಡಲಿದೆಯೇ? ಅನ್ನು ಚರ್ಚೆ ಶುರುವಾಗಿದೆ.

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಸಾಕಷ್ಟು ಬಾರಿ ಅವಕಾಶ ಕೊಟ್ಟಿದ್ದಿರಿ, ನಮಗೂ ಒಮ್ಮೆ ಪೂರ್ಣ ಪ್ರಮಾಣದ ಸರ್ಕಾರ ರಚಿಸಲು ಅವಕಾಶ ಕೊಟ್ಟು ನೋಡಿ ಅನ್ನೋದು ಜೆಡಿಎಸ್ ಮನವಿ. ಇದಕ್ಕಾಗಿ ಪಂಚರತ್ನ ರಥಯಾತ್ರೆ, ಜನತಾ ಜಲಧಾರೆ ಸೇರಿದಂತೆ ಹಲವು ಅಭಿಯಾನಗಳನ್ನು ಯಾತ್ರೆಗಳನ್ನು ನಡೆಸಿದೆ. ಅದರಲ್ಲೂ ರಾಮನಗರದಲ್ಲಿ ಈ ಬಾರಿ ಅನಿತಾ ಕುಮಾರಸ್ವಾಮಿ ಬದಲಿಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ.

ಗಾಲಿ ಜನಾರ್ಧನ ರೆಡ್ಡಿರವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ನಾಡಿನ ಇಬ್ಬರು ಪ್ರಭಾವಿ ಮಾಜಿ ಸಿಎಂಗಳ ಬೆಂಬಲ ಇದ್ದು ಇದರ ಬಗ್ಗೆ ಈ ಇಬ್ಬರು ಮಾಜಿ ಸಿಎಂಗಳ ಜತೆಯಲ್ಲಿ ಗಾಲಿ ಗೇಮ್ ನಡೀತಿದೆ ಅನ್ನೋ ಚರ್ಚೆ ಜೋರಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಎಚ್ಚರಿಕೆಯ ಹೆಜ್ಜೆ ಇಡದೇ ಹೋದರೆ 2023ರ ಚುನಾವಣಾ ರಿಸಲ್ಟ್ ಬಳಿಕ ಬಹುದೊಡ್ಡ ಕ್ಷಿಪ್ರಕ್ರಾಂತಿ ನಡೆಯಲಿದೆ ಅನ್ನೋ ಮುನ್ನುಡಿಯನ್ನು ಖುದ್ದು ಗಾಲಿ ರೆಡ್ಡಿ ನೀಡುತ್ತಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಪಕ್ಷ ಸೇರುವ ಪ್ರಮುಖರಿಗೆ ಬಂಪರ್ ಆಫರ್ ನೀಡುತ್ತಿದ್ದಾರೆ.

ಗಂಗಾವತಿಯನ್ನೇ ರಾಜಧಾನಿಯನ್ನಾಗಿಸುವ ಮಟ್ಟಿಗೆ ಸರ್ಕಾರ ಯಾರದ್ದೇ ಇರಲಿ ಇಲ್ಲಿಂದಲ್ಲೇ ಸರ್ಕಾರ ನಡೆಯುವಂತೆ ನೋಡಿಕೊಳ್ಳುತ್ತೇನೆ ಎನ್ನುತ್ತಿದ್ದಾರೆ. ಬಹುಮುಖ್ಯವಾಗಿ ಪಕ್ಷ ಸೇರುವ ಯಾವುದೇ ವ್ಯಕ್ತಿ ಗೆದ್ದರೇ ಮಿನಿಸ್ಟರ್ ಆಗಿಯೇ ಆಗುತ್ತಾರೆ ಅನ್ನು ಸುಳಿವು ನೀಡುತ್ತಿದ್ದಾರೆ. ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸಚಿವ ಬಿ.ಶ್ರೀರಾಮುಲು ಸಹ ಸೇರಿಕೊಳ್ಳುತ್ತಾರೆ ಎಂಬ ಊಹಾಪೋಹಗಳ ಇತ್ತು ಇದರ ನಡುವೆ ಬಿ.ಶ್ರೀರಾಮುಲುರವರು ಜನಾರ್ದನ ರೆಡ್ಡಿಯವರ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿ ಟ್ವೀಟ್ ಮಾಡಿ ನಂತರ ಡಿಲೀಟ್ ಮಾಡಿದ ಪ್ರಸಂಗ ಈಗಾಗಲೇ ನಡೆದಿದೆ. ಈ ಸಂಗತಿ ಇದೀಗ ಬಿಜೆಪಿ ಪಕ್ಷಕ್ಕೂ ಎಚ್ಚರಿಕೆಯ ಸಂದೇಶವನ್ನು ಮಿತ್ರರಿಬ್ಬರೂ ರವಾನಿಸಿದ್ದಾರಾ ಎಂಬ ಚರ್ಚೆ ಹುಟ್ಟುಹಾಕಿದೆ.

ಜನಾರ್ದನ ರೆಡ್ಡಿ ಅವರ ಕನಸು ಕಲ್ಯಾಣ ರಾಜ್ಯ ಆಗಬೇಕು. ಬಳ್ಳಾರಿ ರಾಜ್ಯಮಟ್ಟದಲ್ಲಿಯೇ ಅಭಿವೃದ್ಧಿಯಾಗಬೇಕು. ರೆಡ್ಡಿಗೆ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧವಿದೆ. ಅದಕ್ಕಾಗಿ ಅವರ ಬದಲಿಗೆ ನಾನು ಬಳ್ಳಾರಿಯಿಂದ ಪ್ರಚಾರ ಆರಂಭಿಸುತ್ತಿರುವೆ. ಜನಾರ್ದನ ರೆಡ್ಡಿಯವರು ಎನೇ ಕೆಲಸ ಮಾಡಿದ್ದರೂ ಕುರುಬ ಸಮಾಜದ ಮನೆಯವರಿಂದ ಆರಂಭ ಮಾಡಿದ್ದಾರೆ.

ಹಾಗಾಗಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿ ಕೊಪ್ಪಳ ಕ್ಷೇತ್ರದಲ್ಲಿ ರಾಜಕೀಯವಾಗಿ ತೊಡಗಿಕೊಂಡಿದ್ದಾರೆ. ಇತ್ತ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ತನ್ನ ಪತ್ನಿ ಅರುಣಾ ಲಕ್ಷ್ಮೀ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧೆ ಮಾಡಿದ್ದಾರೆ.

ಚುನಾವಣೆಯ ಹೊತ್ತಲ್ಲೇ ಬಿಜೆಪಿ-ಕಾಂಗ್ರೆಸ್ ಜೆಡಿಎಸ್ ನಾಯಕರುಗಳ ಭಾರೀ ವಾಕ್ಸಮರ ನಡೆಯುತ್ತಿದೆ. ರಾಜಕೀಯ ವಿಚಾರ ಬಂದಾಗ ಒಂದು ಪಕ್ಷದ ನಾಯಕರು ಇನ್ನೊಂದು ಪಕ್ಷದ ನಾಯಕರನ್ನು ಬೈಯುವುದು, ದೂಷಿಸುವುದು, ಆರೋಪಿಸುವುದು ಸಾಮಾನ್ಯ. ಕೆಲವೊಮ್ಮೆ ಅದು ಮಿತಿ ಮೀರುತ್ತದೆ. ಇದು ಕೂಡ ರಾಜಕೀಯ ಬದಿಗಿಟ್ಟು ಹಲವು ಬಾರಿ ರಾಜಕೀಯ ನಾಯಕರು ಒಟ್ಟಿಗೆ ಇರುವುದು ಮಾತನಾಡುವುದು, ಬಾಂಧವ್ಯ ಹೊಂದಿರುವುದನ್ನು ನೋಡುತ್ತೇವೆ. ರಾಜಕೀಯ ವಿಚಾರ ಬಂದಾಗ ಕಾಂಗ್ರೆಸ್-ಬಿಜೆಪಿ ಬದ್ಧ ವೈರಿಗಳು. ಈ ಪಕ್ಷಗಳ ನಾಯಕರು ಒಬ್ಬರಿಗೊಬ್ಬರು ವೇದಿಕೆಗಳಲ್ಲಿ, ಸಾರ್ವಜನಿಕ ಭಾಷಣಗಳಲ್ಲಿ, ಮಾಧ್ಯಮಗಳ ಮುಂದೆ ಸಾಕಷ್ಟು ಟೀಕೆ ಮಾಡುತ್ತಾ, ಒಬ್ಬರಿಗೊಬ್ಬರು ಬೈಯುತ್ತಿರುವುದು ಪ್ರಚಲಿತದಲ್ಲಿರುವ ವಿಷಯವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending