ದಿನದ ಸುದ್ದಿ
ಕೈ ಕಮಲ ದಳ ಮಧ್ಯೆ ಟೈಟ್ ಫೈಟ್ : ಮೇ 13ಕ್ಕೆ ರಣಕಹಳೆ..!
- ಹುಲಿಗೆಪ್ಪ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ
ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರಾನೇರ ತುರುಸಿನ ಹಣಾಹಣಿ ನಡೆಯಲಿದೆ. ಇನ್ನು ಜಾತ್ಯತೀತ ಜನತಾದಳ ಬೆಂಬಲವೇ ಇಲ್ಲದೇ ಯಾವ ಪಕ್ಷವೂ ಅಧಿಕಾರದ ಗದ್ದು ಹಿಡಿಯೋದು ಅಸಾಧ್ಯವೆಂಬ ಸುಳಿವು ನೀಡುತ್ತಿದೆ. ಹಾಗೆಯೇ ನೋಡಿದರೆ, ರಾಜ್ಯದ ಮಟ್ಟಿಗೆ ದಳವನ್ನು ಬಗ್ಗಿಸೋಕೆ ಮೋದಿ, ಶಾ ಕೈಯಿಂದಲೂ ಸಾಧ್ಯವೇ ಇಲ್ಲ ಎಂಬ ಲಕ್ಷ್ಮಣ ರೇಖೆಯನ್ನೇ ಎಳೆದಿದೆ.
ಇತ್ತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆರವರು ಕರ್ನಾಟಕ ಕಾಂಗ್ರೆಸ್ ಕಲಿಗಳೆಲ್ಲಾ ಒಟ್ಟಾಗಿ ಸೇರಿ 2023ಗೆ ಕಾಂಗ್ರೆಸ್ ಗೆಲ್ಲಿಸೋಕೆ ರಣತಂತ್ರಗಳನ್ನ ಹೆಣೆದಿದ್ದಾರೆ. 2013-18ರಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಸ್ಥಿರ ಸರ್ಕಾರ ಮತ್ತು ಸ್ವಚ್ಛಂದ ಆಡಳಿತ ನೀಡಿದೆ.
ಕನ್ನಡಿಗರಿಗೆ ಬಿಜೆಪಿ ತಂದಿರುವ ಸಂಕಷ್ಟವನ್ನು ಹೋಗಲಾಡಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ನಮ್ಮ ಸಹೃದಯ ಕನ್ನಡಿಗರೊಂದಿಗೆ ಸೇರಿ ಕನಸಿನ ಕರುನಾಡನ್ನು ಕಟ್ಟಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿ ನಾವು ಜನರ ಆಶೋತ್ತರಗಳನ್ನು ಸಂಗ್ರಹಿಸುತ್ತಿದ್ದೇವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರು ಸ್ಪಷ್ಟಪಡಿದ್ದಾರೆ.
ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿ ಅವರಿಗೆ ಎಲ್ಲೋಂದು ಕಡೆ ಭಯ ಉಂಟಾಗಿದೆ. ಸಿದ್ದರಾಮಯ್ಯರವರು ವರುಣಾ ಕೇತ್ರದಲ್ಲಿ ಸ್ಪರ್ಧೆ ಮಾಡಿರುವ ಕಡುತ್ತಿದೆ. ಇಂತಹುದೇ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಿದ್ದರೆ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧೆ ಮಾಡಬಹುದು ಎಂಬ ಅನುಮಾನ ಇತ್ತು ಆದರೆ ಸಿದ್ದು ವರುಣಾದಲ್ಲಿ ಮಾತ್ರ ಸ್ಪರ್ಧೆ ರೆಡಿಯಾಗಿದ್ದು, ಇದೇ ಕ್ಷೇತ್ರದಿಂದ ಕ್ಲಿಯರ್ ಸಿಗುವುದು ಬಹುತೇಕ ಪಕ್ಕವಾಗಿದೆ.
ಈ ಮೊದಲು ಸಿದ್ದು ಬಗ್ಗೆ ಬರೀ ಚರ್ಚೆ ಗ್ರಾಸವಾಗಿತ್ತು. ಹಾಗಾಗಿ ಶಿಕಾರಿಪುರದ ಜತೆ ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಗಿಳಿಸುವ ಪ್ಲಾನ್ ಬದಲಾಗಿದೆ. ಅಂದಹಾಗೆ ಸಿದ್ದರಾಮಯ್ಯ ಕಟ್ಟಿ ಹಾಕಲು ವಿಜಯೇಂದ್ರ ಸ್ಪರ್ಧೆಗಿಳಿಸಲು ಬಿಜೆಪಿ ಹೈಕಮಾಂಡ್ ಪ್ಲಾನ್ ಆಗಿತ್ತು. ಕೊಚ್ಚ ಬದಲಾವಣೆಯಲ್ಲಿ ವರುಣಾದಲ್ಲಿ ವಿಜಯೇಂದ್ರ ಹವಾ ಇರುವ ಕಾರಣ ಅಲ್ಲಿ ಸಿದ್ದುಗೆ ಟಕ್ಕರ್ ಕೊಡುವ ತಂತ್ರ ಇತ್ತು.
ಆದರೆ ಯತೀಂದ್ರನ ಬಿಟ್ಟು ವರುಣಾ ದಲ್ಲಿ ತಮ್ಮ ತಂದೆಗೆ ಟಿಕೆಟ್ ಫೈನಲ್ ಮಾಡಿದೆ. ವಿಜಯೇಂದ್ರ ಸ್ಪರ್ಧೆ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ತಳಿಹಾಕಿದೆ.
ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ಐದು ವರ್ಷ ಹಿಂದಿನ ಶಪಥ ಕಾರಣ ಎನ್ನಲಾಗುತ್ತಿದೆ. ಸಿದ್ದು ಟೀಮ್ ಚಾಣಕ್ಯ ಇದೀಗ ಸಿದ್ದರಾಮಯ್ಯರನ್ನ ಕೋಲಾರಕ್ಕೆ ಕರೆತರುವುದು ಅನ್ನೋ ಚರ್ಚೆಯಾಗಿದ್ದು ನಗ್ನ ಸತ್ಯ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಕರ್ನಾಟಕಕ್ಕೆ ಭೇಟಿ ನೀಡಿ ಅಲೆ ಎಬ್ಬಿಸಲು ಶುರು ಮಾಡಿದ್ದು. ಬಿಜೆಪಿ 140 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿದೆ.
ಇಲ್ಲಿ ಯಡಿಯೂರಪ್ಪರವರನ್ನು ಮತ್ತೆ ಸಕ್ರಿಯ ರಾಜಕಾರಣಕ್ಕೆ ಕರೆತಂದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಸಕ್ರಿಯ ಪ್ರಚಾರದಲ್ಲಿ ತೊಡಗಿಸಬೇಕೆಂದು ಹಲವು ಶಾಸಕರು ಕೇಂದ್ರ ನಾಯಕರಿಗೆ ಸಲಹೆ ನೀಡಿದ್ದಾರೆ. ಕಳೆದ ಕೆಲವು ದಶಕಗಳಲ್ಲಿ ಕರ್ನಾಟಕವು ಯಡಿಯೂರಪ್ಪ ಇಲ್ಲದೆ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ. ಪಕ್ಷ ಮತ್ತು ಸರ್ಕಾರದೊಳಗೆ ಕಾರ್ಯತಂತ್ರದ ಬದಲಾವಣೆಗಳ ಅಲ್ಲದೆ, ಪವಾಡವನ್ನು ನಿರೀಕ್ಷಿಸುವುದು ಕಷ್ಟವಾಗಿದೆ.
ಯಡಿಯೂರಪ್ಪ ವಿರುದ್ಧ ವಿರೋಧಿ ಗುಂಪೊಂದನ್ನು ಹಿಡಿತ ಸಾದಿಸಿತ್ತು, ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿತ್ತು, ಹಿಂದುತ್ವ ಕಾರ್ಡ್ ಪ್ರಯೋಗ ನಿರೀಕ್ಷಿತ ಫಲಿತಾಂಶ ದೊರಕದು ಎಂಬುದನ್ನು ಅರ್ಥಮಾಡಿ ಕೊಂಡಿರುವ ಬಿಜೆಪಿ ಹೈಕಮಾಂಡ್, ಸೂಕ್ತವಾಗಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿದೆ. ಯಡಿಯೂರಪ್ಪ ಅವರ ಪುನರಾಗಮನದ ಕಾಂಗ್ರೆಸ್ ಗೆ ಒಳ್ಳೆಯ ಸುದ್ದಿಯಾಗುವುದಿಲ್ಲ.
ಏಕೆಂದರೆ ಯಡಿಯೂರಪ್ಪರವರ ನಿರಾಶೆಯನ್ನು ಕಾಂಗ್ರೆಸ್ ಲಾಭ ಮಾಡಿಕೊಳ್ಳಲು ಮುಂದಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಗೆಲ್ಲಬಹುದು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟ. ವಿರೋಧ ಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು. ಚುನಾವಣೆಯಲ್ಲಿ 140 ಸ್ಥಾನ ಪಡೆದು ಯಾರ ಬೆಂಬಲ ಇಲ್ಲದೇ ಸರ್ಕಾರ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಯಡಿಯೂರಪ್ಪ, ಗುರಿ ತಲುಪುವ ನಿಟ್ಟಿನಲ್ಲಿ ಎಲ್ಲರೂ ಕೂಡ ರಾಜ್ಯದಲ್ಲಿ ಪ್ರವಾಸ ಮಾಡಲು ಆರಂಭಿಸಿದ್ದೇವೆ.
ನಂತರ ಮತ್ತೆ ಎಲ್ಲಾ ಕಡೆ ಪ್ರವಾಸ ಕೈಗೊಂಡು ಪಕ್ಷ ಸಂಘಟಿಸುತ್ತೇವೆ. ಹಗಲು ಕನಸು ಕಾಣುತ್ತಿರುವ ಬಗ್ಗೆ ನಾವೇನು ಚರ್ಚೆ ಮಾಡಲ್ಲ. ಎಂದು ಮಾಜಿ ಸಿಎಂ ಯಡಿಯೂರಪ್ಪ ವ್ಯಕ್ತಡಿಸಿದರು. ಬಿ.ಎಸ್ ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಲ್ಲಿಂದ ಸ್ಪರ್ಧಿಸೋದೇ ಇಲ್ಲ ಅನ್ನೋ ಮೂಲಕ ಭವಿಷ್ಯ ನುಡಿದಿದ್ದಾರೆ. ಅಷ್ಟಕ್ಕೂ ಯಡಿಯೂರಪ್ಪ ನುಡಿದ ಸಿದ್ದರಾಮಯ್ಯ ಭವಿಷ್ಯ ಏನು ಅನ್ನೋದು ರಣರೋಚಕ ಸಂಗತಿಯಾಗಿದೆ.
2023ಕ್ಕೆ ಜೆಡಿಎಸ್ ಪಕ್ಷ ಈಗ ನಿರ್ಣಾಯಕ ಘಟ್ಟದಲ್ಲಿ ಇದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಾಲಿಗೆ ಅತ್ಯಂತ ಮಹತ್ವದ್ದು. ಜೆಡಿಎಸ್ ಪಕ್ಷ ಬಹುಮತ ಸಾಧಿಸಿ ಸರ್ಕಾರ ರಚಿಸಬೇಕು, ಇಲ್ಲವೇ ಕಿಂಗ್ ಮೇಕರ್ ಆಗಬೇಕು. ಎರಡೂ ಆಗದಿದ್ದರೆ ಜೆಡಿಎಸ್ ಭವಿಷ್ಯ ಏನಾಗಬಹುದು? ರಾಜ್ಯದಲ್ಲಿ ಈ ಬರೀ ಕೂಡ ಕಳೆದ ಬಾರಿಯಂತೆ ಅತಂತ್ರ ವಿಧಾನಸಭೆ ಸೃಷ್ಟಿಯಾಗಬಹುದಾ? ಒಂದು ವೇಳೆ ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಡ್ರೈವಿಂಗ್ ಸೀಟ್ನಲ್ಲಿ ಬಂದು ಕೂರೋದೇ ಕುಮಾರಣ್ಣನ ರಾಜ್ಯದಲ್ಲಿ ಮತ್ತೊಮ್ಮೆ ಜಾತ್ಯತೀತ ಜನತಾ ದಳ ಪಕ್ಷ 40ಕ್ಕಿಂತ ಹೆಚ್ಚಿನ ಸ್ಥಾನ ಗಳಿಸುವ ವಾತಾವರಣ ನಿರ್ಮಾಣವಾಗಲಿದೆ.
ಬಿಜೆಪಿಯ ಒಳಗಿನ ಆ ಮೂವರು ನಾಯಕರ ಪ್ರತ್ಯಕ್ಷ ಪರೋಕ್ಷ ಬಂಡಾಯಗಳೇ ಜೆಡಿಎಸ್ ಪಕ್ಷವನ್ನು ಗೆಲ್ಲಿಸಲಿದೆಯೇ? ಮತ್ತೊಮ್ಮೆ ಎಚ್ಡಿಕೆಗೆ ಪಟ್ಟ ಗಟ್ಟಿ ಮಾಡಿ ಕೊಡಲಿದೆಯೇ? ಅನ್ನು ಚರ್ಚೆ ಶುರುವಾಗಿದೆ.
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಸಾಕಷ್ಟು ಬಾರಿ ಅವಕಾಶ ಕೊಟ್ಟಿದ್ದಿರಿ, ನಮಗೂ ಒಮ್ಮೆ ಪೂರ್ಣ ಪ್ರಮಾಣದ ಸರ್ಕಾರ ರಚಿಸಲು ಅವಕಾಶ ಕೊಟ್ಟು ನೋಡಿ ಅನ್ನೋದು ಜೆಡಿಎಸ್ ಮನವಿ. ಇದಕ್ಕಾಗಿ ಪಂಚರತ್ನ ರಥಯಾತ್ರೆ, ಜನತಾ ಜಲಧಾರೆ ಸೇರಿದಂತೆ ಹಲವು ಅಭಿಯಾನಗಳನ್ನು ಯಾತ್ರೆಗಳನ್ನು ನಡೆಸಿದೆ. ಅದರಲ್ಲೂ ರಾಮನಗರದಲ್ಲಿ ಈ ಬಾರಿ ಅನಿತಾ ಕುಮಾರಸ್ವಾಮಿ ಬದಲಿಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ.
ಗಾಲಿ ಜನಾರ್ಧನ ರೆಡ್ಡಿರವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ನಾಡಿನ ಇಬ್ಬರು ಪ್ರಭಾವಿ ಮಾಜಿ ಸಿಎಂಗಳ ಬೆಂಬಲ ಇದ್ದು ಇದರ ಬಗ್ಗೆ ಈ ಇಬ್ಬರು ಮಾಜಿ ಸಿಎಂಗಳ ಜತೆಯಲ್ಲಿ ಗಾಲಿ ಗೇಮ್ ನಡೀತಿದೆ ಅನ್ನೋ ಚರ್ಚೆ ಜೋರಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಎಚ್ಚರಿಕೆಯ ಹೆಜ್ಜೆ ಇಡದೇ ಹೋದರೆ 2023ರ ಚುನಾವಣಾ ರಿಸಲ್ಟ್ ಬಳಿಕ ಬಹುದೊಡ್ಡ ಕ್ಷಿಪ್ರಕ್ರಾಂತಿ ನಡೆಯಲಿದೆ ಅನ್ನೋ ಮುನ್ನುಡಿಯನ್ನು ಖುದ್ದು ಗಾಲಿ ರೆಡ್ಡಿ ನೀಡುತ್ತಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಪಕ್ಷ ಸೇರುವ ಪ್ರಮುಖರಿಗೆ ಬಂಪರ್ ಆಫರ್ ನೀಡುತ್ತಿದ್ದಾರೆ.
ಗಂಗಾವತಿಯನ್ನೇ ರಾಜಧಾನಿಯನ್ನಾಗಿಸುವ ಮಟ್ಟಿಗೆ ಸರ್ಕಾರ ಯಾರದ್ದೇ ಇರಲಿ ಇಲ್ಲಿಂದಲ್ಲೇ ಸರ್ಕಾರ ನಡೆಯುವಂತೆ ನೋಡಿಕೊಳ್ಳುತ್ತೇನೆ ಎನ್ನುತ್ತಿದ್ದಾರೆ. ಬಹುಮುಖ್ಯವಾಗಿ ಪಕ್ಷ ಸೇರುವ ಯಾವುದೇ ವ್ಯಕ್ತಿ ಗೆದ್ದರೇ ಮಿನಿಸ್ಟರ್ ಆಗಿಯೇ ಆಗುತ್ತಾರೆ ಅನ್ನು ಸುಳಿವು ನೀಡುತ್ತಿದ್ದಾರೆ. ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸಚಿವ ಬಿ.ಶ್ರೀರಾಮುಲು ಸಹ ಸೇರಿಕೊಳ್ಳುತ್ತಾರೆ ಎಂಬ ಊಹಾಪೋಹಗಳ ಇತ್ತು ಇದರ ನಡುವೆ ಬಿ.ಶ್ರೀರಾಮುಲುರವರು ಜನಾರ್ದನ ರೆಡ್ಡಿಯವರ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿ ಟ್ವೀಟ್ ಮಾಡಿ ನಂತರ ಡಿಲೀಟ್ ಮಾಡಿದ ಪ್ರಸಂಗ ಈಗಾಗಲೇ ನಡೆದಿದೆ. ಈ ಸಂಗತಿ ಇದೀಗ ಬಿಜೆಪಿ ಪಕ್ಷಕ್ಕೂ ಎಚ್ಚರಿಕೆಯ ಸಂದೇಶವನ್ನು ಮಿತ್ರರಿಬ್ಬರೂ ರವಾನಿಸಿದ್ದಾರಾ ಎಂಬ ಚರ್ಚೆ ಹುಟ್ಟುಹಾಕಿದೆ.
ಜನಾರ್ದನ ರೆಡ್ಡಿ ಅವರ ಕನಸು ಕಲ್ಯಾಣ ರಾಜ್ಯ ಆಗಬೇಕು. ಬಳ್ಳಾರಿ ರಾಜ್ಯಮಟ್ಟದಲ್ಲಿಯೇ ಅಭಿವೃದ್ಧಿಯಾಗಬೇಕು. ರೆಡ್ಡಿಗೆ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧವಿದೆ. ಅದಕ್ಕಾಗಿ ಅವರ ಬದಲಿಗೆ ನಾನು ಬಳ್ಳಾರಿಯಿಂದ ಪ್ರಚಾರ ಆರಂಭಿಸುತ್ತಿರುವೆ. ಜನಾರ್ದನ ರೆಡ್ಡಿಯವರು ಎನೇ ಕೆಲಸ ಮಾಡಿದ್ದರೂ ಕುರುಬ ಸಮಾಜದ ಮನೆಯವರಿಂದ ಆರಂಭ ಮಾಡಿದ್ದಾರೆ.
ಹಾಗಾಗಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿ ಕೊಪ್ಪಳ ಕ್ಷೇತ್ರದಲ್ಲಿ ರಾಜಕೀಯವಾಗಿ ತೊಡಗಿಕೊಂಡಿದ್ದಾರೆ. ಇತ್ತ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ತನ್ನ ಪತ್ನಿ ಅರುಣಾ ಲಕ್ಷ್ಮೀ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧೆ ಮಾಡಿದ್ದಾರೆ.
ಚುನಾವಣೆಯ ಹೊತ್ತಲ್ಲೇ ಬಿಜೆಪಿ-ಕಾಂಗ್ರೆಸ್ ಜೆಡಿಎಸ್ ನಾಯಕರುಗಳ ಭಾರೀ ವಾಕ್ಸಮರ ನಡೆಯುತ್ತಿದೆ. ರಾಜಕೀಯ ವಿಚಾರ ಬಂದಾಗ ಒಂದು ಪಕ್ಷದ ನಾಯಕರು ಇನ್ನೊಂದು ಪಕ್ಷದ ನಾಯಕರನ್ನು ಬೈಯುವುದು, ದೂಷಿಸುವುದು, ಆರೋಪಿಸುವುದು ಸಾಮಾನ್ಯ. ಕೆಲವೊಮ್ಮೆ ಅದು ಮಿತಿ ಮೀರುತ್ತದೆ. ಇದು ಕೂಡ ರಾಜಕೀಯ ಬದಿಗಿಟ್ಟು ಹಲವು ಬಾರಿ ರಾಜಕೀಯ ನಾಯಕರು ಒಟ್ಟಿಗೆ ಇರುವುದು ಮಾತನಾಡುವುದು, ಬಾಂಧವ್ಯ ಹೊಂದಿರುವುದನ್ನು ನೋಡುತ್ತೇವೆ. ರಾಜಕೀಯ ವಿಚಾರ ಬಂದಾಗ ಕಾಂಗ್ರೆಸ್-ಬಿಜೆಪಿ ಬದ್ಧ ವೈರಿಗಳು. ಈ ಪಕ್ಷಗಳ ನಾಯಕರು ಒಬ್ಬರಿಗೊಬ್ಬರು ವೇದಿಕೆಗಳಲ್ಲಿ, ಸಾರ್ವಜನಿಕ ಭಾಷಣಗಳಲ್ಲಿ, ಮಾಧ್ಯಮಗಳ ಮುಂದೆ ಸಾಕಷ್ಟು ಟೀಕೆ ಮಾಡುತ್ತಾ, ಒಬ್ಬರಿಗೊಬ್ಬರು ಬೈಯುತ್ತಿರುವುದು ಪ್ರಚಲಿತದಲ್ಲಿರುವ ವಿಷಯವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.
http://Visit : www.suddidina.com
ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.
ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.
ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.
ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.
ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

ದಿನದ ಸುದ್ದಿ
ಬೆಂಗಳೂರು ಸೆಪ್ಟೆಂಬರ್ನಲ್ಲಿ 31.9 ಡಿ.ಸೆ. ದಾಖಲೆ – ಹವಾಮಾನ ಇಲಾಖೆ ಎಚ್ಚರಿಕೆ
ಸುದ್ದಿದಿನ,ಬೆಂಗಳೂರು: ಪ್ರತಿ ವರ್ಷ ಮಳೆಗಾಲದ ಅಂತ್ಯದಲ್ಲಿ ನೈಋತ್ಯ ಮಾನ್ಸೂನ್ ಶೀತವಾಗಿರುತ್ತದೆ. ಆದರೆ ಈ ಬಾರಿ, 75 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. 2026ರ ಸೆಪ್ಟೆಂಬರ್ 8ರಂದು ನಗರದಲ್ಲಿ 31.9 ಡಿ.ಸೆ. ತಾಪಮಾನ ದಾಖಲಾಗಿದ್ದು, ಇದು ಕಳೆದ ಹಲವು ದಶಕಗಳ ಬಳಿಕ ಕಂಡುಬಂದ ಅತಿ ಹೆಚ್ಚು ಮಟ್ಟವಾಗಿದೆ.
http://Visit : www.suddidina.com
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮಾಹಿತಿಯ ಪ್ರಕಾರ, 1951ರಿಂದ ಇಂದಿನವರೆಗಿನ ದಾಖಲೆಗಳಲ್ಲಿ 33.3 ಡಿ.ಸೆ. ಗರಿಷ್ಠ ತಾಪಮಾನವು ದಾಖಲಾಗಿತ್ತು. ಈ ಬಾರಿ 31.9 ಡಿ.ಸೆ. ತಾಪಮಾನವು ಆ ದಾಖಲೆಗಳಿಗೆ ಸಮೀಪವಾಗಿದೆ. ಇದೇ ದಿನ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 33.4 ಡಿ.ಸೆ. ತಾಪಮಾನ ದಾಖಲಾಗಿದ್ದು, ಇದು ನಗರದ ಉಷ್ಣಾಂಶ ಏರಿಕೆಯನ್ನು ಸ್ಪಷ್ಟಪಡಿಸುತ್ತದೆ.
ಹಿಂದಿನ ವರ್ಷಗಳ ದಾಖಲೆಗಳನ್ನು ನೋಡಿದರೆ, 2025ರಲ್ಲಿ 29.9 ಡಿ.ಸೆ., 2024ರಲ್ಲಿ 31.6 ಡಿ.ಸೆ., 2023ರಲ್ಲಿ 30.8 ಡಿ.ಸೆ., 2022ರಲ್ಲಿ 31 ಡಿ.ಸೆ., 2021ರಲ್ಲಿ 31.3 ಡಿ.ಸೆ., 2020ರಲ್ಲಿ 30.6 ಡಿ.ಸೆ., 2019ರಲ್ಲಿ 30.8 ಡಿ.ಸೆ., 2018ರಲ್ಲಿ 31.7 ಡಿ.ಸೆ., 2017ರಲ್ಲಿ 31.1 ಡಿ.ಸೆ., 2016ರಲ್ಲಿ 30.6 ಡಿ.ಸೆ. ದಾಖಲಾಗಿತ್ತು. ಈ ಹೋಲಿಕೆಯಿಂದ, 2026ರ ಸೆಪ್ಟೆಂಬರ್ನಲ್ಲಿ ದಾಖಲಾಗಿರುವ ಉಷ್ಣಾಂಶವು ಅತಿ ಹೆಚ್ಚು ಮಟ್ಟದಲ್ಲಿದೆ ಎಂಬುದು ಸ್ಪಷ್ಟವಾಗುತ್ತದೆ.
ಹವಾಮಾನ ತಜ್ಞರ ಪ್ರಕಾರ, ಎಲ್ನಿನೋ ಒತ್ತಡ ಮುಂದುವರಿದಿರುವುದರಿಂದ ಉಷ್ಣಾಂಶ ಏರಿಕೆಗೆ ಕಾರಣವಾಗಿದೆ. ಆದರೆ, ಇದು ತಾತ್ಕಾಲಿಕವಾಗಿರಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ ತಿಂಗಳುಗಳಲ್ಲಿ ಶೀತಮಾನ್ಸೂನ್ ಬಲಿಷ್ಠವಾಗುವ ಸಾಧ್ಯತೆ ಇದೆ. ಅಂದಾಜು 1 ರಿಂದ 3 ಡಿ.ಸೆ. ಅಂತರದಲ್ಲಿ ಶಾಖದ ಮಟ್ಟ ಹೆಚ್ಚಾಗಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ಮಳೆ ಆಗದಿರುವುದರಿಂದ ಕಾವೇರಿ ನದಿಯ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಹವಾಮಾನ ಇಲಾಖೆ ಪ್ರಕಾರ, ಸೆಪ್ಟೆಂಬರ್ 16ರ ನಂತರ ಮಳೆಯಾಗುವ ಸಾಧ್ಯತೆಗಳಿವೆ. ಇದರಿಂದ ನೀರಿನ ಮಟ್ಟ ಸುಧಾರಿಸಬಹುದು ಎಂಬ ನಿರೀಕ್ಷೆ ಇದೆ.
ಒಟ್ಟಿನಲ್ಲಿ, ಬೆಂಗಳೂರಿನಲ್ಲಿ ದಾಖಲಾಗಿರುವ ಉಷ್ಣಾಂಶ ಏರಿಕೆ ಹವಾಮಾನ ಬದಲಾವಣೆಯ ಗಂಭೀರತೆಯನ್ನು ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಮಳೆಯ ನಿರೀಕ್ಷೆ ಇದ್ದರೂ, ತಾತ್ಕಾಲಿಕವಾಗಿ ಉಷ್ಣಾಂಶ ಏರಿಕೆ ಸಾರ್ವಜನಿಕ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ದಿನದ ಸುದ್ದಿ
KPSCExam: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ವೈದ್ಯರ ಕೊರತೆ – ತಕ್ಷಣ ನೇಮಕಾತಿ ಅಗತ್ಯ
ಸುದ್ದಿದಿನ,ಕಲಬುರ್ಗಿ: ಕರ್ನಾಟಕದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ಖಾಲಿತನವು ದಿನದಿಂದ ದಿನಕ್ಕೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ, ರಾಜ್ಯದ ಅನೇಕ ಆಸ್ಪತ್ರೆಗಳು ವೈದ್ಯರ ಕೊರತೆಯಿಂದ ಬಳಲುತ್ತಿವೆ. ವಿಶೇಷವಾಗಿ ಬೆಂಗಳೂರು ಹಾಗೂ ಇತರ ನಗರ ಪ್ರದೇಶಗಳಲ್ಲಿ ರೋಗಿಗಳಿಗೆ ತಕ್ಷಣ ಚಿಕಿತ್ಸೆ ನೀಡಲು ತೊಂದರೆ ಉಂಟಾಗಿದೆ.
http://Visit : www.suddidina.com
ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿಂದಾಗಿ ರೋಗಿಗಳ ಆರೈಕೆ ವಿಳಂಬವಾಗುತ್ತಿದೆ. ತುರ್ತು ಚಿಕಿತ್ಸೆಗೆ ಬರುವವರು ಸಮಯಕ್ಕೆ ಚಿಕಿತ್ಸೆ ಪಡೆಯಲು ಕಷ್ಟ ಅನುಭವಿಸುತ್ತಿದ್ದಾರೆ. ಸಿಬ್ಬಂದಿ ಕೊರತೆಯಿಂದಾಗಿ ಆಸ್ಪತ್ರೆಗಳ ಕಾರ್ಯಾಚರಣೆ ಹಿನ್ನಡೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, ಅಲ್ಲಿ ವೈದ್ಯರ ಕೊರತೆಯಿಂದ ಮೂಲಭೂತ ಆರೋಗ್ಯ ಸೇವೆಗಳೇ ಕುಂಠಿತವಾಗಿವೆ.
ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕಿದೆ. ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸುವ ಅಗತ್ಯವಿದೆ. ಆರೋಗ್ಯ ಸೇವೆ ಜನಜೀವನಕ್ಕೆ ನೇರವಾಗಿ ಸಂಬಂಧಿಸಿದುದರಿಂದ, ವೈದ್ಯರ ಕೊರತೆಯು ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ.
ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಆಸ್ಪತ್ರೆಗಳು ವೈದ್ಯರ ಕೊರತೆಯಿಂದಾಗಿ ನಿರ್ವಹಣಾ ತೊಂದರೆ ಎದುರಿಸುತ್ತಿವೆ. ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ, ವೈದ್ಯರ ಕೊರತೆ ಇನ್ನಷ್ಟು ಸ್ಪಷ್ಟವಾಗಿ ಗೋಚರಿಸುತ್ತಿದೆ. ತುರ್ತು ಸೇವೆ, ಶಸ್ತ್ರಚಿಕಿತ್ಸೆ ಹಾಗೂ ದಿನನಿತ್ಯದ ಚಿಕಿತ್ಸಾ ಕಾರ್ಯಗಳಲ್ಲಿ ವಿಳಂಬ ಉಂಟಾಗುತ್ತಿದೆ.
ಸರ್ಕಾರದ ಯೋಜನೆಯ ಪ್ರಕಾರ, ಶೀಘ್ರದಲ್ಲೇ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಇದರಿಂದ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯನ್ನು ನಿವಾರಿಸಲು ಸಾಧ್ಯವಾಗುತ್ತದೆ ಎಂಬ ನಿರೀಕ್ಷೆ ಇದೆ. ಆದರೆ, ಪ್ರಕ್ರಿಯೆ ವಿಳಂಬವಾದರೆ ಆರೋಗ್ಯ ಸೇವೆಯ ಮೇಲೆ ಇನ್ನಷ್ಟು ಹಾನಿ ಉಂಟಾಗುವ ಸಾಧ್ಯತೆ ಇದೆ.
ರೋಗಿ ಆರೈಕೆ, ಆಸ್ಪತ್ರೆಗಳ ಕಾರ್ಯಾಚರಣೆ ಹಾಗೂ ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ವೈದ್ಯರ ನೇಮಕಾತಿ ತುರ್ತು ಅಗತ್ಯವಾಗಿದೆ. ವೈದ್ಯರ ಕೊರತೆಯಿಂದಾಗಿ ಚಿಕಿತ್ಸೆ ವಿಳಂಬವಾಗುವುದು, ರೋಗಿಗಳ ತೃಪ್ತಿ ಕಡಿಮೆಯಾಗುವುದು ಹಾಗೂ ಆರೋಗ್ಯ ಸೇವೆಯ ಗುಣಮಟ್ಟ ಕುಸಿಯುವುದು ಸಾಮಾನ್ಯ.
ಒಟ್ಟಿನಲ್ಲಿ, ಕರ್ನಾಟಕದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ಖಾಲಿತನವು ಆರೋಗ್ಯ ಸೇವೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸರ್ಕಾರವು ತಕ್ಷಣ ಕ್ರಮ ಕೈಗೊಂಡು ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಿದರೆ, ಆಸ್ಪತ್ರೆಗಳಲ್ಲಿ ಸೇವೆ ಸುಧಾರಿಸಿ, ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಸಾಧ್ಯವಾಗುತ್ತದೆ.

-
ದಿನದ ಸುದ್ದಿ4 hours agoಬೆಂಗಳೂರು ಇ-ಕಾಮರ್ಸ್ ಡಾರ್ಕ್ ಸ್ಟೋರ್ಗಳಲ್ಲಿ ಅವಧಿ ಮೀರಿದ ಆಹಾರ, ಔಷಧ ಪತ್ತೆ
-
ದಿನದ ಸುದ್ದಿ4 hours agoದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ: ರೂ 25.00 ಲಕ್ಷ ನಗದು ಬಹುಮಾನ
-
ದಿನದ ಸುದ್ದಿ3 hours agoಮಧ್ಯಪ್ರಾಚ್ಯದಲ್ಲಿ ಏಳು ತಿಂಗಳಿನಿಂದ ಯುದ್ಧದ ಕಾರ್ಮೋಡ – ಇರಾನ್–ಅಮೆರಿಕ ಸಂಘರ್ಷ ತೀವ್ರ
-
ದಿನದ ಸುದ್ದಿ4 hours agoGold Rate Fall: 24 ಕ್ಯಾರೆಟ್ ಚಿನ್ನದ ದರ ₹104 ಇಳಿಕೆ, ಬೆಳ್ಳಿ ಗ್ರಾಂಗೆ ₹250 ಸ್ಥಿರ
-
ದಿನದ ಸುದ್ದಿ3 hours agoಸ್ಕ್ರೀನ್ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ
-
ದಿನದ ಸುದ್ದಿ3 hours agoKPSCExam: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ವೈದ್ಯರ ಕೊರತೆ – ತಕ್ಷಣ ನೇಮಕಾತಿ ಅಗತ್ಯ
-
ದಿನದ ಸುದ್ದಿ3 hours agoಬೆಂಗಳೂರು ಸೆಪ್ಟೆಂಬರ್ನಲ್ಲಿ 31.9 ಡಿ.ಸೆ. ದಾಖಲೆ – ಹವಾಮಾನ ಇಲಾಖೆ ಎಚ್ಚರಿಕೆ
-
ದಿನದ ಸುದ್ದಿ60 minutes agoEV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ



