Connect with us

ದಿನದ ಸುದ್ದಿ

ಕೈ ಕಮಲ ದಳ ಮಧ್ಯೆ ಟೈಟ್​ ಫೈಟ್ : ಮೇ 13ಕ್ಕೆ ರಣಕಹಳೆ..!

Published

on

 

 

  • ಹುಲಿಗೆಪ್ಪ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ

ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರಾನೇರ ತುರುಸಿನ ಹಣಾಹಣಿ ನಡೆಯಲಿದೆ. ಇನ್ನು ಜಾತ್ಯತೀತ ಜನತಾದಳ ಬೆಂಬಲವೇ ಇಲ್ಲದೇ ಯಾವ ಪಕ್ಷವೂ ಅಧಿಕಾರದ ಗದ್ದು ಹಿಡಿಯೋದು ಅಸಾಧ್ಯವೆಂಬ ಸುಳಿವು ನೀಡುತ್ತಿದೆ. ಹಾಗೆಯೇ ನೋಡಿದರೆ, ರಾಜ್ಯದ ಮಟ್ಟಿಗೆ ದಳವನ್ನು ಬಗ್ಗಿಸೋಕೆ ಮೋದಿ, ಶಾ ಕೈಯಿಂದಲೂ ಸಾಧ್ಯವೇ ಇಲ್ಲ ಎಂಬ ಲಕ್ಷ್ಮಣ ರೇಖೆಯನ್ನೇ ಎಳೆದಿದೆ.

ಇತ್ತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆರವರು ಕರ್ನಾಟಕ ಕಾಂಗ್ರೆಸ್ ಕಲಿಗಳೆಲ್ಲಾ ಒಟ್ಟಾಗಿ ಸೇರಿ 2023ಗೆ ಕಾಂಗ್ರೆಸ್ ಗೆಲ್ಲಿಸೋಕೆ ರಣತಂತ್ರಗಳನ್ನ ಹೆಣೆದಿದ್ದಾರೆ. 2013-18ರಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಸ್ಥಿರ ಸರ್ಕಾರ ಮತ್ತು ಸ್ವಚ್ಛಂದ ಆಡಳಿತ ನೀಡಿದೆ.

ಕನ್ನಡಿಗರಿಗೆ ಬಿಜೆಪಿ ತಂದಿರುವ ಸಂಕಷ್ಟವನ್ನು ಹೋಗಲಾಡಿಸಲು ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ. ನಮ್ಮ ಸಹೃದಯ ಕನ್ನಡಿಗರೊಂದಿಗೆ ಸೇರಿ ಕನಸಿನ ಕರುನಾಡನ್ನು ಕಟ್ಟಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿ ನಾವು ಜನರ ಆಶೋತ್ತರಗಳನ್ನು ಸಂಗ್ರಹಿಸುತ್ತಿದ್ದೇವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರು ಸ್ಪಷ್ಟಪಡಿದ್ದಾರೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿ ಅವರಿಗೆ ಎಲ್ಲೋಂದು ಕಡೆ ಭಯ ಉಂಟಾಗಿದೆ. ಸಿದ್ದರಾಮಯ್ಯರವರು ವರುಣಾ ಕೇತ್ರದಲ್ಲಿ ಸ್ಪರ್ಧೆ ಮಾಡಿರುವ ಕಡುತ್ತಿದೆ. ಇಂತಹುದೇ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಿದ್ದರೆ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧೆ ಮಾಡಬಹುದು ಎಂಬ ಅನುಮಾನ ಇತ್ತು ಆದರೆ ಸಿದ್ದು ವರುಣಾದಲ್ಲಿ ಮಾತ್ರ ಸ್ಪರ್ಧೆ ರೆಡಿಯಾಗಿದ್ದು, ಇದೇ ಕ್ಷೇತ್ರದಿಂದ ಕ್ಲಿಯರ್ ಸಿಗುವುದು ಬಹುತೇಕ ಪಕ್ಕವಾಗಿದೆ.

ಈ ಮೊದಲು ಸಿದ್ದು ಬಗ್ಗೆ ಬರೀ ಚರ್ಚೆ ಗ್ರಾಸವಾಗಿತ್ತು. ಹಾಗಾಗಿ ಶಿಕಾರಿಪುರದ ಜತೆ ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಗಿಳಿಸುವ ಪ್ಲಾನ್ ಬದಲಾಗಿದೆ. ಅಂದಹಾಗೆ ಸಿದ್ದರಾಮಯ್ಯ ಕಟ್ಟಿ ಹಾಕಲು ವಿಜಯೇಂದ್ರ ಸ್ಪರ್ಧೆಗಿಳಿಸಲು ಬಿಜೆಪಿ ಹೈಕಮಾಂಡ್ ಪ್ಲಾನ್ ಆಗಿತ್ತು. ಕೊಚ್ಚ ಬದಲಾವಣೆಯಲ್ಲಿ ವರುಣಾದಲ್ಲಿ ವಿಜಯೇಂದ್ರ ಹವಾ ಇರುವ ಕಾರಣ ಅಲ್ಲಿ ಸಿದ್ದುಗೆ ಟಕ್ಕರ್ ಕೊಡುವ ತಂತ್ರ ಇತ್ತು.

ಆದರೆ ಯತೀಂದ್ರನ ಬಿಟ್ಟು ವರುಣಾ ದಲ್ಲಿ ತಮ್ಮ ತಂದೆಗೆ ಟಿಕೆಟ್ ಫೈನಲ್ ಮಾಡಿದೆ. ವಿಜಯೇಂದ್ರ ಸ್ಪರ್ಧೆ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ತಳಿಹಾಕಿದೆ.

ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ಐದು ವರ್ಷ ಹಿಂದಿನ ಶಪಥ ಕಾರಣ ಎನ್ನಲಾಗುತ್ತಿದೆ. ಸಿದ್ದು ಟೀಮ್ ಚಾಣಕ್ಯ ಇದೀಗ ಸಿದ್ದರಾಮಯ್ಯರನ್ನ ಕೋಲಾರಕ್ಕೆ ಕರೆತರುವುದು ಅನ್ನೋ ಚರ್ಚೆಯಾಗಿದ್ದು ನಗ್ನ ಸತ್ಯ.

ಹುಲಿಗೆಪ್ಪ

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಕರ್ನಾಟಕಕ್ಕೆ ಭೇಟಿ ನೀಡಿ ಅಲೆ ಎಬ್ಬಿಸಲು ಶುರು ಮಾಡಿದ್ದು. ಬಿಜೆಪಿ 140 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿದೆ.

ಇಲ್ಲಿ ಯಡಿಯೂರಪ್ಪರವರನ್ನು ಮತ್ತೆ ಸಕ್ರಿಯ ರಾಜಕಾರಣಕ್ಕೆ ಕರೆತಂದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಸಕ್ರಿಯ ಪ್ರಚಾರದಲ್ಲಿ ತೊಡಗಿಸಬೇಕೆಂದು ಹಲವು ಶಾಸಕರು ಕೇಂದ್ರ ನಾಯಕರಿಗೆ ಸಲಹೆ ನೀಡಿದ್ದಾರೆ. ಕಳೆದ ಕೆಲವು ದಶಕಗಳಲ್ಲಿ ಕರ್ನಾಟಕವು ಯಡಿಯೂರಪ್ಪ ಇಲ್ಲದೆ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ. ಪಕ್ಷ ಮತ್ತು ಸರ್ಕಾರದೊಳಗೆ ಕಾರ್ಯತಂತ್ರದ ಬದಲಾವಣೆಗಳ ಅಲ್ಲದೆ, ಪವಾಡವನ್ನು ನಿರೀಕ್ಷಿಸುವುದು ಕಷ್ಟವಾಗಿದೆ.

ಯಡಿಯೂರಪ್ಪ ವಿರುದ್ಧ ವಿರೋಧಿ ಗುಂಪೊಂದನ್ನು ಹಿಡಿತ ಸಾದಿಸಿತ್ತು, ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿತ್ತು, ಹಿಂದುತ್ವ ಕಾರ್ಡ್ ಪ್ರಯೋಗ ನಿರೀಕ್ಷಿತ ಫಲಿತಾಂಶ ದೊರಕದು ಎಂಬುದನ್ನು ಅರ್ಥಮಾಡಿ ಕೊಂಡಿರುವ ಬಿಜೆಪಿ ಹೈಕಮಾಂಡ್, ಸೂಕ್ತವಾಗಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿದೆ. ಯಡಿಯೂರಪ್ಪ ಅವರ ಪುನರಾಗಮನದ ಕಾಂಗ್ರೆಸ್ ಗೆ ಒಳ್ಳೆಯ ಸುದ್ದಿಯಾಗುವುದಿಲ್ಲ.

ಏಕೆಂದರೆ ಯಡಿಯೂರಪ್ಪರವರ ನಿರಾಶೆಯನ್ನು ಕಾಂಗ್ರೆಸ್ ಲಾಭ ಮಾಡಿಕೊಳ್ಳಲು ಮುಂದಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಗೆಲ್ಲಬಹುದು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟ. ವಿರೋಧ ಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು. ಚುನಾವಣೆಯಲ್ಲಿ 140 ಸ್ಥಾನ ಪಡೆದು ಯಾರ ಬೆಂಬಲ ಇಲ್ಲದೇ ಸರ್ಕಾರ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಯಡಿಯೂರಪ್ಪ, ಗುರಿ ತಲುಪುವ ನಿಟ್ಟಿನಲ್ಲಿ ಎಲ್ಲರೂ ಕೂಡ ರಾಜ್ಯದಲ್ಲಿ ಪ್ರವಾಸ ಮಾಡಲು ಆರಂಭಿಸಿದ್ದೇವೆ.

ನಂತರ ಮತ್ತೆ ಎಲ್ಲಾ ಕಡೆ ಪ್ರವಾಸ ಕೈಗೊಂಡು ಪಕ್ಷ ಸಂಘಟಿಸುತ್ತೇವೆ. ಹಗಲು ಕನಸು ಕಾಣುತ್ತಿರುವ ಬಗ್ಗೆ ನಾವೇನು ಚರ್ಚೆ ಮಾಡಲ್ಲ. ಎಂದು ಮಾಜಿ ಸಿಎಂ ಯಡಿಯೂರಪ್ಪ ವ್ಯಕ್ತಡಿಸಿದರು. ಬಿ.ಎಸ್ ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಲ್ಲಿಂದ ಸ್ಪರ್ಧಿಸೋದೇ ಇಲ್ಲ ಅನ್ನೋ ಮೂಲಕ ಭವಿಷ್ಯ ನುಡಿದಿದ್ದಾರೆ. ಅಷ್ಟಕ್ಕೂ ಯಡಿಯೂರಪ್ಪ ನುಡಿದ ಸಿದ್ದರಾಮಯ್ಯ ಭವಿಷ್ಯ ಏನು ಅನ್ನೋದು ರಣರೋಚಕ ಸಂಗತಿಯಾಗಿದೆ.

2023ಕ್ಕೆ ಜೆಡಿಎಸ್ ಪಕ್ಷ ಈಗ ನಿರ್ಣಾಯಕ ಘಟ್ಟದಲ್ಲಿ ಇದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಾಲಿಗೆ ಅತ್ಯಂತ ಮಹತ್ವದ್ದು. ಜೆಡಿಎಸ್ ಪಕ್ಷ ಬಹುಮತ ಸಾಧಿಸಿ ಸರ್ಕಾರ ರಚಿಸಬೇಕು, ಇಲ್ಲವೇ ಕಿಂಗ್ ಮೇಕರ್ ಆಗಬೇಕು. ಎರಡೂ ಆಗದಿದ್ದರೆ ಜೆಡಿಎಸ್ ಭವಿಷ್ಯ ಏನಾಗಬಹುದು? ರಾಜ್ಯದಲ್ಲಿ ಈ ಬರೀ ಕೂಡ ಕಳೆದ ಬಾರಿಯಂತೆ ಅತಂತ್ರ ವಿಧಾನಸಭೆ ಸೃಷ್ಟಿಯಾಗಬಹುದಾ? ಒಂದು ವೇಳೆ ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಡ್ರೈವಿಂಗ್ ಸೀಟ್‌ನಲ್ಲಿ ಬಂದು ಕೂರೋದೇ ಕುಮಾರಣ್ಣನ ರಾಜ್ಯದಲ್ಲಿ ಮತ್ತೊಮ್ಮೆ ಜಾತ್ಯತೀತ ಜನತಾ ದಳ ಪಕ್ಷ 40ಕ್ಕಿಂತ ಹೆಚ್ಚಿನ ಸ್ಥಾನ ಗಳಿಸುವ ವಾತಾವರಣ ನಿರ್ಮಾಣವಾಗಲಿದೆ.

ಬಿಜೆಪಿಯ ಒಳಗಿನ ಆ ಮೂವರು ನಾಯಕರ ಪ್ರತ್ಯಕ್ಷ ಪರೋಕ್ಷ ಬಂಡಾಯಗಳೇ ಜೆಡಿಎಸ್ ಪಕ್ಷವನ್ನು ಗೆಲ್ಲಿಸಲಿದೆಯೇ? ಮತ್ತೊಮ್ಮೆ ಎಚ್​ಡಿಕೆಗೆ ಪಟ್ಟ ಗಟ್ಟಿ ಮಾಡಿ ಕೊಡಲಿದೆಯೇ? ಅನ್ನು ಚರ್ಚೆ ಶುರುವಾಗಿದೆ.

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಸಾಕಷ್ಟು ಬಾರಿ ಅವಕಾಶ ಕೊಟ್ಟಿದ್ದಿರಿ, ನಮಗೂ ಒಮ್ಮೆ ಪೂರ್ಣ ಪ್ರಮಾಣದ ಸರ್ಕಾರ ರಚಿಸಲು ಅವಕಾಶ ಕೊಟ್ಟು ನೋಡಿ ಅನ್ನೋದು ಜೆಡಿಎಸ್ ಮನವಿ. ಇದಕ್ಕಾಗಿ ಪಂಚರತ್ನ ರಥಯಾತ್ರೆ, ಜನತಾ ಜಲಧಾರೆ ಸೇರಿದಂತೆ ಹಲವು ಅಭಿಯಾನಗಳನ್ನು ಯಾತ್ರೆಗಳನ್ನು ನಡೆಸಿದೆ. ಅದರಲ್ಲೂ ರಾಮನಗರದಲ್ಲಿ ಈ ಬಾರಿ ಅನಿತಾ ಕುಮಾರಸ್ವಾಮಿ ಬದಲಿಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ.

ಗಾಲಿ ಜನಾರ್ಧನ ರೆಡ್ಡಿರವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ನಾಡಿನ ಇಬ್ಬರು ಪ್ರಭಾವಿ ಮಾಜಿ ಸಿಎಂಗಳ ಬೆಂಬಲ ಇದ್ದು ಇದರ ಬಗ್ಗೆ ಈ ಇಬ್ಬರು ಮಾಜಿ ಸಿಎಂಗಳ ಜತೆಯಲ್ಲಿ ಗಾಲಿ ಗೇಮ್ ನಡೀತಿದೆ ಅನ್ನೋ ಚರ್ಚೆ ಜೋರಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಎಚ್ಚರಿಕೆಯ ಹೆಜ್ಜೆ ಇಡದೇ ಹೋದರೆ 2023ರ ಚುನಾವಣಾ ರಿಸಲ್ಟ್ ಬಳಿಕ ಬಹುದೊಡ್ಡ ಕ್ಷಿಪ್ರಕ್ರಾಂತಿ ನಡೆಯಲಿದೆ ಅನ್ನೋ ಮುನ್ನುಡಿಯನ್ನು ಖುದ್ದು ಗಾಲಿ ರೆಡ್ಡಿ ನೀಡುತ್ತಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಪಕ್ಷ ಸೇರುವ ಪ್ರಮುಖರಿಗೆ ಬಂಪರ್ ಆಫರ್ ನೀಡುತ್ತಿದ್ದಾರೆ.

ಗಂಗಾವತಿಯನ್ನೇ ರಾಜಧಾನಿಯನ್ನಾಗಿಸುವ ಮಟ್ಟಿಗೆ ಸರ್ಕಾರ ಯಾರದ್ದೇ ಇರಲಿ ಇಲ್ಲಿಂದಲ್ಲೇ ಸರ್ಕಾರ ನಡೆಯುವಂತೆ ನೋಡಿಕೊಳ್ಳುತ್ತೇನೆ ಎನ್ನುತ್ತಿದ್ದಾರೆ. ಬಹುಮುಖ್ಯವಾಗಿ ಪಕ್ಷ ಸೇರುವ ಯಾವುದೇ ವ್ಯಕ್ತಿ ಗೆದ್ದರೇ ಮಿನಿಸ್ಟರ್ ಆಗಿಯೇ ಆಗುತ್ತಾರೆ ಅನ್ನು ಸುಳಿವು ನೀಡುತ್ತಿದ್ದಾರೆ. ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸಚಿವ ಬಿ.ಶ್ರೀರಾಮುಲು ಸಹ ಸೇರಿಕೊಳ್ಳುತ್ತಾರೆ ಎಂಬ ಊಹಾಪೋಹಗಳ ಇತ್ತು ಇದರ ನಡುವೆ ಬಿ.ಶ್ರೀರಾಮುಲುರವರು ಜನಾರ್ದನ ರೆಡ್ಡಿಯವರ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿ ಟ್ವೀಟ್ ಮಾಡಿ ನಂತರ ಡಿಲೀಟ್ ಮಾಡಿದ ಪ್ರಸಂಗ ಈಗಾಗಲೇ ನಡೆದಿದೆ. ಈ ಸಂಗತಿ ಇದೀಗ ಬಿಜೆಪಿ ಪಕ್ಷಕ್ಕೂ ಎಚ್ಚರಿಕೆಯ ಸಂದೇಶವನ್ನು ಮಿತ್ರರಿಬ್ಬರೂ ರವಾನಿಸಿದ್ದಾರಾ ಎಂಬ ಚರ್ಚೆ ಹುಟ್ಟುಹಾಕಿದೆ.

ಜನಾರ್ದನ ರೆಡ್ಡಿ ಅವರ ಕನಸು ಕಲ್ಯಾಣ ರಾಜ್ಯ ಆಗಬೇಕು. ಬಳ್ಳಾರಿ ರಾಜ್ಯಮಟ್ಟದಲ್ಲಿಯೇ ಅಭಿವೃದ್ಧಿಯಾಗಬೇಕು. ರೆಡ್ಡಿಗೆ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧವಿದೆ. ಅದಕ್ಕಾಗಿ ಅವರ ಬದಲಿಗೆ ನಾನು ಬಳ್ಳಾರಿಯಿಂದ ಪ್ರಚಾರ ಆರಂಭಿಸುತ್ತಿರುವೆ. ಜನಾರ್ದನ ರೆಡ್ಡಿಯವರು ಎನೇ ಕೆಲಸ ಮಾಡಿದ್ದರೂ ಕುರುಬ ಸಮಾಜದ ಮನೆಯವರಿಂದ ಆರಂಭ ಮಾಡಿದ್ದಾರೆ.

ಹಾಗಾಗಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿ ಕೊಪ್ಪಳ ಕ್ಷೇತ್ರದಲ್ಲಿ ರಾಜಕೀಯವಾಗಿ ತೊಡಗಿಕೊಂಡಿದ್ದಾರೆ. ಇತ್ತ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ತನ್ನ ಪತ್ನಿ ಅರುಣಾ ಲಕ್ಷ್ಮೀ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧೆ ಮಾಡಿದ್ದಾರೆ.

ಚುನಾವಣೆಯ ಹೊತ್ತಲ್ಲೇ ಬಿಜೆಪಿ-ಕಾಂಗ್ರೆಸ್ ಜೆಡಿಎಸ್ ನಾಯಕರುಗಳ ಭಾರೀ ವಾಕ್ಸಮರ ನಡೆಯುತ್ತಿದೆ. ರಾಜಕೀಯ ವಿಚಾರ ಬಂದಾಗ ಒಂದು ಪಕ್ಷದ ನಾಯಕರು ಇನ್ನೊಂದು ಪಕ್ಷದ ನಾಯಕರನ್ನು ಬೈಯುವುದು, ದೂಷಿಸುವುದು, ಆರೋಪಿಸುವುದು ಸಾಮಾನ್ಯ. ಕೆಲವೊಮ್ಮೆ ಅದು ಮಿತಿ ಮೀರುತ್ತದೆ. ಇದು ಕೂಡ ರಾಜಕೀಯ ಬದಿಗಿಟ್ಟು ಹಲವು ಬಾರಿ ರಾಜಕೀಯ ನಾಯಕರು ಒಟ್ಟಿಗೆ ಇರುವುದು ಮಾತನಾಡುವುದು, ಬಾಂಧವ್ಯ ಹೊಂದಿರುವುದನ್ನು ನೋಡುತ್ತೇವೆ. ರಾಜಕೀಯ ವಿಚಾರ ಬಂದಾಗ ಕಾಂಗ್ರೆಸ್-ಬಿಜೆಪಿ ಬದ್ಧ ವೈರಿಗಳು. ಈ ಪಕ್ಷಗಳ ನಾಯಕರು ಒಬ್ಬರಿಗೊಬ್ಬರು ವೇದಿಕೆಗಳಲ್ಲಿ, ಸಾರ್ವಜನಿಕ ಭಾಷಣಗಳಲ್ಲಿ, ಮಾಧ್ಯಮಗಳ ಮುಂದೆ ಸಾಕಷ್ಟು ಟೀಕೆ ಮಾಡುತ್ತಾ, ಒಬ್ಬರಿಗೊಬ್ಬರು ಬೈಯುತ್ತಿರುವುದು ಪ್ರಚಲಿತದಲ್ಲಿರುವ ವಿಷಯವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

Published

on

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ ಚಿಕಿತ್ಸೆಗಳು ನೋವು ಕಡಿಮೆ ಮಾಡುವುದರ ಜೊತೆಗೆ, ರೋಗಿಗಳು ಮತ್ತೆ ಸ್ವತಂತ್ರವಾಗಿ ನಡೆಯಲು, ದಿನನಿತ್ಯದ ಚಟುವಟಿಕೆಗಳಿಗೆ ಮರಳಲು ಮತ್ತು ಆತ್ಮವಿಶ್ವಾಸದಿಂದ ಬದುಕಲು ನೆರವಾಗುತ್ತಿವೆ ಎಂದು ಮಣಿಪಾಲ್ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಲೋಕೇಶ್ ಎ. ವೀರಪ್ಪ ತಿಳಿಸಿದರು.

ಬುಧವಾರ ಸುದ್ದಿಗೋಷ್ಟಿ ಉದ್ದೇಶಿಸಿ‌ ಮಾತನಾಡಿದ ಅವರು
‘ಆರೋಗ್ಯಕರ ವಯೋವೃದ್ಧತೆ: ಅಸ್ತಿ ಸಮಸ್ಯೆಗಳ ನಿರ್ವಹಣೆ ಮತ್ತು ಪರಿಣಾಮಕಾರಿ ಚಿಕಿತ್ಸಾ ವಿಧಾನಗಳು ಕುರಿತು ಮೂಳೆ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು.

ಇಂದಿನ ದಿನಗಳಲ್ಲಿ ಮೊಣಕಾಲು, ಸೊಂಟ ಮತ್ತು ಭುಜ ಸಂಧಿ ಸಮಸ್ಯೆಗಳು, ವಿಶೇಷವಾಗಿ ವಯೋವೃದ್ಧರಲ್ಲಿ ಹೆಚ್ಚುತ್ತಿವೆ. ‘ಇಂದು ಜನರು ಕೇವಲ ನೋವು ನಿವಾರಣೆಯನ್ನು ಮಾತ್ರ ಬಯಸುವುದಿಲ್ಲ. ಅವರು ಸುಲಭವಾಗಿ ನಡೆಯಲು, ಮೆಟ್ಟಿಲೇರಲು, ಮತ್ತೆ ಕೆಲಸಕ್ಕೆ ಹೋಗಲು, ಪ್ರವಾಸ ಮಾಡಲು ಮತ್ತು ಚುರುಕಿನ ಜೀವನವನ್ನು ಮುಂದುವರಿಸಲು ಬಯಸುತ್ತಾರೆ,” ಎಂದು ಹೇಳಿದರು.

“ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರಚಿಕಿತ್ಸೆ ಅಸ್ತಿ ಚಿಕಿತ್ಸೆಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರೋಗಿಯ ದೇಹರಚನೆಗೆ ಅನುಗುಣವಾಗಿ ಶಸ್ತ್ರಚಿಕಿತ್ಸೆಯನ್ನು ಹೆಚ್ಚು ನಿಖರವಾಗಿ ಯೋಜಿಸಲು ಈ ತಂತ್ರಜ್ಞಾನ ಸಹಕಾರಿಯಾಗಿದೆ. ಇದರಿಂದ ಇಂಪ್ಲಾಂಟ್‌ಗಳ ಸರಿಯಾದ ಅಳವಡಿಕೆ, ಉತ್ತಮ ಜಾಯಿಂಟ್ ಅಲೈನ್‌ಮೆಂಟ್ ಮತ್ತು ಸಹಜ ಚಲನೆಯ ಸಾಧ್ಯತೆ ಹೆಚ್ಚುತ್ತದೆ. ರೋಗಿಗಳಿಗೆ ಕಡಿಮೆ ರಕ್ತಸ್ರಾವ, ಕಡಿಮೆ ಶಸ್ತ್ರಚಿಕಿತ್ಸೆತರ ನೋವು, ವೇಗವಾದ ಚೇತರಿಕೆ ಹಾಗೂ ಬೇಗನೆ ಸಾಮಾನ್ಯ ಜೀವನಕ್ಕೆ ಮರಳುವ ಅವಕಾಶ ದೊರೆಯುತ್ತದೆ. ಮೊಣಕಾಲು ಮತ್ತು ಸೊಂಟದ ಸಂಪೂರ್ಣ ಅಥವಾ ಭಾಗಶಃ ಜಾಯಿಂಟ್ ಬದಲಾವಣೆ (TKR/PKR) ಶಸ್ತ್ರ ಚಿಕಿತ್ಸೆಗಳಲ್ಲಿ ಈ ತಂತ್ರಜ್ಞಾನ ಉತ್ತಮ ಫಲಿತಾಂಶ ನೀಡುತ್ತಿದೆ,” ಎಂದರು.

“ಇದರ ಜೊತೆಗೆ ಭುಜದ ಆರ್ಥೋಸ್ಕೋಪಿ ಅಥವಾ ‘ಕೀಹೋಲ್ ಸರ್ಜರಿ’ಯಂತಹ ಅತ್ಯಾಧುನಿಕ ಚಿಕಿತ್ಸೆಗಳಲ್ಲಿಯೂ ಉತ್ತಮ ಫಲಿತಾಂಶಗಳನ್ನು ಕಾಣುತ್ತಿದ್ದೇವೆ. ಭುಜದ ಡಿಪ್ಲೊಕೇಶನ್ (ಭುಜದ ಕೀಲಿನ ಸರಿತ) ರೋಟೇಟರ್ ಕಫ್ (ಹರಿದ ಭುಜದ ಮಾಂಸ ಖಂಡ) ಗಾಯಗಳು, ಫೋಜನ್ ಶೋಲ್ಡರ್ (ಭುಜದ ಬಿಗಿತ) ಮೊದಲಾದ ಸಮಸ್ಯೆಗಳು ಬಹಳ ಸಾಮಾನ್ಯವಾಗಿದ್ದು, ಸಮಯಕ್ಕೆ ಚಿಕಿತ್ಸೆ ಪಡೆಯದೇ ಇದ್ದರೆ ದೈನಂದಿನ ಚಟುವಟಿಕೆಗಳ ಮೇಲೆಯೇ ಪರಿಣಾಮ ಬೀರುತ್ತವೆ. ಈಗ ಮಿನಿಮಲ್ಲಿ ಇನ್ನೇಸಿವ್ ಸರ್ಜರಿಸ್ ಅಂದರೆ ಅತಿ ಸಣ್ಣ ಕಟ್ ಮೂಲಕ ಮಾಡುವ ಈ ಶಸ್ತ್ರಚಿಕಿತ್ಸೆಗಳು ರೋಗಿಗಳಿಗೆ ಕಡಿಮೆ ನೋವು ಹಾಗೂ ವೇಗವಾದ ಚೇತರಿಕೆಯನ್ನು ನೀಡುತ್ತಿವೆ, ಎಂದು ತಿಳಿಸಿದರು.

ಇದೇ ವೇಳೆ, ಸಂಕೀರ್ಣ ಪೆಲ್ವಿಕ್ ಟ್ರಾಮಾ ಶಸ್ತ್ರಚಿಕಿತ್ಸೆಗಳು, ‘ಕಪ್ ಅಂಡ್ ಬಾಲ್’ ಜಾಯಿಂಟ್ ಸಂಬಂಧಿತ ಪ್ರೊಸೀಜರ್‌ಗಳು, ಹಾಗು ಮೊಣಕಾಲು, ಅಂಕಲ್ ಮತ್ತು ಮೊಣಕೈಗೆ ಸಂಬಂಧಿಸಿದ ಮಿನಿಮಲಿ ಇನ್ನೇಸಿವ್ ಕೀಹೋಲ್ ಶಸ್ತ್ರಚಿಕಿತ್ಸೆಗಳ ಕುರಿತು ಕೂಡ ಅವರು ಮಾಹಿತಿ ಹಂಚಿಕೊಂಡರು.

ಇವುಗಳ ಪ್ರಮುಖ ಉದ್ದೇಶ ರೋಗಿಗಳ ಚಲನವಲನವನ್ನು ಪುನಃಸ್ಥಾಪಿಸಿ, ಅವರನ್ನು ಆತ್ಮವಿಶ್ವಾಸದಿಂದ ದಿನನಿತ್ಯದ ಬದುಕಿಗೆ ಮರಳಿಸುವುದಾಗಿದೆ ಎಂದು ಹೇಳಿದರು.

ಸಂವಾದದ ವೇಳೆ ವೈದ್ಯರು, ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಅನೇಕ ರೋಗಿಗಳು ಸಂಕೀರ್ಣ ಅಸ್ಥಿ ಚಿಕಿತ್ಸೆಗಳು ಹಾಗೂ ಅತ್ಯಾಧುನಿಕ ಜಾಯಿಂಟ್ ಕೇರ್‌ಗಾಗಿ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ನಿರಂತರವಾಗಿ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.

ಈ ದೀರ್ಘಕಾಲದ ವಿಶ್ವಾಸವನ್ನು ಗುರುತಿಸಿಕೊಂಡಿರುವ ಆಸ್ಪತ್ರೆ, ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ವಿಶೇಷ ಅಸ್ಥಿ ತಜ್ಞರ ಸೇವೆಗಳು ಮತ್ತು ಪುನಶ್ವೇತನ ಚಿಕಿತ್ಸೆಯನ್ನು ಮಧ್ಯ ಕರ್ನಾಟಕದ ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪುನರುಚ್ಛರಿಸಿತು. “ನಮ್ಮ ಉದ್ದೇಶ ಕೇವಲ ಶಸ್ತ್ರಚಿಕಿತ್ಸೆ ನಡೆಸುವುದಲ್ಲ; ಜನರು ಮತ್ತೆ ಸ್ವತಂತ್ರವಾಗಿ ನಡೆಯಲು, ತಮ್ಮ ಜೀವನಶೈಲಿಗೆ ಮರಳಲು ಮತ್ತು ಸುಖಕರ ವಯೋವೃದ್ಧತೆಯನ್ನು ಅನುಭವಿಸಲು ಸಹಾಯ ಮಾಡುವುದಾಗಿದೆ,” ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ “ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026″ ಎಂಬ ವಿಶಿಷ್ಟ ಮತ್ತು ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಕೊಟ್ರೇಶ್ ಅವರು ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಮತ್ತು ಕಾನೂನುಬದ್ದ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಕಡ್ಡಾಯ ಭೂ-ಪರಿವರ್ತನೆ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, RTE ಸಂಬಂಧಿತ ವಿಷಯಗಳು, ಶಾಲಾ ಕಟ್ಟಡಗಳಿಗೆ ಆಸ್ತಿ ತೆರಿಗೆ, ESI, PF, GRATUITY, LWF ಹಾಗೂ ಕಾರ್ಮಿಕ ಕಾನೂನುಗಳನ್ನು ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ ಎಂದರು.

ಇದಲ್ಲದೆ, ರಾಜ್ಯದಲ್ಲಿ ಯಶಸ್ವಿಯಾಗಿ 10 ವರ್ಷ ಹಾಗೂ 25 ವರ್ಷ ಪೂರೈಸಿರುವ ಖಾಸಗಿ ಶಾಲೆಗಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದ ಹೊಸ ತಂತ್ರಜ್ಞಾನಗಳು, ಆಡಳಿತಾತ್ಮಕ ಪರಿಹಾರಗಳು, ಕಾನೂನು ಸಲಹೆಗಳು ಹಾಗೂ ಶಿಕ್ಷಣ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ತಿಳಿದುಕೊಳ್ಳಲು ಇದು ಅತ್ಯುತ್ತಮ ವೇದಿಕೆಯಾಗಿದ್ದು, ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಟಿಯಲ್ಲಿ Ours ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending